\id 1KI - Biblica® Open Kannada Contemporary Version \ide UTF-8 \h 1 ಅರಸುಗಳು \toc1 ಅರಸುಗಳು ಪ್ರಥಮ ಭಾಗ \toc2 1 ಅರಸುಗಳು \toc3 1 ಅರಸು \mt1 ಅರಸುಗಳು \mt2 ಪ್ರಥಮ ಭಾಗ \c 1 \s1 ಅದೋನೀಯನು ಅರಸನಾಗುವುದಕ್ಕೆ ಪ್ರಯತ್ನಿಸಿದ್ದು \p \v 1 ಅರಸನಾದ ದಾವೀದನು ವೃದ್ಧನಾಗಿಯೂ, ಬಹಳ ಪ್ರಾಯ ಹೋದವನಾಗಿಯೂ ಇರುವಾಗ, ಅವನ ಮೇಲೆ ಹೊದಿಕೆಗಳನ್ನು ಹಾಕಿದರೂ, ಅವನಿಗೆ ಬೆಚ್ಚಗಾಗುತ್ತಿರಲಿಲ್ಲ. \v 2 ಆದ್ದರಿಂದ ಅವನ ಸೇವಕರು ಅವನಿಗೆ, “ಅರಸ, ನಮ್ಮ ಒಡೆಯನಿಗೋಸ್ಕರ ಕನ್ನಿಕೆಯನ್ನು ಹುಡುಕುವೆವು. ಅವಳು ಅರಸನ ಬಳಿಯಲ್ಲಿ ನಿಂತು, ಅವನನ್ನು ಜೋಪಾನ ಮಾಡಲಿ. ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ, ಅವನ ಮಗ್ಗುಲಲ್ಲಿ ಅವಳು ಮಲಗಲಿ,” ಎಂದರು. \p \v 3 ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ, ಶೂನೇಮ್ಯಳಾದ ಅಬೀಷಗ್ ಎಂಬವಳನ್ನು ಕಂಡುಕೊಂಡು, ಅವಳನ್ನು ಅರಸನ ಬಳಿಗೆ ತಂದರು. \v 4 ಈ ಸೌಂದರ್ಯವತಿಯಾದ ಹುಡುಗಿಯು ಅರಸನ ಆರೈಕೆ ಮಾಡುತ್ತಾ, ಅವನ ಸೇವೆ ಮಾಡುತ್ತಿದ್ದಳು. ಅರಸನು ಅವಳೊಂದಿಗೆ ಸಂಪರ್ಕ ಮಾಡಲಿಲ್ಲ. \p \v 5 ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು, “ನಾನು ಅರಸನಾಗಿರಬೇಕು,” ಎಂದುಕೊಂಡು, ತನಗೋಸ್ಕರ ರಥಗಳನ್ನೂ, ಸಾರಥಿಯರನ್ನೂ, ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿ ಪುರುಷರನ್ನೂ ಸಿದ್ಧಮಾಡಿದನು. \v 6 ಅವನ ತಂದೆಯು ಎಂದಾದರೂ, “ನೀನು ಹೀಗೆ ಏಕೆ ಮಾಡಿದೆ?” ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಅವನು ಬಹು ಒಳ್ಳೆಯ ರೂಪವಂತನಾಗಿದ್ದನು. ಅಬ್ಷಾಲೋಮನ ತರುವಾಯ ಅವನ ತಾಯಿ ಅವನನ್ನು ಹೆತ್ತಳು. \p \v 7 ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು. \v 8 ಆದರೆ ಯಾಜಕನಾದ ಚಾದೋಕನೂ, ಯೆಹೋಯಾದಾವನ ಮಗ ಬೆನಾಯನೂ, ಪ್ರವಾದಿಯಾದ ನಾತಾನನೂ, ಶಿಮ್ಮಿಯೂ, ರೇಯಿಯೂ, ದಾವೀದನ ಪರಾಕ್ರಮಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ. \p \v 9 ಅದೋನೀಯನು ಏನ್ ರೋಗೆಲಿನ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ, ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಔತಣಕ್ಕೆ ಕರೆದನು. \v 10 ಆದರೆ ಪ್ರವಾದಿಯಾದ ನಾತಾನನನ್ನೂ, ಬೆನಾಯನನ್ನೂ, ಪರಾಕ್ರಮಶಾಲಿಗಳನ್ನೂ, ತನ್ನ ಸಹೋದರನಾದ ಸೊಲೊಮೋನನನ್ನೂ ಕರೆಯಲಿಲ್ಲ. \p \v 11 ಆಗ ನಾತಾನನು ಸೊಲೊಮೋನನ ತಾಯಿ ಬತ್ಷೆಬೆಳಿಗೆ, “ನಮ್ಮ ಒಡೆಯ ದಾವೀದನು ಅರಿಯದಿರುವಾಗ, ಹಗ್ಗೀತಳ ಮಗ ಅದೋನೀಯನು ಅರಸನಾಗಿದ್ದಾನೆ, ಎಂದು ನೀನು ಕೇಳಲಿಲ್ಲವೋ? \v 12 ಆದ್ದರಿಂದ ನೀನು ನಿನ್ನ ಪ್ರಾಣವನ್ನೂ, ನಿನ್ನ ಮಗ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ, ನಿನಗೆ ಆಲೋಚನೆ ಹೇಳುತ್ತೇನೆ. \v 13 ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ಅರಸನಾದ ನನ್ನ ಒಡೆಯನೇ, “ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ, ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ,” ನೀವು ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವುದು ಏಕೆ?’ ಎಂದು ಕೇಳು. \v 14 ನೀನು, ಇನ್ನೂ ಅರಸನ ಸಂಗಡ ಮಾತನಾಡುತ್ತಿರುವಾಗ, ನಾನು ನಿನ್ನ ಹಿಂದೆಯೇ ಒಳಗೆ ಬಂದು, ನಿನ್ನ ಮಾತುಗಳನ್ನು ಸ್ಥಿರಮಾಡುವೆನು,” ಎಂದನು. \p \v 15 ಆಗ ಬತ್ಷೆಬೆಳು ಬಹು ವೃದ್ಧನಾಗಿದ್ದ ದಾವೀದನನ್ನು ನೋಡಲು ಅರಸನ ಕೊಠಡಿಯೊಳಗೆ ಹೋದಳು. ಅಲ್ಲಿ ಶೂನೇಮ್ಯಳಾದ ಅಬೀಷಗ್ ಅರಸನಿಗೆ ಸೇವೆಮಾಡುತ್ತಾ ಇದ್ದಳು. \v 16 ಆಗ ಬತ್ಷೆಬೆಳು ಅರಸನಿಗೆ ಬಾಗಿ ನಮಸ್ಕರಿಸಿದಳು. \p ಅರಸನಾದ ದಾವೀದನು, “ನಿನಗೇನು ಬೇಕು?” ಎಂದನು. \p \v 17 ಆಕೆಯು ಅರಸನಿಗೆ, “ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ಮಗ ಸೊಲೊಮೋನನು ಆಳುವನೆಂದೂ, ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ, ನೀವು ನಿನ್ನ ದಾಸಿಗೆ ನಿನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದಿರಿ. \v 18 ಆದರೆ, ಅರಸನಾಗಿರುವ ನನ್ನ ಒಡೆಯನಾದ ನೀವು ಅರಿಯದೆ ಇರುವಾಗ, ಅದೋನೀಯನು ರಾಜನಾಗಿಬಿಟ್ಟಿದ್ದಾನೆ. \v 19 ಇದಲ್ಲದೆ ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಬಲಿಯಾಗಿ ಅರ್ಪಿಸಿದ್ದಾನೆ, ಅರಸನ ಮಕ್ಕಳೆಲ್ಲರನ್ನೂ, ಯಾಜಕನಾದ ಅಬಿಯಾತರನನ್ನೂ, ಸೇನಾಧಿಪತಿ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ. ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. \v 20 ಆದ್ದರಿಂದ ಅರಸನಾದ ನನ್ನ ಒಡೆಯನೇ, ನಿಮ್ಮ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನೀವು ಹೇಳುವ ಹಾಗೆ, ಸಮಸ್ತ ಇಸ್ರಾಯೇಲರ ಕಣ್ಣುಗಳು ನಿಮ್ಮ ಮೇಲೆ ಇರುತ್ತವೆ. \v 21 ಇಲ್ಲದಿದ್ದರೆ ನನ್ನ ಒಡೆಯನೂ ಅರಸನೂ ತನ್ನ ಪಿತೃಗಳ ಸಂಗಡ ಸಮಾಧಿ ಸೇರಿದಾಗ, ನಾನೂ, ನನ್ನ ಮಗ ಸೊಲೊಮೋನನೂ ಅಪರಾಧಿಗಳಾಗಿ ಎಣಿಕೆಯಾಗುವೆವು,” ಎಂದಳು. \p \v 22 ಅವಳು ಅರಸನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಪ್ರವಾದಿಯಾದ ನಾತಾನನು ಬಂದನು. \v 23 ಆಗ ಅರಸನಿಗೆ, “ಪ್ರವಾದಿಯಾದ ನಾತಾನನು,” ಎಂದರು. ಅವನು ಒಳಗೆ ಅರಸನ ಮುಂದೆ ಬಂದಾಗ, ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು. \p \v 24 ಆಗ ನಾತಾನನು, “ಅರಸನಾದ ನನ್ನ ಒಡೆಯನೇ, ಅದೋನೀಯನು, ನನ್ನ ತರುವಾಯ ಆಳುವನೆಂದೂ, ನನ್ನ ಸಿಂಹಾಸನ ಮೇಲೆ ಕುಳಿತುಕೊಳ್ಳುವನೆಂದೂ, ನೀವು ಹೇಳಿದ್ದು ಹೌದೋ? \v 25 ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ. \v 26 ಆದರೆ ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ನಿಮ್ಮ ಸೇವಕನಾದ ಸೊಲೊಮೋನನನ್ನೂ, ಅವನು ಕರೆಯಲೇ ಇಲ್ಲ. \v 27 ಅರಸನಾದ ನನ್ನ ಒಡೆಯನಿಂದ ಈ ಕಾರ್ಯವಾಯಿತೋ? ಅರಸನಾದ ನನ್ನ ಒಡೆಯನು, ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನಿಮ್ಮ ಸೇವಕನಾದ ನನಗೆ ನೀವು ತಿಳಿಸದೆ ಹೋದಿರೋ?” ಎಂದನು. \s1 ದಾವೀದನು ಸೊಲೊಮೋನನನ್ನು ಅರಸನಾಗಿ ಅಭಿಷೇಕಿಸಿದ್ದು \p \v 28 ಆಗ ಅರಸನಾದ ದಾವೀದನು ಉತ್ತರವಾಗಿ, “ಬತ್ಷೆಬೆಳನ್ನು ನನ್ನ ಬಳಿಗೆ ಕರೆಯಿರಿ,” ಎಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಳು. \p \v 29 ಅರಸನು ಆಕೆಗೆ, “ನಿಶ್ಚಯವಾಗಿ, ನಿನ್ನ ಮಗ ಸೊಲೊಮೋನನು ನನ್ನ ತರುವಾಯ ಆಳುವನೆಂದೂ, \v 30 ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ, ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಮೇಲೆ ಆಣೆ ಇಡುತ್ತೇನೆ,” ಎಂದೂ ಪ್ರಮಾಣವಾಗಿ ಹೇಳಿದನು. \p \v 31 ಬತ್ಷೆಬೆಳು ಮುಖವನ್ನು ನೆಲಕ್ಕೆ ಬಗ್ಗಿಸಿ, ಅರಸನನ್ನು ವಂದಿಸಿ, “ನನ್ನ ಒಡೆಯನೂ, ಅರಸನೂ ಆದ ದಾವೀದನು ಎಂದೆಂದಿಗೂ ಬದುಕಲಿ,” ಎಂದಳು. \p \v 32 ಆಗ ಅರಸನಾದ ದಾವೀದನು, “ಯಾಜಕನಾದ ಚಾದೋಕನನ್ನೂ, ಪ್ರವಾದಿಯಾದ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ,” ಎಂದನು. ಅವರು ಅರಸನ ಸಮ್ಮುಖಕ್ಕೆ ಬಂದರು. \v 33 ಅರಸನು ಅವರಿಗೆ, “ನೀವು ನಿಮ್ಮ ಯಜಮಾನನ ಸೇವಕರನ್ನು ಕರೆದುಕೊಂಡು ಹೋಗಿ ನನ್ನ ಮಗ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವನನ್ನು ಕರೆದುಕೊಂಡು ಹೋಗಿರಿ. \v 34 ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ. \v 35 ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಹಾಗೆ, ನೀವು ಅವನ ಹಿಂದೆ ಬನ್ನಿರಿ. ಏಕೆಂದರೆ ಅವನು ನನಗೆ ಬದಲಾಗಿ ಅರಸನಾಗಿರುವನು. ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ, ನಾಯಕನಾಗಿರಲು ನಾನು ಅವನನ್ನು ನೇಮಿಸಿದ್ದೇನೆ,” ಎಂದನು. \p \v 36 ಯೆಹೋಯಾದಾವನ ಮಗ ಬೆನಾಯನು ಅರಸನಿಗೆ ಉತ್ತರವಾಗಿ, “ಆಮೆನ್, ಅರಸನಾದ ನನ್ನ ಒಡೆಯನ ದೇವರಾದ ಯೆಹೋವ ದೇವರು ಹಾಗೆಯೇ ಹೇಳಲಿ. \v 37 ಯೆಹೋವ ದೇವರು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದರೋ, ಹಾಗೆಯೇ ಸೊಲೊಮೋನನ ಸಂಗಡ ಇದ್ದು, ನನ್ನ ಒಡೆಯನೂ, ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನವನ್ನು ಅಧಿಕವಾಗಿ ಮಾಡಲಿ,” ಎಂದನು. \p \v 38 ಆಗ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ, ಯೆಹೋಯಾದಾವನ ಮಗ ಬೆನಾಯನೂ, ಕೆರೇತ್ಯರೂ, ಪೆಲೇತ್ಯರೂ ಹೋಗಿ, ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನಿಗೆ ಕರೆತಂದರು. \v 39 ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು. \v 40 ಇದಲ್ಲದೆ ಜನರೆಲ್ಲರೂ ಅವನನ್ನು ಹಿಂಬಾಲಿಸಿದರು. ಜನರು ಕೊಳಲು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು. \p \v 41 ಆಗ ಅದೋನೀಯನೂ, ಅವನ ಸಂಗಡ ಕರೆಹೊಂದಿದವರೂ ತಿಂದು, ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ, “ಪಟ್ಟಣದಲ್ಲಿ ಗದ್ದಲದ ಶಬ್ದವೇಕೆ?” ಎಂದನು. \p \v 42 ಅವನು ಇನ್ನೂ ಮಾತನಾಡುತ್ತಿರುವಾಗ, ಯಾಜಕನಾಗಿರುವ ಅಬಿಯಾತರನ ಮಗ ಯೋನಾತಾನನು ಬಂದನು. ಅದೋನೀಯನು ಅವನಿಗೆ, “ಒಳಗೆ ಬಾ. ಏಕೆಂದರೆ ನೀನು ಯೋಗ್ಯ ಮನುಷ್ಯನೂ, ಒಳ್ಳೆಯ ಸಮಾಚಾರ ತರುವವನೂ ಆಗಿರುತ್ತೀ?” ಎಂದನು. \p \v 43 ಆಗ ಯೋನಾತಾನನು ಅದೋನೀಯನಿಗೆ, ನಿಶ್ಚಯವಾಗಿ ಒಳ್ಳೆಯ ಸಮಾಚಾರವಲ್ಲ! “ನಮ್ಮ ಒಡೆಯನೂ ಅರಸನೂ ಆಗಿರುವ ದಾವೀದನು ಸೊಲೊಮೋನನನ್ನು ಅರಸನಾಗಿ ಮಾಡಿದ್ದಾನೆ. \v 44 ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ, ಪ್ರವಾದಿ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ಕೆರೇತ್ಯರನ್ನೂ, ಪೆಲೇತ್ಯರನ್ನೂ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಕೂಡಿಸಿಕೊಂಡು ಹೋಗಿ, \v 45 ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಸೊಲೊಮೋನನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ. ಅವರು ಸಂತೋಷಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲವಾಯಿತು. ನೀವು ಕೇಳುವ ಆರ್ಭಟವು ಇದೇ. \v 46 ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ. \v 47 ಇದರ ಹೊರತು ಅರಸನ ಸೇವಕರೂ, ನಮ್ಮ ಯಜಮಾನನೂ, ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು, ‘ದೇವರು ಸೊಲೊಮೋನನ ಹೆಸರನ್ನು ನಿಮ್ಮ ಹೆಸರಿಗಿಂತಲೂ ಪ್ರಸಿದ್ಧ ಮಾಡಲಿ. ಅವನ ಸಿಂಹಾಸನವನ್ನು ನಿಮ್ಮ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲಿ,’ ಎಂದೂ ಹೇಳುತ್ತಿರುವಾಗ, ಅರಸನು ಮಂಚದ ಮೇಲೆ ಬಾಗಿ, \v 48 ‘ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಉತ್ತರಾಧಿಕಾರಿಯನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ,’ ಎಂದು ಹೇಳಿದ್ದಾರೆ,” ಎಂದನು. \p \v 49 ಆಗ ಅದೋನೀಯನ ಸಂಗಡ ಔತಣಕ್ಕೆ ಬಂದಿದ್ದ ಎಲ್ಲರೂ ಹೆದರಿಕೊಂಡು ಎದ್ದು, ತಮ್ಮ ತಮ್ಮ ಸ್ಥಳಗಳಿಗೆ ಹೊರಟು ಹೋದರು. \v 50 ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. \v 51 ಆಗ ಒಬ್ಬನು ಅರಸನಾದ ಸೊಲೊಮೋನನಿಗೆ, “ಅದೋನೀಯನು, ನಿನಗೆ ಭಯಪಡುತ್ತಾನೆ. ಏಕೆಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ಖಡ್ಗದಿಂದ ತನ್ನ ಸೇವಕನನ್ನು ಕೊಲ್ಲುವುದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ,’ ಎಂದು ಹೇಳುತ್ತಾನೆ,” ಎಂದನು. \p \v 52 ಅದಕ್ಕೆ ಸೊಲೊಮೋನನು, “ಅವನು ಉತ್ತಮನಾಗಿ ನಡೆಯುವುದಾದರೆ, ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು. ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು,” ಎಂದನು. \v 53 ಅರಸನಾದ ಸೊಲೊಮೋನನು ಅವನನ್ನು ಕರೆಸಿದಾಗ, ಬಲಿಪೀಠದ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡಬಿದ್ದನು. ಸೊಲೊಮೋನನು ಅವನಿಗೆ, “ನಿನ್ನ ಮನೆಗೆ ಹೋಗು,” ಎಂದನು. \c 2 \s1 ದಾವೀದನು ಸೊಲೊಮೋನನಿಗೆ ಹೇಳಿದ ಕಡೆಯ ಮಾತುಗಳು \p \v 1 ಆದರೆ ದಾವೀದನ ಸಾಯುವ ಕಾಲ ಸಮೀಪಿಸಿದ್ದರಿಂದ ಅವನು ತನ್ನ ಮಗ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ, \p \v 2 “ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು. \v 3 ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ. \v 4 ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು. \p \v 5 “ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು. \v 6 ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು. \p \v 7 “ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು. \p \v 8 “ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾಮೀನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನ್ ನದಿ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದ್ದರಿಂದ, ‘ನಾನು ನಿನ್ನನ್ನು ಖಡ್ಗದಿಂದ ಕೊಲ್ಲುವುದಿಲ್ಲ,’ ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆಯಿಟ್ಟೆನು. \v 9 ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು. \p \v 10 ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. \v 11 ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು. \v 12 ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ಕುಳಿತನು. ಅವನ ರಾಜ್ಯವು ಬಹು ಸ್ಥಿರವಾಗಿತ್ತು. \s1 ಸೊಲೊಮೋನನ ಸಿಂಹಾಸನವು ಸ್ಥಾಪಿತವಾದದ್ದು \p \v 13 ಆದರೆ ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಬತ್ಷೆಬೆಳು ಅವನಿಗೆ, “ಸಮಾಧಾನವಾಗಿ ಬರುತ್ತೀಯೋ?” ಎಂದಳು. \p ಅದಕ್ಕೆ ಅವನು, “ಸಮಾಧಾನವೇ,” ಎಂದನು. \v 14 ಅವನು, “ನಿನಗೆ ಹೇಳತಕ್ಕ ಮಾತಿದೆ,” ಎಂದನು. \p ಬತ್ಷೆಬೆಳು, “ಹೇಳು,” ಎಂದಳು. \p \v 15 ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು. \v 16 ಆದರೆ ಈಗ ನನಗೆ ಒಂದು ಬಿನ್ನಹವಿದೆ. ಅದನ್ನು ತಿರಸ್ಕರಿಸಬೇಡ,” ಎಂದನು. \p ಬತ್ಷೆಬೆಳು ಅವನಿಗೆ, “ಅದೇನು ಹೇಳು,” ಎಂದಳು. \p \v 17 ಆಗ ಅವನು, “ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು. ಏಕೆಂದರೆ ಅವನು ನಿನಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು. \p \v 18 ಅದಕ್ಕೆ ಬತ್ಷೆಬೆಳು, “ಒಳ್ಳೆಯದು, ನಿನಗೋಸ್ಕರ ಅರಸನ ಸಂಗಡ ಮಾತನಾಡುವೆನು,” ಎಂದಳು. \p \v 19 ಆದ್ದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವುದಕ್ಕೆ ಅರಸನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು, ಅವಳಿಗೆ ಅಡ್ಡಬಿದ್ದು, ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜಮಾತೆಗೋಸ್ಕರ ಆಸನವನ್ನು ಹಾಕಿಸಿದನು. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. \p \v 20 ಅವಳು ಅವನಿಗೆ, “ನಿನ್ನಿಂದ ಒಂದು ಚಿಕ್ಕ ಬಿನ್ನಹವಿದೆ, ಆಗುವುದಿಲ್ಲವೆಂದು ಹೇಳಬೇಡ,” ಎಂದಳು. \p ಅರಸನು ಅವಳಿಗೆ, “ನನ್ನ ತಾಯಿಯೇ ಕೇಳು. ಏಕೆಂದರೆ ನಾನು ನಿನ್ನ ಮಾತಿಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು. \p \v 21 ಅದಕ್ಕವಳು, “ಶೂನೇಮ್ಯಳಾದ ಅಬೀಷಗಳನ್ನು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು. \p \v 22 ಅರಸನಾದ ಸೊಲೊಮೋನನು ತನ್ನ ತಾಯಿಗೆ ಉತ್ತರವಾಗಿ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನೀನು ಕೇಳುವುದೇಕೆ? ರಾಜ್ಯವನ್ನೂ ಕೇಳು. ಏಕೆಂದರೆ ಅವನು ನನ್ನ ಅಣ್ಣನಾಗಿದ್ದಾನೆ. ಯಾಜಕ ಅಬಿಯಾತರನಿಗೋಸ್ಕರವೂ, ಚೆರೂಯಳ ಮಗ ಯೋವಾಬನಿಗೋಸ್ಕರವೂ ಕೇಳು,” ಎಂದನು. \p \v 23 ತರುವಾಯ ಅರಸನಾದ ಸೊಲೊಮೋನನು, “ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ, ನನಗೆ ದೇವರು ಹಾಗೆಯೂ, ಅದಕ್ಕಿಂತಲೂ ಅಧಿಕವಾಗಿಯೂ ಮಾಡಲಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆ ಇಟ್ಟನು. \v 24 “ಹಾಗಾದರೆ ನನ್ನನ್ನು ಸ್ಥಿರಪಡಿಸಿ, ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡಿಸಿ, ತಾವು ಮಾತುಕೊಟ್ಟ ಪ್ರಕಾರ ನನಗೆ ಮನೆತನ ಕಟ್ಟಿಸಿದ ಯೆಹೋವ ದೇವರ ಜೀವದಾಣೆ, ಈ ಹೊತ್ತು ಅದೋನೀಯನು ಸಾಯಬೇಕು,” ಎಂದನು. \v 25 ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನನ್ನು ಕಳುಹಿಸಿದನು. ಇವನು ಹೋಗಿ ಅದೋನೀಯನನ್ನು ಕೊಂದುಹಾಕಿದನು. \p \v 26 ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು. \v 27 ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು. \p \v 28 ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು. \v 29 ಯೋವಾಬನು ಯೆಹೋವ ದೇವರ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಬಳಿಯಲ್ಲಿ ಇದ್ದಾನೆ, ಎಂಬ ಸುದ್ದಿ ಅರಸನಾದ ಸೊಲೊಮೋನನಿಗೆ ತಿಳಿಯಿತು. ಆಗ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ, “ನೀನು ಹೋಗಿ ಅವನನ್ನು ಕೊಂದುಹಾಕು,” ಎಂದನು. \p \v 30 ಬೆನಾಯನು ಯೆಹೋವ ದೇವರ ಗುಡಾರಕ್ಕೆ ಬಂದು ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ,” ಎಂದನು. \p ಅದಕ್ಕವನು, “ಇಲ್ಲ, ಇಲ್ಲಿಯೇ ಸಾಯುತ್ತೇನೆ,” ಎಂದನು. \p ಬೆನಾಯನು ಅರಸನ ಬಳಿಗೆ ತಿರುಗಿ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು. \p \v 31 ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು. \v 32 ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು. \v 33 ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು. \p \v 34 ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು. \v 35 ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು. \p \v 36 ಆಗ ಅರಸನು ಶಿಮ್ಮಿಯನ್ನು ಕರೆಯಿಸಿ ಅವನಿಗೆ, “ನೀನು ಯೆರೂಸಲೇಮಿನಲ್ಲಿ, ನಿನಗೆ ಮನೆಯನ್ನು ಕಟ್ಟಿಸಿಕೊಂಡು, ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು. \v 37 ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು. \p \v 38 ಶಿಮ್ಮಿ ಅರಸನಿಗೆ, “ನಿಮ್ಮ ಮಾತು ಒಳ್ಳೆಯದು. ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ, ನಿನ್ನ ಸೇವಕನು ಮಾಡುವನು,” ಎಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು. \p \v 39 ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್‌ನಲ್ಲಿ ಇದ್ದಾರೆ” ಎಂದು ತಿಳಿಸಿದರು. \v 40 ಆದ್ದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ, ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರೆದುಕೊಂಡು ಬಂದನು. \p \v 41 ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ ಊರಿಗೆ ಹೋಗಿ, ತಿರುಗಿ ಬಂದಿದ್ದಾನೆಂದು ಸೊಲೊಮೋನನಿಗೆ ತಿಳಿಯಿತು. \v 42 ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ? \v 43 ನೀನು ಯೆಹೋವ ದೇವರ ಆಣೆಯನ್ನೂ, ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಗೊಳ್ಳದೆ ಇದ್ದದ್ದೇನು?” ಎಂದನು. \p \v 44 ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು. \v 45 ಆದರೆ ಅರಸನಾದ ಸೊಲೊಮೋನನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವ ದೇವರ ಮುಂದೆ ಯುಗಯುಗಾಂತರಕ್ಕೂ ಸ್ಥಿರವಾಗಿರುವುದು,” ಎಂದನು. \p \v 46 ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದ್ದರಿಂದ, ಅವನು ಹೊರಟು ಹೋಗಿ ಶಿಮ್ಮಿಯ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. \p ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರವಾಯಿತು. \c 3 \s1 ಸೊಲೊಮೋನನು ಜ್ಞಾನವನ್ನು ಕೇಳಿದ್ದು \p \v 1 ಸೊಲೊಮೋನನು ಈಜಿಪ್ಟಿನ ಅರಸನಾದ ಫರೋಹನ ಸಂಗಡ ಬಂಧುತ್ವ ಮಾಡಿ, ಫರೋಹನ ಮಗಳನ್ನು ಮದುವೆಮಾಡಿಕೊಂಡನು. ಅವನು ತನ್ನ ಮನೆಯನ್ನೂ, ಯೆಹೋವ ದೇವರ ಆಲಯವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಸುತ್ತಲೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು. \v 2 ಆ ಕಾಲದವರೆಗೂ ಯೆಹೋವ ದೇವರ ಹೆಸರಿಗಾಗಿ ಆಲಯ ಇರಲಿಲ್ಲ. ಆದುದರಿಂದ, ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು. \v 3 ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು. \p \v 4 ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು. \v 5 ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿಯಲ್ಲಿ ಸ್ವಪ್ನದೊಳಗೆ ಯೆಹೋವ ದೇವರು ಸೊಲೊಮೋನನಿಗೆ ಕಾಣಿಸಿಕೊಂಡರು. ದೇವರು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು. \p \v 6 ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ. \p \v 7 “ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ. \v 8 ಇದಲ್ಲದೆ ನಿಮ್ಮ ಸೇವಕನಾದ ನಾನು ನೀವು ಆಯ್ದುಕೊಂಡಂಥ ಅಸಂಖ್ಯಾತ ಜನರ ಮಧ್ಯದಲ್ಲಿ ಇದ್ದೇನೆ. \v 9 ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು. \p \v 10 ಸೊಲೊಮೋನನು ಕೇಳಿದ ಈ ಮಾತು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದಾಗಿತ್ತು. \v 11 ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ದೀರ್ಘಾಯುಷ್ಯ ಅಥವಾ ಸಂಪತ್ತನ್ನು ಕೇಳಲಿಲ್ಲ, ಅಥವಾ ನಿನ್ನ ಶತ್ರುಗಳ ಮರಣವನ್ನು ಕೇಳಿಲ್ಲ, ಆದರೆ ನ್ಯಾಯವನ್ನು ನಿರ್ವಹಿಸುವುದಕ್ಕಾಗಿ ನಿನಗೋಸ್ಕರ ವಿವೇಕವನ್ನು ಕೇಳಿದ್ದರಿಂದ, \v 12 ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ. \v 13 ನೀನು ಕೇಳದ ಐಶ್ವರ್ಯವನ್ನೂ, ಘನವನ್ನೂ ಕೊಟ್ಟಿದ್ದೇನೆ. ಆದ್ದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸುಗಳಲ್ಲಿ ಒಬ್ಬನೂ ಇರುವುದಿಲ್ಲ. \v 14 ನೀನು, ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು, ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಕೈಗೊಂಡರೆ, ನಿನ್ನ ದಿವಸಗಳನ್ನು ಹೆಚ್ಚಿಸುವೆನು,” ಎಂದರು. \v 15 ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು. \p ಅವನು ಯೆರೂಸಲೇಮಿಗೆ ಬಂದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು, ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ತನ್ನ ಸೇವಕರಿಗೆ ಔತಣವನ್ನು ಏರ್ಪಡಿಸಿದನು. \s1 ಜಾಣತನದ ತೀರ್ಪು \p \v 16 ಇಬ್ಬರು ವೇಶ್ಯೆಯರು ಅರಸನ ಬಳಿಗೆ ಬಂದು, ಅವನ ಮುಂದೆ ನಿಂತರು. \v 17 ಅವರಲ್ಲಿ ಒಬ್ಬಳು, “ನನ್ನ ಒಡೆಯನೇ, ನಾನೂ, ಈ ಹೆಣ್ಣು ಮಗಳು ಒಂದೇ ಮನೆಯಲ್ಲಿ ವಾಸವಾಗಿದ್ದೇವೆ. \v 18 ನಾನು ಅವಳ ಸಂಗಡ ಮನೆಯಲ್ಲಿರುವಾಗ, ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ, ಈ ಹೆಣ್ಣು ಮಗಳು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು. ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತ್ಯಾರೂ ಇಲ್ಲ. \p \v 19 “ಆದರೆ ಅವಳು ಕೂಸಿನ ಮೇಲೆ ಮಲಗಿದ್ದರಿಂದ, ರಾತ್ರಿಯಲ್ಲಿ ಆಕೆಯ ಮಗು ಸತ್ತು ಹೋಯಿತು. \v 20 ಇವಳು ಮಧ್ಯರಾತ್ರಿಯಲ್ಲಿ ಎದ್ದು, ನಿನ್ನ ದಾಸಿಯು ನಿದ್ರೆಗೈಯುತ್ತಿರುವಾಗ, ನನ್ನ ಹತ್ತಿರ ಮಲಗಿದ್ದ ನನ್ನ ಮಗನನ್ನು ತೆಗೆದುಕೊಂಡು, ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು, ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು. \v 21 ಉದಯದಲ್ಲಿ ನನ್ನ ಕೂಸಿಗೆ ಹಾಲು ಕುಡಿಸಲು ಎದ್ದಾಗ, ಅದು ಸತ್ತಿತ್ತು! ಉದಯದಲ್ಲಿ ಅದನ್ನು ಕಂಡಾಗ, ಅದು ನಾನು ಹೆತ್ತ ಮಗುವಾಗಿರಲಿಲ್ಲ,” ಎಂದಳು. \p \v 22 ಆಗ ಆ ಬೇರೆ ಹೆಣ್ಣು ಮಗಳು, “ಇಲ್ಲ ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,” ಎಂದಳು. \p ಮೊದಲನೆಯವಳು, “ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸಿದರು. \p \v 23 ಆಗ ಅರಸನು, “ ‘ಇವಳು ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,’ ಎನ್ನುತ್ತಾಳೆ. ಅವಳು, ಹಾಗಲ್ಲ, ‘ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,’ ಎನ್ನುತ್ತಾಳೆ,” ಎಂದು ಹೇಳಿ, \p \v 24 ಅರಸನು, “ಖಡ್ಗವನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಅವರು ಖಡ್ಗವನ್ನು ಅರಸನ ಬಳಿಗೆ ತಂದರು. \v 25 ಆಗ ಅರಸನು, “ಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು, ಇವಳಿಗೆ ಅರ್ಧ ಪಾಲನ್ನೂ, ಅವಳಿಗೆ ಅರ್ಧ ಪಾಲನ್ನೂ ಕೊಡಿರಿ,” ಎಂದನು. \p \v 26 ಆಗ ಬದುಕಿರುವ ಕೂಸಿನ ತಾಯಿಯಾಗಿರುವವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ, “ನನ್ನ ಒಡೆಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು, ಕೊಲ್ಲಬೇಡ,” ಎಂದಳು. \p ಆದರೆ, ಮತ್ತೊಬ್ಬಳು, ಅದು ನನಗಾಗಲಿ ನಿನಗಾಗಲಿ ಆಗಿರಬಾರದು, ಕಡಿಯಿರಿ. ಎಂದಳು. \p \v 27 ಆಗ ಅರಸನು ಉತ್ತರವಾಗಿ, “ಬದುಕಿರುವ ಕೂಸನ್ನು ಮೊದಲನೆಯವಳಿಗೆ ಕೊಡಿರಿ, ಕೊಲ್ಲಬೇಡಿರಿ, ಇವಳೇ ಅದರ ತಾಯಿ,” ಎಂದನು. \p \v 28 ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು. \c 4 \s1 ಸೊಲೊಮೋನನ ಅಧಿಕಾರಿಗಳು ಮತ್ತು ರಾಜ್ಯಪಾಲರು \p \v 1 ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು. \b \li4 \v 2 ಅವನಿಗೆ ಇದ್ದ ಮುಖ್ಯ ಅಧಿಕಾರಿಗಳು ಯಾರೆಂದರೆ: \b \li1 ಚಾದೋಕನ ಮಗ ಅಜರ್ಯನು ಮುಖ್ಯಯಾಜಕನಾಗಿದ್ದನು. \li1 \v 3 ಶೀಷನ ಮಕ್ಕಳಾದ ಎಲೀಹೋರೆಫ್ ಹಾಗು ಅಹೀಯಾಹು ಎಂಬವರು ಕಾರ್ಯದರ್ಶಿಗಳು. \li1 ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಲೇಖಕ. \li1 \v 4 ಯೆಹೋಯಾದಾವನ ಮಗ ಬೆನಾಯನು ಸೈನ್ಯದ ಅಧಿಪತಿಯು, \li1 ಚಾದೋಕನೂ, ಅಬಿಯಾತರನೂ ಯಾಜಕರು. \li1 \v 5 ನಾತಾನನ ಮಗ ಅಜರ್ಯನು ಅಧಿಪತಿಗಳ ಮೇಲ್ವಿಚಾರಕನು. \li1 ನಾತಾನನ ಮಗ ಜಾಬೂದನು ಯಾಜಕನು ಹಾಗು ಅರಸನ ವೈಯಕ್ತಿಕ ಸಲಹೆಗಾರನು. \li1 \v 6 ಅಹಿಷಾರನು ರಾಜ್ಯ ಗೃಹಾಧಿಪತಿ. \li1 ಅಬ್ದನ ಮಗ ಅದೋನೀರಾಮನು ದಾಸರ ಮೇಲೆ ಉಸ್ತುವಾರಿಮಾಡಿಸುವವನಾಗಿದ್ದನು. \b \p \v 7 ಇದಲ್ಲದೆ ಅರಸನಿಗೂ, ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವುದಕ್ಕೋಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಜಿಲ್ಲಾಧಿಕಾರಿಗಳು ಇದ್ದರು. ಪ್ರತಿಯೊಬ್ಬನೂ ತನಗೆ ವರುಷದಲ್ಲಿ ನೇಮಕವಾದ ತಿಂಗಳು ಬಂದಾಗ, ದವಸಧಾನ್ಯಗಳನ್ನು ಒದಗಿಸುತ್ತಿದ್ದನು. \b \li4 \v 8 ಅವರ ಹೆಸರುಗಳು, ಅವರ ಜಿಲ್ಲೆಗಳು: \b \li1 ಬೆನ್ ಹೂರ್ ಎಫ್ರಾಯೀಮ್ ಪರ್ವತ ಪ್ರದೇಶದ ಅಧಿಕಾರಿ. \li1 \v 9 ಬೆನ್ ಡೆಕೆರ್ ಮಾಕಾಚ್, ಶಾಲ್ಬೀಮ್, ಬೇತ್ ಷೆಮೆಷ್, ಏಲೋನ್ ಹಾಗು ಬೇತ್ ಹಾನಾನ್‌ಗಳಲ್ಲಿ ಅಧಿಕಾರಿ. \li1 \v 10 ಬೆನ್ ಹೆಸೆದ್ ಅರುಬ್ಬೋತದಲ್ಲಿ ಅಧಿಕಾರಿ. ಸೋಕೋ ಮತ್ತು ಹೇಫೆರಿನ ಎಲ್ಲಾ ಪ್ರದೇಶಗಳು ಅವನವಾಗಿದ್ದವು. \li1 \v 11 ಬೆನ್ ಅಬೀನಾದಾಬ್ ನಾಫೋತ್ ದೋರ್‌ದಲ್ಲಿ ಅಧಿಕಾರಿ. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು. \li1 \v 12 ಅಹೀಲೂದನ ಮಗ ಬಾಣಾ ಎಂಬವನು ತಾನಕ್, ಮೆಗಿದ್ದೋ, ಬೇತ್ ಷೆಯಾನಿನ ಎಲ್ಲಾ ಕಡೆಗಳಲ್ಲಿಯೂ ಆಳಿಕೆಮಾಡುತ್ತಿದ್ದನು. ಬೇತ್ ಶಾನ್ ಚಾರೆತಾನಿನ ಪಕ್ಕದಲ್ಲಿದ್ದ ಇಜ್ರೆಯೇಲ್ ಎಂಬ ಪಟ್ಟಣದ ಕೆಳಗಿತ್ತು. ಅವನ ಪ್ರಾಂತವು ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೆ ಯೊಕ್ಮೆಯಾಮಿನಲ್ಲಿ ಅಂತ್ಯಗೊಂಡಿತ್ತು. \li1 \v 13 ಬೆನ್ ಗೆಬೆರ್ ಗಿಲ್ಯಾದಿನ ರಾಮೋತ್ ಎಂಬ ಊರಿಗೆ ಅಧಿಕಾರಿಯಾಗಿದ್ದನು. ಈ ಗಿಲ್ಯಾದಿನ ಪ್ರಾಂತದಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿ ಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲಾಗಿದ್ದ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಕಾರಿಯಾಗಿದ್ದನು. \li1 \v 14 ಇದ್ದೋ ಎಂಬವನ ಮಗನಾದ ಅಹೀನಾದಾಬ್ ಮಹನಯಿಮ್ ಎಂಬ ಸ್ಥಳಕ್ಕೆ ಅಧಿಕಾರಿ. \li1 \v 15 ಅಹೀಮಾಚ್ ನಫ್ತಾಲಿಯಲ್ಲಿ ಅಧಿಕಾರಿ. ಅವನಿಗೆ ಸೊಲೊಮೋನನ ಮಗಳಾದ ಬಾಸೆಮತ್ ಹೆಂಡತಿಯಾಗಿದ್ದಳು. \li1 \v 16 ಹೂಷೈಯ ಮಗ ಬಾಣಾ ಆಶೇರದಲ್ಲಿ ಮತ್ತು ಆಲೋತಿನಲ್ಲಿ ಅಧಿಕಾರಿ. \li1 \v 17 ಫಾರೂಹನ ಮಗ ಯೆಹೋಷಾಫಾಟನು ಇಸ್ಸಾಕಾರ್ ಪ್ರಾಂತದಲ್ಲಿ ಅಧಿಕಾರಿ. \li1 \v 18 ಏಲನ ಮಗ ಶಿಮ್ಮಿಯು ಬೆನ್ಯಾಮೀನ್ ಪ್ರಾಂತದಲ್ಲಿ ಅಧಿಕಾರಿ. \li1 \v 19 ಊರಿಯನ ಮಗ ಗೆಬೆರನು ಗಿಲ್ಯಾದಿನಲ್ಲಿ ಅಧಿಕಾರಿ. ಅಮೋರಿಯರ ಅರಸನಾದ ಸೀಹೋನನ ದೇಶಕ್ಕೂ ಬಾಷಾನಿನ ಅರಸನಾದ ಓಗನ ದೇಶಕ್ಕೂ ಅವನೊಬ್ಬನೇ ಅಧಿಪತಿಯಾಗಿದ್ದನು. \s1 ಸೊಲೊಮೋನನ ದಿನದ ದವಸ ಧಾನ್ಯಗಳು \p \v 20 ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು. \v 21 ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು. \p \v 22 ಸೊಲೊಮೋನನು ಒಂದು ದಿನದ ಭೋಜನಕ್ಕೆ ಕೊಡುತ್ತಿದ್ದ ಆಹಾರ ಪದಾರ್ಥಗಳು 5,000 ಕಿಲೋಗ್ರಾಂ\f + \fr 4:22 \fr*\ft ಸುಮಾರು ಮೂವತ್ತು ಕೋರ್\ft*\f* ನಯವಾದ ಗೋಧಿಯ ಹಿಟ್ಟು, 10,000 ಕಿಲೋಗ್ರಾಂ\f + \fr 4:22 \fr*\ft ಸುಮಾರು ಅರವತ್ತು ಕೋರ್\ft*\f* ಜವೆಗೋಧಿ, \v 23 ಕೊಬ್ಬಿದ ಎತ್ತುಗಳು ಹತ್ತು, ಮೇಯುವ ಎತ್ತುಗಳು ಇಪ್ಪತ್ತು, ಕುರಿಗಳು ನೂರು. ಇವುಗಳ ಹೊರತಾಗಿ ದುಪ್ಪಿಗಳೂ, ಜಿಂಕೆಗಳೂ, ಕೆಂದ ಜಿಂಕೆಗಳೂ, ಕೊಬ್ಬಿದ ಕೋಳಿಗಳೂ ಆಗಿದ್ದವು. \v 24 ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು. \v 25 ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ, ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೇಲಿನಲ್ಲಿರುವ ಪ್ರತಿಯೊಬ್ಬ ಮನುಷ್ಯನು ತನ್ನ ದ್ರಾಕ್ಷಿಬಳ್ಳಿಯ ಕೆಳಗೂ, ತನ್ನ ಅಂಜೂರದ ಮರದ ಕೆಳಗೂ ಸುರಕ್ಷಿತವಾಗಿ ವಾಸವಾಗಿದ್ದರು. \p \v 26 ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಲವತ್ತು ಸಾವಿರ ಕುದುರೆಗಳಿಗೆ ಸ್ಥಳವಿತ್ತು, ಹನ್ನೆರಡು ಸಾವಿರ ರಾಹುತರೂ ಇದ್ದರು. \p \v 27 ಆ ಅಧಿಪತಿಗಳು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೋಸ್ಕರವೂ, ಅರಸನ ಮೇಜಿಗೆ ಬರುವವರೆಲ್ಲರಿಗೋಸ್ಕರವೂ ಸಿದ್ಧಮಾಡಿದ್ದರು. ಅವರಿಗೆ ಕೊರತೆಯಾದದ್ದು ಒಂದೂ ಇರಲಿಲ್ಲ. \v 28 ಹೀಗೆಯೇ ಪ್ರತಿಯೊಬ್ಬನು ತನ್ನ ನೇಮಕದ ಪ್ರಕಾರ ಕುದುರೆಗಳಿಗೋಸ್ಕರವೂ, ಸವಾರಿ ಒಂಟೆಗಳಿಗೋಸ್ಕರವೂ, ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ, ಹುಲ್ಲನ್ನೂ ತಂದರು. \s1 ಸೊಲೊಮೋನನ ಜ್ಞಾನ \p \v 29 ದೇವರು ಸೊಲೊಮೋನನಿಗೆ ಅತ್ಯಧಿಕವಾಗಿ ಜ್ಞಾನವನ್ನೂ, ಗ್ರಹಿಕೆಯನ್ನೂ, ಸಮುದ್ರ ತೀರದಲ್ಲಿಯ ಮರಳಿನ ಹಾಗೆಯೇ ವಿವೇಕವನ್ನೂ ಕೊಟ್ಟರು. \v 30 ಸೊಲೊಮೋನನ ಜ್ಞಾನವು ಮೂಡಣ ದೇಶದ ಸಮಸ್ತರ ಜ್ಞಾನಕ್ಕಿಂತಲೂ, ಈಜಿಪ್ಟಿನ ಸಮಸ್ತರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು. \v 31 ಜೇರಹನ ಮಗನಾದ ಏತಾನನು, ಮಹೋಲನ ಮಕ್ಕಳಾದ ಹೇಮಾನನು, ಕಲ್ಕೋಲನು, ದರ್ದನು\f + \fr 4:31 \fr*\fq ದರ್ದನು \fq*\ft ಹೀಬ್ರೂ ಭಾಷೆಯಲ್ಲಿ \ft*\fqa ದಾರಾ\fqa*\f* ಮೊದಲಾದ ಸಮಸ್ತ ಮನುಷ್ಯರಿಗಿಂತಲೂ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ದೇಶಗಳಲ್ಲಿ ಅವನ ಕೀರ್ತಿ ಇತ್ತು. \v 32 ಅವನು ಮೂರು ಸಾವಿರ ಜ್ಞಾನೋಕ್ತಿಗಳನ್ನು ಹೇಳಿದನು. ಅವನ ಹಾಡುಗಳು ಸಾವಿರದ ಐದು. \v 33 ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನವರೆಗೂ ಹೇಳಿದನು. ಇದಲ್ಲದೆ ಮೃಗಗಳನ್ನು ಕುರಿತೂ, ಪಕ್ಷಿಗಳನ್ನು ಕುರಿತೂ, ಕ್ರಿಮಿಗಳನ್ನು ಕುರಿತೂ, ಮೀನುಗಳನ್ನು ಕುರಿತೂ ಪ್ರಸ್ತಾಪಿಸಬಲ್ಲವನಾಗಿದ್ದನು. \v 34 ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು. \c 5 \s1 ದೇವಾಲಯ ಕಟ್ಟಲು ಸಿದ್ಧತೆ \p \v 1 ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು. \v 2 ಸೊಲೊಮೋನನು ರಾಜದೂತರ ಮುಖಾಂತರ ಹೀರಾಮನಿಗೆ ಈ ಸಂದೇಶವನ್ನು ಕಳುಹಿಸಿದನು: \pm \v 3 “ನನ್ನ ತಂದೆ ದಾವೀದನು ತನ್ನ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಏಕೆಂದರೆ ಯೆಹೋವ ದೇವರು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವವರೆಗೂ, ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಯಿತು. \v 4 ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ. \v 5 ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ. \pm \v 6 “ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು. \p \v 7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು. \p \v 8 ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, \pm “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು. \v 9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು. \p \v 10 ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು. \v 11 ಸೊಲೊಮೋನನು ಹೀರಾಮನಿಗೆ ಅವನ ಮನೆಯವರ ಆಹಾರಕ್ಕೋಸ್ಕರ ಸುಮಾರು ಮೂರು ಸಾವಿರ ಆರನೂರು ಟನ್ ಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಅಪ್ಪಟವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು. \v 12 ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು. \p \v 13 ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲರೊಳಗಿಂದ ಆಳುಗಳನ್ನು ತೆಗೆದುಕೊಂಡನು. ಆ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. \v 14 ಅವನು ಅವರನ್ನು ಲೆಬನೋನಿಗೆ ಕಳುಹಿಸಿದನು. ತಿಂಗಳು ತಿಂಗಳಿಗೂ ನೇಮಕದ ಪ್ರಕಾರ, ಹತ್ತು ಸಾವಿರ ಜನರನ್ನು ಕಳುಹಿಸಿದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು, ಎರಡು ತಿಂಗಳು ತಮ್ಮ ಮನೆಗಳಲ್ಲಿದ್ದರು. ಅದೋನೀರಾಮನು ಆಳುಗಳ ಮೇಲೆ ಯಜಮಾನನಾಗಿದ್ದನು. \v 15 ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು. \v 16 ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು. \v 17 ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು. \v 18 ಸೊಲೊಮೋನನ ಶಿಲ್ಪಕಾರರೂ, ಹೀರಾಮನ ಶಿಲ್ಪಕಾರರೂ, ಗೆಬಾಲ್ಯರೂ ಅವುಗಳನ್ನು ಕಡಿದು, ಆಲಯವನ್ನು ಕಟ್ಟುವುದಕ್ಕೆ ಕಲ್ಲುಗಳನ್ನೂ, ಮರಗಳನ್ನೂ ಸಿದ್ಧಮಾಡಿದರು. \c 6 \s1 ಸೊಲೊಮೋನನು ದೇವಾಲಯವನ್ನು ಕಟ್ಟಿಸಿದ್ದು \p \v 1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಬಂದ ನಾನೂರ ಎಂಬತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋನನ ಆಳಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಾದ ಜಿವ್ ತಿಂಗಳಲ್ಲಿ ಅವನು ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು. \p \v 2 ಅರಸನಾದ ಸೊಲೊಮೋನನು ಯೆಹೋವ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದನು, ಅದರ ಉದ್ದ ಸುಮಾರು 27 ಮೀಟರ್, ಅದರ ಅಗಲ 9 ಮೀಟರ್, ಅದರ ಎತ್ತರ 14 ಮೀಟರ್. \v 3 ಮಂದಿರದ ಮುಂದೆ ಮಂಟಪವಿತ್ತು. ಅದು ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು. ಆಲಯದ ಮುಂದೆ ಇರುವ ಅದರ ಅಗಲವು 4.5 ಮೀಟರ್. \v 4 ಅವನು ಸಣ್ಣ ಜಾಲರಿಗಳುಳ್ಳ ಕಿಟಿಕಿಗಳನ್ನು ಆಲಯಕ್ಕೆ ಮಾಡಿಸಿದನು. \v 5 ಕಟ್ಟಡದ ಹೊರಗಿನ ಗೋಡೆಗಳ ಸುತ್ತಲೂ, ಸೊಲೊಮೋನನು ಅನೇಕ ಕೋಣೆಗಳ ಸಂಕೀರ್ಣವನ್ನು ಎರಡೂ ಬದಿಗಳಲ್ಲಿ ನಿರ್ಮಿಸಿದನು. \v 6 ಕೆಳಗಿರುವ ಕೊಠಡಿಯು 2.2 ಮೀಟರ್ ಅಗಲ, ಎರಡನೆಯದು 2.7 ಮೀಟರ್ ಅಗಲ, ಮೂರನೆಯದು 3.1 ಮೀಟರ್ ಅಗಲ. ಏಕೆಂದರೆ ತೊಲೆಗಳು ಆಲಯದ ಗೋಡೆಗಳಲ್ಲಿ ತಗಲದ ಹಾಗೆ ಆಲಯದ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು. \p \v 7 ಆಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಆಲಯವನ್ನು ಕಟ್ಟುತ್ತಿರುವಾಗ, ಅದರಲ್ಲಿ ಸುತ್ತಿಗೆ, ಉಳಿ, ಕಬ್ಬಿಣದ ಉಪಕರಣಗಳ ಶಬ್ದವೇ ಕೇಳಲಿಲ್ಲ. \p \v 8 ಮಧ್ಯ ಕೊಠಡಿಯ ಬಾಗಿಲು ಆಲಯದ ದಕ್ಷಿಣ ಭಾಗದಲ್ಲಿ ಇತ್ತು. ಅಲ್ಲಿಂದ ಮಧ್ಯ ಕೊಠಡಿಗೂ, ಮಧ್ಯ ಕೊಠಡಿಯಿಂದ ಮೂರನೆಯ ಕೊಠಡಿಗೂ ಹತ್ತಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು. \v 9 ಹೀಗೆಯೇ ಅವನು ಆಲಯವನ್ನು ಕಟ್ಟಿ, ತೀರಿಸಿದ ತರುವಾಯ, ಆಲಯವನ್ನು ದೇವದಾರುಗಳ ತೊಲೆಗಳಿಂದಲೂ, ಹಲಗೆಗಳಿಂದಲೂ ಮುಚ್ಚಿಸಿದನು. \v 10 ಅವನು 2.2 ಮೀಟರ್ ಎತ್ತರವಾದ ಕೊಠಡಿಗಳನ್ನು ಆಲಯದ ಬಳಿಯಲ್ಲಿ ಸುತ್ತಲು ಕಟ್ಟಿಸಿದನು. ಅವು ಆಲಯದ ಮೇಲೆ ಇರಿಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು. \p \v 11 ಆಗ ಯೆಹೋವ ದೇವರ ವಾಕ್ಯವು ಸೊಲೊಮೋನನಿಗೆ ಬಂದಿತು, \v 12 “ನೀನು ಕಟ್ಟಿಸುವ ಈ ಆಲಯವನ್ನು ಕುರಿತು ನನ್ನ ಕಟ್ಟಳೆಗಳಲ್ಲಿ ನಡೆದು, ನನ್ನ ನ್ಯಾಯಗಳ ಪ್ರಕಾರಮಾಡಿ, ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಗೊಂಡರೆ, ನಾನು