\id 1SA - Biblica® Open Kannada Contemporary Version \ide UTF-8 \h 1 ಸಮುಯೇಲ \toc1 ಸಮುಯೇಲ ಪ್ರಥಮ ಭಾಗ \toc2 1 ಸಮುಯೇಲ \toc3 1 ಸಮು \mt1 ಸಮುಯೇಲ \mt2 ಪ್ರಥಮ ಭಾಗ \c 1 \s1 ಸಮುಯೇಲನ ಜನನ \p \v 1 ಎಫ್ರಾಯೀಮ್ ಬೆಟ್ಟದ ಪ್ರದೇಶ ರಾಮತಾಯೀಮ್ ಚೋಫಿಮಿನಲ್ಲಿ ಎಲ್ಕಾನ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ಯನಾದ ಚೂಫನ ಮೊಮ್ಮಗನೂ ತೋಹುವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. \v 2 ಅವನಿಗೆ ಇಬ್ಬರು ಹೆಂಡತಿಯರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ. \p \v 3 ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು. \v 4 ಎಲ್ಕಾನನು ಬಲಿ ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿ ಪೆನಿನ್ನಳಿಗೂ, ಅವಳ ಸಮಸ್ತ ಪುತ್ರಪುತ್ರಿಯರಿಗೂ ಪಾಲನ್ನು ಕೊಡುತ್ತಿದ್ದನು. \v 5 ಅವನು ಹನ್ನಳನ್ನು ಪ್ರೀತಿಸಿದ್ದರಿಂದ ಹನ್ನಳಿಗೆ ಎರಡಷ್ಟು ಪಾಲನ್ನು ಕೊಡುತ್ತಿದ್ದನು. ಆದರೆ ಯೆಹೋವ ದೇವರು ಹನ್ನಳ ಗರ್ಭವನ್ನು ಮುಚ್ಚಿಬಿಟ್ಟಿದ್ದರು. \v 6 ಯೆಹೋವ ದೇವರು ಅವಳ ಗರ್ಭವನ್ನು ಮುಚ್ಚಿದ್ದರಿಂದ, ಅವಳ ಪ್ರತಿಸ್ಪರ್ಧಿಯಾದ ಪೆನಿನ್ನಳು ಹನ್ನಳಿಗೆ ಮನಗುಂದುವ ಹಾಗೆ ಬಹಳ ಕೆಣಕಿ ಬಾಧಿಸಿದಳು. \v 7 ಹೀಗೆಯೇ ಅವನು ಪ್ರತಿ ಸಂವತ್ಸರದಲ್ಲಿಯೂ ಮಾಡುತ್ತಿದ್ದನು, ಇವಳು ಯೆಹೋವ ದೇವರ ಮನೆಗೆ ಹೋಗುತ್ತಿರುವಾಗ ಆ ರೀತಿಯಾಗಿ ಹನ್ನಳನ್ನು ಬಾಧಿಸುತ್ತಿದ್ದಳು. ಅದರಿಂದ ಹನ್ನಳು ಊಟಮಾಡದೆ ಅಳುತ್ತಾ ಇದ್ದಳು. \v 8 ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು. \p \v 9 ಅವರು ಶೀಲೋವಿನಲ್ಲಿ ಊಟಮಾಡಿದ ತರುವಾಯ ಹನ್ನಳು ಎದ್ದು ನಿಂತಳು. ಯಾಜಕನಾದ ಏಲಿ ಯೆಹೋವ ದೇವರ ಮಂದಿರದ ಸ್ತಂಭದ ಬಳಿ ಆಸನದ ಮೇಲೆ ಕುಳಿತಿರುವಾಗ, \v 10 ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು \v 11 ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು. \p \v 12 ಅವಳು ಯೆಹೋವ ದೇವರ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ, ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು. \v 13 ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ, ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದುದರಿಂದ ಅವಳ ಶಬ್ದವು ಕೇಳಿಸಲಿಲ್ಲ. ಆದ್ದರಿಂದ ಏಲಿಯು ಅವಳು ಅಮಲೇರಿದ್ದಾಳೆಂದು ನೆನಸಿದನು. \v 14 ಏಲಿಯು ಅವಳಿಗೆ, “ಎಷ್ಟರವರೆಗೂ ಅಮಲೇರಿದವಳಾಗಿರುವೆ? ನಿನ್ನ ಬಳಿಯಿಂದ ನಿನ್ನ ದ್ರಾಕ್ಷಾರಸವನ್ನು ತೊರೆದುಬಿಡು,” ಎಂದನು. \p \v 15 ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ. \v 16 ನಿನ್ನ ದಾಸಿಯನ್ನು ದುಷ್ಟಳೆಂದು ನೆನಸಬೇಡ. ನನ್ನ ಹೆಚ್ಚಾದ ಚಿಂತೆಯಿಂದಲೂ, ದುಃಖದಿಂದಲೂ ಈವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು,” ಎಂದಳು. \p \v 17 ಆಗ ಏಲಿಯು ಅವಳಿಗೆ, “ಸಮಾಧಾನದಿಂದ ಹೋಗು. ಇಸ್ರಾಯೇಲಿನ ದೇವರು, ಅವರಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯಂತೆ ನಿನಗೆ ಕೊಡಲಿ,” ಎಂದನು. \p \v 18 ಅದಕ್ಕವಳು, “ನಿನ್ನ ಸೇವಕಿಗೆ ನಿನ್ನ ದೃಷ್ಟಿಯಲ್ಲಿ ದಯೆ ತೋರಲಿ,” ಎಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು. ಆಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ. \p \v 19 ಅವರು ಉದಯದಲ್ಲಿ ಎದ್ದು, ಯೆಹೋವ ದೇವರನ್ನು ಆರಾಧಿಸಿ, ಹಿಂದಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಸಂಗಮಿಸಲು, ಆಗ ಯೆಹೋವ ದೇವರು ಅವಳನ್ನು ಜ್ಞಾಪಕಮಾಡಿಕೊಂಡರು. \v 20 ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ\f + \fr 1:20 \fr*\ft ಹೀಬ್ರೂ ಭಾಷೆಯಲ್ಲಿ \ft*\fq ಸಮುಯೇಲ \fq*\ft ಎಂದರೆ \ft*\fqa ದೇವರು ಆಲಿಸಿದರು\fqa*\f* ಎಂದು ಹೆಸರಿಟ್ಟಳು. \s1 ಹನ್ನಳು ಸಮುಯೇಲನನ್ನು ಸಮರ್ಪಿಸಿದ್ದು \p \v 21 ಎಲ್ಕಾನನು ಯೆಹೋವ ದೇವರಿಗೆ ಪ್ರತಿ ವರುಷದ ಬಲಿಯನ್ನೂ, ತನ್ನ ಹರಕೆಯನ್ನೂ ಸಲ್ಲಿಸುವುದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ, \v 22 ಹನ್ನಳು ಹೋಗದೆ ತನ್ನ ಗಂಡನಿಗೆ, “ಮಗುವು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ನಾನು ಬರುವುದಿಲ್ಲ. ಅವನು ಯೆಹೋವ ದೇವರ ಸನ್ನಿಧಿಯ ದರ್ಶನಕ್ಕೂ ಅಲ್ಲಿ ಎಂದೆಂದಿಗೂ ಇರುವುದಕ್ಕೂ ನಾನು ಅವನನ್ನು ಆಮೇಲೆ ತೆಗೆದುಕೊಂಡು ಬರುವೆನು,” ಎಂದಳು. \p \v 23 ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ, “ನೀನು ನಿನಗೆ ಒಳ್ಳೆಯದಾಗಿ ತೋರುವ ಹಾಗೆ ಮಾಡು. ಅವನು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ಕಾದುಕೊಂಡಿರು. ಯೆಹೋವ ದೇವರು ತಮ್ಮ ವಾಕ್ಯವನ್ನು ಪೂರೈಸಲಿ,” ಎಂದನು. ಹಾಗೆಯೇ ಅವಳು ನಿಂತು ತನ್ನ ಮಗುವು ಎದೆಹಾಲು ಬಿಡುವವರೆಗೂ ಅವನಿಗೆ ಎದೆಹಾಲು ಕೊಡುತ್ತಿದ್ದಳು. \p \v 24 ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು. \v 25 ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಹೋರಿಯನ್ನು ಸಮರ್ಪಣೆ ಮಾಡಿದ ತರುವಾಯ, ಮಗುವನ್ನು ಏಲಿಯ ಬಳಿಗೆ ತಂದರು. \v 26 “ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ಇಲ್ಲಿ ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು. \v 27 ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು. \v 28 ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು. \c 2 \s1 ಹನ್ನಳ ಪ್ರಾರ್ಥನೆ \p \v 1 ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, \q1 “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. \q2 ನನ್ನ ಕೊಂಬು\f + \fr 2:1 \fr*\fq ಕೊಂಬು \fq*\ft ಎಂಬ ಪದವು ಬಲದ ಸಂಕೇತವನ್ನು ಸೂಚಿಸುತ್ತದೆ\ft*\f* ಯೆಹೋವ ದೇವರಲ್ಲಿ ಉನ್ನತವಾಯಿತು. \q1 ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. \q2 ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ. \b \q1 \v 2 “ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ. \q2 ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ. \q2 ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ. \b \q1 \v 3 “ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. \q2 ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. \q1 ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. \q2 ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು. \b \q1 \v 4 “ಪರಾಕ್ರಮಶಾಲಿಗಳ ಬಿಲ್ಲುಗಳು ಮುರಿದು ಬಿದ್ದಿವೆ, \q2 ಎಡವಿದವರು ಬಲದಿಂದ ನಡುಕಟ್ಟಿ ನಿಂತಿದ್ದಾರೆ. \q1 \v 5 ತೃಪ್ತಿಪಟ್ಟವರು ಆಹಾರಕ್ಕಾಗಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. \q2 ಹಸಿದವರು ಇನ್ನು ಮುಂದೆ ಹಸಿಯರು. \q1 ಬಂಜೆಯಾದವಳು ಏಳುಮಂದಿ ಮಕ್ಕಳನ್ನು ಹೆತ್ತಳು. \q2 ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನಳಾದಳು. \b \q1 \v 6 “ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. \q2 ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ. \q1 \v 7 ಯೆಹೋವ ದೇವರು ಬಡತನವನ್ನು, ಐಶ್ವರ್ಯವನ್ನು ಕೊಡುವವರೂ, \q2 ತಗ್ಗಿಸುವವರೂ, ಉನ್ನತ ಮಾಡುವವರೂ ಆಗಿದ್ದಾರೆ. \q1 \v 8 ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. \q2 ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. \q1 ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. \q2 ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. \b \q1 “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. \q2 ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ. \q1 \v 9 ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. \q2 ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. \b \q1 “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು. \q2 \v 10 ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. \q1 ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, \q2 ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. \b \q1 “ತಮ್ಮ ಅರಸನಿಗೆ ಬಲ ಕೊಡುವರು. \q2 ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.” \p \v 11 ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು. ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಯೆಹೋವ ದೇವರ ಸೇವೆ ಮಾಡುತ್ತಿದ್ದನು. \s1 ಏಲಿಯ ದುಷ್ಟ ಮಕ್ಕಳು \p \v 12 ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು. \v 13 ಆ ಯಾಜಕರು ಜನರನ್ನು ನಡೆಸಿದ ವಿಧ ಏನೆಂದರೆ: ಯಾವನಾದರೂ ಬಲಿ ಅರ್ಪಿಸಿದರೆ, ಆ ಅರ್ಪಿಸಿದ ಬಲಿಯ ಮಾಂಸವನ್ನು ಬೇಯಿಸುವಾಗ, ಯಾಜಕನ ಸೇವಕನು ಮೂರು ಶೂಲವುಳ್ಳ ಆಯುಧವನ್ನು ತೆಗೆದುಕೊಂಡು ಬಂದು, \v 14 ಅದನ್ನು ತಪ್ಪಲೆಯಲ್ಲಾಗಲಿ, ಪಾತ್ರೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವುದನ್ನೆಲ್ಲಾ ಯಾಜಕನು ತನಗೆ ತೆಗೆದುಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲರಿಗೆ ಮಾಡಿದರು. \v 15 ಇದಲ್ಲದೆ ಕೊಬ್ಬನ್ನು ಬಲಿ ಅರ್ಪಿಸುವುದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು, ಬಲಿಯನ್ನು ಅರ್ಪಿಸುವವನ ಸಂಗಡ, “ಯಾಜಕನಿಗೆ ಸುಡುವುದಕ್ಕೆ ಮಾಂಸವನ್ನು ಕೊಡು. ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತೆಗೆದುಕೊಳ್ಳುವುದಿಲ್ಲ. ಅದು ಹಸಿಯಾಗಿರಬೇಕು,” ಎನ್ನುತ್ತಿದ್ದನು. \p \v 16 “ಮೊದಲು ಕೊಬ್ಬನ್ನು ಸುಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ,” ಎಂದು ಯಾರಾದರೂ ಹೇಳಿದರೆ; ಸೇವಕನು, “ಇಲ್ಲ ಈಗಲೇ ಕೊಡು. ನೀನು ಕೊಡದಿದ್ದರೆ, ನಾನು ಒತ್ತಾಯದಿಂದ ತೆಗೆದುಕೊಳ್ಳುವೆನು,” ಎನ್ನುತ್ತಿದ್ದನು. \p \v 17 ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು. \p \v 18 ಬಾಲಕನಾದ ಸಮುಯೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಯೆಹೋವ ದೇವರ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದನು. \v 19 ಅವನ ತಾಯಿ ಪ್ರತಿ ವರುಷದಲ್ಲೂ ವರುಷದ ಬಲಿಯನ್ನು ಅರ್ಪಿಸಲು ತನ್ನ ಗಂಡನ ಸಂಗಡ ಬರುವಾಗ, ಅವನಿಗೆ ಒಂದು ಚಿಕ್ಕ ನಿಲುವಂಗಿಯನ್ನು ಮಾಡಿಕೊಂಡು ಬರುವಳು. \v 20 ಆಗ ಏಲಿಯು ಎಲ್ಕಾನನನ್ನೂ, ಅವನ ಹೆಂಡತಿಯನ್ನೂ, “ಯೆಹೋವ ದೇವರಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ಯೆಹೋವ ದೇವರು ನಿನಗೆ ಬೇರೆ ಮಕ್ಕಳನ್ನು ದಯಪಾಲಿಸಲಿ,” ಎಂದು ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರುಗಿ ತಮ್ಮ ಮನೆಗೆ ಹಿಂದಿರುಗುತ್ತಿದ್ದರು. \v 21 ಹಾಗೆಯೇ ಯೆಹೋವ ದೇವರು ಹನ್ನಳಿಗೆ ಕೃಪೆ ತೋರಿಸಿದ್ದರಿಂದ, ಅವಳು ಗರ್ಭಧರಿಸಿ ಮೂವರು ಪುತ್ರರನ್ನೂ, ಇಬ್ಬರು ಪುತ್ರಿಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುಯೇಲನು ಯೆಹೋವ ದೇವರ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು. \p \v 22 ಏಲಿಯು ಬಹಳ ವೃದ್ಧನಾಗಿದ್ದನು. ಅವನು ತನ್ನ ಪುತ್ರರು ಇಸ್ರಾಯೇಲ್ ಜನರಿಗೆ ಮಾಡುವುದೆಲ್ಲವನ್ನೂ, ಅವರು ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬುದನ್ನೂ ಕೇಳಿ ಅವರಿಗೆ, \v 23 “ನೀವು ಇಂಥಾ ಕಾರ್ಯಗಳನ್ನು ಮಾಡುವುದೇನು? ನಾನು ಎಲ್ಲ ಜನರಿಂದ ಈ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ. \v 24 ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ. ಏಕೆಂದರೆ ಯೆಹೋವ ದೇವರ ಜನರಲ್ಲಿ ನೀವು ಮಾಡಿರುವ ಕಾರ್ಯಗಳ ವರ್ತಮಾನವು ಹರಡಿದ್ದು ಒಳ್ಳೆಯದಲ್ಲ. \v 25 ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು. \p \v 26 ಆದರೆ ಬಾಲಕನಾದ ಸಮುಯೇಲನು ನಿಲುವಿನಿಂದಲೂ ಯೆಹೋವ ದೇವರ ಕೃಪೆಯಲ್ಲಿಯೂ ಜನರೊಂದಿಗೂ ಬೆಳೆಯುತ್ತಾ ಬಂದನು. \s1 ಏಲಿಯ ಮನೆತನಕ್ಕೆ ವಿರುದ್ಧವಾದ ಪ್ರವಾದನೆ \p \v 27 ದೇವರ ಮನುಷ್ಯನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ನಿನಗೆ ಹೇಳುವದೇನೆಂದರೆ: ‘ನಿನ್ನ ತಂದೆಯ ಮನೆಯವರು ಈಜಿಪ್ಟಿನಿಂದ ಫರೋಹನ ಮನೆಯೊಳಗೆ ಇರುವಾಗ, ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ? \v 28 ನನ್ನ ಬಲಿಪೀಠದ ಮೇಲೆ ಬಲಿಯನ್ನು ಅರ್ಪಿಸುವುದಕ್ಕೂ, ಧೂಪವನ್ನು ಸುಡುವುದಕ್ಕೂ, ನನ್ನ ಮುಂದೆ ಏಫೋದನ್ನು ಧರಿಸಿಕೊಂಡಿರುವುದಕ್ಕೂ, ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರಬೇಕೆಂದು ನಾನು ಅವನನ್ನು ಆಯ್ದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲರು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ? \v 29 ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’ \p \v 30 “ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು. \v 31 ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟದಹಾಗೆ, ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿನಗಳು ಬರುವುವು. \v 32 ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವುಗಳಿಗೆ ಬದಲಾಗಿ, ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವೆ. ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ವೃದ್ಧನೂ ಇರುವುದಿಲ್ಲ. \v 33 ನನ್ನ ಬಲಿಪೀಠದ ಸೇವೆಯಿಂದ ನಾನು ತೆಗೆದು ಬಿಡದ ಮನುಷ್ಯನು, ನಿನ್ನ ಕಣ್ಣುಗಳನ್ನು ಕುಂದಿಸಿ, ನಿನ್ನ ಹೃದಯವನ್ನು ವೇದನೆ ಪಡಿಸುವುದಕ್ಕೆ ಇರುವನು. ನಿನ್ನ ಮನೆಯ ಸಂತತಿಯವರೆಲ್ಲಾ ಯೌವನ ಪ್ರಾಯದಲ್ಲಿಯೇ ಖಡ್ಗದಿಂದ ಸಾಯುವರು. \p \v 34 “ ‘ಇದಲ್ಲದೆ ನಿನಗೆ ಗುರುತಾಗಿ ಹೊಫ್ನಿಯು, ಫೀನೆಹಾಸನು ಎಂಬ ಇಬ್ಬರು ಮಕ್ಕಳು ಒಂದೇ ದಿವಸದಲ್ಲಿ ಸಾಯುವರು. \v 35 ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು. \v 36 ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ” \c 3 \s1 ಯೆಹೋವ ದೇವರು ಸಮುಯೇಲನನ್ನು ಕರೆದದ್ದು \p \v 1 ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು. \p \v 2 ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು. ನೋಡುವುದಕ್ಕಾಗದಂತೆ ಅವನ ಕಣ್ಣುಗಳು ಮಬ್ಬಾಗುತ್ತಿದ್ದವು. \v 3 ದೇವರ ಮಂಜೂಷವಿರುವ ಯೆಹೋವ ದೇವರ ಮಂದಿರದಲ್ಲಿ ದೇವರ ದೀಪವು ಆರಿಹೋಗುವುದಕ್ಕಿಂತ ಮುಂಚೆ ಸಮುಯೇಲನು ಮಲಗಿದ್ದನು. \v 4 ಆಗ ಯೆಹೋವ ದೇವರು ಸಮುಯೇಲನನ್ನು ಕರೆದರು. \p ಅದಕ್ಕವನು, “ಇಗೋ, ನಾನು ಇಲ್ಲಿದ್ದೇನೆ,” ಎಂದು ಹೇಳಿ, \v 5 ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ,” ಎಂದನು. \p ಅದಕ್ಕವನು, “ನಾನು ನಿನ್ನನ್ನು ಕರೆಯಲಿಲ್ಲ, ತಿರುಗಿ ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು. \p \v 6 ಯೆಹೋವ ದೇವರು, “ಸಮುಯೇಲನೇ,” ಎಂದು ಅವನನ್ನು ತಿರುಗಿ ಕರೆದರು. ಆಗ ಸಮುಯೇಲನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ; ನನ್ನನ್ನು ಕರೆದೆಯಲ್ಲಾ,” ಎಂದನು. \p ಅದಕ್ಕವನು, “ನನ್ನ ಮಗನೇ, ನಾನು ಕರೆಯಲಿಲ್ಲ; ನೀನು ಹೋಗಿ ಮಲಗಿಕೋ,” ಎಂದನು. \p \v 7 ಸಮುಯೇಲನು ಆವರೆಗೂ ಯೆಹೋವ ದೇವರನ್ನು ತಿಳಿದುಕೊಂಡಿರಲಿಲ್ಲ. ಯೆಹೋವ ದೇವರ ವಾಕ್ಯವು ಅವನಿಗೆ ಪ್ರಕಟವಾಗಿರಲೂ ಇಲ್ಲ. \p \v 8 ಯೆಹೋವ ದೇವರು ಮತ್ತೆ ಮೂರನೆಯ ಸಾರಿ, “ಸಮುಯೇಲನೇ,” ಎಂದು ಕರೆದರು. ಅವನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ,” ಎಂದನು. \p ಆಗ ಏಲಿಯು, ಯೆಹೋವ ದೇವರು ಹುಡುಗನನ್ನು ಕರೆದರೆಂದು ಗ್ರಹಿಸಿಕೊಂಡನು. \v 9 ಏಲಿಯು ಸಮುಯೇಲನಿಗೆ, “ನೀನು ಹೋಗಿ ಮಲಗು; ಅವರು ನಿನ್ನನ್ನು ಕರೆದರೆ, ಆಗ ನೀನು, ‘ಯೆಹೋವ ದೇವರೇ, ಮಾತನಾಡಿ, ನಿಮ್ಮ ದಾಸನು ಕೇಳುತ್ತಾನೆ,’ ಎಂದು ಹೇಳು,” ಎಂದನು. ಹಾಗೆಯೇ ಸಮುಯೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು. \p \v 10 ಆಗ ಯೆಹೋವ ದೇವರು ಬಂದು ನಿಂತು ಮೊದಲಿನ ಹಾಗೆಯೇ, “ಸಮುಯೇಲನೇ, ಸಮುಯೇಲನೇ,” ಎಂದು ಕರೆದರು. \p ಅದಕ್ಕೆ ಸಮುಯೇಲನು, “ಯೆಹೋವ ದೇವರೇ ಮಾತನಾಡಿ; ನಿಮ್ಮ ದಾಸನು ಕೇಳುತ್ತಾನೆ,” ಎಂದನು. \p \v 11 ಆಗ ಯೆಹೋವ ದೇವರು ಸಮುಯೇಲನಿಗೆ, “ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯವನ್ನು ಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳೂ ಕಂಪಿಸುವುವು. \v 12 ಏಕೆಂದರೆ ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ. ನಾನು ಆರಂಭಿಸಿದ ಹಾಗೆ ಅಂತ್ಯವನ್ನು ಮಾಡುವೆನು. \v 13 ನಾನು ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯತೀರಿಸುವೆನು, ಎಂದು ಹೇಳಿದ್ದೆನು. ಏಕೆಂದರೆ ತನ್ನ ಪುತ್ರರು ದೇವರ ನಿಂದನೆ ಮಾಡಿದಾಗ, ಅವರನ್ನು ಹತೋಟಿಗೆ ತರಲಿಲ್ಲ. \v 14 ಆದ್ದರಿಂದ ‘ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿಯಿಂದಲಾದರೂ, ಅರ್ಪಣೆಯಿಂದಲಾದರೂ ಪ್ರಾಯಶ್ಚಿತ್ತವಾಗುವದಿಲ್ಲ, ಎಂದು ನಾನು ಏಲಿಯ ಮನೆಯನ್ನು ಕುರಿತು ಪ್ರಮಾಣಮಾಡಿದೆನು,’ ” ಎಂದರು. \p \v 15 ಸಮುಯೇಲನು ಉದಯದವರೆಗೂ ಮಲಗಿದ್ದು, ಯೆಹೋವ ದೇವರ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುಯೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯಪಟ್ಟನು. \v 16 ಆಗ ಏಲಿಯು ಸಮುಯೇಲನನ್ನು ಕರೆದು ಅವನಿಗೆ, “ನನ್ನ ಮಗನಾದ ಸಮುಯೇಲನೇ,” ಎಂದನು. \p ಅದಕ್ಕವನು, “ಇಗೋ, ಇದ್ದೇನೆ,” ಎಂದನು. \p \v 17 ಏಲಿಯು ಅವನಿಗೆ, “ಅವರು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಅವರು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವುದನ್ನಾದರೂ ನನಗೆ ಮರೆಮಾಡಿದರೆ, ದೇವರು ನಿನ್ನನ್ನು ದಂಡಿಸಲಿ,” ಎಂದನು. \v 18 ಹಾಗೆಯೇ ಸಮುಯೇಲನು ಅವನಿಗೆ ಒಂದನ್ನೂ ಮರೆಮಾಡದೆ, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು, “ಅವರು ಯೆಹೋವ ದೇವರು. ಅವರಿಗೆ ಸರಿತೋರುವುದನ್ನು ಮಾಡಲಿ,” ಎಂದನು. \p \v 19 ಸಮುಯೇಲನು ಬೆಳೆಯುತ್ತಾ ಬಂದನು. ಯೆಹೋವ ದೇವರು ಅವನ ಸಂಗಡ ಇದ್ದು, ಅವರ ವಾಕ್ಯಗಳಲ್ಲಿ ಒಂದಾದರೂ ಬಿದ್ದು ಹೋಗಗೊಡಿಸಲಿಲ್ಲ. \v 20 ಆಗ ಸಮುಯೇಲನು ಯೆಹೋವ ದೇವರ ಪ್ರವಾದಿಯಾಗಿ ದೃಢಪಟ್ಟನೆಂದು ದಾನ್ ಊರು ಮೊದಲ್ಗೊಂಡು ಬೇರ್ಷೆಬದವರೆಗೂ ಇದ್ದ ಇಸ್ರಾಯೇಲರೆಲ್ಲರು ತಿಳಿದಿದ್ದರು. \v 21 ಯೆಹೋವ ದೇವರು ತಿರುಗಿ ಶೀಲೋವಿನಲ್ಲಿ ಕಾಣಿಸಿಕೊಂಡರು. ಏಕೆಂದರೆ ಶೀಲೋವಿನಲ್ಲಿ ಯೆಹೋವ ದೇವರು ವಾಕ್ಯದ ಮೂಲಕ ಸಮುಯೇಲನಿಗೆ ಪ್ರಕಟಿಸಿಕೊಂಡರು. \c 4 \p \v 1 ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. \s1 ಫಿಲಿಷ್ಟಿಯರು ಮಂಜೂಷವನ್ನು ವಶಪಡಿಸಿಕೊಂಡದ್ದು \p ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು. \v 2 ಫಿಲಿಷ್ಟಿಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧಮಾಡಿದಾಗ, ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಸೋತರು. ಫಿಲಿಷ್ಟಿಯರು ಯುದ್ಧ ರಂಗದಲ್ಲಿ ಹೆಚ್ಚು ಕಡಿಮೆ ನಾಲ್ಕು ಸಾವಿರ ಜನರನ್ನು ಹತಮಾಡಿದರು. \v 3 ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು, “ಈ ಹೊತ್ತು ಯೆಹೋವ ದೇವರು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿದ್ದೇನು? ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ, ನಾವು ಅದನ್ನು ಶೀಲೋವಿನಿಂದ ತರಿಸೋಣ,” ಎಂದರು. \p \v 4 ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು. \p \v 5 ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು. \v 6 ಅವರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿದಾಗ, “ಹಿಬ್ರಿಯರ ಪಾಳೆಯದ ಈ ಮಹಾ ಆರ್ಭಟವೇನು?” ಎಂದು ವಿಚಾರಿಸಿದರು. \p ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳಿದುಕೊಂಡರು. \v 7 “ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ. \v 8 ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವರ‍್ಯಾರು? ಈಜಿಪ್ಟಿನವರನ್ನು ಮರುಭೂಮಿಯಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ. \v 9 ಫಿಲಿಷ್ಟಿಯರೇ, ನೀವು ಬಲಗೊಂಡು ಶೂರರಾಗಿರಿ. ಹಿಬ್ರಿಯರು ನಿಮಗೆ ಗುಲಾಮರಾಗಿ ಮಾಡಿದ ಪ್ರಕಾರ ನೀವು ಅವರಿಗೆ ಗುಲಾಮರಾಗದ ಹಾಗೆ ಶೂರರಾಗಿ ಇದ್ದು, ಯುದ್ಧಮಾಡಿರೆಂದು ಹೇಳಿಕೊಂಡರು. \p \v 10 ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು. \v 11 ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಮರಣಹೊಂದಿದರು. \s1 ಏಲಿಯ ಮರಣ \p \v 12 ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು. \v 13 ಅವನು ಬರುವಾಗ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವುದರಿಂದ, ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನುಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು. \p \v 14 ಕೂಗುವ ಶಬ್ದವನ್ನು ಏಲಿಯು ಕೇಳಿದಾಗ, “ಆ ಗುಂಪಿನ ಶಬ್ದ ಏನು?” ಎಂದನು. \p ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು. \v 15 ಏಲಿಯು ತೊಂಬತ್ತೆಂಟು ವರುಷ ಪ್ರಾಯದವನಾಗಿದ್ದನು. ಅವನು ಕಾಣದ ಹಾಗೆ ಅವನ ಕಣ್ಣುಗಳು ಮಬ್ಬಾಗಿದ್ದವು. \v 16 ಆ ಮನುಷ್ಯನು ಏಲಿಗೆ, “ಯುದ್ಧರಂಗದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿ ಬಂದೆನು,” ಎಂದನು. \p ಆಗ ಅವನು, “ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು?” ಎಂದನು. \p \v 17 ಅದಕ್ಕೆ ವರ್ತಮಾನ ತಂದವನು, “ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ಮರಣಹೊಂದಿದರು. ದೇವರ ಮಂಜೂಷವು ಶತ್ರುವಶವಾಯಿತು,” ಎಂದನು. \p \v 18 ವೃದ್ಧನೂ ಸ್ಥೂಲಕಾಯನೂ ಆದ ಏಲಿಯು ದೇವರ ಮಂಜೂಷದ ಮಾತನ್ನು ಕೇಳಿದಾಗ, ಆಸನದ ಮೇಲಿಂದ ಬಾಗಿಲಿನ ಕಡೆಗೆ ಹಿಂದಕ್ಕೆ ಬಿದ್ದು, ಕುತ್ತಿಗೆ ಮುರಿದು ಮರಣಹೊಂದಿದನು. ಅವನು ನಾಲ್ವತ್ತು ವರುಷ ಇಸ್ರಾಯೇಲರಿಗೆ ನ್ಯಾಯತೀರಿಸಿದನು. \p \v 19 ಇದಲ್ಲದೆ ಫೀನೆಹಾಸನ ಹೆಂಡತಿಯಾದ ಅವನ ಸೊಸೆಯು ಗರ್ಭಿಣಿಯಾಗಿ ಹೆರುವ ಕಾಲದಲ್ಲಿದ್ದಳು. ಅವಳು, ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರೆಂಬುದನ್ನೂ ಕೇಳಿದಾಗ, ಅವಳಿಗೆ ಪ್ರಸವವೇದನೆ ಉಂಟಾಗಿ, ಅವಳು ಗಂಡು ಮಗುವನ್ನು ಹೆತ್ತಳು. \v 20 ಅವಳು ಸಾಯುವ ವೇಳೆಯಲ್ಲಿ, ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು, “ಭಯಪಡಬೇಡ. ಗಂಡು ಮಗುವನ್ನು ಹೆತ್ತಿದ್ದೀ,” ಎಂದು ಅವಳಿಗೆ ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯವನ್ನೂ ಕೊಡಲಿಲ್ಲ, ಪ್ರತ್ಯುತ್ತರವನ್ನೂ ಕೊಡಲಿಲ್ಲ. \p \v 21 ಆದರೆ ಅವಳು ಅದಕ್ಕೆ ಉತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರು ವಶವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರಿಂದಲೂ ದೇವರ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು ಎಂದು ಹೇಳಿ, ಆ ಕೂಸಿಗೆ, “ಈಕಾಬೋದ್,”\f + \fr 4:21 \fr*\fq ಈಕಾಬೋದ್ \fq*\ft ಎಂದರೆ \ft*\fqa ಮಹಿಮೆಯಿಲ್ಲದ್ದು\fqa*\f* ಎಂದು ಹೆಸರಿಟ್ಟಳು. \v 22 ಏಕೆಂದರೆ ಅವಳು, “ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿದಳು. \c 5 \s1 ಅಷ್ಡೋದ್ ಮತ್ತು ಎಕ್ರೋನಿನಲ್ಲಿ ಮಂಜೂಷ \p \v 1 ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು. \v 2 ಫಿಲಿಷ್ಟಿಯರು ದೇವರ ಮಂಜೂಷವನ್ನು ದಾಗೋನನ ಗುಡಿಗೆ ತೆಗೆದುಕೊಂಡುಹೋಗಿ, ದಾಗೋನನ ಪಕ್ಕದಲ್ಲಿಟ್ಟರು. \v 3 ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. \v 4 ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು. \v 5 ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದ್ದರಿಂದ ಈ ದಿನದವರೆಗೂ ದಾಗೋನನ ಯಾಜಕರೂ, ದಾಗೋನನ ಗುಡಿಯನ್ನು ಪ್ರವೇಶಿಸುವವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿಲನ್ನು ತುಳಿಯುವುದಿಲ್ಲ. \p \v 6 ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು. \v 7 ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು. \v 8 ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. \p ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು. \p \v 9 ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು. \v 10 ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. \p ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು. \v 11 ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು. \v 12 ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು. \c 6 \s1 ಮಂಜೂಷವು ಇಸ್ರಾಯೇಲಿಗೆ ಹಿಂದಿರುಗಿ ಬಂದದ್ದು \p \v 1 ಯೆಹೋವ ದೇವರ ಮಂಜೂಷವು ಫಿಲಿಷ್ಟಿಯರ ಸೀಮೆಯಲ್ಲಿ ಏಳು ತಿಂಗಳು ಇದ್ದ ತರುವಾಯ \v 2 ಫಿಲಿಷ್ಟಿಯರು ಯಾಜಕರನ್ನೂ ಕಣಿಹೇಳುವವರನ್ನೂ ಕರೆದು, “ಯೆಹೋವ ದೇವರ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವುದು ನಮಗೆ ತಿಳಿಸಿರಿ,” ಎಂದರು. \p \v 3 ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು. \p \v 4 ಆಗ ಅವರು, “ದೋಷಪರಿಹಾರ ಕಾಣಿಕೆಗಾಗಿ ನಾವು ಅದರ ಸಂಗಡ ಕಳುಹಿಸತಕ್ಕದ್ದೇನು?” ಎಂದರು. \p ಅದಕ್ಕವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವುದರಿಂದ ಫಿಲಿಷ್ಟಿಯರ ಅಧಿಪತಿಗಳ ಸಂಖ್ಯೆಗೆ ಸರಿಯಾಗಿ ಒಬ್ಬೊಬ್ಬರಿಗೆ ಬಂಗಾರದ ಐದು ಗಡ್ಡೆಗಳನ್ನು ಮತ್ತು ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ. \v 5 ಏಕೆಂದರೆ ನಿಮ್ಮೆಲ್ಲರ ನಾಶಕ್ಕೆ ಕಾರಣವಾದ ಈ ಗಡ್ಡೆಗಳ ಹಾಗು ಇಲಿಗಳ ಸ್ವರೂಪಗಳನ್ನು ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಅವರು ನಿಮ್ಮ ಮೇಲೆಯೂ, ನಿಮ್ಮ ದೇವರುಗಳ ಮೇಲೆಯೂ, ನಿಮ್ಮ ಭೂಮಿಯ ಮೇಲೆಯೂ ಇರುವ ತಮ್ಮ ಕೈಯನ್ನು ತೆಗೆದು ಹಗುರಮಾಡುವರು. \v 6 ಈಜಿಪ್ಟಿನವರೂ, ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ, ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವುದೇನು? ದೇವರು ಅವರ ಮಧ್ಯದಲ್ಲಿ ಆಶ್ಚರ್ಯಕರವಾದ ಕ್ರಿಯೆಗಳನ್ನು ನಡಿಸಿದಾಗ, ಅವರು ಇಸ್ರಾಯೇಲರನ್ನು ಅವರು ಹೋಗುವಹಾಗೆ ಕಳುಹಿಸಲಿಲ್ಲವೋ? \p \v 7 “ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ, ನೊಗವನ್ನು ಹಾಕದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು, ಅವುಗಳನ್ನು ಬಂಡಿಗೆ ಕಟ್ಟಿ, ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು, \v 8 ಯೆಹೋವ ದೇವರ ಮಂಜೂಷವನ್ನು ಬಂಡಿಯ ಮೇಲೆ ಇಟ್ಟು, ನೀವು ಕಳುಹಿಸಿಕೊಡುವ ನಿಮ್ಮ ದೋಷಪರಿಹಾರ ಕಾಣಿಕೆಯ ಬಂಗಾರದ ವಸ್ತುಗಳನ್ನು ಅದರ ಪಕ್ಕದಲ್ಲಿ ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ, ಅದು ಹೋಗುವಹಾಗೆ ಕಳುಹಿಸಿರಿ. \v 9 ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು. \p \v 10 ಅವರು ಆ ಪ್ರಕಾರವೇ ಎರಡು ಹಾಲು ಕರೆಯುವ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು \v 11 ಯೆಹೋವ ದೇವರ ಮಂಜೂಷವನ್ನೂ, ಬಂಗಾರದ ಇಲಿಗಳನ್ನೂ, ತಮ್ಮ ಗಡ್ಡೆರೋಗದ ರೂಪಗಳನ್ನೂ ಇಟ್ಟಿರುವ ಚಿಕ್ಕ ಪೆಟ್ಟಿಗೆಯನ್ನೂ ಆ ಬಂಡಿಯ ಮೇಲಿಟ್ಟರು. \v 12 ಆಗ ಹಸುಗಳು ಕೂಗುತ್ತಾ ಬೇತ್ ಷೆಮೆಷ್ ಕಡೆಗೆ ಹೋಗುವ ಮಾರ್ಗವನ್ನು ಹಿಡಿದು, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ ಹೆದ್ದಾರಿಯಲ್ಲಿ ಹೋದವು. ಫಿಲಿಷ್ಟಿಯರ ಅಧಿಪತಿಗಳು ಬೇತ್ ಷೆಮೆಷ್ ಊರಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು. \p \v 13 ಬೇತ್ ಷೆಮೆಷ್ ಊರಿನವರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು, ಅದನ್ನು ಕಂಡದ್ದಕ್ಕೆ ಸಂತೋಷಪಟ್ಟರು. \v 14 ಆ ಬಂಡಿಯು ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಬಂಡೆ ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಹಸುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಿದರು. \v 15 ಲೇವಿಯರು ಯೆಹೋವ ದೇವರ ಮಂಜೂಷವನ್ನೂ, ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳಿದ್ದ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ, ಆ ದೊಡ್ಡ ಬಂಡೆಯ ಮೇಲಿಟ್ಟುಕೊಂಡರು. ಬೇತ್ ಷೆಮೆಷ್ ಊರಿನವರು ಆ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸಮರ್ಪಣೆಗಳನ್ನೂ ಅರ್ಪಿಸಿದರು. \v 16 ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ಕಂಡು, ಅದೇ ದಿನದಲ್ಲಿ ತಿರುಗಿ ಎಕ್ರೋನಿಗೆ ಹೋದರು. \p \v 17 ಫಿಲಿಷ್ಟಿಯರು ದೋಷಪರಿಹಾರ ಕಾಣಿಕೆಗಾಗಿ, ಗಡ್ಡೆರೋಗದ ಬಂಗಾರ ಸ್ವರೂಪಗಳನ್ನು ಅಷ್ಡೋದಿನಿಂದ ಒಂದೂ, ಗಾಜನಿಂದ ಒಂದೂ, ಅಷ್ಕೆಲೋನದಿಂದ ಒಂದೂ, ಗತ್‌ನಿಂದ ಒಂದೂ, ಎಕ್ರೋನಿನಿಂದ ಒಂದೂ ಯೆಹೋವ ದೇವರಿಗೆ ಅರ್ಪಿಸಿದರು. \v 18 ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ ಲೆಕ್ಕಕ್ಕೆ ಸರಿಯಾಗಿದ್ದವು. ಯೆಹೋವ ದೇವರ ಮಂಜೂಷವನ್ನಿಟ್ಟ ದೊಡ್ಡ ಬಂಡೆಯು ಇಂದಿನವರೆಗೂ ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಸಾಕ್ಷಿಯಾಗಿದೆ. \p \v 19 ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು. \v 20 ಯೆಹೋವ ದೇವರು ತಮ್ಮಲ್ಲಿ ದೊಡ್ಡ ನಾಶನಮಾಡಿದ್ದರಿಂದ, ಬೇತ್ ಷೆಮೆಷ್ ಊರಿನವರು ದುಃಖಪಟ್ಟು, “ಈ ಪರಿಶುದ್ಧ ದೇವರಾದ ಯೆಹೋವ ದೇವರ ಮುಂದೆ ನಿಲ್ಲತಕ್ಕವನ್ಯಾರು? ಇಲ್ಲಿಂದ ಮಂಜೂಷವು ಎಲ್ಲಿಗೆ ಹೋಗುವುದು?” ಎಂದು ಹೇಳಿದರು. \p \v 21 ಅವರು ಕಿರ್ಯತ್ ಯಾರೀಮಿನ ನಿವಾಸಿಗಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವ ದೇವರ ಮಂಜೂಷವನ್ನು ತಿರುಗಿ ಕಳುಹಿಸಿದ್ದಾರೆ, ನೀವು ಬಂದು ಅದನ್ನು ನಿಮ್ಮ ಬಳಿಗೆ ತೆಗೆದುಕೊಂಡು ಹೋಗಿರಿ,” ಎಂದು ಹೇಳಿದರು. \c 7 \nb \v 1 ಕಿರ್ಯತ್ ಯಾರೀಮಿನವರು ಬಂದು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡು, ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟರು. ಅವನ ಪುತ್ರನಾದ ಎಲಿಯಾಜರನನ್ನು ಯೆಹೋವ ದೇವರ ಮಂಜೂಷವನ್ನು ಕಾಯಲು ಪ್ರತಿಷ್ಠಿಸಿದರು. \v 2 ಮಂಜೂಷವು ಕಿರ್ಯತ್ ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರ್ಷಗಳಾದವು. \s1 ಸಮುಯೇಲನು ಮಿಚ್ಪೆಯಲ್ಲಿ ಫಿಲಿಷ್ಟಿಯರನ್ನು ಸೋಲಿಸಿದ್ದು \p ಆಗ, ಇಸ್ರಾಯೇಲ್ ಮನೆತನದವರೆಲ್ಲರು ಯೆಹೋವ ದೇವರಿಗೋಸ್ಕರ ಹಂಬಲಿಸಿ ಗೋಳಾಡುತ್ತಿದ್ದರು. \v 3 ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು. \v 4 ಆಗ ಇಸ್ರಾಯೇಲರು ಬಾಳನನ್ನೂ, ಅಷ್ಟೋರೆತನ್ನೂ ತೆಗೆದುಹಾಕಿ, ಯೆಹೋವ ದೇವರೊಬ್ಬರನ್ನೇ ಸೇವಿಸಿದರು. \p \v 5 ಸಮುಯೇಲನು, “ನಾನು ನಿಮಗೋಸ್ಕರವಾಗಿ ಯೆಹೋವ ದೇವರನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲರನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ,” ಎಂದನು. \v 6 ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು. \p \v 7 ಇಸ್ರಾಯೇಲರು ಮಿಚ್ಪೆಯಲ್ಲಿ ಕೂಡಿ ಬಂದರೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರ ಅಧಿಪತಿಗಳು ಇಸ್ರಾಯೇಲರಿಗೆ ವಿರೋಧವಾಗಿ ಏರಿ ಬಂದರು. ಆಗ ಇಸ್ರಾಯೇಲರು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು, \v 8 ಅವರು ಸಮುಯೇಲನಿಗೆ, “ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವವರೆಗೆ, ನೀನು ನಮಗೋಸ್ಕರವಾಗಿ ಪ್ರಾರ್ಥನೆಮಾಡಿ ಮೊರೆಯಿಡುವುದನ್ನು ನಿಲ್ಲಿಸಬೇಡ,” ಎಂದರು. \v 9 ಆಗ ಸಮುಯೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು, ಇಸ್ರಾಯೇಲರಿಗೋಸ್ಕರ ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಉತ್ತರವನ್ನು ದಯಪಾಲಿಸಿದರು. \p \v 10 ಸಮುಯೇಲನು ದಹನಬಲಿಯನ್ನು ಅರ್ಪಿಸುವಾಗ, ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸಮೀಪಕ್ಕೆ ಬಂದರು. ಆಗ ಯೆಹೋವ ದೇವರು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಕಳವಳಗೊಳಿಸಿ, ಇಸ್ರಾಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು. \v 11 ಆಗ ಇಸ್ರಾಯೇಲರು ಮಿಚ್ಪೆಯಿಂದ ಹೊರಟು, ಫಿಲಿಷ್ಟಿಯರನ್ನು ಹಿಂದಟ್ಟಿ, ಬೇತ್ಕಾರಿನವರೆಗೂ ಅವರನ್ನು ಹೊಡೆದರು. \p \v 12 ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್\f + \fr 7:12 \fr*\fq ಎಬೆನೆಜೆರ್ \fq*\ft ಎಂದರೆ \ft*\fqa ಸಹಾಯದ ಕಲ್ಲು\fqa*\f* ಎಂದು ಹೆಸರಿಟ್ಟನು. \p \v 13 ಫಿಲಿಷ್ಟಿಯರು ಸೋತುಹೋದುದರಿಂದ ಇಸ್ರಾಯೇಲಿನ ಮೇರೆಯಲ್ಲಿ ಬರಲೇ ಇಲ್ಲ. ಇದಲ್ಲದೆ ಸಮುಯೇಲನು ಇದ್ದ ದಿವಸಗಳೆಲ್ಲಾ ಯೆಹೋವ ದೇವರ ಕೈ ಫಿಲಿಷ್ಟಿಯರಿಗೆ ವಿರೋಧವಾಗಿತ್ತು. \v 14 ಫಿಲಿಷ್ಟಿಯರು ಇಸ್ರಾಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲ್ಗೊಂಡು ಗತ್ ಊರಿನವರೆಗೂ ಇರುವ ಪಟ್ಟಣಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತಿರುಗಿ ತೆಗೆದುಕೊಂಡರು. ಅವುಗಳ ಮೇರೆಗಳನ್ನು ಇಸ್ರಾಯೇಲರು ಫಿಲಿಷ್ಟಿಯರ ಕೈಯಿಂದ ಬಿಡಿಸಿಕೊಂಡರು. ಇಸ್ರಾಯೇಲಿಗೂ, ಅಮೋರಿಯರಿಗೂ ಮಧ್ಯೆ ಸಮಾಧಾನ ಉಂಟಾಗಿತ್ತು. \p \v 15 ಇದಲ್ಲದೆ ಸಮುಯೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. \v 16 ಅವನು ಪ್ರತಿವರ್ಷ ಹೊರಟು ಬೇತೇಲನ್ನೂ, ಗಿಲ್ಗಾಲನ್ನೂ, ಮಿಚ್ಪೆಯನ್ನೂ ಸುತ್ತಿಕೊಂಡು ಹೋಗಿ ಆ ಸ್ಥಳಗಳಲ್ಲೆಲ್ಲಾ ಇಸ್ರಾಯೇಲರಿಗೆ ನ್ಯಾಯತೀರಿಸಿದನು. \v 17 ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. \c 8 \s1 ಇಸ್ರಾಯೇಲರು ಅರಸನು ಬೇಕೆಂದು ಕೇಳಿಕೊಂಡದ್ದು \p \v 1 ಸಮುಯೇಲನು ವೃದ್ಧನಾದಾಗ ತನ್ನ ಪುತ್ರರನ್ನು ಇಸ್ರಾಯೇಲಿಗೆ ನ್ಯಾಯಾಧಿಪತಿಗಳನ್ನಾಗಿ ಮಾಡಿದನು. \v 2 ಅವನ ಚೊಚ್ಚಲ ಮಗನ ಹೆಸರು ಯೋಯೇಲ್, ಅವನ ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು. \v 3 ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು. \p \v 4 ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು, ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು ಅವನಿಗೆ, \v 5 “ನೀನು ವೃದ್ಧನಾದೆ, ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವುದಿಲ್ಲ. ಈಗ ಎಲ್ಲ ರಾಷ್ಟ್ರಗಳ ಹಾಗೆ ನಮಗೆ ನ್ಯಾಯತೀರಿಸುವುದಕ್ಕೆ ಒಬ್ಬ ಅರಸನನ್ನು ನೇಮಿಸು,” ಎಂದರು. \p \v 6 “ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು,” ಎಂದು ಅವರು ಹೇಳಿದ್ದು ಸಮುಯೇಲನಿಗೆ ಕೆಟ್ಟದ್ದಾಗಿ ಕಾಣಿಸಿತು. ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು. \v 7 ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ. \v 8 ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದ ದಿನವು ಮೊದಲುಗೊಂಡು ಈ ದಿನದವರೆಗೂ ಅವರು ನನ್ನನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿ, ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡುತ್ತಾರೆ. \v 9 ಈಗ ಅವರ ಮಾತನ್ನು ಕೇಳು. ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು, ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬುದನ್ನು ತಿಳಿಸು,” ಎಂದನು. \p \v 10 ಆಗ ಸಮುಯೇಲನು ಒಬ್ಬ ಅರಸನನ್ನು ಕೇಳಿದ ಜನರಿಗೆ ಯೆಹೋವ ದೇವರ ವಾಕ್ಯಗಳನ್ನೆಲ್ಲಾ ಹೇಳಿದನು. \v 11 ಅವನು, “ನಿಮ್ಮನ್ನು ಆಳುವ ಅರಸನ ಅಧಿಕಾರವು ಏನೆಂದರೆ, ಅವನು ನಿಮ್ಮ ಪುತ್ರರನ್ನು ತನ್ನ ರಥಗಳಿಗೋಸ್ಕರ ಸಾರಥಿಗಳನ್ನಾಗಿಯೂ ಕುದುರೆ ಸವಾರರನ್ನಾಗಿಯೂ ತೆಗೆದುಕೊಳ್ಳುವನು. ಕೆಲವರು ಅವನ ರಥಗಳ ಮುಂದೆ ಓಡುವರು. \v 12 ಅವನು ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿಗಳಾಗಿಯೂ, ತನ್ನ ಭೂಮಿಯನ್ನು ಊಳುವವರಾಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ಹಾಗು ತನ್ನ ರಥಸಾಮಗ್ರಿಗಳನ್ನು ಮಾಡುವವರಾಗಿಯೂ ನೇಮಿಸುವನು. \v 13 ಇದಲ್ಲದೆ ಅವನು ನಿಮ್ಮ ಪುತ್ರಿಯರನ್ನು ತೈಲಗಾರ್ತಿಗಳಾಗಿಯೂ, ಅಡುಗೆ ಮಾಡುವವರಾಗಿಯೂ ರೊಟ್ಟಿ ಸುಡುವವರಾಗಿಯೂ ಇಟ್ಟುಕೊಳ್ಳುವನು. \v 14 ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ, ನಿಮ್ಮ ದ್ರಾಕ್ಷಿತೋಟಗಳನ್ನೂ, ನಿಮ್ಮ ಓಲಿವ್ ಮರದ ತೋಪುಗಳನ್ನೂ ತೆಗೆದುಕೊಂಡು ತನ್ನ ಸೇವಕರಿಗೆ ಕೊಡುವನು. \v 15 ನಿಮ್ಮ ಧಾನ್ಯಗಳಲ್ಲಿಯೂ, ನಿಮ್ಮ ದ್ರಾಕ್ಷಿ ಫಲಗಳಲ್ಲಿಯೂ ಹತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ತನ್ನ ಅಧಿಕಾರಿಗಳಿಗೂ, ತನ್ನ ಸೇವಕರಿಗೂ ಕೊಡುವನು. \v 16 ನಿಮ್ಮ ದಾಸರನ್ನೂ, ನಿಮ್ಮ ದಾಸಿಯರನ್ನೂ, ನಿಮ್ಮ ಉತ್ತಮ ಪ್ರಾಯಸ್ಥರನ್ನೂ, ನಿಮ್ಮ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕೆ ಇಡುವನು. \v 17 ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆಯ್ದುಕೊಳ್ಳುವನು. ನೀವು ಅವನಿಗೆ ದಾಸರಾಗುವಿರಿ. \v 18 ನೀವು ನಿಮಗೆ ಆಯ್ದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ, ಆದರೆ ಆ ದಿವಸದಲ್ಲಿ ಯೆಹೋವ ದೇವರು ನಿಮಗೆ ಕಿವಿಗೊಡುವುದಿಲ್ಲ,” ಎಂದನು. \p \v 19 ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು. \v 20 ನಾವು ಸಕಲ ರಾಷ್ಟ್ರಗಳ ಹಾಗೆ ಇರಬೇಕು. ನಮ್ಮ ಅರಸನು ನಮಗೆ ನ್ಯಾಯತೀರಿಸುವನು. ಅವನು ನಮ್ಮ ಮುಂದೆ ಹೊರಟು, ನಮ್ಮ ಪರವಾಗಿ ಯುದ್ಧಗಳನ್ನು ನಡೆಸುವನು,” ಎಂದರು. \p \v 21 ಸಮುಯೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಯೆಹೋವ ದೇವರಿಗೆ ಹೇಳಿದನು. \v 22 ಯೆಹೋವ ದೇವರು ಸಮುಯೇಲನಿಗೆ, “ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು,” ಎಂದರು. \p ಆಗ ಸಮುಯೇಲನು ಇಸ್ರಾಯೇಲ್ ಜನರಿಗೆ, “ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ,” ಎಂದನು. \c 9 \s1 ಸಮುಯೇಲನು ಸೌಲನನ್ನು ಅಭಿಷೇಕಿಸಿದ್ದು \p \v 1 ಬೆನ್ಯಾಮೀನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಬೆನ್ಯಾಮೀನ್ಯನಾದ ಅಫೀಹನ ಮಗನು. ಇವನು ಐಶ್ವರ್ಯವಂತನಾಗಿದ್ದನು. \v 2 ಅವನಿಗೆ ಒಳ್ಳೆಯ ಪ್ರಾಯಸ್ಥನಾದ ಸೌಲನೆಂಬ ಹೆಸರುಳ್ಳ ಒಬ್ಬ ಒಳ್ಳೆಯ ಮಗನಿದ್ದನು. ಇಸ್ರಾಯೇಲರಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನಾದರೂ ಇರಲಿಲ್ಲ. ಅವನ ಭುಜವು ಜನರ ಮಧ್ಯೆ ಕಾಣುವಷ್ಟು ಎತ್ತರವಾಗಿದ್ದನು. \p \v 3 ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದ್ದರಿಂದ ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರೆದುಕೊಂಡು, ಕತ್ತೆಗಳನ್ನು ಹುಡುಕಲು ಹೋಗಬೇಕು,” ಎಂದನು. \v 4 ಹಾಗೆಯೇ ಅವನು ಎಫ್ರಾಯೀಮ್ ಬೆಟ್ಟವನ್ನು ಶಾಲಿಷಾ ದೇಶವನ್ನೂ ದಾಟಿಹೋದನು, ಆದರೆ ಅವು ಸಿಕ್ಕಲಿಲ್ಲ. ಶಾಲೀಮ್ ದೇಶವನ್ನು ಹಾದುಹೋದನು, ಅಲ್ಲಿಯೂ ಅವುಗಳು ಕಾಣದೆ ಹೋದವು. ಅವನು ಬೆನ್ಯಾಮೀನನ ದೇಶವನ್ನು ದಾಟಿ, ಅವುಗಳನ್ನು ಕಾಣದೆ ಹೋದನು. \p \v 5 ಅವರು ಚೂಫ್ ಎಂಬ ದೇಶಕ್ಕೆ ಬಂದಾಗ, ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ, “ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು, ನಮಗೋಸ್ಕರ ಚಿಂತೆ ಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ,” ಎಂದನು. \p \v 6 ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು. \p \v 7 ಆಗ ಸೌಲನು ತನ್ನ ಸೇವಕನಿಗೆ, “ನಾವು ಆ ಮನುಷ್ಯನ ಬಳಿಗೆ ಹೋದರೆ, ಏನು ತೆಗೆದುಕೊಂಡು ಹೋಗೋಣ? ನಮ್ಮ ಚೀಲಗಳಲ್ಲಿ ಇರುವ ರೊಟ್ಟಿ ಮುಗಿದು ಹೋಯಿತು. ದೇವರ ಮನುಷ್ಯನ ಬಳಿಗೆ ತೆಗೆದುಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ. ನಮ್ಮ ಬಳಿಯಲ್ಲಿ ಏನಿದೆ?” ಎಂದನು. \p \v 8 ಅದಕ್ಕೆ ಆ ಸೇವಕನು ಸೌಲನಿಗೆ ಉತ್ತರವಾಗಿ, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ\f + \fr 9:8 \fr*\ft ಸುಮಾರು 3 ಗ್ರಾಂ\ft*\f* ಬೆಳ್ಳಿನಾಣ್ಯ ಇದೆ, ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು,” ಎಂದನು. \v 9 ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು. \p \v 10 ಆಗ ಸೌಲನು ಸೇವಕನಿಗೆ, “ನಿನ್ನ ಮಾತು ಒಳ್ಳೆಯದು. ನಾವು ಹೋಗೋಣ ಬಾ,” ಎಂದನು. ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು. \p \v 11 ಅವರು ದಿಣ್ಣೆಯನ್ನು ಹತ್ತಿ ಪಟ್ಟಣದೊಳಗೆ ಹೋಗುವಾಗ, ನೀರು ಸೇದಲು ಬರುವ ಹುಡುಗಿಯರನ್ನು ಕಂಡು, “ದರ್ಶಿಯು ಇಲ್ಲಿ ಇದ್ದಾನೋ?” ಎಂದು ಅವರನ್ನು ಕೇಳಿದರು. \p \v 12 ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ. \v 13 ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ಗುಡ್ಡದ ಮೇಲೆ ತಿನ್ನಲು ಹೋಗುವರು. ಅವನು ಬರುವವರೆಗೂ ಜನರು ಏನೂ ತಿನ್ನುವುದಿಲ್ಲ. ಅವನು ಬಂದು ಅರ್ಪಣೆಯನ್ನು ಆಶೀರ್ವದಿಸುವನು. ಅನಂತರವೇ ಆಮಂತ್ರಿತರು ಊಟಮಾಡುವರು. ಈಗಲೇ ಹೋಗಿರಿ. ಈ ವೇಳೆಯಲ್ಲಿ ಅವನನ್ನು ಕಂಡುಕೊಳ್ಳುವಿರಿ,” ಎಂದರು. \p \v 14 ಅವರು ಪಟ್ಟಣಕ್ಕೆ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ, ಸಮುಯೇಲನು ಗುಡ್ಡದ ಮೇಲಕ್ಕೆ ಏರಿ ಹೋಗುವುದಕ್ಕೆ ಅವರಿಗೆದುರಾಗಿ ಹೊರಟುಬಂದನು. \p \v 15 ಆದರೆ ಸೌಲನು ಬರುವುದಕ್ಕೆ ಒಂದು ದಿವಸ ಮುಂಚೆ, ಯೆಹೋವ ದೇವರು ಸಮುಯೇಲನಿಗೆ ತಿಳಿಯಪಡಿಸಿದ್ದೇನೆಂದರೆ, \v 16 “ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ. \p \v 17 ಸಮುಯೇಲನು ಸೌಲನನ್ನು ಕಂಡಾಗ ಯೆಹೋವ ದೇವರು, “ಇಗೋ, ನಾನು ನಿನಗೆ ಹೇಳಿದ ಮನುಷ್ಯನು ಇವನೇ. ಇವನೇ ನನ್ನ ಜನರನ್ನು ಆಳುವನು,” ಎಂದರು. \p \v 18 ಸೌಲನು ಊರಿನ ಬಾಗಿಲಲ್ಲಿ ಇರುವ ಸಮುಯೇಲನ ಸಮೀಪಕ್ಕೆ ಬಂದು, ಅವನಿಗೆ, “ದರ್ಶಿಯ ಮನೆಯು ಎಲ್ಲಿ ಇದೆ? ದಯಮಾಡಿ ನೀನು ನನಗೆ ತಿಳಿಸು,” ಎಂದನು. \p \v 19 ಸಮುಯೇಲನು ಸೌಲನಿಗೆ ಉತ್ತರವಾಗಿ, “ದರ್ಶಿಯು ನಾನೇ, ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು. ಈ ಹೊತ್ತು ನೀನು ನನ್ನ ಸಂಗಡ ಊಟಮಾಡಬೇಕು, ನಾಳೆ ಹೊತ್ತಾರೆ ನಿನ್ನನ್ನು ಕಳುಹಿಸುವೆನು. ನಿನ್ನ ಹೃದಯದಲ್ಲಿರುವುದನ್ನೆಲ್ಲಾ ನಿನಗೆ ತಿಳಿಯಪಡಿಸುವೆನು. \v 20 ಇಂದಿಗೆ ಮೂರನೆಯ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ. ಏಕೆಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು? ಅದು ನಿನ್ನ ಮೇಲೆಯೇ ಅಲ್ಲವೋ,” ಎಂದನು. \p \v 21 ಸೌಲನು ಅದಕ್ಕೆ, “ಆದರೆ ನಾನು ಇಸ್ರಾಯೇಲನ ಸಣ್ಣ ಗೋತ್ರವಾದ ಬೆನ್ಯಾಮೀನನು ನಾನಲ್ಲವೋ, ಬೆನ್ಯಾಮೀನನ ಗೋತ್ರದಲ್ಲಿ ನನ್ನ ವಂಶವು ಸಣ್ಣದಾದದ್ದಲ್ಲವೋ? ಇಂಥ ಸಂಗತಿಯನ್ನು ನನಗೇಕೆ ಹೇಳುತ್ತೀ?” ಎಂದನು. \p \v 22 ಆಗ ಸಮುಯೇಲನು ಸೌಲನನ್ನೂ, ಅವನ ಸೇವಕನನ್ನೂ ಕರೆತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳಕ್ಕೆ ಕರಕೊಂಡು ಬಂದನು. \v 23 ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುಯೇಲನು ಅಡಿಗೆಯವನಿಗೆ, “ನಾನು ನಿನ್ನ ಕೈಯಲ್ಲಿ ಕೊಟ್ಟು ಇಡಬೇಕೆಂದು ಹೇಳಿದ ಪಾಲನ್ನು ತಂದಿಡು,” ಎಂದನು. \p \v 24 ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ, ಅದರ ಸಂಗಡ ಇದ್ದುದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುಯೇಲನು ಸೌಲನಿಗೆ, “ನಿನಗಾಗಿ ಪ್ರತ್ಯೇಕಿಸಿದ್ದು ಇದೇ. ನಾನು ಜನರನ್ನು ಭೋಜನಕ್ಕೆ ಕರೆದಿದ್ದೇನೆಂದು ಹೇಳಿದ ಕಾಲದಿಂದ ಈವರೆಗೂ ನಿನಗೋಸ್ಕರ ಪ್ರತ್ಯೇಕವಾಗಿ ಇಟ್ಟಿದ್ದು ಇದೇ, ಇದನ್ನು ತಿನ್ನು,” ಎಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುಯೇಲನ ಸಂಗಡ ಊಟಮಾಡಿದನು. \p \v 25 ಅವರು ಗುಡ್ಡದಿಂದ ಪಟ್ಟಣಕ್ಕೆ ಇಳಿದು ಬಂದಾಗ ಸಮುಯೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು. \v 26 ಅವರು ಉದಯಕಾಲದಲ್ಲಿ ಸೂರ್ಯೋದಯದಲ್ಲಿ ಎದ್ದಾಗ, ಸಮುಯೇಲನು ಸೌಲನನ್ನು ಮಾಳಿಗೆಗೆ ಕರೆದು, “ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಸೌಲನು ಎದ್ದನು, ಆಗ ಸೌಲನೂ, ಸಮುಯೇಲನೂ ಇಬ್ಬರೂ ಹೊರಗೆ ಹೊರಟರು. \v 27 ಪಟ್ಟಣದ ಹೊರಗೆ ಬಂದಾಗ, ಸಮುಯೇಲನು ಸೌಲನಿಗೆ, “ನಾನು ದೇವರ ಸಂದೇಶವನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪ ಹೊತ್ತು ನಿಲ್ಲು. ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು,” ಎಂದನು. \c 10 \p \v 1 ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ. \v 2 ನೀನು ಈ ಹೊತ್ತು ನನ್ನನ್ನು ಬಿಟ್ಟುಹೋದಾಗ, ಬೆನ್ಯಾಮೀನ್ಯರ ಮೇರೆಯಾದ ಚೆಲ್ಚಹಿನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವೆ. ಅವರು ನಿನಗೆ, ‘ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು, ನಿನಗೋಸ್ಕರ ಚಿಂತೆಪಟ್ಟು, ತನ್ನ ಮಗನಿಗೋಸ್ಕರ ಏನು ಮಾಡಲಿ? ಎನ್ನುತ್ತಾನೆ,’ ಎಂದು ಹೇಳುವರು. \p \v 3 “ನೀನು ಆ ಸ್ಥಳವನ್ನು ಬಿಟ್ಟು, ಆ ಕಡೆ ದಾಟಿ, ತಾಬೋರಿನ ಹತ್ತಿರವಿರುವ ಅಲ್ಲೋನ್ ವೃಕ್ಷದ ಬಳಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವೆ. \v 4 ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ, ನಿನಗೆ ಎರಡು ರೊಟ್ಟಿಗಳನ್ನು ಕೊಡುವರು. ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವೆ. \p \v 5 “ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು. \v 6 ಆಗ ಯೆಹೋವ ದೇವರ ಆತ್ಮವು ನಿನ್ನ ಮೇಲೆ ಬರುವುದು. ನೀನು ಅವರ ಸಂಗಡ ಪ್ರವಾದಿಸುವೆ, ಬೇರೆ ಮನುಷ್ಯನಾಗಿ ಮಾರ್ಪಡುವೆ. \v 7 ಈ ಗುರುತುಗಳೆಲ್ಲಾ ನಿನಗೆ ಸಂಭವಿಸಿದಾಗ, ದೇವರು ನಿನ್ನ ಸಂಗಡ ಇರುವುದರಿಂದ ನೀನು ಆ ವೇಳೆಯಲ್ಲಿ ನಿನಗೆ ಕೈಗೂಡಿದ ಹಾಗೆ ಮಾಡು. \p \v 8 “ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು. \s1 ಸೌಲನು ಅರಸನಾದದ್ದು \p \v 9 ಅವನು ಸಮುಯೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ, ದೇವರು ಅವನಿಗೆ ಹೊಸ ಹೃದಯವನ್ನು ಕೊಟ್ಟರು. ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು. \v 10 ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು. \v 11 ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು, ಅವನು ಪ್ರವಾದಿಗಳ ಸಂಗಡವಿದ್ದು ಪ್ರವಾದಿಸುವುದನ್ನು ಕಂಡಾಗ, ಅವರು ಒಬ್ಬರ ಸಂಗಡ ಒಬ್ಬರು, “ಕೀಷನ ಮಗನಿಗೆ ಆದದ್ದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂದರು. \p \v 12 ಅದಕ್ಕೆ ಅಲ್ಲಿಯವನೊಬ್ಬನು, “ಹಾಗಾದರೆ ಅವರ ನಾಯಕರು ಯಾರು?” ಎಂದನು. ಆದ್ದರಿಂದ, “ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂಬ ಗಾದೆ ಉಂಟಾಯಿತು. \v 13 ಅವನು ಪ್ರವಾದಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು. \p \v 14 ಆಗ ಸೌಲನ ಚಿಕ್ಕಪ್ಪನು, “ನೀವು ಎಲ್ಲಿಗೆ ಹೋದಿರಿ?” ಎಂದು ಅವನನ್ನೂ, ಅವನ ಸೇವಕನನ್ನೂ ಕೇಳಿದನು. \p ಅದಕ್ಕವನು, “ಕತ್ತೆಗಳನ್ನು ಹುಡುಕುವುದಕ್ಕೆ, ಅವುಗಳನ್ನು ಕಾಣದೆ ಹೋದುದರಿಂದ ಸಮುಯೇಲನ ಬಳಿಗೆ ಹೋದೆವು,” ಎಂದನು. \p \v 15 ಅದಕ್ಕೆ ಸೌಲನ ಚಿಕ್ಕಪ್ಪನು, “ಸಮುಯೇಲನು ನಿನಗೆ ಏನು ಹೇಳಿದನು? ದಯಮಾಡಿ ನನಗೆ ತಿಳಿಸು,” ಎಂದನು. \p \v 16 ಸೌಲನು ತನ್ನ ಚಿಕ್ಕಪ್ಪನಿಗೆ, “ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು,” ಎಂದನು. ಆದರೆ ಅವನು ಸಮುಯೇಲನು ಹೇಳಿದ ರಾಜ್ಯಭಾರದ ಮಾತನ್ನು ಅವನಿಗೆ ತಿಳಿಸಲಿಲ್ಲ. \p \v 17 ಸಮುಯೇಲನು ಇಸ್ರಾಯೇಲರನ್ನು ಮಿಚ್ಪೆಯಲ್ಲಿ ಯೆಹೋವ ದೇವರ ಬಳಿಗೆ ಒಟ್ಟಾಗಿ ಕರೆದು ಅವರಿಗೆ, \v 18 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮನ್ನು ಈಜಿಪ್ಟಿನವರ ಕೈಯಿಂದಲೂ, ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.’ \v 19 ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಅವರಿಗೆ, ‘ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು,’ ಎಂದು ಹೇಳಿದಿರಿ. ಆದ್ದರಿಂದ ಈಗ ಯೆಹೋವ ದೇವರ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ, ನಿಮ್ಮ ಕುಲಗಳ ಪ್ರಕಾರವಾಗಿಯೂ ಬನ್ನಿರಿ,” ಎಂದನು. \p \v 20 ಸಮುಯೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸಮೀಪಕ್ಕೆ ಬರಮಾಡಿದಾಗ, ಬೆನ್ಯಾಮೀನನ ಗೋತ್ರಕ್ಕೆ ಚೀಟು ಬಿದ್ದಿತು. \v 21 ಅವನು ಬೆನ್ಯಾಮೀನನ ಗೋತ್ರವನ್ನು ಅದರ ಕುಲಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ, ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಆದರೆ ಅವನನ್ನು ಹುಡುಕುವಾಗ, ಅವನು ಸಿಕ್ಕಲಿಲ್ಲ. \v 22 ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. \p ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು. \p \v 23 ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು. \v 24 ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. \p ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು. \p \v 25 ಸಮುಯೇಲನು ರಾಜ್ಯದ ಪದ್ಧತಿಯನ್ನು ಜನರಿಗೆ ಹೇಳಿಕೊಟ್ಟು, ಒಂದು ಪುಸ್ತಕದಲ್ಲಿ ಬರೆದು, ಯೆಹೋವ ದೇವರ ಮುಂದೆ ಇಟ್ಟನು. ಆಗ ಸಮುಯೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು. \p \v 26 ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು. \v 27 ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು. \c 11 \s1 ಸೌಲನು ಯಾಬೇಷ್ ಪಟ್ಟಣವನ್ನು ಉಳಿಸಿ ರಕ್ಷಿಸಿದ್ದು \p \v 1 ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು. \p \v 2 ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು. \p \v 3 ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ, “ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಅವಕಾಶವನ್ನು ಕೊಡು. ನಮ್ಮನ್ನು ರಕ್ಷಿಸುವವರು ಯಾರೂ ಇಲ್ಲದೆ ಹೋದರೆ, ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು,” ಎಂದರು. \p \v 4 ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು. \v 5 ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು. \p \v 6 ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು, \v 7 ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು. \v 8 ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು. \p \v 9 ಆಗ ಅವರು ಬಂದ ದೂತರಿಗೆ, “ನೀವು ಗಿಲ್ಯಾದಿನಲ್ಲಿರುವ ಯಾಬೇಷಿನ ಜನರಿಗೆ, ‘ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವುದು,’ ಎಂದು ಹೇಳಿರಿ,” ಎಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ, ಅವರು ಸಂತೋಷಪಟ್ಟರು. \v 10 ತರುವಾಯ ಯಾಬೇಷಿನ ಜನರು ನಹಾಷನಿಗೆ, “ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನೀನು ನಿನಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡು,” ಎಂದರು. \p \v 11 ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ. \s1 ಅರಸನಾಗಿ ಸೌಲನು \p \v 12 ಆಗ ಜನರು ಸಮುಯೇಲನಿಗೆ, “ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರ‍್ಯಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ, ಅವರನ್ನು ಕೊಂದು ಹಾಕುತ್ತೇವೆ,” ಎಂದರು. \p \v 13 ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು. \p \v 14 ಆಗ ಸಮುಯೇಲನು ಜನರಿಗೆ, “ನಾವು ಗಿಲ್ಗಾಲಿಗೆ ಹೋಗಿ, ಅಲ್ಲಿ ರಾಜ್ಯತ್ವವನ್ನು ದೃಢೀಕರಿಸೋಣ ಬನ್ನಿರಿ,” ಎಂದನು. \v 15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು. \c 12 \s1 ಸಮುಯೇಲನ ವಿಯೋಗ ಭಾಷಣ \p \v 1 ಸಮುಯೇಲನು ಇಸ್ರಾಯೇಲರೆಲ್ಲರಿಗೆ, “ನೀವು ನನಗೆ ಹೇಳಿದ್ದೆಲ್ಲದರಲ್ಲಿ ನಿಮ್ಮ ಮಾತು ಕೇಳಿ, ನಿಮ್ಮ ಮೇಲೆ ಒಬ್ಬ ಅರಸನನ್ನು ಇಟ್ಟೆನು. \v 2 ಈಗ ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ನಾನು ವೃದ್ಧನಾಗಿ ನರೆ ಬಂದವನಾದೆನು. ನನ್ನ ಪುತ್ರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯ ಮೊದಲ್ಗೊಂಡು ಈ ದಿನದವರೆಗೂ ನಿಮ್ಮ ಮುಂದೆ ನಾಯಕನಾಗಿ ನಡೆದುಕೊಂಡಿದ್ದೇನೆ. \v 3 ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು. \p \v 4 ಅವರು, “ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ, ನೀನು ಯಾರ ಕೈಯಿಂದಲೂ ಏನೂ ತೆಗೆದುಕೊಳ್ಳಲಿಲ್ಲ,” ಎಂದರು. \p \v 5 ಆಗ ಅವನು ಅವರಿಗೆ, “ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬುದಕ್ಕೆ ಯೆಹೋವ ದೇವರೇ ನಿಮಗೆ ಸಾಕ್ಷಿಯಾಗಿದ್ದಾರೆ. ಅವರ ಅಭಿಷಿಕ್ತನು ಈ ಹೊತ್ತು ಸಾಕ್ಷಿಯಾಗಿದ್ದಾನೆ,” ಎಂದನು. \p ಅದಕ್ಕವರು, “ಸಾಕ್ಷಿಯಾಗಿದ್ದಾರೆ,” ಎಂದರು. \p \v 6 ಆಗ ಸಮುಯೇಲನು ಜನರಿಗೆ, “ಮೋಶೆಯನ್ನೂ, ಆರೋನನನ್ನೂ ಮುಂದಕ್ಕೆ ತಂದವರೂ, ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರೇ ಇದಕ್ಕೆ ಸಾಕ್ಷಿ. \v 7 ಆದ್ದರಿಂದ ಈಗ ನಿಲ್ಲಿರಿ. ಯೆಹೋವ ದೇವರು ನಿಮಗೂ, ನಿಮ್ಮ ಪಿತೃಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಯೆಹೋವ ದೇವರ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ. \p \v 8 “ಯಾಕೋಬನು ಈಜಿಪ್ಟಿಗೆ ಬಂದ ತರುವಾಯ, ನಿಮ್ಮ ತಂದೆಗಳು ಯೆಹೋವ ದೇವರಿಗೆ ಮೊರೆಯಿಟ್ಟರು. ಆಗ ಯೆಹೋವ ದೇವರು ಮೋಶೆಯನ್ನೂ, ಆರೋನನನ್ನೂ ಕಳುಹಿಸಿದರು. ಇವರು ನಿಮ್ಮ ಪಿತೃಗಳನ್ನು ಈಜಿಪ್ಟಿನಿಂದ ಕರೆತಂದು, ಅವರನ್ನು ಈ ದೇಶದಲ್ಲಿ ವಾಸಿಸುವಂತೆ ಮಾಡಿದರು. \p \v 9 “ಆದರೆ ಅವರು ತಮ್ಮ ದೇವರಾದ ಯೆಹೋವ ದೇವರನ್ನು ಮರೆತು ಹೋದಾಗ, ದೇವರು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟರು. \v 10 ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು. \v 11 ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ,\f + \fr 12:11 \fr*\fq ಬಾರಾಕ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಬೆದಾನ್\fqa*\f* ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು. \p \v 12 “ಆದರೆ ಅಮ್ಮೋನ್ಯರ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧಮಾಡಲು ಬರುವುದನ್ನು ಕಂಡಾಗ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೆ ಅರಸರಾಗಿದ್ದರು. ಆಗ ನೀವು, ‘ನಮಗೆ ಹಾಗೆ ಬೇಡ, ಒಬ್ಬ ಅರಸನು ನಮ್ಮನ್ನು ಆಳಬೇಕು,’ ಎಂದಿರಿ. \v 13 ಈಗ ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಯೆಹೋವ ದೇವರು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾರೆ. \v 14 ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ. \v 15 ನೀವು ಯೆಹೋವ ದೇವರ ಮಾತಿಗೆ ವಿಧೇಯರಾಗದಿದ್ದರೆ, ಯೆಹೋವ ದೇವರ ಆಜ್ಞೆಗೆ ವಿರೋಧವಾಗಿ ತಿರುಗಿಬಿದ್ದರೆ, ಯೆಹೋವ ದೇವರ ಹಸ್ತವು ನಿಮ್ಮ ಪಿತೃಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿರುವುದು. \p \v 16 “ಈಗ ನಿಂತುಕೊಂಡು ಯೆಹೋವ ದೇವರು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ಮಹತ್ಕಾರ್ಯವನ್ನು ನೋಡಿರಿ. \v 17 ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು. \p \v 18 ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು. \p \v 19 ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು. \p \v 20 ಆಗ ಸಮುಯೇಲನು ಜನರಿಗೆ, “ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ. ಆದರೂ ಯೆಹೋವ ದೇವರನ್ನು ಬಿಟ್ಟು ತಿರುಗದೆ, ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರನ್ನು ಸೇವಿಸಿರಿ. \v 21 ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ. \v 22 ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ? \v 23 ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು. \v 24 ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ. \v 25 ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು. \c 13 \s1 ಸಮುಯೇಲನು ಸೌಲನನ್ನು ಗದರಿಸಿದ್ದು \p \v 1 ಸೌಲನು ಅರಸನಾದಾಗ ಮೂವತ್ತು ವರ್ಷ ಪ್ರಾಯದವನಾಗಿದ್ದನು. ಅವನು ಇಸ್ರಾಯೇಲರ ಮೇಲೆ ನಲವತ್ತೆರಡು ವರ್ಷಕಾಲ ಆಳಿದನು. \p \v 2 ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು. \p \v 3 ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು. \v 4 “ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ಸೌಲನು ನಾಶಮಾಡಿದ್ದರಿಂದ, ಇಸ್ರಾಯೇಲರು ಈಗ ಫಿಲಿಷ್ಟಿಯರಿಗೆ ಅಸಹ್ಯಕರ ಶತ್ರುವಾದರು,” ಎಂಬ ವರ್ತಮಾನವನ್ನು ಸಮಸ್ತ ಇಸ್ರಾಯೇಲರು ಕೇಳಿದರು. ಮತ್ತು ಗಿಲ್ಗಾಲಿಗೆ ಬಂದು ಸೌಲನನ್ನು ಸೇರಿಕೊಳ್ಳಲು ಜನರನ್ನು ಕರೆದರು. \p \v 5 ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು. \v 6 ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು. \v 7 ಇದಲ್ಲದೆ ಹಿಬ್ರಿಯರಲ್ಲಿ ಕೆಲವರು ಯೊರ್ದನನ್ನು ದಾಟಿ, ಗಾದ್ ದೇಶಕ್ಕೂ, ಗಿಲ್ಯಾದಿಗೂ ಹೋದರು. \p ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು. ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು. \v 8 ಸೌಲನು ತನಗೆ ಸಮುಯೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುಯೇಲನು ಗಿಲ್ಗಾಲಿಗೆ ಬಾರದೆ ಇದ್ದುದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು. \v 9 ಆಗ ಸೌಲನು, “ದಹನಬಲಿಯನ್ನೂ, ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು. \v 10 ಆದರೆ ಅವನು ದಹನಬಲಿಯನ್ನು ಅರ್ಪಿಸಿ, ತೀರಿಸುವಷ್ಟರೊಳಗೆ ಸಮುಯೇಲನು ಬಂದನು. ಆಗ ಅವನನ್ನು ವಂದಿಸುವುದಕ್ಕಾಗಿ ಸೌಲನು ಅವನನ್ನು ಎದುರುಗೊಳ್ಳಲು ಹೋದನು. \p \v 11 ಆದರೆ ಸಮುಯೇಲನು, “ನೀನೇನು ಮಾಡಿದಿ?” ಎಂದು ಸೌಲನನ್ನು ಕೇಳಿದನು. \p ಸೌಲನು, “ಸೈನಿಕರು ನನ್ನನ್ನು ಬಿಟ್ಟು ಹೋಗುತ್ತಿರುವುದನ್ನು, ನೀನು ನೇಮಿಸಿದ ದಿವಸಗಳ ಪ್ರಕಾರ ಬಾರದಿರುವುದನ್ನು ಮತ್ತು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವುದನ್ನು ಕಂಡೆನು. \v 12 ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು,” ಎಂದನು. \p \v 13 ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು. \v 14 ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು. \p \v 15 ಸಮುಯೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾಮೀನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ, ಅವರು ಸುಮಾರು ಆರುನೂರು ಜನರಿದ್ದರು. \s1 ಇಸ್ರಾಯೇಲರು ಆಯುಧಗಳಿಲ್ಲದೇ ಇದ್ದದ್ದು \p \v 16 ಸೌಲನೂ, ಅವನ ಮಗ ಯೋನಾತಾನನೂ, ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾಮೀನ್ಯರ ಗಿಬೆಯದಲ್ಲಿ ಇದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು. \v 17 ಆಗ ಫಿಲಿಷ್ಟಿಯರ ಪಾಳೆಯದಿಂದ ಸುಲಿದುಕೊಳ್ಳುವವರು ಮೂರು ಗುಂಪಾಗಿ ಹೊರಟರು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು. \v 18 ಮತ್ತೊಂದು ಗುಂಪು ಬೇತ್ ಹೋರೋನಿನ ಮಾರ್ಗವಾಗಿ ಹೋಯಿತು. ಬೇರೊಂದು ಗುಂಪು ಮರುಭೂಮಿಗೆ ಎದುರಾಗಿರುವ ಜೆಬೋಯಿಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು. \p \v 19 “ಹಿಬ್ರಿಯರು ತಮಗೆ ಖಡ್ಗವನ್ನಾದರೂ ಈಟಿಯನ್ನಾದರೂ ಮಾಡಿಕೊಳ್ಳಬಾರದು,” ಎಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ, ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ. \v 20 ಆದ್ದರಿಂದ ಇಸ್ರಾಯೇಲರೆಲ್ಲಾ ತಮ್ಮ ತಮ್ಮ ನೇಗಿಲಿನ ಗುಳಗಳನ್ನೂ, ಸಲಿಕೆಗಳನ್ನೂ, ಕೊಡಲಿಗಳನ್ನೂ, ಗುದ್ದಲಿಗಳನ್ನೂ ಮೊನೆ ಮಾಡುವುದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾಗಿತ್ತು. \v 21 ಆದರೆ ಸಲಿಕೆ, ಗುದ್ದಲಿ, ಕುಂಟೆ, ಮುಳ್ಳುಗೋಲು, ಕೊಡಲಿ, ಅಂಕುಶ ಇವುಗಳನ್ನು ಹದಮಾಡುವುದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು. \p \v 22 ಯುದ್ಧದ ದಿವಸದಲ್ಲಿ ಸೌಲ ಯೋನಾತಾನರ ಜೊತೆಯಲ್ಲಿದ್ದ ಸಮಸ್ತ ಜನರಲ್ಲಿ ಒಬ್ಬನ ಕೈಯಲ್ಲಾದರೂ ಖಡ್ಗವಾಗಲಿ, ಈಟಿಯಾಗಲಿ ಇರಲಿಲ್ಲ. ಆದರೆ ಸೌಲನಿಗೂ, ಅವನ ಪುತ್ರನಾದ ಯೋನಾತಾನನಿಗೂ ಮಾತ್ರವೇ ಇತ್ತು. \s1 ಫಿಲಿಷ್ಟಿಯರ ಮೇಲೆ ಯೋನಾತಾನನ ದಾಳಿ \p \v 23 ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗದತ್ತ ಹೊರಟಿತು. \c 14 \nb \v 1 ಆ ಕಾಲದಲ್ಲಿ, ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಯುವಕನಿಗೆ, “ನಾವು ನಮಗೆದುರಾಗಿರುವ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ,” ಎಂದನು. ಆದರೆ ತಂದೆಗೆ ತಿಳಿಸಲಿಲ್ಲ. \p \v 2 ಸೌಲನು ಗಿಬೆಯದ ಕಟ್ಟಕಡೆಯ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬೆ ಮರದ ಕೆಳಗಿದ್ದನು. ಅವನ ಸಂಗಡ ಸುಮಾರು ಆರುನೂರು ಜನರಿದ್ದರು. \v 3 ಆಗ ಏಲಿಯ ಮಗ ಫೀನೆಹಾಸನ ಮಗ ಈಕಾಬೋದನ ಸಹೋದರ ಅಹೀಟೂಬನ ಮಗ ಅಹೀಯನು ಶೀಲೋವಿನಲ್ಲಿ ಏಫೋದನ್ನು ಧರಿಸಿಕೊಂಡು ಯೆಹೋವ ದೇವರ ಯಾಜಕನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು. \p \v 4 ಯೋನಾತಾನನು ಫಿಲಿಷ್ಟಿಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೊಚೇಚ್, ಸೆನೆ ಎಂಬ ಚೂಪಾದ ಎರಡು ಬಂಡೆಗಳಿದ್ದವು. \v 5 ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ, ಮತ್ತೊಂದು ದಕ್ಷಿಣಕ್ಕೆ ಗಿಬೆಯಕ್ಕೆ ಎದುರಾಗಿಯೂ ಇತ್ತು. \p \v 6 ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು. \p \v 7 ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ, “ನಿನ್ನ ಮನಸ್ಸಿನಲ್ಲಿರುವುದನ್ನೆಲ್ಲಾ ಮಾಡು; ನಡಿ, ನಾನು ನನ್ನ ಸಂಪೂರ್ಣ ಹೃದಯದಿಂದ ನಿನ್ನ ಸಂಗಡ ಇದ್ದೇನೆ,” ಎಂದನು. \p \v 8 ಆಗ ಯೋನಾತಾನನು, “ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು. \v 9 ಅವರು, ‘ನಾವು ನಿಮ್ಮ ಬಳಿಗೆ ಬರುವವರೆಗೆ ಸುಮ್ಮನೆ ನಿಲ್ಲಿರಿ,’ ಎಂದು ನಮ್ಮ ಸಂಗಡ ಹೇಳಿದರೆ; ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. \v 10 ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ,’ ಎಂದು ಹೇಳಿದರೆ ನಾವು ಮೇಲೆ ಹತ್ತಿ ಹೋಗೋಣ. ಏಕೆಂದರೆ ಯೆಹೋವ ದೇವರು ಅವರನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟರೆಂಬುದಕ್ಕೆ ಇದೇ ನಮಗೆ ಗುರುತಾಗಿರುವುದು,” ಎಂದನು. \p \v 11 ಹಾಗೆಯೇ ಅವರಿಬ್ಬರೂ ತಾವು ಫಿಲಿಷ್ಟಿಯರ ಠಾಣ್ಯದವರೆಗೂ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರು, “ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಹಿಬ್ರಿಯರು