\id DEU - Biblica® Open Kannada Contemporary Version \ide UTF-8 \h ಧರ್ಮೋಪದೇಶಕಾಂಡ \toc1 ಧರ್ಮೋಪದೇಶಕಾಂಡ \toc2 ಧರ್ಮೋಪದೇಶಕಾಂಡ \toc3 ಧರ್ಮೋ \mt1 ಧರ್ಮೋಪದೇಶಕಾಂಡ \c 1 \s1 ಹೋರೇಬನ್ನು ಬಿಡಬೇಕೆಂಬ ಆಜ್ಞೆ \p \v 1 ಯೊರ್ದನ್ ನದಿಯ ಆಚೆ ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ, ಮೋಶೆ ಇಸ್ರಾಯೇಲರಿಗೆ ಹೇಳಿದ ಮಾತುಗಳು ಇವು. \v 2 ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ. \p \v 3 ನಲ್ವತ್ತನೆಯ ವರ್ಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿನದಲ್ಲಿ, ಮೋಶೆಯು ಇಸ್ರಾಯೇಲರಿಗೆ, ಯೆಹೋವ ದೇವರು ಅವನಿಗೆ ಅವರ ವಿಷಯವಾಗಿ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾತನಾಡಿದನು. \v 4 ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದ ಮೇಲೆಯೂ, ಅಷ್ಟಾರೋತ್‌ನಲ್ಲಿ, ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಎದ್ರೈಯಲ್ಲಿ ಸೋಲಿಸಿದ ಮೇಲೆಯೂ ಮೋಶೆ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿದನು. \p \v 5 ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆ ಈ ನಿಯಮವನ್ನು ವಿವರಿಸುವುದಕ್ಕೆ ಪ್ರಾರಂಭಿಸಿದನು: \b \p \v 6 ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮಗೆ, “ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು, \v 7 ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ. \v 8 ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು. \s1 ನಾಯಕರ ನೇಮಕ \p \v 9 ಆ ಕಾಲದಲ್ಲಿ ನಾನು ನಿಮಗೆ, “ನಾನೊಬ್ಬನೇ ನಿಮ್ಮ ಭಾರವನ್ನು ಹೊರಲಾರೆನು. \v 10 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಿದ್ದಾರೆ. ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ. \v 11 ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಲಿ, ಅವರು ವಾಗ್ದಾನ ಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ. \v 12 ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ? \v 13 ಆದ್ದರಿಂದ ನೀವು ಪ್ರತಿಯೊಂದು ಗೋತ್ರದಿಂದ ಜ್ಞಾನಿಗಳೂ ವಿವೇಕಿಗಳೂ ಪ್ರಖ್ಯಾತರೂ ಆದ ವ್ಯಕ್ತಿಗಳನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳಾಗಿ ನೇಮಿಸುತ್ತೇನೆ,” ಎಂದು ಹೇಳಿದೆನು. \p \v 14 ಅದಕ್ಕೆ ನೀವು ನನಗೆ ಉತ್ತರವಾಗಿ, “ನೀನು ಹೇಳಿದ ಮಾತು ಮಾಡುವುದಕ್ಕೆ ಒಳ್ಳೆಯದು,” ಎಂದಿರಿ. \p \v 15 ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಜ್ಞಾನಿಗಳನ್ನು ಕರೆಯಿಸಿ, ಒಂದೊಂದು ಗೋತ್ರದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದೆನು. \v 16 ಆ ನ್ಯಾಯಾಧಿಪತಿಗಳಿಗೆ ಆ ಕಾಲದಲ್ಲಿ ನಾನು, “ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಾಯೇಲರ ವ್ಯಾಜ್ಯವಾಗಿರಬಹುದು. ಇಸ್ರಾಯೇಲರಲ್ಲದವರ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು. \v 17 ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ. \v 18 ಹೀಗೆ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ಆ ಕಾಲದಲ್ಲಿ ನಿಮಗೆ ಆಜ್ಞಾಪಿಸಿದೆನು. \s1 ಗೂಢಚಾರರನ್ನು ಕಳುಹಿಸಿದ್ದು \p \v 19 ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು. \v 20 ಆಗ ನಾನು ನಿಮಗೆ, “ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ಅಮೋರಿಯರ ಮಲೆನಾಡಿಗೆ ಹತ್ತಿರ ಬಂದಿದ್ದೀರಿ. \v 21 ನಿಮ್ಮ ದೇವರಾದ ಯೆಹೋವ ದೇವರು ದೇಶವನ್ನು ನಿಮಗೆ ಕೊಟ್ಟಿದ್ದಾರೆ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಪ್ರಕಾರ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿರಿ. ಭಯಪಡಬೇಡಿರಿ, ಧೈರ್ಯವಾಗಿರಿ,” ಎಂದೆನು. \p \v 22 ಆಗ ನೀವೆಲ್ಲರು ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸೋಣ. ಅವರು ನಮಗೆ ದೇಶವನ್ನು ಸಂಚರಿಸಿ ನೋಡಿ, ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತರಲಿ,” ಎಂದು ಹೇಳಿದಿರಿ. \p \v 23 ಆ ಮಾತು ನನಗೆ ಒಳ್ಳೆಯದೆಂದು ತೋಚಿತು. ನಾನು ನಿಮ್ಮಲ್ಲಿ ಗೋತ್ರಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು. \v 24 ಅವರು ಹೋಗಿ ಬೆಟ್ಟವನ್ನೇರಿ, ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು, ಅದನ್ನು ಸಂಚರಿಸಿ ನೋಡಿ, \v 25 ಆ ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತೆಗೆದುಕೊಂಡು, ನಮ್ಮ ಬಳಿಗೆ ತಂದು ತೋರಿಸಿ, “ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶವು ಒಳ್ಳೆಯದು,” ಎಂದು ವರದಿಮಾಡಿದರು. \s1 ಯೆಹೋವ ದೇವರ ವಿರುದ್ಧ ದಂಗೆ \p \v 26 ಆದರೆ ನೀವು ಮೇಲೆ ಹತ್ತಿ ಹೋಗುವುದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದಿರಿ. \v 27 ನೀವು ನಿಮ್ಮ ಗುಡಾರಗಳಲ್ಲಿ ಗೊಣಗುಟ್ಟಿ, “ಯೆಹೋವ ದೇವರು ನಮ್ಮನ್ನು ಹಗೆ ಮಾಡಿದ್ದರಿಂದ, ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ, ನಮ್ಮನ್ನು ನಾಶಮಾಡುವುದಕ್ಕೆ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದಾರೆ. \v 28 ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ. \p \v 29 ಆಗ ನಾನು ನಿಮಗೆ, “ಅಂಜಬೇಡಿರಿ, ಅವರಿಗೆ ಭಯಪಡಬೇಡಿರಿ. \v 30 ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು. \v 31 ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಹೊರುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊತ್ತು ತಂದರಲ್ಲವೇ?” ಎಂದು ನಿಮಗೆ ಹೇಳಿದೆನು. \p \v 32 ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಲಿಲ್ಲ. \v 33 ಅವರೇ ನಿಮಗೆ ಇಳಿದುಕೊಳ್ಳುವುದಕ್ಕೆ ಸ್ಥಳವನ್ನು ಗೊತ್ತುಮಾಡಿ ನೀವು ಹೋಗತಕ್ಕ ಮಾರ್ಗವನ್ನು ನಿಮಗೆ ತೋರಿಸಲು ರಾತ್ರಿ ಹೊತ್ತು ಬೆಂಕಿಯಲ್ಲಿಯೂ ಹಗಲು ಹೊತ್ತು ಮೇಘದಲ್ಲಿಯೂ ನಿಮ್ಮ ಮುಂದೆ ಹೋದರು. \p \v 34 ಯೆಹೋವ ದೇವರು ನಿಮ್ಮ ಮಾತುಗಳನ್ನು ಕೇಳಿ, ಬೇಸರಗೊಂಡು, ಪ್ರಮಾಣಮಾಡಿ, \v 35 “ಕೆಟ್ಟ ಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಒಳ್ಳೆಯ ದೇಶವನ್ನು ನೋಡುವುದಿಲ್ಲ. \v 36 ಯೆಫುನ್ನೆಯ ಮಗ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸಿದ್ದರಿಂದ, ಅವನು ಸಂದರ್ಶಿಸಿದ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು,” ಎಂದರು. \p \v 37 ನನ್ನ ಮೇಲೆಯೂ ಯೆಹೋವ ದೇವರು ನಿಮ್ಮ ವಿಷಯವಾಗಿ ಬೇಸರಮಾಡಿಕೊಂಡು, “ನೀನು ಸಹ ಅದರಲ್ಲಿ ಪ್ರವೇಶಿಸುವುದಿಲ್ಲ. \v 38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನನ್ನು ಧೈರ್ಯಗೊಳಿಸು. ಅವನೇ ಆ ನಾಡನ್ನು ಇಸ್ರಾಯೇಲಿಗೆ ಸ್ವಾಧೀನಪಡಿಸುವನು. \v 39 ಇದಲ್ಲದೆ ಸೆರೆಯಾಗಿ ಹೋಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈ ಹೊತ್ತು ಒಳ್ಳೆಯದು, ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳು ಅದರಲ್ಲಿ ಪ್ರವೇಶಿಸುವರು. ನಾನು ಅವರಿಗೆ ಅದನ್ನು ಕೊಡುವೆನು, ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು. \v 40 ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರ ಮಾರ್ಗವಾಗಿ ಮರುಭೂಮಿಗೆ ಹೊರಟು ಹೋಗಿರಿ,” ಎಂದು ಹೇಳಿದರು. \p \v 41 ಆಗ ನೀವು ಉತ್ತರಕೊಟ್ಟು ನನಗೆ, “ಯೆಹೋವ ದೇವರಿಗೆ ಪಾಪಮಾಡಿದ್ದೇವೆ. ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ನಾವು ಬೆಟ್ಟವನ್ನು ಹತ್ತಿ ಯುದ್ಧ ಮಾಡುತ್ತೇವೆ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಮೇಲೆ ಬೆಟ್ಟಕ್ಕೆ ಹೊರಟುಹೋಗುವುದು ಸಣ್ಣ ಕೆಲಸ,” ಎಂದು ಹೇಳಿದಿರಿ. \p \v 42 ಆದರೆ ಯೆಹೋವ ದೇವರು ನನಗೆ, “ ‘ಏರಿ ಹೋಗಬೇಡಿರಿ, ಯುದ್ಧಮಾಡಬೇಡಿರಿ. ಏಕೆಂದರೆ ನಾನು ನಿಮ್ಮ ಮಧ್ಯದಲ್ಲಿ ಇಲ್ಲ. ನೀವು ನಿಮ್ಮ ಶತ್ರುಗಳಿಂದ ಸೋಲನ್ನು ಅನುಭವಿಸುವಿರಿ,’ ಎಂದು ಅವರಿಗೆ ಹೇಳು,” ಎಂದರು. \p \v 43 ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ, ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದು, ಗರ್ವದಿಂದ ಧೈರ್ಯಮಾಡಿ ಬೆಟ್ಟವನ್ನೇರಿದಿರಿ. \v 44 ಆಗ ಆ ಬೆಟ್ಟದಲ್ಲಿ ವಾಸಮಾಡುತ್ತಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು, ಜೇನುಹುಳಗಳು ಮುತ್ತಿದಂತೆ ನಿಮ್ಮ ಬೆನ್ನು ಹತ್ತಿ, ಸೇಯೀರಿನಲ್ಲಿ ಹೊರ್ಮಾದವರೆಗೂ ನಿಮ್ಮನ್ನು ಸಂಹಾರ ಮಾಡಿದರು. \v 45 ನೀವು ತಿರುಗಿಕೊಂಡು ಯೆಹೋವ ದೇವರ ಮುಂದೆ ಅತ್ತಿರಿ. ಆದರೆ ಯೆಹೋವ ದೇವರು ನಿಮ್ಮ ಧ್ವನಿಗೆ ಕಿವಿಗೊಡಲಿಲ್ಲ. \v 46 ಆಮೇಲೆ ನೀವು ಕಾದೇಶಿನಲ್ಲಿ ಬಹಳ ದಿವಸ ವಾಸವಾಗಿದ್ದಿರಿ. \c 2 \s1 ಮರುಭೂಮಿಯಲ್ಲಿ ಅಲೆದಾಡುವಿಕೆ \p \v 1 ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು. \p \v 2 ಆಮೇಲೆ ಯೆಹೋವ ದೇವರು ನನಗೆ, \v 3 “ನೀವು ಈ ಬೆಟ್ಟವನ್ನು ಸುತ್ತಿದ್ದು ಸಾಕು. ಉತ್ತರಕ್ಕೆ ತಿರುಗಿಕೊಳ್ಳಿರಿ. \v 4 ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು. \v 5 ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ. \v 6 ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’ ” \p \v 7 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ. \p \v 8 ಈ ಪ್ರಕಾರ ನಾವು ಸೇಯೀರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬಾದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ, ಮೋವಾಬಿನ ಮರುಭೂಮಿಯ ಮಾರ್ಗವಾಗಿ ಹಾದು ಹೋದೆವು. \p \v 9 ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು. \p \v 10 ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. \v 11 ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು. \v 12 ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವ ದೇವರು ಕೊಟ್ಟ ನಾಡನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ, ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ, ಅವರ ನಾಡಿನಲ್ಲಿ ವಾಸಮಾಡಿದರು. \p \v 13 “ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು. \p \v 14 ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು. \v 15 ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು. \p \v 16 ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ, \v 17 ಯೆಹೋವ ದೇವರು ನನ್ನೊಂದಿಗೆ ಮಾತನಾಡಿ ನನಗೆ, \v 18 “ಇಂದು ನೀನು ಮೋವಾಬಿನ ಮೇರೆಯಾದ ಆರ್ ಎಂಬ ಸ್ಥಳವನ್ನು ದಾಟಬೇಕು. \v 19 ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು. \p \v 20 ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ಸಹ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು. \v 21 ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಆದರೆ ಯೆಹೋವ ದೇವರು ಅವರನ್ನು ಅಮ್ಮೋನಿಯರ ಮುಂದೆ ತೆಗೆದುಹಾಕಿದ್ದರು. ಹೀಗೆ ಅಮ್ಮೋನಿಯರು ಅವರನ್ನು ಹೊರಡಿಸಿ, ಅವರ ಬದಲಾಗಿ ವಾಸಿಸಿದರು. \v 22 ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ. \v 23 ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು. \s1 ಹೆಷ್ಬೋನಿನ ಅರಸನಾದ ಸೀಹೋನನನ್ನು ಸೋಲಿಸಿದ್ದು \p \v 24 “ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ. \v 25 ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು. \p \v 26 ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ, \v 27 “ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು. \v 28 ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ. \v 29 ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು. \v 30 ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ. \p \v 31 ಇದಲ್ಲದೆ ಯೆಹೋವ ದೇವರು ನನಗೆ, “ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸುವುದಕ್ಕೆ ಆರಂಭಮಾಡಿದ್ದೇನೆ, ಅವನ ದೇಶವನ್ನು ಸೊತ್ತಾಗಿ ಹೊಂದುವಂತೆ ವಶಪಡಿಸಿಕೊಳ್ಳುವುದಕ್ಕೆ ಆರಂಭಮಾಡು,” ಎಂದು ಹೇಳಿದರು. \p \v 32 ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು. \v 33 ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು. \v 34 ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ. \v 35 ಪಶುಗಳನ್ನು ಮಾತ್ರ ನಮಗೆ ತೆಗೆದುಕೊಂಡು, ಪಟ್ಟಣಗಳನ್ನು ಸೂರೆಮಾಡಿದೆವು. \v 36 ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು. \v 37 ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ. \c 3 \s1 ಬಾಷಾನಿನ ಅರಸನ ಸೋಲು \p \v 1 ಆಗ ನಾವು ಹಿಂದಿರುಗಿ ಬಾಷಾನಿನ ಕಡೆಗೆ ಮೇಲಕ್ಕೆ ಹೊರಟೆವು. ಆಗ ಬಾಷಾನಿನ ಅರಸನಾದ ಓಗನು ತನ್ನ ಸಮಸ್ತ ಜನರ ಸಂಗಡ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈಗೆ ಹೊರಟುಬಂದನು. \v 2 ಆಗ ಯೆಹೋವ ದೇವರು ನನಗೆ, “ನೀನು ಅವನಿಗೆ ಭಯಪಡಬೇಡ. ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ, ಅವನ ಸಮಸ್ತ ಜನರನ್ನೂ, ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು. \p \v 3 ಈ ಪ್ರಕಾರ ನಮ್ಮ ದೇವರಾದ ಯೆಹೋವ ದೇವರು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲರನ್ನೂ ನಮ್ಮ ಕೈಗಳಲ್ಲಿ ಒಪ್ಪಿಸಿದರು. ಒಬ್ಬನಾದರೂ ತಪ್ಪಿಸಿಕೊಂಡು ಬದುಕುಳಿಯದಂತೆ ಅವರನ್ನು ಹೊಡೆದೆವು. \v 4 ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ಜಯಿಸಿದೆವು. ನಾವು ಅವರಿಂದ ವಶಪಡಿಸಿಕೊಳ್ಳದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬಿನ ಸಮಸ್ತ ಸುತ್ತಲಿನ ಪ್ರದೇಶದ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು. \v 5 ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆ, ಬಾಗಿಲು, ಅಗುಳಿಗಳಿಂದ ಭದ್ರವಾಗಿದ್ದವು. ಅವುಗಳಲ್ಲದೆ ಬಯಲುಸೀಮೆಯ ಪಟ್ಟಣಗಳು ಬಹಳ ಇದ್ದವು. \v 6 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು. ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು. \v 7 ಎಲ್ಲಾ ಪಶುಗಳನ್ನೂ ಪಟ್ಟಣಗಳನ್ನೂ ಸೂರೆಮಾಡಿಬಿಟ್ಟೆವು. \p \v 8 ಆ ಕಾಲದಲ್ಲಿ ನಾವು ಯೊರ್ದನ್ ನದಿಯ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರಸರ ಕೈಯಿಂದ ಸ್ವಾಧೀನಮಾಡಿಕೊಂಡೆವು. \v 9 ಹೆರ್ಮೋನಿಗೆ ಸೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಕರೆಯುತ್ತಾರೆ. \v 10 ಬಯಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಎಲ್ಲಾ ಗಿಲ್ಯಾದನ್ನೂ ಬಾಷಾನಿನಲ್ಲಿ ಓಗನ ರಾಜ್ಯದಲ್ಲಿ ಪಟ್ಟಣಗಳಾದ ಸಲ್ಕಾ ಎದ್ರೈವರೆಗೆ ಎಲ್ಲಾ ಬಾಷಾನನ್ನೂ ಸ್ವಾಧೀನಮಾಡಿಕೊಂಡೆವು. \v 11 ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು. \s1 ಸ್ಥಳ ವಿಭಜನೆ \p \v 12 ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ಹಳ್ಳದ ಸಮೀಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು, ಅರ್ಧ ಗಿಲ್ಯಾದ್ ಬೆಟ್ಟವನ್ನೂ, ಅದರ ಪಟ್ಟಣಗಳನ್ನೂ ರೂಬೇನ್ಯರ ಪ್ರದೇಶದವರೆಗೂ, ಗಾದನ ಪ್ರದೇಶದವರೆಗೂ ಕೊಟ್ಟೆನು. \v 13 ಮಿಕ್ಕ ಗಿಲ್ಯಾದನ್ನು ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಗೋತ್ರಕ್ಕೆ ಕೊಟ್ಟೆನು. ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಸೀಮೆಯನ್ನೂ, ರೆಫಾಯರ ದೇಶವೆಂದು ಎನಿಸಿಕೊಳ್ಳುವ ಸಮಸ್ತ ಬಾಷಾನನ್ನೂ ಅವರಿಗೆ ಕೊಟ್ಟೆನು. \v 14 ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು. \v 15 ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. \v 16 ಗಿಲ್ಯಾದ್ ಮೊದಲುಗೊಂಡು ಅರ್ನೋನ್ ತಗ್ಗಿನವರೆಗೂ ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಮೇರೆ. \v 17 ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು. \p \v 18 ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು. \v 19 ನಿಮಗೆ ಬಹಳ ಪಶುಗಳಿವೆ ಎಂದು ನನಗೆ ಗೊತ್ತಿದೆ. ಆದರೆ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಲಿ. \v 20 ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.” \s1 ಯೊರ್ದನ್ ದಾಟಲು ಮೋಶೆಗೆ ಪ್ರತಿಬಂಧ \p \v 21 ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು. \v 22 ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು. \p \v 23 ಆ ಕಾಲದಲ್ಲಿ ನಾನು ಯೆಹೋವ ದೇವರಿಗೆ: \v 24 “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಸೇವಕನಿಗೆ ನಿಮ್ಮ ಮಹತ್ವವನ್ನೂ ನಿಮ್ಮ ಹಸ್ತಬಲವನ್ನೂ ತೋರಿಸಲಾರಂಭಿಸಿದಿರಿ. ನಿಮ್ಮ ಮಹತ್ಕಾರ್ಯಗಳ ಹಾಗೆಯೂ, ನಿಮ್ಮ ಪರಾಕ್ರಮದ ಹಾಗೆಯೂ ಮಾಡಲು ಶಕ್ತರಾದ ದೇವರು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಯಾರಿದ್ದಾರೆ? \v 25 ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು. \p \v 26 ಆದರೆ ಯೆಹೋವ ದೇವರು ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಮಾಡಿ, ನನ್ನ ಮನವಿಯನ್ನು ಕೇಳಲಿಲ್ಲ. ಯೆಹೋವ ದೇವರು ನನಗೆ, “ಇನ್ನು ಸಾಕು, ಈ ವಿಷಯದಲ್ಲಿ ನನ್ನ ಸಂಗಡ ಇನ್ನು ಮಾತನಾಡಬೇಡ. \v 27 ಪಿಸ್ಗಾದ ತುದಿಗೆ ಏರಿ, ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ, ಪೂರ್ವಕ್ಕೂ ಕಣ್ಣೆತ್ತಿ ಅದನ್ನು ಕಣ್ಣಾರೆ ನೋಡು. ಈ ಯೊರ್ದನನ್ನು ನೀನು ದಾಟಿ ಹೋಗುವುದಿಲ್ಲ. \v 28 ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು. \v 29 ಆಗ ನಾವು ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು. \c 4 \s1 ವಿಧೇಯತೆ ಆಜ್ಞೆ \p \v 1 ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ. \v 2 ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು. \p \v 3 ಬಾಳ್ ಪೆಯೋರನ ವಿಷಯದಲ್ಲಿ ಯೆಹೋವ ದೇವರು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು. ಬಾಳ್ ಪೆಯೋರನನ್ನು ಹಿಂಬಾಲಿಸಿದ ಜನರನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿದರಲ್ಲವೇ? \v 4 ಆದರೆ ನಿಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾದ ನೀವೆಲ್ಲರು ಇಂದಿನವರೆಗೆ ಬದುಕಿದ್ದೀರಿ. \p \v 5 ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ. \v 6 ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು. \v 7 ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಮೊರೆಯಿಡುವಾಗೆಲ್ಲಾ ಅವರು ಸಮೀಪವಾಗಿಯೇ ಇದ್ದಾರಲ್ಲಾ. ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವರು? \v 8 ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು? \p \v 9 ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ. \v 10 ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು. \v 11 ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ. ಆ ಬೆಟ್ಟವು ಕತ್ತಲೆಯಾಗಿದ್ದು, ಮೇಘಗಳೂ, ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದವರೆಗೆ ಬೆಂಕಿಯಿಂದ ಉರಿಯುತ್ತಿತ್ತು. \v 12 ಬೆಂಕಿಯ ಮಧ್ಯದೊಳಗಿಂದ ಯೆಹೋವ ದೇವರು ನಿಮ್ಮ ಸಂಗಡ ಮಾತಾಡಿದರು. ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ, ಆದರೆ ಆಕಾರವನ್ನು ನೋಡಲಿಲ್ಲ, ಧ್ವನಿಯನ್ನು ಮಾತ್ರ ಕೇಳಿದಿರಿ. \v 13 ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು. \v 14 ನೀವು ದಾಟಿ ಹೋಗಿ, ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನ್ಯಾಯನಿಯಮಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಯೆಹೋವ ದೇವರು ನನಗೆ ಆಜ್ಞಾಪಿಸಿದರು. \s1 ವಿಗ್ರಹಾರಾಧನೆ ನಿಷಿದ್ಧ \p \v 15 ಆದ್ದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರಿ. ಯೆಹೋವ ದೇವರು ಹೋರೇಬಿನಲ್ಲಿ ಬೆಂಕಿಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿಲ್ಲವಲ್ಲ. \v 16 ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳಬೇಡಿರಿ. ಎಂದರೆ, ಸ್ತ್ರೀಪುರುಷರ ರೂಪದಲ್ಲಾಗಲಿ, \v 17 ಭೂಮಿಯ ಮೇಲಿರುವ ಯಾವುದೊಂದು ಮೃಗದ ಹೋಲಿಕೆಯನ್ನೂ, ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವುದೊಂದು ಪಕ್ಷಿಯ ಹೋಲಿಕೆಯನ್ನೂ, ಭೂಮಿಯ ಮೇಲೆ ಹರಿದಾಡುವಂಥ ಕ್ರಿಮಿಕೀಟ ಯಾವುದೊಂದರ ಹೋಲಿಕೆಯನ್ನೂ, \v 18 ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವುದೊಂದು ಮೀನಿನ ಹೋಲಿಕೆಯ ವಿಗ್ರಹವನ್ನೂ ಮಾಡಬಾರದು. \v 19 ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ. \v 20 ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು. \p \v 21 ನಾನು ಯೊರ್ದನಿನ ಆಚೆಗೆ ಹೋಗದ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಆ ಒಳ್ಳೆಯ ದೇಶದಲ್ಲಿ ಪ್ರವೇಶಿಸದಂತೆ, ನಿಮ್ಮ ನಿಮಿತ್ತ ಯೆಹೋವ ದೇವರು ನನ್ನ ಮೇಲೆ ಕೋಪಮಾಡಿಕೊಂಡು ಪ್ರಮಾಣ ಮಾಡಿದರು. \v 22 ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗತಕ್ಕದ್ದಲ್ಲ. ಆದರೆ ನೀವು ಆಚೆಗೆ ಹೋಗಿ, ಆ ಒಳ್ಳೆಯ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ. \v 23 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ. \v 24 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ದಹಿಸುವ ಅಗ್ನಿಯೂ, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರೂ ಆಗಿದ್ದಾರೆ. \p \v 25 ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ, \v 26 ನಾನು ಈ ದಿನ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆದು, ನಿಮಗೆ ಹೇಳುವುದೇನೆಂದರೆ, ನೀವು ಯೊರ್ದನನ್ನು ದಾಟಿ ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ, ಸಂಪೂರ್ಣವಾಗಿ ನಶಿಸುವಿರಿ. \v 27 ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ. \v 28 ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ. \v 29 ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ. \v 30 ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ. \v 31 ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ. \s1 ದೇವರಾದ ಯೆಹೋವ ದೇವರು \p \v 32 ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ? \v 33 ನೀವು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೋ? \v 34 ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ? \p \v 35 ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ. \v 36 ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ. \v 37 ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು. \v 38 ದೇವರು ನಿಮಗಿಂತ ದೊಡ್ಡದಾದ, ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ನಿಮ್ಮ ಮುಂದೆ ಓಡಿಸಿ, ನಿಮ್ಮನ್ನು ಅವರ ದೇಶದೊಳಗೆ ಬರಮಾಡಿ, ಈ ದಿನ ನೀವು ಇರುವಂತೆ ನಿಮಗೆ ಅವರ ದೇಶವನ್ನು ಬಳುವಳಿಯಾಗಿ ಕೊಟ್ಟಿದ್ದಾರೆ. \p \v 39 ಹೀಗಿರುವುದರಿಂದ ಮೇಲಿನ ಆಕಾಶದಲ್ಲಿಯೂ, ಕೆಳಗಿನ ಭೂಮಿಯಲ್ಲಿಯೂ ಯೆಹೋವ ದೇವರೇ ದೇವರೆಂದೂ ಮತ್ತೊಬ್ಬರಿಲ್ಲವೆಂಬುದನ್ನೂ ನೀವು ಈಗ ಗ್ರಹಿಸಿಕೊಂಡು ಮನಸ್ಸಿಗೆ ತಂದುಕೊಳ್ಳಿರಿ. \v 40 ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ. \s1 ಮೂರು ಆಶ್ರಯ ಪಟ್ಟಣಗಳು \p \v 41 ಮೋಶೆಯು ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ನಗರಗಳನ್ನು ಪ್ರತ್ಯೇಕ ಮಾಡಿದನು. \v 42 ಯಾವ ಹಗೆಯಿಲ್ಲದೆ ತನ್ನ ನೆರೆಯವನನ್ನು ಕೈತಪ್ಪಿ ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳುವಂತೆ ಆ ನಗರಗಳನ್ನು ನೇಮಿಸಿದನು. \v 43 ಅವು ಯಾವುವೆಂದರೆ, ರೂಬೇನ್ಯರಿಗೆ ಮರುಭೂಮಿಯ ಬಯಲಿನಲ್ಲಿ ಇರುವ ಬೆಚೆರ್, ಗಾದನವರಿಗೆ ಗಿಲ್ಯಾದಿನ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್. \s1 ಮೋಶೆಯ ನಿಯಮಕ್ಕೆ ಪೀಠಿಕೆ \p \v 44 ಮೋಶೆಯು ಇಸ್ರಾಯೇಲರ ಮುಂದೆ ಇಟ್ಟ ದೇವರ ನಿಯಮವು ಇದೇ. \v 45 ಇಸ್ರಾಯೇಲರು ಈಜಿಪ್ಟಿನೊಳಗಿಂದ ಹೊರಟ ಮೇಲೆ ಮೋಶೆಯು ಇಸ್ರಾಯೇಲರಿಗೆ ನುಡಿದ ಸಾಕ್ಷಿಗಳೂ, ನಿಯಮಗಳೂ, ನ್ಯಾಯಗಳೂ ಇವೇ. \v 46 ಯೊರ್ದನ್ ನದಿಯ ಆಚೆಯಲ್ಲಿ ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಅವನನ್ನು ಮೋಶೆಯೂ, ಇಸ್ರಾಯೇಲರೂ ಈಜಿಪ್ಟಿನೊಳಗಿಂದ ಹೊರಟ ಮೇಲೆ ಸೋಲಿಸಿದರು. \v 47 ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಆಚೆಯಲ್ಲಿ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ ಗೆದ್ದುಕೊಂಡರು. \v 48 ಅರ್ನೋನ್ ನದಿಯ ತೀರದಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸಿರ್ಯೋನ\f + \fr 4:48 \fr*\fq ಸಿರ್ಯೋನ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಸೀಯೋನ್\fqa*\f* ಪರ್ವತದವರೆಗೂ ಹರಡಿತ್ತು. \v 49 ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿ ಇರುವ ಎಲ್ಲಾ ಅರಾಬಾದನ್ನು ಸಹ, ಪಿಸ್ಗಾದ ಬೆಟ್ಟದ ತಗ್ಗಿನಲ್ಲಿರುವ ಬಯಲಿನ ಸಮುದ್ರದವರೆಗೆ ಸ್ವಾಧೀನಮಾಡಿಕೊಂಡರು. \c 5 \s1 ದಶಾಜ್ಞೆಗಳು \p \v 1 ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: \p ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು. \v 2 ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಂಡರು. \v 3 ಯೆಹೋವ ದೇವರು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದರು. ನಾವೆಲ್ಲರೂ ಈ ಹೊತ್ತು ಇಲ್ಲಿ ಜೀವದಿಂದಿದ್ದೇವೆ. \v 4 ಮುಖಾಮುಖಿಯಾಗಿ ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದರು. \v 5 ಆ ಕಾಲದಲ್ಲಿ ನಾನು ಯೆಹೋವ ದೇವರ ವಾಕ್ಯವನ್ನು ನಿಮಗೆ ತಿಳಿಸಿದ ಹಾಗೆ ಯೆಹೋವ ದೇವರಿಗೂ, ನಿಮಗೂ ನಡುವೆ ನಿಂತಿದ್ದೆನು. ಏಕೆಂದರೆ ನೀವು ಆ ಬೆಂಕಿಗೆ ಭಯಪಟ್ಟು, ಬೆಟ್ಟದ ಮೇಲೆ ಏರಲಿಲ್ಲ. \p ದೇವರು ಹೇಳಿದ್ದೇನೆಂದರೆ: \b \li4 \v 6 “ನಿನ್ನನ್ನು ಈಜಿಪ್ಟ್ ದೇಶದಿಂದಲೂ, ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ. \b \li1 \v 7 “ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು. \li1 \v 8 ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು. \v 9 ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು. \v 10 ಆದರೆ ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ. \li1 \v 11 ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು, ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ. \li1 \v 12 ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದಂತೆ ಸಬ್ಬತ್\f + \fr 5:12 \fr*\fq ಸಬ್ಬತ್ \fq*\ft ಅಂದರೆ \ft*\fqa ವಿಶ್ರಾಂತಿ ದಿನ\fqa*\f* ದಿನವನ್ನು ಪರಿಶುದ್ಧ ದಿನವೆಂದು ಆಚರಿಸಬೇಕು. \v 13 ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. \v 14 ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಎತ್ತೂ, ನಿನ್ನ ಕತ್ತೆಯೂ, ನಿನ್ನ ಎಲ್ಲಾ ಪಶುಗಳೂ, ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. \v 15 ನೀನು ಈಜಿಪ್ಟ್ ದೇಶದಲ್ಲಿ ದಾಸನಾಗಿದ್ದಿಯೆಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ಬಲವಾದ ಹಸ್ತದಿಂದಲೂ ಚಾಚಿದ ಭುಜದಿಂದಲೂ ಹೊರಗೆ ಬರಮಾಡಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಯೆಹೋವ ದೇವರು ನಿನಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾರೆ. \li1 \v 16 ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು. \li1 \v 17 ಕೊಲೆ ಮಾಡಬೇಡ. \li1 \v 18 ವ್ಯಭಿಚಾರ ಮಾಡಬೇಡ. \li1 \v 19 ಕದಿಯಬೇಡ. \li1 \v 20 ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ. \li1 \v 21 ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ನಿನ್ನ ನೆರೆಯವನ ಮನೆಯನ್ನೂ, ಅವನ ಹೊಲವನ್ನೂ, ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.” \b \p \v 22 ಈ ಮಾತುಗಳನ್ನು ಯೆಹೋವ ದೇವರು ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯದೊಳಗಿಂದ, ನಿಮ್ಮ ಸಭೆಗೆಲ್ಲಾ ಕೇಳಿಸುವಂತೆ ಮಹಾ ಸ್ವರದಿಂದ ನುಡಿದರು. ಅವರು ಹೆಚ್ಚೇನೂ ಕೂಡಿಸಲಿಲ್ಲ. ದೇವರು ಈ ಮಾತುಗಳನ್ನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು. \p \v 23 ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ, ನೀವು ಕತ್ತಲೆಯಿಂದ ಆ ಸ್ವರವನ್ನು ಕೇಳಿದಾಗ, ನಿಮ್ಮ ಗೋತ್ರಗಳ ಮುಖ್ಯಸ್ಥರೂ, ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ, \v 24 “ಇಗೋ, ನಮ್ಮ ದೇವರಾದ ಯೆಹೋವ ದೇವರು ತಮ್ಮ ಮಹಿಮೆಯನ್ನೂ, ತಮ್ಮ ಘನವನ್ನೂ ನಮಗೆ ತೋರಿಸಿದ್ದಾರೆ. ಅವರ ಸ್ವರವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ. ದೇವರು ಮನುಷ್ಯರ ಸಂಗಡ ಮಾತನಾಡಿದ ಮೇಲೂ, ಅವರು ಬದುಕುತ್ತಾರೆಂದು ಈ ಹೊತ್ತು ನೋಡಿದ್ದೇವೆ. \v 25 ಹಾಗಾದರೆ ಈಗ ನಾವು ಏಕೆ ಸಾಯಬೇಕು? ಈ ದೊಡ್ಡ ಬೆಂಕಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವುದು. ನಾವು ಇನ್ನೂ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿದರೆ ಸಾಯುತ್ತೇವೆ. \v 26 ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳಗಿಂದ ಮಾತನಾಡುವ ಜೀವವುಳ್ಳ ದೇವರ ಸ್ವರವನ್ನು ಕೇಳಿ ಬದುಕಿದರು? \v 27 ನೀನೇ ಸಮೀಪಕ್ಕೆ ಹೋಗಿ ನಮ್ಮ ದೇವರಾದ ಯೆಹೋವ ದೇವರು ಹೇಳುವುದನ್ನೆಲ್ಲಾ ಕೇಳಿ, ನಮ್ಮ ದೇವರಾದ ಯೆಹೋವ ದೇವರು ನಿನಗೆ ಹೇಳಿದ್ದನ್ನೆಲ್ಲಾ ನಮಗೆ ಹೇಳು. ಆಗ ನಾವು ಕೇಳಿ ಅದರಂತೆ ಮಾಡುತ್ತೇವೆ,” ಎಂದು ಹೇಳಿದಿರಿ. \p \v 28 ನೀವು ನನ್ನ ಹತ್ತಿರ ಮಾತನಾಡಿದಾಗ, ಯೆಹೋವ ದೇವರು ನಿಮ್ಮ ಮಾತುಗಳನ್ನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೆಯದು. \v 29 ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.” \p \v 30 “ನೀನು ಹೋಗಿ ಅವರಿಗೆ, ‘ನಿಮ್ಮ ಡೇರೆಗಳಿಗೆ ಹಿಂದಿರುಗಿರಿ,’ ಎಂದು ಹೇಳು. \v 31 ನೀನಾದರೋ ಇಲ್ಲಿ ನನ್ನ ಸಂಗಡ ನಿಂತುಕೋ. ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸೊತ್ತಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞಾನಿಯಮ ಮತ್ತು ನ್ಯಾಯಗಳನ್ನು ನಿಮಗೆ ಹೇಳುವೆನು.” \p \v 32 ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ. \v 33 ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು. \c 6 \s1 ಯೆಹೋವ ದೇವರನ್ನು ಪ್ರೀತಿಸು \p \v 1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ. \v 2 ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು. \v 3 ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ. \p \v 4 ಇಸ್ರಾಯೇಲರೇ, ಕೇಳಿರಿ: ದೇವರಾದ ಯೆಹೋವ ನಮ್ಮ ದೇವರು; ಯೆಹೋವ ದೇವರು ಒಬ್ಬರೇ. \v 5 ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. \v 6 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು. \v 7 ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು. \v 8 ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಹಣೆಗೂ ಕಟ್ಟಿಕೊಳ್ಳಬೇಕು. \v 9 ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು. \p \v 10 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ, \v 11 ನೀವು ಕೂಡಿಸದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ನೀವು ಅಗೆಯದಿರುವ ಬಾವಿಗಳನ್ನೂ, ನೀವು ನೆಡದ ದ್ರಾಕ್ಷಿತೋಟಗಳನ್ನೂ, ಓಲಿವ್ ತೋಟಗಳನ್ನೂ ನಿಮಗೆ ಕೊಡಲಾಗಿ, ನೀವು ತಿಂದು ತೃಪ್ತರಾಗಿರುವಿರಿ. \v 12 ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ. \p \v 13 ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು. \v 14 ನಿಮ್ಮ ಸುತ್ತಲಿರುವ ಜನರ ದೇವರುಗಳಾಗಿರುವ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ. \v 15 ಏಕೆಂದರೆ ನಿಮ್ಮ ಮಧ್ಯದಲ್ಲಿರುವ ನಿಮ್ಮ ಯೆಹೋವ ದೇವರು ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರು. ನಿಮ್ಮ ದೇವರ ಕೋಪವು ನಿಮ್ಮ ಮೇಲೆ ಉರಿಯಲು, ಅವರು ನಿಮ್ಮನ್ನು ಭೂಮಿಯ ಮೇಲಿನಿಂದ ತೆಗೆದುಹಾಕುವರು. \v 16 ನೀವು ಮಸ್ಸದಲ್ಲಿ ಪರೀಕ್ಷಿಸಿದ ಹಾಗೆ ನಿಮ್ಮ ದೇವರಾದ ಯೆಹೋವ ದೇವರನ್ನು ಪರೀಕ್ಷಿಸಬಾರದು. \v 17 ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೂ, ಅವರು ನಿಮಗೆ ನೀಡಿದ ಷರತ್ತುಗಳನ್ನೂ, ಅವರ ತೀರ್ಪುಗಳನ್ನೂ ಎಚ್ಚರಿಕೆಯಿಂದ ಕೈಗೊಳ್ಳಬೇಕು. \v 18 ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ. \v 19 ಆಗ ಯೆಹೋವ ದೇವರು ತಾವು ಹೇಳಿದಂತೆ ನಿಮ್ಮ ಎಲ್ಲಾ ಶತ್ರುಗಳನ್ನು ನಿಮ್ಮ ಮುಂದೆಯೇ ಓಡಿಸಿಬಿಡುವರು. \p \v 20 ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, “ನಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಈ ಷರತ್ತುಗಳ, ತೀರ್ಪುಗಳ ಹಾಗು ನಿಯಮಗಳ ಅರ್ಥ ಏನು?” ಎಂದು ನಿಮ್ಮನ್ನು ಕೇಳುವರು. \v 21 ಆಗ ನೀವು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು. \v 22 ಯೆಹೋವ ದೇವರು ನಮ್ಮ ಕಣ್ಣ ಮುಂದೆಯೇ ಈಜಿಪ್ಟಿನ ಮೇಲೆಯೂ, ಫರೋಹನ ಮೇಲೆಯೂ, ಅವನ ಎಲ್ಲಾ ಮನೆಯ ಮೇಲೆಯೂ ಭಯಂಕರವಾದ ದೊಡ್ಡ ಗುರುತುಗಳನ್ನೂ, ಅದ್ಭುತಗಳನ್ನೂ ಕಳುಹಿಸಿದರು. \v 23 ಆದರೆ ದೇವರು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶವನ್ನು ನಮಗೆ ಕೊಡುವಂತೆಯೂ ನಾವು ಅದರಲ್ಲಿ ಪ್ರವೇಶ ಮಾಡುವಂತೆಯೂ ನಮ್ಮನ್ನು ಈಜಿಪ್ಟಿನಿಂದ ಬರಮಾಡಿದರು. \v 24 ನಮಗೆ ಎಂದೆಂದಿಗೂ ಒಳ್ಳೆಯದಾಗುವಂತೆಯೂ, ಇಂದಿನಂತೆ ನಾವು ಬದುಕುವಂತೆಯೂ, ನಾವು ಈ ನಿಯಮಗಳನ್ನೆಲ್ಲಾ ಕೈಗೊಂಡು ನಮ್ಮ ಯೆಹೋವ ದೇವರಿಗೆ ಭಯಪಡಬೇಕೆಂದು ಅವರು ನಮಗೆ ಆಜ್ಞಾಪಿಸಿದ್ದಾರೆ. \v 25 ಅವರು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಗೊಂಡು ನಡೆದರೆ, ಅದು ನಮಗೆ ನೀತಿಯಾಗಿರುವುದು,” ಎಂದು ಹೇಳಬೇಕು. \c 7 \s1 ಇತರ ಜನರನ್ನು ಹೊರಹಾಕಿದ್ದು \p \v 1 ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು. \v 2 ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು. \v 3 ಅವರ ಸಂಗಡ ಮದುವೆ ಮಾಡಿಕೊಳ್ಳಬಾರದು. ನಿಮ್ಮ ಪುತ್ರಿಯರನ್ನು ಅವರ ಮಕ್ಕಳಿಗೆ ಕೊಡಬಾರದು. ನಿಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳಬಾರದು. \v 4 ಏಕೆಂದರೆ ಅವರು ನಿಮ್ಮ ಪುತ್ರರನ್ನು ಬೇರೆ ದೇವರುಗಳನ್ನು ಸೇವಿಸುವ ಹಾಗೆ ನನ್ನಿಂದ ತೊಲಗಿಸಿಬಿಡುವರು. ಆಗ ಯೆಹೋವ ದೇವರು ನಿಮ್ಮ ಮೇಲೆ ಕೋಪಗೊಂಡು, ನಿಮ್ಮನ್ನು ಬೇಗ ದಂಡಿಸಿಬಿಡುವರು. \v 5 ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು. \v 6 ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ. \p \v 7 ನೀವು ಎಲ್ಲಾ ಜನರಿಗಿಂತ ಹೆಚ್ಚಾಗಿರುವ ಕಾರಣ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ. ನೀವು ಎಲ್ಲಾ ಜನರಿಗಿಂತ ಸಂಖ್ಯಾತರು. \v 8 ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು. \v 9 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು. \v 10 ಆದರೆ, \q1 ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. \q2 ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ \q2 ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ. \m \v 11 ಹೀಗಿರುವುದರಿಂದ ನಾನು ಈ ಹೊತ್ತು ನಿಮಗೆ ಕೊಡುವ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನು ಕೈಗೊಳ್ಳಬೇಕು. \p \v 12 ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು. \v 13 ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು. \v 14 ಎಲ್ಲಾ ಜನರಿಗಿಂತಲೂ ನೀವು ಆಶೀರ್ವಾದಕ್ಕೆ ಪಾತ್ರರಾಗಿರುವಿರಿ. ನಿಮ್ಮೊಳಗೆ ಸ್ತ್ರೀ ಪುರುಷರಲ್ಲಾಗಲಿ, ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ. \v 15 ಯೆಹೋವ ದೇವರು ಎಲ್ಲಾ ರೋಗಗಳನ್ನು ನಿಮ್ಮಿಂದ ತೆಗೆದುಬಿಡುವರು. ನಿಮಗೆ ತಿಳಿದಿರುವ ಈಜಿಪ್ಟಿನ ಕ್ರೂರರೋಗಗಳನ್ನು ನಿಮ್ಮ ಮೇಲೆ ಬರಮಾಡದ, ನಿಮ್ಮನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರಮಾಡುವರು. \v 16 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು. \p \v 17 “ಈ ಜನಾಂಗದವರು ನಮಗಿಂತ ಹೆಚ್ಚು ಮಂದಿ ಇದ್ದಾರೆ. ನಾವು ಹೇಗೆ ಅವರನ್ನು ವಶಮಾಡಿಕೊಳ್ಳಬೇಕು?” ಎಂದು ನಿಮ್ಮ ಹೃದಯದಲ್ಲಿ ಅಂದುಕೊಳ್ಳುವಿರೋ? \v 18 ನೀವು ಅವರಿಗೆ ಭಯಪಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಫರೋಹನಿಗೂ, ಎಲ್ಲಾ ಈಜಿಪ್ಟಿನವರಿಗೂ ಮಾಡಿದ್ದನ್ನು \v 19 ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು. \v 20 ಇದಲ್ಲದೆ ಉಳಿದವರೂ, ನಿಮಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿಮ್ಮ ದೇವರಾದ ಯೆಹೋವ ದೇವರು ಕಣಜದ ಹುಳವನ್ನು ಅವರಲ್ಲಿ ಕಳುಹಿಸುವರು. \v 21 ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ. \v 22 ನಿಮ್ಮ ದೇವರಾದ ಯೆಹೋವ ದೇವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವರು. ನೀವು ಅವರನ್ನು ತ್ವರೆಯಾಗಿ ಸಂಹರಿಸಬಾರದು. ಹಾಗೆ ಮಾಡಿದರೆ, ಕಾಡುಮೃಗಗಳು ಹೆಚ್ಚಾಗಿ ನಿಮಗೆ ತೊಂದರೆಕೊಡುವುವು. \v 23 ಆದರೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಬಿಡುವರು. ಅವರು ಸೋತುಹೋಗಿ ಇಲ್ಲದಂತಾಗುವರು. \v 24 ದೇವರು ಅವರ ಅರಸರನ್ನು ನಿಮಗೆ ಒಪ್ಪಿಸುವರು. ನೀವು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ದಂಡಿಸುವಿರಿ. ನೀವು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿಮ್ಮ ಮುಂದೆ ನಿಲ್ಲಲಾರನು. \v 25 ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ. \v 26 ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು. \c 8 \s1 ದೇವರನ್ನು ಮರೆಯಬೇಡ \p \v 1 ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ. \v 2 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ. \v 3 ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು. \v 4 ಈ ನಲವತ್ತು ವರ್ಷ ನಿಮ್ಮ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ, ನಿಮ್ಮ ಕಾಲುಗಳು ಬಾತುಹೋಗಲಿಲ್ಲ. \v 5 ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ. \p \v 6 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಂಡು, ಅವರ ಮಾರ್ಗಗಳಲ್ಲಿ ನಡೆದು ಅವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. \v 7 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಒಳ್ಳೆಯ ದೇಶಕ್ಕೆ ಬರಮಾಡುತ್ತಾರೆ. ಅದು ನೀರಿನ ಹಳ್ಳಗಳೂ, ತಗ್ಗುಗಳಲ್ಲಿಯೂ, ಬೆಟ್ಟದಲ್ಲಿಯೂ, ಉಕ್ಕುವ ಬುಗ್ಗೆಗಳೂ ಇರುವ ದೇಶವಾಗಿರುತ್ತದೆ. \v 8 ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ. \v 9 ಆ ದೇಶದಲ್ಲಿ ನಿಮಗೆ ಆಹಾರಕ್ಕೆ ಕೊರತೆ ಇರುವುದಿಲ್ಲ. ಅಲ್ಲಿ ಯಾವುದರ ಕೊರತೆ ನಿಮಗೆ ಆಗದು. ಅದರ ಕಲ್ಲುಗಳಲ್ಲಿ ಕಬ್ಬಿಣವನ್ನೂ, ಅದರ ಬೆಟ್ಟಗಳಲ್ಲಿ ತಾಮ್ರದ ಗಣಿಗಳನ್ನೂ ಅಗೆಯಬಹುದು. \p \v 10 ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು. \v 11 ನಾನು ಈ ಹೊತ್ತು ನಿಮಗೆ ಕೊಡುವ ದೇವರ ಆಜ್ಞೆಗಳನ್ನೂ ನಿಯಮಗಳನ್ನೂ ತೀರ್ಪುಗಳನ್ನೂ ಕೈಕೊಳ್ಳದವರೂ, ಯೆಹೋವ ದೇವರನ್ನು ಮರೆಯದವರೂ ಆಗದಂತೆ ನೋಡಿಕೊಳ್ಳಿರಿ. \v 12 ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ, \v 13 ನಿಮ್ಮ ಪಶು ಕುರಿಗಳು ಹೆಚ್ಚಿದಾಗಲೂ, ಬೆಳ್ಳಿಬಂಗಾರ ನಿಮಗೆ ಹೆಚ್ಚಿದಾಗಲೂ, ನಿಮಗಿರುವ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ, \v 14 ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ. \v 15 ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು. \v 16 ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು. \v 17 ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ. \v 18 ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ. \p \v 19 ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ. \v 20 ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ. \c 9 \s1 ಜನರ ಅವಿಧೇಯತೆ \p \v 1 ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ. \v 2 ಆ ನಾಡಿನ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ. “ಅನಾಕ್ಯರ ಮುಂದೆ ಯಾರು ನಿಲ್ಲುವರು?” ಎಂಬ ಮಾತನ್ನು ಅವರ ಬಗ್ಗೆ ಕೇಳಿದ್ದೀರಿ. \v 3 ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ. \p \v 4 ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ. \v 5 ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ. \v 6 ಹೀಗಿರುವುದರಿಂದ ನಿಮ್ಮ ನೀತಿಗೋಸ್ಕರ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ಒಳ್ಳೆಯ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಕೊಡುವುದಿಲ್ಲವೆಂದು ನೀವು ತಿಳಿದುಕೊಳ್ಳಬೇಕು. ಏಕೆಂದರೆ ನೀವು ಹಟಮಾರಿ ಜನಾಂಗವಾಗಿದ್ದೀರಿ. \s1 ಚಿನ್ನದ ಕರು \p \v 7 ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ. \v 8 ನೀವು ಹೋರೇಬಿನಲ್ಲಿಯೂ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದಾಗ, ಅವರು ನಿಮ್ಮನ್ನು ನಿಮ್ಮ ಮೇಲೆ ಸಿಟ್ಟುಮಾಡಿಕೊಂಡು ನಾಶಮಾಡಬೇಕೆಂದಿದ್ದರು. \v 9 ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ. \v 10 ಆಗ ಯೆಹೋವ ದೇವರು ನನಗೆ ತಮ್ಮ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿನದಲ್ಲಿ ಹೇಳಿದ ಆಜ್ಞೆಗಳೆಲ್ಲಾ ಆ ಹಲಗೆಗಳಲ್ಲಿದ್ದವು. \p \v 11 ನಲವತ್ತು ದಿವಸ ಹಗಲು ರಾತ್ರಿಗಳಾದ ಮೇಲೆ ಯೆಹೋವ ದೇವರು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. \v 12 ಆಗ ಯೆಹೋವ ದೇವರು, “ಎದ್ದು ಇಲ್ಲಿಂದ ಬೇಗ ಇಳಿದು ಹೋಗು. ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡಿದ್ದಾರೆ,” ಎಂದು ನನಗೆ ಹೇಳಿದರು. \p \v 13 ಇದಲ್ಲದೆ ಯೆಹೋವ ದೇವರು ನನಗೆ, “ನಾನು ಈ ಜನರನ್ನು ನೋಡಿದ್ದೇನೆ. ಇಗೋ, ಇದು ಆಜ್ಞೆಗೆ ವಿಧೇಯವಾಗದ ಜನಾಂಗವೇ. \v 14 ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು. \p \v 15 ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು. ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು. ಒಡಂಬಡಿಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು. \v 16 ನಾನು ನೋಡಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಎರಕ ಹೊಯ್ದ ಕರುವನ್ನು ನಿಮಗೆ ಮಾಡಿಕೊಂಡು, ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗ ಬಿಟ್ಟುಬಿಟ್ಟು ಹೋಗಿದ್ದಿರಿ. \v 17 ಆಗ ನಾನು ಆ ಎರಡು ಹಲಗೆಗಳನ್ನು ತೆಗೆದುಕೊಂಡು ನನ್ನ ಕೈಯಿಂದ ಬಿಸಾಡಿ, ನಿಮ್ಮ ಮುಂದೆ ಒಡೆದು ಹಾಕಿದೆನು. \p \v 18 ಆಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಲವತ್ತು ದಿವಸ ಹಗಲುರಾತ್ರಿ ಊಟಮಾಡದೆ, ನೀರು ಕುಡಿಯದೆ, ಯೆಹೋವ ದೇವರ ಮುಂದೆ ಬಿದ್ದಿದ್ದೆನು. \v 19 ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು. \v 20 ಆರೋನನನ್ನು ನಾಶಮಾಡುವಂತೆ ಯೆಹೋವ ದೇವರು ಅವನ ಮೇಲೆಯೂ ಬಹಳ ಕೋಪಗೊಂಡರು. ಆದ್ದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆ ಮಾಡಿದೆನು. \v 21 ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು. \p \v 22 ನೀವು ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಲ್ಲಿಯೂ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದಿರಿ. \p \v 23 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿ, “ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ,” ಎಂದು ಹೇಳಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ನಂಬಲಿಲ್ಲ. ಅವರ ಮಾತನ್ನೂ ಕೇಳಲಿಲ್ಲ. \v 24 ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದೀರಿ. \p \v 25 ಹೀಗಿರಲಾಗಿ ಯೆಹೋವ ದೇವರು ನಿಮ್ಮನ್ನು ನಾಶಮಾಡುತ್ತೇನೆಂದು ಹೇಳಿದ್ದರಿಂದ, ನಾನು ಮುಂಚೆ ಬಿದ್ದುಕೊಂಡ ಹಾಗೆಯೇ ನಲವತ್ತು ದಿವಸ ಹಗಲುರಾತ್ರಿ ಯೆಹೋವ ದೇವರ ಮುಂದೆ ಬಿದ್ದಿದ್ದೆನು. \v 26 ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ. \v 27 ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ. \v 28 ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ, ಆ ದೇಶದವರು, ‘ಯೆಹೋವ ದೇವರು ಇಸ್ರಾಯೇಲರಿಗೆ ವಾಗ್ದಾನ ಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು. \v 29 ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು. \c 10 \s1 ಮತ್ತೆ ಪಡೆದ ಆಜ್ಞೆಗಳು \p \v 1 ಆ ಕಾಲದಲ್ಲಿ ಯೆಹೋವ ದೇವರು ನನಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ನೀನು ಕೆತ್ತಿಕೊಂಡು, ಬೆಟ್ಟವನ್ನೇರಿ ನನ್ನ ಬಳಿಗೆ ಬಾ. ಒಂದು ಮರದ ಮಂಜೂಷವನ್ನು ಮಾಡಿಕೊಳ್ಳಬೇಕು. \v 2 ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು. ಆಮೇಲೆ ನೀನು ಅವುಗಳನ್ನು ಮಂಜೂಷದಲ್ಲಿ ಇಡಬೇಕು,” ಎಂದು ಹೇಳಿದರು. \p \v 3 ಈ ಪ್ರಕಾರ ನಾನು ಜಾಲಿ ಮರದ ಮಂಜೂಷವನ್ನು ಮಾಡಿ, ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳಂತೆ ಕೆತ್ತಿ, ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನೇರಿದೆನು. \v 4 ಆ ಹಲಗೆಗಳ ಮೇಲೆ ಯೆಹೋವ ದೇವರು ಮುಂಚೆ ಬರೆದಿದ್ದ ಪ್ರಕಾರ ಬರೆದರು. ಅವರು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿವಸದಲ್ಲಿ ಹೇಳಿದ ಆ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟರು. \v 5 ತರುವಾಯ ನಾನು ಬೆಟ್ಟದಿಂದ ಇಳಿದುಬಂದು, ಆ ಹಲಗೆಗಳನ್ನು ಯೆಹೋವ ದೇವರು ನನಗೆ ಆಜ್ಞಾಪಿಸಿದ ಹಾಗೆ ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಅವು ಅಲ್ಲಿಯೇ ಇರುತ್ತವೆ. \p \v 6 ಇಸ್ರಾಯೇಲರು ಯಾಕಾನನ ಮಕ್ಕಳ ಬಾವಿಗಳ ಬಳಿಯಿಂದ ಬೇರೋತದಿಂದ ಮೋಸೇರಕ್ಕೆ ಹೊರಟಾಗ, ಆರೋನನು ಅಲ್ಲಿ ಮರಣಹೊಂದಿದನು. ಅಲ್ಲೇ ಅವನನ್ನು ಹೂಳಿಟ್ಟೆವು. ಅವನ ಮಗ ಎಲಿಯಾಜರನು ಅವನ ಬದಲಿಗೆ ಯಾಜಕನಾದನು. \v 7 ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಪ್ರವಾಹಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣಮಾಡಿದರು. \v 8 ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ. \v 9 ಆದ್ದರಿಂದ ಲೇವಿಯರಿಗೆ ಅವರ ಸಹೋದರರ ಸಂಗಡ ಸ್ವಂತವಾದ ಭೂಸ್ವಾಸ್ತ್ಯವು ದೊರೆಯಲಿಲ್ಲ. ನಿಮ್ಮ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದಂತೆ ಯೆಹೋವ ದೇವರೇ ಅವರ ಸೊತ್ತು. \p \v 10 ಇದಲ್ಲದೆ ನಾನು ಮೊದಲಿನಂತೆ ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿ ನಿಂತೆನು. ಯೆಹೋವ ದೇವರು ಆ ಕಾಲದಲ್ಲಿ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ. \v 11 ಯೆಹೋವ ದೇವರು ನನಗೆ, “ಜನರ ಮುಂದೆ ಹೋಗು, ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,” ಎಂದು ಆಜ್ಞಾಪಿಸಿದರು. \s1 ಯೆಹೋವ ದೇವರಿಗೆ ಭಯಪಡಿರಿ \p \v 12 ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ. \v 13 ನಾನು ಈ ಹೊತ್ತು ನಿಮ್ಮ ಮೇಲಿಗಾಗಿ ನಿಮಗೆ ಆಜ್ಞಾಪಿಸುವ ಯೆಹೋವ ದೇವರ ಆಜ್ಞೆಗಳನ್ನೂ ಅವರ ನಿಮಯಗಳನ್ನೂ ಕಾಪಾಡುವುದೇ ಹೊರತು, ಮತ್ತೇನೂ ನಮ್ಮ ದೇವರಾಗಿರುವ ಯೆಹೋವ ದೇವರು ನಿಮ್ಮಿಂದ ಕೇಳುತ್ತಾರೆ? \p \v 14 ಆಕಾಶವೂ ಉನ್ನತಾಕಾಶವೂ ಭೂಮಿಯೂ ಅದರಲ್ಲಿರುವಂಥಾದ್ದೆಲ್ಲವೂ ನಿಮ್ಮ ದೇವರಾಗಿರುವ ಯೆಹೋವ ದೇವರವುಗಳೇ. \v 15 ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು. \v 16 ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ. \v 17 ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ. \v 18 ಅವರು ತಂದೆ ಇಲ್ಲದವರಿಗೂ, ವಿಧವೆಯರಿಗೂ ನ್ಯಾಯ ದೊರಕಿಸುತ್ತಾರೆ. ಪರದೇಶಿಯರನ್ನು ಪ್ರೀತಿಸಿ ಅನ್ನ, ವಸ್ತ್ರ ಕೊಡುತ್ತಾರೆ. \v 19 ಹೀಗಿರುವುದರಿಂದ ನೀವು ಪರದೇಶಿಯರನ್ನು ಪ್ರೀತಿಸಿರಿ. ಏಕೆಂದರೆ ನೀವು ಈಜಿಪ್ಟಿನಲ್ಲಿ ಪರದೇಶಿಗಳಾಗಿದ್ದೀರಿ. \v 20 ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು. \v 21 ನೀವು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿಮಗೆ ಮಾಡಿದ ಅವರೇ ನಿಮ್ಮ ಸ್ತೋತ್ರವು. ಅವರೇ ನಿಮ್ಮ ದೇವರು. \v 22 ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ. \c 11 \s1 ಯೆಹೋವ ದೇವರನ್ನು ಪ್ರೀತಿಸಿ, ಆತನಿಗೆ ವಿಧೇಯರಾಗಿರಿ \p \v 1 ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು. \v 2 ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರ ಶಿಕ್ಷಣವನ್ನು ಅನುಭವಿಸಿದ್ದು ನಿಮ್ಮ ಮಕ್ಕಳಲ್ಲ: ದೇವರ ಮಹತ್ವವನ್ನೂ, ಅವರ ಬಲವಾದ ಕೈಯನ್ನೂ, ಅವರು ಚಾಚಿದ ಭುಜವನ್ನೂ; \v 3 ಅಂದರೆ, ದೇವರು ಈಜಿಪ್ಟ್ ಮಧ್ಯದಲ್ಲಿ ಈಜಿಪ್ಟಿನ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಅವರ ಸೂಚಕಕಾರ್ಯಗಳನ್ನೂ ನೀವೇ ಅನುಭವಿಸಿ ನೋಡಿದ್ದೀರಿ; \v 4 ದೇವರು ಈಜಿಪ್ಟಿನ ಸೈನ್ಯಕ್ಕೆ, ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನು ಅಂದರೆ, ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ, ಸಂಪೂರ್ಣವಾಗಿ ಅವರನ್ನು ನಾಶಮಾಡಿದ್ದನ್ನು ಸಹ ನೀವು ನೋಡಿದ್ದೀರಿ; \v 5 ನೀವು ಈ ಸ್ಥಳಕ್ಕೆ ಸೇರುವ ತನಕ ಯೆಹೋವ ದೇವರು ಮರುಭೂಮಿಯಲ್ಲಿ ನಿಮಗೆ ಮಾಡಿದ ಉಪಕಾರಗಳನ್ನೂ; \v 6 ರೂಬೇನನ ಮಗ ಎಲೀಯಾಬನ ಪುತ್ರರಾಗಿರುವ ದಾತಾನ್, ಅಬೀರಾಮರು ದಂಗೆಯೆದ್ದಾಗ, ಭೂಮಿಯು ಬಾಯಿತೆರೆದು ಅವರ ಮನೆಗಳನ್ನೂ, ಅವರಿಗಿದ್ದ ಎಲ್ಲಾ ಆಸ್ತಿಯನ್ನೂ, ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪಶುಪ್ರಾಣಿಗಳನ್ನೂ, ಸಮಸ್ತ ಇಸ್ರಾಯೇಲರ ಮಧ್ಯದಲ್ಲಿ ಹೇಗೆ ನುಂಗುವಂತೆ ದೇವರು ಮಾಡಿದರೆಂಬುದನ್ನೂ ಜ್ಞಾಪಕಮಾಡಿಕೊಳ್ಳಿರಿ. \v 7 ಯೆಹೋವ ದೇವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನಿಮ್ಮ ಕಣ್ಣುಗಳು ನೋಡಿದವು. \p \v 8 ಹೀಗಿರುವುದರಿಂದ ಈಗ ನಾನು ನಿಮಗೆ ಬೋಧಿಸುವ ಈ ಆಜ್ಞೆಯನ್ನೆಲ್ಲಾ ಕೈಗೊಳ್ಳಬೇಕು. ಆಗ ನೀವು ಬಲವುಳ್ಳವರಾಗಿ, ಈ ನದಿದಾಟಿ ಆಚೆಯಿರುವ ದೇಶವನ್ನು ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. \v 9 ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. \v 10 ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ. \v 11 ಆದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು ಬೆಟ್ಟಗಳೂ, ತಗ್ಗುಗಳೂ ಉಳ್ಳ ದೇಶವೇ; ಆಕಾಶದ ಮಳೆಯಿಂದ ಅದಕ್ಕೆ ನೀರು ದೊರೆಯುವುದು. \v 12 ಅದು ನಿಮ್ಮ ದೇವರಾದ ಯೆಹೋವ ದೇವರು ಪರಾಮರಿಸುವ ದೇಶವೇ; ವರ್ಷದ ಆರಂಭದಿಂದ ವರ್ಷದ ಅಂತ್ಯದವರೆಗೂ ಯಾವಾಗಲೂ ನಿಮ್ಮ ದೇವರಾದ ಯೆಹೋವ ದೇವರ ಕಣ್ಣು ಅದರ ಮೇಲಿರುವುದು. \p \v 13 ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ, \v 14 ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು. \v 15 ನಿಮ್ಮ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ನಿಮ್ಮ ಹೊಲದಲ್ಲಿ ಕೊಡುವರು. ನೀವು ಆಹಾರದಿಂದ ತೃಪ್ತರಾಗುವಿರಿ. \p \v 16 ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ. \v 17 ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ. \v 18 ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ. \v 19 ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು. \v 20 ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು. \v 21 ಹೀಗೆ ಮಾಡಿದರೆ ನಿಮ್ಮ ದಿನಗಳೂ, ನಿಮ್ಮ ಮಕ್ಕಳ ದಿನಗಳೂ ಭೂಮಿಯಲ್ಲಿ ಆಕಾಶದ ದಿನಗಳು ನೆಲೆಯಾಗಿರುವ ಪ್ರಕಾರ, ಯೆಹೋವ ದೇವರು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನೆಲೆಯಾಗಿರುವಿರಿ. \p \v 22 ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಎಚ್ಚರಿಕೆಯಿಂದ ಕಾಪಾಡಿ, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರನ್ನು ಅಂಟಿಕೊಂಡರೆ, \v 23 ಯೆಹೋವ ದೇವರು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವರು. ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನಮಾಡಿಕೊಳ್ಳುವಿರಿ. \v 24 ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು. \v 25 ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು. \p \v 26 ನಾನು ಈ ಹೊತ್ತು ಆಶೀರ್ವಾದವನ್ನೂ, ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ. \v 27 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ನೀವು ವಿಧೇಯರಾದರೆ, ಆಶೀರ್ವಾದವನ್ನು ಪಡೆದುಕೊಳ್ಳುವಿರಿ. \v 28 ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾದರೆ, ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ, ನಿಮಗೆ ಶಾಪವು ತಗಲುವುದು. \v 29 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರವೇಶಿಸುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೇರಿಸಿದಾಗ, ನೀವು ಗೆರಿಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು. \v 30 ಇವು ಯೊರ್ದನ್ ನದಿಯ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬಯಲಿನೊಳಗೆ ಮೋರೆ ಎಂಬ ಮಹಾವೃಕ್ಷದ ಸಮೀಪ ವಾಸಮಾಡುವ ಕಾನಾನ್ಯರ ದೇಶದಲ್ಲಿ ಇರುತ್ತವೆ. \v 31 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಿ ಹೋಗಬೇಕು. ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ, \v 32 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ಆಜ್ಞಾವಿಧಿಗಳನ್ನು ಕಾಪಾಡಿ ನಡೆದುಕೊಳ್ಳಬೇಕು. \c 12 \s1 ಆರಾಧನೆಯ ಒಂದು ಸ್ಥಳ \p \v 1 ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದಲ್ಲಿ ನೀವು ಬದುಕುವ ದಿವಸಗಳಲ್ಲೆಲ್ಲಾ ಕೈಗೊಂಡು ನಡೆಯತಕ್ಕ ತೀರ್ಪು ಹಾಗು ನಿಯಮಗಳು ಇವೇ. \v 2 ನೀವು ಸ್ವಾಧೀನ ಮಾಡಿಕೊಳ್ಳುವ ದೇಶದ ಜನಾಂಗಗಳು ತಮ್ಮ ದೇವರುಗಳಿಗೆ ಪೂಜಿಸಿದ ಸ್ಥಳಗಳನ್ನೂ, ಬೆಟ್ಟಗಳ ಮೇಲಿನ ಎತ್ತರ ಸ್ಥಳಗಳನ್ನೂ, ಗುಡ್ಡಗಳ ಹಾಗು ಮರಗಳ ಕೆಳಗಿರುವ ಸ್ಥಳಗಳನ್ನು ನೀವು ಪೂರ್ಣವಾಗಿ ನಾಶಮಾಡಬೇಕು. \v 3 ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು. \p \v 4 ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಆರಾಧಿಸಬಾರದು. \v 5 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು. \v 6 ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು. \v 7 ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು. \p \v 8 ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡಬೇಡಿರಿ. \v 9 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ವಿಶ್ರಾಂತಿಗೂ, ಸೊತ್ತಿಗೂ ನೀವು ಇನ್ನೂ ಸೇರಲಿಲ್ಲ. \v 10 ಆದರೆ ನೀವು ಯೊರ್ದನ್ ನದಿಯನ್ನು ದಾಟಿದ ಮೇಲೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ, ದೇವರು ಸುತ್ತಲಿರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡುವರು. \v 11 ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು. \v 12 ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು. \v 13 ನೀವು ಕಂಡ ಎಲ್ಲಾ ಸ್ಥಳಗಳಲ್ಲಿ ನಿಮ್ಮ ದಹನಬಲಿಗಳನ್ನು ಅರ್ಪಿಸದಂತೆ ನೋಡಿಕೊಳ್ಳಿರಿ. \v 14 ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು. \p \v 15 ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿಮ್ಮ ಇಷ್ಟಾನುಸಾರ ಮಾಂಸಾಹಾರವನ್ನು ನಿಮ್ಮ ಎಲ್ಲಾ ಊರುಗಳಲ್ಲಿ ತಿನ್ನಬಹುದು. ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು. \v 16 ರಕ್ತವನ್ನು ಮಾತ್ರ ಭುಜಿಸಬೇಡಿರಿ. ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು. \v 17 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆಗಳ ದಶಮಾಂಶವನ್ನೂ, ನಿಮ್ಮ ದನಕುರಿಗಳ ಚೊಚ್ಚಲಾದವುಗಳನ್ನೂ, ನೀವು ಮಾಡುವ ಎಲ್ಲಾ ಹರಕೆಯ ಪದಾರ್ಥಗಳನ್ನೂ, ನಿಮ್ಮ ಉಚಿತವಾದ ಕಾಣಿಕೆಗಳನ್ನೂ, ಯಾಜಕರಿಗೆ ಪ್ರತ್ಯೇಕಿಸಿದ ಅರ್ಪಣೆಗಳನ್ನೂ ನಿಮ್ಮ ಊರುಗಳಲ್ಲಿ ತಿನ್ನಬೇಡಿರಿ. \v 18 ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು. \v 19 ನೀವು ಭೂಮಿಯ ಮೇಲೆ ಜೀವಿಸುವವರೆಗೆ ಲೇವಿಯರನ್ನು ಬಿಟ್ಟು ಬಿಡದ ಹಾಗೆ ನೋಡಿಕೊಳ್ಳಿರಿ. \p \v 20 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆ ನಿಮ್ಮ ಮೇರೆಯನ್ನು ವಿಸ್ತಾರಮಾಡುವರು. ಆಗ ನೀವು, “ಮಾಂಸಾಹಾರವನ್ನು ತಿನ್ನಲು ಇಷ್ಟಪಡುತ್ತೇನೆ,” ಎಂದು ಹೇಳಿದರೆ, ತಿನ್ನಬಹುದು. \v 21 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾದರೆ, ಯೆಹೋವ ದೇವರು ನಿಮಗೆ ಕೊಟ್ಟ ದನಕುರಿಗಳಿಂದ ನಾನು ನಿಮಗೆ ಆಜ್ಞಾಪಿಸಿದಂತೆ ನಿಮ್ಮ ಊರಲ್ಲೇ ನಿಮಗೆ ಮನಸ್ಸಿದ್ದಷ್ಟು ಮಾಂಸಾಹಾರವನ್ನು ಮಾಡಿ ಉಣ್ಣಬಹುದು. \v 22 ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು. \v 23 ರಕ್ತವನ್ನು ಮಾತ್ರ ಭುಜಿಸದ ಹಾಗೆ ಜಾಗ್ರತೆಯಾಗಿರಿ. ಏಕೆಂದರೆ ರಕ್ತವು ಪ್ರಾಣವೇ. ಮಾಂಸದೊಡನೆ ಅದರ ಜೀವವನ್ನು ತಿನ್ನಬಾರದು. \v 24 ಅದನ್ನು ಭುಜಿಸದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು. \v 25 ನೀವು ರಕ್ತವನ್ನು ಭುಜಿಸದಿದ್ದರೆ, ಯೆಹೋವ ದೇವರಿಗೆ ಮೆಚ್ಚುಗೆಯಾಗುವುದು. ಅಲ್ಲದೆ ನಿಮಗೂ, ನಿಮ್ಮ ಮಕ್ಕಳಿಗೂ ಒಳ್ಳೆಯದಾಗುವುದು. \p \v 26 ನಿಮಗಿರುವ ಪರಿಶುದ್ಧವಾದವುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು. \v 27 ಆಗ ನಿಮ್ಮ ದಹನಬಲಿಗಳನ್ನೂ, ರಕ್ತಮಾಂಸವನ್ನೂ, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸಬೇಕು. ನಿಮ್ಮ ಬಲಿಗಳ ರಕ್ತವನ್ನು ನಿನ್ನ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಸುರಿಯಬೇಕು. ಅನಂತರ ಮಾಂಸ ಊಟಮಾಡಬಹುದು. \v 28 ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡುವುದರಿಂದ ನಿಮಗೂ ನಿಮ್ಮ ಮುಂದೆ ಇರುವ ನಿಮ್ಮ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವ ಹಾಗೆ ನಾನು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡಿರಿ. \p \v 29 ನೀವು ಮುತ್ತಿಗೆ ಹಾಕಿ ವಶಪಡಿಸಿಕೊಳ್ಳಲಿಕ್ಕಿರುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವ ದೇವರು ತೆಗೆದುಹಾಕುವರು. ನೀವು ಅವರನ್ನು ಹೊರಗೆ ಓಡಿಸಿ, ಅಲ್ಲಿ ನೀವು ನೆಲೆಸಿದಾಗ, \v 30 ನೀವು ಭ್ರಮೆಗೊಂಡು ನಿಮ್ಮ ಮುಂದೆ ನಾಶವಾದವರ ಬಗ್ಗೆ ವಿಚಾರಣೆ ಮಾಡಬೇಡಿರಿ. “ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಪೂಜಿಸಿದವು? ನಾವೂ ಹಾಗೆ ಮಾಡೋಣ,” ಎಂದು ಹೇಳಬೇಡಿರಿ. \v 31 ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು. \p \v 32 ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು. \c 13 \s1 ಇತರ ದೇವರುಗಳನ್ನು ಆರಾಧಿಸುವುದು \p \v 1 ನಿಮ್ಮ ಮಧ್ಯೆ ಯಾವ ಪ್ರವಾದಿಯೇ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆ ಮಾಡಿ, \v 2 “ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ,” ಎಂದು ಬೋಧಿಸಬಹುದು. ಆ ಬೋಧನೆಯನ್ನು ರುಜುವಾತುಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಸಹ ಹೇಳಬಹುದು. \v 3 ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ. \v 4 ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು. \v 5 ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು. \p \v 6 ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು \v 7 ನಿಮಗೆ ಸಮೀಪವಾಗಲಿ, ನಿಮಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯವರೆಗೆ ನಿಮ್ಮ ಸುತ್ತಲಿರುವ ಜನರ ದೇವರುಗಳನ್ನು ಸೇವಿಸೋಣ,” ಎಂದು ನಿಮ್ಮನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ, \v 8 ನೀವು ಅವರಿಗೆ ಸಮ್ಮತಿಸಬಾರದು. ಅವರ ಮಾತನ್ನು ಕೇಳಬಾರದು. ನೀವು ಅವರನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು. \v 9 ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲು ಎಸೆಯಬೇಕು, ತರುವಾಯ ಜನರೆಲ್ಲರೂ ಎಸೆಯಲಿ. \v 10 ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು. \v 11 ಇಸ್ರಾಯೇಲರೆಲ್ಲಾ ಇದನ್ನು ಕೇಳಿ ಭಯಪಟ್ಟು, ಇನ್ನು ಮೇಲೆ ಕೆಟ್ಟದ್ದನ್ನು ಮಾಡದೆ ಇರುವರು. \p \v 12 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಸಮಾಡುವುದಕ್ಕೆ ಕೊಡುವ ಯಾವುದಾದರೂ ಪಟ್ಟಣದಲ್ಲಿ \v 13 ದುಷ್ಟಜನರು ಎದ್ದು ತಮ್ಮ ಪಟ್ಟಣದಲ್ಲಿರುವ ಜನರನ್ನು, “ನೀವು ತಿಳಿಯದಿರುವ ಇತರ ದೇವರುಗಳನ್ನು ಪೂಜಿಸೋಣ ಬನ್ನಿರಿ,” ಎಂದು ಹೇಳಿ ದುರ್ಮಾಗಕ್ಕೆ ಎಳೆದಿದ್ದಾರೆ ಎಂಬ ಸುದ್ದಿ ನಿಮಗೆ ತಿಳಿಸಿದರೆ, \v 14 ನೀವು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು. ಆ ಕಾರ್ಯವು ನಿಶ್ಚಯವಾಗಿ ಸತ್ಯವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ, \v 15 ಆ ಊರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅದನ್ನೂ, ಅದರಲ್ಲಿರುವ ಎಲ್ಲದನ್ನೂ, ಅದರ ಪಶುಗಳನ್ನೂ ಸಹ ಶಪಿಸಿ ಖಡ್ಗದಿಂದ ನಿರ್ಮೂಲ ಮಾಡಬೇಕು. \v 16 ಇದಲ್ಲದೆ ಆ ಊರಿನ ಎಲ್ಲಾ ಸಾಮಗ್ರಿಗಳನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ, ಆ ಪಟ್ಟಣವನ್ನೂ, ಅದರ ಎಲ್ಲಾ ವಸ್ತುವನ್ನೂ ಸಂಪೂರ್ಣವಾಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಯಾಗಿ ಸುಟ್ಟುಬಿಡಬೇಕು. ಅದು ಎಂದಿಗೂ ಹಾಳುದಿಬ್ಬವಾಗಿರಬೇಕು; ಇನ್ನು ಮೇಲೆ ಅದನ್ನು ಕಟ್ಟಬಾರದು; ಆ ಶಾಪಗ್ರಸ್ತ ವಸ್ತುಗಳಲ್ಲಿ ಏನನ್ನೂ ತೆಗೆದುಕೊಳ್ಳಬಾರದು. \v 17 ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ, \v 18 ನಿಮ್ಮ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಾಗ ಯೆಹೋವ ದೇವರು ತಮ್ಮ ಕೋಪವನ್ನು ಬಿಟ್ಟು, ತಿರುಗಿ ನಿಮಗೆ ದಯೆಯನ್ನು ತೋರಿಸಿ, ನಿಮ್ಮ ಮೇಲೆ ಕನಿಕರಪಟ್ಟು, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು. \c 14 \s1 ಶುದ್ಧ ಮತ್ತು ಅಶುದ್ಧವಾದ ಆಹಾರ \p \v 1 ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು. \v 2 ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ. \p \v 3 ಅಸಹ್ಯವಾದ ಯಾವುದನ್ನಾದರೂ ತಿನ್ನಬಾರದು. \v 4 ನೀವು ತಿನ್ನಬಹುದಾದ ಪ್ರಾಣಿಗಳು ಯಾವವಂದರೆ: ಎತ್ತು, ಕುರಿ, ಮೇಕೆ, \v 5 ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ. \v 6 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥಾದ್ದಾದರೆ ಅದರ ಮಾಂಸವನ್ನು ತಿನ್ನಬಹುದು. \v 7 ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವು ಮೆಲುಕು ಹಾಕುವಂಥವುಗಳಾದರೂ, ಸೀಳುಗೊರಸು ಇಲ್ಲವಾದದ್ದರಿಂದ ಅವು ನಿಮಗೆ ಅಶುದ್ಧ. \v 8 ಹಂದಿಯನ್ನು ತಿನ್ನಬಾರದು. ಏಕೆಂದರೆ ಅದು ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲ. ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ನೀವು ತಿನ್ನಬಾರದು, ಅವುಗಳ ಹೆಣವನ್ನು ಮುಟ್ಟಬಾರದು. \p \v 9 ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ನೀವು ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು. \v 10 ಆದರೆ ರೆಕ್ಕಗಳೂ ಪೊರೆಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು. ಅವು ನಿಮಗೆ ಅಶುದ್ಧ. \p \v 11 ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. \v 12 ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ಬೆಟ್ಟದಹದ್ದು, ಕಪ್ಪು ರಣಹದ್ದು, \v 13 ಗಿಡುಗ, ಹಕ್ಕಿಸಾಲೆ, ಸಕಲವಿಧವಾದ ಹದ್ದು, \v 14 ಸಕಲವಿಧವಾದ ಕಾಗೆ, \v 15 ಉಷ್ಟ್ರಪಕ್ಷಿ, ಉಲೂಕ, ಚೀರು ಗೂಬೆ, ಕಡಲ ಹಕ್ಕಿ, ಸಕಲವಿಧವಾದ ಡೇಗೆ, \v 16 ಸಣ್ಣ ಗೂಬೆ, ದೊಡ್ಡ ಗೂಬೆ, ಬಿಳಿಗೂಬೆ, \v 17 ಮರಳುಗಾಡು ಗೂಬೆ, ರಣಹದ್ದು, ನೀರು ಕೋಳಿ, \v 18 ಕೊಕ್ಕರೆ, ನೀರುಕಾಗೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ. \p \v 19 ಇದಲ್ಲದೆ ಹಾರುವ ಎಲ್ಲಾ ಕ್ರಿಮಿಕೀಟಗಳು ನಿಮಗೆ ಅಶುದ್ಧವೇ. ಅವುಗಳನ್ನು ತಿನ್ನಬಾರದು. \v 20 ಶುದ್ಧವಾದ ಎಲ್ಲಾ ರೆಕ್ಕೆ ಉಳ್ಳ ಪಕ್ಷಿಗಳನ್ನು ತಿನ್ನಬಹುದು. \p \v 21 ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. \p ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು. \s1 ಬೆಳೆಯ ದಶಮಾಂಶ \p \v 22 ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. \v 23 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ದಶಮಾಂಶವನ್ನೂ ನಿಮ್ಮ ದನಕುರಿಗಳಲ್ಲಿ ಚೊಚ್ಚಲುಗಳನ್ನೂ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ದೇವರೇ ಆಯ್ದುಕೊಂಡ ಸ್ಥಳದಲ್ಲಿ ತಿನ್ನಬೇಕು. ಇದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಎಂದೆಂದಿಗೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಕಲಿಯುವಿರಿ. \v 24 ನೀವು ಕಾಣಿಕೆಗಳನ್ನು ತೆಗೆದುಕೊಂಡು ಹೋಗುವುದಕ್ಕೆ ನಿಮಗೆ ದಾರಿ ದೂರವಾಗಿದ್ದರೆ, ಅಥವಾ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾಗಿದ್ದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ ಕಾಲದಲ್ಲಿ, \v 25 ಅವುಗಳನ್ನು ಮಾರಿ ಹಣವನ್ನಾಗಿ ಮಾರ್ಪಡಿಸಿ, ಆ ಹಣವನ್ನು ನಿಮ್ಮ ಕೈಯಲ್ಲಿ ತೆಗೆದುಕೊಂಡು, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ. \v 26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ, ಮೊದಲಾದವುಗಳನ್ನು ಹಣದಿಂದ ಕೊಂಡುಕೊಂಡು ನೀವೂ, ನಿಮ್ಮ ಮನೆಯವರೂ, ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಊಟಮಾಡಿ, ಸಂತೋಷವಾಗಿರಬೇಕು. \v 27 ನಿಮ್ಮ ಊರುಗಳಲ್ಲಿರುವ ಲೇವಿಯರನ್ನು ಕೈಬಿಡಬಾರದು. ಏಕೆಂದರೆ ಅವರಿಗೆ ನಿಮ್ಮ ಸಂಗಡ ಪಾಲೂ, ಸೊತ್ತೂ ಇಲ್ಲ. \p \v 28 ಪ್ರತಿ ಮೂರು ವರ್ಷಗಳ ಅಂತ್ಯದಲ್ಲಿ ಆಯಾ ವರ್ಷದಲ್ಲಿ ನಿಮಗೆ ಸಿಕ್ಕಿದ ಹುಟ್ಟುವಳಿಯ ದಶಮಭಾಗವನ್ನೆಲ್ಲಾ ಹೊರಗೆ ತಂದು ನಿಮ್ಮ ಊರಲ್ಲಿಯೇ ಕೂಡಿಸಬೇಕು. \v 29 ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು. \c 15 \s1 ಸಾಲ ಬಿಡುಗಡೆಯ ವರ್ಷ \p \v 1 ಪ್ರತಿ ಏಳು ವರ್ಷಗಳ ಅಂತ್ಯದಲ್ಲಿ ಎಲ್ಲರ ಸಾಲಗಳನ್ನೂ ಮನ್ನಾಮಾಡಬೇಕು. \v 2 ನೀವು ಮಾಡಬೇಕಾದ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಾದ ಇಸ್ರಾಯೇಲರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡಬೇಕು. ಅದು ಯೆಹೋವ ದೇವರ ಬಿಡುಗಡೆಯ ವರ್ಷ ಎಂದು ಪ್ರಕಟವಾಗಿರುವುದರಿಂದ ತನ್ನ ನೆರೆಯವನಿಂದಲೂ, ತನ್ನ ಸಹೋದರನಿಂದಲೂ ಸಾಲವನ್ನು ಕೇಳಬಾರದು. \v 3 ಅನ್ಯದೇಶದವರಿಂದ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದು. ಆದರೆ ಸ್ವದೇಶದವನಾದ ನಿಮ್ಮ ಸಹೋದರರು ಕೊಡಬೇಕಾದ ಸಾಲವನ್ನು ನೀವು ಮನ್ನಾಮಾಡಬೇಕು. \v 4 ಏಕೆಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದಲ್ಲಿ ಯೆಹೋವ ದೇವರು ನಿಮ್ಮನ್ನು ಬಹಳವಾಗಿ ಆಶೀರ್ವದಿಸುವರು. ಹೀಗಾಗಿ ನಿಮ್ಮಲ್ಲಿ ಬಡವರೇ ಇರುವುದಿಲ್ಲ. \v 5 ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆಯಿರಿ. \v 6 ನಿಶ್ಚಯವಾಗಿ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದಂತೆ ನಿನ್ನನ್ನು ಆಶೀರ್ವದಿಸುವರು. ನೀವು ಸಾಲ ತೆಗೆದುಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲ ಕೊಡುವಿರಿ. ಅನೇಕ ಜನಾಂಗಗಳನ್ನು ಆಳುವಿರಿ, ಅವರು ನಿಮ್ಮನ್ನು ಆಳುವುದಿಲ್ಲ. \p \v 7 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ. \v 8 ನಿಮ್ಮ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು. ಅವನಿಗೆ ಅಗತ್ಯವಾದಷ್ಟು ಕೊಡಬೇಕು. \v 9 “ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ. \v 10 ಕೊಡುವಾಗ ಬೇಸರಗೊಳ್ಳದೇ ಉದಾರಮನಸ್ಸಿನಿಂದ ಕೊಡಿರಿ. ಏಕೆಂದರೆ ಇದಕ್ಕೋಸ್ಕರವೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ, ನೀವು ಕೈಹಾಕುವುದೆಲ್ಲದರಲ್ಲಿಯೂ ಆಶೀರ್ವದಿಸುವರು. \v 11 ಏಕೆಂದರೆ ಬಡವರು ದೇಶದಲ್ಲಿ ಇಲ್ಲದೆ ಹೋಗುವುದಿಲ್ಲ. ಆದ್ದರಿಂದ ನಿಮ್ಮ ಸಹೋದರರಿಗೂ, ನಿಮ್ಮ ನಾಡಿನ ದರಿದ್ರರಿಗೂ, ಬಡವರಿಗೂ ನಿಮ್ಮ ಕೈಯನ್ನು ವಿಶಾಲವಾಗಿ ತೆರೆಯಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. \s1 ಗುಲಾಮನ ಬಿಡುಗಡೆ \p \v 12 ನಿಮ್ಮ ಸಹೋದರನಾದ ಹಿಬ್ರಿಯನಾಗಲಿ, ಒಬ್ಬ ಹಿಬ್ರಿಯ ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ, ಆರು ವರ್ಷ ನಿಮಗೆ ಮಾರಾಟವಾಗಿದ್ದರೆ ಮತ್ತು ಸೇವೆ ಮಾಡಿದ್ದರೆ, ಏಳನೆಯ ವರ್ಷದಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿಬಿಡಿರಿ. \v 13 ಹಾಗೆ ಬಿಟ್ಟುಬಿಡುವಾಗ ಬರೀ ಕೈಯಲ್ಲಿ ಕಳುಹಿಸಬಾರದು. \v 14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅಂದರೆ ನಿಮ್ಮ ಕುರಿಮಂದೆಯಿಂದಲೂ ಕಣದಿಂದಲೂ ದ್ರಾಕ್ಷಿ ಆಲೆಯದಿಂದಲೂ ಅವರಿಗೆ ಧಾರಾಳವಾಗಿ ಕೊಟ್ಟುಕಳುಹಿಸಬೇಕು. \v 15 ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ. \p \v 16 ಒಂದು ವೇಳೆ ಆ ಗುಲಾಮನು, ನಿಮ್ಮನ್ನೂ, ನಿಮ್ಮ ಮನೆಯನ್ನೂ ಪ್ರೀತಿಸುವುದರಿಂದಲೂ, ನಿಮ್ಮ ಬಳಿ ಸುಖವಾಗಿರುವುದರಿಂದಲೂ, “ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,” ಎಂದು ಹೇಳಿದರೆ, \v 17 ನೀವು ದಬ್ಬಳವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಿಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿಮ್ಮ ದಾಸನಾಗಿರುವನು. ನಿಮ್ಮ ದಾಸಿಗೂ ಹಾಗೆಯೇ ಮಾಡಬೇಕು. \p \v 18 ಒಬ್ಬ ಗುಲಾಮನನ್ನು ನಿಮ್ಮಿಂದ ಬಿಡುಗಡೆಯಾಗಿ ಕಳುಹಿಸುವುದು ನಿಮಗೆ ಕಷ್ಟವೆಂದು ಹೇಳಿಕೊಳ್ಳಬಾರದು. ಏಕೆಂದರೆ ಅವನು ಆರು ವರ್ಷ ನಿಮ್ಮ ದಾಸನಾಗಿದ್ದದರಿಂದ ಸಂಬಳದ ಸೇವಕನಿಗಿಂತ ಎರಡಷ್ಟಾಗಿದ್ದನು. ಹೀಗೆ ನಿಮ್ಮ ದೇವರಾದ ಯೆಹೋವ ದೇವರು ನೀವು ಮಾಡುವುದೆಲ್ಲದರಲ್ಲಿಯೂ ನಿಮ್ಮನ್ನು ಆಶೀರ್ವದಿಸುವರು. \s1 ಚೊಚ್ಚಲು ಪಶುಗಳು \p \v 19 ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠಿಸಬೇಕು. ನಿಮ್ಮ ಹೋರಿಯ ಚೊಚ್ಚಲಿನಿಂದ ನೀವು ಕೆಲಸ ಮಾಡಿಸಬಾರದು. ನಿಮ್ಮ ಕುರಿಯ ಚೊಚ್ಚಲಲ್ಲಿ ಉಣ್ಣೆ ಕತ್ತರಿಸಬಾರದು. \v 20 ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವು ನಿಮ್ಮ ಮನೆಯವರ ಸಹಿತವಾಗಿ ಅವುಗಳಿಂದ ಪ್ರತಿವರ್ಷ ಮಾಂಸಾಹಾರವಾಗಿರಬೇಕು. \v 21 ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. \v 22 ಅದನ್ನು ನಿಮ್ಮ ಊರಲ್ಲಿ ಮಾಂಸಾಹಾರವಾಗಿರಲಿ. ಆಚಾರವಾಗಿ ಶುದ್ಧರೂ, ಅಶುದ್ಧರೂ ಕೂಡ ಅದನ್ನು ಕಡವೆ ಜಿಂಕೆಗಳನ್ನು ಮಾಂಸಾಹಾರವಾಗಿ ಮಾಡಿಕೊಂಡ ಹಾಗೆ ತಿನ್ನಬಹುದು. \v 23 ಅದರ ರಕ್ತವನ್ನು ಮಾತ್ರ ಭುಜಿಸಬಾರದು, ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು. \c 16 \s1 ಪಸ್ಕ \p \v 1 ನೀವು ಅಬೀಬ\f + \fr 16:1 \fr*\fq ಅಬೀಬ \fq*\ft ಎಂದರೆ \ft*\fqa ಹೀಬ್ರೂ ಕ್ಯಾಲೆಂಡರಿನ ಪ್ರಕಾರ ಮೊದಲ ತಿಂಗಳು\fqa*\f* ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು. \v 2 ಹೀಗಿರುವುದರಿಂದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಸ್ಕದ ಪಶುವನ್ನಾಗಿ ಅರ್ಪಿಸಬೇಕು. \v 3 ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು. \v 4 ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿಮ್ಮ ಮೇರೆಗಳಲ್ಲಿ ಎಲ್ಲಿಯೂ ಕಾಣಬಾರದು. ಮೊದಲನೆಯ ದಿವಸದ ಸಾಯಂಕಾಲದಲ್ಲಿ ನೀವು ಯಜ್ಞವಾಗಿ ಸಮರ್ಪಿಸಿದ ಮಾಂಸದಲ್ಲಿ ಏನೂ ಮರುದಿವಸದವರೆಗೆ ಉಳಿಯಬಾರದು. \p \v 5 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವ ಊರಲ್ಲಾದರೂ ಪಸ್ಕವನ್ನು ಅರ್ಪಿಸಬಾರದು. \v 6 ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲೇ ಸೂರ್ಯನು ಅಸ್ತಮಿಸುವಾಗ ನೀವು ಈಜಿಪ್ಟನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು. \v 7 ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು. ಮರುದಿವಸದಲ್ಲಿ ಹಿಂದಿರುಗಿ ನಿಮ್ಮ ಗುಡಾರಗಳಿಗೆ ಹೋಗಬಹುದು. \v 8 ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು. \s1 ವಾರಗಳ ಹಬ್ಬ \p \v 9 ಏಳು ವಾರಗಳನ್ನು ನನಗಾಗಿ ಎಣಿಸಿಕೊಳ್ಳಬೇಕು. ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವುದಕ್ಕೆ ಪ್ರಾರಂಭಿಸಬೇಕು. \v 10 ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ಅರ್ಪಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ವಾರಗಳ ಹಬ್ಬವನ್ನು ಆಚರಿಸಬೇಕು \v 11 ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು. \v 12 ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು. \s1 ಗುಡಾರಗಳ ಹಬ್ಬ \p \v 13 ನೀವು ಕಣದ ಕೆಲಸವನ್ನೂ ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಗುಡಾರಗಳ ಹಬ್ಬವನ್ನು ಆಚರಿಸಬೇಕು. \v 14 ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಂದೆತಾಯಿ ಇಲ್ಲದವರೂ ಹಾಗೂ ವಿಧವೆಯರೂ ಸಂಭ್ರಮದಿಂದಿರಬೇಕು. \v 15 ನಿಮ್ಮ ದೇವರಾದ ಯೆಹೋವ ದೇವರಿಗೆ ಏಳು ದಿವಸ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಎಲ್ಲಾ ಆದಾಯದಲ್ಲಿಯೂ, ನಿಮ್ಮ ಎಲ್ಲಾ ಕೆಲಸದಲ್ಲಿಯೂ ಆಶೀರ್ವದಿಸುವುದರಿಂದ ನೀವು ಪರಿಪೂರ್ಣ ಸಂತೋಷದಿಂದ ಇರಬೇಕು. \p \v 16 ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು. \v 17 ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನೂ ಕೊಡಬೇಕು. \s1 ನ್ಯಾಯಾಧಿಪತಿಗಳು \p \v 18 ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು. \v 19 ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ. \v 20 ನೀವು ಬದುಕಿ ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನ್ಯಾಯವನ್ನು ಅಂದರೆ ಕೇವಲ ನ್ಯಾಯವನ್ನೇ ಅನುಸರಿಸಬೇಕು. \s1 ಇತರ ದೇವರುಗಳ ಆರಾಧನೆ \p \v 21 ನಿಮ್ಮ ಯೆಹೋವ ದೇವರಿಗಾಗಿ ಕಟ್ಟುವ ಬಲಿಪೀಠದ ಸಮೀಪದಲ್ಲಿ ಮರದಿಂದ ಮಾಡಿದ ಯಾವುದೇ ಅಶೇರ ಸ್ತಂಭವನ್ನು ನಿಲ್ಲಿಸಬಾರದು. \v 22 ಯಾವ ವಿಗ್ರಹವನ್ನೂ ನಿಲ್ಲಿಸಬಾರದು. ಇದನ್ನು ನಿನ್ನ ಯೆಹೋವ ದೇವರು ದ್ವೇಷಿಸುತ್ತಾರೆ. \c 17 \p \v 1 ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ. \p \v 2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ ಅವರ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ನಡೆಸಲು ಸಾಧ್ಯ. \v 3 ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ, \v 4 ಆ ಸಂಗತಿಯನ್ನು ನೀವು ಕೇಳಿದಾಗ ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ಅಸಹ್ಯಕರವಾದ ಕಾರ್ಯವು ನಡೆದದ್ದು ಸತ್ಯವೆಂದು ತಿಳಿದುಬಂದರೆ, \v 5 ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು. \v 6 ಒಬ್ಬನ ಸಾಕ್ಷಿಯ ಮಾತಿನಿಂದ ಮಾತ್ರ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಸಾಕ್ಷಿಗಳು ಇಲ್ಲವೆ ಮೂವರು ಸಾಕ್ಷಿಗಳು ಬೇಕು. \v 7 ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. \s1 ನ್ಯಾಯಾಲಯಗಳು \p \v 8 ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ. \v 9 ನೀವು ಯಾಜಕರಾದ ಲೇವಿಯರ ಬಳಿಗೂ, ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು. ಅವರು ನಿಮಗೆ ಆ ತೀರ್ಪನ್ನು ತಿಳಿಸುವರು. \v 10 ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು. \v 11 ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು. \v 12 ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು. \v 13 ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಹಾಗೆ ಮಾಡಲಾರರು. \s1 ಅರಸನ ಪಾತ್ರ \p \v 14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು. \v 15 ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವವನನ್ನು ನಿಮಗೆ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಇಸ್ರಾಯೇಲ್ ಸಹೋದರರಲ್ಲಿಂದ ಒಬ್ಬನನ್ನು ನಿಮ್ಮ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಸಹೋದರನಲ್ಲದ ಅನ್ಯದೇಶದವನನ್ನು ನಿಮ್ಮ ಮೇಲೆ ನೇಮಿಸಿಕೊಳ್ಳಬಾರದು. \v 16 ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ. \v 17 ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು. \p \v 18 ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು. \v 19 ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು. \v 20 ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು. \c 18 \s1 ಯಾಜಕರಿಗೆ ಕಾಣಿಕೆಗಳು \p \v 1 ಯಾಜಕರಾದ ಲೇವಿಯರಿಗೂ, ಆ ಎಲ್ಲಾ ಲೇವಿಯ ಗೋತ್ರಕ್ಕೂ, ಇಸ್ರಾಯೇಲಿನ ಸಂಗಡ ಪಾಲೂ ಸೊತ್ತೂ ಇರಬಾರದು. ಅವರು ಯೆಹೋವ ದೇವರಿಗೆ ಸಮರ್ಪಿಸಿದ ದಹನಬಲಿಯ ಕಾಣಿಕೆಗಳ ಮೇಲೆ ಆಧಾರಮಾಡಿಕೊಂಡು ಜೀವಿಸಬೇಕು. ಅದು ಅವರ ಬಾಧ್ಯತೆಯಾಗಿದೆ. \v 2 ಲೇವಿಯರಿಗೆ ಅವರ ಸಹೋದರರ ಮಧ್ಯದಲ್ಲಿ ಸೊತ್ತಿರಬಾರದು. ಯೆಹೋವ ದೇವರು ಅವರಿಗೆ ಹೇಳಿದ ಹಾಗೆ ದೇವರೇ ಅವರ ಸೊತ್ತು. \p \v 3 ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು. \v 4 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ಪ್ರಥಮ ಫಲವನ್ನೂ, ನಿಮ್ಮ ಕುರಿಗಳ ಉಣ್ಣೆಯಲ್ಲಿ ಪ್ರಥಮವಾದದ್ದನ್ನೂ ಅವರಿಗೆ ಕೊಡಬೇಕು. \v 5 ಏಕೆಂದರೆ ಅವರೂ, ಅವರ ಪುತ್ರರೂ ನಿತ್ಯವಾಗಿ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡುತ್ತಾ ನಿಂತಿರುವ ಹಾಗೆ ಅವರನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಗೋತ್ರಗಳೊಳಗಿಂದ ಆಯ್ದುಕೊಂಡಿದ್ದಾರೆ. \p \v 6 ಒಬ್ಬ ಲೇವಿಯು ಸಮಸ್ತ ಇಸ್ರಾಯೇಲಿನಲ್ಲಿರುವ ಯಾವುದೇ ಊರಿನಲ್ಲಿ ಇಳಿದುಕೊಂಡಿರುವ ಸ್ಥಳದಿಂದ ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಬರಬಹುದು. \v 7 ಅಲ್ಲಿ ಯೆಹೋವ ದೇವರ ಮುಂದೆ ನಿಂತುಕೊಳ್ಳುವ ಇತರ ಲೇವಿಯರಂತೆ ಅವನೂ ತನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡಬಹುದು. \v 8 ಅವನು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದರಲ್ಲಿ ಹಣದ ಪಾಲನ್ನು ಸ್ವೀಕರಿಸಿದ್ದರೂ, ಮಿಕ್ಕ ಲೇವಿಯರೊಡನೆ ಸಮಾನ ಪಾಲು ಹೊಂದಬೇಕು. \s1 ಅಸಹ್ಯವಾದ ಆಚಾರಗಳು \p \v 9 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಆ ಜನಾಂಗಗಳು ಮಾಡುವ ಅಸಹ್ಯ ಕಾರ್ಯಗಳನ್ನು ನೀವು ಕಲಿಯಬಾರದು. \v 10 ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ, \v 11 ಗಾರುಡಿಗಾರನೂ, ಯಕ್ಷಿಣಿಗಾರನೂ, ಮಂತ್ರಗಾರನೂ, ಸತ್ತವರ ಹತ್ತಿರ ವಿಚಾರಿಸುವವನೂ ನಿಮ್ಮಲ್ಲಿ ಇರಬಾರದು. \v 12 ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ. \v 13 ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿರ್ದೋಷಿಯಾಗಿರಬೇಕು. \s1 ಆ ಪ್ರವಾದಿ \p \v 14 ನೀವು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಶಕುನ ನೋಡುವವರ ಹಾಗೂ ಕಣಿಹೇಳುವವರ ಮಾತನ್ನು ಕೇಳುತ್ತಿದ್ದರು. ನಿಮ್ಮನ್ನಾದರೋ ನಿಮ್ಮ ದೇವರಾದ ಯೆಹೋವ ದೇವರು ಹಾಗೆ ಮಾಡಲು ಅನುಮತಿಸಲಿಲ್ಲ. \v 15 ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು. \v 16 ನೀವು ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಂದ ಬೇಡಿಕೊಂಡ ಪ್ರಕಾರ ಆಗುವುದು. ಆಗ ನೀವು, “ನಾವು ಸಾಯದಂತೆ ಇನ್ನು ಮೇಲೆ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ನಾವು ಕೇಳುವುದಿಲ್ಲ, ಈ ದೊಡ್ಡ ಬೆಂಕಿಯನ್ನೂ ನೋಡುವುದಿಲ್ಲ,” ಎಂದು ಹೇಳಿದಿರಿ. \p \v 17 ಆಗ ಯೆಹೋವ ದೇವರು ನನಗೆ, “ಅವರು ಹೇಳಿದ್ದು ಸರಿಯಾಗಿದೆ. \v 18 ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು. \v 19 ಆ ಪ್ರವಾದಿ ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು. \v 20 ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.” \p \v 21 ಇದಲ್ಲದೆ ನೀವು, “ಇದು ಯೆಹೋವ ದೇವರು ಹೇಳಿದ ವಾಕ್ಯವು ಅಲ್ಲ ಎಂದು ನಾವು ತಿಳಿದುಕೊಳ್ಳುವುದು ಹೇಗೆ?” ಎಂದು ನೀವು ನಿಮ್ಮ ಹೃದಯದಲ್ಲಿ ಆಲೋಚಿಸಬಹುದು. \v 22 ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು. \c 19 \s1 ಆಶ್ರಯ ಪಟ್ಟಣಗಳು \p \v 1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ. \v 2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ನಿಮ್ಮ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿಮಗಾಗಿ ಪ್ರತ್ಯೇಕಿಸಬೇಕು. \v 3 ಕೈತಪ್ಪಿ ಕೊಲೆ ಮಾಡುವವರೆಲ್ಲರೂ ಅಲ್ಲಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದ ಮೇರೆಯನ್ನು ಮೂರು ಭಾಗಮಾಡಿ, ಅವುಗಳ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು. \p \v 4 ಬದುಕಿ ಉಳಿಯಲು ಅಲ್ಲಿ ಓಡಿಹೋಗತಕ್ಕ ಕೊಲೆಪಾತಕನ ವಿವರವೇನೆಂದರೆ, ತಿಳಿಯದೆ ಇಲ್ಲವೆ ಪೂರ್ವ ಕಲ್ಪಿತ ಹಗೆ ಮಾಡದೆ, ತನ್ನ ನೆರೆಯವನನ್ನು ಹೊಡೆದವನೇ. \v 5 ಉದಾಹರಣೆಗೆ: ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿ ಕಾವಿನಿಂದ ಜಾರಿ, ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು. \v 6 ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು. \v 7 ಈ ಕಾರಣದಿಂದಲೇ ನೀವು ಆ ಮೂರು ಆಶ್ರಯಪಟ್ಟಣಗಳನ್ನು ಗೊತ್ತು ಮಾಡಬೇಕೆಂದು ಆಜ್ಞಾಪಿಸಿದ್ದೇನೆ. \p \v 8 ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮ ಮೇರೆಯನ್ನು ವಿಸ್ತಾರಮಾಡಿ, ನಿಮ್ಮ ಪಿತೃಗಳಿಗೆ ಕೊಡುವುದಾಗಿ ಹೇಳಿದ ದೇಶವನ್ನೆಲ್ಲಾ ನಿಮಗೆ ಕೊಡುವರು. \v 9 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಕಾಪಾಡಿ ಕೈಗೊಳ್ಳಬೇಕು. ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ಯಾವಾಗಲೂ ನಡೆದರೆ ನೀವು ಈ ಮೂರು ಪಟ್ಟಣಗಳ ಜೊತೆಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು. \v 10 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು. \p \v 11 ಆದರೆ ಒಬ್ಬನು ತನ್ನ ನೆರೆಯವನನ್ನು ದ್ವೇಷಿಸಿ ಹೊಂಚು ಹಾಕಿ, ಅವನಿಗೆ ವಿರೋಧವಾಗಿ ಎದ್ದು, ಅವನನ್ನು ಸಾಯುವವರೆಗೂ ಹೊಡೆದು ಕೊಂದುಹಾಕಿ ಈ ಪಟ್ಟಣಗಳಿಗೆ ಓಡಿಹೋದರೆ, \v 12 ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು. \v 13 ನೀವು ಅವನ ಮೇಲೆ ದಯೆ ತೋರಬಾರದು. ನಿಮಗೆ ಒಳ್ಳೆಯದಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲರಲ್ಲಿ ಉಳಿಯದಂತೆ ತೆಗೆದುಹಾಕಬೇಕು. \p \v 14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದೊಳಗೆ ನೀವು ಹೊಂದುವ ಸೊತ್ತಿನಲ್ಲಿ ಹಿರಿಯರು ಇಟ್ಟಂಥ ನಿಮ್ಮ ನೆರೆಯವನ ಮೇರೆಯನ್ನು ಸರಿಸಬಾರದು. \s1 ಸಾಕ್ಷಿಗಳು \p \v 15 ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು. \p \v 16 ಸುಳ್ಳುಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವುದಕ್ಕೆ ಎದ್ದರೆ, \v 17 ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಯೆಹೋವ ದೇವರ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ಹಾಗು ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು. \v 18 ನ್ಯಾಯಾಧಿಪತಿಗಳು ಕೂಲಂಕಷವಾಗಿ ವಿಚಾರಣೆ ಮಾಡಬೇಕು. ಆಗ ಇಗೋ, ಆ ಸಾಕ್ಷಿಯು ಸುಳ್ಳುಸಾಕ್ಷಿಯಾಗಿದ್ದರೆ, ಅಂದರೆ ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ, \v 19 ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. \v 20 ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು. \v 21 ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು. \c 20 \s1 ಯುದ್ಧ ಕ್ರಮ \p \v 1 ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ. \v 2 ನೀವು ಯುದ್ಧಕ್ಕೆ ಸಮೀಪ ಬಂದಾಗ, ಯಾಜಕನು ಹತ್ತಿರ ಬಂದು, ಯೋಧರ ಸಂಗಡ ಮಾತನಾಡಿ ಅವರಿಗೆ, \v 3 “ಇಸ್ರಾಯೇಲರೇ ಕೇಳಿರಿ, ನೀವು ಈ ಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸಮೀಪ ಬಂದಿದ್ದೀರಿ. ನಿಮ್ಮ ಹೃದಯಗಳು ಕುಗ್ಗಬಾರದು. ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂ ಬೇಡಿರಿ. \v 4 ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು. \p \v 5 ಮತ್ತು ಅಧಿಕಾರಿಗಳು ಅವರಿಗೆ ಹೀಗೆ ಹೇಳಬೇಕು, “ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿ, ಗೃಹ ಪ್ರತಿಷ್ಠೆ ಇನ್ನು ಮಾಡದಿದ್ದರೆ, ಅವನು ತನ್ನ ಮನೆಗೆ ಹೋಗಲಿ. ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಮನೆಯನ್ನು ಸೇರಿಕೊಂಡಾನು. \v 6 ದ್ರಾಕ್ಷಿತೋಟವನ್ನು ನೆಟ್ಟು ಅದರ ಫಲವನ್ನು ತಿನ್ನದೇ ಇರುವ ಮನುಷ್ಯನು, ತನ್ನ ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಫಲ ತಿಂದಾನು. \v 7 ಯಾವನಾದರೂ ಮದುವೆ ಮಾಡಿಕೊಂಡಿದ್ದು, ತನ್ನ ಹೆಂಡತಿಯೊಂದಿಗೆ ಸಂಸಾರ ಮಾಡಿರದಿದ್ದರೆ, ಅಂಥವನು ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ, ಬೇರೊಬ್ಬನು ಆಕೆಯನ್ನು ಸೇರಿಸಿಕೊಂಡಾನು.” \v 8 ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು. \v 9 ಅಧಿಕಾರಿಗಳು ಯೋಧರ ಸಂಗಡ ಮಾತನಾಡಿ ಮುಗಿಸಿದಾಗ, ಅವರು ಅದರ ಮೇಲೆ ಸೇನಾಧಿಪತಿಗಳನ್ನು ನೇಮಿಸಬೇಕು. \p \v 10 ನೀವು ಯುದ್ಧಮಾಡುವುದಕ್ಕಾಗಿ ಒಂದು ಪಟ್ಟಣದ ಹತ್ತಿರ ಬಂದಾಗ, ಮೊದಲು ಅದನ್ನು ಸಮಾಧಾನಕ್ಕಾಗಿ ಕರೆಯಬೇಕು. \v 11 ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು. \v 12 ಅವರು ನಿಮ್ಮ ಮಾತಿಗೆ ಸಮ್ಮತಿಸದೆ ನಿಮ್ಮ ಸಂಗಡ ಯುದ್ಧಮಾಡಿದರೆ, ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು. \v 13 ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಕೊಟ್ಟಾಗ, ಅದರ ಗಂಡಸರೆಲ್ಲರನ್ನು ಸಂಹಾರಮಾಡಬೇಕು. \v 14 ಆದರೆ ಸ್ತ್ರೀಯರನ್ನೂ ಚಿಕ್ಕವರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲಾ ಆಸ್ತಿಯನ್ನೂ ನಿಮಗಾಗಿ ತಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವಂಥ ನಿಮ್ಮ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು. \v 15 ಹೀಗೆ ಈ ದೇಶದ ಜನಾಂಗಗಳಿಗೆ ಸೇರದೆ ನಿಮಗೆ ದೂರವಾಗಿರುವ ಜನಾಂಗಗಳ ಪಟ್ಟಣಗಳಿಗೆಲ್ಲಾ ಹಾಗೆಯೇ ಮಾಡಬೇಕು. \p \v 16 ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಈ ಜನರ ಪಟ್ಟಣಗಳಲ್ಲಿ ಉಸಿರಾಡುವ ಯಾವುದನ್ನಾದರೂ ಉಳಿಸಬಾರದು. \v 17 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಹಿತ್ತಿಯರನ್ನೂ, ಅಮೋರಿಯರನ್ನೂ, ಕಾನಾನ್ಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಪೂರ್ಣವಾಗಿ ದಂಡಿಸಬೇಕು. \v 18 ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಆರಾಧಿಸುವಾಗ ಮಾಡಿದ ಎಲ್ಲಾ ಅಸಹ್ಯಕರವಾದ ಆಚಾರಗಳನ್ನು ನಿಮಗೆ ಕಲಿಸಿಕೊಡಬಹುದು ಮತ್ತು ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ದ್ರೋಹಿಗಳಾಗಬಹುದು. \p \v 19 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದಕ್ಕೆ ಬಹು ದಿವಸ ಮುತ್ತಿಗೆ ಹಾಕಬೇಕಾಗಬಹುದು. ಆಗ ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು. ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧ ಮಾಡಬಹುದೇ? \v 20 ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಕಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. \c 21 \s1 ಹಂತಕನು ಪತ್ತೆಯಿಲ್ಲದಾಗ ಮಾಡುವ ಕಾರ್ಯ \p \v 1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ, \v 2 ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ, ಆ ಹತನಾದವನ ಸುತ್ತಲಿರುವ ಪಟ್ಟಣಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು. \v 3 ಹತನಾದವನಿಗೆ ಸಮೀಪವಾದ ಊರು ಯಾವುದೋ, ಆ ಊರಿನ ಹಿರಿಯರು ಇನ್ನೂ ಕೆಲಸ ಮಾಡದಂಥ, ನೊಗ ಎಳೆಯದಂಥ, ಒಂದು ಕಡಸನ್ನು ತೆಗೆದುಕೊಳ್ಳಬೇಕು. \v 4 ಆಮೇಲೆ ಆ ಊರಿನ ಹಿರಿಯರು ಆ ಕಡಸನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜ ಹಾಕದಂಥ ಸ್ಥಳಕ್ಕೆ ತೆಗೆದುಕೊಂಡುಹೋಗಿ, ಅಲ್ಲಿ ಹಳ್ಳದಲ್ಲಿ ಕಡಸನ್ನು ವಧಿಸಬೇಕು. \v 5 ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ. \v 6 ಆಮೇಲೆ ಹತನಾದವನ ಶವಕ್ಕೆ ಸಮೀಪವಾಗಿರುವ ಆ ಊರಿನ ಹಿರಿಯರೆಲ್ಲರೂ ತಗ್ಗಿನಲ್ಲಿ ವಧಿಸಿದ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು. \v 7 ಅನಂತರ, “ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ. ನಮ್ಮ ಕಣ್ಣುಗಳು ನಡೆದದ್ದನ್ನು ನೋಡಲಿಲ್ಲ. \v 8 ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು. \v 9 ಈ ಪ್ರಕಾರ ನೀವು ಯೆಹೋವ ದೇವರ ಮುಂದೆ ಸರಿಯಾದದ್ದನ್ನು ಮಾಡಿದರೆ, ರಕ್ತಾಪರಾಧವನ್ನು ನಿಮ್ಮಲ್ಲಿಂದ ತೆಗೆದುಹಾಕುವಿರಿ. \s1 ಸೆರೆಯವಳಾದ ಸ್ತ್ರೀಯನ್ನು ಮದುವೆಮಾಡಿಕೊಳ್ಳುವ ವಿಷಯ \p \v 10 ನೀವು ಶತ್ರುಗಳ ವಿರುದ್ಧ ಯುದ್ಧಮಾಡಿ, ನಿಮ್ಮ ದೇವರಾದ ಯೆಹೋವ ದೇವರಿಂದ, ನೀವು ಅವರನ್ನು ಸೋಲಿಸಿದರೆ, \v 11 ಸೆರೆ ಹಿಡಿದವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರೂ ಕಂಡು ಇಷ್ಟಪಟ್ಟರೆ, ಅವಳನ್ನು ಮದುವೆ ಮಾಡಿಕೊಳ್ಳಬಹುದು. \v 12 ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಂಡು, \v 13 ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿ ತಂದೆಯರನ್ನು ಸ್ಮರಿಸಿ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು. \v 14 ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ, ಅವನು ಅವಳನ್ನು ಅವಳು ಬಯಸಿದ ಸ್ಥಳಕ್ಕೆ ಕಳುಹಿಸಿಬಿಡಬೇಕು. ಅವಳನ್ನು ಅವಮಾನಪಡಿಸಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡೆಸಲೂಬಾರದು. \s1 ಚೊಚ್ಚಲ ಮಗನ ಹಕ್ಕು \p \v 15 ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದು, ಒಬ್ಬಳನ್ನು ಪ್ರೀತಿಸುತ್ತಲೂ, ಮತ್ತೊಬ್ಬಳನ್ನು ದ್ವೇಷಿಸುತ್ತಲೂ ಇದ್ದರೆ, ಅವರಿಬ್ಬರೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ, ಚೊಚ್ಚಲು ಮಗನು ತಿರಸ್ಕಾರ ಹೊಂದುತ್ತಿರುವ ಹೆಂಡತಿಯಲ್ಲಿಯೇ ಹುಟ್ಟಿದ್ದರೆ, \v 16 ಅವನು ತನ್ನ ಪುತ್ರರಿಗೆ ತನ್ನ ಆಸ್ತಿಯನ್ನು ಹಂಚಿ ಕೊಡುವಾಗ, ತಾನು ಪ್ರೀತಿಮಾಡದ ಹೆಂಡತಿಯ ಚೊಚ್ಚಲ ಮಗನಿಗೆ ಬದಲಾಗಿ ಅವನು ಪ್ರೀತಿಸುವವಳ ಮಗನನ್ನು ಹಿರಿಯನೆಂದು ಮಾಡಕೂಡದು. \v 17 ಅವನು ಪ್ರೀತಿಮಾಡದವಳ ಮಗನಿಗೆ ತನ್ನ ಬಳಿಯಲ್ಲಿರುವ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು, ಅವನೇ ಜೇಷ್ಠ ಪುತ್ರನೆಂದು ಒಪ್ಪಿಕೊಳ್ಳಬೇಕು. ಏಕೆಂದರೆ ಅವನೇ ಅವನ ಪ್ರಥಮ ಫಲ. ಅವನಿಗೆ ಜೇಷ್ಠ ಪುತ್ರನ ಹಕ್ಕು ಉಂಟು. \s1 ದುಷ್ಟ ಪುತ್ರನ ಶಿಕ್ಷಾಕ್ರಮ \p \v 18 ಒಬ್ಬ ಮನುಷ್ಯನಿಗೆ ಮೊಂಡನೂ, ತಿರುಗಿ ಬೀಳುವವನೂ ಆದ ಮಗನಿದ್ದರೆ, ಅವನು ತಂದೆತಾಯಿಯ ಮಾತನ್ನೂ ಕೇಳದೆ, ಅವರು ಅವನನ್ನು ಶಿಸ್ತುಪಡಿಸಲು ಹೇಳುವ ಮಾತನ್ನೂ ಕೇಳದೆ ಹೋದರೆ, \v 19 ಅವನ ತಂದೆತಾಯಿಗಳು ಅವನನ್ನು ಹಿಡಿದು, ಪಟ್ಟಣದ ಹಿರಿಯರ ಬಳಿಗೂ ಅವನ ಊರಿನ ಬಾಗಿಲಿನ ಬಳಿಗೂ ತಂದು, \v 20 ಪಟ್ಟಣದ ಹಿರಿಯರಿಗೆ, “ಈ ನಮ್ಮ ಮಗನು ಮೊಂಡನೂ, ತಿರುಗಿ ಬೀಳುವವನೂ, ನಮ್ಮ ಮಾತು ಕೇಳದವನೂ, ಹೊಟ್ಟೆ ಬಾಕನೂ, ಕುಡುಕನೂ ಆಗಿದ್ದಾನೆ,” ಎಂದು ಹೇಳಬೇಕು. \v 21 ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು. \s1 ವಿವಿಧ ಶಾಸನಗಳು \p \v 22 ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ, \v 23 ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು. \c 22 \p \v 1 ಸ್ವದೇಶದವನ ಎತ್ತಾಗಲಿ, ಕುರಿಯಾಗಲಿ ದಾರಿತಪ್ಪಿ ಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು. ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು. \v 2 ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆ ಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿ ಕೊಡಬೇಕು. \v 3 ಅವನ ಕತ್ತೆಯಾಗಲಿ, ಅವನ ವಸ್ತ್ರವಾಗಲಿ, ನಿನ್ನ ಸಹೋದರನು ಕಳೆದುಕೊಂಡ ಯಾವ ವಸ್ತುಗಳೇ ಆಗಲಿ ನೀನು ಕಂಡುಕೊಂಡರೆ, ಹಾಗೆಯೇ ಮಾಡಬೇಕು. ನೀನು ಕಾಣದವರಂತೆ ಇರಬಾರದು. \p \v 4 ನಿನ್ನ ಸಹೋದರನ ಕತ್ತೆಯಾಗಲಿ, ಎತ್ತಾಗಲಿ, ಮಾರ್ಗದಲ್ಲಿ ಬಿದ್ದಿರುವುದನ್ನು ನೋಡಿದರೆ ಅಲಕ್ಷ್ಯ ಮಾಡಬೇಡ. ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು. \p \v 5 ಸ್ತ್ರೀಯು ಪುರುಷನ ವಸ್ತ್ರ ಉಟ್ಟುಕೊಳ್ಳಬಾರದು, ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು. ಏಕೆಂದರೆ ಹೀಗೆ ಮಾಡುವವರೆಲ್ಲ ಯೆಹೋವ ದೇವರಿಗೆ ಅಸಹ್ಯ. \p \v 6 ನೀನು ದಾರಿಯಲ್ಲಿ ಯಾವುದಾದರೊಂದು ಗಿಡದಲ್ಲಾಗಲಿ, ನೆಲದ ಮೇಲಾಗಲಿ, ನಿನಗೆ ಮರಿಗಳುಳ್ಳ ಇಲ್ಲವೆ ಮೊಟ್ಟೆಗಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ, ಮರಿಗಳ ಮೇಲೆಯಾಗಲಿ, ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತುಕೊಂಡಿದ್ದರೆ, ಮರಿಗಳ ಸಂಗಡ ತಾಯಿಯನ್ನು ತೆಗೆದುಕೊಳ್ಳಬಾರದು. \v 7 ನಿನಗೆ ಒಳ್ಳೆಯದಾಗುವ ಹಾಗೆಯೂ ಬಹುಕಾಲ ಬಾಳುವ ಹಾಗೆಯೂ ಹೇಗಾದರೂ ತಾಯಿಯನ್ನು ಕಳುಹಿಸಿಬಿಟ್ಟು, ಮರಿಗಳನ್ನು ತೆಗೆದುಕೊಳ್ಳಬಹುದು. \p \v 8 ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು. \p \v 9 ನಿನ್ನ ದ್ರಾಕ್ಷಿತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜವೂ, ಬಿತ್ತಿದ ಬೀಜದ ಪೈರೂ, ದ್ರಾಕ್ಷಿತೋಟದ ಹುಟ್ಟುವಳಿಯೂ ಅಶುದ್ಧವಾಗುವುದು. \p \v 10 ಎತ್ತನ್ನೂ, ಕತ್ತೆಯನ್ನೂ ಜೊತೆ ಮಾಡಿ, ನೇಗಿಲಿಗೆ ಕಟ್ಟಬಾರದು. \p \v 11 ನಾರು ಮತ್ತು ಉಣ್ಣೆ ಎರಡೂ ಕೂಡಿರುವ ಬಟ್ಟೆಯನ್ನೂ ಧರಿಸಬಾರದು. \p \v 12 ನೀನು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು. \s1 ವಿವಾಹ ಬಂಧನಗಳನ್ನು ಮುರಿಯುವ ವಿಷಯ \p \v 13 ಒಬ್ಬನು ತಾನು ಮದುವೆಮಾಡಿಕೊಂಡ ಹೆಂಡತಿಯನ್ನು ದ್ವೇಷಿಸಿ, \v 14 ಅವಳ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಹೇಳಿ, “ನಾನು ಇವಳನ್ನು ಮದುವೆ ಮಾಡಿಕೊಂಡೆ, ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು,” ಎಂದು ಹೇಳಿ ಅವಳ ಮೇಲೆ ಆಪಾದನೆ ತರಬಹುದು. \v 15 ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕ ಇಲ್ಲದವಳು, ಎಂಬುದಕ್ಕೆ ಆಧಾರವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು. \v 16 ಆಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇನೆಂದರೆ, “ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿಯಾಗಿ ಕೊಟ್ಟಿದ್ದೇನೆ, ಅವನು ಅವಳನ್ನು ದ್ವೇಷಿಸಿ, \v 17 ಅವನು, ‘ನಿನ್ನ ಮಗಳು ಕನ್ನಿಕೆಯಲ್ಲವೆಂದು ಕಂಡೆನೆಂಬುದಾಗಿ, ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟಿದ್ದಾನೆ.’ ಆದರೂ ನನ್ನ ಮಗಳ ಕನ್ಯಾಲಕ್ಷಣಕ್ಕೆ ಇದೇ ಪ್ರಮಾಣ,” ಎಂದು ಹೇಳಿ, ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು. \v 18 ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಬಂದು ಅವನನ್ನು ಶಿಕ್ಷಿಸಬೇಕು. \v 19 ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ನಿಕೆಯ ಹೆಸರನ್ನು ಕೆಡಿಸಿದ್ದರಿಂದ, ಅವನಿಗೆ ನೂರು ಬೆಳ್ಳಿ ಶೆಕೆಲ್‌ಗಳ\f + \fr 22:19 \fr*\ft ಸುಮಾರು 1.2 ಕಿಲೋಗ್ರಾಂ\ft*\f* ದಂಡವನ್ನು ವಿಧಿಸಿ, ಅದನ್ನು ಆ ಹುಡುಗಿಯ ತಂದೆಗೆ ಕೊಡಬೇಕು. ಇದಲ್ಲದೆ ಅವಳು ಅವನಿಗೆ ಹೆಂಡತಿಯಾಗಬೇಕು, ಅವನು ಬದುಕಿರುವವರೆಗೆ ಅವಳನ್ನು ಪರಿತ್ಯಾಗಮಾಡಬಾರದು. \p \v 20 ಆದರೆ ಆ ಮಾತು ಸತ್ಯವಾಗಿದ್ದರೆ, ಆ ಹುಡುಗಿಯಲ್ಲಿ ಕನ್ಯಾಲಕ್ಷಣ ಕಾಣದೆ ಇದ್ದರೆ, \v 21 ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. \p \v 22 ಒಬ್ಬ ಮನುಷ್ಯನು ಪರನ ಹೆಂಡತಿಯೊಡನೆ ಮಲಗಿಕೊಂಡವನಾಗಿ ಸಿಕ್ಕಿಬಿದ್ದರೆ, ಆ ಸ್ತ್ರೀಯ ಸಂಗಡ ಮಲಗಿಕೊಂಡ ಮನುಷ್ಯನೂ ಆ ಸ್ತ್ರೀಯೂ ಇಬ್ಬರೂ ಸಾಯಬೇಕು. ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು. \p \v 23 ಕನ್ನಿಕೆಯಾದ ಒಬ್ಬ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯ ಮಾಡಿರಲಾಗಿ, ಮತ್ತೊಬ್ಬ ಮನುಷ್ಯನು ಆ ಪಟ್ಟಣದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ, \v 24 ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. \p \v 25 ಆದರೆ ಆ ಮನುಷ್ಯನು ನಿಶ್ಚಯಮಾಡಿದ ಹುಡುಗಿಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ, ಅವಳ ಸಂಗಡ ಮಲಗಿದರೆ, ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬಾರದು. \v 26 ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ. \v 27 ಏಕೆಂದರೆ ಅವನು ಹೊಲದಲ್ಲಿ ಅವಳನ್ನು ಕಂಡನು, ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು. ಆದರೆ ರಕ್ಷಿಸುವವನು ಅವಳಿಗೆ ಯಾರೂ ಇರಲಿಲ್ಲ. \p \v 28 ಒಬ್ಬ ಮನುಷ್ಯನು ನಿಶ್ಚಯ ಮಾಡದಿರುವ ಕನ್ಯೆಯನ್ನು ಕಂಡು, ಅವಳನ್ನು ಹಿಡಿದು, ಅವಳ ಸಂಗಡ ಮಲಗಿ ಸಿಕ್ಕಿಬಿದ್ದರೆ, \v 29 ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು\f + \fr 22:29 \fr*\ft ಸುಮಾರು 575 ಗ್ರಾಂ\ft*\f* ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು, ಏಕೆಂದರೆ ಅವನು ಅವಳನ್ನು ಕೆಡಿಸಿದ್ದರಿಂದ, ಬದುಕುವ ದಿವಸಗಳೆಲ್ಲಾ ಅವಳನ್ನು ಪರಿತ್ಯಾಗಮಾಡಬಾರದು. \p \v 30 ಯಾರೂ ತನ್ನ ತಂದೆಯ ಹೆಂಡತಿಯನ್ನು ಮದುವೆ ಮಾಡಿಕೊಳ್ಳಬಾರದು. ತನ್ನ ತಂದೆಯ ಹಾಸಿಗೆಯನ್ನು ಅಗೌರವಿಸಬಾರದು. \c 23 \s1 ಸಭೆಯಿಂದ ಬಹಿಷ್ಕಾರ ಮಾಡುವುದರ ಕುರಿತು \p \v 1 ಬೀಜ ಹೊಡಿಸಿಕೊಂಡವರು ಅಥವಾ ಜನನ ಇಂದ್ರಿಯ ಕತ್ತರಿಸಿಕೊಂಡವರು ಯೆಹೋವ ದೇವರ ಸಭೆಗೆ ಸೇರಬಾರದು. \p \v 2 ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲಾಂತರದವರೆಗೂ ಯೆಹೋವ ದೇವರ ಸಭೆಗೆ ಸೇರಬಾರದು. \p \v 3 ಅಮ್ಮೋನಿಯರು ಇಲ್ಲವೆ ಮೋವಾಬ್ಯರು ಯೆಹೋವ ದೇವರ ಸಭೆಗೆ ಸೇರಬಾರದು; ಹತ್ತನೆಯ ತಲಾಂತರವರೆಗೆ ಅವರು ಯೆಹೋವ ದೇವರ ಸಭೆಯಲ್ಲಿ ಸೇರಬಾರದು. \v 4 ಏಕೆಂದರೆ ನೀವು ಈಜಿಪ್ಟನ್ನು ಬಿಟ್ಟು ಬರುವಾಗ, ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವುದಕ್ಕೆ ಎದುರುಗೊಳ್ಳಲಿಲ್ಲ. ನಿಮ್ಮನ್ನು ಶಪಿಸುವುದಕ್ಕೆ ಮೆಸೊಪೊತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ಬಿಳಾಮನಿಗೆ ಕೂಲಿ ಕೊಟ್ಟು ನಿಮಗೆ ವಿರೋಧವಾಗಿ ಕರೆಸಿದರು. \v 5 ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು. \v 6 ನೀವು ಇರುವವರೆಗೆ ಎಂದಿಗೂ ಅವರ ಏಳಿಗೆಯನ್ನು, ಕ್ಷೇಮವನ್ನು ಬಯಸಬಾರದು. \p \v 7 ಎದೋಮ್ಯನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನು ನಿಮ್ಮ ಸಹೋದರನು; ಈಜಿಪ್ಟಿನವನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನ ದೇಶದಲ್ಲಿ ನೀವು ಪರವಾಸಿಯಾಗಿದ್ದಿರಿ. \v 8 ಅವರಿಗೆ ಹುಟ್ಟುವ ಮಕ್ಕಳಲ್ಲಿ ಮೂರನೆಯ ತಲಾಂತರದವರು ಯೆಹೋವ ದೇವರ ಸಭೆಯಲ್ಲಿ ಸೇರಬಹುದು. \s1 ಯುದ್ಧಕಾಲದಲ್ಲಿ ಪಾಳೆಯವು ನಿರ್ಮಲವಾಗಿ ಇರಬೇಕು \p \v 9 ನೀವು ಶತ್ರುಗಳಿಗೆ ವಿರೋಧವಾಗಿ ಸೈನ್ಯವಾಗಿ ಹೊರಟರೆ, ಪಾಳೆಯದಲ್ಲಿ ಯಾವ ಅಶುದ್ಧ ಕಾರ್ಯಗಳು ಇಲ್ಲದಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. \v 10 ರಾತ್ರಿಯಲ್ಲಿ ವೀರ್ಯ ವಿಸರ್ಜನೆಯ ದೆಸೆಯಿಂದ ಯಾವನಾದರು ಅಶುದ್ಧನಾದವನು ನಿಮ್ಮಲ್ಲಿದ್ದರೆ, ಅವನು ಪಾಳೆಯದ ಒಳಗೆ ಇರದೆ ಹೊರಗೆ ಇರಬೇಕು. \v 11 ಸಂಜೆ ಆಗುತ್ತಿರುವಾಗ ಅವನು ಸ್ನಾನಮಾಡಿ, ಸೂರ್ಯನು ಮುಳುಗಿದಾಗ ಪಾಳೆಯದ ಒಳಗೆ ತಿರುಗಿಬರಬಹುದು. \p \v 12 ಇದಲ್ಲದೆ ನೀವು ಮಲವಿಸರ್ಜನೆಗೆ ಹೋಗಲು ಪಾಳೆಯದ ಹೊರಗೆ ಸ್ಥಳವಿರಬೇಕು. \v 13 ನಿಮ್ಮ ಆಯುಧಗಳ ಜೊತೆಯಲ್ಲಿ ಕಬ್ಬಿಣದ ಸಲಕೆ ಇರಬೇಕು. ನೀವು ಮಲವಿಸರ್ಜನೆ ಮಾಡಿದಾಗ, ಆ ಸಲಕೆಯಿಂದ ಅಗೆದು ಮುಚ್ಚಿಬಿಡಬೇಕು. \v 14 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು. \s1 ಇತರ ವಿಷಯಗಳು \p \v 15 ತನ್ನ ಯಜಮಾನನನ್ನು ಬಿಟ್ಟು, ನಿನ್ನ ಬಳಿಗೆ ತಪ್ಪಿಸಿಕೊಂಡು ಬಂದ ದಾಸನನ್ನು ಹಿಡಿದು ಯಜಮಾನನಿಗೆ ಒಪ್ಪಿಸಬಾರದು. \v 16 ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಒಳ್ಳೆಯದೆಂದು ತೋಚುತ್ತದೆಯೋ, ಅಲ್ಲಿಯೇ ವಾಸವಾಗಲಿ. ಅವನನ್ನು ನೀವು ಕುಗ್ಗಿಸಬಾರದು. \p \v 17 ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ಗುಡಿ ವೇಶ್ಯೆಯಾಗಬಾರದು. ಇಸ್ರಾಯೇಲರಲ್ಲಿ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು. \v 18 ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ. \p \v 19 ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವನ್ನಾಗಲಿ, ಬೇರೆ ಯಾವುದನ್ನಾಗಲಿ ಬಡ್ಡಿಗೆ ಕೊಡಬಾರದು. \v 20 ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸಹೋದರನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೆಲಸಗಳನ್ನು ಆಶೀರ್ವದಿಸುತ್ತಾರೆ. \p \v 21 ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ. \v 22 ಆದರೆ ನೀನು ಹರಕೆ ಮಾಡದಿದ್ದರೆ, ನೀನು ದೋಷಿಯಾಗುವುದಿಲ್ಲ. \v 23 ನಿನ್ನ ತುಟಿಗಳಿಂದ ಹೊರಟಿದ್ದನ್ನು ಮಾಡುವುದಕ್ಕೆ ತಪ್ಪಬೇಡ. ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಬಾಯಿಯಿಂದಲೇ ನೀನು ಹರಕೆ ಮಾಡಿದಿಯಲ್ಲವೇ. \p \v 24 ನಿನ್ನ ನೆರೆಯವನ ದ್ರಾಕ್ಷಿ ತೋಟಕ್ಕೆ ಬಂದರೆ, ನಿನ್ನ ಮನಸ್ಸು ತೃಪ್ತಿಯಾಗುವವರೆಗೆ ಹಣ್ಣುಗಳನ್ನು ತಿನ್ನಬಹುದು. ಆದರೆ ನಿನ್ನ ಚೀಲದಲ್ಲಿ ಹಾಕಿಕೊಳ್ಳಬಾರದು. \v 25 ನಿನ್ನ ನೆರೆಯವನ ಪೈರಿನ ಬಳಿಗೆ ಹಾದುಹೋಗುವಾಗ, ಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲು ಹಾಕಿ ಕೊಯ್ಯಬಾರದು. \c 24 \p \v 1 ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಅಸಂತೃಪ್ತನಾದರೆ, ವಿವಾಹ ವಿಚ್ಛೇದನ ಪತ್ರವನ್ನು ಬರೆದು, ಅವಳ ಕೈಯಲ್ಲಿ ಕೊಟ್ಟು, ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಟ್ಟಾಗ, \v 2 ಅವಳು ಅವನ ಮನೆಯನ್ನು ಬಿಟ್ಟುಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗಬಹುದು. \v 3 ಆ ಮತ್ತೊಬ್ಬ ಗಂಡನು ಅವಳನ್ನು ಹಗೆಮಾಡಿ, ವಿವಾಹ ವಿಚ್ಛೇದನ ಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು, ತನ್ನ ಮನೆಯಿಂದ ಕಳುಹಿಸಿಬಿಟ್ಟರೆ, ಇಲ್ಲವೆ ಆ ಎರಡನೆಯ ಗಂಡನು ಸತ್ತರೆ, \v 4 ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಹೆಂಡತಿಯಾಗಿ ಸ್ವೀಕರಿಸಬಾರದು. ಅದು ಯೆಹೋವ ದೇವರ ಮುಂದೆ ಅಸಹ್ಯವೇ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ದೋಷವುಂಟಾಗಲು ಅವಕಾಶ ಕೊಡಬಾರದು. \p \v 5 ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ. \p \v 6 ಬೀಸುವ ಕಲ್ಲಿನಲ್ಲಿ ಅಡಿಗಲ್ಲನ್ನಾದರೂ, ಮೇಲಿನ ಕಲ್ಲನ್ನಾದರೂ ಒತ್ತೆಯಾಗಿ ತೆಗೆದುಕೊಳ್ಳಬಾರದು. ಹಾಗೆ ಮಾಡಿದರೆ, ಅದು ವ್ಯಕ್ತಿಯ ಜೀವನೋಪಾಯವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಿರುವುದು. \p \v 7 ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು. \p \v 8 ಕುಷ್ಠರೋಗಿಗಳ ವಿಷಯದಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವುದನ್ನೆಲ್ಲಾ ನೀವು ಜಾಗ್ರತೆಯಿಂದ ಕಾಪಾಡಿ ಕೈಗೊಳ್ಳುವ ಹಾಗೆ ನೋಡಿಕೊಳ್ಳಿ. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನು ನೀವು ಕಾಪಾಡಿ ಕೈಗೊಳ್ಳಬೇಕು. \v 9 ನೀವು ಈಜಿಪ್ಟಿನಿಂದ ಹೊರಗೆ ಬಂದಾಗ, ಮಾರ್ಗದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ಮಿರ್ಯಾಮಗಳಿಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. \p \v 10 ನಿನ್ನ ನೆರೆಯವನಿಗೆ ನೀವು ಯಾವುದೇ ರೀತಿಯ ಸಾಲಕೊಟ್ಟರೆ, ಅವನ ಒತ್ತೆಯನ್ನು ಕೇಳಲು ಅವನ ಮನೆಯಲ್ಲಿ ಪ್ರವೇಶಿಸಬಾರದು. \v 11 ನೀನು ಹೊರಗೆ ನಿಂತಿರಬೇಕು. ಸಾಲ ಕೊಟ್ಟವನೇ ಒತ್ತೆಯನ್ನು ನಿನಗೆ ಹೊರಗೆ ತರಬೇಕು. \v 12 ಅವನು ಬಡವನಾದರೆ, ಅವನ ಒತ್ತೆಯನ್ನು ಇಟ್ಟುಕೊಂಡು ರಾತ್ರಿ ಮಲಗಬೇಡ. \v 13 ನಿನ್ನ ನೆರೆಯವನು ಅದರಲ್ಲಿ ಮಲಗಲು ಸಾಯಂಕಾಲದ ಹೊತ್ತಿಗೆ ಅವನು ಹೊದ್ದುಕೊಳ್ಳುವ ವಸ್ತ್ರವನ್ನು ಹಿಂತಿರುಗಿಸು. ಆಗ ಅವನು ನಿನ್ನನ್ನು ಆಶೀರ್ವದಿಸುವನು. ನೀನು ಮಾಡಿದ್ದು ನಿನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ನೀತಿಯ ಕಾರ್ಯವೆಂದು ಪರಿಗಣಿಸಲಾಗುವುದು. \p \v 14 ನಿನ್ನ ನಾಡಿನ ಸಹೋದರನಾಗಲಿ, ಪರದೇಶಿಯವನಾಗಲಿ, ಬಡ ಮತ್ತು ನಿರ್ಗತಿಕನಾಗಿರುವ ಕೂಲಿಯವನನ್ನು ಬಾಧಿಸಬಾರದು. \v 15 ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು. \p \v 16 ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು. \p \v 17 ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ. \v 18 ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. \p \v 19 ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ, ಹೊಲದಲ್ಲಿ ಸಿವುಡನ್ನು ಮರೆತುಬಿಟ್ಟರೆ, ಅದನ್ನು ತೆಗೆದುಕೊಳ್ಳುವುದಕ್ಕೆ ತಿರುಗಿಕೊಳ್ಳಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನೀವು ಹೀಗೆ ನಡೆದುಕೊಂಡರೆ, ನಿನ್ನ ದೇವರಾದ ಯೆಹೋವ ದೇವರು ನಿನ್ನ ಎಲ್ಲಾ ದುಡಿಮೆಯಲ್ಲಿ ನಿನ್ನನ್ನು ಆಶೀರ್ವದಿಸುವರು. \v 20 ಓಲಿವ್ ಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವದಕ್ಕೆ ಹೋಗಬಾರದು, ಮಿಕ್ಕಿದ್ದನ್ನು ಪರದೇಶದವನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. \v 21 ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು. ಪರದೇಶಿ, ತಂದೆತಾಯಿ ಇಲ್ಲದ ವ್ಯಕ್ತಿ, ವಿಧವೆ ಇಂಥವರಿಗಾಗಿ ಅದನ್ನು ಬಿಟ್ಟುಬಿಡು. \v 22 ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿ ವಾಸವಾಗಿದ್ದಿರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ಈ ಎಲ್ಲಾ ಕಾರ್ಯಗಳನ್ನು ಮಾಡಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. \c 25 \p \v 1 ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು. \v 2 ಅಪರಾಧಿಗೆ ಪೆಟ್ಟಿನ ಶಿಕ್ಷೆ ತಿರ್ಮಾನವಾದರೆ, ನ್ಯಾಯಾಧಿಪತಿ ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು. \v 3 ಪೆಟ್ಟಿನ ಶಿಕ್ಷೆ ನಲವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚುಪೆಟ್ಟುಗಳನ್ನು ಹೊಡಿಸಿದರೆ, ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು. \p \v 4 ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು. \p \v 5 ಸಹೋದರರು ಕೂಡಿ ವಾಸಮಾಡುವಾಗ, ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಆ ಸತ್ತವನ ಹೆಂಡತಿ ಮನೆಬಿಟ್ಟು ಅನ್ಯನನ್ನು ಮದುವೆಯಾಗಬಾರದು. ಗಂಡನ ಸಹೋದರನು ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನನ ಕರ್ತವ್ಯವನ್ನು ಪೂರೈಸಬೇಕು. \v 6 ಅವಳು ಹೆರುವ ಚೊಚ್ಚಲ ಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು, ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರಲ್ಲಿ ಅಳಿದುಹೋಗುವುದಿಲ್ಲ. \p \v 7 ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತೆಗೆದುಕೊಳ್ಳವ ಮನಸ್ಸಿಲ್ಲದಿದ್ದರೆ, ಅತ್ತಿಗೆಯು ಚಾವಡಿಗೆ ಹೋಗಿ ಹಿರಿಯರ ಹತ್ತಿರ ಬಂದು, “ನನ್ನ ಗಂಡನ ಸಹೋದರನು ತನ್ನ ಸಹೋದರನ ಹೆಸರನ್ನು ಇಸ್ರಾಯೇಲಿನಲ್ಲಿ ಮುಂದುವರಿಸಲು ಸಿದ್ಧನಿಲ್ಲ. ಅವನು ತನ್ನ ಮೈದುನನ ಕರ್ತವ್ಯವನ್ನು ನಡೆಸಲು ಮನಸ್ಸಿಲ್ಲದವನಾಗಿದ್ದಾನೆ,” ಎಂದು ಹೇಳಬೇಕು. \v 8 ಆಗ ಅವನ ಪಟ್ಟಣದ ಹಿರಿಯರು ಅವನನ್ನು ಕರೆದು, ಅವನ ಸಂಗಡ ಮಾತನಾಡಬೇಕು. ಅವನು ನಿಂತುಕೊಂಡು, “ಅವಳನ್ನು ಮದುವೆಯಾಗುವುದಕ್ಕೆ ನನಗೆ ಮನಸ್ಸಿಲ್ಲ,” ಎಂದು ಹೇಳಿದರೆ, \v 9 ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು, ಕೆರವನ್ನು ಅವನ ಪಾದದಿಂದ ಬಿಡಿಸಿ, ಅವನ ಮುಖದಲ್ಲಿ ಉಗುಳಿ ಉತ್ತರಕೊಟ್ಟು, “ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು,” ಎಂದು ಹೇಳಲಿ. \v 10 ಆಮೇಲೆ ಆ ಮನುಷ್ಯನ ಮನೆಯವರಿಗೆ ಇಸ್ರಾಯೇಲಿನಲ್ಲಿ ಕೆರಬಿಚ್ಚಿಸಿಕೊಂಡವನ ಮನೆಯವರು ಎಂದು ಹೆಸರಾಗುವುದು. \p \v 11 ಇಬ್ಬರು ಮನುಷ್ಯರು, ಒಬ್ಬನ ಸಂಗಡ ಒಬ್ಬನು ಜಗಳವಾಡುತ್ತಿರುವಾಗ, ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವುದಕ್ಕೆ ಸಮೀಪ ಬಂದು ಕೈಚಾಚಿ, ಅವನ ಜನನೇಂದ್ರಿಯವನ್ನು ಹಿಡಿದರೆ, \v 12 ಅವಳ ಕೈಯನ್ನು ಕಡಿದುಹಾಕಬೇಕು. ಅವಳಿಗೆ ಕರುಣೆ ತೋರಿಸಬಾರದು. \p \v 13 ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ಕಳ್ಳ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬಾರದು. \v 14 ಹೆಚ್ಚು ಕಡಿಮೆಯಾದ ಎರಡು ವಿಧವಾದ ಕಳ್ಳ ಸೇರುಗಳು ನಿಮ್ಮ ಮನೆಯಲ್ಲಿರಬಾರದು. \v 15 ತೂಕದ ಕಲ್ಲೂ, ಅಳತೆಯ ಸೇರೂ, ಸರಿಯಾಗಿಯೂ ನ್ಯಾಯವಾಗಿಯೂ ಇರಬೇಕು. ಆಗ ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುತ್ತವೆ. \v 16 ಅಂಥ ಅನ್ಯಾಯ ಮಾಡುವವರೆಲ್ಲರೂ ನಿನ್ನ ದೇವರಾದ ಯೆಹೋವ ದೇವರಿಗೆ ಅಸಹ್ಯ. \p \v 17 ನೀವು ಈಜಿಪ್ಟನ್ನು ಬಿಟ್ಟು ಬರುವ ಮಾರ್ಗದಲ್ಲಿ ಅಮಾಲೇಕ್ಯರು ನಿನಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. \v 18 ಅವರು ಮಾರ್ಗದಲ್ಲಿ ನಿಮಗೆ ಎದುರುಗೊಂಡು, ನೀವು ಆಯಾಸವುಳ್ಳವರಾಗಿಯೂ, ದಣಿದವರಾಗಿಯೂ ಇದ್ದ ಸಮಯದಲ್ಲಿ ನಿಮ್ಮ ಹಿಂದೆ ಇದ್ದ ಬಲಹೀನರೆಲ್ಲರನ್ನು ಹಿಂಭಾಗದಲ್ಲಿ ಸಂಹಾರ ಮಾಡಿದರು. ಅವರಿಗೆ ದೇವರ ಬಗ್ಗೆ ಯಾವ ಭಯವೂ ಇರಲಿಲ್ಲ. \v 19 ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು. \c 26 \s1 ಪ್ರಥಮ ಫಲಗಳು ಹಾಗೂ ದಶಮಾಂಶ \p \v 1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವತ್ತಾಗಿ ಕೊಡುವ ದೇಶಕ್ಕೆ ನೀವು ಬಂದು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಿರಿ. \v 2 ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. \v 3 ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ, “ಯೆಹೋವ ದೇವರು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನಾನು ಸೇರಿದ್ದಾಯಿತೆಂದು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಈಗ ನಾನು ಒಪ್ಪಿಕೊಳ್ಳುತ್ತೇನೆ,” ಎಂದು ಹೇಳಬೇಕು. \v 4 ಆಗ ಯಾಜಕನು ಆ ಬುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದು, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮುಂದೆ ಇಡಬೇಕು. \v 5 ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು. \v 6 ಆದರೆ ಈಜಿಪ್ಟಿನವರು ನಮ್ಮನ್ನು ಕ್ರೂರವಾಗಿ ನಡೆಸಿ, ನಮ್ಮ ಮೇಲೆ ದಬ್ಬಾಳಿಕೆ ಮಾಡಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು. \v 7 ಆಗ ನಾವು ನಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ಮೊರೆಯಿಟ್ಟೆವು. ಯೆಹೋವ ದೇವರು ನಮ್ಮ ಸ್ವರವನ್ನು ಕೇಳಿ, ನಮ್ಮ ಸಂಕಟವನ್ನೂ ಕಷ್ಟವನ್ನೂ ದಬ್ಬಾಳಿಕೆಯನ್ನೂ ನೋಡಿದರು. \v 8 ಯೆಹೋವ ದೇವರು ನಮ್ಮನ್ನು ತಮ್ಮ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ, ಸೂಚಕಕಾರ್ಯಗಳಿಂದಲೂ, ಅದ್ಭುತಗಳಿಂದಲೂ, ಈಜಿಪ್ಟಿನಿಂದ ಹೊರಗೆ ಬರಮಾಡಿ, \v 9 ನಮ್ಮನ್ನು ಈ ಸ್ಥಳಕ್ಕೆ ಕರೆತಂದು, ಹಾಲೂ ಜೇನೂ ಹರಿಯುವ ದೇಶವಾಗಿರುವ ಈ ದೇಶವನ್ನು ನಮಗೆ ಕೊಟ್ಟಿದ್ದಾರೆ. \v 10 ಹೀಗಿರುವುದರಿಂದ ಯೆಹೋವ ದೇವರೇ, ನೀವು ನಮಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿದ್ದೇವೆ,” ಎಂದು ಹೇಳಬೇಕು. ಆಗ ಅದನ್ನು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿಟ್ಟು, ಅವರನ್ನು ಆರಾಧಿಸಬೇಕು. \v 11 ನಿಮ್ಮ ದೇವರಾದ ಯೆಹೋವ ದೇವರು ನಿಮಗೂ ನಿಮ್ಮ ಮನೆಗೂ ಲೇವಿಯರಿಗೂ ನಿಮ್ಮ ಸಂಗಡ ಇರುವ ಪರವಾಸಿಗಳಿಗೂ ನೀಡಿರುವ ಸೌಲಭ್ಯಕ್ಕಾಗಿ ಸಂತೋಷ ಪಡಬೇಕು. \p \v 12 ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು. \v 13 ಆಗ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, “ನಾವು ಮೀಸಲಿಟ್ಟ ಪರಿಶುದ್ಧ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದು, ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರಿಗೆ, ಪರದೇಶಿಗೆ, ತಂದೆತಾಯಿ ಇಲ್ಲದವರಿಗೆ, ವಿಧವೆಯರಿಗೆ ಕೊಟ್ಟಿದ್ದೇವೆ. ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ. \v 14 ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ. \v 15 ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು. \s1 ದೇವರ ಆಜ್ಞೆಗಳನ್ನು ಕೈಗೊಳ್ಳಿರಿ \p \v 16 ಈ ತೀರ್ಪುಗಳನ್ನೂ ನಿಯಮಗಳನ್ನೂ ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದ್ದರಿಂದ ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು. \v 17 ನೀವು ಈ ಹೊತ್ತು, ಯೆಹೋವ ದೇವರೇ ನಮಗೆ ದೇವರು ಎಂದೂ, ಅವರ ಮಾರ್ಗಗಳಲ್ಲಿ ನಡೆದು, ಅವರು ಹೇಳಿದ ಆಜ್ಞಾವಿಧಿನಿಯಮಗಳನ್ನು ಪಾಲಿಸಿ, ಅವರ ಮಾತಿಗೆ ವಿಧೇಯರಾಗಿರುತ್ತೇವೆ ಎಂದೂ ದೃಢವಾಗಿ ಹೇಳಿದ್ದೀರಿ. \v 18 ಈ ಹೊತ್ತು ನಿಮಗೆ ಯೆಹೋವ ದೇವರು ಘೋಷಿಸಿದಂತೆ, ನೀವು ಅವರ ಜನರೂ ಅವರ ಸಂಗ್ರಹಿಸಿದ ಆಸ್ತಿಯೂ ಆಗಿದ್ದೀರೆಂದು ವಾಗ್ದಾನಮಾಡಿದ್ದಾರೆ. ನೀವು ಅವರ ಎಲ್ಲಾ ಆಜ್ಞೆಗಳನ್ನು ಪಾಲಿಸಿರಿ. \v 19 ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ. \c 27 \s1 ಏಬಾಲ್ ಬೆಟ್ಟದ ಮೇಲೆ ಬಲಿಪೀಠ \p \v 1 ಮೋಶೆ ಮತ್ತು ಇಸ್ರಾಯೇಲಿನ ಹಿರಿಯರು ಜನರಿಗೆ, “ನಾವು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. \v 2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಯೊರ್ದನನ್ನು ದಾಟಿ ಪ್ರವೇಶಿಸುವಾಗ, ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಿ, \v 3 ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಪ್ರಕಾರ ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಹಾಲೂ ಜೇನೂ ಹರಿಯುವಂಥ ದೇಶವನ್ನು ನೀವು ಪ್ರವೇಶಿಸುವಂತೆ ಯೊರ್ದನ್ ನದಿಯನ್ನು ದಾಟುವಾಗ, ಅವುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಆ ಕಲ್ಲಿನ ಮೇಲೆ ಬರೆಯಬೇಕು. \v 4 ನೀವು ಯೊರ್ದನನ್ನು ದಾಟಿದ ಮೇಲೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು. \v 5 ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಬೇಕು. ಕಬ್ಬಿಣದ ಉಪಕರಣವನ್ನು ನೀವು ಕಲ್ಲುಗಳ ಮೇಲೆ ಉಪಯೋಗಿಸಬಾರದು. \v 6 ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠವನ್ನು ಹುಟ್ಟುಕಲ್ಲುಗಳಿಂದಲೇ ಕಟ್ಟಬೇಕು. ನೀವು ಅದರ ಮೇಲೆ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಬೇಕು. \v 7 ಅಲ್ಲಿ ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಸಮರ್ಪಿಸಿ, ಸಹಭೋಜನ ಮಾಡಿ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು. \v 8 ನೀವು ಆ ಕಲ್ಲುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಬಹುಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದರು. \s1 ಏಬಾಲ್ ಬೆಟ್ಟದಿಂದ ಬಂದ ಶಾಪಗಳು \p \v 9 ಆಗ ಮೋಶೆಯೂ ಯಾಜಕರಾದ ಲೇವಿಯರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ, “ಇಸ್ರಾಯೇಲರೇ, ಶಾಂತರಾಗಿದ್ದು ಕೇಳಿರಿ. ನೀವು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಜನಾಂಗವಾಗಿದ್ದೀರಿ. \v 10 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಆಜ್ಞೆಗಳನ್ನೂ ತೀರ್ಪುಗಳನ್ನೂ ಅನುಸರಿಸಬೇಕು,” ಎಂದು ಹೇಳಿದನು. \p \v 11 ಇದಲ್ಲದೆ ಮೋಶೆ ಅದೇ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ: \p \v 12 “ನೀವು ಯೊರ್ದನನ್ನು ದಾಟಿದ ಮೇಲೆ ಜನರನ್ನು ಆಶೀರ್ವದಿಸುವುದಕ್ಕೆ ಗೆರಿಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ, ಬೆನ್ಯಾಮೀನ್ ಮುಂತಾದವರು; \v 13 ಶಪಿಸುವುದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರು ಯಾರೆಂದರೆ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ,” ಎಂದು ಆಜ್ಞಾಪಿಸಿ ಹೇಳಿದನು. \p \v 14 ಲೇವಿಯರು ಇಸ್ರಾಯೇಲ್ ಜನರೆಲ್ಲರಿಗೆ ಗಟ್ಟಿಯಾದ ಧ್ವನಿಯಿಂದ, \p \v 15 “ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 16 ಅವರು, “ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 17 ಅವರು, “ತನ್ನ ನೆರೆಯವನ ಗಡಿ ಮೇರೆಯನ್ನು ಸರಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 18 ಅವರು, “ಕಣ್ಣು ಕಾಣದವನನ್ನು ದಾರಿತಪ್ಪಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 19 ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 20 ಅವರು, “ಮಲತಾಯಿಯ ಸಂಗಡ ಅನೈತಿಕವಾಗಿ ನಡೆದು ತನ್ನ ತಂದೆಯ ಹಾಸಿಗೆಯನ್ನು ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 21 ಅವರು, “ಪಶುಸಂಗಮ ಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 22 ಅವರು, “ತನ್ನ ತಂದೆಯ ಮಗಳ ಸಂಗಡವಾಗಲಿ, ತಾಯಿಯ ಮಗಳ ಸಂಗಡವಾಗಲಿ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 23 ಅವರು, “ತನ್ನ ಅತ್ತೆಯ ಸಂಗಡ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 24 ಅವರು, “ತನ್ನ ನೆರೆಯವನನ್ನು ರಹಸ್ಯವಾಗಿ ಕೊಲೆಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 25 ಅವರು, “ನಿರಪರಾಧಿಯನ್ನು ಕೊಲ್ಲಲು ಲಂಚ ತೆಗೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \p \v 26 ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, \pr ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. \c 28 \s1 ವಿಧೇಯತೆಗೆ ಆಶೀರ್ವಾದ \p \v 1 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು. \v 2 ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳಿ ಪಾಲಿಸಿದರೆ, ಈ ಎಲ್ಲಾ ಆಶೀರ್ವಾದಗಳು ನಿಮ್ಮ ಮೇಲೆ ಬಂದು, ನಿಮ್ಮೊಂದಿಗಿರುವವು: \pm \v 3 ಪಟ್ಟಣದಲ್ಲಿ ನಿಮಗೆ ಆಶೀರ್ವಾದ, ಹೊಲದಲ್ಲಿ ನಿಮಗೆ ಆಶೀರ್ವಾದ, \pm \v 4 ನಿಮ್ಮ ಸಂತಾನಕ್ಕೂ ನಿಮ್ಮ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. \pm \v 5 ನಿಮ್ಮ ಬುಟ್ಟಿಗಳಿಗೂ, ಹಿಟ್ಟನ್ನು ನಾದುವ ಪಾತ್ರೆಗೂ ಆಶೀರ್ವಾದ. \pm \v 6 ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಆಶೀರ್ವಾದ, ಬರುವಾಗಲೂ ನಿಮಗೆ ಆಶೀರ್ವಾದ. \p \v 7 ನಿಮಗೆ ವಿರೋಧವಾಗಿ ಏಳುವ ನಿಮ್ಮ ಶತ್ರುಗಳನ್ನು ಯೆಹೋವ ದೇವರು ನಿಮ್ಮ ಮುಂದೆಯೇ ಸೋಲಿಸಿಬಿಡುವರು. ಅವರು ಒಂದೇ ಮಾರ್ಗದಲ್ಲಿ ನಿಮಗೆ ವಿರೋಧವಾಗಿ ಹೊರಟು ಬಂದರೂ, ಏಳು ಮಾರ್ಗಗಳಿಂದ ಓಡಿಹೋಗುವರು. \p \v 8 ನಿಮ್ಮ ಕಣಜಗಳಲ್ಲಿಯೂ, ನೀವು ಕೈಹಾಕುವ ಎಲ್ಲಾದರಲ್ಲಿಯೂ ನಿಮಗೆ ಆಶೀರ್ವಾದ ಬರುವಂತೆ ಯೆಹೋವ ದೇವರು ಅಪ್ಪಣೆ ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು. \p \v 9 ನೀವು ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಪಾಲಿಸಿ, ಅವರ ಮಾರ್ಗಗಳಲ್ಲಿ ನಡೆದರೆ, ಯೆಹೋವ ದೇವರು ನಿಮಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ತಮಗೆ ಮೀಸಲಾದ ಪರಿಶುದ್ಧ ಜನರನ್ನಾಗಿ ಸ್ಥಾಪಿಸುವರು. \v 10 ಆಗ ಭೂಲೋಕದ ಜನರೆಲ್ಲರೂ, ನೀವು ಯೆಹೋವ ದೇವರ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು. \v 11 ನಿಮಗೆ ಕೊಡುತ್ತೇನೆಂದು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಯೆಹೋವ ದೇವರು ಭೂಮಿಯ ಮೇಲೆ ನಿಮ್ಮನ್ನು ಸಂತಾನ, ಪಶು ಮತ್ತು ಕೃಷಿ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವರು. \p \v 12 ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ. \v 13 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ನೀವು ಕೇಳಿ ಕಾಪಾಡಿ ಕೈಗೊಂಡರೆ, ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು. ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ. \v 14 ಹೀಗಿರುವುದರಿಂದ ನೀವು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಅನುಸರಿಸಿ ನಡೆಯದಂತೆ, ನಾನು ಇಂದು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು. \s1 ಅವಿಧೇಯತೆಗೆ ಶಾಪಗಳು \p \v 15 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು: \pm \v 16 ನಿಮಗೆ ಪಟ್ಟಣದಲ್ಲಿಯೂ ಶಾಪ, ಹೊಲದಲ್ಲಿಯೂ ನಿಮಗೆ ಶಾಪ. \pm \v 17 ನಿಮ್ಮ ಬುಟ್ಟಿಗಳಿಗೂ, ಹಿಟ್ಟನ್ನು ನಾದುವ ಪಾತ್ರೆಗೂ ಶಾಪ. \pm \v 18 ನಿಮ್ಮ ಗರ್ಭದ ಫಲಕ್ಕೂ ಪಶುಗಳ ಹಿಂಡಿಗೂ, ಕುರಿಗಳ ಮಂದೆಗಳಿಗೂ ಶಾಪ. \pm \v 19 ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಶಾಪ, ಬರುವಾಗಲೂ ಶಾಪ. \p \v 20 ನೀವು ನಿಮ್ಮ ಯೆಹೋವ ದೇವರನ್ನು ಬಿಟ್ಟ ದುಷ್ಟಕ್ರಿಯೆಯ ನಿಮಿತ್ತ, ಯೆಹೋವ ದೇವರು ನೀವು ಬೇಗ ನಾಶವಾಗುವವರೆಗೂ ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮಗೆ ಶಾಪ, ಗಲಿಬಿಲಿ ಹಾಗು ಗದರಿಕೆ ಮುಂತಾದವುಗಳನ್ನು ಉಂಟುಮಾಡುವರು. \v 21 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವವರೆಗೆ ಯೆಹೋವ ದೇವರು ನಿಮಗೆ ವ್ಯಾಧಿಯು ಅಂಟಿಕೊಳ್ಳುವಂತೆ ಮಾಡುವರು. \v 22 ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು. \v 23 ನಿಮ್ಮ ತಲೆಯ ಮೇಲಿರುವ ಆಕಾಶವು ಕಂಚಿನಂತೆಯೂ ಕೆಳಗಿರುವ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು. \v 24 ಯೆಹೋವ ದೇವರು ನಿಮ್ಮ ದೇಶದಲ್ಲಿ ಮಳೆಗೆ ಬದಲಾಗಿ ಹುಡಿಯೂ ಧೂಳೂ ಆಗುವಂತೆ ಮಾಡುವರು. ನೀವು ನಾಶವಾಗುವವರೆಗೆ ಅದು ಆಕಾಶದಿಂದ ನಿಮ್ಮ ಮೇಲೆ ಸುರಿಯುವುದು. \p \v 25 ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು. \v 26 ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುದು. ಯಾರೂ ಅವುಗಳನ್ನು ಬೆದರಿಸಿ ಓಡಿಸುವುದಿಲ್ಲ. \v 27 ಯೆಹೋವ ದೇವರು ನಿಮ್ಮನ್ನು ಈಜಿಪ್ಟನ್ನು ಬಾಧಿಸುವಂತೆ ಹುಣ್ಣುಗಳಿಂದಲೂ, ಮೂಲವ್ಯಾಧಿಯಿಂದಲೂ, ಕಜ್ಜಿಯಿಂದಲೂ, ಇಸುಬಿನಿಂದಲೂ ನೀವು ವಾಸಿಯಾಗದ ರೋಗಗಳಿಂದ ನಿಮ್ಮನ್ನು ಬಾಧಿಸುವರು. \v 28 ಯೆಹೋವ ದೇವರು ನಿಮ್ಮನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಕಾಡುವರು. \v 29 ಕಣ್ಣು ಕಾಣದವನು ಕತ್ತಲಲ್ಲಿ ತಡವಾಡುವಂತೆ ಮಧ್ಯಾಹ್ನದಲ್ಲಿ ತಡವಾಡುತ್ತಾ ಇರುವಿರಿ, ನಿಮ್ಮ ಮಾರ್ಗಗಳಲ್ಲಿ ಸಫಲವಾಗುವುದಿಲ್ಲ. ನೀವು ಯಾವಾಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ, ಸುಲಿಗೆಯನ್ನೂ ಅನುಭವಿಸುವವರಾಗುವಿರಿ. \p \v 30 ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ. \v 31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆಯೇ ಕೊಯ್ಯುವರು, ಆದರೆ ನೀವು ಅದರ ಮಾಂಸ ತಿನ್ನುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಕಣ್ಣ ಮುಂದೆಯೇ ಬಲಾತ್ಕಾರದಿಂದ ತೆಗೆದುಕೊಂಡು ಹೋಗುವರು. ಅದು ನಿಮಗೆ ಮತ್ತೆ ಸಿಕ್ಕುವುದಿಲ್ಲ. ನಿಮ್ಮ ಕುರಿಗಳು ನಿಮ್ಮ ಶತ್ರುವಿಗೆ ಕೊಡಲಾಗುವುದು. ಅವುಗಳನ್ನು ಬಿಡಿಸುವುದಕ್ಕೆ ಯಾರೂ ಇರುವುದಿಲ್ಲ. \v 32 ನಿಮ್ಮ ಪುತ್ರಪುತ್ರಿಯರು ಬೇರೆ ಜನರಿಗೆ ವಶಪಡಿಸಿರಲು, ನೀವು ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಇರುವಿರಿ. ಆದರೆ ಅವರನ್ನು ಕಾಪಾಡಲು ನಿಮ್ಮ ಕೈಯಿಂದ ಸಾಧ್ಯವಾಗದೆ ಇರುವುದು. \v 33 ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ. \v 34 ನಿಮ್ಮ ಕಣ್ಣಮುಂದೆ ನಡೆಯುವ ಘಟನೆಗಳನ್ನು ನೋಡಿ ಹುಚ್ಚರಾಗುವಿರಿ. \v 35 ಯೆಹೋವ ದೇವರು ನಿಮ್ಮನ್ನು ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ವಾಸಿಯಾಗದ ಕೆಟ್ಟ ಉರಿ ಹುಣ್ಣಿನಿಂದ ಅಂಗಾಲು ಮೊದಲ್ಗೊಂಡು ನೆತ್ತಿಯವರೆಗೆ ಹೊಡೆಯುವರು. \p \v 36 ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ. \v 37 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ. \p \v 38 ಬಹಳ ಬೀಜವನ್ನು ಹೊಲದಲ್ಲಿ ಬಿತ್ತಿದರೂ ಸ್ವಲ್ಪವೇ ಬೆಳೆ. ಏಕೆಂದರೆ ಮಿಡತೆ ಅದನ್ನು ತಿಂದುಬಿಡುವುದು; \v 39 ದ್ರಾಕ್ಷಿತೋಟವನ್ನು ನೆಟ್ಟು ಕಾಪಾಡುವಿರಿ, ಆದರೆ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಮತ್ತು ಹಣ್ಣು ಕೂಡಿಸುವುದಿಲ್ಲ, ಏಕೆಂದರೆ ಹುಳುಗಳು ಅದನ್ನು ತಿಂದುಬಿಡುವುವು; \v 40 ಓಲಿವ್ ಮರಗಳು ನಿಮ್ಮ ಎಲ್ಲಾ ಮೇರೆಗಳಲ್ಲಿ ಇರುವುವು. ಆದರೆ ಅವುಗಳ ಕಾಯಿಗಳು ಉದುರುವುದರಿಂದ ನಿಮ್ಮ ಉಪಯೋಗಕ್ಕೆ ಎಣ್ಣೆ ಸಿಗದು. \v 41 ನೀವು ಪುತ್ರಪುತ್ರಿಯರನ್ನು ಪಡೆಯುವಿರಿ, ಆದರೆ ಅವರ ಕೂಡ ಸಂತೋಷಿಸುವುದಿಲ್ಲ. ಏಕೆಂದರೆ ಅವರು ಸೆರೆಯಾಗಿ ಹೋಗುವರು. \v 42 ನಿಮ್ಮ ಎಲ್ಲಾ ಮರಗಳನ್ನೂ, ನಿಮ್ಮ ಹೊಲದ ಪೈರನ್ನೂ ಮಿಡತೆ ತಿಂದುಬಿಡುವುದು. \p \v 43 ನಿಮ್ಮ ಮಧ್ಯದಲ್ಲಿರುವ ಪರದೇಶದವರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುವರು. ನೀವಾದರೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ. \v 44 ಅವರು ನಿಮಗೆ ಸಾಲ ಕೊಡುವರು ಆದರೆ ನೀವು ಅವರಿಗೆ ಸಾಲಕೊಡುವ ಸ್ಥಿತಿಯಲ್ಲಿ ಇರುವುದಿಲ್ಲ. ಅವರು ನಿಮಗೆ ಶಿರಸ್ಸಾಗುವರು ಆದರೆ ನೀವು ಅವರಿಗೆ ಅಧೀನರಾಗುವಿರಿ. \p \v 45 ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳದೆ ಅವರು ನಿಮಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ನಿಯಮಗಳನ್ನೂ ಕೈಗೊಳ್ಳದೆ ಇದ್ದುದರಿಂದ, ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬಂದು, ನಿಮ್ಮನ್ನು ನಾಶಮಾಡುವವರೆಗೂ ನಿಮ್ಮನ್ನು ಹಿಂದಟ್ಟುವುವು. \v 46 ಅವು ನಿಮ್ಮ ಮೇಲೂ ನಿಮ್ಮ ಸಂತತಿಯ ಮೇಲೂ ಯಾವಾಗಲೂ ಗುರುತೂ ಅದ್ಭುತವೂ ಆಗಿರುವುವು. \v 47 ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಂತೋಷದಿಂದಲೂ ಹರ್ಷದಿಂದಲೂ ಸೇವೆಮಾಡದೆ ಹೋದಿರಿ. \v 48 ಆದುದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬಡತನದಲ್ಲಿ ಬಟ್ಟೆಬರೆ ಏನೂ ಇಲ್ಲದೆ, ಯೆಹೋವ ದೇವರು ನಿಮ್ಮ ಮೇಲೆ ಕಳುಹಿಸುವ ಆ ಶತ್ರುಗಳಿಗೇ ನೀವು ಸೇವಕರಾಗಬೇಕಾಗುವುದು. ಯೆಹೋವ ದೇವರು ನಿಮ್ಮನ್ನು ನಾಶಮಾಡುವವರೆಗೆ ಕಬ್ಬಿಣದ ನೊಗವನ್ನು ನಿಮ್ಮ ಮೇಲೆ ಹೊರಿಸುವರು. \p \v 49 ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು. \v 50 ಆ ಜನಾಂಗದವರು ಕ್ರೂರಮುಖವುಳ್ಳವರು. ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ದಯೆಯೂ ತೋರಿಸುವುದಿಲ್ಲ. \v 51 ಅವರು ನಿಮ್ಮ ಪಶುಗಳ ಫಲವನ್ನೂ ನಿಮ್ಮ ಭೂಮಿಯ ಫಲವನ್ನೂ ನೀವು ನಾಶವಾಗುವವರೆಗೆ ತಿಂದುಬಿಡುವರು. ಅವರು ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಓಲಿವ್ ಎಣ್ಣೆಯನ್ನೂ, ಪಶುಗಳ ಅಭಿವೃದ್ಧಿಯನ್ನೂ, ಕುರಿಗಳ ಮಂದೆಗಳನ್ನೂ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು. \v 52 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ನಿಮ್ಮ ದೇಶದಲ್ಲೆಲ್ಲಾ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ಮುತ್ತಿಗೆ ಹಾಕುವರು. ನೀವು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿಮ್ಮ ಗೋಡೆಗಳನ್ನು ಕೆಡವಿಬಿಡುವರು. \p \v 53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಗರ್ಭದ ಫಲವನ್ನು ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ. \v 54 ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಸಹ ತನ್ನ ಸ್ವಂತ ಸಹೋದರ ಅಥವಾ ಅವನು ಪ್ರೀತಿಸುವ ಹೆಂಡತಿ ಅಥವಾ ಉಳಿದಿರುವ ಮಕ್ಕಳ ಮೇಲೆ ಅನುಕಂಪ ತೋರಿಸುವುದಿಲ್ಲ. \v 55 ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ಅವನು ತನಗೆ ತಿನ್ನಲಿಕ್ಕೆ ಏನೂ ಸಿಗುವುದಿಲ್ಲ ಅಂದುಕೊಂಡು, ತನ್ನ ಮಕ್ಕಳ ಮಾಂಸವನ್ನು ಇತರರಿಗೆ ಕೊಡದೆ ತಿನ್ನುವನು. \v 56 ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವಳೂ, ಬಹಳ ಸೂಕ್ಷ್ಮ ಗುಣವುಳ್ಳವಳೂ, ನೆಲಕ್ಕೆ ಅಂಗಾಲನ್ನು ಸಹ ಇಡದ ಮಹಿಳೆಯು, ತನ್ನ ಮಗ್ಗುಲಲ್ಲಿರುವ ಗಂಡನ ಕಡೆಗೂ ಹೆತ್ತ ಪುತ್ರಪುತ್ರಿಯರ ಕಡೆಗೂ ಕಠಿಣವಾಗಿರುವಳು. \v 57 ಅವಳು ಕೊರತೆಯಲ್ಲಿಯೂ, ಮುತ್ತಿಗೆಯಲ್ಲಿಯೂ, ಶತ್ರು ನಿಮಗೆ ನಿಮ್ಮ ಪಟ್ಟಣಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ, ತನ್ನ ಮಕ್ಕಳನ್ನು ಗುಪ್ತವಾಗಿ ತಿಂದುಬಿಡುವಳು. \p \v 58 ನಿಮ್ಮ ದೇವರಾದ ಯೆಹೋವ ದೇವರೆಂಬ ಈ ಘನವುಳ್ಳ ಹೆಸರಿಗೆ ನೀವು ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನಿಯಮದ ಮಾತುಗಳನ್ನು ಅಲಕ್ಷಿಸಿ, ತಪ್ಪು ದಾರಿ ಹಿಡಿದರೆ, \v 59 ಯೆಹೋವ ದೇವರು ನಿಮಗೂ ನಿಮ್ಮ ಸಂತತಿಗೂ ಭಯಂಕರವಾದ ಉಪದ್ರವಗಳನ್ನು ಬರಮಾಡುವರು; ಅವು ಕಠಿಣವಾದ ಮತ್ತು ದೀರ್ಘಕಾಲದ ಬಾಧೆಗಳೂ ಘೋರವಾದ ಮತ್ತು ಗಂಭೀರವಾದ ರೋಗಗಳಾಗಿರುವವು. \v 60 ಇದಲ್ಲದೆ ನೀವು ಹೆದರಿಕೊಳ್ಳುತ್ತಿದ್ದ ಈಜಿಪ್ಟಿನ ರೋಗಗಳನ್ನೆಲ್ಲಾ ದೇವರು ತಿರುಗಿ ನಿಮ್ಮ ಮೇಲೆ ಬರಮಾಡುವರು; ಅವು ನಿಮ್ಮನ್ನು ಅಂಟಿಕೊಳ್ಳುವವು. \v 61 ಈ ನಿಯಮದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ನೀವು ಪೂರ್ಣ ನಾಶವಾಗುವವರೆಗೆ ಯೆಹೋವ ದೇವರು ನಿಮ್ಮ ಮೇಲೆ ತರುವರು. \v 62 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೇ ಹೋದದ್ದರಿಂದ, ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯಾತರಾಗಿರುವ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ. \v 63 ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು. \p \v 64 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ. \v 65 ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು. \v 66 ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ರಾತ್ರಿ ಹಗಲು ಜೀವದ ಮೇಲೆ ನಂಬಿಕೆ ಇಲ್ಲದೆ ಹೆದರಿಕೊಳ್ಳುವಿರಿ. \v 67 ನಿಮ್ಮ ಹೃದಯದಲ್ಲಿನ ಪ್ರಾಣಭೀತಿ, ಹೆದರಿಕೆಯ ನಿಮಿತ್ತವೂ ನಿಮ್ಮ ಕಣ್ಣುಗಳು ನೋಡುವ ಭಯಂಕರ ನೋಟದಿಂದ ನೀವು ಮುಂಜಾನೆಯಲ್ಲಿ, “ಸಂಜೆ ಆಗಬೇಕು,” ಎನ್ನುವಿರಿ. ಸಂಜೆಯಲ್ಲಿ, “ಮುಂಜಾನೆ ಆಗಬೇಕು,” ಎನ್ನುವಿರಿ. \v 68 ಇದಲ್ಲದೆ, ಯೆಹೋವ ದೇವರು, ನೀವು ಇನ್ನು ಮೇಲೆ ನೋಡುವುದಿಲ್ಲ ಎಂದು ಹೇಳಿದ ದಾರಿಯಲ್ಲಿಯೇ ಹಡಗುಗಳಲ್ಲಿ ಜನರು ನಿಮ್ಮನ್ನು ಈಜಿಪ್ಟಿಗೆ ತಿರುಗಿ ಬರಮಾಡುವರು. ನಿಮ್ಮನ್ನು ಅಲ್ಲಿ ದಾಸರಾಗಿಯೂ ದಾಸಿಯರಾಗಿಯೂ ನಿಮ್ಮ ಶತ್ರುಗಳಿಗೆ ಮಾರಿಕೊಳ್ಳಬೇಕೆಂದಿದ್ದರೂ, ಕೊಂಡುಕೊಳ್ಳುವವರು ಇರುವುದಿಲ್ಲ. \c 29 \s1 ಒಡಂಬಡಿಕೆಯ ನವೀಕರಣ \p \v 1 ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ: \p \v 2 ಮೋಶೆಯು ಎಲ್ಲಾ ಇಸ್ರಾಯೇಲರನ್ನು ಕರೆದು ಅವರಿಗೆ ಹೀಗೆ ಹೇಳಿದನು: \b \p ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣು ಮುಂದೆಯೇ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ. \v 3 ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ನಿಮ್ಮ ಕಣ್ಣಾರೆ ನೋಡಿದ್ದೀರಿ. \v 4 ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ! \v 5 “ನಾನು ನಲವತ್ತು ವರ್ಷ ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿದೆನು. ನಿಮ್ಮ ಮೇಲಿರುವ ವಸ್ತ್ರಗಳು ಹರಿಯಲಿಲ್ಲ. ನಿಮ್ಮ ಪಾದಗಳಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ. \v 6 ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವ ದೇವರೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.” \p \v 7 ನೀವು ಈ ಸ್ಥಳಕ್ಕೆ ಬಂದಾಗ, ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಹೊರಟರು. ನಾವು ಅವರನ್ನು ಸೋಲಿಸಿ, \v 8 ಅವರ ದೇಶವನ್ನು ತೆಗೆದುಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸೊತ್ತಾಗಿ ಕೊಟ್ಟೆವು. \p \v 9 ಹೀಗಿರುವುದರಿಂದ ನೀವು ಮಾಡುವ ಎಲ್ಲದರಲ್ಲಿಯೂ ಸಫಲವಾಗುವಂತೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು. \v 10 ನೀವೆಲ್ಲರು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ಗೋತ್ರಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಜನರೆಲ್ಲರೂ \v 11 ನಿಮ್ಮ ಮಕ್ಕಳೂ ಹೆಂಡತಿಯರೂ ನಿಮ್ಮ ಪಾಳೆಯದಲ್ಲಿರುವ ಪರದೇಶಿಯರೂ ನಿಮಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವವರೂ ಸಹ \v 12 ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ. \v 13 ಆ ಒಡಂಬಡಿಕೆ ಯಾವುದೆಂದರೆ, ದೇವರು ನಿಮಗೆ ಹೇಳಿದಂತೆಯೂ, ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದಂತೆಯೂ, ಈ ಹೊತ್ತು ನಿಮ್ಮನ್ನು ತಮ್ಮ ಜನರನ್ನಾಗಿ ಸ್ಥಾಪಿಸಿ, ನಿಮಗೆ ದೇವರಾಗಬೇಕೆಂಬುದೇ. \v 14 ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆಯನ್ನೂ, ಈ ಆಣೆಯನ್ನೂ ಮಾಡುವುದಲ್ಲದೆ \v 15 ಈ ಹೊತ್ತು ಇಲ್ಲಿ ನಮ್ಮೊಡನೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತವರ ಸಂಗಡ, ಈ ಹೊತ್ತು ಇಲ್ಲಿ ನಮ್ಮೊಡನೆ ಇಲ್ಲದವರ ಸಂಗಡ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. \p \v 16 ಏಕೆಂದರೆ ನಾವು ಈಜಿಪ್ಟ್ ದೇಶದಲ್ಲಿ ಹೇಗೆ ವಾಸವಾಗಿದ್ದೆವೆಂದೂ, ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿ ಬಂದೆವೆಂದೂ ನಿಮಗೆ ತಿಳಿದಿದೆ. \v 17 ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದ ಬೊಂಬೆಗಳನ್ನೂ ನೀವು ನೋಡಿದ್ದೀರಲ್ಲವೇ? \v 18 ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು. \p \v 19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು. \v 20 ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು. \v 21 ಈ ನಿಯಮದ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಯೆಹೋವ ದೇವರು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವರು. \p \v 22 ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ, ದೂರದೇಶದಿಂದ ಬರುವ ಅನ್ಯನೂ, ಆ ದೇಶದ ವಿಪತ್ತುಗಳನ್ನೂ, ಯೆಹೋವ ದೇವರು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡುವರು. \v 23 ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು. \v 24 ಆಗ ಎಲ್ಲಾ ದೇಶದವರೂ, “ಯೆಹೋವ ದೇವರು ಈ ದೇಶಕ್ಕೆ ಏಕೆ ಹೀಗೆ ಮಾಡಿದ್ದಾರೆ? ಈ ದೊಡ್ಡ ಕೋಪಾಗ್ನಿಗೆ ಕಾರಣವೇನು?” ಎಂದು ಕೇಳುವರು. \p \v 25 ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. \v 26 ಅವರು ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದ್ದಾರೆ. \v 27 ಆದ್ದರಿಂದ ಯೆಹೋವ ದೇವರು ಇಸ್ರಾಯೇಲ್ ದೇಶದ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ. \v 28 ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.” \p \v 29 ರಹಸ್ಯಗಳು ನಮ್ಮ ದೇವರಾದ ಯೆಹೋವ ದೇವರಿಗೆ ಸೇರಿದ್ದು, ಆದರೆ ಪ್ರಕಟವಾದ ಈ ನಿಯಮದ ಮಾತುಗಳನ್ನೆಲ್ಲಾ ನಾವು ಕೈಕೊಳ್ಳುವ ಹಾಗೆ ನಮಗೂ, ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ. \c 30 \s1 ದೇವರ ಕಡೆಗೆ ತಿರುಗಿಕೊಂಡರೆ ಸಮೃದ್ಧಿ \p \v 1 ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು. \v 2 ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು, ನೀವೂ, ನಿಮ್ಮ ಮಕ್ಕಳೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾತುಗಳಿಗೆ, ನೀವು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ದೇವರಿಗೆ ವಿಧೇಯರಾಗಬೇಕು. \v 3 ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೆರೆಯಿಂದ ಬಿಡಿಸಿ, ನಿಮ್ಮ ಮೇಲೆ ಕನಿಕರಿಸಿ, ಅವರು ನಿಮ್ಮನ್ನು ಚದರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿಮ್ಮನ್ನು ಕೂಡಿಸುವರು. \v 4 ನಿಮ್ಮಲ್ಲಿ ಯಾರಾದರೂ ಭೂಮಿಯ ಕಟ್ಟಕಡೆಯವರೆಗೂ ಚದರಿ ಹೋಗಿದ್ದರೂ, ಅಲ್ಲಿಂದ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ಸಹ ಕರೆದುತರುವರು. \v 5 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳು ಸ್ವಾಧೀನ ಮಾಡಿಕೊಂಡ ದೇಶಕ್ಕೆ ನಿಮ್ಮನ್ನು ತರುವರು. ನೀವು ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ದೇವರು ನಿಮ್ಮ ಪಿತೃಗಳಿಗಿಂತಲೂ ನಿಮ್ಮನ್ನು ಸಮೃದ್ಧಿಗೊಳಿಸಿ ಹೆಚ್ಚಿಸುವರು. \v 6 ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು. \v 7 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಆ ಶಾಪಗಳನ್ನೆಲ್ಲಾ ನಿಮ್ಮ ಶತ್ರುಗಳ ಮೇಲೆಯೂ, ನಿಮ್ಮನ್ನು ಹಿಂಸಿಸಿದ ನಿಮ್ಮ ಹಗೆಯವರ ಮೇಲೆಯೂ ಬರಮಾಡುವರು. \v 8 ಆದರೆ ನೀವು ಪುನಃ ಯೆಹೋವ ದೇವರ ಮಾತನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳಂತೆ ನಡೆಯುವಿರಿ. \v 9 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೈಕೆಲಸದಲ್ಲಿಯೂ, ನಿಮ್ಮ ಗರ್ಭದ ಫಲದಲ್ಲಿಯೂ, ನಿಮ್ಮ ಪಶುಗಳ ಫಲದಲ್ಲಿಯೂ, ನಿಮ್ಮ ಭೂಮಿಯ ಫಲದಲ್ಲಿಯೂ ಅತ್ಯಂತ ಅಭಿವೃದ್ಧಿಯನ್ನು ಮಾಡುವರು. ಯೆಹೋವ ದೇವರು ನಿಮ್ಮ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿಮ್ಮಲ್ಲಿಯೂ ಸಂತೋಷಿಸುವರು. \v 10 ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿ, ಈ ನಿಯಮದ ಗ್ರಂಥದಲ್ಲಿ ಬರೆದಿರುವ ಅವರ ಆಜ್ಞಾತೀರ್ಪುಗಳನ್ನು ಕಾಪಾಡಿ, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡರೆ, ನಿಮ್ಮಲ್ಲಿ ಸಂತೋಷಿಸುವರು. \s1 ಜೀವವೂ ಮತ್ತು ಮರಣವೂ \p \v 11 ನಿಶ್ಚಯವಾಗಿ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯು ನಿಮಗೆ ಕಠಿಣವಾದದ್ದಲ್ಲ; ದೂರವಾದದ್ದೂ ಅಲ್ಲ. \v 12 “ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಆಕಾಶಕ್ಕೆ ಏರಿಹೋಗಿ, ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಆಕಾಶದಲ್ಲಿ ಇರುವಂಥದ್ದೂ ಅಲ್ಲ. \v 13 “ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಸಮುದ್ರವನ್ನು ದಾಟಿ, ನಮಗೆ ತೆಗೆದುಕೊಂಡು ಬಂದು ಅದನ್ನು ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಸಮುದ್ರದ ಆಚೆಯಲ್ಲಿ ಇರುವಂಥದ್ದೂ ಅಲ್ಲ. \v 14 ಆ ವಾಕ್ಯವು ನಿಮಗೆ ಬಹಳ ಸಮೀಪವಾಗಿದೆ. ಅದನ್ನು ಕೈಗೊಳ್ಳುವ ಹಾಗೆ ವಾಕ್ಯವು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ. \p \v 15 ನೋಡಿರಿ, ನಾನು ಈ ಹೊತ್ತು ಜೀವ ಸಮೃದ್ಧಿಯನ್ನೂ, ಮರಣ ನಾಶನವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ. \v 16 ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು. \p \v 17 ಆದರೆ ನಿಮ್ಮ ಹೃದಯವು ತಿರುಗಿಬಿದ್ದು ನೀವು ಮಾತು ಕೇಳದೆ ಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆದವರಾಗಿ ಅಡ್ಡಬಿದ್ದು, ಅವುಗಳಿಗೆ ಸೇವೆ ಮಾಡಿದರೆ, \v 18 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಬಾಳದೆ, ನಾಶವಾಗಿಹೋಗುವಿರಿ ಎಂದು ಈ ಹೊತ್ತು ನಿಮಗೆ ಖಂಡಿತವಾಗಿ ತಿಳಿಸುತ್ತೇನೆ. \p \v 19 ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ. \v 20 ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ. \c 31 \s1 ಮೋಶೆಯ ಉತ್ತರಾಧಿಕಾರಿಯಾಗಿ ಯೆಹೋಶುವನು \p \v 1 ಆಗ ಮೋಶೆ ಹೋಗಿ ಇಸ್ರಾಯೇಲರಿಗೆಲ್ಲಾ ಈ ಮಾತುಗಳನ್ನು ಹೇಳಿದನು: \v 2 “ನಾನು ಈ ಹೊತ್ತು ನೂರ ಇಪ್ಪತ್ತು ವರ್ಷದವನಾಗಿದ್ದೇನೆ. ಇನ್ನು ಮುಂದೆ ನಿಮ್ಮನ್ನು ಮುನ್ನಡೆಸಲು ನನಗೆ ಸಾಧ್ಯವಾಗುತ್ತಿಲ್ಲ. ಇದಲ್ಲದೆ ಯೆಹೋವ ದೇವರು ನನಗೆ, ‘ನೀನು ಈ ಯೊರ್ದನನ್ನು ದಾಟುವುದಿಲ್ಲ,’ ಎಂದು ಹೇಳಿದ್ದಾರೆ. \v 3 ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುವರು. ಅವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸೋಲಿಸುವರು. ನೀವು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋಶುವನು ನಿಮ್ಮ ಮುಂದೆ ಹೋಗುವನು. \v 4 ಯೆಹೋವ ದೇವರು ಅಮೋರಿಯರ ಅರಸನಾದ ಸೀಹೋನನಿಗೂ, ಓಗನಿಗೂ, ಅವರ ದೇಶಕ್ಕೂ ಮಾಡಿದ ಪ್ರಕಾರ ಆ ಜನಾಂಗಗಳನ್ನು ದಂಡಿಸುವರು. \v 5 ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಕೊಡುವಾಗ, ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಅವರಿಗೆ ಮಾಡಬೇಕು. \v 6 ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ.” \p \v 7 ಆಗ ಮೋಶೆಯು ಯೆಹೋಶುವನನ್ನು ಕರೆದು, ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ, “ಶಕ್ತಿಶಾಲಿಯಾಗಿರು, ಧೈರ್ಯವಾಗಿರು. ಏಕೆಂದರೆ ನೀನು ಈ ಜನರ ಸಂಗಡ ಹೋಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ಸೇರಿಸಬೇಕು. ನೀನು ಅವರಿಗೆ ಅದನ್ನು ಸೊತ್ತಾಗಿ ಹಂಚಿಕೊಡಬೇಕು. \v 8 ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ,” ಎಂದು ಹೇಳಿದನು. \s1 ದೇವರ ನಿಯಮದ ಪಠಣ \p \v 9 ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು. \v 10 ಅನಂತರ ಮೋಶೆಯು ಅವರಿಗೆ, “ಪ್ರತಿ ಏಳು ವರ್ಷ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರ್ಷದಲ್ಲಿ ಅಂದರೆ, ಗುಡಾರಗಳ ಹಬ್ಬದಲ್ಲಿ \v 11 ಇಸ್ರಾಯೇಲಿನವರೆಲ್ಲರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ನೀವು ಈ ನಿಯಮವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಜನರು ಕೇಳುವ ಹಾಗೆ ಓದಬೇಕು. \v 12 ಜನರನ್ನು ಅಂದರೆ, ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಪರದೇಶಿಯರನ್ನೂ ಕೂಡಿಸಬೇಕು. ಅವರು ಕೇಳಿ ಕಲಿತು, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಈ ನಿಯಮದ ವಾಕ್ಯಗಳನ್ನೆಲ್ಲಾ ಕೈಗೊಂಡು ನಡೆಯುವ ಹಾಗೆ, ಅವರೆಲ್ಲರನ್ನು ಒಂದು ಕಡೆ ಕೂಡಿಸಬೇಕು. \v 13 ದೇವರ ಈ ನಿಯಮವನ್ನು ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವುದಕ್ಕೆ ಕಲಿತುಕೊಳ್ಳಿರಿ, ಎಂದು ಅವರಿಗೆ ಆಜ್ಞಾಪಿಸಿ ಹೇಳಬೇಕು,” ಎಂದನು. \s1 ಇಸ್ರಾಯೇಲರ ತಿರುಗಿ ಬೀಳುವಿಕೆ ಮುಂಚಿತವಾಗಿ ತಿಳಿಸಿದ್ದು \p \v 14 ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು. \p \v 15 ಆಗ ಯೆಹೋವ ದೇವರು ಗುಡಾರದೊಳಗೆ ಮೇಘ ಸ್ತಂಭದಲ್ಲಿ ಕಾಣಿಸಿಕೊಂಡರು. ಆ ಮೇಘಸ್ತಂಭವು ಗುಡಾರದ ಬಾಗಿಲಿನ ಮೇಲೆ ನಿಂತಿತು. \v 16 ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು. \v 17 ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು. \v 18 ಅವರು ಮಾಡಿದ ಎಲ್ಲಾ ದುಷ್ಕೃತ್ಯದ ನಿಮಿತ್ತವೂ, ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತ ಮರೆಮಾಡುವೆನು. \p \v 19 “ಹೀಗಿರುವುದರಿಂದ ಈಗ ಈ ಹಾಡನ್ನು ಬರೆದುಕೊಳ್ಳಿರಿ. ಇಸ್ರಾಯೇಲರಲ್ಲಿ ಈ ಹಾಡು ನನಗೆ ಸಾಕ್ಷಿಯಾಗಿರುವ ಹಾಗೆ ಅದನ್ನು ಅವರಿಗೆ ಬಾಯಿಪಾಠ ಮಾಡಿಸು. \v 20 ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು. \v 21 ಬಹಳ ಕೇಡುಗಳೂ ವಿಪತ್ತುಗಳೂ ಅವರಿಗೆ ಸಂಭವಿಸುವಾಗ, ಈ ಹಾಡು ಅವರಿಗೆ ವಿರೋಧ ಸಾಕ್ಷಿಯಾಗಿ ಉತ್ತರಕೊಡುವುದು. ಏಕೆಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತು ಹೋಗುವುದಿಲ್ಲ. ನಾನು ಪ್ರಮಾಣ ಮಾಡಿದ ದೇಶದಲ್ಲಿ ಅವರನ್ನು ತರುವುದಕ್ಕಿಂತ ಮುಂಚೆ ಅವರು ಈ ಹೊತ್ತು ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು.” \v 22 ಆದ್ದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು. \p \v 23 ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು. \p \v 24 ಇದಲ್ಲದೆ ಮೋಶೆ ಈ ನಿಯಮದ ವಾಕ್ಯಗಳನ್ನು ಗ್ರಂಥದಲ್ಲಿ ಬರೆದು ತೀರಿಸಿದಾಗ, \v 25 ಮೋಶೆ ಯೆಹೋವ ದೇವರು ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ, \v 26 “ದೇವರ ನಿಯಮದ ಈ ಗ್ರಂಥವನ್ನು ತೆಗೆದುಕೊಂಡು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿ ಇಡಿರಿ. ಅದು ನಿಮಗೆ ವಿರೋಧವಾದ ಸಾಕ್ಷಿಯಾಗಿ ಅಲ್ಲಿ ಇರಲಿ. \v 27 ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು? \v 28 ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ, ನಿಮ್ಮ ಅಧಿಕಾರಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ಆಗ ಈ ಮಾತುಗಳನ್ನು ಅವರು ಕೇಳುವ ಹಾಗೆ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು. \v 29 ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು. \s1 ಮೋಶೆಯ ಗೀತ \p \v 30 ಆಗ ಮೋಶೆ ಇಸ್ರಾಯೇಲ್ ಸಮೂಹಕ್ಕೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಪ್ರಾರಂಭದಿಂದ ಕೊನೆಯವರೆಗೆ ಹೇಳಿದನು. \c 32 \q1 \v 1 ಆಕಾಶವೇ, ಕಿವಿಗೊಡು. ನಾನು ಮಾತನಾಡುತ್ತೇನೆ. \q2 ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು. \q1 \v 2 ನನ್ನ ಬೋಧನೆ ಮಳೆಯಂತೆ ಸುರಿಯುವುದು. \q2 ನನ್ನ ಮಾತು ಮಂಜಿನಂತೆಯೂ, \q1 ಹುಲ್ಲಿನ ಮೇಲೆ ಬೀಳುವ \q2 ವೃಷ್ಟಿಗಳ ಹಾಗೆಯೂ ಬೀಳುವುದು. \b \q1 \v 3 ಏಕೆಂದರೆ ಯೆಹೋವ ದೇವರ ಹೆಸರನ್ನು ನಾನು ಸಾರುತ್ತೇನೆ. \q2 ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ. \q1 \v 4 ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. \q2 ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. \q1 ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, \q2 ನೀತಿವಂತರೂ ಯಥಾರ್ಥರೂ ಆದ ದೇವರು. \b \q1 \v 5 ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು. \q2 ಅವರು ಮೂರ್ಖರಾದ ವಕ್ರ ಸಂತತಿ. \q1 \v 6 ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? \q2 ಜ್ಞಾನವಿಲ್ಲದ ಬುದ್ಧಿಹೀನ ಜನರೇ, \q1 ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? \q2 ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ? \b \q1 \v 7 ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. \q2 ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. \q1 ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. \q2 ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು. \q1 \v 8 ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, \q2 ಅವರು ಮಾನವರನ್ನು ವಿಂಗಡಿಸುವಾಗಲೂ, \q1 ಇಸ್ರಾಯೇಲರ ಲೆಕ್ಕದ ಪ್ರಕಾರ \q2 ಜನರ ಮೇರೆಗಳನ್ನು ಗುರುತಿಸಿಕೊಂಡರು. \q1 \v 9 ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. \q2 ಯಾಕೋಬ್ಯರೇ ದೇವರ ಸೊತ್ತಿನ ಪಾಲು. \b \q1 \v 10 ದೇವರು ಬರಿದಾದ ಮರುಭೂಮಿಯಲ್ಲಿ \q2 ಇಸ್ರಾಯೇಲರನ್ನು ಕಂಡು ನಡೆಸಿದರು. \q1 ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, \q2 ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು. \q1 \v 11 ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ, \q2 ಅವುಗಳ ಮೇಲೆ ರೆಕ್ಕೆಯನ್ನಾಡಿಸಿ, \q1 ತನ್ನ ರೆಕ್ಕೆಗಳನ್ನು ಚಾಚಿ, \q2 ಅವುಗಳನ್ನು ತೆಗೆದುಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ, \q1 \v 12 ಯೆಹೋವ ದೇವರು ಮಾತ್ರವೇ ಇಸ್ರಾಯೇಲರನ್ನು ನಡೆಸಿಕೊಂಡು ಬಂದರು. \q2 ಅನ್ಯದೇವರು ಯಾರೂ ಇಸ್ರಾಯೇಲರ ಸಂಗಡ ಇರಲಿಲ್ಲ. \b \q1 \v 13 ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ, \q2 ಅವರಿಗೆ ವ್ಯವಸಾಯ ವೃದ್ಧಿಯನ್ನುಂಟುಮಾಡಿ, \q1 ಬಂಡೆಯಿಂದ ಜೇನೂ, \q2 ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದರು. \q1 \v 14 ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, \q2 ಕುರಿಮರಿಗಳ ಕೊಬ್ಬಿನ ಸಂಗಡ \q1 ಬಾಷಾನಿನ ಟಗರುಗಳನ್ನೂ \q2 ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. \q1 ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ. \b \q1 \v 15 ಯೆಶುರೂನು\f + \fr 32:15 \fr*\fq ಯೆಶುರೂನ \fq*\ft ಎಂದರೆ \ft*\fqa ಯಥಾರ್ಥವಂತ \fqa*\ft ಅಥವಾ ಇಸ್ರಾಯೇಲನ್ನು ಉಲ್ಲೇಖಿಸುವ ಪ್ರೀತಿಯ ಪದವಾಗಿದೆ\ft*\f* ಎಂಬ ಇಸ್ರಾಯೇಲರು ಕೊಬ್ಬಿ ಹೋದರು. \q2 ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. \q1 ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, \q2 ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು. \q1 \v 16 ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. \q2 ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು. \q1 \v 17 ದೇವರಿಗೆ ಅಲ್ಲ, ದೆವ್ವಗಳಿಗೆ, \q2 ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, \q2 ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, \q2 ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು. \q1 \v 18 ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ, \q2 ನಿಮ್ಮನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿರಿ. \b \q1 \v 19 ಯೆಹೋವ ದೇವರು ಅದನ್ನು ನೋಡಿ ಬೇಸರದಿಂದ \q2 ತಮ್ಮ ಪುತ್ರಪುತ್ರಿಯರನ್ನು ದಂಡಿಸಿದರು. \q1 \v 20 ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, \q2 ಅವರ ಅಂತ್ಯವು ಏನೆಂದು ನೋಡುವೆನು. \q1 ಅವರು ಮೂರ್ಖ ಸಂತತಿಯೇ. \q2 ನಂಬಿಕೆಯಿಲ್ಲದ ಮಕ್ಕಳೇ. \q1 \v 21 ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. \q2 ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. \q1 ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. \q2 ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. \q1 \v 22 ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, \q2 ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, \q1 ಅದರ ಫಲವನ್ನೂ ತಿಂದು ಬಿಟ್ಟು, \q2 ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು. \b \q1 \v 23 “ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. \q2 ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. \q1 \v 24 ಅವರು ಹಸಿವೆಯಿಂದ ಬಳಲಿ ಹೋಗುವರು, \q2 ಜ್ವಾಲೆಯಿಂದಲೂ ಕಠಿಣ ವ್ಯಾಧಿಯಿಂದಲೂ ಬೀಳುವರು. \q1 ಕಾಡುಮೃಗಗಳನ್ನೂ ಧೂಳಿನಲ್ಲಿರುವ ವಿಷಸರ್ಪಗಳನ್ನೂ \q2 ಅವರಿಗೆ ವಿರೋಧವಾಗಿ ಕಳುಹಿಸುವೆನು. \q1 \v 25 ಮನೆಯ ಹೊರಗೆ ಖಡ್ಗವೂ \q2 ಒಳಗೆ ಭಯವೂ ಇವರಲ್ಲಿರುವುವು. \q1 ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ \q2 ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು. \q1 \v 26 ನಾನು ಅವರನ್ನು ಚದರಿಸಿಬಿಡುವೆನು. \q2 ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು. \q1 \v 27 ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, \q2 ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, \q1 ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ \q2 ಆದ್ದರಿಂದ ನಾನು ಹಿಂತಗೆದುಕೊಂಡೆನು.” \b \q1 \v 28 ಏಕೆಂದರೆ ಇಸ್ರಾಯೇಲರು ಆಲೋಚನೆ ಇಲ್ಲದ ಜನಾಂಗವೇ. \q2 ಅವರಲ್ಲಿ ವಿವೇಕವಿಲ್ಲ. \q1 \v 29 ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, \q2 ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು. \q1 \v 30 ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, \q2 ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, \q1 ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? \q2 ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು? \q1 \v 31 ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ. \q2 ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ. \q1 \v 32 ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, \q2 ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. \q1 ಅವರ ಹಣ್ಣುಗಳು, ವಿಷದ ಹಣ್ಣುಗಳು, \q2 ಆ ಹಣ್ಣುಗಳ ಗೊಂಚಲು ಕಹಿಯಾಗಿವೆ. \q1 \v 33 ಅವರ ದ್ರಾಕ್ಷಾರಸವು ಸರ್ಪಗಳ ವಿಷವೂ, \q2 ಹಾವುಗಳ ಕ್ರೂರ ವಿಷವೂ ಆಗಿದೆ. \b \q1 \v 34 “ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ? \q2 ಇದನ್ನು ನಾನು ಮುದ್ರಿಸಿದ್ದಲ್ಲವೋ? \q1 \v 35 ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. \q2 ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. \q1 ಅವರ ವಿನಾಶದ ದಿವಸ ಸಮೀಪವಾಗಿದೆ. \q2 ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.” \b \q1 \v 36 ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. \q2 ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, \q1 ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, \q2 ತಮ್ಮ ಸೇವಕರಿಗೋಸ್ಕರ ಕರುಣಿಸುವರು. \q1 \v 37 ಆಗ ಯೆಹೋವ ದೇವರು ಹೀಗನ್ನುವರು: \q2 “ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, \q1 \v 38 ಅವರ ಬಲಿಗಳ ಕೊಬ್ಬನ್ನು ತಿಂದಂಥ, \q2 ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ದೇವರುಗಳು ಎಲ್ಲಿ? \q1 ಈಗ ಆ ದೇವರುಗಳು ಎದ್ದು ನಿಮಗೆ ಸಹಾಯ ಮಾಡಲಿ, \q2 ನಿಮಗೋಸ್ಕರ ಕಾವಲಾಗಲಿ. \b \q1 \v 39 “ನಾನು ಇರುವಾತನೇ ಆಗಿದ್ದೇನೆ! \q2 ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. \q1 ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, \q2 ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. \q2 ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. \q1 \v 40 ಆಕಾಶದ ಕಡೆ ನನ್ನ ಕೈಯೆತ್ತಿ, \q2 ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ. \q1 \v 41 ನಾನು ಮಿಂಚುವ ಖಡ್ಗವನ್ನು ಹದಮಾಡಿ, \q2 ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, \q1 ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, \q2 ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು. \q1 \v 42 ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, \q2 ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ \q1 ನನ್ನ ಬಾಣಗಳು ಅಮಲೇರುವುದು. \q2 ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.” \b \q1 \v 43 ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. \q2 ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. \q1 ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, \q2 ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು. \p \v 44 ಆಗ ಮೋಶೆಯು ನೂನನ ಮಗನಾದ ಹೋಶೇಯನ\f + \fr 32:44 \fr*\fq ಹೋಶೇಯ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಯೆಹೋಶುವ \fqa*\ft ಎಂದು ಕರೆಯಲಾಗಿದೆ\ft*\f* ಸಂಗಡ ಬಂದು, ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು. \v 45 ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದ ತರುವಾಯ ಅವನು ಅವರಿಗೆ, \v 46 “ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ. \v 47 ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು. \s1 ನೆಬೋ ಬೆಟ್ಟದ ಮೇಲೆ ಮೋಶೆಯ ಮರಣ \p \v 48 ಆ ದಿವಸವೇ ಯೆಹೋವ ದೇವರು ಮೋಶೆಗೆ, \v 49 “ನೀನು ಈ ಅಬಾರೀಮ್ ಬೆಟ್ಟದ ಮೇಲೆ ಅಂದರೆ, ಮೋವಾಬ್ ದೇಶದಲ್ಲಿ ಯೆರಿಕೋವಿಗೆ ಎದುರಾಗಿ ಇರುವ ನೆಬೋ ಪರ್ವತದ ಮೇಲೆ ಏರಿ ಹೋಗು. ನಾನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವ ಕಾನಾನ್ ದೇಶವನ್ನು ನೋಡು. \v 50 ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು, ತನ್ನ ಜನರ ಬಳಿಗೆ ಸೇರಿದ ಹಾಗೆ, ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು, ನಿನ್ನ ಜನರ ಬಳಿಗೆ ಸೇರಬೇಕು. \v 51 ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ. \v 52 ಆದುದರಿಂದ, ನೀನು ಆ ದೇಶವನ್ನು ದೂರದಿಂದ ನೋಡುವೆ, ಆದರೆ ನಾನು ಇಸ್ರಾಯೇಲರಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವುದಿಲ್ಲ,” ಎಂದು ಹೇಳಿದರು. \c 33 \s1 ಮೋಶೆ ಗೋತ್ರಗಳನ್ನು ಆಶೀರ್ವದಿಸಿದ್ದು \p \v 1 ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ: \q1 \v 2 “ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, \q2 ಸೇಯೀರಿನಿಂದ ಅವರ ಮೇಲೆ ಉದಯಿಸಿದರು. \q2 ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. \q1 ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ \q2 ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು. \q1 \v 3 ನಿಶ್ಚಯವಾಗಿ ನೀವು ಜನರನ್ನು ಪ್ರೀತಿಸುತ್ತೀರಿ. \q2 ಪರಿಶುದ್ಧ ಜನರು ನಿಮ್ಮ ಆಶ್ರಯದಲ್ಲಿಯೇ ಇದ್ದಾರೆ. \q1 ನಿಮ್ಮ ಪಾದಗಳಿಗೆ ಎಲ್ಲರೂ ಎರಗುವರು. \q2 ನಿಮ್ಮಿಂದಲೇ ಬೋಧನೆ ಪಡೆಯುವರು. \q1 \v 4 ಯಾಕೋಬನ ಸಂತತಿಯವರಾದ ನಮಗೆ, \q2 ಮೋಶೆಯು ನಿಯಮವನ್ನು ಸೊತ್ತಾಗಿ ಕೊಟ್ಟಿದ್ದಾನೆ. \q1 \v 5 ಇಸ್ರಾಯೇಲರ ಮುಖ್ಯಸ್ಥರೂ \q2 ಅವರ ಗೋತ್ರಗಳು ಒಟ್ಟಾಗಿ ಸೇರಿಬಂದಾಗ, \q2 ದೇವರೇ ಯೆಶುರೂನಿನ ಮೇಲೆ ಅರಸನಾಗಿದ್ದರು. \b \q1 \v 6 “ರೂಬೇನನು ಸಾಯದೆ ಬದುಕಲಿ. \q2 ಅವನ ಜನರು ಕಡಿಮೆಯಾಗದಿರಲಿ.” \p \v 7 ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು: \q1 “ಯೆಹೋವ ದೇವರೇ, ಯೆಹೂದನ ಮೊರೆಯನ್ನಾಲಿಸಿ, \q2 ಅವರನ್ನು ಅವರ ಬಂಧುಗಳೊಡನೆ ಸೇರಿಸಿರಿ. \q1 ಅವನ ಸ್ವಂತ ಕೈಗಳೇ ತನ್ನ ಹಕ್ಕು ಬಾಧ್ಯತೆಗಳನ್ನು ಕಾದಿರಿಸುತ್ತವೆ. \q2 ಅವನ ಶತ್ರುಗಳಿಂದ ಅವನನ್ನು ತಪ್ಪಿಸಿರಿ.” \p \v 8 ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: \q1 “ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು \q2 ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. \q1 ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. \q2 ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ. \q1 \v 9 ಅವನು ತನ್ನ ತಂದೆತಾಯಿಗಳ ಬಗ್ಗೆ, \q2 ‘ಅವರಿಗಾಗಿ ನನಗೆ ಗೌರವವಿಲ್ಲ.’ \q1 ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ \q2 ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, \q1 ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು \q2 ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ. \q1 \v 10 ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, \q2 ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. \q1 ನಿಮ್ಮ ಮುಂದೆ ಧೂಪವನ್ನೂ \q2 ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು. \q1 \v 11 ಯೆಹೋವ ದೇವರೇ, ಅವನ ಎಲ್ಲ ಕೌಶಲ್ಯಗಳನ್ನು ಆಶೀರ್ವದಿಸಿರಿ. \q2 ಅವನ ಕೈಕೆಲಸವನ್ನು ಅಂಗೀಕರಿಸಿರಿ. \q1 ಅವನಿಗೆ ವಿರೋಧವಾಗಿ ಏಳುವವರ ನಡು ಮುರಿದು ಹೋಗಲಿ. \q2 ಅವನನ್ನು ದ್ವೇಷಿಸುವವರು ತಿರುಗಿ ಏಳದ ಹೋಗಲಿ.” \p \v 12 ಮೋಶೆಯು ಬೆನ್ಯಾಮೀನನ ವಿಷಯವಾಗಿ ಹೇಳಿದ್ದೇನೆಂದರೆ: \q1 “ಯೆಹೋವ ದೇವರಿಗೆ ಪ್ರಿಯನಾದ ಇವನು ದೇವರ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುವನು. \q2 ದೇವರು ಅವನಿಗೆ ದಿನವೆಲ್ಲಾ ಆಸರೆಯಾಗಿರುವರು. \q2 ಅವನು ದೇವರ ಭುಜಗಳ ನಡುವೆ ವಿಶ್ರಾಂತಿ ಪಡೆಯುವನು.” \p \v 13 ಯೋಸೇಫನ ವಿಷಯವಾಗಿ ಹೇಳಿದ್ದೇನೆಂದರೆ: \q1 “ಅವನ ದೇಶವು \q2 ಆಕಾಶದ ಅಮೂಲ್ಯವಾದ ಮಂಜಿನಿಂದಲೂ, \q2 ಕೆಳಗೆ ಸಾಗರ ಸೆಲೆಯಿಂದಲೂ ಯೆಹೋವ ದೇವರ ಆಶೀರ್ವಾದ ಹೊಂದಲಿ. \q1 \v 14 ಸೂರ್ಯನು ತರುವ ಉತ್ಕೃಷ್ಟವಾದವುಗಳಿಂದಲೂ \q2 ಚಂದ್ರನು ದಯಪಾಲಿಸುವ ಅಮೂಲ್ಯವಾದವುಗಳಿಂದಲೂ \q1 \v 15 ಪುರಾತನ ಪರ್ವತಗಳಿಂದ ದೊರೆಯುವ ಅತ್ಯುತ್ತಮ ಕಾಣಿಕೆಗಳಿಂದಲೂ \q2 ಶಾಶ್ವತ ಪರ್ವತಗಳಿಂದ ಸಿಗುವ ಒಳಿತುಗಳಿಂದಲೂ, \q1 \v 16 ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ \q2 ಸುಡುವ ಪೊದೆಯಲ್ಲಿ ವಾಸವಾಗಿದ್ದ ದೇವರ ದಯೆಯೂ \q1 ಯೋಸೇಫನ ತಲೆಯ ಮೇಲೆ ನೆಲೆಗೊಳ್ಳಲಿ. \q2 ಅವನು ತನ್ನ ಸಹೋದರರಲ್ಲಿ ರಾಜಕುಮಾರನಾಗಿರುವನು. \q2 ಕುಲದವರ ಶಿರಸ್ಸಾಗಿರುವ ಅವನ ಮೇಲೆ ಆಶೀರ್ವಾದ ಉಂಟಾಗಲಿ. \q1 \v 17 ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, \q2 ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. \q1 ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು \q2 ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. \q1 ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. \q2 ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.” \p \v 18 ಮೋಶೆಯು ಜೆಬುಲೂನರ ವಿಷಯವಾಗಿ ಹೇಳಿದ್ದೇನೆಂದರೆ: \q1 “ಜೆಬೂಲೂನನೇ, ನಿನ್ನ ಪ್ರಯಾಣದಲ್ಲಿ ಸಂತೋಷಪಡು. \q2 ಇಸ್ಸಾಕಾರನೇ, ನಿನ್ನ ಗುಡಾರಗಳಲ್ಲಿ ಸಂತೋಷಪಡು. \q1 \v 19 ಅವರು ಜನರನ್ನು ಬೆಟ್ಟಕ್ಕೆ ಕರೆಯಿಸಿ, \q2 ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. \q1 ಏಕೆಂದರೆ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ \q2 ಮರಳಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು.” \p \v 20 ಮೋಶೆಯು ಗಾದನ ವಿಷಯವಾಗಿ ಹೇಳಿದ್ದೇನೆಂದರೆ: \q1 “ಗಾದನ ರಾಜ್ಯವನ್ನು ವಿಸ್ತಾರ ಮಾಡಿದ ದೇವರು ಸ್ತುತಿಹೊಂದಲಿ. \q2 ಅವನು ಸಿಂಹದಂತೆ ಜೀವಿಸಿ ತೋಳನ್ನೂ \q2 ಶಿರಸ್ಸನ್ನೂ ಮುರಿಯುವನು. \q1 \v 21 ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು. \q2 ನಾಯಕರ ಪಾಲು ಅವನಿಗಾಗಿ ದೊರಕಿತು. \q1 ಅವನು ಜನರ ಮುಖ್ಯಸ್ಥರ ಸಂಗಡ ಬಂದು, \q2 ಇಸ್ರಾಯೇಲರೊಡನೆ ಯೆಹೋವ ದೇವರ ನೀತಿಯನ್ನೂ \q2 ದೇವರ ನ್ಯಾಯಗಳನ್ನೂ ಸ್ಥಾಪಿಸಿದನು.” \p \v 22 ಮೋಶೆಯು ದಾನನ ವಿಷಯವಾಗಿ ಹೇಳಿದ್ದೇನೆಂದರೆ: \q1 “ದಾನನು ಬಾಷಾನಿನಿಂದ ಹಾರಿಬರುವ, \q2 ಪ್ರಾಯದ ಸಿಂಹದಂತಿದ್ದಾನೆ.” \p \v 23 ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ್ದೇನೆಂದರೆ: \q1 “ನಫ್ತಾಲಿಯೇ, ಯೆಹೋವ ದೇವರ ಅನುಗ್ರಹದಿಂದ ತೃಪ್ತನಾದವನೇ, \q2 ದೇವರ ಆಶೀರ್ವಾದದಿಂದ ತುಂಬಿದವನೇ; \q2 ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸೊತ್ತಾಗಲಿ.” \p \v 24 ಮೋಶೆ ಆಶೇರನ ವಿಷಯವಾಗಿ ಹೇಳಿದ್ದೇನೆಂದರೆ: \q1 “ಪುತ್ರರಲ್ಲಿಯೇ ಶ್ರೇಷ್ಠನಾದ ಆಶೇರನು ಭಾಗ್ಯ ಹೊಂದಲಿ. \q2 ಅವನ ಸಹೋದರರು ಅವನನ್ನು ಮೆಚ್ಚಿಕೊಳ್ಳಲಿ, \q2 ಎಣ್ಣೆಯಲ್ಲಿ ಪಾದಸ್ನಾನ ಮಾಡುವಂತಾಗಲಿ. \q1 \v 25 ನಿನ್ನ ದ್ವಾರಗಳ ಅಗುಳಿಗಳು ಕಬ್ಬಿಣದ ಮತ್ತು ಕಂಚಿನವುಗಳು ಆಗಿರಲಿ. \q2 ನಿನ್ನ ಜೀವಮಾನಕಾಲವೆಲ್ಲಾ ನಿನಗೆ ಬಲವಿರುವುದು. \b \q1 \v 26 “ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. \q2 ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ \q2 ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ. \q1 \v 27 ನಿತ್ಯ ದೇವರು ನಿನ್ನ ಆಶ್ರಯವು. \q2 ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. \q1 ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, \q2 ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು. \q1 \v 28 ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, \q2 ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, \q1 ಯಾಕೋಬನ ವಂಶದವರು ಸುರಕ್ಷಿತರಾದರು. \q2 ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು. \q1 \v 29 ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. \q2 ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ \q2 ನಿಮ್ಮಂತೆ ಯಾರಿದ್ದಾರೆ? \q1 ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. \q2 ದೇವರು ನಿಮ್ಮ ಮಹಿಮಾ ಖಡ್ಗ. \q1 ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು \q2 ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.” \c 34 \s1 ಮೋಶೆಯ ಮರಣ \p \v 1 ಆಗ ಮೋಶೆ ಮೋವಾಬಿನ ಬಯಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿಹೋದನು. ಅಲ್ಲಿ ಯೆಹೋವ ದೇವರು ಅವನಿಗೆ ದೇಶವನ್ನೆಲ್ಲಾ ದಾನಿನವರೆಗಿರುವ ಗಿಲ್ಯಾದನ್ನೂ \v 2 ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯೀಮ್, ಮನಸ್ಸೆಯ ದೇಶವನ್ನೂ, ಸಮುದ್ರದ ಕಟ್ಟಕಡೆಯವರೆಗಿರುವ ಸಮಸ್ತ ಯೆಹೂದ ದೇಶವನ್ನೂ, \v 3 ನೆಗೆವನ್ನೂ ಖರ್ಜೂರಗಳ ಪಟ್ಟಣವಾದ ಯೆರಿಕೋ ಕಣಿವೆಯ ಬಯಲನ್ನೂ, ಚೋಗರ್ ಊರಿನ ತನಕ ತೋರಿಸಿದರು. \v 4 ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು. \p \v 5 ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು. \v 6 ದೇವರು ಅವನನ್ನು ಮೋವಾಬಿನ ದೇಶದ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೂಣಿಟ್ಟರು. ಆದರೆ ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ಗೊತ್ತಿಲ್ಲ. \v 7 ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ. ಅವನ ಬಲ ಕುಂದಿಹೋಗಿರಲಿಲ್ಲ. \v 8 ಇಸ್ರಾಯೇಲರು ಮೋವಾಬಿನ ಬಯಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ದುಃಖಿಸಿದರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಸಂತಾಪದ ದಿವಸಗಳು ಮುಗಿದವು. \p \v 9 ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು. \p \v 10 ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ. \v 11 ಈಜಿಪ್ಟಿನಲ್ಲಿ ಫರೋಹನ ಮುಂದೆಯೂ, ಅವನ ಎಲ್ಲಾ ಅಧಿಕಾರಿಗಳ ಮುಂದೆಯೂ, ಜನರ ಮುಂದೆಯೂ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ಮಾಡುವುದಕ್ಕೆ ಯೆಹೋವ ದೇವರು ಮೋಶೆಯನ್ನು ಕಳುಹಿಸಿದ್ದರು. \v 12 ಇಸ್ರಾಯೇಲರ ಮುಂದೆ ಮೋಶೆಯು ನಡೆಸಿದ ವಿಶೇಷವಾದ ಕಾರ್ಯಗಳನ್ನು ಮತ್ತು ಭುಜಪರಾಕ್ರಮವನ್ನು ಯಾರೂ ಎಂದೂ ತೋರಿಸಿರಲಿಲ್ಲ ಅಥವಾ ಮಾಡಿರಲ್ಲ.