ನಿನ್ನ ತಂದೆ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರಮಾಡಿ, \v 13 ನನ್ನ ಜನವಾದ ಇಸ್ರಾಯೇಲರ ಕೈಬಿಡದೆ, ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿರುವೆನು,” ಎಂದರು. \p \v 14 ಸೊಲೊಮೋನನು ಆಲಯವನ್ನು ಕಟ್ಟಿಸಿ, ತೀರಿಸಿದನು. \v 15 ಆಲಯದ ಗೋಡೆಗಳ ಒಳಭಾಗಕ್ಕೆ ಮಂದಿರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯವರೆಗೂ ದೇವದಾರು ಹಲಗೆಗಳಿಂದ ಕಟ್ಟಿಸಿದನು. ಒಳಭಾಗದಲ್ಲಿ ಮರದಿಂದ ಮುಚ್ಚಿ, ಆಲಯದ ನೆಲವನ್ನು ತುರಾಯಿ ಮರಗಳ ಹಲಗೆಗಳಿಂದ ಮುಚ್ಚಿದನು. \v 16 ಅವನು ಆಲಯದ ಕಡೆಗಳಲ್ಲಿ 9 ಮೀಟರ್ ನೆಲವನ್ನೂ, ಗೋಡೆಗಳನ್ನೂ, ದೇವದಾರುಗಳ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಅತಿ ಪರಿಶುದ್ಧಸ್ಥಳದ ಅಂಗನ ಅಥವಾ ಮಹಾಪರಿಶುದ್ಧ ಸ್ಥಳವೆಂದು ಕಟ್ಟಿಸಿದನು. \v 17 ಅದರ ಮುಂದಿರುವ ಮಂದಿರವಾಗಿರುವ ಆಲಯ 18 ಮೀಟರ್ ಉದ್ದವಾಗಿತ್ತು. \v 18 ಆಲಯದ ಒಳಗಿರುವ ದೇವದಾರು ಮೊಗ್ಗುಗಳೂ, ಅರಳಿದ ಹೂವುಗಳೂ ಕೆತ್ತಿದ ಕೆಲಸಗಳಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಎಲ್ಲಾ ದೇವದಾರದ್ದಾಗಿತ್ತು. \p \v 19 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವುದಕ್ಕೆ ಆಲಯದ ಒಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು. \v 20 ದೈವೋಕ್ತಿಯ ಸ್ಥಾನದ ಮುಂಭಾಗದ ಪ್ರಮಾಣವು, 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಶುದ್ಧ ಬಂಗಾರದಿಂದ ಹೊದಿಸಿದನು. ದೇವದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು. \v 21 ಸೊಲೊಮೋನನು ಆಲಯದ ಒಳಭಾಗವನ್ನು ಶುದ್ಧ ಬಂಗಾರದಿಂದ ಹೊದಿಸಿ, ದೈವೋಕ್ತಿಯ ಸ್ಥಾನದ ಮುಂದೆ ಬಂಗಾರದ ಸರಪಣಿಗಳಿಂದ ವಿಭಾಗವನ್ನು ಮಾಡಿ, ಅದನ್ನು ಬಂಗಾರದಿಂದ ಹೊದಿಸಿದನು. \v 22 ಅವನು ಆಲಯವನ್ನೆಲ್ಲಾ ಬಂಗಾರದಿಂದ ಹೊದಿಸಿ, ಸ್ಥಾನದ ಮುಂಭಾಗದಲ್ಲಿರುವ ಪೀಠವನ್ನೂ ಬಂಗಾರದಿಂದ ಹೊದಿಸಿದನು. \p \v 23 ಅವನು ದೈವೋಕ್ತಿಯ ಸ್ಥಾನದಲ್ಲಿ ಹಿಪ್ಪೇಮರಗಳಿಂದ ಎರಡು ಕೆರೂಬಿಗಳನ್ನು ಮಾಡಿಸಿದನು. ಒಂದೊಂದು 4.4 ಮೀಟರ್ ಎತ್ತರವಾಗಿತ್ತು. \v 24 ಕೆರೂಬಿಗೆ ಇರುವ ಒಂದೊಂದು ರೆಕ್ಕೆ 2.2 ಮೀಟರ್ ಆಗಿತ್ತು. ಒಂದು ರೆಕ್ಕೆಯ ಕೊನೆ ಮೊದಲುಗೊಂಡು, ಮತ್ತೊಂದು ರೆಕ್ಕೆಯ ಕೊನೆಯವರೆಗೂ 4.4 ಮೀಟರ್ ಆಗಿತ್ತು. \v 25 ಎರಡನೆಯ ಕೆರೂಬಿಯು 4.4 ಮೀಟರ್. ಎರಡು ಕೆರೂಬಿಗಳಿಗೂ ಒಂದೇ ಅಳತೆಯೂ, ಒಂದೇ ಪ್ರಮಾಣವೂ ಇತ್ತು. \v 26 ಒಂದು ಕೆರೂಬಿಯು 4.4 ಮೀಟರ್ ಎತ್ತರವಾಗಿತ್ತು. ಎರಡನೆಯ ಕೆರೂಬಿಯು ಅದರ ಹಾಗೆಯೇ ಇತ್ತು. \v 27 ಆ ಕೆರೂಬಿಗಳನ್ನು ದೇವಾಲಯದ ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವುದರಿಂದ ಒಂದು ರೆಕ್ಕೆಯ ಈ ಭಾಗದ ಗೋಡೆಯನ್ನೂ, ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು. ಆಲಯದ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು. \v 28 ಆ ಕೆರೂಬಿಗಳನ್ನು ಬಂಗಾರದ ತಗಡುಗಳಿಂದ ಹೊದಿಸಿದನು. \p \v 29 ಅವನು ಆಲಯದ ಗೋಡೆಗಳ ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ, ಖರ್ಜೂರದ ಗಿಡಗಳನ್ನೂ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು. \v 30 ಆಲಯದ ಒಳಗಿನ ಮತ್ತು ಹೊರಗಿನ ನೆಲವನ್ನು ಬಂಗಾರ ತಗಡುಗಳಿಂದ ಹೊದಿಸಿದನು. \p \v 31 ಅವನು ದೈವೋಕ್ತಿಯ ಸ್ಥಾನದ ಬಾಗಿಲಿಗೆ ಹಿಪ್ಪೇಮರಗಳಿಂದ ಜೋಡು ಬಾಗಿಲುಗಳನ್ನು ಮಾಡಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು. \v 32 ಹಿಪ್ಪೇಮರದ ಆ ಜೋಡು ಬಾಗಿಲುಗಳ ಮೇಲೆ ಅವನು ಕೆರೂಬಿ, ಖರ್ಜೂರದ ವೃಕ್ಷ, ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಆ ಕೆರೂಬಿಗಳನ್ನೂ, ಖರ್ಜೂರ ಗಿಡಗಳನ್ನೂ, ಬಂಗಾರದ ತಗಡಿನಿಂದ ಹೊದಿಸಿದನು. \v 33 ಅದೇ ರೀತಿಯಲ್ಲಿ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿದನು. \v 34 ಅದಕ್ಕೆ ತುರಾಯಿ ಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಚಬಹುದಾಗಿತ್ತು. \v 35 ಅದರ ಮೇಲೆ ಕೆರೂಬಿಗಳ, ಖರ್ಜೂರ ಗಿಡಗಳ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು. ಈ ಕೆತ್ತನೆಗಳ ಮೇಲೆ ಸಮವಾಗಿ ಬಂಗಾರದ ತಗಡನ್ನು ಹೊದಿಸಿದನು. \p \v 36 ಅವನು ಒಳಗಿನ ಅಂಗಳವನ್ನು ಕೆತ್ತಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು. \p \v 37 ನಾಲ್ಕನೆಯ ವರ್ಷದ ಜಿವ್ ತಿಂಗಳಲ್ಲಿ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾಯಿತು. \v 38 ಹನ್ನೊಂದನೆಯ ವರ್ಷದ, ಎಂಟನೆಯ ತಿಂಗಳಾದ ಬೂಲ್ ಎಂಬ ಕಾರ್ತಿಕ ತಿಂಗಳಲ್ಲಿ ಆ ದೇವಾಲಯದ ಎಲ್ಲಾ ಭಾಗಗಳೂ ಯೋಜನೆಯ ಪ್ರಕಾರ ಕಟ್ಟಲಾಯಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು. \c 7 \s1 ಸೊಲೊಮೋನನು ತನ್ನ ಅರಮನೆಯನ್ನು ಕಟ್ಟಿಸಿದ್ದು \p \v 1 ಇದಲ್ಲದೆ ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು. \v 2 ಅವನು ಲೆಬನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು 44 ಮೀಟರ್ ಉದ್ದ, 22 ಮೀಟರ್ ಅಗಲ, 13.5 ಮೀಟರ್ ಎತ್ತರವೂ ಆಗಿತ್ತು. ಅದು ನಾಲ್ಕು ಸಾಲು ದೇವದಾರು ಕಂಬಗಳ ಮೇಲೆ ಇತ್ತು. ದೇವದಾರು ತೊಲೆಗಳು ಕಂಬಗಳ ಮೇಲೆ ಇದ್ದವು. \v 3 ಒಂದೊಂದು ಸಾಲು ಹದಿನೈದು ಕಂಬಗಳಾಗಿ ನಲವತ್ತೈದು ಕಂಬಗಳ ಮೇಲೆ ಇರುವ ತೊಲೆಗಳು ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. \v 4 ಮೂರು ಸಾಲು ಕಿಟಕಿಗಳು ಇದ್ದವು. ಮೂರು ಸಾಲುಗಳಲ್ಲಿ ಬೆಳಕಿನ ಕಿಂಡಿಗಳಿದ್ದವು. \v 5 ಕಿಟಕಿಗಳಲ್ಲಿ ಬಾಗಿಲುಗಳೂ, ನಿಲುವುಗಳೂ ಎಲ್ಲಾ ಚೌಕವಾಗಿದ್ದವು. ಮೂರು ಮೂರು ಸಾಲುಗಳಲ್ಲಿ ಬೆಳಕಿನ ಕಿಂಡಿಗಳು ಎದುರೆದುರಾಗಿದ್ದವು. \p \v 6 22 ಮೀಟರ್ ಉದ್ದವೂ, 13.5 ಮೀಟರ್ ಅಗಲವೂ ಆದ ಮಂಟಪವನ್ನು ಸ್ತಂಭಗಳಿಂದ ಮಾಡಿಸಿದನು. ಈ ಮಂಟಪವೂ, ಸ್ತಂಭಗಳೂ, ತೊಲೆಗಳೂ, ಮನೆಯ ಸ್ತಂಭಗಳಿಗೂ, ತೊಲೆಗಳಿಗೂ ಎದುರೆದುರಾಗಿದ್ದವು. \p \v 7 ಅಲ್ಲಿ ನ್ಯಾಯತೀರಿಸಲು ನ್ಯಾಯಾಸನದ ಮಂಟಪವನ್ನು ಮಾಡಿ, ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ದೇವದಾರುಗಳನ್ನು ಹೊದಿಸಿದನು. \v 8 ತಾನು ವಾಸವಾಗಿರುವ ತನ್ನ ಅರಮನೆಯಲ್ಲಿ ಮಂಟಪದ ಒಳಭಾಗದಲ್ಲಿ ಈ ಕೆಲಸದ ಹಾಗೆಯೇ ಬೇರೆ ಒಂದು ಅಂಗಳವಿತ್ತು. ಇದಲ್ಲದೆ ಸೊಲೊಮೋನನು ತನ್ನ ಹೆಂಡತಿಯಾದ ಫರೋಹನ ಮಗಳಿಗೂ ಈ ಮಂಟಪದ ಹಾಗೆಯೇ ಇನ್ನೊಂದು ಮನೆಯನ್ನು ಕಟ್ಟಿಸಿದನು. \p \v 9 ಇವೆಲ್ಲಾ ಒಳಗೂ, ಹೊರಗೂ ಅಸ್ತಿವಾರಗಳು ಮೊದಲುಗೊಂಡು, ಕಡೇ ವರಸೆಯವರೆಗೂ ಹೊರಗಿರುವ ದೊಡ್ಡ ಅಂಗಳದ ಮಟ್ಟಿಗೂ, ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲಾದ ಬೆಲೆಯುಳ್ಳ ಕೆತ್ತಿದ ಕಲ್ಲುಗಳಾಗಿದ್ದವು. \v 10 ಅಸ್ತಿವಾರವು 4.5 ಮೀಟರ್ ಕಲ್ಲುಗಳೂ, 3.5 ಮೀಟರ್ ಕಲ್ಲುಗಳೂ ಬೆಲೆಯುಳ್ಳ ಕಲ್ಲುಗಳಾಗಿದ್ದವು. ಅವು ದೊಡ್ಡ ಕಲ್ಲುಗಳಾಗಿಯೂ ಇದ್ದವು. \v 11 ಅದರ ಮೇಲೆ ಕೆತ್ತಿದ ಕಲ್ಲುಗಳ ಅಳತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ, ದೇವದಾರು ತೊಲೆಗಳೂ ಇದ್ದವು. \v 12 ದೊಡ್ಡ ಅಂಗಳವು ಸುತ್ತಲೂ ಮೂರು ತರ ಕೆತ್ತಿದ ಕಲ್ಲುಗಳೂ, ಒಂದು ತರ ದೇವದಾರು ಮರದ ತೊಲೆಗಳೂ ಆಗಿದ್ದವು. ಯೆಹೋವ ದೇವರ ಆಲಯದ ಒಳ ಅಂಗಳಕ್ಕೂ, ಆಲಯದ ಮಂಟಪಕ್ಕೂ ಹಾಗೆಯೇ ಇದ್ದವು. \s1 ದೇವಾಲಯದ ಉಪಕರಣಗಳು \p \v 13 ಅರಸನಾದ ಸೊಲೊಮೋನನು ಹೂರಾಮನನ್ನು ಟೈರಿನಿಂದ ಕರೆಕಳುಹಿಸಿದನು. \v 14 ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು, ಅವನ ತಂದೆ ಟೈರ್ ಪಟ್ಟಣದ ಕಂಚುಗಾರನಾಗಿದ್ದನು. ಹೂರಾಮನು ಜ್ಞಾನದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಎಲ್ಲಾ ತರಹದ ಕಂಚಿನ ಕೆಲಸವನ್ನು ಮಾಡುವ ಅನುಭವಶಾಲಿಯಾಗಿದ್ದನು. ಅವನು ಅರಸನಾದ ಸೊಲೊಮೋನನ ಬಳಿಗೆ ಬಂದು, ಅವನ ಕೆಲಸವನ್ನೆಲ್ಲಾ ಮಾಡಿದನು. \p \v 15 ಅವನು ಎರಡು ಕಂಚಿನ ಸ್ತಂಭಗಳನ್ನು ಮಾಡಿದನು. ಒಂದೊಂದು ಸ್ತಂಭ 8 ಮೀಟರ್ ಉದ್ದ. ಒಂದೊಂದು ಸ್ತಂಭದ ಸುತ್ತಳತೆ 5.3 ಮೀಟರ್ ನೂಲಳತೆ ಇತ್ತು. \v 16 ಆ ಸ್ತಂಭಗಳ ಮೇಲೆ ಇರಿಸಲು ಕಂಚಿನ ಎರಕ ಹೊಯ್ದ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು 2.2 ಮೀಟರ್ ಎತ್ತರವಾಗಿತ್ತು. \v 17 ಸ್ತಂಭಗಳ ಕೊನೆಯಲ್ಲಿ ಇರುವ ಕುಂಭಗಳಿಗೆ ಜಾಲರಿಯ ಹಾಗೆ ಇರುವ ಹಣತೆಗಳೂ, ಸರಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಬಕ್ಕೆ ಏಳು ಇದ್ದವು. \v 18 ಸ್ತಂಭಗಳಿಗೆ ಇನ್ನೂ ಮಾಡಿದ್ದು ಹೇಗೆಂದರೆ, ಕೊನೆಯಲ್ಲಿರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬೆ ಹಣ್ಣುಗಳನ್ನು ಮಾಡಿದನು. \v 19 ಮಂಟಪದ ಮುಂದಿರುವ, ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಪಗಳ ಕೃತಿ 2 ಮೀಟರ್ ಎತ್ತರವಾಗಿದ್ದವು. \v 20 ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೃತಿಯ ಸಮೀಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ, ಇನ್ನೂರು ದಾಳಿಂಬೆಗಳು ಸಾಲುಗಳಾಗಿ ಸುತ್ತಲೂ ಇದ್ದವು. ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. \v 21 ಆ ಸ್ತಂಭಗಳನ್ನು ಮಂದಿರದ ಮಂಟಪದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್\f + \fr 7:21 \fr*\fq ಯಾಕೀನ್ \fq*\ft ಎಂದರೆ \ft*\fqa ಅವನು ಸ್ಥಾಪಿಸುವನು\fqa*\f* ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್\f + \fr 7:21 \fr*\fq ಬೋವಾಜ್ \fq*\ft ಎಂದರೆ \ft*\fqa ಅವನಲ್ಲಿ ಶಕ್ತಿ ಇದೆ\fqa*\f* ಎಂದೂ ಹೆಸರಿಟ್ಟನು. \v 22 ಸ್ತಂಭಗಳ ತಲೆಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೃತಿಯು ಮುಗಿಯಿತು. \p \v 23 ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್. ಅದರ ಎತ್ತರ ಸುಮಾರು ಎರಡು ಮೀಟರ್. ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು. \v 24 ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಅಲಂಕಾರದ ಕಾಯಿಗಳಿದ್ದವು. ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯುವಾಗ ಅಲಂಕಾರದ ಕಾಯಿಗಳು ಎರಡು ಸಾಲಾಗಿ ಎರಕ ಹೊಯ್ದಿದ್ದವು. \p \v 25 ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ, ಮೂರು ಪಶ್ಚಿಮಕ್ಕೂ, ಮೂರು ದಕ್ಷಿಣಕ್ಕೂ, ಮೂರು ಪೂರ್ವಕ್ಕೂ ಮುಖಮಾಡಿಕೊಂಡಿದ್ದವು. ಆ ಕೊಳವು ಅವುಗಳ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಮುಖವಾಗಿದ್ದವು. \v 26 ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ನಾಲ್ವತ್ತು ನಾಲ್ಕು ಸಾವಿರ ಲೀಟರ್\f + \fr 7:26 \fr*\ft ಸುಮಾರು ಎರಡು ಸಾವಿರ ಬತ್\ft*\f* ನೀರನ್ನು ಹಿಡಿಯುತ್ತಿತ್ತು. \p \v 27 ಅವನು ಹತ್ತು ಕಂಚಿನ ಚಲಿಸುವ ಪೀಠಗಳನ್ನು ಮಾಡಿದನು. ಒಂದೊಂದು ಪೀಠವು 1.8 ಮೀಟರ್ ಉದ್ದವೂ, 1.8 ಮೀಟರ್ ಅಗಲವೂ, 1.4 ಮೀಟರ್ ಎತ್ತರವೂ ಆಗಿದ್ದವು. \v 28 ಆ ಪೀಠಗಳ ಮೇಲಿರುವ ಕೆಲಸ ಹೇಗೆಂದರೆ, ಅವುಗಳಿಗೆ ಅಂಚುಗಳಿದ್ದವು. ಅವು ಅಂಚುಗಳ ಹಲಗೆಗಳ ನಡುವೆ ಇದ್ದವು. \v 29 ಹಲಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ, ಎತ್ತುಗಳೂ, ಕೆರೂಬಿಗಳೂ ಇದ್ದವು. ಹಲಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು. ಸಿಂಹಗಳಿಗೂ, ಎತ್ತುಗಳಿಗೂ ಕೆಳಭಾಗದಲ್ಲಿ ತೋರಣಗಳು ಅದರ ಸಂಗಡ ಇದ್ದವು. \v 30 ಒಂದೊಂದು ಪೀಠಕ್ಕೆ ನಾಲ್ಕು ಕಂಚಿನ ಗಾಲಿಗಳೂ, ಕಂಚಿನ ಅಚ್ಚುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಹೂಗಳ ತೋರಣಗಳ ಜೋಡಣೆಗಳಿದ್ದವು. \v 31 ಅಂಚಿಗೆ ಒಳಗಾದ ಅದರ ಬಾಯಿ ಮೇಲೆ ಒಂದು ಮೊಳ ಉದ್ದವಾಗಿತ್ತು. ಚಕ್ರಾಕಾರವಾಗಿದ್ದ ಈ ಬಾಯಿ ಒಂದೂವರೆ ಮೊಳ ಅಗಲವಾಗಿತ್ತು. ಅದರ ಬಾಯಿಯ ಮೇಲೆ ಚಿತ್ರಗಳಿದ್ದವು. ಅದರ ಚಿತ್ರಗಳು ದುಂಡಾಗಿರದೆ ಚೌಕವಾಗಿದ್ದವು. \v 32 ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು. ಗಾಲಿಗಳ ಅಚ್ಚುಗಳು ಪೀಠದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು. ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು. \v 33 ಅವುಗಳ ಇರುಸುಗಳೂ, ಅಣಸುಗಳೂ, ಚಕ್ರಗಳೂ, ಅವುಗಳ ಕಂಬಿಗಳೂ ಎರಕ ಹೊಯ್ದ ಕಂಚಿನಿಂದ ಮಾಡಲಾಗಿತ್ತು. \p \v 34 ಒಂದೊಂದು ಪೀಠದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು. ಪೀಠದಲ್ಲಿಂದಲೇ ಅಖಂಡವಾಗಿದ್ದವು. \v 35 ಪೀಠದ ತಲೆಯಲ್ಲಿ 23 ಸೆಂಟಿಮೀಟರ್ ದುಂಡಾದ ಬಾಯಿ ಇತ್ತು. ಪೀಠದ ತಲೆಯ ಮೇಲೆ ಅದರ ಕೈಪಿಡಿಗಳೂ, ಅದರ ಅಂಚುಗಳೂ ಅಖಂಡವಾಗಿದ್ದವು. \v 36 ಅದರದರ ಪ್ರಮಾಣದ ಪ್ರಕಾರ ಹಲಗೆಗಳ ಕೈಹಿಡಿಗಳ ಮೇಲೆಯೂ ಅಂಚುಗಳ ಮೇಲೆಯೂ ಕೆರೂಬಿ, ಸಿಂಹ ಖರ್ಜೂರ ವೃಕ್ಷಗಳನ್ನು ಚಿತ್ರಿಸಿದನು. ಸುತ್ತಲೂ ಅದರದರ ಪ್ರಮಾಣದ ಪ್ರಕಾರ ಪುಷ್ಪ ತೋರಣಗಳನ್ನು ಚಿತ್ರಿಸಿದನು. \v 37 ಈ ಪ್ರಕಾರ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳಿಗೆಲ್ಲಾ ಒಂದೇ ಎರಕವೂ, ಒಂದೇ ಅಳತೆಯೂ, ಒಂದೇ ಪ್ರಮಾಣವೂ ಇದ್ದವು. \p \v 38 ಹತ್ತು ಕಂಚಿನ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು 800 ಲೀಟರ್\f + \fr 7:38 \fr*\ft ಸುಮಾರು 40 ಬತ್\ft*\f* ನೀರು ಹಿಡಿಯುತ್ತಿತ್ತು. ಒಂದೊಂದು ತೊಟ್ಟಿಯು 2 ಮೀಟರ್ ಇದ್ದವು. ಪ್ರತಿಯೊಂದು ಪೀಠಗಳ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು. \v 39 ಆಲಯದ ದಕ್ಷಿಣ ದಿಕ್ಕಿಗೆ ಐದು ಪೀಠಗಳನ್ನೂ, ಆಲಯದ ಉತ್ತರ ದಿಕ್ಕಿಗೆ ಐದು ಪೀಠಗಳನ್ನೂ ಇಟ್ಟನು. ಆದರೆ ಜಲಾಶಯವನ್ನು ಆಲಯದ ದಕ್ಷಿಣ ದಿಕ್ಕಿಗೆ ಅಂದರೆ ಆಲಯದ ಆಗ್ನೇಯ ಮೂಲೆಯಲ್ಲಿ ಇಟ್ಟನು. \v 40 ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. \p ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು: \b \li1 \v 41 ಅವು ಯಾವುವೆಂದರೆ, ಎರಡು ಸ್ತಂಭಗಳು, \li1 ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, \li1 ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು. \li1 \v 42 ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳು, \li1 \v 43 ಹತ್ತು ಪೀಠಗಳು, ಅವುಗಳ ಮೇಲಿರುವ ಹತ್ತು ತೊಟ್ಟಿಗಳು, \li1 \v 44 ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು, \li1 \v 45 ಪಾತ್ರೆಗಳು, ಸಲಿಕೆಗಳು, ಬೋಗುಣಿಗಳು. \b \p ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನಿಗೆ ಹೂರಾಮನು ಮಾಡಿದ ಈ ಸಲಕರಣೆಗಳೆಲ್ಲಾ ಹೊಳೆಯುವ ಕಂಚಿನವುಗಳಾಗಿದ್ದವು. \v 46 ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ, ಚಾರೆತಾನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು. \v 47 ಸೊಲೊಮೋನನು ಮಾಡಿಸಿದ ಈ ಸಲಕರಣೆಗಳೆಲ್ಲಾ ಬಹು ಹೆಚ್ಚಾಗಿದ್ದರಿಂದ ಅವುಗಳನ್ನು ಎಣಿಸದೆ ಬಿಟ್ಟನು, ಹೀಗಾಗಿ ಕಂಚಿನ ತೂಕವು ಎಷ್ಟೆಂದು ನಿರ್ಧರಿಸಲಾಗಲಿಲ್ಲ. \p \v 48 ಸೊಲೊಮೋನನು ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: \b \li1 ಬಂಗಾರದ ಧೂಪವೇದಿಯನ್ನು \li1 ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಚಿನ್ನದ ಮೇಜೂ, \li1 \v 49 ಮಹಾಪರಿಶುದ್ಧ ಸ್ಥಳದ ಮುಂಭಾಗದ ಬಲಗಡೆಯಲ್ಲಿ ಐದು, ಎಡಗಡೆಯಲ್ಲಿ ಐದು ಶುದ್ಧ ಬಂಗಾರದ ದೀಪಸ್ತಂಭಗಳೂ, \li1 ಅದರ ಬಂಗಾರದ ಹೂವುಗಳೂ, ದೀಪಗಳೂ, ಚಿಮಟಗಳೂ, \li1 \v 50 ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. \li1 ಇದಲ್ಲದೆ ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳಿಗೂ, ಮಂದಿರದ ಮನೆಯ ಬಾಗಿಲುಗಳಿಗೂ ಬಂಗಾರದ ಕೀಲುಗಳನ್ನು ಮಾಡಿಸಿದನು. \b \p \v 51 ಹೀಗೆಯೇ ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು. \c 8 \s1 ದೇವಾಲಯದೊಳಗೆ ಮಂಜೂಷವನ್ನು ತಂದದ್ದು \p \v 1 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಅರಸನಾದ ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು. \v 2 ಯಥನಿಮ\f + \fr 8:2 \fr*\fq ಯಥನಿಮ \fq*\ft ಅರ್ಥ \ft*\fqa ಆಶ್ವೀಜ ಮಾಸ\fqa*\f* ತಿಂಗಳಲ್ಲಿ ಹಬ್ಬವಿದ್ದಾಗ, ಇಸ್ರಾಯೇಲಿನ ಸಮಸ್ತ ಜನರು ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು. \p \v 3 ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡು, \v 4 ದೇವದರ್ಶನದ ಗುಡಾರವನ್ನೂ, ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಲಕರಣೆಗಳನ್ನೂ ತಂದರು. ಇವುಗಳನ್ನು ಯಾಜಕರೂ, ಲೇವಿಯರೂ ಹೊತ್ತುಕೊಂಡು ಬಂದರು. \v 5 ಆಗ ಅರಸನಾದ ಸೊಲೊಮೋನನೂ, ಅವನ ಬಳಿಯಲ್ಲಿ ಕೂಡಿದ ಇಸ್ರಾಯೇಲ್ ಜನರೆಲ್ಲರೂ ಮಂಜೂಷದ ಮುಂದೆ ನಿಂತು ಎಣಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು. \p \v 6 ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು. \v 7 ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು. \v 8 ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ. \v 9 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ. \p \v 10 ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ, ಮೇಘವು ಯೆಹೋವ ದೇವರ ಮಂದಿರವನ್ನು ತುಂಬಿತ್ತು. \v 11 ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು. \p \v 12 ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ. \v 13 ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದು ಹೇಳಿದನು. \p \v 14 ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು. \v 15 ನಂತರ ರಾಜನು ಹೀಗೆ ಹೇಳಿದನು: \pm “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ, ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು. ಅವರು ಹೇಳಿದ್ದೇನೆಂದರೆ, \v 16 ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ, ಆಲಯವನ್ನು ಕಟ್ಟುವುದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆಯ್ದುಕೊಳ್ಳದೆ, ನನ್ನ ಜನರಾದ ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನು ಆಯ್ದುಕೊಂಡೆನು,’ ಎಂಬುದು. \pm \v 17 “ನನ್ನ ತಂದೆ ದಾವೀದನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ, \v 18 ಯೆಹೋವ ದೇವರು ಆತನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೇ ಸರಿ. \v 19 ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು. \pm \v 20 “ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಯೆಹೋವ ದೇವರು ಮಾತುಕೊಟ್ಟ ಪ್ರಕಾರ, ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ. \v 21 ಇದಲ್ಲದೆ ಯೆಹೋವ ದೇವರು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ, ಅವರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು,” ಎಂದನು. \s1 ಸೊಲೊಮೋನನ ಪ್ರತಿಷ್ಠಾಪನೆಯ ಪ್ರಾರ್ಥನೆ \p \v 22 ಆಗ ಸೊಲೊಮೋನನು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಯೆಹೋವ ದೇವರ ಬಲಿಪೀಠದ ಮುಂದೆ ನಿಂತು, ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ, \v 23 ಹೀಗೆ ಪ್ರಾರ್ಥಿಸಿದನು: \pm “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ, \v 24 ನಿಮ್ಮ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿ, ನೀವು ನಿಮ್ಮ ಬಾಯಿಂದ ಹೇಳಿದ್ದನ್ನು ಇಂದು ಈಡೇರಿಸಿದ್ದೀರಿ. \pm \v 25 “ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿನ್ನ ಸಂತಾನದವರು ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ಮಾರ್ಗದಲ್ಲೇ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ. \v 26 ಈಗ ಇಸ್ರಾಯೇಲಿನ ದೇವರೇ, ನೀವು ನನ್ನ ತಂದೆಯೂ ನಿಮ್ಮ ಸೇವಕನೂ ಆದ ದಾವೀದನಿಗೆ ಹೇಳಿದ ವಾಕ್ಯವು ನೆರವೇರಲಿ. \pm \v 27 “ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ವಾಸವಾಗಿರುವರೋ? ಇಗೋ, ಆಕಾಶವೂ ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ? \v 28 ಆದರೂ ನನ್ನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನ ಪ್ರಾರ್ಥನೆಗೂ, ಅವನ ವಿಜ್ಞಾಪನೆಗೂ ತಿರುಗಿಕೊಂಡು, ಇಂದು ನಿಮ್ಮ ಸೇವಕನು ನಿಮ್ಮ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನು ಕೇಳಿರಿ. \v 29 ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ. \v 30 ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ. \pm \v 31 “ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ, \v 32 ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿ, ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ. \pm \v 33 “ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ, \v 34 ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ. \pm \v 35 “ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ, \v 36 ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ. \pm \v 37 “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ, \v 38 ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತನ್ನ ಹೃದಯದ ವೇದನೆಯಿಂದ, ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ, \v 39 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ. \v 40 ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು. \pm \v 41 “ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ನಾಮದ ನಿಮಿತ್ತ ದೂರದೇಶದಿಂದ ಬಂದ ಪರದೇಶಿಯ ವಿಷಯದಲ್ಲಿ ಬೇಡಿಕೊಳ್ಳುತ್ತೇನೆ. \v 42 ಜನರು ನಿಮ್ಮ ಮಹಾನಾಮವನ್ನೂ, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ, \v 43 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು. \pm \v 44 “ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ಯೆಹೋವ ದೇವರಾದ ನಿಮಗೆ ಪ್ರಾರ್ಥನೆ ಮಾಡಿದಾಗ, \v 45 ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ. \pm \v 46 “ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ, \v 47 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ, \v 48 ಅವರನ್ನು ಸೆರೆಹಿಡಿದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಅವರು ನಿಮಗೆ ಪ್ರಾರ್ಥನೆಮಾಡಿದರೆ, \v 49 ಆಗ ನೀವು ವಾಸಮಾಡುವ ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿರಿ. \v 50 ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ. \v 51 ಏಕೆಂದರೆ ಅವರು ಈಜಿಪ್ಟಿನಿಂದಲೂ, ಕಬ್ಬಿಣದ ಒಲೆಯ ಮಧ್ಯದಿಂದಲೂ, ನೀವು ಬರಮಾಡಿದ ನಿಮ್ಮ ಜನರಾಗಿಯೂ, ನಿಮ್ಮ ಬಾಧ್ಯತೆಯೂ ಆಗಿದ್ದಾರೆ. ಹೀಗೆ ಅವರು ನಿಮಗೆ ಮೊರೆಯಿಡುವ ಎಲ್ಲಾದರಲ್ಲಿ ನೀವು ಅವರ ವ್ಯಾಜ್ಯವನ್ನು ಆಲಿಸಿರಿ. \pm \v 52 “ನಿಮ್ಮ ಸೇವಕನ ವಿಜ್ಞಾಪನೆಗೂ, ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಗೂ ನಿಮ್ಮ ಕಣ್ಣುಗಳು ತೆರೆದಿರಲಿ. ಅವರು ನಿಮ್ಮನ್ನು ಬೇಡಿಕೊಳ್ಳುವಾಗಲೆಲ್ಲಾ ಅವರ ವಿಜ್ಞಾಪನೆಗಳಿಗೆ ಕಿವಿಗೊಡಿರಿ. \v 53 ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು. \p \v 54 ಸೊಲೊಮೋನನು ಈ ಸಮಸ್ತ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಯೆಹೋವ ದೇವರಿಗೆ ಮಾಡಿ ತೀರಿಸಿದ ತರುವಾಯ, ಅವನು ಯೆಹೋವ ದೇವರ ಬಲಿಪೀಠದ ಮುಂದೆ ಮೊಣಕಾಲೂರಿ, ತನ್ನ ಕೈಗಳನ್ನು ಆಕಾಶಕ್ಕೆ ಚಾಚಿದವನಾಗಿ ಎದ್ದು ನಿಂತನು. \v 55 ಅವನು ನಿಂತುಕೊಂಡು ಮಹಾಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಮೂಹವನ್ನು ಆಶೀರ್ವದಿಸಿದನು. \pm \v 56 “ತಮ್ಮ ಜನರಾದ ಇಸ್ರಾಯೇಲರಿಗೆ ತಾವು ಮಾತುಕೊಟ್ಟ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ವಾಗ್ದಾನಗಳಲ್ಲಿ ಒಂದು ವಾಗ್ದಾನವಾದರೂ ಬಿದ್ದು ಹೋಗಲಿಲ್ಲ. \v 57 ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಕೈಬಿಡದೆ, ನಮ್ಮನ್ನು ತ್ಯಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದರೋ ಹಾಗೆಯೇ ನಮ್ಮ ಸಂಗಡ ಇರಲಿ. \v 58 ನಮ್ಮ ಪಿತೃಗಳಿಗೆ ಕೊಟ್ಟ ಆಜ್ಞೆಗಳನ್ನು, ಅಪ್ಪಣೆಗಳನ್ನು, ನಿಯಮಗಳನ್ನು ಕೈಗೊಂಡು ಅವರ ಎಲ್ಲಾ ಮಾರ್ಗಗಳಲ್ಲಿ ನಡೆಯಲು ಅವರು ನಮ್ಮ ಹೃದಯಗಳನ್ನು ಅವರ ಕಡೆಗೆ ತಿರುಗಿಸಲಿ. \v 59-60 ಇದಲ್ಲದೆ ಯೆಹೋವ ದೇವರು ತಾವೇ ದೇವರಾಗಿದ್ದಾರೆ. ಅವರ ಹೊರತು ಬೇರೊಬ್ಬರಿಲ್ಲವೆಂದು ಭೂಲೋಕದ ಜನರೆಲ್ಲರೂ ತಿಳಿಯುವ ಹಾಗೆ, ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತಮ್ಮ ಸೇವಕನ ನ್ಯಾಯವನ್ನೂ, ತಮ್ಮ ಜನರಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ, ನಾನು ಯೆಹೋವ ದೇವರ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು, ರಾತ್ರಿ ಹಗಲು ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಇರಲಿ. \v 61 ಇಂದಿನ ಹಾಗೆಯೇ ಅವರ ಕಟ್ಟಳೆಗಳಲ್ಲಿ ನಡೆಯಲೂ, ಅವರ ಆಜ್ಞೆಗಳನ್ನು ಕೈಗೊಳ್ಳಲೂ, ನಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಹೃದಯಗಳು ಪೂರ್ಣವಾಗಿ ಒಪ್ಪಿಸಿಕೊಟ್ಟದ್ದಾಗಿರಲಿ,” ಎಂದನು. \s1 ದೇವಾಲಯದ ಪ್ರತಿಷ್ಠಾಪನೆ \p \v 62 ಆಗ ಅರಸನೂ, ಅವನ ಸಂಗಡ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು. \v 63 ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು. \p \v 64 ಆ ದಿನ ಅರಸನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆ ಮಾಡಿದನು. ಯೆಹೋವ ದೇವರ ಮುಂದಿರುವ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು. \p \v 65 ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು. \v 66 ಎಂಟನೆಯ ದಿನದಲ್ಲಿ\f + \fr 8:66 \fr*\ft ಅಥವಾ \ft*\fqa ಮರುದಿನ\fqa*\f* ಅವನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಅರಸನನ್ನು ಆಶೀರ್ವದಿಸಿ ಯೆಹೋವ ದೇವರು ತಮ್ಮ ಸೇವಕನಾದ ದಾವೀದನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಅವರವರ ಡೇರೆಗಳಿಗೆ ಹೋದರು. \c 9 \s1 ಯೆಹೋವ ದೇವರು ಸೊಲೊಮೋನನಿಗೆ ದರ್ಶನಕೊಟ್ಟದ್ದು \p \v 1 ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ತಾನು ಬಯಸಿದ್ದೆಲ್ಲವನ್ನೂ ಸಾಧಿಸಿದನು. \v 2 ಅನಂತರ ಯೆಹೋವ ದೇವರು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷರಾದಂತೆ, ಅವನಿಗೆ ಎರಡನೆಯ ಸಾರಿ ಪ್ರತ್ಯಕ್ಷರಾದರು. \v 3 ಯೆಹೋವ ದೇವರು ಅವನಿಗೆ, \pm “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು. \pm \v 4 “ನೀನು ನಿನ್ನ ತಂದೆಯಾದ ದಾವೀದನಂತೆ ಸಂಪೂರ್ಣ ಹೃದಯದಿಂದಲೂ, ಯಥಾರ್ಥತೆಯಿಂದಲೂ ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ, \v 5 ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲವೆಂದು ನಾನು ನಿನ್ನ ತಂದೆ ದಾವೀದನಿಗೆ ಮಾತುಕೊಟ್ಟ ಪ್ರಕಾರ, ‘ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.’ \pm \v 6 “ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ ಕೈಗೊಂಡು ನಡೆಯದೆ ನನ್ನಿಂದ ದೂರಹೋಗಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, \v 7 ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು. \v 8 ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು. \v 9 ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಯೆಹೋವ ದೇವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು. \s1 ಸೊಲೊಮೋನನ ಇತರ ಚಟುವಟಿಕೆಗಳು \p \v 10 ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಆ ಎರಡು ಮನೆಗಳನ್ನು ಅಂದರೆ, ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ \v 11 ಸೊಲೊಮೋನನ ಇಷ್ಟದ ಪ್ರಕಾರ ಟೈರಿನ ಅರಸನಾದ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಚಿನ್ನವನ್ನೂ ಕೊಟ್ಟಿದ್ದರಿಂದ ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ ಗಲಿಲಾಯ ದೇಶದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು. \v 12 ಆಗ ಹೀರಾಮನು ಟೈರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. \v 13 ಆದ್ದರಿಂದ ಅವನು, “ನನ್ನ ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೆ?” ಎಂದು ಹೇಳಿ, ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವಕ್ಕೆ ಅದೇ ಹೆಸರು. \v 14 ಹೀರಾಮನು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ಚಿನ್ನವನ್ನು ಕಳುಹಿಸಿದನು. \p \v 15 ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ. \v 16 ಈಜಿಪ್ಟಿನ ಅರಸನಾದ ಫರೋಹನು ಹೊರಟುಹೋಗಿ, ಗೆಜೆರನ್ನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು, ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಅದನ್ನು ಬಹುಮಾನವಾಗಿ ಕೊಟ್ಟನು. \v 17 ಹೀಗೆಯೇ ಸೊಲೊಮೋನನು ಗೆಜೆರನ್ನೂ, ಕೆಳಗಿನ ಬೇತ್ ಹೋರೋನನ್ನೂ, \v 18 ಬಾಲಾತನ್ನೂ, ಮರುಭೂಮಿಯಲ್ಲಿರುವ ತದ್ಮೋರ್\f + \fr 9:18 \fr*\fq ತದ್ಮೋರ್ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ತಾಮಾರ್\fqa*\f* ಎಂಬ ಸ್ಥಳವನ್ನೂ ಕಟ್ಟಿಸಿದನು. \v 19 ಇದಲ್ಲದೆ ಸೊಲೊಮೋನನು ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು. \p \v 20 ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ \v 21 ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು. \v 22 ಆದರೆ ಸೊಲೊಮೋನನು ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಅವರು ಯುದ್ಧಭಟರಾಗಿಯೂ, ಅವನ ಅಧಿಪತಿಯಾಗಿಯೂ, ತನ್ನ ಕೈಕೆಳಗಿರುವ ಅವನ ಪ್ರಧಾನರಾಗಿಯೂ, ಅಧಿಕಾರಿಗಳಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇದ್ದರು. \v 23 ಇದರೊಳಗೆ ಐದು ನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು. \p \v 24 ಆದರೆ ಫರೋಹನ ಮಗಳು ದಾವೀದನ ಪಟ್ಟಣದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು. \p \v 25 ವರುಷಕ್ಕೆ ಮೂರು ಸಾರಿ ಸೊಲೊಮೋನನು ಯೆಹೋವ ದೇವರಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ಯೆಹೋವ ದೇವರ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಡುತ್ತಿದ್ದನು. ಹೀಗೆ ಆಲಯದ ಅರ್ಪಣೆಗಳನ್ನು ಪೂರೈಸಿದನು. \p \v 26 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪು ಸಮುದ್ರತೀರದ ಏಲೋತ್ ಎಂಬ ಊರ ಬಳಿಯಲ್ಲಿರುವ ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು. \v 27 ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರ ಸಂಗಡ ಆ ಹಡಗುಗಳಲ್ಲಿ ಕಳುಹಿಸಿದನು. \v 28 ಅವರು ಓಫೀರಿಗೆ ಹೋಗಿ, ಅಲ್ಲಿಂದ ಹದಿನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಅರಸನಾದ ಸೊಲೊಮೋನನಿಗೆ ತೆಗೆದುಕೊಂಡು ಬಂದರು. \c 10 \s1 ಶೆಬದ ರಾಣಿ ಸೊಲೊಮೋನನನ್ನು ಸಂದರ್ಶಿಸಿದ್ದು \p \v 1 ಶೆಬದ ರಾಣಿಯು ಯೆಹೋವ ದೇವರ ನಾಮದ ಮಹತ್ತಿನಿಂದ ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು. \v 2 ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು. \v 3 ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವುಗಳಲ್ಲಿ ಅರಸನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು. \v 4 ಶೆಬದ ರಾಣಿಯು ಸೊಲೊಮೋನನ ಸಮಸ್ತ ಜ್ಞಾನವನ್ನೂ, ಅವನು ಕಟ್ಟಿಸಿದ ಅರಮನೆಯನ್ನೂ, \v 5 ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು. \p \v 6 ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ. \v 7 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಿನ್ನ ಜ್ಞಾನವೂ, ನಿನ್ನ ಸಂಪತ್ತೂ ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ. \v 8 ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು. \v 9 ಇಸ್ರಾಯೇಲಿನ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಯೆಹೋವ ದೇವರು ಯುಗಯುಗಕ್ಕೂ ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು. \p \v 10 ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧದ್ರವ್ಯಗಳ ಹಾಗೆ ಬೇರೆ ಯಾರೂ ಕೊಟ್ಟಿರಲಿಲ್ಲ. \p \v 11 ಹೀರಾಮನ ಹಡಗುಗಳು ಓಫೀರನಿಂದ ಬಂಗಾರ ಮಾತ್ರವಲ್ಲದೆ ಅನೇಕ ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದವು. \v 12 ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ ಅರಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ, ವೀಣೆಗಳನ್ನೂ ಮಾಡಿಸಿದನು. ಅಂದಿನಿಂದ ಈ ದಿನದವರೆಗೂ ಅಂಥಾ ಸುಗಂಧದ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ. \p \v 13 ಅರಸನಾದ ಸೊಲೊಮೋನನು ಶೆಬದ ರಾಣಿಗೆ ಔದಾರ್ಯವಾಗಿ ಕೊಟ್ಟ ಕಾಣಿಕೆಗಳ ಹೊರತಾಗಿ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು. \s1 ಸೊಲೊಮೋನನ ವೈಭವ \p \v 14 ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು. \v 15 ಇದಲ್ಲದೆ ಸೊಲೊಮೋನನಿಗೆ ವರ್ತಕರಿಂದಲೂ, ವರ್ತಕರ ವ್ಯಾಪಾರದಿಂದಲೂ, ಅರೇಬಿಯದ ಅರಸರಿಂದಲೂ, ದೇಶದ ಅಧಿಪತಿಗಳಿಂದಲೂ ಸಹ ಬಂಗಾರವು ದೊರಕುತ್ತಿತ್ತು. \p \v 16 ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿ ಸುಮಾರು ಏಳು ಕಿಲೋಗ್ರಾಂ ತೂಕದ ಬಂಗಾರವಿತ್ತು. \v 17 ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ\f + \fr 10:17 \fr*\ft ಸುಮಾರು ಮೂರು ಮಿನಾ\ft*\f* ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು. \p \v 18 ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು. \v 19 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು. \v 20 ಹನ್ನೆರಡು ಸಿಂಹಗಳು, ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ. \v 21 ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ. \v 22 ಹೀರಾಮನ ಹಡಗುಗಳ ಜೊತೆಯಲ್ಲಿ ಅರಸನ ಹಡಗುಗಳು ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು. \p \v 23 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು. \v 24 ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತರೂ ಅವನ ದರ್ಶನವನ್ನು ಬಯಸಿದರು. \v 25 ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ, ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು. \p \v 26 ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು. \v 27 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು. \v 28 ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು. \v 29 ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು. \c 11 \s1 ಸೊಲೊಮೋನನ ಹೆಂಡತಿಯರು \p \v 1 ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರ, ಅಮ್ಮೋನ್ಯರ, ಎದೋಮ್ಯರ, ಸೀದೋನ್ಯರ, ಹಿತ್ತಿಯರ ಸ್ತ್ರೀಯರನ್ನೂ ಪ್ರೀತಿಮಾಡಿದನು. \v 2 ಈ ಜನಾಂಗಗಳನ್ನು ಕುರಿತು ಯೆಹೋವ ದೇವರು ಇಸ್ರಾಯೇಲರಿಗೆ, “ನೀವು ಅವರ ಬಳಿಗೆ ಪ್ರವೇಶಿಸಬಾರದು. ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು,” ಎಂದು ಹೇಳಿದ್ದರು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು. \v 3 ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು. \v 4 ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ. \v 5 ಸೊಲೊಮೋನನು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ\f + \fr 11:5 \fr*\fq ಮಿಲ್ಕೋಮ \fq*\ft ಇನ್ನೊಂದು ಹೆಸರು \ft*\fqa ಮೋಲೆಕ್\fqa*\f* ಹಿಂಬಾಲಿಸಿದನು. \v 6 ಸೊಲೊಮೋನನು ತನ್ನ ತಂದೆ ದಾವೀದನ ಹಾಗೆ ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸದೆ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. \p \v 7 ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷಿಗೋಸ್ಕರವೂ, ಅಮ್ಮೋನ್ಯರ ಅಸಹ್ಯಕರವಾದ ಮೋಲೆಕನಿಗೋಸ್ಕರವೂ ಯೆರೂಸಲೇಮಿನ ಪೂರ್ವದಲ್ಲಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು. \v 8 ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು, ಬಲಿಗಳನ್ನು ಅರ್ಪಿಸುವ ತನ್ನ ಅನ್ಯಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು. \p \v 9 ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷರಾಗಿದ್ದರೂ, ಅವನ ಹೃದಯವು ದೇವರಿಂದ ತಿರುಗಿ ಹೋದುದರಿಂದ, ಅವನ ಮೇಲೆ ಕೋಪಿಸಿಕೊಂಡಿದ್ದರು. \v 10 ಅನ್ಯದೇವರುಗಳ ಹಿಂದೆ ಹೋಗಬಾರದೆಂದು ಅವರು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದರೂ, ಅವನು, ಯೆಹೋವ ದೇವರು ಆಜ್ಞಾಪಿಸಿದ್ದನ್ನು ಕೈಗೊಳ್ಳದೆ ಹೋದನು. \v 11 ಆದಕಾರಣ ಯೆಹೋವ ದೇವರು ಸೊಲೊಮೋನನಿಗೆ, “ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳದೆ ಹೋದುದರಿಂದ ನಿಶ್ಚಯವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಿದುಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು. \v 12 ಆದರೆ ನಿನ್ನ ತಂದೆ ದಾವೀದನಿಗೋಸ್ಕರ ನಿನ್ನ ಕಾಲದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಿದುಕೊಳ್ಳುವೆನು. \v 13 ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು. \s1 ಸೊಲೊಮೋನನ ವಿರೋಧಿಗಳು \p \v 14 ಆಗ ಯೆಹೋವ ದೇವರು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಎದುರಾಳಿಯಾಗಿ ಎಬ್ಬಿಸಿದರು. \v 15 ದಾವೀದನು ಎದೋಮಿನಲ್ಲಿರುವಾಗ ಸೇನಾಧಿಪತಿಯಾದ ಯೋವಾಬನು ಎದೋಮಿನ ಗಂಡಸರೆಲ್ಲರನ್ನು ಕೊಂದುಹಾಕಿದನು. ತರುವಾಯ ಇಸ್ರಾಯೇಲರಲ್ಲಿ ಹತರಾದವರನ್ನು ಸಮಾಧಿಮಾಡಲು ಹೋದನು. \v 16 ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು. \v 17 ಆದರೆ ಆ ಸಮಯದಲ್ಲಿ ಇನ್ನೂ ಬಾಲಕನಾದ ಹದಾದನು ತನ್ನ ತಂದೆಯ ಕೆಲವು ಸೇವಕರಾದ ಎದೋಮ್ಯರ ಸಂಗಡ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು. \v 18 ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು. \p \v 19 ಇದಲ್ಲದೆ ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಪ್ನೆಸ್ ಎಂಬವಳ ಸಹೋದರಿಯನ್ನು ಅವನಿಗೆ ಮದುವೆ ಮಾಡಿಕೊಟ್ಟನು. \v 20 ತಪ್ನೆಸ್ ಸಹೋದರಿಯು ಅವನಿಗೆ ಗೆನುಬತ್ ಎಂಬ ಮಗನನ್ನು ಹೆತ್ತಳು. ತಪ್ನೆಸ್ ಇವನನ್ನು ಫರೋಹನ ಮನೆಯಲ್ಲಿ ಬೆಳೆಸಿದಳು. ಗೆನುಬತನು ಫರೋಹನ ಮನೆಯಲ್ಲಿ ಫರೋಹನ ಮಕ್ಕಳ ಸಂಗಡ ಇದ್ದನು. \p \v 21 ಆದರೆ ದಾವೀದನು ಮರಣ ಹೊಂದಿದನೆಂದೂ, ಸೇನಾಧಿಪತಿಯಾದ ಯೋವಾಬನು ಸತ್ತು ಹೋದನೆಂದೂ, ಹದದನು ಈಜಿಪ್ಟಿನಲ್ಲಿ ಕೇಳಿದಾಗ, ಹದದನು ಫರೋಹನಿಗೆ, “ನಾನು ನನ್ನ ದೇಶಕ್ಕೆ ಹೋಗುವಹಾಗೆ ನನ್ನನ್ನು ಕಳುಹಿಸು,” ಎಂದನು. \p \v 22 ಫರೋಹನು ಅವನಿಗೆ, “ನೀನು ನಿನ್ನ ದೇಶಕ್ಕೆ ಹೋಗಬೇಕೆನ್ನುವ ಹಾಗೆ ನಿನಗೆ ನನ್ನ ಸಂಗಡ ಇರುವಾಗ ಏನು ಕೊರತೆಯಾಯಿತು?” ಎಂದು ಕೇಳಿದನು. \p ಅವನು, “ಏನೂ ಇಲ್ಲ, ಆದರೆ ನಾನು ಅಲ್ಲಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು. \p \v 23 ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಸೊಲೊಮೋನನ ಮೇಲೆ ಎಬ್ಬಿಸಿದರು. ಅವನು ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೆಜೆರನನ್ನು ಬಿಟ್ಟು ಓಡಿ ಹೋದ ಎಲ್ಯಾದಾವನ ಮಗನಾದ ರೆಜೋನನು. \v 24 ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಜನರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾಗಿ ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ, ಅರಸನಾದನು. \v 25 ಹದದನು ಮಾಡಿದ ಕೇಡಿಗೆ ಹೊರತಾಗಿ ಇವನು ಸೊಲೊಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲಿಗೆ ಶತ್ರುವಾಗಿದ್ದನು. ಅವನು ಇಸ್ರಾಯೇಲನ್ನು ಹಗೆಮಾಡಿ, ಅರಾಮ್ ದೇಶವನ್ನು ಆಳುತ್ತಾ ಇದ್ದನು. \s1 ಯಾರೊಬ್ಬಾಮನು ದಾವೀದನಿಗೆ ವಿರೋಧವಾಗಿ ಎದ್ದಿದ್ದು \p \v 26 ಇದಲ್ಲದೆ, ಅರಸನಾದ ಸೊಲೊಮೋನನಿಗೆ ವಿರೋಧವಾಗಿ ದಂಗೆ ಎದ್ದವರಲ್ಲಿ ಅವನ ಸೇವಕನೂ ಚರೇದ ಪಟ್ಟಣದ ಎಫ್ರಾಯೀಮ್ಯನಾದ ನೆಬಾಟನ ಮಗ ಯಾರೊಬ್ಬಾಮನು ಇದ್ದನು, ಚೆರೂಯಳೆಂಬ ವಿಧವೆಯು ಅವನ ತಾಯಿಯು. \p \v 27 ಅವನು ಅರಸನಿಗೆ ವಿರೋಧವಾಗಿ ದಂಗೆಯೆದ್ದ ಕಾರಣವೇನೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ, ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿಸುತ್ತಿರುವಾಗ, \v 28 ಯಾರೊಬ್ಬಾಮನು ಪರಾಕ್ರಮಶಾಲಿಯಾಗಿರುವುದರಿಂದ ಸೊಲೊಮೋನನು ಈ ಪ್ರಾಯಸ್ಥನು ಕೆಲಸಮಾಡತಕ್ಕವನೆಂದು ಕಂಡು, ಯೋಸೇಫನ ಗೋತ್ರದ ಸಮಸ್ತ ಆಳುಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು. \p \v 29 ಆ ಕಾಲದಲ್ಲಿ, ಯಾರೊಬ್ಬಾಮನು ಯೆರೂಸಲೇಮಿನೊಳಗಿಂದ ಹೊರಟು ಹೋಗುವಾಗ, ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿಯಲ್ಲಿ ಕಂಡನು. ಅವನು ಹೊಸ ಕಂಬಳಿಯನ್ನು ಹೊದ್ದುಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾಗಿದ್ದರು. \v 30 ಆಗ ಅಹೀಯನು ತನ್ನ ಮೇಲೆ ಇರುವ ಹೊಸ ಕಂಬಳಿಯನ್ನು ತೆಗೆದುಕೊಂಡು ಅದನ್ನು ಹನ್ನೆರಡು ತುಂಡುಗಳಾಗಿ ಹರಿದು, \v 31 ಯಾರೊಬ್ಬಾಮನಿಗೆ ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇಸ್ರಾಯೇಲಿನ ದೇವರಾದ ಯೆಹೋವ ದೇವರು, “ಇಗೋ, ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನು ಹರಿದು ತೆಗೆದುಕೊಂಡು, ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು. \v 32 ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು. \v 33 ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ. \p \v 34 “ ‘ಆದರೂ ನನ್ನ ಆಜ್ಞೆಗಳನ್ನೂ, ನನ್ನ ತೀರ್ಪುಗಳನ್ನೂ ಕೈಗೊಂಡದ್ದರಿಂದ, ನಾನು ಆಯ್ದು ತೆಗೆದುಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದುಕೊಳ್ಳದೆ, ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು. \v 35 ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತೆಗೆದುಕೊಂಡು, ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು. \v 36 ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು. \v 37 ಇದಲ್ಲದೆ ನಾನು ನಿನ್ನನ್ನು ತೆಗೆದುಕೊಂಡು, ನಿನ್ನ ಪ್ರಾಣವು ಇಚ್ಛಿಸುವುದೆಲ್ಲಾದರಲ್ಲಿ ಅರಸುತನವನ್ನು ನಡೆಸಿ, ಇಸ್ರಾಯೇಲಿನ ಮೇಲೆ ಅರಸನಾಗಿರುವಿ. \v 38 ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು. \v 39 ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು, ಆದರೆ ನಿರಂತರವಾಗಿ ಅಲ್ಲ,’ ” ಎಂದು ಅಹೀಯನು ಹೇಳಿದನು. \p \v 40 ಇದರ ನಿಮಿತ್ತ ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಹುಡುಕಿದನು. ಆದ್ದರಿಂದ ಯಾರೊಬ್ಬಾಮನು ಎದ್ದು, ಈಜಿಪ್ಟಿನ ಅರಸನಾದ ಶೀಶಕನ ಬಳಿಗೆ ಈಜಿಪ್ಟಿಗೆ ಓಡಿಹೋಗಿ, ಸೊಲೊಮೋನನು ಸಾಯುವವರೆಗೂ ಅಲ್ಲಿ ಇದ್ದನು. \s1 ಸೊಲೊಮೋನನ ಮರಣ \p \v 41 ಸೊಲೊಮೋನನ ಉಳಿದ ಕ್ರಿಯೆಗಳನ್ನು, ಅವನು ಮಾಡಿದ ಸಾಧನೆಗಳನ್ನು ಮತ್ತು ಅವನ ಜ್ಞಾನವನ್ನು ಕುರಿತು ಸೊಲೊಮೋನನ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತದೆ. \v 42 ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು. \v 43 ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು. \c 12 \s1 ರೆಹಬ್ಬಾಮನಿಗೆ ವಿರೋಧವಾಗಿ ಇಸ್ರಾಯೇಲಿನ ದಂಗೆ \p \v 1 ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು. \v 2 ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು. \v 3 ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, \v 4 “ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು. \p \v 5 ಅವನು ಅವರಿಗೆ, “ನೀವು ಹೋಗಿ ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು. \p \v 6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆ ಸೊಲೊಮೋನನು ಬದುಕಿರುವಾಗ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು. \p \v 7 ಅವರು ಅವನಿಗೆ, “ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು. \p \v 8 ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ, \v 9 ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು. \p \v 10 ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು. ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು. \v 11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು. \p \v 12 ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ,” ಎಂದು ಅರಸನು ಹೇಳಿದ ಪ್ರಕಾರ, ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು. \v 13 ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ, \v 14 ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು. \v 15 ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು. \p \v 16 ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, \q1 “ದಾವೀದನಲ್ಲಿ ನಮಗೆ ಭಾಗವೇನು? \q2 ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? \q1 ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. \q2 ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” \m ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು. \v 17 ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು. \p \v 18 ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರೆಲ್ಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು. \v 19 ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ. \p \v 20 ಇಸ್ರಾಯೇಲರು ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ, ಅವರು ಸಭೆಗೆ ಅವನನ್ನು ಕರೆಕಳುಹಿಸಿ, ಸಮಸ್ತ ಇಸ್ರಾಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ. \p \v 21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಬೆನ್ಯಾಮೀನನ ಗೋತ್ರದ ಮತ್ತು ಯೆಹೂದನ ಸಮಸ್ತ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು. \p \v 22 ಆದರೆ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ, \v 23 “ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನನ ಸಮಸ್ತ ಮನೆಯವರಿಗೂ ಮತ್ತು ಮಿಕ್ಕಿದ ಜನರಿಗೂ ಹೇಳಬೇಕಾದದ್ದೇನೆಂದರೆ, \v 24 ‘ನೀವು ಇಸ್ರಾಯೇಲರಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ.’ ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯೆಹೋವ ದೇವರ ವಾಕ್ಯದ ಪ್ರಕಾರವೇ ಹಿಂದಿರುಗಿ ಹೋದರು. \s1 ಬೇತೇಲ್ ಹಾಗೂ ದಾನ್ ಕಡೆಯಲ್ಲಿ ಬಂಗಾರದ ಕರುಗಳು \p \v 25 ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು. \p \v 26 ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ, \v 27 ಈ ಜನರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ, ಆಗ ಇವರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಮತ್ತೆ ತಿರುಗುವುದು. ಅವರು ನನ್ನನ್ನು ಕೊಂದುಹಾಕಿ, ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ತಿರುಗಿ ಹೋದಾರು,” ಎಂದುಕೊಂಡನು. \p \v 28 ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು. \v 29 ಒಂದನ್ನು ಬೇತೇಲಿನಲ್ಲಿಯೂ, ಒಂದನ್ನು ದಾನಿನಲ್ಲಿಯೂ ಸ್ಥಾಪಿಸಿದನು. \v 30 ಇದು ಪಾಪಕ್ಕೆ ಕಾರಣವಾಯಿತು. ದಾನಿನಲ್ಲಿರುವುದನ್ನು ಪೂಜಿಸಲು ಜನರು ಅಲ್ಲಿಯವರೆಗೆ ಹೋಗುತ್ತಿದ್ದರು. \p \v 31 ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು. \v 32 ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು. \v 33 ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು. \c 13 \s1 ಯೆಹೂದ ದೇಶದಿಂದ ದೇವರ ಮನುಷ್ಯನು \p \v 1 ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು. \v 2 ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು. \v 3 ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ, “ಯೆಹೋವ ದೇವರು ಇದಕ್ಕೆ ಹೇಳಿದ ಗುರುತೇನೆಂದರೆ, ಇಗೋ, ಬಲಿಪೀಠವು ಸೀಳಿಹೋಗಿ, ಅದರ ಮೇಲೆ ಇರುವ ಬೂದಿಯು ಬಿದ್ದುಹೋಗುವುದು,” ಎಂದನು. \p \v 4 ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಹೇಳಿದ ಮಾತನ್ನು ಕೇಳಿದಾಗ, ಅವನು ಪೀಠದ ಬಳಿಯಿಂದ ತನ್ನ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳೆದುಕೊಳ್ಳದ ಹಾಗೆ ಒಣಗಿ ಹೋಯಿತು. \v 5 ಇದಲ್ಲದೆ ಯೆಹೋವ ದೇವರ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿಪೀಠವು ಸೀಳಿಹೋಗಿ, ಬೂದಿಯು ಬಲಿಪೀಠದಿಂದ ಬಿದ್ದುಹೋಯಿತು. \p \v 6 ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು. \p \v 7 ಅರಸನು ದೇವರ ಮನುಷ್ಯನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡಿ ವಿಶ್ರಮಿಸಿಕೋ, ನಾನು ನಿನಗೆ ಬಹುಮಾನ ಕೊಡುವೆನು,” ಎಂದನು. \p \v 8 ಆದರೆ ದೇವರ ಮನುಷ್ಯನು ಅರಸನಿಗೆ ಉತ್ತರವಾಗಿ, “ನೀನು ನನಗೆ ನಿನ್ನ ಅರ್ಧ ಆಸ್ತಿಯನ್ನು ಕೊಟ್ಟರೂ, ನಾನು ನಿನ್ನ ಸಂಗಡ ಹೋಗುವುದಿಲ್ಲ. ಈ ಸ್ಥಳದಲ್ಲಿ ರೊಟ್ಟಿ ತಿನ್ನುವುದಿಲ್ಲ, ಕುಡಿಯುವುದಿಲ್ಲ. \v 9 ಏಕೆಂದರೆ, ‘ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ, ನೀನು ಬಂದ ಮಾರ್ಗದಿಂದ ಹಿಂದಿರುಗಿ ಹೋಗಬೇಡ,’ ಎಂದು ಯೆಹೋವ ದೇವರ ವಾಕ್ಯದಿಂದ ನನಗೆ ಆಜ್ಞೆಯಾಗಿದೆ,” ಎಂದನು. \v 10 ಆದ್ದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂದಿರುಗಿ ಹೋಗದೆ, ಮತ್ತೊಂದು ಮಾರ್ಗವಾಗಿ ಹೋದನು. \p \v 11 ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಮತ್ತು ಅರಸನಿಗೆ ಹೇಳಿದ ಮಾತುಗಳನ್ನು ತಮ್ಮ ತಂದೆಗೆ ತಿಳಿಸಿದರು. \v 12 ಆಗ ಅವರ ತಂದೆ ಅವರಿಗೆ, “ಅವನು ಯಾವ ಮಾರ್ಗವಾಗಿ ಹೋದನು,” ಎಂದನು. ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳಿಗೆ ತೋರಿಸಿದರು. \v 13 ಆದ್ದರಿಂದ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ಕತ್ತೆಗೆ ತಡಿ ಹಾಕಿದರು. ಅವನು ಅದರ ಮೇಲೆ ಏರಿ, \v 14 ದೇವರ ಮನುಷ್ಯನ ಹಿಂದೆ ಹೋಗಿ, ಅವನು ಏಲಾ ಮರದ ಕೆಳಗೆ ಕುಳಿತುಕೊಂಡಿರುವುದನ್ನು ಕಂಡನು. ಆಗ ಅವನು, “ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ?” ಎಂದನು. \p ಅದಕ್ಕವನು, “ನಾನೇ,” ಎಂದನು. \p \v 15 ಆಗ ವೃದ್ಧ ಪ್ರವಾದಿಯು ಅವನಿಗೆ, “ನೀನು ನನ್ನ ಮನೆಗೆ ಬಂದು ರೊಟ್ಟಿ ತಿನ್ನು,” ಎಂದನು. \p \v 16 ಅದಕ್ಕವನು, “ನಾನು ನಿನ್ನ ಸಂಗಡ ಹಿಂದಿರುಗಲೂ ಕೂಡದು, ಹೋಗಲೂ ಕೂಡದು. ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವುದಿಲ್ಲ, ನೀರು ಕುಡಿಯುವುದಿಲ್ಲ. \v 17 ಏಕೆಂದರೆ, ‘ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ, ಬಂದ ಮಾರ್ಗದಿಂದ ತಿರುಗಿ ಹೋಗಬೇಡ,’ ಎಂದು ಯೆಹೋವ ದೇವರ ಮಾತಿನಿಂದ ನನಗೆ ಅಪ್ಪಣೆಯಾಗಿದೆ,” ಎಂದನು. \p \v 18 ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು. \v 19 ಹಾಗೆಯೇ ದೇವರ ಮನುಷ್ಯನು ವೃದ್ಧನ ಸಂಗಡ ಹಿಂದಿರುಗಿ ಹೋಗಿ, ಅವನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನು. \p \v 20 ಅವರು ಊಟಕ್ಕೆ ಕುಳಿತಿರುವಾಗ, ಅವನನ್ನು ಹಿಂದಕ್ಕೆ ಕರೆತಂದ ವೃದ್ಧ ಪ್ರವಾದಿಗೆ ಯೆಹೋವ ದೇವರ ವಾಕ್ಯವು ಉಂಟಾಗಿ, \v 21 ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನೀನು ಯೆಹೋವ ದೇವರ ಮಾತಿಗೆ ತಿರುಗಿಬಿದ್ದು, ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳದೆ, ಹಿಂದಕ್ಕೆ ಬಂದು, ‘ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ,’ ಎಂದು ಯೆಹೋವ ದೇವರು ನಿನಗೆ ಹೇಳಿದ ಸ್ಥಳದಲ್ಲಿ \v 22 ನೀನು ಹಿಂದಿರುಗಿ ಬಂದು, ನೀನು ರೊಟ್ಟಿ ತಿಂದು, ನೀರು ಕುಡಿದಿದ್ದರಿಂದ, ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಸೇರುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು. \p \v 23 ದೇವರ ಮನುಷ್ಯನು ರೊಟ್ಟಿ ತಿಂದು, ನೀರು ಕುಡಿದ ತುರುವಾಯ, ಅವನು ತಾನು ಕರೆದುತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿ ಹಾಕಿದನು. \v 24 ಅವನು ಹೋದ ತರುವಾಯ, ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಬಿದ್ದಿತ್ತು. ಕತ್ತೆಯೂ ಮತ್ತು ಸಿಂಹವೂ ಹೆಣದ ಬಳಿಯಲ್ಲಿ ನಿಂತಿದ್ದವು. \v 25 ಆಗ ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ, ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ಕಂಡು, ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು. \p \v 26 ಅವನನ್ನು ಮಾರ್ಗದಿಂದ ಹಿಂದಕ್ಕೆ ಕರೆತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ, “ಇವನೇ ಯೆಹೋವ ದೇವರ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು, ಯೆಹೋವ ದೇವರು ಅವನನ್ನು ಸಿಂಹಕ್ಕೆ ಒಪ್ಪಿಸಿದ್ದಾರೆ, ಅದು ಅವನನ್ನು ಸೀಳಿ ಕೊಂದುಹಾಕಿತು,” ಎಂದನು. \p \v 27 ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ತಡಿ ಹಾಕಿದರು. \v 28 ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಬಿದ್ದಿರುವುದನ್ನೂ, ಕತ್ತೆಯೂ, ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. \v 29 ಸಿಂಹವು ಹೆಣವನ್ನು ತಿನ್ನದೆ, ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ, ಕತ್ತೆಯ ಮೇಲೆ ಹಾಕಿಕೊಂಡು ಗೋಳಾಡುವುದಕ್ಕೂ, ಅವನನ್ನು