ಹೊರಟು ಬರುತ್ತಾರೆ,” ಎಂದರು. \v 12 ಠಾಣ್ಯಕ್ಕೆ ಮನುಷ್ಯರು ಯೋನಾತಾನನಿಗೂ, ಅವನ ಆಯುಧ ಹೊರುವವನಿಗೂ, “ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ, ನಿಮಗೆ ಪಾಠ ಕಲಿಸುತ್ತೇನೆ,” ಎಂದು ಕೂಗಿದರು. \p ಆಗ ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ನನ್ನ ಹಿಂದೆ ಏರಿ ಬಾ. ಏಕೆಂದರೆ ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು,” ಎಂದನು. \p \v 13 ಯೋನಾತಾನನು ತನ್ನ ಕೈಗಳಿಂದಲೂ, ಕಾಲುಗಳಿಂದಲೂ ಹತ್ತಿದನು. ಅವನ ಆಯುಧಗಳನ್ನು ಹೊರುವವನು ಅವನ ಹಿಂದೆ ಹತ್ತಿದನು. ಆಗ ಫಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು. \v 14 ಯೋನಾತಾನನೂ, ಅವನ ಆಯುಧಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಸತ್ತವರು ಸುಮಾರು ಇಪ್ಪತ್ತು ಜನರಾಗಿದ್ದರು. \s1 ಇಸ್ರಾಯೇಲರು ಫಿಲಿಷ್ಟಿಯರನ್ನು ಓಡಿಸಿದ್ದು \p \v 15 ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು. \p \v 16 ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ಕಂಡಾಗ, ಆ ಗುಂಪಿನವರು ಕರಗಿ ಹೋಗುತ್ತಾ, ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು. \v 17 ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ, “ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ,” ಎಂದನು. ಅವರು ಲೆಕ್ಕ ನೋಡುವಾಗ, ಯೋನಾತಾನನೂ, ಅವನ ಆಯುಧಗಳನ್ನು ಹೊರುವವನೂ ಇರಲಿಲ್ಲ. \p \v 18 ಆಗ ಸೌಲನು ಅಹೀಯನಿಗೆ, “ನೀನು ದೇವರ ಮಂಜೂಷವನ್ನು ತೆಗೆದುಕೊಂಡು ಬಾ,” ಎಂದನು. ಏಕೆಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲರ ಬಳಿಯಲ್ಲಿತ್ತು. \v 19 ಸೌಲನು ಯಾಜಕನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಫಿಲಿಷ್ಟಿಯರ ದಂಡಿನಲ್ಲಿ ಕೋಲಾಹಲವು ಹೆಚ್ಚಾಯಿತು. ಆದ್ದರಿಂದ ಸೌಲನು ಯಾಜಕನಿಗೆ, “ನಿನ್ನ ಕೈ ಹಿಂದೆ ತೆಗೆದುಕೋ,” ಎಂದನು. \p \v 20 ಆಗ ಸೌಲನೂ, ಅವನ ಸಂಗಡ ಯುದ್ಧಕ್ಕಿದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ, ಫಿಲಿಷ್ಟಿಯರಲ್ಲಿ ಗಲಿಬಿಲಿಯುಂಟಾಗಿ ಒಬ್ಬನ ಖಡ್ಗವು ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನನ್ನು ಕೊಂದುಹಾಕುತ್ತಿದ್ದರು. \v 21 ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರೊಡನೆ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಹಿಬ್ರಿಯರು ಸೌಲ ಮತ್ತು, ಯೋನಾತಾನನ ಜೊತೆ ಇರುವ ಇಸ್ರಾಯೇಲರ ಸಂಗಡ ಕೂಡಿಕೊಂಡರು. \v 22 ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯೀಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲರು ಕೇಳಿದಾಗ, ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದ್ದರು. \v 23 ಹೀಗೆ ಯೆಹೋವ ದೇವರು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದರು. ಆ ಯುದ್ಧವು ಬೇತಾವೆನಿನವರೆಗೂ ನಡೆಯಿತು. \s1 ಯೋನಾತಾನನು ಜೇನು ತಿಂದದ್ದು \p \v 24 ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು. \p \v 25 ದೇಶದ ಜನರೆಲ್ಲರೂ ಅಡವಿಯಲ್ಲಿ ಹೋಗುತ್ತಿರುವಾಗ, ಅಲ್ಲಿ ನೆಲದ ಮೇಲೆ ಜೇನುಗೂಡು ಇತ್ತು. \v 26 ಜನರು ಆ ಅಡವಿಯಲ್ಲಿ ಹೋಗುವಾಗ, ಜೇನುತುಪ್ಪ ಸುರಿಯುತ್ತಿತ್ತು. ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ. \v 27 ಆದರೆ ಯೋನಾತಾನನು ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಕೇಳದೆ ಇದ್ದ ಕಾರಣ, ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ, ಅದನ್ನು ಜೇನು ತೊಟ್ಟಿಯಲ್ಲಿ ಅದ್ದಿ, ತನ್ನ ಬಾಯಿಗೆ ಹಾಕಿಕೊಂಡನು. ಅದರಿಂದ ಅವನ ಕಣ್ಣುಗಳು ಕಳೆಯನ್ನು ಹೊಂದಿದವು. \v 28 ಆಗ ಜನರಲ್ಲಿ ಒಬ್ಬನು ಅವನಿಗೆ, “ ‘ಈ ಹೊತ್ತು ಆಹಾರ ತಿನ್ನುವವರು ಶಾಪಗ್ರಸ್ತರಾಗಲಿ,’ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ,” ಎಂದನು. \p \v 29 ಅದಕ್ಕೆ ಯೋನಾತಾನನು, “ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿದ್ದಾನೆ. ನಾನು ಈ ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ, ನನ್ನ ಕಣ್ಣುಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು. \v 30 ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು. ಏಕೆಂದರೆ ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನು ಹೆಚ್ಚು ಮಂದಿ ಇದ್ದಾರೆ,” ಎಂದನು. \p \v 31 ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ಫಿಲಿಷ್ಟಿಯರನ್ನುಳಿಸದೆ ಹೊಡೆದುದರಿಂದ ಅವರು ಬಹಳವಾಗಿ ದಣಿದು ಹೋದರು. \v 32 ಆದ್ದರಿಂದ ಅವರು ಕೊಳ್ಳೆ ಹೊಡೆದವುಗಳ ಮೇಲೆ ಬಿದ್ದು ಕುರಿಗಳನ್ನೂ, ದನಗಳನ್ನೂ, ಕರುಗಳನ್ನೂ ಹಿಡಿದು, ನೆಲದ ಮೇಲೆ ಕೊಯ್ದು, ಮಾಂಸವನ್ನು ರಕ್ತದ ಸಂಗಡ ತಿಂದರು. \v 33 ಆಗ ಅವರು ಸೌಲನಿಗೆ, “ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವುದರಿಂದ, ಯೆಹೋವ ದೇವರಿಗೆ ವಿರೋಧವಾಗಿ ಪಾಪ ಮಾಡುತ್ತಾರೆ,” ಎಂದು ತಿಳಿಸಿದರು. \p ಅದಕ್ಕವನು, “ನೀವು ನಂಬಿಕೆದ್ರೋಹ ಮಾಡಿದಿರಿ. ಈಗ ಒಂದು ದೊಡ್ಡ ಕಲ್ಲನ್ನು ನನ್ನ ಬಳಿಗೆ ಹೊರಳಿಸಿ ಬಿಡಿರಿ,” ಅಂದನು. \v 34 ಸೌಲನು ಅವರಿಗೆ, “ನೀವು ಜನರಲ್ಲಿ ಚದರಿಹೋಗಿ, ರಕ್ತ ಸಹಿತವಾಗಿ ತಿಂದು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದೆ, ಪ್ರತಿಯೊಬ್ಬನು ತನ್ನ ಎತ್ತನ್ನೂ, ತನ್ನ ಕುರಿಯನ್ನೂ ನನ್ನ ಬಳಿಗೆ ತಂದು, ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ,” ಎಂದನು. \p ಆದ್ದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತೆಗೆದುಕೊಂಡು ಬಂದು, ಅಲ್ಲಿ ಕೊಯ್ದನು. \v 35 ಸೌಲನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಯೆಹೋವ ದೇವರಿಗೆ ಅವನು ಕಟ್ಟಿಸಿದ ಮೊದಲನೆಯ ಬಲಿಪೀಠವು. \p \v 36 ಸೌಲನು ಜನರಿಗೆ, “ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿ ಹೋಗಿ, ಉದಯಕಾಲದವರೆಗೆ ಅವರನ್ನು ಸುಲಿದುಕೊಂಡು, ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು,” ಎಂದನು. \p ಅದಕ್ಕೆ ಜನರು, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ಮಾಡು,” ಎಂದರು. \p ಆಗ ಯಾಜಕನು, “ದೇವರ ಸನ್ನಿಧಿಗೆ ಹೋಗೋಣ,” ಎಂದನು. \p \v 37 ಅದಕ್ಕೆ ಸೌಲನು, “ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀವು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ದೇವರ ಆಲೋಚನೆಯನ್ನು ಕೇಳಿದನು. ಆದರೆ ಅವರು ಅವನಿಗೆ ಆ ದಿವಸದಲ್ಲಿ ಉತ್ತರ ಕೊಡದೆ ಹೋದರು. \p \v 38 ಆಗ ಸೌಲನು, “ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ. ಈ ಹೊತ್ತು ಈ ಪಾಪ ಯಾವುದರಿಂದ ಉಂಟಾಯಿತೆಂದು ತಿಳಿದುಕೊಂಡು ನೋಡಿರಿ. \v 39 ಏಕೆಂದರೆ ನನ್ನ ಪುತ್ರನಾದ ಯೋನಾತಾನನಿಂದಾದರೂ ಉಂಟಾಗಿದ್ದರೆ, ಅವನು ಸತ್ತೇ ಸಾಯುವನೆಂದು ಇಸ್ರಾಯೇಲರನ್ನು ರಕ್ಷಿಸುವ ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ,” ಎಂದನು. ಆದರೆ ಸಮಸ್ತ ಜನರಲ್ಲಿ ಒಬ್ಬನಾದರೂ ಅವನಿಗೆ ಉತ್ತರ ಕೊಡಲಿಲ್ಲ. \p \v 40 ಆಗ ಸೌಲನು ಸಮಸ್ತ ಇಸ್ರಾಯೇಲರಿಗೆ, “ನೀವು ಒಂದು ಕಡೆಯಲ್ಲಿ ಇರಿ. ನಾನೂ, ನನ್ನ ಮಗ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ,” ಎಂದನು. \p ಜನರು ಸೌಲನಿಗೆ, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನು ಮಾಡು,” ಎಂದರು. \p \v 41 ಸೌಲನು ಇಸ್ರಾಯೇಲರ ದೇವರಾದ ಯೆಹೋವ ದೇವರಿಗೆ, “ನೀವು ಪೂರ್ಣ ನಿರ್ಣಯವನ್ನು ದಯಪಾಲಿಸಿರಿ,” ಎಂದು ಹೇಳಿ ಚೀಟು ಹಾಕಿದನು. ಆಗ ಸೌಲನಿಗೂ ಯೋನಾತಾನನಿಗೂ ಚೀಟು ಬಂತು. ಆದರೆ ಜನರು ಪಾರಾದರು. \v 42 ಸೌಲನು ಅವರಿಗೆ, “ನನ್ನ ಮೇಲೆಯೂ ನನ್ನ ಮಗ ಯೋನಾತಾನನ ಮೇಲೆಯೂ ಚೀಟುಹಾಕಿರಿ,” ಎಂದಾಗ, ಯೋನಾತಾನನಿಗೆ ಚೀಟು ಬಿತ್ತು. \p \v 43 ಆಗ ಸೌಲನು ಯೋನಾತಾನನಿಗೆ, “ನೀನು ಮಾಡಿದ್ದನ್ನು ನನಗೆ ತಿಳಿಸು,” ಎಂದನು. \p ಅದಕ್ಕೆ ಯೋನಾತಾನನು, “ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ರುಚಿ ನೋಡಿದೆನು, ನಾನು ಸಾಯಬೇಕು,” ಎಂದನು. \p \v 44 ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು. \p \v 45 ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು. \p \v 46 ಆಗ ಸೌಲನು ಫಿಲಿಷ್ಟಿಯರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಟ್ಟನು. ಫಿಲಿಷ್ಟಿಯರು ತಮ್ಮ ಸ್ಥಳಕ್ಕೆ ಹೋದರು. \p \v 47 ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು. \v 48 ಅವನು ಸೈನ್ಯವನ್ನು ಕೂಡಿಸಿಕೊಂಡು, ಅಮಾಲೇಕ್ಯರನ್ನು ಸಂಹರಿಸಿದನು. ಇಸ್ರಾಯೇಲನ್ನು ಸುಲಿದುಕೊಳ್ಳುವವರ ಸಮಸ್ತರ ಕೈಗೂ ತಪ್ಪಿಸಿದನು. \s1 ಸೌಲನ ಕುಟುಂಬ \p \v 49 ಸೌಲನಿಗೆ ಯೋನಾತಾನನೂ, ಇಷ್ವಿಯೂ, ಮಲ್ಕೀಷೂವನೂ ಎಂಬ ಮೂವರು ಪುತ್ರರೂ; ಹಿರಿಯವಳಾದ ಮೇರಬಳು, ಚಿಕ್ಕವಳಾದ ಮೀಕಲಳು ಎಂಬ ಇಬ್ಬರು ಪುತ್ರಿಯರೂ ಇದ್ದರು. \v 50 ಅಹೀಮಾಚನ ಪುತ್ರಿಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪ ನೇರನ ಮಗ ಅಬ್ನೇರನೆಂಬವನು ಅವನ ಸೈನ್ಯಾಧಿಪತಿಯಾಗಿದ್ದನು. \v 51 ಸೌಲನ ತಂದೆಯಾದ ಕೀಷನೂ ಅಬ್ನೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು. \p \v 52 ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧ ನಡೆಯುತ್ತಿತ್ತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ, ಧೈರ್ಯಶಾಲಿಯನ್ನಾದರೂ ಕಂಡರೆ, ಅಂಥವನನ್ನು ತನ್ನ ಸೈನ್ಯಕ್ಕೆ ಸೇರಿಸಿಕೊಳ್ಳುತ್ತಿದ್ದನು. \c 15 \s1 ಯೆಹೋವ ದೇವರು ಸೌಲನನ್ನು ಅರಸನಾಗಿರುವುದರಿಂದ ತಳ್ಳಿಬಿಟ್ಟದ್ದು \p \v 1 ಸಮುಯೇಲನು ಸೌಲನಿಗೆ, “ಯೆಹೋವ ದೇವರು ತಮ್ಮ ಜನರಾದ ಇಸ್ರಾಯೇಲರ ಮೇಲೆ ನಿನ್ನನ್ನು ಅರಸನಾಗಿರಲು ಅಭಿಷೇಕಿಸಲು ನನ್ನನ್ನು ಕಳುಹಿಸಿದರು. ಈಗ ನೀನು ಯೆಹೋವ ದೇವರ ಮಾತುಗಳನ್ನು ಕೇಳು. \v 2 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು. \v 3 ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು. \p \v 4 ಆಗ ಸೌಲನು ತೆಲಾಯಿಮಿನಲ್ಲಿ ಜನರನ್ನು ಕೂಡಿಸಿ, ಲೆಕ್ಕ ಮಾಡಿದನು. ಇಸ್ರಾಯೇಲರ ಕಾಲಾಳುಗಳು ಎರಡು ಲಕ್ಷ ಜನರೂ, ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು. \v 5 ಸೌಲನು ಅಮಾಲೇಕ್ಯರ ಪಟ್ಟಣದವರೆಗೂ ಬಂದು, ತಗ್ಗಿನಲ್ಲಿ ಹೊಂಚಿಹಾಕಿದ್ದನು. \v 6 ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು. \p \v 7 ಆಗ ಸೌಲನು ಹವೀಲದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿಗೆ ಹೋಗುವ ಮೇರೆಯವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು, \v 8 ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು, ಆದರೆ ಸಮಸ್ತ ಜನರನ್ನು ಖಡ್ಗದಿಂದ ಸಂಪೂರ್ಣ ನಾಶಮಾಡಿದನು. \v 9 ಸೌಲನೂ, ಅವನ ಜನರೂ ಅಗಾಗನನ್ನೂ ಮೇಲ್ತರವಾದ ಕುರಿಗಳನ್ನೂ ದನಗಳನ್ನೂ ಕುರಿಮರಿಗಳನ್ನೂ, ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದರು. ಆದರೆ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು. \p \v 10 ಆಗ ಯೆಹೋವ ದೇವರ ವಾಕ್ಯವು ಸಮುಯೇಲನಿಗೆ ಉಂಟಾಗಿ, \v 11 “ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು. \p \v 12 ಸಮುಯೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಅವನಿಗೆ ಹೀಗೆ ಹೇಳಲಾಗಿತ್ತು, “ಸೌಲನು ತನ್ನ ನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲು ಕರ್ಮೆಲಿಗೆ ಹೋಗಿದ್ದಾನೆ. ನಂತರ ಅಲ್ಲಿಂದ ಮುಂದೆ ಹೋಗಿ ಗಿಲ್ಗಾಲಿಗೆ ಹೋಗಿದ್ದಾನೆ.” \p \v 13 ಸಮುಯೇಲನು ಸೌಲನ ಬಳಿಗೆ ಬಂದಾಗ, ಸೌಲನು ಅವನಿಗೆ, “ನಿನಗೆ ಯೆಹೋವ ದೇವರ ಆಶೀರ್ವಾದವಾಗಲಿ; ನಾನು ಯೆಹೋವ ದೇವರ ಆಜ್ಞೆಯನ್ನು ಈಡೇರಿಸಿದೆನು,” ಎಂದನು. \p \v 14 ಆಗ ಸಮುಯೇಲನು ಅವನಿಗೆ, “ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು?” ಎಂದನು. \p \v 15 ಅದಕ್ಕೆ ಸೌಲನು, “ಜನರು ಅಮಾಲೇಕ್ಯರ ಬಳಿಯಿಂದ ತೆಗೆದುಕೊಂಡು ಬಂದವುಗಳು; ಏಕೆಂದರೆ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸುವುದಕ್ಕೋಸ್ಕರ ಮೇಲ್ತರವಾದ ಪಶುಕುರಿಗಳನ್ನು ಉಳಿಸಿಟ್ಟು, ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು,” ಎಂದನು. \p \v 16 ಆಗ ಸಮುಯೇಲನು ಸೌಲನಿಗೆ, “ಅದಿರಲಿ, ಯೆಹೋವ ದೇವರು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು,” ಎಂದನು. \p ಅದಕ್ಕವನು, “ಹೇಳು,” ಎಂದನು. \p \v 17 ಆಗ ಸಮುಯೇಲನು, “ನೀನು ನಿನ್ನ ದೃಷ್ಟಿಯಲ್ಲಿ ಚಿಕ್ಕವನಾಗಿರುವಾಗಲೇ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ನೇಮಕವಾದಿಯಲ್ಲವೆ? ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿ ಅಭಿಷೇಕಿಸಿದರಲ್ಲವೆ? \v 18 ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು. \v 19 ಹೀಗಿರುವಾಗ ನೀನು ಏಕೆ ಯೆಹೋವ ದೇವರ ಮಾತಿಗೆ ವಿಧೇಯನಾಗದೆ, ಕೊಳ್ಳೆಯ ಮೇಲೆ ಬಿದ್ದು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ?” ಎಂದನು. \p \v 20 ಆಗ ಸೌಲನು ಸಮುಯೇಲನಿಗೆ, “ಹೌದು, ನಾನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ಯೆಹೋವ ದೇವರು ನನ್ನನ್ನು ಕಳುಹಿಸಿದ ಮಾರ್ಗವಾಗಿ ಹೋಗಿ, ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು, ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು. \v 21 ಆದರೆ ಜನರು ನಿನ್ನ ದೇವರಾದ ಯೆಹೋವ ದೇವರಿಗೆ ಗಿಲ್ಗಾಲಿನಲ್ಲಿ ಬಲಿ ಕೊಡುವುದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣವಾಗಿ ನಾಶಮಾಡಬೇಕೆಂದಿರುವ ದನಕುರಿಗಳಲ್ಲಿ ಉತ್ತಮವಾದವುಗಳನ್ನು ಹಿಡಿದುಕೊಂಡು ಬಂದರು,” ಎಂದನು. \p \v 22 ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, \q1 “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, \q2 ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ \q2 ಯಜ್ಞಗಳಲ್ಲಿಯೂ ಆಗುವುದೋ? \q1 ಇಗೋ, ಯಜ್ಞಕ್ಕಿಂತ ವಿಧೇಯತೆಯು, \q2 ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು. \q1 \v 23 ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. \q2 ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. \q1 ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ \q2 ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.” \p \v 24 ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು. \v 25 ಆದ್ದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ, ನಾನು ಯೆಹೋವ ದೇವರನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರುಗಿ ಬಾ,” ಎಂದು ಬೇಡಿಕೊಂಡನು. \p \v 26 ಆದರೆ ಸಮುಯೇಲನು ಸೌಲನಿಗೆ, “ನಾನು ನಿನ್ನ ಸಂಗಡ ಹಿಂದಿರುಗಿ ಬರುವುದಿಲ್ಲ. ಏಕೆಂದರೆ ನೀನು ಯೆಹೋವ ದೇವರ ವಾಕ್ಯವನ್ನು ತಿರಸ್ಕರಿಸಿದ್ದೀ. ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿರದ ಹಾಗೆ ತಿರಸ್ಕಾರಮಾಡಿಬಿಟ್ಟರು,” ಎಂದು ಹೇಳಿದನು. \p \v 27 ಸಮುಯೇಲನು ಹೋಗುವುದಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡಿದುಕೊಂಡನು. ಆಗ ಅದು ಹರಿದುಹೋಯಿತು. \v 28 ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು. \v 29 ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು. \p \v 30 ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು. \v 31 ಹಾಗೆಯೇ ಸಮುಯೇಲನು ತಿರುಗಿ ಸೌಲನ ಹಿಂದೆ ಹೋದನು. ಸೌಲನು ಯೆಹೋವ ದೇವರನ್ನು ಆರಾಧಿಸಿದನು. \p \v 32 ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. \p ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು. \p \v 33 ಆದರೆ ಸಮುಯೇಲನು ಅವನಿಗೆ, \q1 “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, \q2 ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” \m ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು. \p \v 34 ಸಮುಯೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. \v 35 ಸಮುಯೇಲನು ತಾನು ಸಾಯುವ ದಿವಸದವರೆಗೂ ಸೌಲನನ್ನು ತಿರುಗಿ ಕಾಣಲು ಬರಲಿಲ್ಲ. ಸಮುಯೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಮಾಡಿದ್ದಕ್ಕೋಸ್ಕರ ಯೆಹೋವ ದೇವರು ದುಃಖಪಟ್ಟರು. \c 16 \s1 ಸಮುಯೇಲನು ದಾವೀದನನ್ನು ಅಭಿಷೇಕಿಸಿದ್ದು \p \v 1 ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು. \p \v 2 ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. \p ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ, \v 3 ಇಷಯನನ್ನು ಯಜ್ಞವನ್ನು ಅರ್ಪಿಸುವುದಕ್ಕೆ ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವೆನು. ನಾನು ನಿನಗೆ ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ನನಗೋಸ್ಕರ ಅಭಿಷೇಕಿಸಬೇಕು,” ಎಂದರು. \p \v 4 ಯೆಹೋವ ದೇವರು ಹೇಳಿದ ಪ್ರಕಾರ ಸಮುಯೇಲನು ಮಾಡಿ, ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ, ಅವನಿಗೆ, “ಸಮಾಧಾನವಾಗಿ ಬಂದೆಯೋ?” ಎಂದರು. \p \v 5 ಅದಕ್ಕವನು, “ಸಮಾಧಾನವೇ, ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನನ್ನ ಸಂಗಡ ಯಜ್ಞಮಾಡುವುದಕ್ಕೆ ಬನ್ನಿರಿ,” ಎಂದನು. ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧಮಾಡಿ, ಅವರನ್ನು ಯಜ್ಞಮಾಡುವುದಕ್ಕೆ ಕರೆದನು. \p \v 6 ಅವರು ಬಂದಾಗ, ಅವನು ಎಲೀಯಾಬನನ್ನು ಕಂಡು, “ನಿಶ್ಚಯವಾಗಿ ಯೆಹೋವ ದೇವರ ಅಭಿಷಿಕ್ತನು ಅವರ ಮುಂದೆ ಇದ್ದಾನೆ,” ಎಂದುಕೊಂಡನು. \p \v 7 ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು. \p \v 8 ಆಗ ಇಷಯನು ಅಬೀನಾದಾಬನನ್ನು ಕರೆದು ಅವನನ್ನು ಸಮುಯೇಲನ ಮುಂದೆ ಬರಮಾಡಿದನು. ಆದರೆ ಅವನು ಇವನನ್ನು, “ಯೆಹೋವ ದೇವರು ಆರಿಸಿಕೊಳ್ಳಲಿಲ್ಲ,” ಎಂದನು. \v 9 ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು, “ಇವನನ್ನು ಯೆಹೋವ ದೇವರು ಆಯ್ದುಕೊಳ್ಳಲಿಲ್ಲ,” ಎಂದನು. \v 10 ಅನಂತರ ಇಷಯನು ತನ್ನ ಏಳುಮಂದಿ ಪುತ್ರರನ್ನು ಸಮುಯೇಲನ ಮುಂದೆ ಬರಮಾಡಿದನು. ಆದರೆ ಸಮುಯೇಲನು ಇಷಯನಿಗೆ, “ಯೆಹೋವ ದೇವರು ಇವರಲ್ಲಿ ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ,” ಎಂದನು. \v 11 ಸಮುಯೇಲನು, “ನಿನಗಿರುವ ಮಕ್ಕಳು ಇಷ್ಟೇನೋ?” ಎಂದು ಇಷಯನನ್ನು ಕೇಳಿದನು. \p ಅದಕ್ಕವನು, “ಇವರೆಲ್ಲರಿಗಿಂತಲೂ ಚಿಕ್ಕವನೊಬ್ಬನು ಉಳಿದಿದ್ದಾನೆ. ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ,” ಎಂದನು. \p ಆಗ ಸಮುಯೇಲನು ಇಷಯನಿಗೆ, “ಅವನನ್ನು ಕರೆಕಳುಹಿಸು. ಏಕೆಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕುಳಿತುಕೊಳ್ಳಬಾರದು,” ಎಂದನು. \p \v 12 ಆಗ ಇಷಯನು ಅವನನ್ನು ಕರೆಯಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ, ಸುಂದರ ಮುಖವುಳ್ಳವನಾಗಿಯೂ, ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. \p ಆಗ ಯೆಹೋವ ದೇವರು ಸಮುಯೇಲನಿಗೆ, “ನೀನೆದ್ದು ಇವನನ್ನು ಅಭಿಷೇಕಿಸು. ಇವನು ಅವನೇ,” ಎಂದರು. \p \v 13 ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು. \s1 ಸೌಲನ ಸೇವೆಯಲ್ಲಿ ದಾವೀದ \p \v 14 ಯೆಹೋವ ದೇವರ ಆತ್ಮರು ಸೌಲನನ್ನು ಬಿಟ್ಟುಹೋಗಲು, ದೇವರಿಂದ ಬಂದ ದುರಾತ್ಮವು ಅವನನ್ನು ಪೀಡಿಸಿತು. \p \v 15 ಆಗ ಸೌಲನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಹೆದರಿಸುತ್ತದೆ. \v 16 ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳಬೇಕು. ದೇವರಿಂದ ಬಂದ ದುರಾತ್ಮವು ನಿನ್ನ ಮೇಲೆ ಬಂದಿರುವಾಗ, ಅವನು ತನ್ನ ಕೈಯಿಂದ ವಾದ್ಯ ಬಾರಿಸಿದರೆ, ನಿನಗೆ ಒಳ್ಳೆಯದಾಗಿರುವುದು,” ಎಂದರು. \p \v 17 ಸೌಲನು ತನ್ನ ಸೇವಕರಿಗೆ, “ವಾದ್ಯ ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದನು. \p \v 18 ಆಗ ಸೇವಕರಲ್ಲಿ ಒಬ್ಬನು ಅವನಿಗೆ ಉತ್ತರವಾಗಿ, “ವಾದ್ಯ ಬಾರಿಸಲು ನಿಪುಣನಾದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ಕಂಡೆನು. ಅವನು ಧೈರ್ಯಶಾಲಿಯೂ, ಪರಾಕ್ರಮಶಾಲಿಯೂ, ರಣಶೂರನೂ, ವಾಕ್ಚತುರನೂ, ಸುಂದರನೂ ಆಗಿದ್ದಾನೆ. ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇದ್ದಾರೆ,” ಎಂದನು. \p \v 19 ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ, “ಕುರಿಗಳ ಬಳಿಯಲ್ಲಿ ಇರುವ ನಿನ್ನ ಪುತ್ರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದನು. \v 20 ಆಗ ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಮೇಕೆಯ ಮರಿಯನ್ನೂ ಕತ್ತೆಯ ಮೇಲೆ ಹೇರಿ, ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು. \p \v 21 ಹಾಗೆಯೇ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಇವನನ್ನು ಬಹಳವಾಗಿ ಮೆಚ್ಚಿದನು. ಅವನನ್ನು ತನ್ನ ಆಯುಧ ಹೊರುವವರಲ್ಲಿ ಒಬ್ಬನನ್ನಾಗಿ ನೇಮಿಸಿಕೊಂಡನು. \v 22 ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ, “ದಾವೀದನು ನನ್ನ ಸಮ್ಮುಖದಲ್ಲಿ ಸೇವೆಮಾಡಲಿ. ಏಕೆಂದರೆ ನಾನು ದಾವೀದನನ್ನು ಮೆಚ್ಚಿದ್ದೇನೆ,” ಎಂದನು. \p \v 23 ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ, ದಾವೀದನು ಕಿನ್ನರಿಯನ್ನು ತೆಗೆದುಕೊಂಡು, ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವುದು. \c 17 \s1 ದಾವೀದ ಮತ್ತು ಗೊಲ್ಯಾತ \p \v 1 ಫಿಲಿಷ್ಟಿಯರು ಯುದ್ಧಮಾಡುವುದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋವಿನಲ್ಲಿ ಕೂಡಿಸಿದರು. ಅಜೇಕಕ್ಕೂ ಸೋಕೋವಿಗೂ ಮಧ್ಯದಲ್ಲಿರುವ ಎಫೆಸ ದಮ್ಮೀಮಿನಲ್ಲಿ ದಂಡಿಳಿದರು. \v 2 ಸೌಲನೂ, ಇಸ್ರಾಯೇಲರೂ ಕೂಡಿಕೊಂಡರು. ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು, ಫಿಲಿಷ್ಟಿಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು. \v 3 ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ, ಇಸ್ರಾಯೇಲರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ತಗ್ಗು ಇತ್ತು. \p \v 4 ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಬಂದನು. ಅವನ ಎತ್ತರ ಸುಮಾರು ಮೂರು ಮೀಟರ್. \v 5 ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣ ಇತ್ತು. ಪರೆಪರೆಯಾಗಿ ಜೋಡಿಸಲಾಗಿದ್ದ ಕವಚವನ್ನು ಅವನು ತೊಟ್ಟುಕೊಂಡಿದ್ದನು. ಆ ಕವಚವು ಸುಮಾರು ಐವತ್ತೇಳು ಕಿಲೋಗ್ರಾಂ ತೂಕವಾಗಿತ್ತು. \v 6 ಅವನ ಕಾಲುಗಳಲ್ಲಿ ಕಂಚಿನ ಚಮ್ಮಳಿಗೆ. ಅವನ ತೋಳುಗಳ ಮಧ್ಯದಲ್ಲಿ ಭರ್ಜಿ ಇದ್ದವು. \v 7 ಅವನ ಈಟಿಯ ಕೋಲು ನೇಕಾರರ ಕುಂಟೆಯಷ್ಟು ಗಾತ್ರದಾಗಿತ್ತು. ಅವನ ಈಟಿಯ ಅಲಗು ಏಳು ಕಿಲೋಗ್ರಾಂ ತೂಕವಾಗಿತ್ತು. \p \v 8 ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾಯೇಲ್ ಸೈನ್ಯಗಳಿಗೆ ಕೂಗಿ ಹೇಳಿದ್ದೇನೆಂದರೆ, “ಏಕೆ ನೀವು ವ್ಯೂಹ ಕಟ್ಟಿಕೊಳ್ಳ ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆಯ್ದುಕೊಳ್ಳಿರಿ. ಅವನು ನನ್ನ ಮುಂದೆ ಬರಲಿ. \v 9 ಅವನು ನನ್ನ ಸಂಗಡ ಯುದ್ಧಮಾಡಿ ನನ್ನನ್ನು ಕೊಂದರೆ, ನಾವು ನಿಮಗೆ ಸೇವಕರಾಗುವೆವು. ಆದರೆ ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು,” ಎಂದನು. \v 10 ಆ ಫಿಲಿಷ್ಟಿಯನು, “ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ. ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ,” ಎಂದನು. \v 11 ಸೌಲನೂ, ಸಮಸ್ತ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಹೆದರಿಕೊಂಡು ಬಹು ಭಯಪಟ್ಟರು. \p \v 12 ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾಗಿದ್ದನು. ಈ ಇಷಯನಿಗೆ ಎಂಟು ಮಂದಿ ಪುತ್ರರಿದ್ದರು. ಸೌಲನ ಕಾಲದಲ್ಲಿ ಇಷಯನು ವೃದ್ಧನಾಗಿದ್ದನು. \v 13 ಇಷಯನ ಮೂವರು ಹಿರಿಯ ಪುತ್ರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಪುತ್ರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು, ಎರಡನೆಯವನ ಹೆಸರು ಅಬೀನಾದಾಬನು; ಮೂರನೆಯವನ ಹೆಸರು ಶಮ್ಮನು; \v 14 ಆದರೆ ದಾವೀದನು ಚಿಕ್ಕವನಾಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. \v 15 ದಾವೀದನು ಸೌಲನನ್ನು ಬಿಟ್ಟು, ತನ್ನ ತಂದೆಯ ಕುರಿಗಳನ್ನು ಮೇಯಿಸಲು ಬೇತ್ಲೆಹೇಮಿಗೆ ಆಗಾಗ ಹೋಗುತ್ತಿದ್ದನು. \p \v 16 ಆದರೆ ಆ ಫಿಲಿಷ್ಟಿಯನು ಪ್ರತಿ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು. \p \v 17 ಇಷಯನು ತನ್ನ ಮಗನಾದ ದಾವೀದನಿಗೆ, “ನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ, ಈ ಹತ್ತು ರೊಟ್ಟಿಗಳನ್ನೂ ತೆಗೆದುಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಹೋಗು. \v 18 ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಪ್ರಧಾನನಿಗೆ ಕೊಟ್ಟು, ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ, ಅವರ ಗುರುತನ್ನು ತೆಗೆದುಕೊಂಡು ಬಾ,” ಎಂದನು. \v 19 ಆಗ ಸೌಲನೂ, ಇಸ್ರಾಯೇಲರೆಲ್ಲರೂ ಫಿಲಿಷ್ಟಿಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧ ಮಾಡುತ್ತಿದ್ದರು. \p \v 20 ದಾವೀದನು ಉದಯಕಾಲದಲ್ಲಿ ಎದ್ದು, ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು, ತನ್ನ ತಂದೆ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತೆಗೆದುಕೊಂಡುಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ, ಸಲಕರಣೆಗಳು ಇರುವ ಸ್ಥಳಕ್ಕೆ ಬಂದನು. \v 21 ಇಸ್ರಾಯೇಲರೂ, ಫಿಲಿಷ್ಟಿಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು. \v 22 ಆಗ ದಾವೀದನು ತಾನು ತೆಗೆದುಕೊಂಡು ಬಂದದ್ದನ್ನು, ವಸ್ತುಗಳನ್ನು ಕಾಯುವವನ ಕೈಯಲ್ಲಿ ಇಟ್ಟುಬಿಟ್ಟು, ರಣರಂಗಕ್ಕೆ ಓಡಿಹೋಗಿ, ತನ್ನ ಸಹೋದರರ ಬಳಿಗೆ ಬಂದು, ಯೋಗಕ್ಷೇಮ ವಿಚಾರಿಸಿದನು. \v 23 ಅವನು ಇವರ ಸಂಗಡ ಮಾತನಾಡಿಕೊಳ್ಳುತ್ತಾ ಇರುವಾಗ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು, ಮೊದಲಿನ ಹಾಗೆಯೇ ಮಾತನಾಡಿದನು. ಆ ಮಾತುಗಳನ್ನು ದಾವೀದನು ಕೇಳಿದನು. \v 24 ಇಸ್ರಾಯೇಲರೆಲ್ಲರೂ ಅವನನ್ನು ಕಂಡಾಗ, ಅವನ ಬಳಿಯಿಂದ ಓಡಿಹೋದರು; ಬಹು ಭಯಪಟ್ಟರು. \p \v 25 ಇಸ್ರಾಯೇಲರು, “ಏರಿ ಬಂದ ಈ ಮನುಷ್ಯನನ್ನು ಕಂಡಿರೋ? ಇಸ್ರಾಯೇಲನ್ನು ಪ್ರತಿಭಟಿಸಿ ಏರಿ ಬಂದಿದ್ದಾನಲ್ಲ. ಯಾವನು ಇವನನ್ನು ಕೊಂದು ಬಿಡುವನೋ, ಅವನನ್ನು ಅರಸನು ಬಹಳ ಐಶ್ವರ್ಯವಂತನನ್ನಾಗಿ ಮಾಡಿ, ಅವನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿಸುವನು ಮತ್ತು ಅವನ ತಂದೆಯ ಮನೆಯನ್ನು ಇಸ್ರಾಯೇಲರಲ್ಲಿ ತೆರಿಗೆಯಿಂದ ವಿಮೋಚಿಸುವನು,” ಎಂದರು. \p \v 26 ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು. \p \v 27 ಜನರು ಆ ಮಾತಿಗೆ ಸರಿಯಾಗಿ, “ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದರು. \p \v 28 ದಾವೀದನು ಆ ಮನುಷ್ಯರ ಸಂಗಡ ಮಾತನಾಡುತ್ತಿರುವುದನ್ನು ಅವನ ಹಿರಿಯ ಸಹೋದರನಾದ ಎಲೀಯಾಬನು ಕೇಳಿ, ಅವನ ಮೇಲೆ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ, ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು. ಏಕೆಂದರೆ ಯುದ್ಧವನ್ನು ನೋಡಲು ಇಳಿದು ಬಂದಿದ್ದೀ,” ಎಂದನು. \p \v 29 ಅದಕ್ಕೆ ದಾವೀದನು, “ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೇ?” ಎಂದನು. \v 30 ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರುಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಉತ್ತರವನ್ನು ಹೇಳಿದರು. \v 31 ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನ ಮುಂದೆ ತಿಳಿಸಿದರು. ಸೌಲನು ದಾವೀದನನ್ನು ಕರೆಯಿಸಿದನು. \p \v 32 ಆಗ ದಾವೀದನು ಸೌಲನಿಗೆ, “ಅವನ ನಿಮಿತ್ತವಾಗಿ ಯಾವ ಹೃದಯವೂ ಕುಗ್ಗಬಾರದು. ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧಮಾಡುವನು,” ಎಂದನು. \p \v 33 ಆಗ ಸೌಲನು ದಾವೀದನಿಗೆ, “ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು, ಏಕೆಂದರೆ ನೀನು ಹುಡುಗನಾಗಿದ್ದೀಯೆ. ಆದರೆ ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ,” ಎಂದನು. \p \v 34 ದಾವೀದನು ಸೌಲನಿಗೆ, “ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿರುವ ಕುರಿಮರಿಯನ್ನು ಹಿಡಿದವು. \v 35 ಆಗ ನಾನು ಅದರ ಹಿಂದೆ ಹೋಗಿ, ಅದನ್ನು ಹೊಡೆದುಬಿಟ್ಟು, ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂದಿರುಗಿ ಬಿದ್ದಾಗ, ನಾನು ಅದರ ಗಡ್ಡವನ್ನು ಹಿಡಿದು, ಹೊಡೆದು ಕೊಂದುಹಾಕಿದೆನು. \v 36 ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು. \v 37 ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. \p ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು. \p \v 38 ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ಧರಿಸಲು ಹೇಳಿ, ಅವನ ತಲೆಯ ಮೇಲೆ ಒಂದು ಕಂಚಿನ ಶಿರಸ್ತ್ರಾಣವನ್ನು ಇಟ್ಟು, ಅವನಿಗೆ ಕವಚವನ್ನು ತೊಡಿಸಿದನು. \v 39 ದಾವೀದನು ಅವನ ಖಡ್ಗವನ್ನು ತನ್ನ ಕವಚಗಳ ಮೇಲೆ ಕಟ್ಟಿಕೊಂಡು ನಡೆದು ಪರೀಕ್ಷಿಸಿದನು. ಆದರೆ ಅವನಿಗೆ ಅದರ ಅಭ್ಯಾಸವಿರಲಿಲ್ಲ. \p ಆಗ ದಾವೀದನು ಸೌಲನಿಗೆ, “ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗಲಾರೆನು,” ಎಂದು ಹೇಳಿ, ಅವುಗಳನ್ನು ಬಿಚ್ಚಿಹಾಕಿ \v 40 ತನ್ನ ಕೋಲನ್ನು ಕೈಯಲ್ಲಿ ಹಿಡಿದು, ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆಯ್ದುಕೊಂಡು, ಅವುಗಳನ್ನು ಕುರಿಕಾಯಲು ಬಳಸುವ ತನ್ನ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ತನ್ನ ಕೈಯಲ್ಲಿ ಹಿಡಿದುಕೊಂಡು, ಆ ಫಿಲಿಷ್ಟಿಯನ ಬಳಿಗೆ ಹೋದನು. \p \v 41 ಫಿಲಿಷ್ಟಿಯನು ನಡೆದು ದಾವೀದನ ಬಳಿಗೆ ಸಮೀಪಿಸಿ ಬಂದನು. \v 42 ಅವನ ಖೇಡ್ಯವನ್ನು ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದನನ್ನು ದೃಷ್ಟಿಸಿ ನೋಡಿದಾಗ, ಅವನು ಕೆಂಪಾದವನಾಗಿಯೂ, ಸುಂದರ ರೂಪವುಳ್ಳವನಾಗಿಯೂ ಇರುವ ಹುಡುಗನಾಗಿದ್ದುದರಿಂದ, ಅವನನ್ನು ತಿರಸ್ಕರಿಸಿ ದಾವೀದನಿಗೆ, \v 43 “ನೀನು ಕೋಲು ಹಿಡಿದುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ?” ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು. \v 44 ದಾವೀದನಿಗೆ, “ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು,” ಎಂದನು. \p \v 45 ದಾವೀದನು ಫಿಲಿಷ್ಟಿಯನಿಗೆ, “ನೀನು ಖಡ್ಗ, ಈಟಿ ಮತ್ತು ಗುರಾಣಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ. ಆದರೆ ನಾನು, ನೀನು ನಿಂದಿಸಿದ ಇಸ್ರಾಯೇಲಿನ ಸೈನ್ಯಗಳ ದೇವರಾದ ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ನಿನ್ನ ಬಳಿಗೆ ಬರುತ್ತೇನೆ. \v 46 ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು. \v 47 ಯೆಹೋವ ದೇವರು ಖಡ್ಗದಿಂದಲೂ, ಈಟಿಯಿಂದಲೂ ರಕ್ಷಿಸುವುದಿಲ್ಲ ಎಂಬುದು ಈ ಸಮೂಹವೆಲ್ಲಾ ತಿಳಿದುಕೊಳ್ಳುವುದು. ಏಕೆಂದರೆ ಯುದ್ಧವು ಯೆಹೋವ ದೇವರದ್ದು, ಅವರು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು. \p \v 48 ಆಗ ಆ ಫಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸಮೀಪಿಸಿ ಬರುವಾಗ, \v 49 ದಾವೀದನು ತ್ವರೆಯಾಗಿ ಆ ಫಿಲಿಷ್ಟಿಯನಿಗೆದುರಾಗಿ ಓಡಿಹೋಗಿ, ತನ್ನ ಕೈಯನ್ನು ಚೀಲದಲ್ಲಿ ಹಾಕಿ, ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು, ಕವಣೆಯಲ್ಲಿಟ್ಟು ಬೀಸಿ, ಫಿಲಿಷ್ಟಿಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕದ್ದರಿಂದ, ಅವನು ನೆಲದ ಮೇಲೆ ಬೋರಲು ಬಿದ್ದನು. \p \v 50 ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು, ಅವನನ್ನು ಕೊಂದುಹಾಕಿದನು. \p \v 51 ದಾವೀದನ ಕೈಯಲ್ಲಿ ಖಡ್ಗ ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಖಡ್ಗವನ್ನು ತೆಗೆದುಕೊಂಡು, ಅದನ್ನು ಒರೆಯಿಂದ ಕಿತ್ತು, ಅವನನ್ನು ಕೊಂದು, ಅವನ ತಲೆಯನ್ನು ಕಡಿದುಹಾಕಿದನು. \p ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತು ಹೋದದ್ದನ್ನು ಕಂಡಾಗ ಓಡಿಹೋದರು. \v 52 ಇಸ್ರಾಯೇಲರೂ, ಯೆಹೂದದ ಜನರೂ ಎದ್ದು ಆರ್ಭಟಿಸಿ, ತಗ್ಗಿನ ಮೇರೆಯವರೆಗೂ, ಎಕ್ರೋನಿನ ಬಾಗಿಲಿನವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದ್ದರಿಂದ ಹತರಾದ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ಎಕ್ರೋನಿನವರೆಗೂ ಬಿದ್ದಿದ್ದರು. \v 53 ಇಸ್ರಾಯೇಲರು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರುಗಿಬಂದು ಅವರ ಡೇರೆಗಳನ್ನು ಸೂರೆಮಾಡಿದರು. \p \v 54 ದಾವೀದನು ಫಿಲಿಷ್ಟಿಯನ ತಲೆಯನ್ನು ತೆಗೆದುಕೊಂಡು, ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು. \p \v 55 ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟು ಹೋಗುವುದನ್ನು ಸೌಲನು ಕಂಡಾಗ, ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ, “ಅಬ್ನೇರನೇ, ಈ ಯುವಕನು ಯಾರ ಮಗನು?” ಎಂದನು. \p ಅದಕ್ಕೆ ಅಬ್ನೇರನು, “ಅರಸನೇ, ನಿನ್ನ ಪ್ರಾಣದಾಣೆ ನಾನರಿಯೆ,” ಎಂದನು. \p \v 56 ಅದಕ್ಕೆ ಅರಸನು, “ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು,” ಎಂದನು. \p \v 57 ಆಗ ದಾವೀದನು ಫಿಲಿಷ್ಟಿಯನನ್ನು ಕೊಂದು, ಅವನ ತಲೆಯನ್ನು ತೆಗೆದುಕೊಂಡು ಹಿಂದಿರುಗಿ ಬರುವಾಗ, ಅಬ್ನೇರನು ಅವನನ್ನು ಕರೆದು, ಸೌಲನ ಮುಂದೆ ತಂದು ಬಿಟ್ಟನು. \p \v 58 ಆಗ ಸೌಲನು, “ಯೌವನಸ್ಥನೇ, ನೀನು ಯಾರ ಮಗನು?” ಎಂದು ಅವನನ್ನು ಕೇಳಿದನು. \p ಅದಕ್ಕೆ ದಾವೀದನು, “ನಾನು ನಿನ್ನ ಸೇವಕನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು,” ಎಂದನು. \c 18 \s1 ದಾವೀದನ ಮೇಲೆ ಸೌಲನ ಅಸೂಯೆ \p \v 1 ದಾವೀದನು ಸೌಲನ ಸಂಗಡ ಮಾತನಾಡಿ ಮುಗಿಸಿದ ಮೇಲೆ, ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು. \v 2 ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು. ತಿರುಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ. \v 3 ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. \v 4 ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ, ತನ್ನ ವಸ್ತ್ರಗಳನ್ನೂ, ಖಡ್ಗವನ್ನೂ, ಬಿಲ್ಲನ್ನೂ, ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು. \p \v 5 ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ, ಅಲ್ಲಿಗೆ ಹೋಗಿ ಅವನು ಎಲ್ಲವನ್ನು ವಿವೇಕದಿಂದ ಬಹು ಯಶಸ್ವಿಯಾಗಿ ಮಾಡುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೈನ್ಯದ ಮೇಲೆ ಅಧಿಕಾರಿಯಾಗಿ ನೇಮಿಸಿದನು. ಇದು ಸಮಸ್ತ ಜನರಿಗೂ, ಸೌಲನ ಸಮಸ್ತ ಸೇವಕರಿಗೂ ಮೆಚ್ಚಿಕೆಯಾಗಿತ್ತು. \p \v 6 ದಾವೀದನು ಫಿಲಿಷ್ಟಿಯರನ್ನು ಹೊಡೆದು ಜನರಸಹಿತವಾಗಿ ಬರುವಾಗ, ಇಸ್ರಾಯೇಲರ ಸಮಸ್ತ ಪಟ್ಟಣಗಳಿಂದ ಸ್ತ್ರೀಯರು ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಸಂತೋಷದಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು. \v 7 ಆ ಸ್ತ್ರೀಯರು ಒಬ್ಬರಿಗೊಬ್ಬರು, \q1 “ಸೌಲನು ಸಾವಿರಗಳಷ್ಟು ಕೊಂದನು, \q2 ದಾವೀದನು ಹತ್ತು ಸಾವಿರಗಳಷ್ಟು ಕೊಂದನು,” \m ಎಂದು ಹಾಡಿದರು. \p \v 8 ಇದರಿಂದ ಸೌಲನಿಗೆ ಬಹು ಕೋಪವಾಯಿತು. ಆ ಹಾಡಿನಿಂದ ಅವನಿಗೆ ಬಹುಬೇಸರವಾಯಿತು. “ಇವರು ದಾವೀದನಿಗೆ ಹತ್ತು ಸಾವಿರಗಳಷ್ಟು ಎಂದು ಹಾಡಿದ್ದಾರೆ; ನನಗೆ ಸಾವಿರಗಳಷ್ಟೇ ಎಂದು ಹಾಡಿದ್ದಾರೆ; ಹಾಗಾದರೆ, ಅವನಿಗೆ ರಾಜ್ಯವಲ್ಲದೆ ಇನ್ನು ಆಗಬೇಕಾದದ್ದೇನು?” ಎಂದುಕೊಂಡನು. \v 9 ಆ ದಿವಸ ಮೊದಲುಗೊಂಡು ಸೌಲನು ದಾವೀದನ ಮೇಲೆ ಮತ್ಸರದ ಕಣ್ಣಿಟ್ಟನು. \p \v 10 ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು. \v 11 ಆಗ ಸೌಲನು, “ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನು,” ಎಂದು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು. \p \v 12 ಸೌಲನು ದಾವೀದನಿಗೆ ಭಯಪಟ್ಟನು. ಏಕೆಂದರೆ ಯೆಹೋವ ದೇವರು ಅವನ ಸಂಗಡ ಇದ್ದರು. ಸೌಲನ ಕಡೆಯಿಂದ ಹೊರಟು ಹೋಗಿದ್ದರು. \v 13 ಆದ್ದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು, ಸಾವಿರ ಜನರಿಗೆ ಪ್ರಧಾನನ್ನಾಗಿ ಮಾಡಿದನು. ಹಾಗೆಯೇ ಅವನು ದಳಪತಿಯಾಗಿ ಸೈನಿಕರನ್ನು ಕರೆದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು. \v 14 ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ತನ್ನ ಸಕಲ ಮಾರ್ಗಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು. \v 15 ಅವನು ಜಯಶಾಲಿಯಾಗುತ್ತಿದ್ದದ್ದನ್ನು ಸೌಲನು ಕಂಡು ಅವನಿಗೆ ಭಯಪಟ್ಟಿದ್ದನು. \v 16 ಆದರೆ ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇರುವುದರಿಂದ ಅವನನ್ನು ಪ್ರೀತಿ ಮಾಡಿದರು. \p \v 17 ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು. \p \v 18 ದಾವೀದನು ಸೌಲನಿಗೆ, “ಅರಸನಿಗೆ ಅಳಿಯನಾಗಿರುವುದಕ್ಕೆ ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರವು?” ಎಂದನು. \v 19 ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಮದುವೆಮಾಡಿಕೊಡುವ ಸಮಯ ಬಂದಾಗ, ಅವಳನ್ನು ಮೆಹೋಲದವನಾದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು. \p \v 20 ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಅದು ಸೌಲನಿಗೆ ತಿಳಿದುಬಂದಾಗ, ಆ ಕಾರ್ಯವು ಅವನಿಗೆ ಮೆಚ್ಚಿಕೆಯಾಯಿತು. \v 21 “ಅವನಿಗೆ ಉರುಲಾಗಿರುವ ಹಾಗೆಯೂ, ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು,” ಎಂದುಕೊಂಡನು. ಆದ್ದರಿಂದ ಸೌಲನು ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೆಯ ಅವಕಾಶ,” ಎಂದನು. \p \v 22 ಸೌಲನು ತನ್ನ ಸೇವಕರಿಗೆ, “ನೀವು ದಾವೀದನ ಸಂಗಡ ಅಂತರಂಗವಾಗಿ ಮಾತನಾಡಿ, ಇಗೋ, ಅರಸನು ನಿನ್ನ ಮೇಲೆ ಪ್ರೀತಿಯುಳ್ಳವನಾಗಿದ್ದಾನೆ; ಈಗ ನೀನು ಅರಸನಿಗೆ ಅಳಿಯನಾಗೆಂದು, ಹೇಳಿರಿ,” ಎಂದು ಆಜ್ಞಾಪಿಸಿದನು. \p \v 23 ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು, “ನಾನು ದರಿದ್ರನೂ ಅಲ್ಪನೂ ಆಗಿರುವಾಗ, ನಾನು ಅರಸನಿಗೆ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿಯೆಂದು ನೆನಸುತ್ತೀರೋ?” ಎಂದನು. \p \v 24 ಆಗ ಸೌಲನ ಸೇವಕರು ಸೌಲನಿಗೆ, ದಾವೀದನು ಈ ಪ್ರಕಾರವಾಗಿ ಮಾತನಾಡಿದನೆಂದು ಹೇಳಿದರು. \v 25 ಆದರೆ ಸೌಲನು ದಾವೀದನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ, “ನೀವು ದಾವೀದನಿಗೆ ಅರಸನು ಯಾವ ತೆರವನ್ನು ಅಪೇಕ್ಷಿಸದೆ, ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸುತ್ತಾನೆಂದು ಹೇಳಿರಿ,” ಎಂದನು. \p \v 26 ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ, ಅರಸನಿಗೆ ಅಳಿಯನಾಗುವುದು ಅವನಿಗೆ ಚೆನ್ನಾಗಿ ಕಾಣಿಸಿತು. \v 27 ಆದ್ದರಿಂದ ನೇಮಿಸಿದ ದಿವಸಗಳು ಈಡೇರುವುದಕ್ಕಿಂತ ಮುಂಚೆ ದಾವೀದನು ಎದ್ದು, ತನ್ನ ಜನರನ್ನು ಕರಕೊಂಡು ಹೋಗಿ, ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಹೊಡೆದು, ಅವರ ಮುಂದೊಗಲುಗಳನ್ನು ತಂದು, ತಾನು ಅರಸನಿಗೆ ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಪುತ್ರಿಯಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು. \p \v 28 ಸೌಲನು, ಯೆಹೋವ ದೇವರು ದಾವೀದನ ಸಂಗಡ ಇದ್ದಾರೆಂದೂ, ತನ್ನ ಮಗಳಾದ ಮೀಕಲಳು ಅವನನ್ನು ಪ್ರೀತಿ ಮಾಡಿದ್ದಳೆಂದು ತಿಳಿದುಕೊಂಡನು. \v 29 ಸೌಲನು ದಾವೀದನಿಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು. ಸೌಲನು ದಾವೀದನಿಗೆ ಜೀವಮಾನವೆಲ್ಲಾ ಶತ್ರುವಾಗಿದ್ದನು. \p \v 30 ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು. \c 19 \s1 ಸೌಲನು ದಾವೀದನನ್ನು ಕೊಲ್ಲಲು ಪ್ರಯತ್ನಿಸಿದ್ದು \p \v 1 ಸೌಲನು ತನ್ನ ಮಗ ಯೋನಾತಾನ ಮತ್ತು ತನ್ನ ಸಮಸ್ತ ಸೇವಕರಿಗೆ ದಾವೀದನನ್ನು ಕೊಲ್ಲಬೇಕೆಂದು ಹೇಳಿದನು. ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. \v 2 ಯೋನಾತಾನನು ದಾವೀದನನ್ನು, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ. ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆಯಾಗಿದ್ದು, ಮರೆಯಾದ ಸ್ಥಳಗಳಲ್ಲಿ ಅಡಗಿಕೋ. \v 3 ಆಗ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು, ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿ, ನಾನು ನೋಡುವುದನ್ನು ಹೊರಟುಬಂದು ನೀನು ಇರುವ ಹೊಲದಲ್ಲಿ ನಿನಗೆ ತಿಳಿಸುವೆನು,” ಎಂದನು. \p \v 4 ಹಾಗೆಯೇ ಯೋನಾತಾನನು ತನ್ನ ತಂದೆ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೆಯದನ್ನು ಮಾತನಾಡಿ ಅವನಿಗೆ, “ಅರಸನು ತನ್ನ ಸೇವಕನಾದ ದಾವೀದನಿಗೆ ದ್ರೋಹಮಾಡದೆ ಇರಲಿ. ಏಕೆಂದರೆ ಅವನು ನಿನಗೆ ದ್ರೋಹಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ. \v 5 ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು. \p \v 6 ಆಗ ಸೌಲನು ಯೋನಾತಾನನ ಮಾತನ್ನು ಕೇಳಿ, “ಯೆಹೋವ ದೇವರಾಣೆ ಅವನು ಕೊಲೆಯಾಗುವುದಿಲ್ಲ,” ಎಂದನು. \p \v 7 ಆಗ ಯೋನಾತಾನನು ದಾವೀದನನ್ನು ಕರೆದು, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ, ದಾವೀದನನ್ನು ಸೌಲನ ಬಳಿಗೆ ಕರೆತಂದನು. ಅವನು ಮುಂಚಿನ ಹಾಗೆಯೇ ಸೌಲನ ಬಳಿಯಲ್ಲಿ ಇದ್ದನು. \p \v 8 ತಿರುಗಿ ಯುದ್ಧ ಉಂಟಾಯಿತು. ಆಗ ದಾವೀದನು ಹೊರಟು, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರನ್ನು ಸಾಹಸದಿಂದ ಹೊಡೆದನು. ಅವರು ಅವನ ಎದುರಿನಿಂದ ಓಡಿಹೋದರು. \p \v 9 ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು, ತನ್ನ ಮನೆಯೊಳಗೆ ಕುಳಿತಿರುವಾಗ, ಯೆಹೋವ ದೇವರಿಂದ ಕಳುಹಿಸಲಾದ ದುರಾತ್ಮವು ಅವನ ಮೇಲೆ ಬಂತು. ದಾವೀದನು ತನ್ನ ಕೈಯಿಂದ ಕಿನ್ನರಿ ಬಾರಿಸಿದನು. \v 10 ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಹುಡುಕಿದನು. ಆದರೆ ದಾವೀದನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಅವನ ಈಟಿಯು ಗೋಡೆಯಲ್ಲಿ ಹತ್ತಿಕೊಳ್ಳುವಂತೆ ಹೊಡೆದನು. ದಾವೀದನು ಓಡಿಹೋಗಿ ಆ ರಾತ್ರಿಯಲ್ಲಿ ತಪ್ಪಿಸಿಕೊಂಡನು. \p \v 11 ಆದರೆ ದಾವೀದನನ್ನು ಕಾದುಕೊಂಡಿದ್ದು, ಉದಯದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ, ನಾಳೆ ಹತನಾಗುವಿ,” ಎಂದು ಹೇಳಿ \v 12 ದಾವೀದನನ್ನು ಕಿಟಿಕಿಯ ಮಾರ್ಗವಾಗಿ ಇಳಿಸಿಬಿಡಲು ಅವನು ತಪ್ಪಿಸಿಕೊಂಡು ಓಡಿಹೋದನು. \v 13 ತರುವಾಯ ಮೀಕಲಳು ಒಂದು ವಿಗ್ರಹವನ್ನು ತೆಗೆದುಕೊಂಡು, ಮಂಚದ ಮೇಲೆ ಮಲಗಿಸಿ, ಅದರ ತಲೆ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ, ಅದನ್ನು ವಸ್ತ್ರದಿಂದ ಮುಚ್ಚಿದಳು. \p \v 14 ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದಾಗ, ಮೀಕಲಳು ಅವರಿಗೆ, “ಅವನು ಖಾಯಿಲೆಯಲ್ಲಿದ್ದಾನೆ,” ಎಂದಳು. \p \v 15 ತಿರುಗಿ ಸೌಲನು ದಾವೀದನನ್ನು ನೋಡುವುದಕ್ಕೋಸ್ಕರ ದೂತರನ್ನು ಕಳುಹಿಸಿ, “ಅವನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದನು. \v 16 ಹಾಗೆಯೇ ಸೇವಕರು ಬಂದು ಕಂಡಾಗ, ವಿಗ್ರಹವು ಮಂಚದ ಮೇಲೆ ಇತ್ತು. ಅದರ ತಲೆಗೆ ಒಂದು ಆಡಿನ ಉಣ್ಣೆಯ ತಲೆದಿಂಬು ಇತ್ತು. \p \v 17 ಆಗ ಸೌಲನು ಮೀಕಲಳಿಗೆ, “ನೀನು ಈ ಪ್ರಕಾರ ನನಗೆ ಮೋಸಮಾಡಿ, ನನ್ನ ಶತ್ರುವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ,” ಎಂದನು. \p ಆಗ ಮೀಕಲಳು ಸೌಲನಿಗೆ ಉತ್ತರವಾಗಿ, “ಅವನು ನನಗೆ, ‘ನಾನು ನಿನ್ನನ್ನು ಕೊಂದು ಹಾಕುವುದು ಏಕೆ? ನನ್ನನ್ನು ಹೋಗಗೊಡಿಸು,’ ಎಂದು ಹೇಳಿದನು,” ಎಂದಳು. \p \v 18 ಹೀಗೆಯೇ ದಾವೀದನು ಓಡಿಹೋಗಿ ತಪ್ಪಿಸಿಕೊಂಡು ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು, ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುಯೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು. \v 19 ಆಗ, “ದಾವೀದನು ರಾಮದ ನಯೋತಿನಲ್ಲಿ ಇದ್ದಾನೆ,” ಎಂದು ಸೌಲನಿಗೆ ಗೊತ್ತಾಯಿತು. \v 20 ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು. \v 21 ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ, ಅವನು ಬೇರೆ ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು. \v 22 ಆಗ ಸೌಲನು ತಾನೇ ರಾಮಕ್ಕೆ ಹೋದನು. ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, ಸಮುಯೇಲನೂ ದಾವೀದನೂ ಎಲ್ಲಿದ್ದಾರೆ ಎಂದು ಕೇಳಿದನು. \p ಆಗ ಒಬ್ಬನು, “ಅವರು ರಾಮದ ನಯೋತಿನಲ್ಲಿದ್ದಾರೆ,” ಎಂದನು. \p \v 23 ಹಾಗೆಯೇ ಅವನು ರಾಮದ ನಯೋತಿಗೆ ಹೋದನು. ಆಗ ದೇವರ ಆತ್ಮ ಮೇಲೆ ಬರಲು, ಅವನು ರಾಮದ ನಯೋತಿಗೆ ಸೇರುವವರೆಗೂ ಪ್ರವಾದಿಸುತ್ತಾ ಬಂದನು. \v 24 ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ, ತಾನೂ ಹಾಗೆಯೇ ಸಮುಯೇಲನ ಮುಂದೆ ಪ್ರವಾದಿಸಿದನು. ಆ ದಿನ ಹಗಲೆಲ್ಲವೂ, ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದ್ದರಿಂದ, “ಸೌಲನು ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ?” ಎಂಬ ಮಾತು ಪ್ರಚಲಿತವಾಯಿತು. \c 20 \s1 ದಾವೀದ ಹಾಗೂ ಯೋನಾತಾನ್ \p \v 1 ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು, ಅವನ ಮುಂದೆ, “ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣವನ್ನು ಹುಡುಕುವ ಹಾಗೆ ನಾನು ಅವನಿಗೆ ಮಾಡಿದ ದ್ರೋಹವೇನು?” ಎಂದನು. \p \v 2 ಯೋನಾತಾನನು ಅವನಿಗೆ, “ಅದು ಆಗಬಾರದು. ನೀನು ಸಾಯುವುದಿಲ್ಲ; ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ, ದೊಡ್ಡ ಕಾರ್ಯವನ್ನಾದರೂ ಮಾಡುವುದಿಲ್ಲ. ಈ ಕಾರ್ಯವನ್ನು ಯಾತಕ್ಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು,” ಎಂದನು. \p \v 3 ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು. \p \v 4 ಆಗ ಯೋನಾತಾನನು ದಾವೀದನಿಗೆ, “ನಿನ್ನ ಪ್ರಾಣವು ಏನೇನು ಹೇಳುತ್ತದೋ, ನಿನಗೋಸ್ಕರ ನಾನು ಅದನ್ನು ಮಾಡುವೆನು,” ಎಂದನು. \p \v 5 ದಾವೀದನು ಯೋನಾತಾನನಿಗೆ, “ನಾಳೆ ಅಮಾವಾಸ್ಯೆ, ಆದ್ದರಿಂದ ನಾನು ಅರಸನ ಸಂಗಡ ಪಂಕ್ತಿಯಲ್ಲಿ ಊಟ ಮಾಡಲೇ ಬೇಕಾಗಿರುವುದು. ನಾನು ಮೂರನೆಯ ದಿವಸದ ಸಾಯಂಕಾಲದವರೆಗೆ ಹೊಲದಲ್ಲಿ ಬಚ್ಚಿಟ್ಟುಕೊಂಡಿರಲು, ನನ್ನನ್ನು ಹೋಗಗೊಡಿಸು. \v 6 ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವುದನ್ನು ಕಂಡು, ಶ್ರದ್ಧೆಯಿಂದ ವಿಚಾರಿಸಿ ಅವನು ಎಲ್ಲಿ? ಎಂದು ಕೇಳಿದರೆ, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಏಕೆಂದರೆ ತನ್ನ ಸಮಸ್ತ ಕುಟುಂಬಕ್ಕೋಸ್ಕರ ವರುಷದ ಯಜ್ಞ ಮಾಡುತ್ತಾರೆ,’ ಎಂದು ಹೇಳು. \v 7 ಅದಕ್ಕೆ ಅವನು, ‘ಒಳ್ಳೆಯದು,’ ಎಂದು ಹೇಳಿದರೆ, ನಿನ್ನ ಸೇವಕನಿಗೆ ಸಮಾಧಾನವಾಗಿರುವುದು. ಅವನು ಬಹಳ ಕೋಪ ಮಾಡಿದರೆ, ಅವನಿಂದ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ. \v 8 ಆದ್ದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು. ಏಕೆಂದರೆ ಯೆಹೋವ ದೇವರ ಒಡಂಬಡಿಕೆಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀಯಲ್ಲಾ. ಆದರೂ ನನ್ನಲ್ಲಿ ಅಕ್ರಮವಿದ್ದರೆ, ನೀನೇ ನನ್ನನ್ನು ಕೊಂದುಹಾಕು. ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವುದು ಏಕೆ?” ಎಂದನು. \p \v 9 ಆಗ ಯೋನಾತಾನನು, “ಅದು ನಿನಗೆ ದೂರವಾಗಿರಲಿ. ಏಕೆಂದರೆ ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ, ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ?” ಎಂದನು. \p \v 10 ದಾವೀದನು ಯೋನಾತಾನನಿಗೆ, “ನಿನ್ನ ತಂದೆಯು ನಿನಗೆ ಕಠಿಣವಾದ ಉತ್ತರ ಹೇಳಿದರೆ, ಅದನ್ನು ನನಗೆ ತಿಳಿಸುವವರು ಯಾರು?” ಎಂದನು. \p \v 11 ಆಗ ಯೋನಾತಾನನು ದಾವೀದನಿಗೆ, “ನಾವು ಹೊಲಕ್ಕೆ ಹೋಗೋಣ ಬಾ,” ಎಂದನು. ಹಾಗೆಯೇ ಅವರಿಬ್ಬರೂ ಹೊಲಕ್ಕೆ ಹೊರಟು ಹೋದರು. \p \v 12 ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವ ದೇವರೇ, ನಾನು ನಾಳೆ ನಾಡಿದ್ದರೊಳಗೆ ನನ್ನ ತಂದೆಯನ್ನು ವಿಚಾರಿಸಲು, ದಾವೀದನ ಮೇಲೆ ದಯೆ ಇದ್ದರೆ ನಿನಗೆ ತಿಳಿಸುವ ಹಾಗೆ ಹೇಳಿಕಳುಹಿಸದೆ ಇದ್ದರೆ, ಯೆಹೋವ ದೇವರು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ. \v 13 ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. \v 14 ಆದರೆ ನಾನು ಇನ್ನೂ ಬದುಕುತ್ತಿರುವಾಗ ನಾನು ಸಾಯದ ಹಾಗೆ ನೀನು ಯೆಹೋವ ದೇವರ ದಯೆಯನ್ನು ನನ್ನ ಮೇಲೆ ತೋರಿಸಿಬೇಕಾದದ್ದಲ್ಲದೆ, \v 15 ಯೆಹೋವ ದೇವರು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ, ಎಂದಿಗೂ ನಿನ್ನ ದಯೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು,” ಎಂದನು. \p \v 16 ಹೀಗೆಯೇ ಯೋನಾತಾನನು ದಾವೀದನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು, “ಅಗಲಿದರೆ ಯೆಹೋವ ದೇವರೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ,” ಎಂದನು. \v 17 ಯೋನಾತಾನನು ದಾವೀದನನ್ನು ಪ್ರೀತಿಮಾಡಿದ್ದರಿಂದ, ಅವನಿಂದ ತಿರುಗಿ ಪ್ರಮಾಣ ತೆಗೆದುಕೊಂಡನು. ಅವನು ತನ್ನ ಪ್ರಾಣವನ್ನು ಪ್ರೀತಿಮಾಡಿದ ಹಾಗೆಯೇ, ಅವನನ್ನು ಪ್ರೀತಿಮಾಡಿದನು. \p \v 18 ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ; ನೀನು ಅಲ್ಲಿ ಇಲ್ಲದಿರುವುದರಿಂದ ನಿನ್ನ ಸ್ಥಳವು ಬರಿದಾಗಿರುವುದು. \v 19 ನೀನು ಮೂರು ದಿವಸ ತಡೆದ ತರುವಾಯ, ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರುಗಿಬಂದು, ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು. \v 20 ಆಗ ನಾನು ಗುರಿಯಿಟ್ಟವನ ಹಾಗೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆಯುವೆನು. \v 21 ಅನಂತರ ಹುಡುಗನನ್ನು ಕಳುಹಿಸಿ, ‘ಆ ಬಾಣಗಳನ್ನು ಹುಡುಕಿಕೊಂಡು ಬಾ,’ ಎಂದು ಹೇಳುವೆನು. ‘ಆ ಬಾಣಗಳು ನಿನಗೆ ಈಚೆ ಬಿದ್ದಿವೆ, ಅವುಗಳನ್ನು ತೆಗೆದುಕೊಂಡು ಬಾ,’ ಎಂದು ನಾನು ಹುಡುಗನಿಗೆ ಹೇಳಿದರೆ, ನೀನು ಬರಬಹುದು. ಏಕೆಂದರೆ ಯೆಹೋವ ದೇವರಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವುದು. \v 22 ಆದರೆ, ‘ಇಗೋ, ಬಾಣಗಳು ನಿನ್ನ ಆಚೆ ಬಿದ್ದಿವೆ,’ ಎಂದು ಹುಡುಗನಿಗೆ ಹೇಳಿದರೆ, ಹೊರಟು ಹೋಗು. ಏಕೆಂದರೆ ಯೆಹೋವ ದೇವರು ನಿನ್ನನ್ನು ದೂರ ಕಳುಹಿಸಿದರು. \v 23 ನಾನೂ, ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಯೆಹೋವ ದೇವರು ನನಗೂ, ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿರುವರು,” ಎಂದು ಹೇಳಿದನು. \p \v 24 ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟುಕೊಂಡಿದ್ದನು. ಅಮಾವಾಸ್ಯೆಯಾದಾಗ ಅರಸನು ಭೋಜನವನ್ನು ಮಾಡಲು ಕುಳಿತನು. \v 25 ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ, ಯೋನಾತಾನನು ಎದ್ದನು ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು. ದಾವೀದನು ಇರುವ ಸ್ಥಳವು ಬರಿದಾಗಿತ್ತು. \v 26 ಆದರೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ, “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿರಬಹುದು; ನಿಶ್ಚಯವಾಗಿ ಅಶುಚಿಯಾಗಿದ್ದಾನೆ,” ಎಂದು ಹೇಳಿಕೊಂಡನು. \v 27 ಅಮಾವಾಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡುವ ಸ್ಥಳವು ಹಾಗೆಯೇ ಬರಿದಾಗಿತ್ತು. ಆದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಪುತ್ರನಾದ ಯೋನಾತಾನನನ್ನು ಕೇಳಿದನು. \p \v 28 ಯೋನಾತಾನನು ಸೌಲನಿಗೆ ಉತ್ತರವಾಗಿ, “ಬೇತ್ಲೆಹೇಮಿನವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿಕೊಂಡನು. \v 29 ಅವನು ನನಗೆ, ‘ದಯಮಾಡಿ ನನಗೆ ಅಪ್ಪಣೆಕೊಡು. ಏಕೆಂದರೆ ಊರೊಳಗೆ ನಮ್ಮ ಕುಟುಂಬಕ್ಕೆ ಯಜ್ಞ ಮಾಡುವುದಿದೆ. ನನ್ನ ಸಹೋದರರು ನನ್ನನ್ನು ಬರಲು ಹೇಳಿ ಕಳುಹಿಸಿದರು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನಾನು ಅಪ್ಪಣೆ ತೆಗೆದುಕೊಂಡು ನನ್ನ ಸಹೋದರರನ್ನು ಕಾಣುವುದಕ್ಕೆ ಹೋಗುತ್ತೇನೆ,’ ಎಂದನು. ಆದ್ದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ,” ಎಂದನು. \p \v 30 ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ, “ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ, ಇಷಯನ ಮಗನನ್ನು ನೀನು ಆರಿಸಿಕೊಂಡಿದ್ದೀ ಎಂದು ನಾನರಿಯೆನೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಅಸಹ್ಯವಾಗುವುದು. \v 31 ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು. \p \v 32 ಅದಕ್ಕೆ ಯೋನಾತಾನನು ತನ್ನ ತಂದೆ ಸೌಲನಿಗೆ ಉತ್ತರವಾಗಿ, “ಅವನನ್ನು ಏಕೆ ಕೊಲೆಮಾಡಬೇಕು? ಅವನು ಏನು ಮಾಡಿದನು?” ಎಂದನು. \v 33 ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದ್ದರಿಂದ ಯೋನಾತಾನನು ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದನೆಂದು ತಿಳಿದುಕೊಂಡನು. \p \v 34 ಯೋನಾತಾನನು ಕೋಪದಿಂದ ಉರಿಗೊಂಡು ಮೇಜಿನಿಂದ ಎದ್ದು ಹೋದನು. ಹಬ್ಬದ ಎರಡನೆಯ ದಿನವಾಗಿದ್ದ ಅಂದು ಅವನು ಊಟ ಮಾಡಲಿಲ್ಲ. ಏಕೆಂದರೆ ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದರಿಂದ, ಅವನಿಗೋಸ್ಕರ ವ್ಯಥೆಪಟ್ಟನು. \p \v 35 ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗನನ್ನು ಕರೆದುಕೊಂಡು, \v 36 ಹೊಲಕ್ಕೆ ಹೊರಟುಹೋಗಿ ಹುಡುಗನಿಗೆ, “ನೀನು ಓಡಿಹೋಗಿ ನಾನು ಎಸೆಯುವ ಬಾಣಗಳನ್ನು ಹುಡುಕಿಕೊಂಡು ಬಾ,” ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ, ಆಚೆ ಹೋಗುವಹಾಗೆ ಬಾಣವನ್ನು ಎಸೆದನು. \v 37 ಯೋನಾತಾನನು ಎಸೆದ ಬಾಣವಿರುವ ಸ್ಥಳದವರೆಗೆ ಹುಡುಗನು ಹೋದಾಗ, “ಬಾಣವು ನಿನ್ನ ಆಚೆ ಇಲ್ಲವೋ?” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು. \v 38 “ನೀನು ಆಲಸ್ಯಮಾಡದೇ ತ್ವರೆಯಾಗಿ ಹೋಗು,” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು, ತನ್ನ ಯಜಮಾನನ ಬಳಿಗೆ ತಂದನು. \v 39 ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ, ದಾವೀದನೂ ಮಾತ್ರ ಆ ಸಂಗತಿಯನ್ನು ತಿಳಿದುಕೊಂಡಿದ್ದರು. \v 40 ಆಗ ಯೋನಾತಾನನು ತನ್ನ ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ, “ಅವುಗಳನ್ನು ಪಟ್ಟಣದೊಳಕ್ಕೆ ತೆಗೆದುಕೊಂಡು ಹೋಗು,” ಎಂದನು. \p \v 41 ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು. \p \v 42 ಆಗ ಯೋನಾತಾನನು ದಾವೀದನಿಗೆ, “ನೀನು ಸಮಾಧಾನವಾಗಿ ಹೋಗು, ಯೆಹೋವ ದೇವರು ಎಂದೆಂದಿಗೂ ನನಗೂ, ನಿನಗೂ, ನನ್ನ ಸಂತಾನಕ್ಕೂ, ನಿನ್ನ ಸಂತಾನಕ್ಕೂ ಸಾಕ್ಷಿಯಾಗಿರಲೆಂದು ಮಧ್ಯದಲ್ಲಿ ಯೆಹೋವ ದೇವರ ಹೆಸರಿನಿಂದ ಆಣೆಯಿಟ್ಟು ನಾವಿಬ್ಬರೂ ಪ್ರಮಾಣ ಮಾಡಿಕೊಂಡೆವಲ್ಲಾ,” ಎಂದನು. ಆಗ ದಾವೀದನು ಎದ್ದು ಹೋದನು. ಯೋನಾತಾನನು ಪಟ್ಟಣಕ್ಕೆ ಹೋದನು. \c 21 \s1 ನೋಬ್ ಊರಲ್ಲಿ ದಾವೀದ \p \v 1 ದಾವೀದನು ನೋಬಿನಲ್ಲಿರುವ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ, “ಒಬ್ಬರೂ ನಿನ್ನ ಸಂಗಡ ಬಾರದೆ, ನೀನು ಒಂಟಿಯಾಗಿ ಬಂದದ್ದೇನು?” ಎಂದು ಅವನನ್ನು ಕೇಳಿದನು. \p \v 2 ದಾವೀದನು ಯಾಜಕನಾದ ಅಹೀಮೆಲೆಕನಿಗೆ, “ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿದ್ದು, ಇಂಥದ್ದೆಂದು ಒಬ್ಬರಿಗೂ ತಿಳಿಯಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ. \v 3 ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ, ನಿನಗೆ ದೊರಕಿದ ಯಾವುದನ್ನಾದರೂ ನನಗೆ ಕೊಡು,” ಎಂದನು. \p \v 4 ಯಾಜಕನು ದಾವೀದನಿಗೆ ಉತ್ತರವಾಗಿ, “ಪರಿಶುದ್ಧವಾಗಿಸಿದ ರೊಟ್ಟಿಯ ಹೊರತಾಗಿ, ನನ್ನ ಕೈಯಲ್ಲಿ ಸಾಧಾರಣವಾದ ಒಂದು ರೊಟ್ಟಿಯಾದರೂ ಇಲ್ಲ. ಆ ರೊಟ್ಟಿಗಳನ್ನು ಸ್ತ್ರೀಯರೊಂದಿಗೆ ಸಂಪರ್ಕ ಮಾಡದವರಿಗೆ ಕೊಡಬಹುದು,” ಎಂದನು. \p \v 5 ದಾವೀದನು ಯಾಜಕನಿಗೆ ಉತ್ತರವಾಗಿ, “ನಾನು ಹೊರಡುವುದಕ್ಕಿಂತ ಮುಂಚೆ ನಿನ್ನೆಯೂ, ಮೊನ್ನೆಯೂ ಸ್ತ್ರೀಯರು ನಮಗೆ ದೂರವಾಗಿದ್ದರು. ಅಪವಿತ್ರವಾದ ಕಾರ್ಯಗಳಿಗೆ ಹೋಗುವಾಗಲೂ ಪುರುಷರು ಶುದ್ಧರಾಗಿರುತ್ತಾರೆ. ಇಂದು ಅದಕ್ಕಿಂತಲೂ ಹೆಚ್ಚಾಗಿರುವರಲ್ಲವೇ?” ಎಂದನು. \v 6 ಆಗ ಯೆಹೋವ ದೇವರ ಸನ್ನಿಧಿಯಿಂದ ತೆಗೆಯಲಾದ ಸಮ್ಮುಖದ ರೊಟ್ಟಿಗಳ ಹೊರತು, ಬೇರೆ ರೊಟ್ಟಿ ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧವಾಗಿಸಿದ ರೊಟ್ಟಿಯನ್ನು ಕೊಟ್ಟನು. ಏಕೆಂದರೆ ಅವುಗಳನ್ನು ತೆಗೆದುಕೊಳ್ಳುವ ದಿನದಲ್ಲಿ ಅವುಗಳಿಗೆ ಬದಲಾಗಿ ಬಿಸಿ ರೊಟ್ಟಿಗಳನ್ನು ಇಡಲೇಬೇಕು. \p \v 7 ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು. \p \v 8 ಆಗ ದಾವೀದನು ಅಹೀಮೆಲೆಕನಿಗೆ, “ಇಲ್ಲಿ ನಿನ್ನ ಕೈ ವಶದಲ್ಲಿ ಈಟಿಯಾದರೂ, ಖಡ್ಗವಾದರೂ ಇಲ್ಲವೋ? ಏಕೆಂದರೆ ಅರಸನ ಕಾರ್ಯವು ಅವಸರವಾದುದರಿಂದ ನಾನು ನನ್ನ ಖಡ್ಗವನ್ನಾದರೂ, ಆಯುಧಗಳನ್ನಾದರೂ ತೆಗೆದುಕೊಂಡು ಬರಲಿಲ್ಲ,” ಎಂದನು. \p \v 9 ಅದಕ್ಕೆ ಯಾಜಕನು, “ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಏಫೋದಿನ ಹಿಂದೆ ಒಂದು ಬಟ್ಟೆಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೋ. ಏಕೆಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ,” ಎಂದನು. \p ಅದಕ್ಕೆ ದಾವೀದನು, “ಅದರಂಥದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದನು. \s1 ದಾವೀದನು ಗಾತಿನಲ್ಲಿ \p \v 10 ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು. \v 11 ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? \q1 “ ‘ಸೌಲನು ಸಾವಿರಗಳನ್ನೂ, \q2 ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ \m ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?” \p \v 12 ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿಗೆ ಹೆದರಿ, \v 13 ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು. \p \v 14 ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ನೋಡಿರಿ! ಅವನು ಹುಚ್ಚನಾಗಿದ್ದಾನೆ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ? \v 15 ಹುಚ್ಚರು ನನಗೆ ಅವಶ್ಯವೆಂದು ನೆನಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇವನು ನನ್ನ ಮನೆಯಲ್ಲಿ ಬರಬೇಕೋ?” ಎಂದನು. \c 22 \s1 ದಾವೀದನು ಅದುಲ್ಲಾಮ್ ಮತ್ತು ಮಿಚ್ಪೆಯಲ್ಲಿ \p \v 1 ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು. \v 2 ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು. \p \v 3 ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆ, “ದೇವರು ನನಗೆ ಏನು ಮಾಡುವರೋ ಎಂದು ನಾನು ತಿಳಿಯುವವರೆಗೂ, ನನ್ನ ತಂದೆತಾಯಿಗಳು ಹೊರಟುಬಂದು ನಿನ್ನ ಬಳಿಯಲ್ಲಿ ವಾಸಿಸಿರಲಿ,” ಎಂದು ಹೇಳಿ, ಅವರನ್ನು ಮೋವಾಬಿನ ಅರಸನ ಬಳಿಗೆ ಕರೆತಂದು ಬಿಟ್ಟನು. \v 4 ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ, ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು. \p \v 5 ಆದರೆ ಗಾದನೆಂಬ ಪ್ರವಾದಿಯು ದಾವೀದನಿಗೆ, “ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ,” ಎಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು. \s1 ಸೌಲನು ನೋಬದ ಯಾಜಕರನ್ನು ಕೊಂದುಹಾಕಿದ್ದು \p \v 6 ಒಂದು ದಿನ ದಾವೀದನೂ ಅವನ ಸಂಗಡ ಇದ್ದವರೂ ಅಡಗಿಕೊಂಡಿದ್ದಾರೆ ಎಂಬ ವರ್ತಮಾನವನ್ನು ಸೌಲನು ಕೇಳಿದನು. ಆಗ ಅವನು ಗಿಬೆಯದ ಗುಡ್ಡದಲ್ಲಿ ಒಂದು ಪಿಚುಲ ವೃಕ್ಷದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು. ಅವನ ಸೇವಕರೆಲ್ಲರು ಸುತ್ತಲೂ ನಿಂತಿದ್ದರು. \v 7 ಆಗ ಸೌಲನು ಸುತ್ತಲು ನಿಂತಿದ್ದ ಸೇವಕರಿಗೆ, “ಬೆನ್ಯಾಮೀನನ ಮಕ್ಕಳೇ, ಕೇಳಿರಿ. ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡೆಸುವಂತೆ ಇಷಯನ ಮಗನು ನಿಮ್ಮೆಲ್ಲರಿಗೆ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನು ಸಾವಿರಕ್ಕೆ ನಾಯಕರಾಗಿಯೂ, ನೂರಕ್ಕೆ ನಾಯಕರಾಗಿಯೂ ಮಾಡುವನೋ? \v 8 ಇದಲ್ಲದೆ ನಿಮ್ಮಲ್ಲಿ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡಿದ್ದನ್ನು ನನಗೆ ಯಾವನೂ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನಗೋಸ್ಕರ ಚಿಂತಿಸಿ, ನನ್ನ ಮಗನು ಈ ಹೊತ್ತು ನನ್ನ ನಿಮಿತ್ತ ಅಡಗಿಕೊಂಡಿರುವಂತೆ ನನ್ನ ಸೇವಕನನ್ನು ನನಗೆ ವಿರೋಧವಾಗಿ ಒಳಸಂಚುಮಾಡಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ,” ಎಂದನು. \p \v 9 ಆಗ ಸೌಲನು ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಉತ್ತರವಾಗಿ, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ಕಂಡೆನು. \v 10 ಇವನು ಅವನಿಗೋಸ್ಕರ ಯೆಹೋವ ದೇವರನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು, ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಅವನಿಗೆ ಕೊಟ್ಟನು,” ಎಂದನು. \p \v 11 ಆದ್ದರಿಂದ ಅರಸನು ಅಹೀಟೂಬನ ಮಗನಾದ ಯಾಜಕನಾಗಿರುವ ಅಹೀಮೆಲೆಕನನ್ನೂ, ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರಾದ ಸಮಸ್ತರನ್ನೂ ಕರೆಯಿಸಿದನು. ಅವರೆಲ್ಲರೂ ಅರಸನ ಬಳಿಗೆ ಬಂದರು. \v 12 ಆಗ ಸೌಲನು, “ಅಹೀಟೂಬನ ಮಗನೇ, ಕೇಳು,” ಎಂದನು. \p ಅದಕ್ಕವನು, “ನನ್ನ ಒಡೆಯನೇ, ನಾನು ಇಲ್ಲಿದ್ದೇನೆ,” ಎಂದನು. \p \v 13 ಸೌಲನು ಅವನಿಗೆ, “ನೀನೂ, ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋಧವಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಯನ್ನೂ, ಖಡ್ಗವನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು? ಅವನು ಇಂದಿನವರೆಗೂ ನನ್ನನ್ನು ಕೊಲ್ಲುವುದಕ್ಕೆ ಕಾಯುತ್ತಿದ್ದಾನೆ?” ಎಂದು ಕೇಳಿದನು. \p \v 14 ಅಹೀಮೆಲೆಕನು ಅರಸನಿಗೆ ಉತ್ತರವಾಗಿ, “ನಿನ್ನ ಸಮಸ್ತ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾರಿದ್ದಾರೆ? ಅವನು ಅರಸನಿಗೆ ಅಳಿಯನೂ ನಿಮ್ಮ ಅಂಗರಕ್ಷಕರ ನಾಯಕನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ. \v 15 ನಾನು ಅವನಿಗೋಸ್ಕರ ದೇವರನ್ನು ಕೇಳಿಕೊಂಡದ್ದು ಅದೇ ಮೊದಲನೆಯದೋ? ಅಲ್ಲವೇ ಅಲ್ಲ. ಅರಸನು ತನ್ನ ಸೇವಕನ ಮೇಲಾದರೂ ಇಲ್ಲವೆ ಅವನ ಕುಟುಂಬದವರ ಮೇಲಾದರೂ ಇಂಥ ಅಪವಾದವನ್ನು ಹೊರಿಸಬಾರದು, ಏಕೆಂದರೆ ಆ ಕಾರ್ಯದ ಬಗ್ಗೆ ನಮಗೇನೂ ತಿಳಿದಿಲ್ಲ,” ಎಂದನು. \p \v 16 ಅದಕ್ಕೆ ಅರಸನು, “ಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯ ಸಮಸ್ತರೂ ನಿಶ್ಚಯವಾಗಿ ಸಾಯಲೇಬೇಕು,” ಎಂದನು. \p \v 17 ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆ, “ನೀವು ತಿರುಗಿಕೊಂಡು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿರಿ. ಏಕೆಂದರೆ ಅವರ ಕೈ ದಾವೀದನಿಗೆ ಸಹಾಯಕವಾಗಿದೆ. ಅವನು ಓಡಿ ಹೋಗುವುದನ್ನು ಅವರು ತಿಳಿದಿದ್ದು, ಅದನ್ನು ನನಗೆ ತಿಳಿಸದೆ ಹೋದರು,” ಎಂದನು. \p ಆದರೆ ಅರಸನ ಸೇವಕರು ಯೆಹೋವ ದೇವರ ಯಾಜಕರ ಮೇಲೆ ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. \p \v 18 ಆಗ ಅರಸನು ದೋಯೇಗನಿಗೆ, “ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು,” ಎಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು, ನಾರುಬಟ್ಟೆಯ ಏಫೋದನ್ನು ಧರಿಸಿಕೊಳ್ಳುವವರಾದ ಎಂಬತ್ತೈದು ಯಾಜಕರನ್ನು ಆ ದಿನದಲ್ಲಿ ಕೊಂದನು. \v 19 ಇದಲ್ಲದೆ ಯಾಜಕರ ಪಟ್ಟಣವಾದ ನೋಬಿನಲ್ಲಿ ಇರುವ ಪುರುಷರನ್ನೂ, ಸ್ತ್ರೀಯರನ್ನೂ, ಮಕ್ಕಳನ್ನೂ, ಕೂಸುಗಳನ್ನೂ, ಎತ್ತುಗಳನ್ನೂ, ಕತ್ತೆಗಳನ್ನೂ, ಕುರಿಗಳನ್ನೂ ಖಡ್ಗದಿಂದ ಹೊಡೆದುಬಿಟ್ಟನು. \p \v 20 ಆದರೆ ಅಹೀಟೂಬನ ಮಗನಾಗಿರುವ ಅಹೀಮೆಲೆಕನ ಮಕ್ಕಳಲ್ಲಿ ಒಬ್ಬನಾದ ಅಬಿಯಾತರನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಹೋದನು. \v 21 ಸೌಲನು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಅಬಿಯಾತರನು ದಾವೀದನಿಗೆ ತಿಳಿಸಿದನು. \v 22 ಆಗ ದಾವೀದನು ಅಬಿಯಾತರನಿಗೆ, “ಎದೋಮ್ಯನಾದ ದೋಯೇಗನು ಅಲ್ಲಿ ಇದ್ದುದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ದಿನವೇ ನೆನೆಸಿಕೊಂಡೆ. ನಿನ್ನ ತಂದೆಯ ಮನೆಯ ಸಮಸ್ತರ ಪ್ರಾಣಹತ್ಯೆಗೆ ಕಾರಣನಾದವನು ನಾನೇ. \v 23 ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಏಕೆಂದರೆ ನನ್ನ ಪ್ರಾಣವನ್ನು ಹುಡುಕುವವನು ನಿನ್ನ ಪ್ರಾಣವನ್ನು ಹುಡುಕುವನು; ನೀನು ನನ್ನ ಸಂಗಡ ಇದ್ದರೆ ಸುರಕ್ಷಿತನಾಗಿರುವಿ,” ಎಂದನು. \c 23 \s1 ದಾವೀದನು ಕೆಯೀಲಾ ನಗರನ್ನು ಉಳಿಸಿದ್ದು \p \v 1 “ಫಿಲಿಷ್ಟಿಯರು ಕೆಯೀಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆ,” ಎಂದು ದಾವೀದನಿಗೆ ತಿಳಿಸಿದರು. \v 2 ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. \p ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು. \p \v 3 ಆಗ ದಾವೀದನ ಜನರು ಅವನಿಗೆ, “ಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ. ಆದರೆ ನಾವು ಫಿಲಿಷ್ಟಿಯರ ಸೈನ್ಯಗಳಿಗೆ ವಿರೋಧವಾಗಿ ಕೆಯೀಲಾ ನಗರಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವುದು,” ಎಂದರು. \p \v 4 ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು. \v 5 ಹಾಗೆಯೇ ದಾವೀದನೂ, ಅವನ ಜನರೂ ಎದ್ದು ಕೆಯೀಲಾ ನಗರಕ್ಕೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ, ಅವರ ಪಶುಗಳನ್ನು ಹಿಡಿದುಕೊಂಡು ಬಂದು, ಅವರನ್ನು ಪೂರ್ಣವಾಗಿ ಸೋಲಿಸಿದರು. ಈ ಪ್ರಕಾರ ದಾವೀದನು ಕೆಯೀಲಾ ನಗರದ ನಿವಾಸಿಗಳನ್ನು ರಕ್ಷಿಸಿದನು. \v 6 ಅಹೀಮೆಲೆಕನ ಮಗ ಅಬಿಯಾತರನು ಕೆಯೀಲಾ ನಗರದಲ್ಲಿ ಇರುವ ದಾವೀದನ ಬಳಿಗೆ ಓಡಿ ಬಂದಾಗ, ಅವನ ಕೈಯಲ್ಲಿ ಏಫೋದು ಇತ್ತು. \s1 ಸೌಲನು ದಾವೀದನನ್ನು ಹಿಂದಟ್ಟಿದ್ದು \p \v 7 ದಾವೀದನು ಕೆಯೀಲಾ ನಗರಕ್ಕೆ ಬಂದಿದ್ದಾನೆ ಎಂಬ ವಿಷಯ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ಅವನು ಬಾಗಿಲುಗಳೂ, ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಈಗ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು. \v 8 ಆಗ ಸೌಲನು ದಾವೀದನನ್ನೂ, ಅವನ ಜನರನ್ನೂ ಮುತ್ತಿಕೊಳ್ಳಲು ತನ್ನ ಸೈನಿಕರನ್ನು ಯುದ್ಧಕ್ಕೆ ಹೋಗಲು ಕೆಯೀಲಾ ನಗರಕ್ಕೆ ಕರೆದನು. \p \v 9 ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿದ್ದರಿಂದ ಯಾಜಕನಾದ ಅಬಿಯಾತರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದನು. \v 10 ಆಗ ದಾವೀದನು, “ಇಸ್ರಾಯೇಲ್ ದೇವರಾದ ಯೆಹೋವ ದೇವರೇ, ಸೌಲನು ಕೆಯೀಲಾ ನಗರಕ್ಕೆ ಬಂದು, ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿಮ್ಮ ಸೇವಕನು ಖಂಡಿತವಾಗಿ ಕೇಳಿದನು. \v 11 ಕೆಯೀಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿಮ್ಮ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ದಯಮಾಡಿ ಇದನ್ನು ನಿಮ್ಮ ಸೇವಕನಿಗೆ ತಿಳಿಸಿರಿ,” ಎಂದನು. \p ಅದಕ್ಕೆ ಯೆಹೋವ ದೇವರು, “ಅವನು ಬರುವನು,” ಎಂದರು. \p \v 12 ಅನಂತರ ದಾವೀದನು, “ಕೆಯೀಲಾ ಪಟ್ಟಣದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ?” ಎಂದು ಕೇಳಿದನು. \p ಯೆಹೋವ ದೇವರು, “ಅವರು ಒಪ್ಪಿಸಿಕೊಡುವರು,” ಎಂದರು. \p \v 13 ಆದ್ದರಿಂದ ದಾವೀದನೂ, ಹೆಚ್ಚು ಕಡಿಮೆ ಆರುನೂರು ಮಂದಿಯಿದ್ದ ತನ್ನ ಜನರೂ ಎದ್ದು ಕೆಯೀಲಾವನ್ನು ಬಿಟ್ಟು ವಿವಿಧ ಕಡೆಗಳಲ್ಲಿ ಅಲೆದಾಡಿದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು. \p \v 14 ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ, ಜೀಫ್ ಎಂಬ ಮರುಭೂಮಿಯ ಬೆಟ್ಟದಲ್ಲಿಯೂ ವಾಸವಾಗಿದ್ದನು. ಸೌಲನು ದಿನವೂ ಅವನನ್ನು ಹುಡುಕುತ್ತಿದ್ದನು. ಆದರೆ ದೇವರು ದಾವೀದನನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ. \p \v 15 ತನ್ನ ಪ್ರಾಣವನ್ನು ತೆಗೆಯುವುದಕ್ಕೆ ಸೌಲನು ಹೊರಟಿದ್ದಾನೆಂದು ದಾವೀದನು ತಿಳಿದಾಗ, ಅವನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು. \v 16 ಆಗ ಸೌಲನ ಮಗ ಯೋನಾತಾನನು ಎದ್ದು ಮರುಭೂಮಿಯಲ್ಲಿರುವ ದಾವೀದನ ಬಳಿಗೆ ಹೋಗಿ, ಅವನನ್ನು ದೇವರಲ್ಲಿ ಬಲಪಡಿಸಿ ಸಹಾಯಮಾಡಿದನು. \v 17 ಯೋನಾತಾನನು ಅವನಿಗೆ, “ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ,” ಎಂದನು. \v 18 ಅವರಿಬ್ಬರೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಹೋರೆಷದಲ್ಲಿಯೇ ಉಳಿದನು. ಆದರೆ ಯೋನಾತಾನನು ತನ್ನ ಮನೆಗೆ ಹೋದನು. \p \v 19 ಆಗ ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ನಮ್ಮ ಪಕ್ಷವಾಗಿಯೇ ಹೋರೆಷದ ಗಿರಿಗಳಲ್ಲಿ ಅಂದರೆ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದನಲ್ಲವೇ? \v 20 ಈಗ ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ. ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು,” ಎಂದರು. \p \v 21 ಆಗ ಸೌಲನು, “ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ. \v 22 ನೀವು ದಯಮಾಡಿ ಹೋಗಿ ಅವನು ಹೆಜ್ಜೆ ಇಡುವ ಸ್ಥಳವನ್ನೂ, ಅಲ್ಲಿ ಅವನನ್ನು ನೋಡಿದವರು ಯಾರು ಎಂಬುದನ್ನೂ ಇನ್ನೂ ಸೂಕ್ಷ್ಮವಾಗಿ ತಿಳಿದುಕೊಂಡು ನೋಡಿರಿ. ಏಕೆಂದರೆ ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾನೆಂದು ನನಗೆ ಹೇಳುತ್ತಾರೆ. \v 23 ಅವನು ಅಡಗಿಕೊಂಡಿರುವ ಸಮಸ್ತ ರಹಸ್ಯ ಸ್ಥಳಗಳನ್ನೂ ನೋಡಿ ತಿಳಿದುಕೊಂಡು, ನಿಶ್ಚಯವಾದ ವರ್ತಮಾನವನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ, ಯೆಹೂದದ ಸಹಸ್ರ ಕುಲದಲ್ಲಿಯೂ ಅವನನ್ನು ಹುಡುಕಿ ಅವನನ್ನು ಹಿಡಿಯುವೆನು,” ಎಂದನು. \p \v 24 ಆದ್ದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ, ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಮಾವೋನಿನ ಮರುಭೂಮಿಯಲ್ಲಿದ್ದರು. \v 25 ಸೌಲನೂ, ಅವನ ಜನರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿದಾಗ, ಅವನು ಬಂಡೆಗಳಲ್ಲಿ ಇಳಿದು ಮಾವೋನಿನ ಮರುಭೂಮಿಯಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಮರುಭೂಮಿಯಲ್ಲಿ ದಾವೀದನನ್ನು ಹಿಂದಟ್ಟಿದನು. \p \v 26 ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು. ದಾವೀದನೂ, ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು. ಸೌಲನಿಗೆ ಭಯಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆಪಡುತ್ತಿದ್ದರು. ಆಗ ಸೌಲನೂ, ಅವನ ಜನರೂ ಅವರನ್ನು ಹಿಡಿಯುವಂತೆ ಸುತ್ತಿಕೊಂಡರು. \v 27 ಆದರೆ ಒಬ್ಬ ಸೇವಕನು ಸೌಲನ ಬಳಿಗೆ ಬಂದು, “ನೀನು ತ್ವರೆಯಾಗಿ ಬಾ. ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ,” ಎಂದನು. \v 28 ಆದ್ದರಿಂದ ಸೌಲನು ದಾವೀದನನ್ನು ಹಿಂದಟ್ಟುವುದನ್ನು ಬಿಟ್ಟು, ಫಿಲಿಷ್ಟಿಯರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಸೇಲಾ ಅಮ್ಮಾಲೆಕೋತ್ ಎಂದರೆ, ಅಡ್ಡ ಬೆಟ್ಟ ಎಂದು ಹೆಸರಿಟ್ಟರು. \v 29 ದಾವೀದನು ಆ ಸ್ಥಳವನ್ನು ಬಿಟ್ಟು ಹೋಗಿ ಏನ್ಗೆದಿಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು. \c 24 \s1 ದಾವೀದನು ಸೌಲನನ್ನು ಉಳಿಸಿದ್ದು \p \v 1 ಆಗ ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರುಗಿ ಬಂದಾಗ, “ದಾವೀದನು ಏನ್ಗೆದಿ ಮರುಭೂಮಿಯಲ್ಲಿ ಇದ್ದಾನೆ,” ಎಂದು ಅವನಿಗೆ ತಿಳಿದುಬಂದಿತು. \v 2 ಆಗ ಸೌಲನು ಸಮಸ್ತ ಇಸ್ರಾಯೇಲಿನಲ್ಲಿ ಶ್ರೇಷ್ಠರಾದ ಮೂರು ಸಾವಿರ ಸೈನಿಕರನ್ನು ತೆಗೆದುಕೊಂಡು ದಾವೀದನನ್ನೂ, ಅವನ ಜನರನ್ನೂ ಹುಡುಕಲು ಕಾಡುಮೇಕೆಗಳಿರುವ ಬಂಡೆಗಳಿಗೆ ಹೋದನು. \p \v 3 ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು. \v 4 ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು. \p \v 5 ಆದರೆ ಹಾಗೆ ಮಾಡಿದ ಮೇಲೆ, ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ದಾವೀದನ ಮನಃಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು. \v 6 ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು. \v 7 ಹೀಗೆಯೇ ದಾವೀದನು ತನ್ನ ಜನರನ್ನು ಸೌಲನ ಮೇಲೆ ಬೀಳಗೊಡದೆ, ಈ ಮಾತುಗಳಿಂದ ಅವರನ್ನು ನಿಲ್ಲಿಸಿದನು. ಸೌಲನು ಎದ್ದು ಗವಿಯನ್ನು ಬಿಟ್ಟು, ಹೊರಗೆ ನಡೆದು ಹೋದನು. \p \v 8 ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು. \v 9 ಸೌಲನಿಗೆ ದಾವೀದನು, “ಇಗೋ, ದಾವೀದನು ನಿನಗೆ ಕೇಡು ಮಾಡಲು ಹುಡುಕುತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಏಕೆ ಕೇಳುತ್ತಿದ್ದೀ? \v 10 ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ. \v 11 ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ. \v 12 ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ. \v 13 ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ. \p \v 14 “ಇಸ್ರಾಯೇಲಿನ ಅರಸನು ಯಾರನ್ನು ಹಿಂದಟ್ಟಿ ಹೊರಟನು? ಯಾರನ್ನು ಹಿಂದಟ್ಟುತ್ತೀ? ಸತ್ತ ನಾಯಿಯನ್ನೇ? ಒಂದು ನೊಣವನ್ನೇ? \v 15 ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು. \p \v 16 ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು. \v 17 ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ. \v 18 ಯೆಹೋವ ದೇವರು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಾಗ, ನೀನು ನನ್ನನ್ನು ಕೊಂದುಹಾಕದೆ ಇದ್ದುದರಿಂದ, ನೀನು ನನಗೆ ಉಪಕಾರ ಮಾಡಿದ್ದನ್ನು ಈ ಹೊತ್ತು ತೋರಿಸಿದೆ. \v 19 ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ. \v 20 ಈಗ ಇಗೋ, ನೀನು ನಿಶ್ಚಯವಾಗಿ ಅರಸನಾಗುವೆ ಎಂದೂ, ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರವಾಗುವುದೆಂದೂ ನಾನು ಚೆನ್ನಾಗಿ ಬಲ್ಲೆನು. \v 21 ಆದ್ದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ಕಡಿದುಬಿಡುವುದಿಲ್ಲವೆಂದೂ, ನನ್ನ ಗೋತ್ರದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ನನಗೆ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣಮಾಡು,” ಎಂದನು. \p \v 22 ಹಾಗೆಯೇ ದಾವೀದನು ಸೌಲನಿಗೆ ಪ್ರಮಾಣ ಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಮನುಷ್ಯರೂ ಆಶ್ರಯಗಿರಿಗೆ ಏರಿಹೋದರು. \c 25 \s1 ದಾವೀದ, ನಾಬಾಲ ಮತ್ತು ಅಬೀಗೈಲಳು \p \v 1 ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು. \p \v 2 ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. \v 3 ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆ ಕತ್ತರಿಸುತ್ತಿದ್ದನು. ಈ ಮನುಷ್ಯನ ಹೆಸರು ನಾಬಾಲನು. ಅವನ ಹೆಂಡತಿಯ ಹೆಸರು ಅಬೀಗೈಲಳು. ಆ ಸ್ತ್ರೀಯು ಬಹು ಬುದ್ಧಿವಂತೆ ಹಾಗು ಸುಂದರಿ. ಆದರೆ ಆ ಮನುಷ್ಯನು ಒರಟಾದವನೂ ದುಷ್ಕರ್ಮಿಯೂ ಆಗಿದ್ದನು. ಅವನು ಕಾಲೇಬನ ವಂಶಸ್ಥನು. \p \v 4 ನಾಬಾಲನು ತನ್ನ ಕುರಿಗಳ ಉಣ್ಣೆ ಕತ್ತರಿಸುವ ವರ್ತಮಾನವನ್ನು ದಾವೀದನು ಮರುಭೂಮಿಯಲ್ಲಿ ಕೇಳಿದನು. \v 5 ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು. ದಾವೀದನು ಅವರಿಗೆ, “ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ, ನನ್ನ ಹೆಸರಿನಿಂದ ಅವನ ಕ್ಷೇಮಸಮಾಚಾರವನ್ನು ಕೇಳಿ, ಬಾಳುವವನಾದ ಅವನಿಗೆ ಹೇಳಬೇಕಾದದ್ದೇನೆಂದರೆ: \v 6 ‘ನಿನಗೆ ಸಮಾಧಾನವೂ, ನಿನ್ನ ಮನೆಗೆ ಸಮಾಧಾನವೂ ನಿನ್ನ ಸರ್ವಸಂಪತ್ತಿಗೂ ಸಮಾಧಾನವೂ ಆಗಲಿ. \p \v 7 “ ‘ಈಗ ನಿನಗೆ ಕುರಿಗಳ ಉಣ್ಣೆ ಕತ್ತರಿಸುವವರು ಉಂಟೆಂದು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿಕಾಯುವವರು ಕರ್ಮೆಲಿನಲ್ಲಿದ್ದ ದಿವಸಗಳೆಲ್ಲಾ ನಾವು ಅವರಿಗೆ ತೊಂದರೆಪಡಿಸಲಿಲ್ಲ. ಅವರು ಒಂದಾದರೂ ಕಳೆದುಕೊಳ್ಳಲಿಲ್ಲ. \v 8 ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’ ” ಎಂದು ಅವರನ್ನು ಕಳುಹಿಸಿದನು. \p \v 9 ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು. \p \v 10 ನಾಬಾಲನು ದಾವೀದನ ಸೇವಕರಿಗೆ ಉತ್ತರವಾಗಿ, “ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಉಂಟು. \v 11 ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನು ತೆಗೆದು, ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ?” ಎಂದನು. \p \v 12 ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು, ಈ ಮಾತುಗಳನ್ನೆಲ್ಲಾ ತಿಳಿಸಿದರು. \v 13 ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು. \p \v 14 ಆಗ ಕೆಲಸದವರಲ್ಲಿ ಯುವಕನಾದವನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಯಜಮಾನನನ್ನು ವಂದಿಸಲು ದಾವೀದನು ಮರುಭೂಮಿಯಿಂದ ದೂತರನ್ನು ಕಳುಹಿಸಿದನು. \v 15 ಆದರೆ ಇವನು ಅವರನ್ನು ನಿಂದಿಸಿದನು. ಆ ಜನರು ನಮಗೆ ಮಹಾ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನಗಳೆಲ್ಲಾ ನಾವು ತೊಂದರೆ ಪಡಲಿಲ್ಲ. ಒಂದನ್ನಾದರೂ ಕಳೆದುಕೊಳ್ಳಲಿಲ್ಲ. \v 16 ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡು ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯಂತೆ ಗೋಡೆಯಾಗಿದ್ದರು. \v 17 ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು. \p \v 18 ಆಗ ಅಬೀಗೈಲಳು ತೀವ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸವನ್ನೂ ಬೇಯಿಸಿದ ಐದು ಕುರಿಗಳ ಮಾಂಸವನ್ನೂ ಐವತ್ತು ಸೇರು ಹುರಿದ ಧಾನ್ಯವನ್ನೂ ಒಣಗಿದ ನೂರು ದ್ರಾಕ್ಷಿ ಗೊನೆಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ಕತ್ತೆಗಳ ಮೇಲೆ ಹೇರಿಸಿಕೊಂಡು, \v 19 ತನ್ನ ಸೇವಕರಿಗೆ, “ನನಗೆ ಮುಂದಾಗಿ ಹೋಗಿರಿ. ನಾನು ನಿಮ್ಮ ಹಿಂದೆ ಬರುವೆನು,” ಎಂದು ಹೇಳಿದಳು. ಆದರೆ ತನ್ನ ಗಂಡನಾದ ನಾಬಾಲನಿಗೆ ಇದನ್ನು ತಿಳಿಸಲಿಲ್ಲ. \p \v 20 ಆಗ, ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಮಾರ್ಗದಲ್ಲಿ ಬೆಟ್ಟದ ಮರೆಗೆ ಬಂದಾಗ, ದಾವೀದನೂ ಅವನ ಜನರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು. \v 21 ಅಷ್ಟರಲ್ಲಿ ದಾವೀದನು ತನ್ನ ಜನರಿಗೆ, “ಅಡವಿಯಲ್ಲಿದ್ದ ಇವನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಅವನು ನಾನು ಮಾಡಿದ ಉಪಕಾರಕ್ಕೆ ಅಪಕಾರ ಮಾಡಿದ್ದಾನೆ. \v 22 ಬೆಳಗಾಗುವಷ್ಟರಲ್ಲಿ ಅವನ ಜನರಲ್ಲಿ ನಾನು ಒಬ್ಬ ಗಂಡಸನನ್ನಾದರೂ ಉಳಿಸಿದರೆ, ದೇವರು ದಾವೀದನಾದ ನನಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ,” ಎಂದು ಹೇಳಿದ್ದನು. \p \v 23 ಅಬೀಗೈಲಳು ದಾವೀದನನ್ನು ಕಂಡಾಗ, ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ, ಅವನ ಮುಂದೆ ಬೋರಲು ಬಿದ್ದು ನಮಸ್ಕರಿಸಿದಳು. \v 24 ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು. \v 25 ನನ್ನ ಒಡೆಯನೇ, ದಯಮಾಡಿ ದುಷ್ಟನಾದ ನಾಬಾಲನ ಮೇಲೆ ಲಕ್ಷ್ಯವಿಡಬೇಡ. ಏಕೆಂದರೆ ಅವನ ಹೆಸರು ಹೇಗೋ, ಹಾಗೆಯೇ ಅವನು. ಅವನು ನಾಬಾಲನೆಂಬ ಹೆಸರುಳ್ಳವನು. ಬುದ್ಧಿಹೀನತೆ ಅವನಲ್ಲಿ ಇದೆ. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಸೇವಕರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ. \v 26 ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ. \v 27 ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತೆಗೆದುಕೊಂಡು ಬಂದ ಈ ಕಾಣಿಕೆಯು ನನ್ನ ಒಡೆಯನ ಹೆಜ್ಜೆಯಲ್ಲಿ ನಡೆಯುವವರಿಗೆ ಸಲ್ಲಲಿ. \p \v 28 “ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು. \v 29 ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು. \v 30 ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಯೆಹೋವ ದೇವರು ಹೇಳಿದ ಒಳ್ಳೆಯದೆಲ್ಲವನ್ನು ನಿನಗೆ ಮಾಡಿ, ನಿನ್ನನ್ನು ಇಸ್ರಾಯೇಲರ ಮೇಲೆ ನಾಯಕನಾಗಿ ನೇಮಿಸಿದಾಗ, \v 31 ನೀನು ಸುಮ್ಮನೆ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆದರೆ ನನ್ನ ಒಡೆಯನನ್ನು ಯೆಹೋವ ದೇವರು ಚೆನ್ನಾಗಿ ನಡೆಸಿದಾಗ, ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು,” ಎಂದಳು. \p \v 32 ಆಗ ದಾವೀದನು ಅಬೀಗೈಲಳಿಗೆ, “ನನ್ನನ್ನು ಎದುರುಗೊಳ್ಳುವುದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. \v 33 ನಿನ್ನ ಬುದ್ಧಿಮಾತಿಗಾಗಿಯೂ, ನಾನು ರಕ್ತ ಚೆಲ್ಲುವುದಕ್ಕೂ, ನನ್ನ ಕೈಯಿಂದ ನನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಈ ಹೊತ್ತು ನನ್ನನ್ನು ತಡೆದ ನಿನಗೆ ಆಶೀರ್ವಾದ ಆಗಲಿ. \v 34 ಏಕೆಂದರೆ ನಿನಗೆ ಕೇಡು ಆಗದ ಹಾಗೆ ನನ್ನನ್ನು ತಡೆದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಜೀವದಾಣೆ, ನೀನು ತ್ವರೆಯಾಗಿ ನನ್ನನ್ನು ಎದುರುಗೊಳ್ಳದಿದ್ದರೆ, ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ,” ಎಂದು ಹೇಳಿದನು. \p \v 35 ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು. \p \v 36 ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ. \v 37 ಉದಯದಲ್ಲಿ ನಾಬಾಲನ ದ್ರಾಕ್ಷಾರಸದ ಅಮಲು ಇಳಿದಾಗ, ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು, ಹೃದಯಾಘಾತವಾಗಿ ಅವನು ಕಲ್ಲಿನ ಹಾಗಾದನು. \v 38 ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ, ಯೆಹೋವ ದೇವರ ದಂಡನೆಯ ನಿಮಿತ್ತ ನಾಬಾಲನು ಸತ್ತುಹೋದನು. \p \v 39 ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. \p ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು. \v 40 ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನು,” ಎಂದು ಹೇಳಿದರು. \p \v 41 ಆಗ ಅವಳು ಎದ್ದು ಬೋರಲು ಬಿದ್ದು, “ನಿನ್ನ ದಾಸಿಯಾದ ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದಳು. \v 42 ಅಬೀಗೈಲಳು ತ್ವರೆಯಾಗಿ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು, ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರೆದುಕೊಂಡು ದಾವೀದನ ಸೇವಕರ ಹಿಂದೆ ಹೋಗಿ, ಅವನಿಗೆ ಹೆಂಡತಿಯಾದಳು. \v 43 ಇದಲ್ಲದೆ ದಾವೀದನು ಇಜ್ರೆಯೇಲ್ ಊರಿನವಳಾದ ಅಹೀನೋವಮಳನ್ನು ಮದುವೆ ಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು. \v 44 ಆದರೆ ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀ\f + \fr 25:44 \fr*\fq ಪಲ್ಟೀ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಪಲ್ಟೀಯೇಲ\fqa*\f* ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು. \c 26 \s1 ದಾವೀದನು ಮತ್ತೊಮ್ಮೆ ಸೌಲನನ್ನು ಉಳಿಸಿದ್ದು \p \v 1 ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ,” ಎಂದರು. \p \v 2 ಆಗ ಸೌಲನು ಎದ್ದು ಜೀಫ್ ಮರುಭೂಮಿಯಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿನಲ್ಲಿ ಆಯ್ದ ಮೂರು ಸಾವಿರ ಜನರ ಸಂಗಡ ಜೀಫ್ ಮರುಭೂಮಿಗೆ ಹೊರಟುಹೋಗಿ, \v 3 ಯೆಷಿಮೋನಿಗೆ ಎದುರಾದ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿಸಿದನು. ದಾವೀದನು ಸೌಲನು ತನ್ನ ಹಿಂದೆ ಮರುಭೂಮಿಗೆ ಬಂದದ್ದನ್ನು ನೋಡಿ, ಮರುಭೂಮಿಯಲ್ಲಿ ನಿಂತನು. \v 4 ದಾವೀದನು ಗೂಢಚಾರರನ್ನು ಕಳುಹಿಸಿ, ಸೌಲನು ಬಂದದ್ದು ನಿಶ್ಚಯವೆಂದು ತಿಳಿದುಕೊಂಡನು. \p \v 5 ದಾವೀದನು ಎದ್ದು ಸೌಲನು ಇಳಿದುಕೊಂಡಿದ್ದ ಸ್ಥಳಕ್ಕೆ ಬಂದನು. ಸೌಲನೂ, ಅವನ ದಂಡಿನ ನಾಯಕನಾಗಿರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಸೌಲನು ಮಧ್ಯದಲ್ಲಿ ಮಲಗಿದ್ದನು. ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು. \p \v 6 ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. \p ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು. \p \v 7 ದಾವೀದನೂ, ಅಬೀಷೈಯನೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಸೌಲನು ಕಂದಕದೊಳಗೆ ಮಲಗಿ ನಿದ್ರೆ ಮಾಡುತ್ತಿದ್ದನು. ಅವನ ಈಟಿಯು ಅವನ ತಲೆದಿಂಬಿನ ಬಳಿಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲು ಅಬ್ನೇರನೂ, ಜನರೂ ಮಲಗಿದ್ದರು. \p \v 8 ಆಗ ಅಬೀಷೈಯನು ದಾವೀದನಿಗೆ, “ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಿಂದ ನೆಲಕ್ಕೆ ಹತ್ತುವಂತೆ ತಿವಿಯಲು ಅಪ್ಪಣೆಕೊಡಬೇಕು; ಎರಡು ಸಾರಿ ಹೊಡೆಯುವುದಿಲ್ಲ,” ಎಂದನು. \p \v 9 ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು. \v 10 ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು. \v 11 ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು. \p \v 12 ದಾವೀದನು ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೊಂಡನು. ಅವರು ಹೊರಟು ಹೋದರು. ಒಬ್ಬರಾದರೂ ನೋಡಲಿಲ್ಲ ಇಲ್ಲವೆ ತಿಳಿದುಕೊಳ್ಳಲಿಲ್ಲ, ಅರಿತಿದ್ದಿಲ್ಲ, ಯಾರೂ ಎಚ್ಚೆತ್ತಿರಲಿಲ್ಲ. ಏಕೆಂದರೆ ಯೆಹೋವ ದೇವರಿಂದ ಗಾಢನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರು ಗಾಢ ನಿದ್ರೆಯಲ್ಲಿದ್ದರು. \p \v 13 ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ, ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಉಂಟಾಗುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು, \v 14 ಸೈನಿಕರಿಗೂ ನೇರನ ಮಗನಾದ ಅಬ್ನೇರನಿಗೂ ಕೇಳಿಸುವಂತೆ ಕೂಗಿ, “ಅಬ್ನೇರನೇ, ನೀನು ಉತ್ತರ ಕೊಡುವುದಿಲ್ಲವೋ?” ಎಂದನು. \p ಅದಕ್ಕೆ ಅಬ್ನೇರನು ಉತ್ತರವಾಗಿ, “ಅರಸನಿಗೆ ಎದುರಾಗಿ ಕೂಗುವ ನೀನು ಯಾರು?” ಎಂದನು. \p \v 15 ಆಗ ದಾವೀದನು ಅಬ್ನೇರನಿಗೆ, “ನೀನು ಪರಾಕ್ರಮಶಾಲಿಯಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವುದಕ್ಕೆ ಬಂದಿದ್ದನು. \v 16 ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು. \p \v 17 ಆಗ ಸೌಲನು ದಾವೀದನ ಸ್ವರವನ್ನು ತಿಳಿದುಕೊಂಡು, “ನನ್ನ ಪುತ್ರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ?” ಎಂದನು. \p ದಾವೀದನು, “ಅರಸನಾದ ನನ್ನ ಒಡೆಯನೇ, ನನ್ನ ಧ್ವನಿಯೇ ಹೌದು,” ಎಂದನು. \v 18 “ನನ್ನ ಒಡೆಯನು ತನ್ನ ಸೇವಕನನ್ನು ಹೀಗೆ ಹಿಂದಟ್ಟುವುದೇನು? ನಾನೇನು ಮಾಡಿದೆನು? \v 19 ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು. \v 20 ಆದ್ದರಿಂದ ಯೆಹೋವ ದೇವರ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ, ಇಸ್ರಾಯೇಲಿನ ಅರಸನು ಒಂದು ನೊಣವನ್ನು ಹುಡುಕಲು ಹೊರಟನು,” ಎಂದನು. \p \v 21 ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು. \p \v 22 ದಾವೀದನು ಉತ್ತರವಾಗಿ, “ಅರಸನ ಈಟಿಯು ಇಲ್ಲಿ ಇದೆ. ಸೇವಕರಲ್ಲಿ ಒಬ್ಬನು ಈ ಕಡೆಗೆ ಬಂದು, ಅದನ್ನು ತೆಗೆದುಕೊಂಡು ಹೋಗಲಿ. \v 23 ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು. \v 24 ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು. \p \v 25 ಆಗ ಸೌಲನು ದಾವೀದನಿಗೆ, “ನನ್ನ ಮಗನಾದ ದಾವೀದನೇ, ದೇವರು ನಿನ್ನನ್ನು ಆಶೀರ್ವದಿಸಲಿ. ನೀನು ಮಹತ್ಕಾರ್ಯಗಳನ್ನು ಮಾಡುವೆ, ಗೆದ್ದೇ ಗೆಲ್ಲುವೆ,” ಎಂದನು. \p ಹಾಗೆಯೇ ದಾವೀದನು ತನ್ನ ಮಾರ್ಗವಾಗಿ ಹೋದನು. ಸೌಲನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು. \c 27 \s1 ದಾವೀದನು ಫಿಲಿಷ್ಟಿಯರ ಮಧ್ಯದಲ್ಲಿ \p \v 1 ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು. \p \v 2 ಆದ್ದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರುನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕನ ಮಗ ಆಕೀಷನ ಬಳಿಗೆ ಹೋದನು. \v 3 ದಾವೀದನು ಗತ್ ಊರಿನಲ್ಲಿ ಆಕೀಷನ ಬಳಿಯಲ್ಲಿ ತಾನೂ, ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ, ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾದ ಅಹೀನೋವಮಳು, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಸಹಿತವಾಗಿಯೂ ಇದ್ದರು. \v 4 ದಾವೀದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲಾಯಿತು. ಆದ್ದರಿಂದ ಅವನು ಆ ತರುವಾಯ ದಾವೀದನನ್ನು ಹುಡುಕಲಿಲ್ಲ. \p \v 5 ದಾವೀದನು ಆಕೀಷನಿಗೆ, “ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದರೆ, ಗ್ರಾಮಾಂತರಗಳಲ್ಲಿ ನಾನು ಇರುವುದಕ್ಕೆ ಒಂದು ಸ್ಥಳ ನನಗೆ ಕೊಡು. ನಿನ್ನ ದಾಸನು ಏಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು?” ಎಂದನು. \p \v 6 ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದ್ದರಿಂದ ಚಿಕ್ಲಗ್ ಇಂದಿನವರೆಗೂ ಯೆಹೂದದ ಅರಸರಿಗೆ ಸೇರಿದೆ. \v 7 ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳು ವಾಸಿಸಿದ್ದನು. \p \v 8 ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು. \v 9 ಆಗ ದಾವೀದನು ಪುರುಷರನ್ನಾದರೂ, ಸ್ತ್ರೀಯರನ್ನಾದರೂ ಉಳಿಸದೆ, ಆ ಸೀಮೆಯನ್ನು ಹೊಡೆದು, ಕುರಿಪಶುಗಳನ್ನೂ, ಕತ್ತೆಗಳನ್ನೂ, ಒಂಟೆಗಳನ್ನೂ, ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿಬಂದನು. \p \v 10 ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು. \v 11 ದಾವೀದನು ಗತ್ ಪಟ್ಟಣಕ್ಕೆ ಒಬ್ಬ ಪುರುಷನನ್ನಾದರೂ ಸ್ತ್ರೀಯನನ್ನಾದರೂ ಜೀವಂತವಾಗಿ ತರಲಿಲ್ಲ. ಏಕೆಂದರೆ ಯಾರಾದರೂ ಹೋಗಿ ರಾಜನಾದ ಆಕೀಷನಿಗೆ ಸತ್ಯವನ್ನು ತಿಳಿಸಬಹುದೆಂದು ದಾವೀದನು ಯೋಚಿಸಿದನು. ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು. \v 12 ಆಕೀಷನು ದಾವೀದನನ್ನು ನಂಬಿ, “ಇವನು ತನ್ನ ಜನರಾದ ಇಸ್ರಾಯೇಲರಿಗೆ ಅಸಹ್ಯವಾದನು, ಆದ್ದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿರುವನು,” ಎಂದನು. \c 28 \p \v 1 ಆ ದಿವಸಗಳಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯಗಳನ್ನು ಕೂಡಿಸಿಕೊಂಡರು. ಆಗ ಆಕೀಷನು ದಾವೀದನಿಗೆ, “ನೀನೂ, ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ?” ಎಂದನು. \p \v 2 ದಾವೀದನು ಆಕೀಷನಿಗೆ, “ನಿಶ್ಚಯವಾಗಿ ನಿನ್ನ ದಾಸನು ಮಾಡುವುದನ್ನು ನೀನೇ ತಿಳಿದುಕೊಳ್ಳುವಿ,” ಎಂದನು. \p ಆಕೀಷನು ದಾವೀದನಿಗೆ, “ಎಂದೆಂದಿಗೂ ನಾನು ನಿನ್ನನ್ನು ಕಾವಲುಗಾರನಾಗಿ ಮಾಡುವೆನು,” ಎಂದನು. \s1 ಸೌಲ ಹಾಗು ಎಂದೋರಿನ ಮಾಂತ್ರಿಕಳು \p \v 3 ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿ, ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಳಿಟ್ಟರು. ಇದಲ್ಲದೆ ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಲ್ಲಿಂದ ಹೊರಡಿಸಿದ್ದನು. \p \v 4 ಆಗ ಫಿಲಿಷ್ಟಿಯರ ಸೈನ್ಯ ಕೂಡಿಬಂದು ಶೂನೇಮಿನಲ್ಲಿ ದಂಡಿಳಿದರು. ಸೌಲನು ಸಮಸ್ತ ಇಸ್ರಾಯೇಲನ್ನು ಕೂಡಿಸಿಕೊಂಡು ಗಿಲ್ಬೋವದಲ್ಲಿ ದಂಡಿಳಿದನು. \v 5 ಸೌಲನು ಫಿಲಿಷ್ಟಿಯರ ಸೈನ್ಯವನ್ನು ಕಂಡು ಭಯಪಟ್ಟನು. ಆತನ ಹೃದಯದಲ್ಲಿ ಭಯತುಂಬಿತು. \v 6 ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ. \v 7 ಆಗ ಸೌಲನು ತನ್ನ ದಾಸರಿಗೆ, “ನಾನು ವಿಚಾರಿಸುವಂತೆ ಮಾಂತ್ರಿಕಳಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ,” ಎಂದನು. \p ಅವನ ದಾಸರು ಅವನಿಗೆ, “ಇಗೋ, ಎಂದೋರಿನಲ್ಲಿ ಮಾಂತ್ರಿಕಳಾದ ಒಬ್ಬ ಸ್ತ್ರೀ ಇದ್ದಾಳೆ,” ಎಂದರು. \p \v 8 ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ, ತನ್ನ ಸಂಗಡ ಇಬ್ಬರನ್ನು ಕರೆದುಕೊಂಡು, ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ, “ನೀನು ದಯಮಾಡಿ ಸತ್ತವರ ಆತ್ಮವನ್ನು ವಿಚಾರಿಸಿ ನನಗೆ ಕಣಿ ಹೇಳು. ನಾನು ನಿನಗೆ ಹೇಳುವವನನ್ನು ನನಗೆ ಕಾಣುವಂತೆ ಮಾಡು,” ಎಂದನು. \p \v 9 ಆ ಸ್ತ್ರೀಯು ಅವನಿಗೆ, “ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವುದಕ್ಕೆ ಕಾರಣವಾಗುವ ಹಾಗೆ ಏಕೆ ನನ್ನ ಪ್ರಾಣಕ್ಕೆ ಉರುಳಿಡುತ್ತಿ?” ಎಂದಳು. \p \v 10 ಆಗ ಸೌಲನು, “ಯೆಹೋವ ದೇವರ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬರುವುದಿಲ್ಲ,” ಎಂದು ಅವಳಿಗೆ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದನು. \p \v 11 ಅವಳು, “ನಿನಗೆ ನಾನು ಯಾರನ್ನು ಇಲ್ಲಿ ಬರಮಾಡಬೇಕು?” ಎಂದಳು. \p ಅದಕ್ಕವನು, “ಸಮುಯೇಲನನ್ನು ಬರಮಾಡು,” ಎಂದನು. \p \v 12 ಆ ಸ್ತ್ರೀಯು ಸಮುಯೇಲನನ್ನು ಕಂಡಾಗ ಮಹಾಶಬ್ದದಿಂದ ಕೂಗಿದಳು. ಆ ಸ್ತ್ರೀಯು, “ಏಕೆ ನನ್ನನ್ನು ಮೋಸಮಾಡಿದಿ? ನೀನೇ ಸೌಲನು,” ಎಂದಳು. \p \v 13 ಅರಸನು ಅವಳಿಗೆ, “ಭಯಪಡಬೇಡ, ನೀನು ಕಂಡದ್ದೇನು?” ಎಂದನು. \p ಆಗ ಸ್ತ್ರೀಯು ಸೌಲನಿಗೆ, “ಒಂದು ಆತ್ಮವು ಭೂಮಿಯಿಂದ ಎದ್ದು ಬರುವುದನ್ನು ಕಂಡೆನು,” ಎಂದಳು. \p \v 14 ಆಗ ಅವನು, “ಅವನ ರೂಪ ಹೇಗಿದೆ?” ಎಂದು ಅವಳನ್ನು ಕೇಳಿದನು. \p ಅವಳು, “ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನುಷ್ಯನು ಬರುತ್ತಿದ್ದಾನೆ,” ಎಂದಳು. \p ಅವನು ಸಮುಯೇಲನು ಎಂದು ಸೌಲನು ತಿಳಿದುಕೊಂಡು, ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು. \p \v 15 ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. \p ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು. \p \v 16 ಸಮುಯೇಲನು ಅವನಿಗೆ, “ಯೆಹೋವ ದೇವರು ನಿನ್ನನ್ನು ಬಿಟ್ಟು ಹೋಗಿ ನಿನಗೆ ಶತ್ರುವಾಗಿರುವಾಗ, ನೀನು ನನ್ನನ್ನು ಕೇಳುವುದು ಏಕೆ? \v 17 ಯೆಹೋವ ದೇವರು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾರೆ. ಯೆಹೋವ ದೇವರು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು, ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟರು. \v 18 ನೀನು ಯೆಹೋವ ದೇವರ ಮಾತನ್ನು ಕೇಳದೆ, ಅಮಾಲೇಕ್ಯರ ಮೇಲೆ ಇದ್ದ ಅವರ ಉಗ್ರಕೋಪವನ್ನು ತೀರಿಸದೆ ಹೋದದ್ದರಿಂದ, ಯೆಹೋವ ದೇವರು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದರು. \v 19 ಯೆಹೋವ ದೇವರು ನಿನ್ನ ಸಹಿತವಾಗಿ ಇಸ್ರಾಯೇಲನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು. ನಾಳೆ ನೀನೂ, ನಿನ್ನ ಪುತ್ರರೂ ನನ್ನ ಸಂಗಡ ಇರುವಿರಿ. ಯೆಹೋವ ದೇವರು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು. \p \v 20 ಆಗ ಸೌಲನು ನೆಲದ ಮೇಲೆ ಬೋರಲು ಬಿದ್ದು, ಸಮುಯೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯಪಟ್ಟನು. ಆ ದಿನವೆಲ್ಲಾ ಏನೂ ಊಟಮಾಡದೆ ಇದ್ದುದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು. \p \v 21 ಆಗ ಆ ಸ್ತ್ರೀಯು ಸೌಲನ ಬಳಿಗೆ ಬಂದು, ಅವನು ಬಹಳ ತಲ್ಲಣಪಟ್ಟನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ, ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡವಳಾಗಿ, ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು. \v 22 ಆದ್ದರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ, ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನಗೆ ಕೊಡುವ ಆಹಾರವನ್ನು ಊಟಮಾಡು,” ಎಂದಳು. \p \v 23 ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. \p ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು. \p \v 24 ಆ ಸ್ತ್ರೀಯ ಮನೆಯಲ್ಲಿ ಒಂದು ಕೊಬ್ಬಿದ ಕರುವು ಇತ್ತು. ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, \v 25 ಸೌಲನ ಮುಂದೆ ಮತ್ತು ಅವನ ದಾಸರ ಮುಂದೆ ತಂದಿಟ್ಟಳು. ಅವರು ಊಟಮಾಡಿ ಆ ರಾತ್ರಿಯಲ್ಲೇ ಹೊರಟು ಹೋದರು. \c 29 \s1 ಆಕೀಷನು ದಾವೀದನನ್ನು ಚಿಕ್ಲಗಿಗೆ ಹಿಂದಿರುಗಿ ಕಳುಹಿಸಿದ್ದು \p \v 1 ಫಿಲಿಷ್ಟಿಯರು ತಮ್ಮ ಸಮಸ್ತ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿಕೊಂಡರು. ಹಾಗೆಯೇ ಇಸ್ರಾಯೇಲರು ಇಜ್ರೆಯೇಲ್ ಎಂಬ ಬುಗ್ಗೆಯ ಬಳಿಯಲ್ಲಿ ದಂಡಿಳಿದರು. \v 2 ಫಿಲಿಷ್ಟಿಯರ ಅಧಿಪತಿಗಳು ನೂರು ನೂರಾಗಿಯೂ, ಸಾವಿರ ಸಾವಿರವಾಗಿಯೂ ನಡೆದು ಬಂದರು. ದಾವೀದನೂ, ಅವನ ಜನರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು. \v 3 ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. \p ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು. \p \v 4 ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ? \v 5 ಸ್ತ್ರೀಯರು ತಮ್ಮ ನೃತ್ಯಗಳಲ್ಲಿ ಹಾಡಿದ ದಾವೀದನು ಇವನಲ್ಲವೇ: \q1 “ ‘ಸೌಲನು ಸಾವಿರ ಜನರನ್ನೂ, \q2 ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನು.’ ” \p \v 6 ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ನಿಜವಾಗಿಯೂ ಯೆಹೋವ ದೇವರಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವುದು ನನ್ನ ದೃಷ್ಟಿಗೆ ಒಳ್ಳೆಯದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. \v 7 ಆದ್ದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಗೆ ಇಲ್ಲದ್ದರಿಂದ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು,” ಎಂದನು. \p \v 8 ದಾವೀದನು ಆಕೀಷನಿಗೆ, “ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧಮಾಡಲು ಹೋಗದ ಹಾಗೆ ನಾನೇನು ಮಾಡಿದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದವರೆಗೂ ನನ್ನಲ್ಲಿ ಏನು ಕಂಡುಕೊಂಡಿ?” ಎಂದನು. \p \v 9 ಆಕೀಷನು ದಾವೀದನಿಗೆ ಉತ್ತರವಾಗಿ, “ನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ, ‘ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದು,’ ಎಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ. \v 10 ಆದ್ದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ಯಜಮಾನನ ಸೇವಕರನ್ನು ಕರಕೊಂಡು, ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು,” ಎಂದನು. \p \v 11 ಹಾಗೆಯೇ ದಾವೀದನೂ, ಅವನು ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರುಗಿ ಹೋಗಲು ಮುಂಜಾನೆ ಎದ್ದರು. ಫಿಲಿಷ್ಟಿಯರು ಇಜ್ರೆಯೇಲ್ ಎಂಬ ಪಟ್ಟಣಕ್ಕೆ ಹೊರಟು ಹೋದರು. \c 30 \s1 ದಾವೀದನು ಅಮಾಲೇಕ್ಯರನ್ನು ಸಂಹರಿಸಿದ್ದು \p \v 1 ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು. \v 2 ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರನ್ನಾದರೂ, ಕಿರಿಯರನ್ನಾದರೂ ಕೊಂದುಹಾಕದೆ, ಅವರನ್ನು ಸೆರೆಯಾಗಿ ತೆಗೆದುಕೊಂಡು, ತಮ್ಮ ಮಾರ್ಗವಾಗಿ ಹೊರಟು ಹೋದರು. \p \v 3 ದಾವೀದನೂ, ಅವನ ಜನರೂ ಆ ಪಟ್ಟಣಕ್ಕೆ ಬಂದಾಗ, ಅದು ಬೆಂಕಿಯಿಂದ ಸುಟ್ಟುಹೋಗಿರುವುದನ್ನೂ ಮತ್ತು ಆ ಜನರ ಹೆಂಡತಿಯರೂ ಅವರ ಪುತ್ರ ಪುತ್ರಿಯರೂ ಸೆರೆಯಾಗಿ ಹೋಗಿರುವುದನ್ನೂ ಕಂಡರು. \v 4 ಆಗ ದಾವೀದನೂ, ಅವನ ಸಂಗಡ ಇದ್ದ ಜನರೂ ಅಳುವುದಕ್ಕೆ ತಮ್ಮಲ್ಲಿ ಶಕ್ತಿಯಿಲ್ಲದೆ ಹೋಗುವವರೆಗೂ ತಮ್ಮ ಸ್ವರವನ್ನೆತ್ತಿ ಅತ್ತರು. \v 5 ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೆಯೇಲಿನವಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳು ಸೆರೆಯಾಗಿ ಹೋಗಿದ್ದರು. \v 6 ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು. \p \v 7 ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು. \v 8 ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. \p ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು. \p \v 9 ಆಗ ದಾವೀದನೂ, ಅವನ ಸಂಗಡ ಇದ್ದ ಆರುನೂರು ಜನರೂ ಹೋದರು. ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ, ಹಿಂದುಳಿದವರು ಅಲ್ಲಿಯೇ ನಿಂತರು. \v 10 ದಾವೀದನು ತಾನೂ, ನಾನೂರು ಜನರೂ ಹಿಂದಟ್ಟಿ ಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದರಿಂದ, ಇನ್ನೂರು ಜನರು ಅಲ್ಲಿ ನಿಂತರು. \p \v 11 ಅವನ ಜನರು ಒಬ್ಬ ಈಜಿಪ್ಟಿನವನು ಅಡವಿಯಲ್ಲಿ ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ಕೊಟ್ಟರು. ಅವನು ತಿಂದನು. \v 12 ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ. \p \v 13 ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. \p ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು. \v 14 ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು. \p \v 15 ದಾವೀದನು ಅವನಿಗೆ, “ನೀನು ನನ್ನನ್ನು ಆ ಗುಂಪಿನ ಬಳಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಕೇಳಿದನು. \p ಅದಕ್ಕವನು, “ನೀನು ನನ್ನನ್ನು ಕೊಂದುಹಾಕುವುದಿಲ್ಲ ಇಲ್ಲವೆ ನನ್ನನ್ನು ನನ್ನ ಯಜಮಾನನ ಕೈಯಲ್ಲಿ ಒಪ್ಪಿಸಿಕೊಡುವುದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಮಾಡಿದರೆ, ನಿನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ,” ಎಂದನು. \p \v 16 ಇವನು ದಾವೀದನನ್ನು ಕರೆದುಕೊಂಡು ಅಲ್ಲಿಗೆ ಹೋದಾಗ, ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶದಲ್ಲಿಯೂ, ಯೆಹೂದ ದೇಶದಲ್ಲಿಯೂ ವ್ಯಾಪಿಸಿಕೊಂಡು, ಸಮಸ್ತ ಕೊಳ್ಳೆ ತೆಗೆದುಕೊಂಡು ಬಂದುದರಿಂದ, ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು. \v 17 ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ. \v 18 ಅಮಾಲೇಕ್ಯರು ತೆಗೆದುಕೊಂಡು ಹೋದದ್ದನ್ನೆಲ್ಲವನ್ನೂ ತನ್ನ ಇಬ್ಬರು ಹೆಂಡತಿಯರನ್ನೂ ದಾವೀದನು ಬಿಡಿಸಿಕೊಂಡನು. \v 19 ಅವರು ತೆಗೆದುಕೊಂಡು ಹೋದ ಕಿರಿಯರಲ್ಲಾದರೂ, ಹಿರಿಯರಲ್ಲಾದರೂ, ಪುತ್ರರಲ್ಲಾದರೂ, ಪುತ್ರಿಯರಲ್ಲಾದರೂ, ಕೊಳ್ಳೆಯಾದ ಯಾವ ವಸ್ತುಗಳಲ್ಲಾದರೂ ಒಂದೂ ಕಡಿಮೆ ಇಲ್ಲದ ಹಾಗೆ, ದಾವೀದನು ಎಲ್ಲವನ್ನು ತಿರುಗಿ ತೆಗೆದುಕೊಂಡು ಬಂದನು. \v 20 ಇದಲ್ಲದೆ ದಾವೀದನು ಶತ್ರುಗಳ ಸಮಸ್ತ ದನಕುರಿಗಳ ಮಂದೆಗಳನ್ನು ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ಪಶುಗಳ ಮುಂದಾಗಿ ಹೊಡೆದುಕೊಂಡು ಬಂದರು. \p \v 21 ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು. \v 22 ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು. \p \v 23 ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು? \v 24 ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು. \v 25 ಹಾಗೆಯೇ ದಾವೀದನು ಆ ದಿವಸ ಮೊದಲ್ಗೊಂಡು ಇಂದಿನವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ, ಕಟ್ಟಳೆಯಾಗಿಯೂ ಮಾಡಿದನು. \p \v 26 ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು. \p \v 27 ಹೀಗೆ ದಾವೀದನು ಬೇತೇಲಿನವರು, ನೆಗೆಬನ ರಾಮೋತನವರು ಹಾಗೂ ಯತ್ತೀರಿನವರು, \v 28 ಅರೋಯೇರಿನವರು, ಸಿಪ್ಮೋತಿನವರು, ಎಷ್ಟೆಮೋವದವರು, \v 29 ರಾಕಾಲಿನವರು, ಯೆರಹ್ಮೇಲ್ಯರು, ಕೇನ್ಯರು, \v 30 ಹೊರ್ಮಾದವರು, ಬೋರಾಷಾನಿನವರು, ಅತಾಕಿನವರು, \v 31 ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು. \c 31 \s1 ಸೌಲನ ಅಂತ್ಯ \p \v 1 ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು. \v 2 ಫಿಲಿಷ್ಟಿಯರು ಸೌಲನನ್ನೂ, ಅವನ ಪುತ್ರರನ್ನೂ ಬಿಡದೆ ಬೆನ್ನಟ್ಟಿ, ಸೌಲನ ಪುತ್ರರಾದ ಯೋನಾತಾನನನ್ನೂ, ಅಬೀನಾದಾಬನನ್ನೂ, ಮಲ್ಕೀಷೂವನನ್ನೂ ಕೊಂದುಬಿಟ್ಟರು. \v 3 ಇದಲ್ಲದೆ ಯುದ್ಧವು ಸೌಲನಿದ್ದ ಕಡೆಯಲ್ಲಿ ಬಹುಘೋರವಾಗಿತ್ತು. ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದಾಗ ಅವನು ತೀವ್ರವಾಗಿ ಗಾಯಗೊಂಡನು. \p \v 4 ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. \p ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು. \v 5 ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು. \v 6 ಹೀಗೆ ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಆಯುಧ ಹೊರುವವನೂ, ಅವನ ಸಮಸ್ತ ಜನರೂ ಅದೇ ದಿನ ಸತ್ತರು. \p \v 7 ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು. \p \v 8 ಮಾರನೆಯ ದಿವಸದಲ್ಲಿ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳಲು ಬಂದಾಗ, ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವ ಸೌಲನನ್ನೂ, ಅವನ ಮೂವರು ಪುತ್ರರನ್ನೂ ಕಂಡರು. \v 9 ಅವರು ಅವನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು. \v 10 ಸೌಲನ ಆಯುಧಗಳನ್ನು ಅಷ್ಟೋರೆತ್ ಮಂದಿರದಲ್ಲಿ ಇಟ್ಟು, ಅವನ ಶವವನ್ನು ಬೇತ್ ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು. \p \v 11 ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಯಾಬೇಷ್ ಗಿಲ್ಯಾದಿನವರೆಲ್ಲರು ಕೇಳಿದಾಗ, \v 12 ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು, ರಾತ್ರಿಯೆಲ್ಲಾ ನಡೆದುಹೋಗಿ, ಬೇತ್ ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವುಗಳನ್ನು ಅಲ್ಲಿ ದಹಿಸಿದರು. \v 13 ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.