ಹೂಳುವುದಕ್ಕೂ ಪಟ್ಟಣಕ್ಕೆ ತಂದನು. \v 30 ಅವನ ಹೆಣವನ್ನು ತನ್ನ ಸಮಾಧಿಯಲ್ಲಿ ಹೂಳಿಟ್ಟನು. ಆಗ ಅವರು, “ಅಯ್ಯೋ, ನಮ್ಮ ಸಹೋದರನೇ!” ಎಂದು ಅವನಿಗೋಸ್ಕರ ಗೋಳಾಡಿದರು. \p \v 31 ವೃದ್ಧ ಪ್ರವಾದಿಯು ಅವನನ್ನು ಹೂಳಿಟ್ಟ ತರುವಾಯ, ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ದೇವರ ಮನುಷ್ಯನನ್ನು ಹೂಳಿಟ್ಟ ಸಮಾಧಿಯಲ್ಲಿ ನನ್ನನ್ನು ಹೂಳಿಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ. \v 32 ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು. \p \v 33 ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ, ಪೂಜಾ ಸ್ಥಳಗಳಿಗೆ ಕನಿಷ್ಠ ಜನರಿಂದ ಪುನಃ ಯಾಜಕರನ್ನು ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ, ಪೂಜಾಸ್ಥಳಗಳ ಯಾಜಕರಲ್ಲಿ ಅವನು ಒಬ್ಬನಾಗುವನು. \v 34 ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು. \c 14 \s1 ಯಾರೊಬ್ಬಾಮನಿಗೆ ವಿರೋಧವಾಗಿ ಅಹೀಯನ ಪ್ರವಾದನೆ \p \v 1 ಅದೇ ಕಾಲದಲ್ಲಿ ಯಾರೊಬ್ಬಾಮನ ಮಗ ಅಬೀಯನಿಗೆ ರೋಗ ತಗುಲಿತು. ಆದ್ದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ, \v 2 “ನೀನು ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ನೀನೆದ್ದು, ವೇಷಹಾಕಿಕೊಂಡು ಶೀಲೋವಿಗೆ ಹೋಗು. ‘ಈ ಜನರ ಮೇಲೆ ಅರಸನಾಗಿರುವೆ,’ ಎಂದು ನನಗೆ ಹೇಳಿದ ಪ್ರವಾದಿ ಅಹೀಯನು ಅಲ್ಲಿದ್ದಾನೆ. \v 3 ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ, ಭಕ್ಷ್ಯಗಳನ್ನೂ, ಒಂದು ಮಡಕೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವುದನ್ನು ನಿನಗೆ ತಿಳಿಸುವನು,” ಎಂದನು. \v 4 ಯಾರೊಬ್ಬಾಮನ ಪತ್ನಿಯು ಹಾಗೆಯೇ ಮಾಡಿ, ಎದ್ದು ಶೀಲೋವಿಗೆ ಹೋಗಿ, ಅಹೀಯನ ಮನೆಗೆ ಬಂದಳು. \p ಆದರೆ ಅಹೀಯನಿಗೆ ಕಾಣಿಸಲಿಲ್ಲ, ವೃದ್ದಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿ ಹೋಗಿದ್ದವು. \v 5 ಆದರೆ ಯೆಹೋವ ದೇವರು ಅಹೀಯನಿಗೆ, “ಯಾರೊಬ್ಬಾಮನ ಪತ್ನಿಯು ತನ್ನ ಮಗನಿಗೋಸ್ಕರ ನಿನ್ನಿಂದ ದೈವೋತ್ತರವನ್ನು ಕೇಳುವುದಕ್ಕೆ ಬರುತ್ತಾಳೆ. ಏಕೆಂದರೆ ಅವಳ ಮಗನು ರೋಗದಲ್ಲಿದ್ದಾನೆ. ನೀನು ಅವಳಿಗೆ ಹೀಗೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊಬ್ಬಳ ಹಾಗೆ ವೇಷಹಾಕಿಕೊಂಡು ಬರುವಳು,” ಎಂದು ಹೇಳಿಕೊಟ್ಟಿದ್ದನು. \p \v 6 ಅನಂತರ ಅವಳು ಬಾಗಿಲಲ್ಲಿ ಪ್ರವೇಶಿಸುವಾಗ, ಅಹೀಯನು ಅವಳ ಹೆಜ್ಜೆಗಳ ಶಬ್ದ ಕೇಳುತ್ತಲೇ ಅವನು, “ಯಾರೊಬ್ಬಾಮನ ಪತ್ನಿಯೇ ಒಳಗೆ ಬಾ, ನೀನು ಮತ್ತೊಬ್ಬಳಂತೆ ತೋರಿಸಿಕೊಳ್ಳುವುದು ಏಕೆ? ನಾನು ಕಠಿಣವಾದವುಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ. \v 7 ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಜನರೊಳಗಿಂದ ತೆಗೆದು ನಿನ್ನನ್ನು ಹೆಚ್ಚಿಸಿ, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿ ಮಾಡಿದೆನು. \v 8 ದಾವೀದನ ಮನೆಯಿಂದ ರಾಜ್ಯವನ್ನು ವಿಭಾಗಿಸಿ ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ, ತನ್ನ ಸಂಪೂರ್ಣ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರಲಿಲ್ಲ. \v 9 ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ. \p \v 10 “ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ. \v 11 ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿಂದುಬಿಡುವವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿಂದುಬಿಡುವವು,’ ಎಂದು ಯೆಹೋವ ದೇವರು ಹೇಳಿದ್ದಾರೆ. \p \v 12 “ಆದ್ದರಿಂದ ನೀನೆದ್ದು ನಿನ್ನ ಮನೆಗೆ ಹೋಗು. ಪಟ್ಟಣದಲ್ಲಿ ಪ್ರವೇಶಿಸುವಾಗ ನಿನ್ನ ಮಗನು ಸಾಯುವನು. \v 13 ಇದಲ್ಲದೆ ಸಮಸ್ತ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಳಿಡುವರು. ಏಕೆಂದರೆ, ಯಾರೊಬ್ಬಾಮನವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು. ಯಾರೊಬ್ಬಾಮನ ಮನೆಯವರೊಳಗೆ ಅವನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗಾದ ಒಳ್ಳೆಯ ಕ್ರಿಯೆ ಸಿಕ್ಕಿತು. \p \v 14 “ಇದಲ್ಲದೆ ಯೆಹೋವ ದೇವರು ಇಸ್ರಾಯೇಲನ್ನು ಆಳುವುದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವರು. \v 15 ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು. \v 16 ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು. \p \v 17 ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಯೆಹೋವ ದೇವರು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಅವಳ ಮಗನು ಸತ್ತನು. \v 18 ಯೆಹೋವ ದೇವರು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಅವರು ಅವನನ್ನು ಹೂಳಿಟ್ಟರು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿದರು. \p \v 19 ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ, ಅವನು ಯುದ್ಧ ಮಾಡಿದ್ದೂ, ಆಳಿದ್ದೂ, ಇವು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. \v 20 ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರ್ಷಗಳಾಗಿದ್ದವು. ಅವನು ಮೃತನಾಗಿ, ತನ್ನ ಪಿತೃಗಳ ಜೊತೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು. \s1 ಯೆಹೂದ್ಯರ ಅರಸನಾದ ರೆಹಬ್ಬಾಮನು \p \v 21 ಆದರೆ ಸೊಲೊಮೋನನ ಮಗ ರೆಹಬ್ಬಾಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ. \p \v 22 ಆದರೆ ಯೆಹೂದದವರು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನ ಮಾಡಿ, ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿಗಿಂತ, ತಾವು ಹೆಚ್ಚಾಗಿ ಪಾಪಮಾಡಿ ಯೆಹೋವ ದೇವರಿಗೆ ರೋಷವನ್ನೆಬ್ಬಿಸಿದರು. \v 23 ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು. \v 24 ಇದಲ್ಲದೆ ಪೂಜಾಸ್ಥಳಗಳಲ್ಲಿ ಪುರುಷಗಾಮಿಗಳಿದ್ದರು. ಅವರು ಇಸ್ರಾಯೇಲರ ಮುಂದೆ ಯೆಹೋವ ದೇವರು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕಾರ್ಯಗಳನ್ನು ಮಾಡುತ್ತಾ ಇದ್ದರು. \p \v 25 ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ, ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು. \v 26 ಅವನು ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು. \v 27 ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು. \v 28 ಅರಸನು ಯೆಹೋವ ದೇವರ ಆಲಯಕ್ಕೆ ಹೋಗುವಾಗಲೆಲ್ಲಾ, ಕಾವಲುಗಾರರು ಅವುಗಳನ್ನು ಎತ್ತಿಕೊಂಡು ಬರುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ನಂತರ ಕಾವಲಿನ ಚಾವಡಿಗೆ ತರುತ್ತಿದ್ದರು. \p \v 29 ರೆಹಬ್ಬಾಮನ ಉಳಿದ ಕಾರ್ಯಗಳೂ, ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. \v 30 ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು. \v 31 ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸಮಾಧಿ ಬಳಿ ಸಮಾಧಿಮಾಡಿದರು. ಅವನ ತಾಯಿ ಅಮ್ಮೋನಿಯಳಾದ ನಯಮಾ. ಅವನ ಮಗ ಅಬಿಯಾಮನು ಅವನಿಗೆ ಬದಲಾಗಿ ಅರಸನಾದನು. \c 15 \s1 ಯೆಹೂದ್ಯರ ಅರಸನಾದ ಅಬಿಯಾಮನು \p \v 1 ನೆಬಾಟನ ಮಗ ಯಾರೊಬ್ಬಾಮನ ಹದಿನೆಂಟನೆಯ ವರ್ಷದಲ್ಲಿ ಅಬಿಯಾಮನು ಯೆಹೂದದ ಅರಸನಾಗಿ, \v 2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮಾಕಾ, ಇವಳು ಅಬ್ಷಾಲೋಮನ ಮಗಳಾಗಿದ್ದಳು. \p \v 3 ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು. \v 4 ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು. \v 5 ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು. \p \v 6 ಆದರೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಅವರ ಜೀವಾಂತ್ಯದವರೆಗೆ ಯುದ್ಧ ಉಂಟಾಗಿತ್ತು. \v 7 ಅಬಿಯಾಮನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಯೆಹೂದದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು. \v 8 ಅಬಿಯಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು. \s1 ಯೆಹೂದ್ಯರ ಅರಸನಾದ ಆಸನು \p \v 9 ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೆಯ ವರುಷದಲ್ಲಿ ಆಸನು ಯೆಹೂದದ ಮೇಲೆ ಅರಸನಾದನು. \v 10 ನಾಲ್ವತ್ತೊಂದು ವರುಷ ಅವನು ಯೆರೂಸಲೇಮಿನಲ್ಲಿ ಆಳಿದನು. ಅವನ ಅಜ್ಜಿ ಅಬ್ಷಾಲೋಮನ\f + \fr 15:10 \fr*\fq ಅಬ್ಷಾಲೋಮ \fq*\ft ಅಥವಾ \ft*\fqa ಅಬೀಷಾಲೋಮ\fqa*\f* ಮಗಳಾಗಿದ್ದು ಮಾಕಾ ಎಂಬಾಕೆಯು ಇವನ ತಾಯಿ. \p \v 11 ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು. \v 12 ಅವನು ಪೂಜಾ ಸ್ಥಳದ ಪುರುಷಗಾಮಿಗಳನ್ನು ದೇಶದಲ್ಲಿಂದ ಹೊರಡಿಸಿ, ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು. \v 13 ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು. \v 14 ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು. \v 15 ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತಂದನು. \p \v 16 ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು. \v 17 ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು. \p \v 18 ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು. \v 19 ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು. \p \v 20 ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು. \v 21 ಬಾಷನು ಇದನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವುದನ್ನು ಬಿಟ್ಟು, ತಿರ್ಚಕ್ಕೆ ಹೋಗಿ ವಾಸಿಸಿದನು. \v 22 ಆಗ ಅರಸನಾದ ಆಸನು ಯೆಹೂದರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ ಅವುಗಳಿಂದ ಬೆನ್ಯಾಮೀನನ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು. \p \v 23 ಆಸನ ಉಳಿದ ಎಲ್ಲಾ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ಪಟ್ಟಣಗಳೂ, ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಆದರೆ ತನ್ನ ವೃದ್ಧಾಪ್ಯದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು. \v 24 ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ತಂದೆ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸಮಾಧಿ ಬಳಿ ಅವನನ್ನು ಹೂಳಿಟ್ಟರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು. \s1 ಇಸ್ರಾಯೇಲರ ಅರಸನಾದ ನಾದಾಬನು \p \v 25 ಯೆಹೂದದ ಅರಸನಾದ ಆಸನ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಅರಸನಾಗಿ ಎರಡು ವರುಷ ಇಸ್ರಾಯೇಲಿನ ಮೇಲೆ ಆಳಿದನು. \v 26 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು. \p \v 27 ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು. \v 28 ಯೆಹೂದದ ಅರಸನಾದ ಆಸನ ಮೂರನೆಯ ವರುಷದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು. \p \v 29 ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು. \v 30 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು. \p \v 31 ನಾದಾಬನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. \v 32 ಇದಲ್ಲದೆ ಆಸನಿಗೂ, ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು. \s1 ಇಸ್ರಾಯೇಲರ ಅರಸನಾದ ಬಾಷನು \p \v 33 ಯೆಹೂದದ ಅರಸನಾದ ಆಸನ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಸಮಸ್ತ ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಇಪ್ಪತ್ತನಾಲ್ಕು ವರ್ಷ ಆಳಿದನು. \v 34 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಯಾರೊಬ್ಬಾಮನ ಮಾರ್ಗದಲ್ಲಿಯೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದಲ್ಲಿಯೂ ಭಾಗಿಯಾದನು. \c 16 \p \v 1 ಬಾಷನಿಗೆ ವಿರೋಧವಾಗಿ ಹನಾನೀಯ ಮಗ ಯೇಹುವಿಗೆ ಯೆಹೋವ ದೇವರ ವಾಕ್ಯ ಬಂತು, \v 2 “ನಾನು ನಿನ್ನನ್ನು ಧೂಳಿನಿಂದ ಎಬ್ಬಿಸಿ, ನಿನ್ನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ಇರಿಸಿದೆನು. ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು, ನನ್ನ ಜನರಾದ ಇಸ್ರಾಯೇಲರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪಮಾಡಲು ಪ್ರೇರೇಪಿಸಿದೆ. \v 3 ನಾನು ಬಾಷನ ಸಂತತಿಯನ್ನೂ, ಅವನ ಮನೆಯ ಸಂತತಿಯನ್ನೂ ತೆಗೆದುಹಾಕಿ, ನಿನ್ನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು. \v 4 ಬಾಷನ ಕಡೆಯವರಲ್ಲಿ ಪಟ್ಟಣದೊಳಗೆ ಸಾಯುವವನನ್ನು ನಾಯಿಗಳು ತಿನ್ನುವುವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು,” ಎಂಬುದೇ ಆ ವಾಕ್ಯ. \p \v 5 ಬಾಷನ ಇತರ ಕಾರ್ಯಗಳೂ, ಅವನು ಮಾಡಿದ್ದೂ, ಅವನ ಪರಾಕ್ರಮವೂ ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆದಿರುತ್ತವೆ. \v 6 ಬಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ತಿರ್ಚದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಏಲನು ಅವನಿಗೆ ಬದಲಾಗಿ ಅರಸನಾದನು. \p \v 7 ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು. \s1 ಇಸ್ರಾಯೇಲರ ಅರಸನಾದ ಏಲನು \p \v 8 ಯೆಹೂದದ ಅರಸನಾದ ಆಸನ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗ ಏಲನು ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಎರಡು ವರ್ಷ ಆಳಿದನು. \p \v 9 ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು. \v 10 ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ, ಅವನನ್ನು ಕೆಡವಿ ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು. \p \v 11 ಜಿಮ್ರಿಯು ಆಳಲು ಆರಂಭಿಸಿದಾಗ, ಅವನು ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಲೇ, ಬಾಷನ ಮನೆಯವರನ್ನೆಲ್ಲಾ ಸಂಹರಿಸಿ, ಅವನ ಬಂಧುಗಳಲ್ಲಿಯೂ, ಅವನ ಸ್ನೇಹಿತರಲ್ಲಿಯೂ ಒಬ್ಬ ಗಂಡಸನನ್ನೂ ಉಳಿಸಲಿಲ್ಲ. \v 12 ಹೀಗೆಯೇ ಬಾಷನೂ ಅವನ ಮಗ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕೋಪವನ್ನು ಎಬ್ಬಿಸಿ, ತಾವು ಮಾಡಿದ ಪಾಪಗಳಿಂದಲೂ, \v 13 ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದರಿಂದಲೂ, ಯೆಹೋವ ದೇವರು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯವರನ್ನೆಲ್ಲಾ ನಾಶಮಾಡಿದನು. \p \v 14 ಏಲನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. \s1 ಇಸ್ರಾಯೇಲರ ಅರಸನಾದ ಜಿಮ್ರಿಯು \p \v 15 ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ದಿನ ಆಳಿದನು. ಆಗ ಇಸ್ರಾಯೇಲರು ಫಿಲಿಷ್ಟಿಯರಿಗೆ ಸಂಬಂಧಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಿಳಿಸಿದ್ದರು. \v 16 ಜಿಮ್ರಿಯು ಒಳಸಂಚುಮಾಡಿ, ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿದ್ದರಿಂದ, ಇಸ್ರಾಯೇಲರೆಲ್ಲರು ಅದೇ ದಿವಸದಲ್ಲಿ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ನೇಮಿಸಿದರು. \v 17 ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು. \v 18 ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು. \v 19 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತಾನು ಮಾಡಿದ ಪಾಪಗಳ ನಿಮಿತ್ತವಾಗಿಯೂ, ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಆಯಿತು. \p \v 20 ಜಿಮ್ರಿಯ ಇತರ ಕಾರ್ಯಗಳೂ, ಅವನು, ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. \s1 ಇಸ್ರಾಯೇಲರ ಅರಸನಾದ ಒಮ್ರಿಯು \p \v 21 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು. \v 22 ಆದರೆ ಒಮ್ರಿಯ ಸಮರ್ಥಕರು ಜಯಿಸಿದ್ದರಿಂದ ಗೀನಾತನ ಮಗನಾದ ತಿಬ್ನಿಯು ಸತ್ತುಹೋದನು, ಒಮ್ರಿಯು ಅರಸನಾದನು. \p \v 23 ಯೆಹೂದದ ಅರಸನಾದ ಆಸನ ಮೂವತ್ತೊಂದನೆಯ ವರ್ಷದಲ್ಲಿ, ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು, ಅದರಲ್ಲಿ ಆರು ವರ್ಷ ತಿರ್ಚದಲ್ಲಿ ಆಳಿದನು. \v 24 ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು. \p \v 25 ಆದರೆ ಒಮ್ರಿಯು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು. \v 26 ಅವನು ನೆಬಾಟನ ಮಗ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು. \p \v 27 ಒಮ್ರಿಯು ಮಾಡಿದ ಇತರ ಕಾರ್ಯಗಳೂ, ಅವನು ತೋರಿಸಿದ ಪರಾಕ್ರಮವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. \v 28 ಒಮ್ರಿಯು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಸಮಾರ್ಯ ಪಟ್ಟಣದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಅರಸನಾದನು. \s1 ಅಹಾಬನು ಇಸ್ರಾಯೇಲಿನ ಅರಸನಾದನು \p \v 29 ಯೆಹೂದದ ಅರಸನಾದ ಆಸನ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗ ಅಹಾಬನು ಇಸ್ರಾಯೇಲಿನ ಮೇಲೆ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತೆರಡು ವರ್ಷ ಆಳಿದನು. \v 30 ಒಮ್ರಿಯ ಮಗ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಯೆಹೋವ ದೇವರ ಮುಂದೆ ಹೆಚ್ಚು ಕೆಟ್ಟತನ ಮಾಡಿದನು. \v 31 ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು. \v 32 ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿದನು. \v 33 ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು. \p \v 34 ಅವನ ದಿವಸಗಳಲ್ಲಿ ಬೇತೇಲಿನ ಹೀಯೇಲನು ಯೆರಿಕೋವನ್ನು ಕಟ್ಟಿಸಿದನು. ಯೆಹೋವ ದೇವರು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ, ತನ್ನ ಚೊಚ್ಚಲಮಗನಾದ ಅಬೀರಾಮನನ್ನೂ, ಅದರ ಬಾಗಿಲುಗಳನ್ನು ಇಟ್ಟಾಗ ತನ್ನ ಕಿರಿ ಮಗನಾದ ಸೆಗೂಬನನ್ನೂ ಕಳೆದುಕೊಂಡನು. \c 17 \s1 ಎಲೀಯನು ದೊಡ್ಡ ಬರವನ್ನು ಘೋಷಿಸಿದ್ದು \p \v 1 ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು. \s1 ಎಲೀಯನಿಗೆ ಕಾಗೆಗಳಿಂದ ಆಹಾರ \p \v 2 ಯೆಹೋವ ದೇವರ ಮಾತು ಅವನಿಗೆ ಉಂಟಾಗಿ, \v 3 “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ಅಡಗಿಕೊಂಡಿರು. \v 4 ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು. \p \v 5 ಅವನು ಹೋಗಿ ಯೆಹೋವ ದೇವರ ಮಾತಿನ ಹಾಗೆಯೇ ಮಾಡಿದನು. ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸವಾಗಿದ್ದನು. \v 6 ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು. \s1 ಚಾರೆಪ್ತಾದ ವಿಧವೆ \p \v 7 ಸ್ವಲ್ಪ ಕಾಲವಾದ ಮೇಲೆ ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು. \v 8 ಯೆಹೋವ ದೇವರ ವಾಕ್ಯವು ಅವನಿಗೆ ಉಂಟಾಗಿ, \v 9 “ನೀನೆದ್ದು ಸೀದೋನಿಗೆ ಹೊಂದಿದ ಚಾರೆಪತಕ್ಕೆ ಹೋಗಿ ಅಲ್ಲಿ ವಾಸವಾಗಿರು. ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು. \v 10 ಹಾಗೆಯೇ ಅವನೆದ್ದು ಚಾರೆಪತಕ್ಕೆ ಹೋಗಿ, ಪಟ್ಟಣದ ಬಾಗಿಲ ಬಳಿಗೆ ಬಂದಾಗ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು, “ನೀನು ದಯಮಾಡಿ ನನಗೆ ಕುಡಿಯುವುದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತೆಗೆದುಕೊಂಡು ಬಾ,” ಎಂದನು. \v 11 ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು. \p \v 12 ಅದಕ್ಕೆ ಅವಳು, “ನಿನ್ನ ದೇವರಾದ ಯೆಹೋವ ದೇವರಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ನಾನೂ, ನನ್ನ ಪುತ್ರನೂ ಅದನ್ನು ತಿಂದು ಸತ್ತು ಹೋಗುವಹಾಗೆ ಅದನ್ನು ನನಗೂ, ಅವನಿಗೂ ಸಿದ್ಧಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ,” ಎಂದಳು. \p \v 13 ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ. \v 14 ಏಕೆಂದರೆ, ‘ಯೆಹೋವ ದೇವರು ಭೂಮಿಯ ಮೇಲೆ ಮಳೆಯನ್ನು ಕೊಡುವವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ. ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯುವುದಿಲ್ಲ,’ ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾರೆ,” ಎಂದನು. \p \v 15 ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿದಳು. ಎಲೀಯನಿಗೂ, ಮಹಿಳೆಗೂ, ಆಕೆಯ ಮಗನಿಗೂ ಪ್ರತಿದಿನ ಸಾಕಾಗುವಷ್ಟು ಆಹಾರವಿತ್ತು. \v 16 ಯೆಹೋವ ದೇವರು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ, ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು. \p \v 17 ಸ್ವಲ್ಪ ಸಮಯದ ತರುವಾಯ, ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಕೊನೆಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು. \v 18 ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು. \p \v 19 ಅವನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ, ಅವನನ್ನು ಅವಳ ಮಡಿಲಿನಿಂದ ಎತ್ತಿಕೊಂಡು, ತಾನು ವಾಸವಾಗಿದ್ದ ಮಾಳಿಗೆಯ ಕೋಣೆಗೆ ಹೋಗಿ, ಅವನನ್ನು ಮಂಚದ ಮೇಲೆ ಮಲಗಿಸಿದನು. \v 20 “ನನ್ನ ದೇವರಾದ ಯೆಹೋವ ದೇವರೇ, ವಿಧವೆಯ ಮಗನನ್ನು ಕೊಂದುಹಾಕುವ ಈ ದುರಂತ ಅವಳ ಮೇಲೆ ಬರಮಾಡಿದಿಯಲ್ಲಾ?” ಎಂದು ಯೆಹೋವ ದೇವರನ್ನು ಕೂಗಿ ಬೇಡಿದನು. \v 21 ಅವನು ಬಾಲಕನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವ ದೇವರೇ, ಈ ಬಾಲಕನ ಪ್ರಾಣ ಅವನಲ್ಲಿ ತಿರುಗಿಬರಲಿ,” ಎಂದು ಯೆಹೋವ ದೇವರನ್ನು ಕೂಗಿದನು. \p \v 22 ಯೆಹೋವ ದೇವರು ಎಲೀಯನ ಪ್ರಾರ್ಥನೆಯನ್ನು ಕೇಳಿದ್ದರಿಂದ ಬಾಲಕನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರುಗಿ ಬಂತು. \v 23 ಆಗ ಎಲೀಯನು ಬಾಲಕನನ್ನು ಎತ್ತಿಕೊಂಡು ಉಪ್ಪರಿಗೆಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು, ಅವನನ್ನು ಅವನ ತಾಯಿಗೆ ಕೊಟ್ಟು, “ನೋಡು, ನಿನ್ನ ಮಗನು ಜೀವದಿಂದಿದ್ದಾನೆ,” ಎಂದು ಹೇಳಿದನು. \p \v 24 ಸ್ತ್ರೀಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಲ್ಲಿರುವ ಯೆಹೋವ ದೇವರ ವಾಕ್ಯವು ಸತ್ಯವೆಂದೂ ಇದರಿಂದ ಈಗ ತಿಳಿದಿದ್ದೇನೆ,” ಎಂದಳು. \c 18 \s1 ಎಲೀಯನು ಮತ್ತು ಓಬದ್ಯ \p \v 1 ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು. \v 2 ಎಲೀಯನು ಅಹಾಬನಿಗೆ ತನ್ನನ್ನು ಪ್ರಕಟಿಸಿಕೊಳ್ಳಲು ಹೋದನು. \p ಆದರೆ ಸಮಾರ್ಯದಲ್ಲಿ ಬರವು ಘೋರವಾಗಿತ್ತು. \v 3 ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು. \v 4 ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು. \v 5 ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು. \v 6 ಅವರು ದೇಶವನ್ನು ಹಾದು ಹೋಗಲು, ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ, ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕವಾಗಿ ಹೋದರು. \p \v 7 ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು. \p \v 8 ಎಲೀಯನು ಅವನಿಗೆ, “ನಾನೇ, ನೀನು ಹೋಗಿ, ‘ಎಲೀಯನು ಇಲ್ಲಿದ್ದಾನೆ’ ಎಂದು ನಿನ್ನ ಯಜಮಾನನಿಗೆ ಹೇಳು,” ಎಂದನು. \p \v 9 ಅದಕ್ಕವನು, “ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು? \v 10 ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು. \v 11 ಈಗ ನೀನು, ‘ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು,’ ಎಂದು ಹೇಳುತ್ತೀ. \v 12 ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ. \v 13 ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ? \v 14 ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದುಹಾಕುವ ಹಾಗೆ, ‘ಎಲೀಯನು ಇದ್ದಾನೆ ಎಂದು ನೀನು ಹೋಗಿ ಅವನಿಗೆ ಹೇಳು,’ ಎಂಬುದಾಗಿ ನೀನು ಹೇಳುತ್ತೀ,” ಎಂದನು. \p \v 15 ಅದಕ್ಕೆ ಎಲೀಯನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು,” ಎಂದನು. \s1 ಕರ್ಮೆಲ್ ಪರ್ವತದ ಮೇಲೆ ಎಲೀಯನು \p \v 16 ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರುಗೊಳ್ಳಲು ಹೋದನು. \v 17 ಅಹಾಬನು ಎಲೀಯನನ್ನು ಕಂಡಾಗ ಅವನಿಗೆ, “ಇಸ್ರಾಯೇಲನ್ನು ಕಷ್ಟಕ್ಕೆ ಒಳಪಡಿಸುವವನು ನೀನಲ್ಲವೋ?” ಎಂದನು. \p \v 18 ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು. \v 19 ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು. \p \v 20 ಹೀಗೆ ಅಹಾಬನು ಇಸ್ರಾಯೇಲರೆಲ್ಲರನ್ನೂ ಕರೆಯಿಸಿ, ಕರ್ಮೆಲು ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು. \v 21 ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. \p ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ. \p \v 22 ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ. \v 23 ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ. ಒಂದು ಹೋರಿಯನ್ನು ಅವರು ಆಯ್ದುಕೊಂಡು, ಅದನ್ನು ತುಂಡುತುಂಡಾಗಿ ಕಡಿದು, ಬೆಂಕಿ ಹಾಕದೆ, ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆ ಮಾಡಿ, ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು. \v 24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. \p ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು. \p \v 25 ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಅನೇಕರಾಗಿರುವುದರಿಂದ ಒಂದು ಹೋರಿಯನ್ನು ಆಯ್ದುಕೊಂಡು, ಅದನ್ನು ಮೊದಲು ಸಿದ್ಧಮಾಡಿ, ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ. ಆದರೆ ಬೆಂಕಿಯನ್ನು ಹೊತ್ತಿಸಬೇಡಿರಿ,” ಎಂದನು. \v 26 ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. \p “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು. \p \v 27 ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು. \v 28 ಅವರು ದೊಡ್ಡ ಶಬ್ದದಿಂದ ಕೂಗಿ, ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಖಡ್ಗಗಳಿಂದಲೂ, ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು. \v 29 ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ. \p \v 30 ಆಗ ಎಲೀಯನು ಸಮಸ್ತ ಜನರಿಗೂ, “ನನ್ನ ಬಳಿಗೆ ಬನ್ನಿರಿ,” ಎಂದನು. ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತು ಹಾಕಿದ ಯೆಹೋವ ದೇವರ ಬಲಿಪೀಠವನ್ನು ಅವನು ದುರಸ್ತಿ ಮಾಡಿದನು. \v 31 “ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವುದು,” ಎಂದು ಯೆಹೋವ ದೇವರ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ, ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, \v 32 ಆ ಕಲ್ಲುಗಳಿಂದ ಯೆಹೋವ ದೇವರ ಹೆಸರಿಗೆ ಬಲಿಪೀಠವನ್ನು ಕಟ್ಟಿ, ಆ ಬಲಿಪೀಠದ ಸುತ್ತಲೂ ಇಪ್ಪತ್ತು ಸೇರು\f + \fr 18:32 \fr*\ft ಸುಮಾರು 11 ಕಿ. ಗ್ರಾಂ\ft*\f* ಬೀಜವರೀ ನೆಲವನ್ನು ಅಗೆಸಿ, ಒಂದು ಕಾಲುವೆಯನ್ನು ಮಾಡಿದನು. \v 33 ತರುವಾಯ ಅವನು ಕಟ್ಟಿಗೆಗಳನ್ನು ಪೀಠದ ಮೇಲೆ ಇಟ್ಟು, ಹೋರಿಯನ್ನು ತುಂಡುತುಂಡಾಗಿ ಕಡಿದು, ಕಟ್ಟಿಗೆಗಳ ಮೇಲೆ ಇಟ್ಟು, “ನೀವು ನಾಲ್ಕು ಕೊಡ ನೀರು ತುಂಬಿಕೊಂಡು ದಹನಬಲಿಯ ಮೇಲೆಯೂ, ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ,” ಎಂದನು. \p \v 34 ಅವರು ಅವನು ಹೇಳಿದಂತೆ ಮಾಡಿದರು. ಆಗ ಎಲೀಯನು, “ಎರಡನೆಯ ಸಾರಿ ಹೊಯ್ಯಿರಿ,” ಎಂದನು. ಅವರು ಎರಡನೆಯ ಸಾರಿಯೂ ಹೊಯ್ದರು. \p ಮೂರನೆಯ ಸಾರಿ, “ಹೊಯ್ಯಿರಿ,” ಎಂದನು. ಮೂರನೆಯ ಸಾರಿಯೂ ಹೊಯ್ದರು. \v 35 ಆದ್ದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು. \p \v 36 ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ. \v 37 ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು. \p \v 38 ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು. \p \v 39 ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು. \p \v 40 ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು. \p \v 41 ಅನಂತರ ಎಲೀಯನು ಅಹಾಬನಿಗೆ, “ನೀನು ಹೋಗಿ ತಿಂದು, ಕುಡಿ. ಏಕೆಂದರೆ ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ,” ಎಂದನು. \v 42 ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು. \p \v 43 ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. \p ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. \p ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು. \p \v 44 ಏಳನೆಯ ಸಾರಿ ಇವನು ಹೋಗಿ ನೋಡಿದಾಗ, “ಇಗೋ, ಸಮುದ್ರದಿಂದ ಒಂದು ಮನುಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತಿದೆ,” ಎಂದನು. \p ಆಗ, “ನೀನು ಹೋಗಿ ಅಹಾಬನಿಗೆ ಬೇಗನೇ ರಥವನ್ನು ತೆಗೆದುಕೊಂಡು ಮಳೆಯು ನಿನ್ನನ್ನು ತಡೆಯದಂತೆ ಇಳಿದುಹೋಗೆಂದು ಹೇಳು,” ಎಂದನು. \p \v 45 ಆಗ ಇದ್ದಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ, ಗಾಳಿಯಿಂದಲೂ ಕಪ್ಪಾಗಿ ದೊಡ್ಡಮಳೆಯು ಉಂಟಾಯಿತು. ಅಹಾಬನು ರಥದಲ್ಲಿ ಏರಿ ಇಜ್ರೆಯೇಲ್ ಪಟ್ಟಣಕ್ಕೆ ಹೋದನು. \v 46 ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು. \c 19 \s1 ಎಲೀಯನು ಹೋರೇಬಿಗೆ ಓಡಿಹೋದದ್ದು \p \v 1 ಎಲೀಯನು ಮಾಡಿದ್ದೆಲ್ಲವನ್ನೂ, ಅವನು ಖಡ್ಗದಿಂದ ಎಲ್ಲಾ ಪ್ರವಾದಿಗಳನ್ನು ಕೊಂದು ಹಾಕಿದ್ದೆಲ್ಲವನ್ನೂ, ಅಹಾಬನು ಈಜೆಬೆಲಳಿಗೆ ತಿಳಿಸಿದಾಗ, \v 2 ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು. \p \v 3 ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು. \v 4 ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು. \v 5 ಅವನು ಜಾಲೀಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. \p ಆಗ ಒಬ್ಬ ದೂತನು ಅವನನ್ನು ತಟ್ಟಿ, ಅವನಿಗೆ, “ಎದ್ದು ತಿನ್ನು,” ಎಂದನು. \v 6 ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು. \p \v 7 ತಿರುಗಿ ಎರಡನೆಯ ಸಾರಿ ಯೆಹೋವ ದೇವರ ದೂತನು ಬಂದು, ಅವನನ್ನು ತಟ್ಟಿ ಅವನಿಗೆ, “ನೀನೆದ್ದು ತಿನ್ನು, ಏಕೆಂದರೆ ನೀನು ಬಹುದೂರ ಪ್ರಯಾಣ ಮಾಡಬೇಕಾಗಿದೆ,” ಎಂದನು. \v 8 ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು. \v 9 ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. \s1 ಯೆಹೋವ ದೇವರು ಎಲೀಯನಿಗೆ ಪ್ರತ್ಯಕ್ಷನಾದದ್ದು \p ಅಲ್ಲಿ ಅವನಿಗೆ ಯೆಹೋವ ದೇವರ ವಾಕ್ಯವು ಬಂದು, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದರು. \p \v 10 ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು. \p \v 11 ಆಗ ಯೆಹೋವ ದೇವರು, “ನೀನು ಹೊರಗೆ ಬಂದು ಬೆಟ್ಟದ ಮೇಲೆ ನನ್ನ ಮುಂದೆ ನಿಲ್ಲು. ಏಕೆಂದರೆ ನಾನು ನಿನ್ನ ಮುಂದೆ ಹಾದು ಹೋಗುತ್ತಿದ್ದೇನೆ,” ಎಂದನು. \p ಯೆಹೋವ ದೇವರ ಮುಂದೆ ಬೆಟ್ಟಗಳನ್ನು ಭೇದಿಸಿ, ಗುಡ್ಡಗಳನ್ನು ಒಡೆಯುವಂಥ ಮಹಾಬಲವಾದ ಗಾಳಿ, ಆ ಗಾಳಿಯಲ್ಲಿ ಯೆಹೋವ ದೇವರು ಇರಲಿಲ್ಲ. ಗಾಳಿಯ ತರುವಾಯ ಭೂಕಂಪವು, ಆ ಭೂಕಂಪದಲ್ಲಿ ಯೆಹೋವ ದೇವರು ಇರಲಿಲ್ಲ. \v 12 ಭೂಕಂಪದ ತರುವಾಯ ಬೆಂಕಿಯು, ಆ ಬೆಂಕಿಯಲ್ಲಿ ಯೆಹೋವ ದೇವರು ಇರಲಿಲ್ಲ. ಬೆಂಕಿಯ ತರುವಾಯ ಮೃದುವಾದ ಸ್ವರವು ಕೇಳಿಸಿತು. \v 13 ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. \p ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು. \p \v 14 ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು. \p \v 15 ಆಗ ಯೆಹೋವ ದೇವರು ಅವನಿಗೆ, “ನೀನು ಬಂದ ಮಾರ್ಗದಲ್ಲಿ ದಮಸ್ಕದ ಮರುಭೂಮಿಗೆ ತಿರುಗಿಕೊಂಡು ಹೋಗಿ, ಅಲ್ಲಿ ತಲುಪಿದಾಗ, ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. \v 16 ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು. \v 17 ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು. \v 18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು. \s1 ಎಲೀಷನ ಕರೆಯುವಿಕೆ \p \v 19 ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು. \v 20 ಆಗ ಅವನು ಎತ್ತುಗಳನ್ನು ಬಿಟ್ಟು, ಎಲೀಯನ ಹಿಂದೆ ಓಡಿಹೋಗಿ ಅವನಿಗೆ, “ಅಪ್ಪಣೆಯಾದರೆ, ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬಂದು ನಿನ್ನನ್ನು ಹಿಂಬಾಲಿಸುವೆನು,” ಎಂದನು. \p ಎಲೀಯನು, “ಹೋಗು, ನಾನು ನಿನಗೆ ಏನು ಮಾಡಿದೆ?” ಎಂದನು. \p \v 21 ಆಗ ಎಲೀಷನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ, ನೊಗದ ಕಟ್ಟಿಗೆಯಿಂದ ಅವುಗಳ ಮಾಂಸವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು. \c 20 \s1 ಬೆನ್ಹದದನು ಸಮಾರ್ಯವನ್ನು ಮುತ್ತಿಗೆ ಹಾಕಿದ್ದು \p \v 1 ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು. \v 2 ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣದೊಳಗೆ ಕಳುಹಿಸಿ, “ಬೆನ್ಹದದನು ಹೀಗೆ ಹೇಳುತ್ತಾನೆ: \v 3 ‘ನಿನ್ನ ಬೆಳ್ಳಿಯೂ, ನಿನ್ನ ಬಂಗಾರವೂ ನನ್ನವು. ನಿನ್ನ ಪತ್ನಿಯರೂ, ನಿನ್ನ ಮಕ್ಕಳೆಲ್ಲರೂ ನನ್ನವರು,’ ” ಎಂಬುದಾಗಿ ಅವನಿಗೆ ಹೇಳಿದನು. \p \v 4 ಇಸ್ರಾಯೇಲಿನ ಅರಸನು ಉತ್ತರವಾಗಿ, “ಅರಸನಾದ ನನ್ನ ಒಡೆಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು, ನನಗುಂಟಾದ ಸಮಸ್ತವೂ ನಿನ್ನದು,” ಎಂದನು. \p \v 5 ಆ ದೂತರು ತಿರುಗಿಬಂದು ಅವನಿಗೆ, “ಬೆನ್ಹದದನು ಹೇಳುವುದೇನೆಂದರೆ, ‘ನಿನ್ನ ಬೆಳ್ಳಿಯನ್ನೂ, ನಿನ್ನ ಬಂಗಾರವನ್ನೂ, ನಿನ್ನ ಸ್ತ್ರೀಯರನ್ನೂ, ನಿನ್ನ ಮಕ್ಕಳನ್ನೂ, ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲವೇ? \v 6 ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು. ಅವರು ನಿನ್ನ ಅರಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ಅವರು ತೆಗೆದುಕೊಂಡು ಹೋಗುವರು,’ ” ಎಂದನು. \p \v 7 ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು. \p \v 8 ಆಗ ಹಿರಿಯರೂ, ಜನರೂ ಅವನಿಗೆ, “ಅವನ ಮಾತು ಕೇಳದೆ ಒಪ್ಪದಿರು,” ಎಂದರು. \p \v 9 ಆದ್ದರಿಂದ ಅವನು ಬೆನ್ಹದದನ ದೂತರಿಗೆ, “ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನೆಂದರೆ, ‘ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು. ಆದರೆ ಈ ಸಾರಿ ಹೇಳಿದ ಕಾರ್ಯವನ್ನು ನಾನು ಮಾಡಲಾರೆ,’ ಎಂದು ಹೇಳಿರಿ,” ಎಂದನು. ದೂತರು ಹೋಗಿ ಈ ಮಾತುಗಳನ್ನು ಬೆನ್ಹದದನಿಗೆ ಹೇಳಿದರು. \p \v 10 ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು. \p \v 11 ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’ ” ಎಂದನು. \p \v 12 ಬೆನ್ಹದದನೂ, ಅವನ ಸಂಗಡ ಡೇರೆಗಳಲ್ಲಿ ಕುಡಿಯುತ್ತಿದ್ದ ಅರಸರು, ಈ ವಾರ್ತೆಯನ್ನು ಕೇಳುತ್ತಲೇ, ಅವನು ತನ್ನ ಸೇವಕರಿಗೆ, “ಆಕ್ರಮಣ ಮಾಡುವುದಕ್ಕೆ ಸಿದ್ಧಮಾಡಿರಿ,” ಎಂದನು. ಹಾಗೆಯೇ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು. \s1 ಅಹಾಬನು ಬೆನ್ಹದದನನ್ನು ಸೋಲಿಸಿದ್ದು \p \v 13 ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. \p \v 14 ಅಹಾಬನು, “ಯಾರ ಕೈಯಿಂದ?” ಎಂದನು. \p ಅದಕ್ಕವನು, “ ‘ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. \p ಆಗ ಅಹಾಬನು, “ಯುದ್ಧ ಪ್ರಾರಂಭ ಮಾಡುವವನು ಯಾರು?” ಎಂದನು. \p ಅದಕ್ಕೆ ಆ ಪ್ರವಾದಿಯು, “ನೀನೇ,” ಎಂದನು. \p \v 15 ಅಹಾಬನು ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳನ್ನು ಲೆಕ್ಕಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಿದ್ದರು. ಅವರ ತರುವಾಯ ಇಸ್ರಾಯೇಲರಾದ ಸೈನಿಕರನ್ನು ಲೆಕ್ಕಮಾಡಿದಾಗ ಏಳು ಸಾವಿರ ಜನರಿದ್ದರು. \v 16 ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು. \v 17 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳ ಮೊದಲು ಸೈನ್ಯವಾಗಿ ಬಂದರು. \p ಬೆನ್ಹದದನು ಪತ್ತೆದಾರರನ್ನು ಕಳುಹಿಸಿದನು. “ಅವರು ತಿರುಗಿಬಂದು ಸಮಾರ್ಯದಿಂದ ಸೈನಿಕರು ಬಂದಿದ್ದಾರೆ,” ಎಂದು ಅವನಿಗೆ ತಿಳಿಸಿದರು. \p \v 18 ಆಗ ಅವರು, “ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ. ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ,” ಎಂದನು. \p \v 19 ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳೂ, ಅವರ ಹಿಂದೆ ಬಂದ ಸೈನಿಕರೂ, ಪಟ್ಟಣದಿಂದ ಹೊರಗೆ ಬಂದಾಗ, \v 20 ಪ್ರತಿ ಸೈನಿಕನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದರು. ಆಗ ಅರಾಮ್ಯರು ಓಡಿಹೋದರು. ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು. \v 21 ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ, ರಥಗಳನ್ನೂ ಹೊಡೆದು, ಅರಾಮ್ಯರನ್ನು ಮಹಾ ಸಂಹಾರದಿಂದ ನಾಶಮಾಡಿಬಿಟ್ಟನು. \p \v 22 ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು. \p \v 23 ಆದರೆ ಅರಾಮಿನ ಅರಸನ ಸೇವಕರು ಅವನಿಗೆ, “ಅವರ ದೇವರುಗಳು, ಪರ್ವತಗಳ ದೇವರುಗಳು, ಆದ್ದರಿಂದ ಅವರು ನಮ್ಮನ್ನು ಜಯಿಸಿದರು. ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧಮಾಡಿದರೆ, ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗಿರುವೆವು. \v 24 ಇದಲ್ಲದೆ ನೀನು ಮಾಡಬೇಕಾದದ್ದೇನೆಂದರೆ, ಅರಸರನ್ನು ತೆಗೆದುಹಾಕಿ ಅವರಿಗೆ ಪ್ರತಿಯಾಗಿ ಅಧಿಪತಿಗಳನ್ನು ನೇಮಿಸಬೇಕು. \v 25 ನಂತರ ನೀನು ಕಳೆದುಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ, ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು. ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ. ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗುವೆವು,” ಎಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು. \p \v 26 ವಸಂತ ಕಾಲದಲ್ಲಿ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ, ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಅಫೇಕಿಗೆ ಹೋದನು. \v 27 ಆದ್ದರಿಂದ ಇಸ್ರಾಯೇಲರು ಲೆಕ್ಕ ಮಾಡಿ ಆಹಾರವನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲರು ಅವರಿಗೆದುರಾಗಿ ದಂಡಿಳಿದಿರುವಾಗ, ಅವರು ಆಡುಮರಿಗಳ ಎರಡು ಮಂದೆಗಳ ಹಾಗಿದ್ದರು. ಆದರೆ ಅರಾಮ್ಯರು ಮೈದಾನದಲ್ಲಿ ಸಂಪೂರ್ಣವಾಗಿ ಆವರಿಸಿದ್ದರು. \p \v 28 ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. \p \v 29 ಏಳು ದಿವಸ ಎರಡು ಸೈನ್ಯಗಳೂ ಎದುರುಬದುರಾಗಿ ದಂಡಿಳಿದಿದ್ದರು. ಆದರೆ ಏಳನೆಯ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ, ಇಸ್ರಾಯೇಲರು ಅರಾಮ್ಯರಲ್ಲಿ ಲಕ್ಷಮಂದಿ ಕಾಲಾಳುಗಳನ್ನು ಒಂದೇ ದಿವಸದಲ್ಲಿ ಸಂಹರಿಸಿದರು. \v 30 ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು. \p \v 31 ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು. \p \v 32 ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. \p ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು. \p \v 33 ಆದರೆ ಆ ಮನುಷ್ಯರು ಈ ಮಾತನ್ನು ಶುಭಸೂಚನೆಯಾಗಿ ನೆನಸಿ, ಅವನ ಮಾತಿಗೆ ಉತ್ತರವಾಗಿ, “ನಿನ್ನ ಸಹೋದರನಾದ ಬೆನ್ಹದದನು ಇದ್ದಾನೆ,” ಎಂದು ಹೇಳಿದರು. \p ಆಗ ಅಹಾಬನು, “ನೀವು ಹೋಗಿ ಅವನನ್ನು ಕರೆದುಕೊಂಡು ಬನ್ನಿರಿ,” ಎಂದನು. ಬೆನ್ಹದದನು ಅವನ ಬಳಿಗೆ ಹೊರಟುಬಂದಾಗ ಅಹಾಬನು ಅವನನ್ನು ರಥದಲ್ಲಿ ಕುಳ್ಳಿರಿಸಿಕೊಂಡನು. \p \v 34 ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. \p ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು. \s1 ಪ್ರವಾದಿ ಅಹಾಬನನ್ನು ಖಂಡಿಸಿದ್ದು \p \v 35 ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು. \p \v 36 ಆಗ ಪ್ರವಾದಿಯು ಇವನಿಗೆ, “ನೀನು ಯೆಹೋವ ದೇವರ ಮಾತನ್ನು ಕೇಳದೆ ಹೋದದ್ದರಿಂದ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲುವುದು,” ಎಂದನು. ಅವನು ಪ್ರವಾದಿಯನ್ನು ಬಿಟ್ಟು ಹೋದಾಗಲೇ ಸಿಂಹವು ಅವನನ್ನು ಕಂಡು ಕೊಂದುಹಾಕಿತು. \p \v 37 ಪ್ರವಾದಿಯು ಮತ್ತೊಬ್ಬನನ್ನು ಕಂಡುಕೊಂಡು, “ದಯಮಾಡಿ, ನನ್ನನ್ನು ಹೊಡೆ,” ಎಂದನು. ಆ ಮನುಷ್ಯನು ಅವನನ್ನು ಗಾಯವಾಗುವಷ್ಟು ಹೊಡೆದನು. \v 38 ಆಗ ಪ್ರವಾದಿಯು ಹೋಗಿ ತನ್ನ ಕಣ್ಣುಗಳನ್ನು ಮುಂಡಾಸದಿಂದ ಮುಚ್ಚಿಕೊಂಡು ತನ್ನನ್ನು ಮರೆಮಾಡಿಕೊಂಡು, ಅರಸನಾದ ಅಹಾಬನಿಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು. \v 39 ಅರಸನು ಹಾದು ಹೋಗುತ್ತಿರುವಾಗ, ಪ್ರವಾದಿಯು ಅರಸನಿಗೆ ಕೂಗಿ ಹೇಳಿದ್ದೇನೆಂದರೆ, “ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ಸೆರೆಯವನನ್ನು ನನ್ನ ಬಳಿಗೆ ಹಿಡಿದುಕೊಂಡು ಬಂದು, ‘ಈ ಮನುಷ್ಯನನ್ನು ಕಾಯಿ. ಇವನು ತಪ್ಪಿಸಿಕೊಂಡುಹೋದರೆ ನಿನ್ನ ಪ್ರಾಣವು ಇವನ ಪ್ರಾಣಕ್ಕೆ ಬದಲಾಗಿರುವುದು. ಇಲ್ಲವೆ ನೀನು ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಡಬೇಕು,’ ಎಂದನು. \v 40 ಆದರೆ ನಿನ್ನ ಸೇವಕನು ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ತಪ್ಪಿಸಿಕೊಂಡುಹೋದನು,” ಎಂದನು. \p ಇಸ್ರಾಯೇಲಿನ ಅರಸನು ಅವನಿಗೆ, “ನಿನ್ನ ತೀರ್ಪಿನ ಹಾಗೆಯೇ ಆಗಲಿ, ನೀನು ಸರಿಯಾಗಿ ನಿರ್ಣಯಿಸಿದಿ,” ಎಂದನು. \p \v 41 ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಮುಂಡಾಸವನ್ನು ತೆಗೆದು ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳಿದುಕೊಂಡನು. \v 42 ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು. \v 43 ಆಗ ಇಸ್ರಾಯೇಲಿನ ಅರಸನು ಬೇಸರದಿಂದಲೂ, ಕೋಪದಿಂದಲೂ ತನ್ನ ಅರಮನೆಗೆ ಹೋಗಲು ಹೊರಟು ಸಮಾರ್ಯಕ್ಕೆ ಬಂದನು. \c 21 \s1 ನಾಬೋತನ ದ್ರಾಕ್ಷಿತೋಟ \p \v 1 ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು. \v 2 ಅಹಾಬನು ನಾಬೋತನಿಗೆ, “ತೋಟವು ನನ್ನ ಮನೆಯ ಬಳಿಯಲ್ಲಿ ಇರುವುದರಿಂದ ಅದು ನನಗೆ ಕಾಯಿಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು. ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೆಯ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ಇಲ್ಲವೆ ನಿನ್ನ ದೃಷ್ಟಿಗೆ ಒಳ್ಳೆಯದಾಗಿದ್ದರೆ, ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು,” ಎಂದನು. \p \v 3 ಆದರೆ ನಾಬೋತನು ಅಹಾಬನಿಗೆ, “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡದಂತೆ ಯೆಹೋವ ದೇವರು ನನ್ನನ್ನು ತಡೆಯಲಿ,” ಎಂದನು. \p \v 4 “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು. \p \v 5 ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ, “ನೀನು ವ್ಯಸನವಾಗಿರುವುದೇಕೆ? ಯಾಕೆ ಊಟಮಾಡುವುದಿಲ್ಲ?” ಎಂದಳು. \p \v 6 ಅವನು ಅವಳಿಗೆ, “ಏಕೆಂದರೆ ನಾನು ಇಜ್ರೆಯೇಲಿನವನಾದ ನಾಬೋತನ ಸಂಗಡ ಮಾತನಾಡಿ, ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಕ್ರಯಕ್ಕೆ ಕೊಡು. ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷಿತೋಟವನ್ನು ಕೊಡುವೆನು,’ ಎಂದು ಅವನಿಗೆ ಹೇಳಿದೆನು. ಅದಕ್ಕವನು, ‘ನನ್ನ ದ್ರಾಕ್ಷಿತೋಟವನ್ನು ಕೊಡುವುದಿಲ್ಲ,’ ” ಎಂದು ಹೇಳಿದನು. \p \v 7 ಆಗ ಅವನ ಹೆಂಡತಿ ಈಜೆಬೆಲಳು ಅವನಿಗೆ, “ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೋ? ಎದ್ದು ಊಟಮಾಡು. ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ನಿನಗೆ ಕೊಡಿಸುತ್ತೇನೆ,” ಎಂದಳು. \p \v 8 ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು. \v 9 ಅವಳು ಪತ್ರಗಳಲ್ಲಿ, \pm “ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ಕೂರಿಸಿ, \v 10 ‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು. \p \v 11 ಆಗ ಅವನ ಪಟ್ಟಣದ ಮನುಷ್ಯರೂ, ಅವನ ಪಟ್ಟಣದ ನಿವಾಸಿಗಳೂ ಆದ ಹಿರಿಯರೂ, ಗೌರವಸ್ಥರೂ, ಈಜೆಬೆಲಳು ಅವರಿಗೆ ಕಳುಹಿಸಿದ ಪ್ರಕಾರವೂ, ಅವಳು ಅವರ ಬಳಿಗೆ ಕಳುಹಿಸಿದ ಪತ್ರಗಳಲ್ಲಿ ಬರೆದ ಪ್ರಕಾರವೂ ಮಾಡಿದರು. \v 12 ಅವರು ಉಪವಾಸವನ್ನು ಪ್ರಕಟಮಾಡಿ, ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ಕೂರಿಸಿದರು. \v 13 ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. \v 14 ಅವನು ಸತ್ತನು. ಅವರು ಈಜೆಬೆಲಳಿಗೆ, “ನಾಬೋತನು ಕಲ್ಲೆಸೆತದಿಂದ ಸತ್ತನು,” ಎಂದು ಹೇಳಿ ಕಳುಹಿಸಿದರು. \p \v 15 ನಾಬೋತನು ಕಲ್ಲೆಸೆತದಿಂದ ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ, ಅವಳು ಅಹಾಬನಿಗೆ, “ನೀನೆದ್ದು ಇಜ್ರೆಯೇಲಿನವನಾದ ನಾಬೋತನು ಕ್ರಯಕ್ಕೆ ಕೊಡಲು ಸಮ್ಮತಿಸದಿದ್ದ ದ್ರಾಕ್ಷಿತೋಟವನ್ನು ಸ್ವಾಧೀನ ಮಾಡಿಕೋ. ಏಕೆಂದರೆ ನಾಬೋತನು ಜೀವದಿಂದಿಲ್ಲ, ಸತ್ತಿದ್ದಾನೆ,” ಎಂದಳು. \v 16 ನಾಬೋತನು ಸತ್ತನೆಂದು ಅಹಾಬನು ಕೇಳಿದಾಗ, ಅವನೆದ್ದು ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು. \p \v 17 ಆಗ ಯೆಹೋವ ದೇವರ ವಾಕ್ಯವು ತಿಷ್ಬೀಯನಾದ ಎಲೀಯನಿಗೆ ಉಂಟಾಗಿ, \v 18 “ನೀನೆದ್ದು ಸಮಾರ್ಯದಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆ ಎದುರಾಗಿ ಹೋಗು. ಅವನು ನಾಬೋತನ ದ್ರಾಕ್ಷಿ ತೋಟದಲ್ಲಿದ್ದಾನೆ. ಅದನ್ನು ಸ್ವಾಧೀನಮಾಡಿಕೊಳ್ಳಲು ಅಲ್ಲಿಗೆ ಹೋಗಿದ್ದಾನೆ. \v 19 ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. \p \v 20 ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. \p ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ, \v 21 ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ, ನಿನ್ನ ಸಂತತಿಯನ್ನು ತೆಗೆದುಹಾಕಿ, ಅಹಾಬನಿಗೆ ಒಬ್ಬ ಗಂಡು ಮಗುವನ್ನಾದರೂ ಉಳಿಸದೆ ಇಸ್ರಾಯೇಲಿನಲ್ಲಿ ಎಲ್ಲರನ್ನು ತೆಗೆದುಹಾಕಿಬಿಡುವೆನು. \v 22 ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ, ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ, ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ, ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು, ಎಂದನು.’ \p \v 23 “ಈಜೆಬೆಲಳನ್ನು ಕುರಿತು ಯೆಹೋವ ದೇವರು, ‘ನಾಯಿಗಳು ಈಜೆಬೆಲಳನ್ನು ಇಜ್ರೆಯೇಲ್ ಗೋಡೆಯ ಬಳಿಯಲ್ಲಿ ತಿನ್ನುವುವು.’ \p \v 24 “ಅಹಾಬನ ಕುಟುಂಬದವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ, ಅವನನ್ನು ನಾಯಿಗಳು ತಿನ್ನುವುವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು, ಎಂದು ಹೇಳುತ್ತಾರೆ,” ಎಂದನು. \p \v 25 ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ. \v 26 ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಅಮೋರಿಯರು ಮಾಡಿದ ಎಲ್ಲಾ ವಿಗ್ರಹಗಳನ್ನು ಹಿಂಬಾಲಿಸಿ ಅಸಹ್ಯವಾಗಿ ನಡೆದನು. \p \v 27 ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು. \p \v 28 ಆಗ ಯೆಹೋವ ದೇವರ ವಾಕ್ಯವು ತಿಷ್ಬೀಯನಾದ ಎಲೀಯನಿಗೆ ಉಂಟಾಗಿ, \v 29 “ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು. \c 22 \s1 ಮೀಕಾಯನು ಅಹಾಬನ ವಿರುದ್ಧ ಪ್ರವಾದಿಸಿದ್ದು \p \v 1 ಅರಾಮ್ಯರಿಗೂ, ಇಸ್ರಾಯೇಲರಿಗೂ ಮೂರು ವರ್ಷ ಯುದ್ಧ ನಡೆಯಲಿಲ್ಲ. \v 2 ಮೂರನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು. \v 3 ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು. \p \v 4 ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. \p ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು. \v 5 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು. \p \v 6 ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. \p ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. \p \v 7 ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು. \p \v 8 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. \p ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು. \p \v 9 ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು. \p \v 10 ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ, ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು. \v 11 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. \p \v 12 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. \p \v 13 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು. \p \v 14 ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು. \p \v 15 ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. \p ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು. \p \v 16 ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು. \p \v 17 ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು. \p \v 18 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು. \p \v 19 ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು. \v 20 ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. \p “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು. \v 21 ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. \p \v 22 “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. \p “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. \p “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು. \p \v 23 “ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು. \p \v 24 ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು. \p \v 25 ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು. \p \v 26 ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ, \v 27 ‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು. \p \v 28 ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು. \s1 ಅಹಾಬನು ಗಿಲ್ಯಾದಿನ ರಾಮೋತಿನಲ್ಲಿ ಹತನಾದದ್ದು \p \v 29 ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು. \v 30 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು. \p \v 31 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು. \v 32 ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ನಿಶ್ಚಯವಾಗಿ ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ, ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆಗ ಯೆಹೋಷಾಫಾಟನು ಕೂಗಿಕೊಂಡನು. \v 33 ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು. \p \v 34 ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು. \v 35 ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು. \v 36 ಸಾಯಂಕಾಲವಾದಾಗ, “ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ, ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ,” ಎಂದು ಸೈನ್ಯದಲ್ಲಿ ಪ್ರಕಟಮಾಡಲಾಯಿತು. \p \v 37 ಇಸ್ರಾಯೇಲಿನ ಅರಸನ ಶವವನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು. \v 38 ಆ ರಥವನ್ನು ವೇಶ್ಯೆಯರು ಸ್ನಾನ ಮಾಡುವ ಸಮಾರ್ಯದ ಕೆರೆಯಲ್ಲಿ ತೊಳೆಯುತ್ತಿದ್ದಾಗ, ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು. \p \v 39 ಅಹಾಬನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ದಂತದ ಮನೆಯೂ, ಅವನು ಕಟ್ಟಿಸಿದ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. \v 40 ಅಹಾಬನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು. \s1 ಯೆಹೂದ್ಯರ ಅರಸನಾದ ಯೆಹೋಷಾಫಾಟನು \p \v 41 ಇಸ್ರಾಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು. \v 42 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ. \v 43 ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. \v 44 ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಸಂಗಡ ಸಮಾಧಾನ ಮಾಡಿಕೊಂಡನು. \p \v 45 ಯೆಹೋಷಾಫಾಟನ ಇತರ ಕ್ರಿಯೆಗಳೂ, ಅವನು ತೋರಿಸಿದ ಪರಾಕ್ರಮವೂ, ಅವನು ಯುದ್ಧ ಮಾಡಿದ ವಿಧವೂ, ಯೆಹೂದದ ಅರಸುಗಳ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ. \v 46 ಅವನ ತಂದೆ ಆಸನ ಕಾಲದಲ್ಲಿ ಉಳಿದಿದ್ದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದುಹಾಕಿದನು. \v 47 ಆ ಕಾಲದಲ್ಲಿ ಎದೋಮಿನೊಳಗೆ ಅರಸನಿರಲಿಲ್ಲ, ಅಧಿಪತಿಯು ಆಳುತ್ತಿದ್ದನು. \p \v 48 ಯೆಹೋಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗುವುದಕ್ಕೆ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ. ಆ ಹಡಗುಗಳು ಎಚ್ಯೋನ್ ಗೆಬೆರಿನ ಬಳಿಯಲ್ಲಿ ಒಡೆದುಹೋದವು. \v 49 ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ. \p \v 50 ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು. \s1 ಇಸ್ರಾಯೇಲರ ಅರಸನಾದ ಅಹಜ್ಯನು \p \v 51 ಅಹಾಬನ ಮಗ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆಯ ವರ್ಷದಲ್ಲಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾರಂಭಿಸಿ, ಎರಡು ವರ್ಷ ಇಸ್ರಾಯೇಲನ್ನು ಆಳಿದನು. \v 52 ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನ್ನ ತಂದೆಯ ಮಾರ್ಗದಲ್ಲಿಯೂ, ತನ್ನ ತಾಯಿಯ ಮಾರ್ಗದಲ್ಲಿಯೂ ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲಿಯೂ ನಡೆದನು. \v 53 ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು.