\id LEV - Biblica® Open Kannada Contemporary Version \ide UTF-8 \h ಯಾಜಕಕಾಂಡ \toc1 ಯಾಜಕಕಾಂಡ \toc2 ಯಾಜಕಕಾಂಡ \toc3 ಯಾಜಕ \mt1 ಯಾಜಕಕಾಂಡ \c 1 \s1 ದಹನಬಲಿ \p \v 1 ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ, \v 2 ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “ ‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ. \p \v 3 “ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು. \v 4 ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು. \v 5 ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು. \v 6 ಅವನು ಆ ದಹನಬಲಿಯ ಚರ್ಮವನ್ನು ಸುಲಿದು, ಅದರ ದೇಹವನ್ನು ಕಡಿದು, ತುಂಡುತುಂಡಾಗಿ ಮಾಡಬೇಕು. \v 7 ಯಾಜಕನಾದ ಆರೋನನ ಪುತ್ರರು ಬಲಿಪೀಠದ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. \v 8 ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು. \v 9 ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು. \p \v 10 “ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು. \v 11 ಅವನು ಅದನ್ನು ಬಲಿಪೀಠದ ಉತ್ತರದ ಕಡೆಯಲ್ಲಿ ಯೆಹೋವ ದೇವರ ಮುಂದೆ ವಧಿಸಬೇಕು. ಇದಲ್ಲದೆ ಯಾಜಕರಾದ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು. \v 12 ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ, ಯಾಜಕನು ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು. \v 13 ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು. \p \v 14 “ ‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು. \v 15 ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು. \v 16 ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು. \v 17 ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು. \c 2 \s1 ಧಾನ್ಯ ಸಮರ್ಪಣೆ \p \v 1 “ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. \v 2 ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು. \v 3 ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು. \p \v 4 “ ‘ನೀನು ಒಲೆಯಲ್ಲಿ ಸುಟ್ಟ ಧಾನ್ಯ ಸಮರ್ಪಣೆಯನ್ನು ಕಾಣಿಕೆಯಾಗಿ ತರುವುದಾದರೆ, ಅದು ಹುಳಿಯಿಲ್ಲದ ಮತ್ತು ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. \v 5 ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು. \v 6 ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ. \v 7 ನಿನ್ನ ಕಾಣಿಕೆಯು ತವೆಯಲ್ಲಿ ಬೇಯಿಸಿದ ಧಾನ್ಯವಾಗಿದ್ದರೆ, ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು. \v 8 ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು. \v 9 ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು. \v 10 ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು. \p \v 11 “ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು. \v 12 ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು. \v 13 ನಿನ್ನ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಉಪ್ಪಿನಲ್ಲಿ ಬೆರಕೆಯಾಗಿರಬೇಕು. ನಿನ್ನ ದೇವರ ಒಡಂಬಡಿಕೆಯ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು. ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು. \p \v 14 “ ‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು. \v 15 ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ. \v 16 ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ. \c 3 \s1 ಸಮಾಧಾನದ ಸಮರ್ಪಣೆ \p \v 1 “ ‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು. \v 2 ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು. \v 3 ಅವನು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, \v 4 ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಯಲ್ಲಿಯ ಅವುಗಳ ಮೇಲಿರುವ ಕೊಬ್ಬನ್ನೂ, ಮೂತ್ರ ಜನಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಯೆಹೋವ ದೇವರಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. \v 5 ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು. \p \v 6 “ ‘ಅವನ ಕಾಣಿಕೆಯು ಸಮಾಧಾನದ ಬಲಿಯಾಗಿ, ಅದು ಯೆಹೋವ ದೇವರಿಗೆ ತನ್ನ ಆಡುಕುರಿಗಳಿಂದಾದ ಕಾಣಿಕೆಯಾಗಿದ್ದರೆ, ಗಂಡಾಗಲಿ, ಹೆಣ್ಣಾಗಲಿ ಕಳಂಕರಹಿತವಾದದ್ದನ್ನು ಅವನು ಸಮರ್ಪಿಸಬೇಕು. \v 7 ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವುದಾದರೆ, ಅದನ್ನು ಅವನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. \v 8 ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು. \v 9 ಸಮಾಧಾನದ ಬಲಿಗಾಗಿ ಅದರ ಇಡೀ ಹಿಂಭಾಗವನ್ನೂ, ಅದರ ಕೊಬ್ಬನ್ನೂ, ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ, \v 10 ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ, ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು. \v 11 ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು. \p \v 12 “ ‘ಸಮರ್ಪಣೆಯು ಮೇಕೆಯಾಗಿದ್ದರೆ, ಅದನ್ನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. \v 13 ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ಆಗ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು. \v 14 ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ, \v 15 ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು. \v 16 ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ. \p \v 17 “ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು. \c 4 \s1 ಪಾಪ ಪರಿಹಾರದ ಬಲಿ \p \v 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 2 “ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು: \p \v 3 “ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು. \v 4 ಅವನು ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿಗೆ ತರಬೇಕು. ತನ್ನ ಕೈಯನ್ನು ಆ ಹೋರಿಯ ತಲೆಯ ಮೇಲಿಟ್ಟು, ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. \v 5 ಆಗ ಅಭಿಷಿಕ್ತನಾದ ಯಾಜಕನು ಆ ಹೋರಿಯ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಳಿಗೆ ತರಬೇಕು. \v 6 ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು. \v 7 ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು. \v 8 ಅವನು ಪಾಪ ಪರಿಹಾರದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, \v 9 ಎರಡು ಮೂತ್ರಪಿಂಡಗಳನ್ನು ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ, ಮೂತ್ರಪಿಂಡದೊಂದಿಗೂ ಕಾಳಿಜದ ಉತ್ತಮ ಭಾಗವನ್ನೂ ಅವನು ತೆಗೆಯಬೇಕು. \v 10 ಸಮಾಧಾನದ ಬಲಿಯನ್ನು ಹೋರಿಯಿಂದ ತೆಗೆದಂತೆಯೇ ತೆಗೆಯಬೇಕು. ಯಾಜಕನು ದಹನಬಲಿಯ ಪೀಠದ ಮೇಲೆ ಅವುಗಳನ್ನು ಸುಡಬೇಕು. \v 11 ಆ ಹೋರಿಯ ಚರ್ಮವನ್ನು, ಅದರ ಎಲ್ಲಾ ಮಾಂಸವನ್ನು, ಅದರ ತಲೆ, ಅದರ ಕಾಲುಗಳು, ಅದರ ಕರುಳುಗಳು, ಅದರ ಸಗಣಿಯೊಂದಿಗೆ \v 12 ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು. \p \v 13 “ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ \v 14 ಅವರು ಮಾಡಿದ ಪಾಪವು ಗೊತ್ತಾದಾಗ, ಆ ಪಾಪಕ್ಕಾಗಿ ಸಮಾಜವು ಒಂದು ಎಳೆಯ ಹೋರಿಯನ್ನು ದೇವದರ್ಶನದ ಗುಡಾರದ ಮುಂದೆ ಪಾಪ ಪರಿಹಾರದ ಬಲಿಯಾಗಿ ತರಬೇಕು. \v 15 ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. \v 16 ಅಭಿಷಿಕ್ತನಾದ ಯಾಜಕನು ಆ ಹೋರಿಯ ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗೆ ತಂದು, \v 17 ಅದರಲ್ಲಿ ಬೆರಳನ್ನು ಅದ್ದಿ ಅದನ್ನು ಯೆಹೋವ ದೇವರ ಮುಂದೆ ಅಂದರೆ ತೆರೆಯ ಮುಂದೆ ಏಳು ಸಾರಿ ಚಿಮುಕಿಸಬೇಕು. \v 18 ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು. \v 19 ಅವನು ಅದರ ಎಲ್ಲಾ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು. \v 20 ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು. \v 21 ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು. \p \v 22 “ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ, \v 23 ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದುಬಂದರೆ, ಅವನು ಬಲಿಗಾಗಿ ಹೋತಗಳಲ್ಲಿ ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು. \v 24 ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು. \v 25 ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು. \v 26 ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು. \p \v 27 “ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ, \v 28 ಇಲ್ಲವೆ ಅವರು ಮಾಡಿದ ಪಾಪವು ಅವರಿಗೆ ತಿಳಿದುಬಂದರೆ, ಅವರು ಪಾಪ ಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು. \v 29 ಅವರು ತಮ್ಮ ಕೈಯನ್ನು ಪಾಪದ ಬಲಿಯ ಮೇಲಿಟ್ಟು, ಆ ಪಾಪ ಪರಿಹಾರದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು. \v 30 ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು. \v 31 ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು. \p \v 32 “ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು. \v 33 ಅವರು ಪಾಪ ಪರಿಹಾರದ ಬಲಿಯ ತಲೆಯ ಮೇಲೆ ತಮ್ಮ ಕೈಯನ್ನು ಇಟ್ಟು, ದೋಷಪರಿಹಾರ ಬಲಿಯಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. \v 34 ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು. \v 35 ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು. \c 5 \p \v 1 “ ‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. \p \v 2 “ ‘ಇಲ್ಲವೆ, ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಇವುಗಳ ಹೆಣವಾಗಲಿ, ಅಶುದ್ಧವಾದ ಹರಿದಾಡುವ ಕ್ರಿಮಿಗಳ ಹೆಣಗಳಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆ ಇದ್ದರೂ ಅವನು ಅಶುದ್ಧವಾಗಿದ್ದು ಅಪರಾಧಿಯಾಗಿರುವನು. \v 3 ಇಲ್ಲವೆ, ಅವನು ಮನುಷ್ಯನ ಅಶುದ್ಧತ್ವವನ್ನು ತಗಲಿದರೆ, ಮನುಷ್ಯನನ್ನು ಅಶುದ್ಧಪಡಿಸುವ ಯಾವುದೇ ಅಶುದ್ಧತ್ವವಾಗಿದ್ದರೂ ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಅವನು ಅಪರಾಧಿಯಾಗಿರುವನು. \v 4 ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು. \v 5 ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ, \v 6 ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. \p \v 7 “ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು. \v 8 ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು. \v 9 ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು. \v 10 ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು. \p \v 11 “ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ. \v 12 ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು. \v 13 ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ” \s1 ಪ್ರಾಯಶ್ಚಿತ್ತ ಬಲಿ \p \v 14 ಯೆಹೋವ ದೇವರು ಮೋಶೆಗೆ, \v 15 “ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. \v 16 ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು. \p \v 17 “ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು. \v 18 ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು. \v 19 ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು. \c 6 \p \v 1 ಯೆಹೋವ ದೇವರು ಮೋಶೆಯೊಡನೆ ಮಾತನಾಡಿ, \v 2 “ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ, \v 3 ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ. \v 4 ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು. \v 5 ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ, ಪಡೆದವುಗಳೆಲ್ಲವುಗಳನ್ನೂ ಕೂಡಿಸಿ, ಹಿಂದಕ್ಕೆ ಕೊಡಬೇಕು. ಪ್ರಾಯಶ್ಚಿತ್ತದ ಬಲಿ ಅರ್ಪಿಸುವ ದಿನದಲ್ಲಿ, ಅದರ ಯಜಮಾನನು ಯಾವನಾಗಿರುವನೋ, ಅವನಿಗೆ ಕೊಡಬೇಕು. \v 6 ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು. \v 7 ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು. \s1 ದಹನಬಲಿ \p \v 8 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, \v 9 “ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು. \v 10 ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು. \v 11 ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. \v 12 ಬಲಿಪೀಠದ ಮೇಲೆ ಬೆಂಕಿಯು ಅದರೊಳಗೆ ಸುಡುತ್ತಲೇ ಇರಬೇಕು. ಅದು ಆರಿಹೋಗಿರಬಾರದು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆಯನ್ನು ಹಾಕಬೇಕು. ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಬಲಿ ಅರ್ಪಣೆಗಳ ಕೊಬ್ಬನ್ನು ಸುಡಬೇಕು. \v 13 ಬಲಿಪೀಠದ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು, ಅದು ಎಂದಿಗೂ ಆರಬಾರದು. \s1 ಧಾನ್ಯ ಸಮರ್ಪಣೆ \p \v 14 “ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು. \v 15 ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು. \v 16 ಅದರಲ್ಲಿ ಉಳಿದದ್ದನ್ನು ಆರೋನನೂ, ಅವನ ಪುತ್ರರೂ ತಿನ್ನಬೇಕು. ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು. ಅದನ್ನು ಅವರು ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು. \v 17 ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು. \v 18 ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’ ” ಎಂದರು. \p \v 19 ಯೆಹೋವ ದೇವರು ಮೋಶೆಯೊಡನೆ ಮಾತನಾಡಿ, \v 20 “ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು. \v 21 ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು. \v 22 ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು. \v 23 ಏಕೆಂದರೆ ಯಾಜಕನಿಗಾಗಿರುವ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಸಂಪೂರ್ಣವಾಗಿ ಸುಟ್ಟಿರಬೇಕು. ಅದನ್ನು ತಿನ್ನಬಾರದು,” ಎಂದರು. \s1 ಪಾಪಪರಿಹಾರ ಬಲಿ \p \v 24 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, \v 25 “ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು. \v 26 ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು. \v 27 ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು. \v 28 ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಅದನ್ನು ಒಂದು ಕಂಚಿನ ಪಾತ್ರೆಯಲ್ಲಿ ಬೇಯಿಸಿದ್ದಾದರೆ, ಅದನ್ನು ಬೆಳಗಿ, ನೀರಿನಿಂದ ತೊಳೆಯಬೇಕು. \v 29 ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು. \v 30 ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು. \c 7 \s1 ಪ್ರಾಯಶ್ಚಿತ್ತ ಬಲಿ \p \v 1 “ ‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು. \v 2 ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಪ್ರಾಯಶ್ಚಿತ್ತದ ಬಲಿಯನ್ನು ವಧಿಸಬೇಕು. ಅದರ ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು. \v 3 ಅದರ ಎಲ್ಲಾ ಕೊಬ್ಬನ್ನೂ, ಅಂದರೆ ಬಾಲದ ಕೊಬ್ಬನ್ನೂ ಕರುಳಿನ ಸುತ್ತಲಿರುವ ಕೊಬ್ಬನ್ನು, \v 4 ಬದಿಯಲ್ಲಿರುವ ಎರಡು ಮೂತ್ರ ಜನಕಾಂಗಗಳನ್ನೂ, ಅವುಗಳ ಮೇಲಿರುವ ಕೊಬ್ಬನ್ನೂ, ಪಕ್ಕೆಯ ಬದಿಯಲ್ಲಿಯ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದುಕೊಂಡು ಅರ್ಪಿಸಬೇಕು. \v 5 ಆಗ ಯಾಜಕನು ಅವುಗಳನ್ನು ಬೆಂಕಿಯಿಂದ ಯೆಹೋವ ದೇವರಿಗೆ ಸಮರ್ಪಿಸುವ ಬಲಿಪೀಠದ ಮೇಲೆ ಸುಡಬೇಕು. ಇದು ಪ್ರಾಯಶ್ಚಿತ್ತದ ಬಲಿಯಾಗಿದೆ. \v 6 ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು. \p \v 7 “ ‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು. \v 8 ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು. \v 9 ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು. \v 10 ಎಣ್ಣೆಯಿಂದ ಮಿಶ್ರಿತವಾದ ಮತ್ತು ಒಣಗಿದ್ದ ಪ್ರತಿಯೊಂದು ಧಾನ್ಯ ಸಮರ್ಪಣೆಯನ್ನೂ ಆರೋನನ ಪುತ್ರರು ಸರಿ ಸಮಾನವಾಗಿ ತೆಗೆದುಕೊಳ್ಳಬೇಕು. \s1 ಸಮಾಧಾನ ಬಲಿ \p \v 11 “ ‘ಅವನು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಸಮಾಧಾನದ ಬಲಿಗಳ ನಿಯಮವು ಇದೇ. \p \v 12 “ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು. \v 13 ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು. \v 14 ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಕಾಣಿಕೆಯನ್ನಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದ್ದಾಗಬೇಕು. \v 15 ಉಪಕಾರ ಸ್ತುತಿಗಾಗಿ ಅವನು ಸಮಾಧಾನ ಬಲಿಯ ಮಾಂಸವನ್ನು ಅರ್ಪಿಸಲಾದ ದಿನವೇ ತಿನ್ನಬೇಕು. ಅವನು ಅದರಲ್ಲಿ ಬೆಳಗಿನವರೆಗೆ ಯಾವುದನ್ನೂ ಉಳಿಸಬಾರದು. \p \v 16 “ ‘ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಯಿಚ್ಛೆಯಾದ ಸಮರ್ಪಣೆಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ಅದನ್ನು ತಿನ್ನಬೇಕು. ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬಹುದು. \v 17 ಆದರೆ ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿಯಿಂದ ಸುಡಬೇಕು. \v 18 ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು. \p \v 19 “ ‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು. \v 20 ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು. \v 21 ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’ ” ಎಂದರು. \s1 ಕೊಬ್ಬನ್ನೂ, ರಕ್ತವನ್ನೂ ನಿಷೇಧಿಸಿದ್ದು \p \v 22 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, \v 23 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ನೀವು ಎತ್ತು ಇಲ್ಲವೆ ಕುರಿ ಇಲ್ಲವೆ ಮೇಕೆಗಳ ಕೊಬ್ಬನ್ನು ತಿನ್ನಬಾರದು. \v 24 ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ, ಕಾಡುಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವುದಕ್ಕಾದರೂ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು. \v 25 ಏಕೆಂದರೆ ಮನುಷ್ಯರು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಬಲಿ, ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು. \v 26 ಇದಲ್ಲದೆ ನೀವು ಯಾವ ತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾಗಿರಲಿ, ಪ್ರಾಣಿಯದಾಗಿರಲಿ ನಿಮ್ಮ ಯಾವ ನಿವಾಸಗಳಲ್ಲಿಯೂ ತಿನ್ನಬಾರದು. \v 27 ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ, ಅಂಥವನನ್ನು ತನ್ನ ಜನರಿಂದ ತೆಗೆದುಹಾಕಬೇಕು.’ ” \s1 ಯಾಜಕರ ಪಾಲು \p \v 28 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, \v 29 “ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಯೆಹೋವ ದೇವರಿಗೆ ಸಮಾಧಾನ ಬಲಿಯನ್ನು ಅರ್ಪಿಸುವವನು, ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಯೆಹೋವ ದೇವರಿಗೆ ತರಬೇಕು. \v 30 ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು. \v 31 ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು. \v 32 ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು. \v 33 ಸಮಾಧಾನದ ಬಲಿಗಳ ರಕ್ತವನ್ನೂ, ಕೊಬ್ಬನ್ನೂ ಸಮರ್ಪಿಸುವ ಆರೋನನ ಪುತ್ರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ. \v 34 ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ” \p \v 35 ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ. \v 36 ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ. \p \v 37 ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ. \v 38 ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು. \c 8 \s1 ಆರೋನನ ಮಕ್ಕಳ ಯಾಜಕಾಭಿಷೇಕ \p \v 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, \v 2 “ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ. \v 3 ಎಲ್ಲಾ ಸಭೆಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು,” ಎಂದರು. \v 4 ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆಯೇ ಮಾಡಿದನು. ಸಭೆಯು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು. \p \v 5 ಮೋಶೆಯು ಸಭೆಗೆ, “ಯೆಹೋವ ದೇವರು ಮಾಡುವುದಕ್ಕೆ ಆಜ್ಞಾಪಿಸಿರುವುದು ಇದೇ.” \v 6 ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಬಂದು, ಸ್ನಾನಮಾಡಿಸಿ, \v 7 ಆರೋನನಿಗೆ ನಿಲುವಂಗಿಯನ್ನು ಹೊದಿಸಿ, ನಡುಕಟ್ಟಿನಿಂದ ಅವನ ನಡುವನ್ನು ಕಟ್ಟಿ, ಅವನಿಗೆ ಮೇಲಂಗಿಯನ್ನು ತೊಡಿಸಿ, ಅವನ ಮೇಲೆ ಏಫೋದನ್ನು ಹಾಕಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ, ಅದರಿಂದ ಅವನನ್ನು ಬಿಗಿದನು. \v 8 ಅವನ ಮೇಲೆ ಎದೆಪದಕವನ್ನು ಹಾಕಿ, ಆ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್ ಇವುಗಳನ್ನೂ ಸಹ ಹಾಕಿದನು. \v 9 ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು, ಆ ಮುಂಡಾಸದ ಮೇಲೆ ಅಂದರೆ ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ, ಪವಿತ್ರವಾದ ಕಿರೀಟವನ್ನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಟ್ಟನು. \p \v 10 ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರೊಳಗಿರುವುದೆಲ್ಲವನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು. \v 11 ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು. \v 12 ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು. \v 13 ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ, ಅವರ ನಡುಗಳನ್ನು ನಡುಕಟ್ಟುಗಳಿಂದ ಕಟ್ಟಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಹಾಕಿದನು. \p \v 14 ಪಾಪ ಪರಿಹಾರದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಪುತ್ರರೂ ಪಾಪ ಪರಿಹಾರದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. \v 15 ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು. \v 16 ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಬಲಿಪೀಠದ ಮೇಲೆ ಸುಟ್ಟನು. \v 17 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಹೋರಿಯ ಮಾಂಸವನ್ನೂ, ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು. \p \v 18 ದಹನಬಲಿಗಾಗಿ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. \v 19 ಅವನು ಅದನ್ನು ವಧಿಸಿದನು. ತರುವಾಯ ಮೋಶೆಯು ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು. \v 20 ಅವನು ಆ ಟಗರನ್ನು ತುಂಡುತುಂಡಾಗಿ ಮಾಡಿದನು. ಮೋಶೆಯು ತಲೆಯನ್ನು, ಆ ತುಂಡುಗಳನ್ನು, ಆ ಕೊಬ್ಬನ್ನು ಸುಟ್ಟನು. \v 21 ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು. \p \v 22 ಅವನು ಪ್ರತಿಷ್ಠೆಯ ಟಗರಾದ ಇನ್ನೊಂದು ಟಗರನ್ನು ತಂದನು. ಆಗ ಆರೋನನೂ, ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು. \v 23 ಮೋಶೆಯು ಅದನ್ನು ವಧಿಸಿ, ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು. \v 24 ಮೋಶೆಯು ಆರೋನನ ಪುತ್ರರನ್ನು ಕರೆತಂದು ಅವರ ಬಲಗಿವಿಯ ತುದಿಯ ಮೇಲೆಯೂ, ಅವರವರ ಬಲಗೈಯ ಹೆಬ್ಬೆರಳಿಗೂ, ಅವರವರ ಬಲಗಾಲಿನ ಹೆಬ್ಬೆಟ್ಟಿಗೂ ಆ ರಕ್ತವನ್ನು ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು. \v 25 ಅವನು ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಂಡನು. \v 26 ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ ತೆಗೆದುಕೊಂಡು, ಅವುಗಳನ್ನು ಕೊಬ್ಬಿನ ಮೇಲೆಯೂ, ಬಲಭುಜದ ಮೇಲೆಯೂ ಇಟ್ಟನು. \v 27 ಅದೆಲ್ಲವನ್ನೂ ಆರೋನನ ಕೈಗಳಿಗೆ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಯೆಹೋವ ದೇವರ ಮುಂದೆ ಸಮರ್ಪಣೆಗಾಗಿ ಅವುಗಳನ್ನು ನೈವೇದ್ಯ ಮಾಡಿಸಿದನು. \v 28 ಆಮೇಲೆ ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಅವುಗಳನ್ನು ಸುಟ್ಟನು. ಅವು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಸುಗಂಧಕರ ಪ್ರತಿಷ್ಠೆಯ ಬಲಿಯಾಗಿದ್ದವು. \v 29 ಮೋಶೆಯು ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಿದನು. ಏಕೆಂದರೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಷ್ಠಿತ ಟಗರು ಮೋಶೆಯ ಪಾಲಾಗಿತ್ತು. \p \v 30 ಮೋಶೆಯು ಅಭಿಷೇಕ ತೈಲವನ್ನೂ, ಬಲಿಪೀಠದ ಮೇಲಿರುವ ರಕ್ತವನ್ನೂ ತೆಗೆದುಕೊಂಡು, ಆರೋನನ ಮೇಲೆಯೂ, ಅವನ ಉಡುಪುಗಳ ಮೇಲೆಯೂ ಅವನೊಂದಿಗೆ ಅವನ ಪುತ್ರರ ಮೇಲೆಯೂ, ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು. ಆರೋನನನ್ನೂ, ಅವನ ಉಡುಪುಗಳನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಅವನ ಪುತ್ರರ ಉಡುಪುಗಳನ್ನೂ ಪವಿತ್ರ ಮಾಡಿದನು. \p \v 31 ಮೋಶೆಯು ಆರೋನನಿಗೂ, ಅವನ ಪುತ್ರರಿಗೂ, “ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ. ಅದನ್ನು ಪ್ರತಿಷ್ಠಿತ ಬುಟ್ಟಿಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು. ನಾನು ಆಜ್ಞಾಪಿಸಿ ಹೇಳಿದಂತೆ, ‘ಆರೋನನು ಮತ್ತು ಅವನ ಪುತ್ರರು ಅದನ್ನು ತಿನ್ನಬೇಕು.’ \v 32 ಮಾಂಸದಲ್ಲಿಯೂ, ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಡಬೇಕು. \v 33 ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಗೊಳ್ಳುವುದಕ್ಕೆ ಏಳು ದಿವಸ ಹಿಡಿಯುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು. \v 34 ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. \v 35 ಆದ್ದರಿಂದ ಏಳು ದಿನಗಳವರೆಗೆ ನೀವು ಸಾಯದಂತೆ ಹಗಲೂ ರಾತ್ರಿ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಆಜ್ಞೆಯನ್ನು ಕೈಗೊಳ್ಳಬೇಕು. ಏಕೆಂದರೆ ಹಾಗೆಯೇ ನನಗೆ ಅಪ್ಪಣೆಯಾಗಿದೆ,” ಎಂದನು. \p \v 36 ಹೀಗೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ, ಆರೋನನೂ, ಅವನ ಪುತ್ರರೂ ಮಾಡಿದರು. \c 9 \s1 ಆರೋನನು ಮಾಡಿದ ಪ್ರಥಮ ಯಜ್ಞ \p \v 1 ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಮತ್ತು ಇಸ್ರಾಯೇಲಿನ ಹಿರಿಯರನ್ನೂ ಕರೆದನು. \v 2 ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು. \v 3 ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ: ‘ಪಾಪ ಪರಿಹಾರದ ಬಲಿಗಾಗಿ ಹೋತವನ್ನೂ ದಹನಬಲಿಗಾಗಿ ಕಳಂಕರಹಿತ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿಯನ್ನೂ ತೆಗೆದುಕೊಳ್ಳಬೇಕು. \v 4 ಯೆಹೋವ ದೇವರ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಾಗಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆಹಾರದ ಬಲಿ ಎಣ್ಣೆಯೊಂದಿಗೆ ಬೆರೆತಿರಬೇಕು. ಏಕೆಂದರೆ ಈ ದಿನವೇ ಯೆಹೋವ ದೇವರು ನಿಮಗೆ ಕಾಣಿಸಿಕೊಳ್ಳುವರು,’ ” ಎಂದನು. \p \v 5 ಅವರು ಮೋಶೆಯು ಆಜ್ಞಾಪಿಸಿದವುಗಳನ್ನು ದೇವದರ್ಶನದ ಗುಡಾರದ ಮುಂದೆ ತಂದರು. ಸಮೂಹವೆಲ್ಲವೂ ಹತ್ತಿರ ಬಂದು ಯೆಹೋವ ದೇವರ ಮುಂದೆ ನಿಂತಿತು. \v 6 ಮೋಶೆ ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ ಸಂಗತಿಯು ಇದೇ. ಇದನ್ನು ನೀವು ಮಾಡಿರಿ. ಯೆಹೋವ ದೇವರ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವುದು,” ಎಂದನು. \p \v 7 ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು. \p \v 8 ಆದ್ದರಿಂದ ಆರೋನನು ಬಲಿಪೀಠದ ಕಡೆಗೆ ಹೋಗಿ, ತನಗಾಗಿ ಪಾಪ ಪರಿಹಾರದ ಬಲಿಯಾದ ಕರುವನ್ನು ವಧಿಸಿದನು. \v 9 ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು. \v 10 ಅದರ ಪಾಪ ಪರಿಹಾರದ ಬಲಿಯ ಕೊಬ್ಬು, ಮೂತ್ರಪಿಂಡಗಳು ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬು, ಇವುಗಳನ್ನು ಅವನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ, ಬಲಿಪೀಠದ ಮೇಲೆ ಸುಟ್ಟನು. \v 11 ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು. \p \v 12 ಅವನು ದಹನಬಲಿಯನ್ನು ವಧಿಸಿದಾಗ, ಆರೋನನ ಪುತ್ರರು ಅವನಿಗೆ ರಕ್ತವನ್ನು ತಂದು ಕೊಟ್ಟರು. ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು. \v 13 ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದು ಕೊಡಲು, ಅವನು ಅವುಗಳನ್ನು ಬಲಿಪೀಠದ ಮೇಲೆ ಸುಟ್ಟನು. \v 14 ಅವನು ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು, ಅವುಗಳನ್ನು ದಹನಬಲಿಯ ಜೊತೆ ಮೇಲಿನ ಬಲಿಪೀಠದ ಮೇಲೆ ಸುಟ್ಟನು. \p \v 15 ಅದಾದ ಮೇಲೆ ಆರೋನನು ಜನರಿಗಾಗಿ ಅರ್ಪಿಸಿದ ಬಲಿಯನ್ನು ತಂದು, ಹೋತವನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಪರಿಹಾರದ ಬಲಿಯಾಗಿರುವುದನ್ನು ವಧಿಸಿ, ಮೊದಲನೆಯದರ ಹಾಗೆ ಅದನ್ನು ಸಮರ್ಪಿಸಿದನು. \p \v 16 ಅವನು ದಹನಬಲಿಯನ್ನು ತಂದು, ಅದನ್ನು ವಿಧಿಬದ್ಧವಾಗಿ ಸಮರ್ಪಿಸಿದನು. \v 17 ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು. \p \v 18 ಅವನು ಜನರಿಗಾಗಿದ್ದ ಹೋರಿ ಮತ್ತು ಟಗರನ್ನು ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಅವನ ಬಳಿಗೆ ತರಲು, ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು. \v 19 ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಹಿಂಭಾಗದ ಕೊಬ್ಬನ್ನೂ ಮತ್ತು ಕರುಳುಗಳ ಸುತ್ತಲಿನ ಕೊಬ್ಬನ್ನೂ ಮೂತ್ರಪಿಂಡಗಳ ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬನ್ನೂ \v 20 ಕೊಬ್ಬನ್ನು ಎದೆಯ ಭಾಗಗಳ ಮೇಲೆ ಇಡಲು, ಆರೋನನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಟ್ಟನು. \v 21 ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು. \p \v 22 ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಮತ್ತು ಸಮಾಧಾನದ ಬಲಿಯನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು. \p \v 23 ಮೋಶೆಯೂ ಆರೋನನೂ ದೇವದರ್ಶನದ ಗುಡಾರದ ಒಳಗೆ ಹೋಗಿ, ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವ ದೇವರ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು. \v 24 ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು. \c 10 \s1 ನಾದಾಬ್ ಮತ್ತು ಅಬೀಹು ಅವರ ಮರಣ \p \v 1 ಆರೋನನ ಪುತ್ರರಾದ ನಾದಾಬ್ ಮತ್ತು ಅಬೀಹೂ ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು, ಅದರಲ್ಲಿ ಬೆಂಕಿಯನ್ನು ಹಾಕಿ, ಅದರಲ್ಲಿ ಸುವಾಸನೆಯ ಧೂಪವನ್ನು ಹಾಕಿ, ಯೆಹೋವ ದೇವರು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದರು. \v 2 ಆಗ ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟುಬಂದು ಅವರನ್ನು ದಹಿಸಿಬಿಟ್ಟಿತು. ಅವರು ಯೆಹೋವ ದೇವರ ಮುಂದೆ ಮರಣಹೊಂದಿದರು. \v 3 ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: \q1 “ ‘ನನ್ನನ್ನು ಸಮೀಪಿಸುವವರ ಮುಖಾಂತರ \q2 ನನ್ನ ಪರಿಶುದ್ಧತೆಯನ್ನು ತೋರಿಸುವೆನು \q1 ಮತ್ತು ಜನರೆಲ್ಲರ ಮುಂದೆ \q2 ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” \m ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು. \p \v 4 ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜೀಯೇಲನ ಮಕ್ಕಳಾದ ಮೀಶಾಯೇಲನನ್ನೂ ಎಲ್ಜಾಫಾನನನ್ನೂ ಕರೆದು, “ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತುಕೊಂಡು ಹೋಗಿರಿ,” ಎಂದನು. \v 5 ಮೋಶೆಯು ಹೇಳಿದ ಹಾಗೆಯೇ, ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು. \p \v 6 ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ. \v 7 ನೀವು ಮರಣ ಹೊಂದದಂತೆ ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು. ಏಕೆಂದರೆ ಯೆಹೋವ ದೇವರ ಅಭಿಷೇಕ ತೈಲವು ನಿಮ್ಮ ಮೇಲಿದೆ,” ಎಂದನು. ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು. \p \v 8 ಯೆಹೋವ ದೇವರು ಮಾತನಾಡಿ ಆರೋನನಿಗೆ, \v 9 “ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ. \v 10 ನೀವು ಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಮಧ್ಯೆ ಇರುವ ವ್ಯತ್ಯಾಸವನ್ನು ತೋರಿಸುವುದಕ್ಕಾಗಿಯೂ \v 11 ನೀವು ಇಸ್ರಾಯೇಲರಿಗೆ ಯೆಹೋವ ದೇವರು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ, ಎಲ್ಲಾ ಕಟ್ಟಳೆಗಳನ್ನು ಬೋಧಿಸುವುದಕ್ಕಾಗಿಯೂ ಇರುವುದು,” ಎಂದರು. \p \v 12 ಮೋಶೆಯು ಆರೋನನೊಂದಿಗೂ ಉಳಿದ ಅವನ ಪುತ್ರರಾದ ಎಲಿಯಾಜರನೊಂದಿಗೂ ಈತಾಮಾರನೊಂದಿಗೂ ಮಾತನಾಡಿ, “ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಗಳಲ್ಲಿ ಉಳಿದಿರುವ ಧಾನ್ಯ ಸಮರ್ಪಣೆಯನ್ನು ತೆಗೆದುಕೊಳ್ಳಿರಿ ಮತ್ತು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿಯಿಲ್ಲದ ರೊಟ್ಟಿ ತಿನ್ನಿರಿ. ಏಕೆಂದರೆ ಅದು ಮಹಾಪರಿಶುದ್ಧವಾದದ್ದು. \v 13 ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ದಹನ ಮಾಡಿದ ಯೆಹೋವ ದೇವರ ಯಜ್ಞಗಳಲ್ಲಿ ಇವು ನಿನಗೂ ನಿನ್ನ ಪುತ್ರರಿಗೂ ಸಲ್ಲತಕ್ಕವುಗಳು. ಏಕೆಂದರೆ ಹಾಗೆ ನನಗೆ ಆಜ್ಞೆಯಾಗಿದೆ. \v 14 ನೀನೂ, ನಿನ್ನೊಂದಿಗೆ ನಿನ್ನ ಪುತ್ರರೂ ನಿನ್ನ ಪುತ್ರಿಯರೂ ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಿಸುವ ತೊಡೆಯ ಭಾಗವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ಇಸ್ರಾಯೇಲರ ಸಮಾಧಾನದ ಬಲಿಗಳಲ್ಲಿ ನಿನಗೂ ನಿನ್ನ ಪುತ್ರರಿಗೂ ಸಲ್ಲುವಂಥವುಗಳಾಗಿವೆ. \v 15 ನೈವೇದ್ಯವಾಗಿ ಅರ್ಪಿಸುವ ಎದೆಯನ್ನೂ ತೊಡೆಯನ್ನೂ ಅವರು ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನು ನೈವೇದ್ಯವಾಗಿ ನಿವಾಳಿಸುವುದಕ್ಕೆ ಯೆಹೋವ ದೇವರ ಸನ್ನಿಧಿಯಲ್ಲಿ ತರಬೇಕು. ಯೆಹೋವ ದೇವರು ಆಜ್ಞಾಪಿಸಿದ ಹಾಗೆ ಅದು ನಿನಗೂ, ನಿನ್ನೊಂದಿಗೆ ನಿನ್ನ ಪುತ್ರರಿಗೂ ನಿತ್ಯ ಕಟ್ಟಳೆಯಾಗಿ ಸಿಕ್ಕಬೇಕು,” ಎಂದು ಹೇಳಿದನು. \p \v 16 ಅನಂತರ ಮೋಶೆಯು ಶ್ರದ್ಧೆಯಿಂದ ಪಾಪ ಪರಿಹಾರದ ಬಲಿಯ ಹೋತವನ್ನು ಹುಡುಕಿದಾಗ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಪುತ್ರರಾದ ಎಲಿಯಾಜರ್ ಮತ್ತು ಈತಾಮಾರನ ಮೇಲೆ ಕೋಪಗೊಂಡು, ಹೇಳಿದ್ದೇನೆಂದರೆ, \v 17 “ಅದು ಮಹಾಪರಿಶುದ್ಧವಾದ್ದರಿಂದಲೂ ಯೆಹೋವ ಸನ್ನಿಧಿಯಲ್ಲಿ ಅವರಿಗಾಗಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿಯೂ ನೀವು ಸಭೆಯ ಅಪರಾಧವನ್ನು ಹೊರುವುದಕ್ಕಾಗಿ ದೇವರು ಅದನ್ನು ಕೊಟ್ಟಿದ್ದೆಂದೂ ನೀವು ತಿಳಿದು ಪಾಪ ಪರಿಹಾರದ ಬಲಿಯನ್ನು ಪರಿಶುದ್ಧವಾದ ಸ್ಥಳದಲ್ಲಿ ಏಕೆ ತಿನ್ನಲಿಲ್ಲ? \v 18 ಇಗೋ, ಅದರ ರಕ್ತವು ಪರಿಶುದ್ಧಸ್ಥಳದ ಒಳಗೆ ತರಲಿಲ್ಲವಾದ ಕಾರಣ ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು,” ಎಂದನು. \p \v 19 ಆಗ ಆರೋನನು ಮೋಶೆಗೆ, “ಈ ದಿನ ಅವರು ಪಾಪಪರಿಹಾರ ಬಲಿಯನ್ನು ಮತ್ತು ಅದರ ದಹನಬಲಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದ್ದರು. ಆದರೆ ಈ ದುಃಖ ಘಟನೆಗಳು ನನಗೆ ಸಂಭವಿಸಿದೆ. ಹೀಗಿರುವಲ್ಲಿ ಇಂದು ನಾನು ಆ ಪಾಪ ಪರಿಹಾರದ ಬಲಿದ್ರವ್ಯವನ್ನು ಊಟಮಾಡಿದ್ದರೆ, ಯೆಹೋವ ದೇವರು ಸಂತೋಷಪಡುತ್ತಿದ್ದರೋ?” ಎಂದನು. \v 20 ಆಗ ಮೋಶೆಯು ಈ ಮಾತನ್ನು ಕೇಳಿದಾಗ ತೃಪ್ತಿಪಟ್ಟನು. \c 11 \s1 ಶುದ್ಧ ಹಾಗೂ ಅಶುದ್ಧವಾದ ಆಹಾರ \p \v 1 ಯೆಹೋವ ದೇವರು ಮೋಶೆ ಆರೋನರಿಗೆ ಹೀಗೆ ಹೇಳಿದರು, \v 2 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು: ‘ಭೂಮಿಯ ಮೇಲೆ ಇರುವ ಎಲ್ಲಾ ನೀವು ತಿನ್ನತಕ್ಕ ಪ್ರಾಣಿಗಳು ಯಾವವಂದರೆ: \v 3 ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು. \p \v 4 “ ‘ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವುದಾದರೂ ಅದಕ್ಕೆ ಸೀಳುಗೊರಸು ಇಲ್ಲ. ಅದು ನಿಮಗೆ ಅಶುದ್ಧ. \v 5 ಬೆಟ್ಟದ ಕುಣಿ ಮೊಲವು ಮೇವನ್ನು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು. \v 6 ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು. \v 7 ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು. \v 8 ಅವುಗಳ ಮಾಂಸವನ್ನು ನೀವು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. ಅವು ನಿಮಗೆ ಅಶುದ್ಧವಾಗಿವೆ. \p \v 9 “ ‘ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ಸಮುದ್ರದಲ್ಲಿ ಮತ್ತು ನದಿಯಲ್ಲಿ ಇರುವ ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು. \v 10 ಸಮುದ್ರಗಳಲ್ಲಿಯೂ, ನದಿಗಳಲ್ಲಿಯೂ ನೀರೊಳಗೆ ಚಲಿಸುವ ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜುರೆಕ್ಕೆ ಮತ್ತು ಪೊರೆಯಿಲ್ಲದವುಗಳು ನಿಮಗೆ ನಿಷಿದ್ಧವಾಗಿವೆ. \v 11 ಅವು ನಿಮಗೆ ಅಶುದ್ಧವಾಗಿಯೇ ಇರುವವು. ನೀವು ಅವುಗಳ ಮಾಂಸವನ್ನು ತಿನ್ನಬಾರದು ಮತ್ತು ಅವುಗಳ ಶವಗಳು ನಿಮಗೆ ಹೇಯವಾಗಿರಬೇಕು. \v 12 ನೀರಲ್ಲಿ ಯಾವುದಕ್ಕೆ ಈಜುರೆಕ್ಕೆ ಮತ್ತು ಪೊರೆಗಳಿಲ್ಲವೋ ಅವು ನಿಮಗೆ ಹೇಯವಾಗಿರಬೇಕು. \p \v 13 “ ‘ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವಾಗಿವೆ. ಇವುಗಳು ನಿಮಗೆ ಅಸಹ್ಯಕರವಾದ ಮತ್ತು ತಿನ್ನಲು ನಿಷೇಧಿಸಲಾದ ಪಕ್ಷಿಗಳು ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ರಣಹದ್ದು, ಕಪ್ಪು ರಣಹದ್ದು. \v 14 ಕ್ರೌಂಚ, ಅದರ ಜಾತಿಯ ಹದ್ದು, \v 15 ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ, \v 16 ಉಷ್ಟ್ರಪಕ್ಷಿ, ಚೀರು ಗೂಬೆ, ಕಡಲ ಹಕ್ಕಿ ಮತ್ತು ಅದರ ಪ್ರತಿಯೊಂದು ಜಾತಿಯ ಗಿಡುಗ. \v 17 ಸಣ್ಣ ಗೂಬೆ, ನೀರುಕಾಗೆ, ದೊಡ್ಡ ಗೂಬೆ, \v 18 ಬಿಳಿಗೂಬೆ, ಮರಳುಗಾಡು ಗೂಬೆ, ರಣಹದ್ದು, \v 19 ನೀರು ಕೋಳಿ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ. \p \v 20 “ ‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು. \v 21 ಆದರೂ ಹಾರಾಡುವ, ಹರಿದಾಡುವ ನಾಲ್ಕು ಕಾಲುಗಳ ಮೇಲೆ ಹೋಗುವ, ತಮ್ಮ ಪಾದಗಳ ಮೇಲೆ ಕಾಲುಗಳಿದ್ದು, ಭೂಮಿಯ ಮೇಲೆ ದುಮುಕುವವುಗಳನ್ನೂ ನೀವು ತಿನ್ನಬಹುದು. \v 22 ಮಿಡತೆಗಳನ್ನು ಜುಟ್ಟೆ ಮಿಡತೆಗಳನ್ನು ಅವುಗಳ ಜಾತಿಗನುಸಾರವಾಗಿ ತಿನ್ನಬಹುದು. \v 23 ಆದರೆ ನಾಲ್ಕು ಪಾದವಿರುವ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳು ನಿಮಗೆ ಹೇಯವಾಗಿರಬೇಕು. \p \v 24 “ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು. \v 25 ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು. \p \v 26 “ ‘ಯಾವ ಪ್ರಾಣಿಯ ಗೊರಸು ಸ್ವಲ್ಪ ಸೀಳಿದ್ದರೂ, ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳ ಶವವನ್ನು ಮುಟ್ಟುವವರು ಅಶುದ್ಧರಾಗಿರುವರು. \v 27 ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವುದೆಲ್ಲವೂ ನಿಮಗೆ ಅಶುದ್ಧವಾಗಿರುವುವು. ಯಾರಾದರೂ ಅವುಗಳ ಶವವನ್ನು ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು. \v 28 ಅವುಗಳ ಶವವನ್ನು ಹೊರುವವರು ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೂ ಅಶುದ್ಧರಾಗಿರುವರು. ಈ ಪ್ರಾಣಿಗಳು ನಿಮಗೆ ಅಶುದ್ಧವಾದವುಗಳು. \p \v 29 “ ‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ, \v 30 ಅರೆ ಪಳಗಿಸಿದ ಪ್ರಾಣಿ, ಹಾವುರಾಣಿ, ಊಸುರುವಳ್ಳಿ, ಹಲ್ಲಿ, ಬಸವನ ಹುಳು ಮತ್ತು ಚಿಟ್ಟಿಲಿ. \v 31 ನೆಲದ ಮೇಲೆ ಹರಿದಾಡುವ ಇವು ನಿಮಗೆ ಅಶುದ್ಧ. ಸತ್ತಿರುವಾಗ ಅವುಗಳನ್ನು ಯಾರಾದರೂ ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು. \v 32 ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು. \v 33 ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು. \v 34 ಅದರಲ್ಲಿರುವ ಆಹಾರ ಪದಾರ್ಥವೆಲ್ಲಾ ನೀರಿನಿಂದ ನೆನೆದಿದ್ದರೆ ಅದು ಅಶುದ್ಧವಾಗಿರುವುದು. ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವುದು. \v 35 ಅವುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಅದು ಅಶುದ್ಧವಾಗಿರುವುದು. ಅದು ಹರಿವಾಣವಾಗಿದ್ದರೂ, ಮಣ್ಣುಗಳ ಒಲೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಏಕೆಂದರೆ ಅವು ಅಶುದ್ಧವಾಗಿವೆ. ಅವು ನಿಮಗೆ ಅಶುದ್ಧವೇ. \v 36 ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ, ಹಳ್ಳವಾಗಲಿ ಶುದ್ಧವಾಗಿರುವುದು. ಅವುಗಳೊಳಗಿಂದ ಹೆಣಗಳನ್ನು ಎತ್ತಿದವರು ಅಶುದ್ಧರಾಗುವರು. \v 37 ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೂ ಶುದ್ಧವಾಗಿರುವುದು. \v 38 ಆದರೆ ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣವು ಬಿದ್ದರೆ, ಅದು ನಿಮಗೆ ಅಶುದ್ಧವಾಗಿರುವುದು. \p \v 39 “ ‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು. \v 40 ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. \p \v 41 “ ‘ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಹೇಯವಾಗಿದೆ. ಅದನ್ನು ತಿನ್ನಬಾರದು. \v 42 ಹೊಟ್ಟೆಯಿಂದ ಹರಿದಾಡುವ ಯಾವುದನ್ನೂ, ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವುದನ್ನೂ, ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವುದನ್ನು ನೀವು ತಿನ್ನಬಾರದು. ಏಕೆಂದರೆ ಅವು ಹೇಯವಾಗಿವೆ. \v 43 ಯಾವುದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು, ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಅವುಗಳಿಂದ ಮಲಿನರಾಗಬಾರದು. \v 44 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. \v 45 ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು. \p \v 46 “ ‘ಪ್ರಾಣಿಗಳು, ಪಕ್ಷಿಗಳು, ನೀರಿನಲ್ಲಿರುವ ಮತ್ತು ನೆಲದ ಮೇಲೆ ತೆವಳುವ ಪ್ರತಿಯೊಂದು ಜೀವಿಗಳಿಗೆ ಕುರಿತಾದ ನಿಯಮವು ಇದೇ. \v 47 ಅಶುದ್ಧ ಮತ್ತು ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನಲರ್ಹವಾದ ಮೃಗ ಮತ್ತು ತಿನ್ನಬಾರದ ಮೃಗಗಳ ನಡುವಿನ ವ್ಯತ್ಯಾಸವನ್ನು ಹೀಗೆ ತಿಳಿದುಕೊಳ್ಳುವಿರಿ.’ ” \c 12 \s1 ಬಾಣಂತಿಯರ ಶುದ್ಧೀಕರಣದ ವಿಷಯ \p \v 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಹೇಳಿದ್ದೇನೆಂದರೆ, \v 2 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು. \v 3 ಎಂಟನೆಯ ದಿನದಲ್ಲಿ ಮಗುವಿಗೆ ಸುನ್ನತಿ ಮಾಡಿಸಬೇಕು. \v 4 ಅವಳು ಮೂವತ್ತಮೂರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು. ಅವಳ ಶುದ್ಧೀಕರಣದ ದಿನಗಳು ಪೂರೈಸುವ ತನಕ ಅವಳು ಪರಿಶುದ್ಧವಾದದ್ದನ್ನು ಮುಟ್ಟಬಾರದು, ಇಲ್ಲವೆ ಪರಿಶುದ್ಧ ಸ್ಥಳಕ್ಕೆ ಬರಬಾರದು. \v 5 ಅವಳು ಹೆಣ್ಣು ಮಗುವನ್ನು ಹೆತ್ತರೆ, ಅವಳು ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು. \p \v 6 “ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು. \v 7 ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. \p “ ‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ. \v 8 ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ” \c 13 \s1 ಸಾಂಕ್ರಾಮಿಕ ಚರ್ಮರೋಗಗಳ ಕುರಿತ ನಿಯಮಗಳು \p \v 1 ಯೆಹೋವ ದೇವರು ಮೋಶೆ ಮತ್ತು ಆರೋನರೊಡನೆ ಮಾತನಾಡಿ ಹೇಳಿದ್ದೇನೆಂದರೆ, \v 2 “ಒಬ್ಬ ಮನುಷ್ಯನು ತನ್ನ ಚರ್ಮದ ಮೇಲೆ ಬಾವಾಗಲಿ, ಕಜ್ಜಿಯಾಗಲಿ, ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಚರ್ಮದಲ್ಲಿ ಕುಷ್ಠದ\f + \fr 13:2 \fr*\ft ಹೀಬ್ರೂ ಭಾಷೆಯಲ್ಲಿ \ft*\fq ಕುಷ್ಠ \fq*\ft ಎಂಬ ಪದವನ್ನು ಚರ್ಮದ ಮೇಲೆ ಪರಿಣಾಮ ಬೀರುವ ವಿವಿಧ ಕಾಯಿಲೆಗಳಿಗೆ ಈ ಪದವನ್ನು ಬಳಸಲಾಗುತ್ತಿತ್ತು\ft*\f* ವ್ಯಾಧಿಯಂತಿದ್ದರೆ, ಅವನು ಯಾಜಕನಾದ ಆರೋನನ ಬಳಿಗಾದರೂ ಇಲ್ಲವೆ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗಾದರೂ ಕರೆದುಕೊಂಡು ಬರಬೇಕು. \v 3 ಯಾಜಕನು ಚರ್ಮದ ಮೇಲಿರುವ ವ್ಯಾಧಿಯನ್ನು ಪರೀಕ್ಷಿಸಬೇಕು. ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ, ಆ ವ್ಯಾಧಿಯು ಅವನ ಚರ್ಮಕ್ಕಿಂತಲೂ ಆಳವಾಗಿ ಕಂಡರೆ, ಅದು ಚರ್ಮರೋಗವಾಗಿರುವುದು. ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು. \v 4 ಅವನ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು, ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದು, ಅಲ್ಲಿನ ಕೂದಲು ಬೆಳ್ಳಗಾಗದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಪ್ರತ್ಯೇಕವಾಗಿ ಇರಿಸಬೇಕು. \v 5 ಯಾಜಕನು ಏಳನೆಯ ದಿನದಲ್ಲಿ ಅವನನ್ನು ಪರೀಕ್ಷಿಸಿದಾಗ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ, ಆ ವ್ಯಾಧಿ ಚರ್ಮದಲ್ಲಿ ಹರಡಿರದಿದ್ದರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು. \v 6 ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ವ್ಯಾಧಿಯು ಸ್ವಲ್ಪ ಕಪ್ಪಾಗಿದ್ದು, ಚರ್ಮದಲ್ಲೆಲ್ಲಾ ಹರಡಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರುವನು. \v 7 ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ, ಅವನು ತಿರುಗಿ ಯಾಜಕನಿಗೆ ತೋರಿಸಿಕೊಳ್ಳಬೇಕು. \v 8 ಯಾಜಕನು ಅದನ್ನು ಪರೀಕ್ಷಿಸಿದಾಗ, ಕಜ್ಜಿಯ ಚರ್ಮವೇ ಹರಡಿರುವುದಾದರೆ ಆಗ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಏಕೆಂದರೆ ಅದು ಚರ್ಮರೋಗವಾಗಿರುವುದು. \p \v 9 “ಚರ್ಮರೋಗವು ಮನುಷ್ಯನಲ್ಲಿ ಇರುವುದಾದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. \v 10 ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು, ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿ ಮಾಂಸವು ಇದ್ದರೆ, \v 11 ಅದು ಅವನ ಚರ್ಮದಲ್ಲಿ ದೀರ್ಘಕಾಲದ ಚರ್ಮರೋಗವಾಗಿರುವುದು. ಆಗ ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು ಮತ್ತು ಅವನನ್ನು ಪ್ರತ್ಯೇಕವಾಗಿ ಇರಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು. \p \v 12 “ಒಬ್ಬನಲ್ಲಿ ಸಾಂಕ್ರಾಮಿಕ ಚರ್ಮರೋಗ ಹತ್ತಿದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಪಾದದವರೆಗೂ ಹರಡಿವುದುನ್ನು ಯಾಜಕನು ಪರೀಕ್ಷಿಸಿದರೆ, \v 13 ಆಗ ಯಾಜಕನು ಅದನ್ನು ಗಮನಿಸಬೇಕು. ತೊನ್ನು ಹತ್ತಿದರೆ, ಅವನ ಮೈಯೆಲ್ಲವನ್ನು ಹರಡಿಕೊಂಡಿದ್ದರೆ, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವುದರಿಂದ ಅವನು ಶುದ್ಧನಾಗಿರುವನು. \v 14 ಆದರೆ ಹಸಿ ಮಾಂಸವು ಅವನಲ್ಲಿ ಕಾಣಿಸಿಕೊಂಡರೆ ಅವನು ಅಶುದ್ಧನಾಗಿರುವನು. \v 15 ಯಾಜಕನು ಹಸಿ ಮಾಂಸವನ್ನು ಪರೀಕ್ಷಿಸಿ ಅವನು ಅಶುದ್ಧನೆಂದು ನುಡಿಯಬೇಕು. ಏಕೆಂದರೆ ಹಸಿ ಮಾಂಸವು ಅಶುದ್ಧವಾದದ್ದು, ಅದು ಅಶುದ್ಧಗೊಳಿಸುವ ಚರ್ಮರೋಗವೇ. \v 16 ಹಸಿ ಮಾಂಸವು ಮತ್ತೆ ಬದಲಾಗಿ ಬೆಳ್ಳಗಾದರೆ, ಅವನು ಯಾಜಕನ ಬಳಿಗೆ ಬರಬೇಕು. \v 17 ಆಗ ಯಾಜಕನು ಅವನನ್ನು ಪರೀಕ್ಷಿಸಿ, ಆ ವ್ಯಾಧಿಯು ಬೆಳ್ಳಗಾಗಿದ್ದರೆ, ಯಾಜಕನು, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅವನು ಶುದ್ಧನಾಗಿರುವನು. \p \v 18 “ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ \v 19 ಆ ಹುಣ್ಣಿನ ಜಾಗದಲ್ಲಿ ಬಿಳಿಯ ಊತವಾಗಲಿ ಇಲ್ಲವೆ ಬಿಳುಪಾದ ಮಚ್ಚೆಯಾಗಲಿ, ಕೆಂಪು ಮಿಶ್ರಿತ ಕಲೆ ಉಂಟಾದರೆ ಅದನ್ನು ಯಾಜಕನಿಗೆ ತೋರಿಸಬೇಕು. \v 20 ಯಾಜಕನು ಅದನ್ನು ಪರೀಕ್ಷಿಸಿದಾಗ, ಅದು ಚರ್ಮದಿಂದ ಕೆಳಗೆ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು. ಅದು ಹುಣ್ಣಿನಿಂದ ಒಡೆದುಹೋದ ಚರ್ಮರೋಗವಾಗಿರುವುದು. \v 21 ಆದರೆ ಯಾಜಕನು ಅದನ್ನು ಪರೀಕ್ಷಿಸಲು, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದಿದ್ದರೆ ಮತ್ತು ಸ್ವಲ್ಪ ಮಬ್ಬಾಗಿದ್ದರೆ, ಆಗ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು. \v 22 ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ, ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು. ಅದು ಚರ್ಮರೋಗವಾಗಿದೆ. \v 23 ಆದರೆ ಆ ಹೊಳಪಾದ ಕಲೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು, ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು. \p \v 24 “ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಸಹ ಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಕಲೆಯಾಗಿದ್ದರೆ, \v 25 ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಹೊಳಪಾದ ಕಲೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆಯಿಂದ ಒಡೆದ ಚರ್ಮರೋಗವಾಗಿರುವುದು. ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಚರ್ಮವ್ಯಾಧಿಯಾಗಿದೆ. \v 26 ಆದರೆ ಯಾಜಕನು ಅದನ್ನು ಪರೀಕ್ಷಿಸಿದಾಗ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೋಟಾಗಿದ್ದರೆ, ಯಾಜಕನು ಆಗ ಅವನನ್ನು ಏಳು ದಿನಗಳ ಕಾಲ ಮುಚ್ಚಿಡಬೇಕು. \v 27 ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ಚರ್ಮರೋಗ. \v 28 ಆ ಹೊಳಪಾದ ಕಲೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮಬ್ಬಾಗಿದ್ದರೆ, ಬೆಂಕಿ ಸುಟ್ಟ ಬೊಬ್ಬೆಯ ಊತವೆಂದು ಮತ್ತು ಅವನು ಶುದ್ಧನೆಂದು ಯಾಜಕನು ನುಡಿಯಬೇಕು. ಏಕೆಂದರೆ ಅದು ಬೆಂಕಿಯ ಬೊಬ್ಬೆಯಾಗಿರುವುದು. \p \v 29 “ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ವ್ಯಾಧಿಯು ತಲೆಯ ಮೇಲಾಗಲಿ, ಗಡ್ಡದ ಮೇಲಾಗಲಿ ಕಲೆ ಇದ್ದರೆ, \v 30 ಆಗ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಬೇಕು. ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ತಲೆಯ ಮೇಲಾಗಲಿ ಇಲ್ಲವೆ ಗಡ್ಡದ ಮೇಲಾಗಲಿ ಇರುವ ಚರ್ಮರೋಗವಾಗಿದೆ. \v 31 ಯಾಜಕನು ಆ ಇಸಬಿನ ವ್ಯಾಧಿಯನ್ನು ನೋಡಿದಾಗ, ಅದು ಉಳಿದ ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪುಕೂದಲು ಇರದಿದ್ದರೆ, ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಬೇಕು. \v 32 ಏಳನೆಯ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಿದಾಗ, ಆ ಇಸಬು ಹರಡದೆ ಮತ್ತು ಅದರಲ್ಲಿ ಹಳದಿ ಕೂದಲು ಇರದೆ, ಆ ಇಸಬು ಮಿಕ್ಕ ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ, \v 33 ಅವನು ಕ್ಷೌರ ಮಾಡಿಸಿಕೊಳ್ಳಲಿ. ಆದರೆ ಅವನು ಇಸಬನ್ನು ಕ್ಷೌರ ಮಾಡಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು. \v 34 ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಆ ಇಸಬು ಚರ್ಮದಲ್ಲಿ ಹರಡಿರದಿದ್ದರೆ ಇಲ್ಲವೆ ನೋಡಲು ಅದು ಮಿಕ್ಕ ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ, ಯಾಜಕನು ಆಗ ಅವನನ್ನು ಶುದ್ಧನೆಂದು ನುಡಿಯಬೇಕು, ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರಬೇಕು. \v 35 ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿರದಿದ್ದರೆ, \v 36 ಯಾಜಕನು ಆಗ ಅವನನ್ನು ಪರೀಕ್ಷಿಸಬೇಕು, ಆ ಇಸಬು ಚರ್ಮದಲ್ಲಿ ಹರಡಿದ್ದರೆ, ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ. ಅವನು ಅಶುದ್ಧನು. \v 37 ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಮತ್ತು ಅದರಲ್ಲಿ ಕಪ್ಪುಕೂದಲು ಬೆಳೆದರೆ, ಇಸಬು ವಾಸಿಯಾಗಿ ಅವನು ಶುದ್ಧನಾಗುವನು, ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು. \p \v 38 “ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ದೇಹದ ಚರ್ಮದಲ್ಲಿ ಬಿಳಿಯ ಹೊಳಪಾದ ಮಚ್ಚೆಗಳು ಅಲ್ಲಲ್ಲಿ ಇದ್ದರೆ, \v 39 ಅವುಗಳನ್ನು ಯಾಜಕನು ಪರೀಕ್ಷಿಸಬೇಕು, ಅವರ ದೇಹದ ಚರ್ಮದಲ್ಲಿ ಹೊಳಪಾದ ಕಲೆಗಳು ಮಬ್ಬಾಗಿ ಬಿಳುಪಾಗಿದ್ದರೆ, ಅದು ಚರ್ಮದ ಮೇಲೆ ಬಿಸಿಲಿನಿಂದಾದ ಕೆಂಪು ಮಚ್ಚೆಯಾಗಿರುವುದು. ಅವನು ಶುದ್ಧನಾಗಿರುವನು. \p \v 40 “ಒಬ್ಬ ಗಂಡಸಿನ ತಲೆಯ ಕೂದಲು ಉದುರಿ ಹೋದರೆ, ಅವನು ಬೋಳು ತಲೆಯವನು. ಆದರೂ ಅವನು ಶುದ್ಧನಾಗಿರುವನು. \v 41 ಮುಂದಲೆಯ ಭಾಗದಲ್ಲಿ ಕೂದಲು ಉದುರಿ ಹೋಗಿದ್ದರೆ, ಅವನು ಪಟ್ಟೆ ತಲೆಯವನು, ಆದರೂ ಅವನು ಶುದ್ಧನಾಗಿರುವನು. \v 42 ಆದರೆ ಆ ಬೋಳು ತಲೆಯಲ್ಲಿ ಇಲ್ಲವೆ ಪಟ್ಟೆ ತಲೆಯಲ್ಲಿ ಕೆಂಪಗಿರುವ ಬಿಳುಪಾದ ಮಚ್ಚೆಯಿದ್ದರೆ, ಅದು ಅವನ ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆ ತಲೆಯಲ್ಲಾಗಲಿ ಹುಟ್ಟುತ್ತಿರುವ ಚರ್ಮರೋಗವೇ. \v 43 ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು. ಅವನ ಬೋಳು ತಲೆಯಲ್ಲಾಗಲಿ, ಇಲ್ಲವೆ ಅವನ ಪಟ್ಟೆ ತಲೆಯಲ್ಲಾಗಲಿ ಏಳುತ್ತಿರುವ ಆ ಕಲೆಯು ಬಿಳುಪಾಗಿ ಕೆಂಪಾಗಿದ್ದರೆ ಮತ್ತು ಮಾಂಸದ ತೊಗಲಿನಲ್ಲಿ ಇರುವ ಚರ್ಮರೋಗದ ಹಾಗಿದ್ದರೆ, ಅವನು ರೋಗಿ ಎಂದೂ ಅಶುದ್ಧನೆಂದೂ \v 44 ಅವನ ವ್ಯಾಧಿಯು ಅವನ ತಲೆಯಲ್ಲಿ ಕಾಣಿಸಿದ್ದರಿಂದ ಅವನು ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು. \p \v 45 “ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು. \v 46 ಆ ವ್ಯಾಧಿ ಅವನಲ್ಲಿ ಇರುವಷ್ಟು ದಿನಗಳೂ ಅವನು ಅಶುದ್ಧನಾಗಿರುವನು. ಅವನು ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು. \s1 ಬೂಜು ಹಿಡಿದ ವಸ್ತುಗಳು \p \v 47 “ಬೂಜು ಚರ್ಮರೋಗದ ಗುರುತು ಅವನ ಉಡುಪಿನಲ್ಲೂ ಇದ್ದು, ಅದು ಉಣ್ಣೆಯ ಉಡುಪಾಗಲಿ ಇಲ್ಲವೆ ನಾರಿನ ಉಡುಪಾಗಲಿ, \v 48 ನಾರಿನ ಇಲ್ಲವೆ ಉಣ್ಣೆಯ ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ಚರ್ಮದಲ್ಲಾಗಲಿ, ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಇದಲ್ಲದೆ ಹಸುರಾಗಿ ಇಲ್ಲವೆ, \v 49 ಆ ಬಟ್ಟೆ ತೊಗಲು ಹಾಸು ಇಲ್ಲವೆ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ, ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಬೂಜಾಗಿದೆ. ಅದನ್ನು ಯಾಜಕನಿಗೆ ತೋರಿಸಬೇಕು. \v 50 ಯಾಜಕನು ಅದನ್ನು ಪರೀಕ್ಷಿಸಿ, ಆ ವಸ್ತುವನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು. \v 51 ಅವನು ಏಳನೆಯ ದಿನದಲ್ಲಿ ಅದನ್ನು ಪರೀಕ್ಷಿಸಬೇಕು. ಆ ಬೂಜು ಅವನ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹೆಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಹರಡಿದ್ದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದು ಅಶುದ್ಧವು. \v 52 ಆದ್ದರಿಂದ ಅವನು ಆ ಉಡುಪುಗಳನ್ನು ಅಂದರೆ ಅದು ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಎಲ್ಲಿ ಬೂಜಿದೆಯೋ ಅದನ್ನು ಸುಡಬೇಕು. ಏಕೆಂದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದನ್ನು ಬೆಂಕಿಯಿಂದ ಸುಡಬೇಕು. \p \v 53 “ಯಾಜಕನು ಪರೀಕ್ಷಿಸಿದಾಗ ಬೂಜು ಉಡುಪಿನಲ್ಲಾಗಲಿ, ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ತೊಗಲಿನ ವಸ್ತುಗಳಲ್ಲಾಗಲಿ ಹರಡದಿದ್ದರೆ, \v 54 ಆಗ ಯಾಜಕನು ಆ ಬೂಜುಳ್ಳ ವಸ್ತುವನ್ನು ತೊಳೆಯುವಂತೆ ಆಜ್ಞಾಪಿಸಿ, ಅದನ್ನು ಅವನು ಏಳು ದಿನಗಳ ಕಾಲ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು. \v 55 ಅದನ್ನು ತೊಳೆದಾದ ಮೇಲೆ ಯಾಜಕನು ಆ ಬೂಜನ್ನು ಪರೀಕ್ಷಿಸಬೇಕು. ಆ ಬೂಜು ಬಣ್ಣವನ್ನು ಬದಲಾಯಿಸದಿದ್ದರೆ ಮತ್ತು ಹರಡದಿದ್ದರೆ ಅದು ಅಶುದ್ಧವಾಗಿರುವುದು. ಅದನ್ನು ನೀನು ಬೆಂಕಿಯಿಂದ ಸುಡಬೇಕು. ಅದು ಒಳಗಿನಿಂದಾಗಲಿ ಇಲ್ಲವೆ ಹೊರಗಿನಿಂದಾಗಲಿ ವ್ಯಾಪಿಸಿದೆ. \v 56 ಯಾಜಕನು ಅದನ್ನು ಪರೀಕ್ಷಿಸಿದರೆ, ಆ ಬೂಜು ಹಿಡಿದ ವಸ್ತುವನ್ನು ತೊಳೆದ ನಂತರ ಮಬ್ಬಾಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ, ಚರ್ಮದಿಂದಾಗಲಿ, ಹಾಸಿನಿಂದಾಗಲಿ, ಹೊಕ್ಕಿನಿಂದಾಗಲಿ ಹರಿದುಹಾಕಬೇಕು. \v 57 ಆದರೆ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನಲ್ಲಾಗಲಿ ಕಂಡು ಬಂದರೆ ಅದು ಹರಡುವ ಬೂಜು ಮತ್ತು ಬೂಜಿರುವ ವಸ್ತುವನ್ನು ನೀನು ಬೆಂಕಿಯಿಂದ ಸುಡಬೇಕು. \v 58 ನೀನು ತೊಳೆದ ಮೇಲೆ ಆ ಬೂಜು ಯಾವ ವಸ್ತುವಿನಿಂದ ಹೊರಟು ಹೋಯಿತೋ, ಆ ಬಟ್ಟೆಯನ್ನೂ, ಹಾಸನ್ನೂ, ಹೊಕ್ಕನ್ನೂ ಇಲ್ಲವೆ ಚರ್ಮದ ಯಾವುದೇ ಸಾಮಗ್ರಿಗಳನ್ನೂ ಎರಡನೆಯ ಸಾರಿ ತೊಳೆಯಬೇಕು. ಆಗ ಅದು ಶುದ್ಧವಾಗಿರುವುದು.” \p \v 59 ಉಣ್ಣೆ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಬೂಜು ಹಿಡಿದಿದ್ದರೆ ಪಾಲಿಸತಕ್ಕ ನಿಯಮಗಳಿವು. ಅದನ್ನು ಶುದ್ಧವೆಂದು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇದೇ. \c 14 \s1 ಚರ್ಮರೋಗದ ಶುದ್ಧೀಕರಣ \p \v 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ: \v 2 “ಚರ್ಮರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ. ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. \v 3 ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು. ಚರ್ಮರೋಗದಿಂದ ರೋಗಿಯು ಗುಣವಾದನೆಂದು ಯಾಜಕನು ಪರೀಕ್ಷಿಸಿದರೆ, \v 4 ಆಗ ಶುದ್ಧಮಾಡಿಕೊಳ್ಳುವವನಿಗೋಸ್ಕರ ಜೀವವುಳ್ಳ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳುವಂತೆ ಯಾಜಕನು ಆಜ್ಞಾಪಿಸಬೇಕು. \v 5 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು. \v 6 ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ, \v 7 ಚರ್ಮರೋಗದಿಂದ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ, ಅವನನ್ನು ಶುದ್ಧನೆಂದು ನುಡಿದು, ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟುಬಿಡಬೇಕು. \p \v 8 “ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು. \v 9 ಆದರೆ ಏಳನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ, ಗಡ್ಡವನ್ನೂ, ತನ್ನ ಕಣ್ಣುಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಬೋಳಿಸಿಕೊಳ್ಳಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು. \p \v 10 “ಎಂಟನೆಯ ದಿವಸದಲ್ಲಿ ಅವನು ಕಳಂಕರಹಿತವಾದ ಎರಡು ಕುರಿಮರಿಗಳನ್ನು ಮತ್ತು ಒಂದು ವರುಷದ ಕಳಂಕರಹಿತವಾದ ಹೆಣ್ಣು ಕುರಿಯನ್ನು, ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಐದು ಕಿಲೋಗ್ರಾಂ\f + \fr 14:10 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಒಂದು ಎಫಾದ ಹತ್ತನೇ ಮೂರು ಭಾಗ, \fqa*\ft ಅಂದರೆ 5 ಕಿಲೋಗ್ರಾಂ\ft*\f* ಗೋಧಿ ಹಿಟ್ಟನ್ನು, ಒಂದನೆಯ ಮೂರು ಭಾಗ\f + \fr 14:10 \fr*\ft ಹೀಬ್ರೂ ಭಾಷೆಯಲ್ಲಿ ಒಂದು \ft*\fqa ಲೋಗ, \fqa*\ft ಅಂದರೆ 0.3 ಲೀಟರ್\ft*\f* ಎಣ್ಣೆಯನ್ನು ತೆಗೆದುಕೊಳ್ಳಬೇಕು. \v 11 ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯೆಹೋವ ದೇವರ ಮುಂದೆ ನಿಲ್ಲಿಸಬೇಕು. \p \v 12 “ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಂಡು ಪ್ರಾಯಶ್ಚಿತ್ತ ಬಲಿಯಾಗಿ ಅರ್ಪಿಸಿ, ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. \v 13 ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು. \v 14 ಯಾಜಕನು ಪ್ರಾಯಶ್ಚಿತ್ತ ಬಲಿಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಮತ್ತು ಯಾಜಕನು ಅದನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿನ ಮೇಲೆಯೂ, ಬಲಗಾಲಿನ ಹೆಬ್ಬೆಟ್ಟಿನ ಮೇಲೆಯೂ ಹಚ್ಚಬೇಕು. \v 15 ಯಾಜಕನು ಒಂದನೆಯ ಮೂರು ಭಾಗದಷ್ಟು ಎಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು. \v 16 ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ, ತನ್ನ ಬೆರಳಿನಿಂದ ಆ ಎಣ್ಣೆಯನ್ನು ಏಳು ಸಾರಿ ಯೆಹೋವ ದೇವರ ಎದುರಿನಲ್ಲಿ ಚಿಮುಕಿಸಬೇಕು. \v 17 ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆ ಮತ್ತು ಅವನ ಬಲಗೈಯ ಹೆಬ್ಬೆರಳಿನ ಮೇಲೆ, ಅವನ ಬಲಗಾಲಿನ ಹೆಬ್ಬೆಟ್ಟಿನ ಮೇಲೆ ಹಚ್ಚಬೇಕು. ಅದೇ ರೀತಿ ಪ್ರಾಯಶ್ಚಿತ್ತ ಬಲಿಯ ರಕ್ತದ ಮೇಲೆ ಹಚ್ಚಬೇಕು. \v 18 ಯಾಜಕನ ಕೈಯಲ್ಲಿರುವ ಉಳಿದ ಆ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯಬೇಕು. ಯಾಜಕನು ಅವನಿಗಾಗಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. \p \v 19 “ಯಾಜಕನು ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು. ತರುವಾಯ ಅವನು ದಹನಬಲಿಯ ಪ್ರಾಣಿಯನ್ನು ವಧಿಸಬೇಕು. \v 20 ಯಾಜಕನು ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು. \p \v 21 “ಅವನು ಬಡವನಾಗಿದ್ದರೆ ಅಷ್ಟೊಂದು ತರುವುದಕ್ಕೆ ಆಗದಿದ್ದರೆ, ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಬಲಿ ಕೊಡಲು ನೈವೇದ್ಯ ಮಾಡುವುದಕ್ಕೆ ಒಂದು ಕುರಿಮರಿಯನ್ನೂ, ಎಣ್ಣೆ ಬೆರೆಸಿದ ಒಂದುವರೆ ಕಿಲೋಗ್ರಾಂ\f + \fr 14:21 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಎಫಾದ ಹತ್ತರಲ್ಲೊಂದು ಭಾಗ, \fqa*\ft ಅಂದರೆ 1.6 ಕಿಲೋಗ್ರಾಂ\ft*\f* ನಯವಾದ ಹಿಟ್ಟನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ \v 22 ಮತ್ತು ಅವನಿಂದಾಗುವಷ್ಟು ಎರಡು ಬೆಳವಕ್ಕಿಗಳನ್ನೂ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನೂ ತೆಗೆದುಕೊಳ್ಳಬೇಕು. ಅವುಗಳಲ್ಲಿ ಒಂದು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದು ದಹನಬಲಿಗಾಗಿಯೂ ಇರುವುದು. \p \v 23 “ಅವನು ತನ್ನ ಶುದ್ಧತೆಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಯೆಹೋವ ದೇವರ ಎದುರಿನಲ್ಲಿ ತರಬೇಕು. \v 24 ಯಾಜಕನು ಪ್ರಾಯಶ್ಚಿತ್ತದ ಸಮರ್ಪಣೆಯ ಆ ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. \v 25 ಅವನು ಪ್ರಾಯಶ್ಚಿತ್ತ ಬಲಿಗಾಗಿ ಆ ಕುರಿಮರಿಯನ್ನು ವಧಿಸಬೇಕು. ಆ ಪ್ರಾಯಶ್ಚಿತ್ತ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು, ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆಯೂ, ಅವನ ಬಲಗೈಯ ಹೆಬ್ಬೆರಳಿನ ಮೇಲೆಯೂ ಹಚ್ಚಬೇಕು. \v 26 ಇದಲ್ಲದೆ ಯಾಜಕನು ತನ್ನ ಸ್ವಂತ ಎಡ ಅಂಗೈಯಲ್ಲಿ ಎಣ್ಣೆಯನ್ನು ಸುರಿಯಬೇಕು. \v 27 ಯಾಜಕನು ತನ್ನ ಬಲಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳು ಸಾರಿ ಯೆಹೋವ ದೇವರ ಎದುರಿನಲ್ಲಿ ಚಿಮುಕಿಸಬೇಕು. \v 28 ಇದಲ್ಲದೆ ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆಯೂ, ಅವನ ಬಲಗೈಯ ಹೆಬ್ಬೆರಳಿನ ಮೇಲೆಯೂ, ಅವನ ಬಲಗಾಲಿನ ಹೆಬ್ಬೆಟ್ಟಿನ ಮೇಲೆಯೂ ಪ್ರಾಯಶ್ಚಿತ್ತ ಬಲಿಯ ರಕ್ತದ ಸ್ಥಳದ ಮೇಲೆಯೂ ಹಚ್ಚಬೇಕು. \v 29 ಯಾಜಕನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು, ಯೆಹೋವ ದೇವರ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. \v 30 ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ ಸಮರ್ಪಿಸಬೇಕು. \v 31 ಅದರಂತೆಯೇ ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಧಾನ್ಯಸಮರ್ಪಣೆಯೊಂದಿಗೆ ಸಮರ್ಪಿಸಬೇಕು, ಶುದ್ಧಪಡಿಸಿಕೊಳ್ಳುವವನಿಗೋಸ್ಕರ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.” \p \v 32 ಚರ್ಮರೋಗವುಳ್ಳವನು ಶುದ್ಧತೆ ಮಾಡಿಸಿಕೊಳ್ಳಲು ಗತಿಯಿಲ್ಲದವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ. \s1 ಬೂಜು ಹಿಡಿದ ಮನೆಯನ್ನು ಶುದ್ಧಮಾಡುವುದು \p \v 33 ಯೆಹೋವ ದೇವರು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ: \v 34 “ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ, \v 35 ಮನೆಯವನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಬೂಜಿನ ಗುರುತಿದ್ದಂತೆ ಕಾಣುತ್ತಿದೆ,’ ಎಂದು ಹೇಳಬೇಕು. \v 36 ಆಗ ಯಾಜಕನು ಆ ಮನೆಯಲ್ಲಿ ಬೂಜನ್ನು ಪರೀಕ್ಷಿಸುವುದಕ್ಕೆ ಹೋಗುವ ಮೊದಲು, ಆ ಮನೆಯೊಳಗೆ ಇರುವವುಗಳು ಅಶುದ್ಧವಾಗದಂತೆ ಆ ಮನೆಯನ್ನು ಬರಿದುಮಾಡಬೇಕೆಂದು ಆಜ್ಞಾಪಿಸಬೇಕು. ತರುವಾಯ ಯಾಜಕನು ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು. \v 37 ಅವನು ಆ ಬೂಜನ್ನು ಪರೀಕ್ಷಿಸಿದಾಗ, ಅದು ಮನೆಯ ಗೋಡೆಗಳಲ್ಲಿ ತಗ್ಗಾದ ಸಾಲುಗಳಲ್ಲಿ ಹಸಿರಾಗಿಯಾದರೂ, ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ, \v 38 ಯಾಜಕನು ಆ ಮನೆಯ ಹೊರಗೆ ಮನೆಯ ಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳವರೆಗೆ ಮುಚ್ಚಬೇಕು. \v 39 ಏಳನೆಯ ದಿನದಲ್ಲಿ ಯಾಜಕನು ತಿರುಗಿಬಂದು ಪರೀಕ್ಷಿಸಿದಾಗ, ಆ ಬೂಜು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ, \v 40 ಬೂಜುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ, \v 41 ಆ ಮನೆಯ ಒಳಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯಬೇಕೆಂದೂ, \v 42 ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು, ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವುಮಾಡಬೇಕು. \p \v 43 “ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆತ್ತಿ ಗಿಲಾವು ಮಾಡಿಸಿದ ಮೇಲೆ ಆ ಬೂಜು ತಿರುಗಿ ಕಾಣಬಂದರೆ, \v 44 ಯಾಜಕನು ಬಂದು ಪರೀಕ್ಷಿಸಬೇಕು. ಆಗ ಬೂಜು ಮನೆಯಲ್ಲಿ ಹರಡಿಕೊಂಡಿದ್ದರೆ, ಆ ಮನೆಯಲ್ಲಿ ಅದೊಂದು ನಾಶಕರವಾದ ಬೂಜು ಆಗಿರುವುದು, ಆ ಮನೆ ಅಶುದ್ಧವಾದದ್ದು. \v 45 ಅವನು ಆ ಮನೆಯನ್ನು ಕೆಡವಿಹಾಕಿ, ಅದರ ಕಲ್ಲುಗಳನ್ನೂ, ಮರಗಳನ್ನೂ, ಆ ಮನೆಯ ಎಲ್ಲಾ ಧೂಳನ್ನೂ ತೆಗೆದು, ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು. \p \v 46 “ಆ ಮನೆಯು ಮುಚ್ಚಿರುವ ಕಾಲದಲ್ಲೆಲ್ಲಾ ಅದರೊಳಗೆ ಯಾವನಾದರೂ ಹೋದರೆ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರುವನು. \v 47 ಆ ಮನೆಯೊಳಗೆ ಮಲಗಿಕೊಳ್ಳುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅಲ್ಲದೆ ಆ ಮನೆಯೊಳಗೆ ತಿನ್ನುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. \p \v 48 “ಆದರೆ ಯಾಜಕನು ಒಳಗೆ ಬಂದು ಅದನ್ನು ಪರೀಕ್ಷಿಸಿದಾಗ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ಬೂಜು ಹರಡಿಕೊಂಡಿರದಿದ್ದರೆ, ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸಬೇಕು. ಏಕೆಂದರೆ ಆ ಬೂಜು ಹೊರಟುಹೋಯಿತು. \v 49 ಆ ಮನೆಯನ್ನು ಶುದ್ಧಪಡಿಸುವುದಕ್ಕೋಸ್ಕರ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣ ದಾರವನ್ನೂ, ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು. \v 50 ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು. \v 51 ತರುವಾಯ ದೇವದಾರು ಕಟ್ಟಿಗೆಯನ್ನೂ, ಹಿಸ್ಸೋಪನ್ನೂ, ರಕ್ತವರ್ಣ ದಾರವನ್ನೂ, ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು, ಅವುಗಳನ್ನು ವಧಿಸಿದ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ, ಏಳು ಸಾರಿ ಆ ಮನೆಗೆ ಚಿಮುಕಿಸಬೇಕು. \v 52 ಅವನು ಪಕ್ಷಿಯ ರಕ್ತದಿಂದಲೂ, ಹರಿಯುವ ನೀರಿನಿಂದಲೂ, ಸಜೀವವುಳ್ಳ ಪಕ್ಷಿಯಿಂದಲೂ, ದೇವದಾರು ಕಟ್ಟಿಗೆಯಿಂದಲೂ, ಹಿಸ್ಸೋಪಿನಿಂದಲೂ, ರಕ್ತವರ್ಣ ದಾರದಿಂದಲೂ ಆ ಮನೆಯನ್ನು ಶುದ್ಧೀಕರಿಸಬೇಕು. \v 53 ಆದರೆ ಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲಗಳಲ್ಲಿ ಬಿಟ್ಟುಬಿಡಬೇಕು. ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅದು ಶುದ್ಧವಾಗುವುದು.” \p \v 54 ಎಲ್ಲಾ ವಿಧವಾದ ಚರ್ಮರೋಗಕ್ಕೂ, ಇಸಬಿಗೂ, \v 55 ಬಟ್ಟೆಯ ಮತ್ತು ಮನೆಯ ಬೂಜಿಗೂ, \v 56 ಬಾವು, ಚರ್ಮವ್ಯಾಧಿಗೂ, ಹೊಳೆಯುವ ಕಲೆಗೂ \v 57 ಅವುಗಳ ಶುದ್ಧಾಶುದ್ಧ ಬೇಧವನ್ನು ಬೋಧಿಸುವ ನಿಯಮಗಳು ಇವೇ. \p ಚರ್ಮರೋಗಗಳ ಹಾಗೂ ಬೂಜಿನ ವಿಷಯದಲ್ಲಿರುವ ನಿಯಮಗಳು ಇವೇ. \c 15 \s1 ರಹಸ್ಯಾಂಗದ ಸ್ರಾವ \p \v 1 ಯೆಹೋವ ದೇವರು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 2 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಒಬ್ಬ ಪುರುಷನ ಶರೀರದಿಂದ ಮೇಹಸ್ರಾವ ಹರಿಯುವುದಾಗಿದ್ದರೆ, ಆ ಸ್ರಾವದ ನಿಮಿತ್ತವಾಗಿ ಅವನು ಅಶುದ್ಧನಾಗಿರುವನು. \v 3 ಅವನ ಸ್ರಾವದಲ್ಲಿ ಅದು ಅವನ ಅಶುದ್ಧತೆಯಾಗಿರುವುದು. ಅವನ ಶರೀರವು ತನ್ನ ಸ್ರಾವದಿಂದ ಹರಿಯುವುದಾಗಿದ್ದರೂ, ಸ್ರಾವವು ಅವನ ಶರೀರದಲ್ಲಿ ನಿಂತು ಹೋಗಿದ್ದರೂ, ಅದು ಅವನ ಅಶುದ್ಧತೆಯಾಗಿರುವುದು. ಅವನ ವಿಸರ್ಜನೆಯು ಹೇಗೆ ಅಶುದ್ಧತೆಯನ್ನು ತರುತ್ತದೆ ಅಂದರೆ: \p \v 4 “ ‘ಸ್ರಾವವಿರುವವನು ಮಲಗುವ ಪ್ರತಿಯೊಂದು ಹಾಸಿಗೆಯೂ ಅಶುದ್ಧವಾದದ್ದು, ಅವನು ಕೂತುಕೊಳ್ಳುವ ಪ್ರತಿಯೊಂದು ವಸ್ತುವೂ ಅಶುದ್ಧವಾಗಿರುವುದು. \v 5 ಅವನ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು, ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು. \v 6 ಇದಲ್ಲದೆ ಸ್ರಾವವಿರುವವನು ಕುಳಿತುಕೊಂಡ ಯಾವುದೇ ವಸ್ತುವಿನ ಮೇಲೆ ಕುಳಿತುಕೊಳ್ಳುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರುವರು. \p \v 7 “ ‘ಸ್ರಾವವಿರುವವನ ಶರೀರವನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಮತ್ತು ಸಂಜೆಯವರೆಗೆ ಅವರು ಅಶುದ್ಧನಾಗಿರಬೇಕು. \p \v 8 “ ‘ಶುದ್ಧರಾಗಿರುವವರ ಮೇಲೆ ಸ್ರಾವವಿರುವವನು ಉಗುಳಿದರೆ, ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು. \p \v 9 “ ‘ಸ್ರಾವವುಳ್ಳವನು ಏರಿ ಕುಳಿತುಕೊಂಡಿದ್ದ ತಡಿಯು ಅಶುದ್ಧವಾಗಿರುವುದು. \v 10 ಅವನ ಕೆಳಗಿರುವ ಯಾವುದಾದರೂ ವಸ್ತುವನ್ನು ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರಬೇಕು, ಅವುಗಳಲ್ಲಿ ಯಾವುದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರುವನು. \p \v 11 “ ‘ಸ್ರಾವವುಳ್ಳವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ, ಯಾರನ್ನಾದರೂ ಮುಟ್ಟಿದರೆ ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು. \p \v 12 “ ‘ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು. \p \v 13 “ ‘ಸ್ರಾವವುಳ್ಳವನು ತನ್ನ ಸ್ರಾವದಿಂದ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕ ಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗಿರುವನು. \v 14 ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು. \v 15 ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು. \p \v 16 “ ‘ಒಬ್ಬನಿಗೆ ವೀರ್ಯವು ಹೊರಟು ಹೋದರೆ, ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು, ಸಂಜೆಯವರೆಗೆ ಅಶುದ್ಧನಾಗಿರಬೇಕು. \v 17 ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮವನ್ನು ನೀರಿನಿಂದ ತೊಳೆದು, ಸಂಜೆಯವರೆಗೆ ಅಶುದ್ಧವಾಗಿರಬೇಕು. \v 18 ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು. \p \v 19 “ ‘ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತ ಸ್ರಾವವಿದ್ದರೆ, ಅವಳು ಏಳು ದಿವಸಗಳವರೆಗೆ ಪ್ರತ್ಯೇಕವಾಗಿರಬೇಕು, ಅವಳನ್ನು ಯಾರಾದರೂ ಮುಟ್ಟಿದರೆ, ಅವರು ಸಂಜೆಯವರೆಗೆ ಅಶುದ್ಧರಾಗಿರುವರು. \p \v 20 “ ‘ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ಹಾಸಿಗೆ ಅಶುದ್ಧವಾಗಿರುವುದು. ಅವಳು ಕೂತುಕೊಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರುವುದು. \v 21 ಅವಳ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರುವರು. \v 22 ಅವಳು ಯಾವುದರ ಮೇಲೆ ಕುಳಿತಿದ್ದಳೋ, ಅದನ್ನು ಮುಟ್ಟಿದವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. \v 23 ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕುಳಿತುಕೊಂಡ ಯಾವದರ ಮೇಲಾಗಲಿ ಇರುವುದನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು. \p \v 24 “ ‘ಯಾವನಾದರೂ ಅವಳೊಂದಿಗೆ ಸಂಗಮಿಸಿದರೆ ಮತ್ತು ಅವಳ ಸ್ರಾವವು ಅವನಿಗೆ ತಗಲಿದರೆ, ಅವನು ಏಳು ದಿವಸ ಅಶುದ್ಧನಾಗಿರಬೇಕು. ಅವನು ಮಲಗಿಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವುದು. \p \v 25 “ ‘ಇದಲ್ಲದೆ ಸ್ತ್ರೀಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ, ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದರೆ, ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು. ಅವಳು ಅಶುದ್ಧಳಾಗಿರುವಳು. \v 26 ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಹಾಸಿಗೆಯು, ಅವಳ ಮುಟ್ಟಿನ ಹಾಸಿಗೆಯಂತೆ ಅಶುದ್ಧವಾಗಿರುವುದು. ಅವಳು ಕುಳಿತುಕೊಳ್ಳುವುದೆಲ್ಲವೂ ಅವಳ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವುದು. \v 27 ಯಾರಾದರೂ ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧರಾಗಿರುವರು. ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. \p \v 28 “ ‘ಅವಳು ತನ್ನ ಸ್ರಾವದಿಂದ ಶುದ್ಧಳಾದರೆ, ಅವಳು ಶುದ್ಧಳಾದಂದಿನಿಂದ ತನಗಾಗಿ ಏಳು ದಿನಗಳನ್ನು ಲೆಕ್ಕಿಸಬೇಕು. \v 29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು, ದೇವದರ್ಶನದ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರಬೇಕು. \v 30 ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು, ಯಾಜಕನು ಅವಳಿಗಾಗಿ ಅವಳ ಅಶುದ್ಧತೆಯ ಸ್ರಾವದ ವಿಷಯದಲ್ಲಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. \p \v 31 “ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ” \p \v 32 ಮೇಹಸ್ರಾವವುಳ್ಳವನಿಗೂ ವೀರ್ಯ ಸ್ರಾವವುಳ್ಳವನಿಗೂ ಅವುಗಳಿಂದ ಅಶುದ್ಧವಾಗುವವರೆಗೂ ಇರುವ ನಿಯಮವು ಇದೆ. \v 33 ಮುಟ್ಟು ಇರುವವಳಿಗೂ, ಸ್ರಾವವಿರುವ ಪುರುಷನಿಗೂ ಸ್ತ್ರೀಗೂ, ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮ ಇದೆ. \c 16 \s1 ದೋಷಪರಿಹಾರಕ ಮಹಾದಿನ \p \v 1 ಆರೋನನ ಇಬ್ಬರು ಗಂಡು ಮಕ್ಕಳು ಯೆಹೋವ ದೇವರ ಸನ್ನಿಧಿಗೆ ಬಂದು ಸತ್ತಾಗ ಮೋಶೆಯಂದಿಗೆ ಯೆಹೋವ ದೇವರು ಮಾತನಾಡಿದರು. \v 2 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು. \p \v 3 “ಈ ಸೂಚನೆಗಳನ್ನು ಸಂಪೂರ್ಣವಾಗಿ ಅನುಸರಿಸಿದ ನಂತರವೇ ಆರೋನನು ಮಹಾಪರಿಶುದ್ಧ ಸ್ಥಳಕ್ಕೆ ಪ್ರವೇಶಿಸಬೇಕು: ಪಾಪ ಪರಿಹಾರದ ಬಲಿಗಾಗಿ ಒಂದು ಹೋರಿಯನ್ನು ಮತ್ತು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು. \v 4 ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು. \v 5 ಅವನು ಇಸ್ರಾಯೇಲರ ಸಭೆಯ ಕಡೆಯಿಂದ ಪಾಪ ಪರಿಹಾರದ ಬಲಿಗಾಗಿ ಎರಡು ಹೋತಗಳನ್ನು, ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಳ್ಳಬೇಕು. \p \v 6 “ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು. \v 7 ಅವನು ಎರಡು ಹೋತಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಂದು, ಅವುಗಳನ್ನು ಯೆಹೋವ ದೇವರ ಎದುರಿನಲ್ಲಿ ನಿಲ್ಲಿಸಬೇಕು. \v 8 ಆರೋನನು ಆ ಎರಡು ಹೋತಗಳಿಗಾಗಿ ಚೀಟುಹಾಕಬೇಕು. ಒಂದು ಚೀಟು ಯೆಹೋವ ದೇವರಿಗೋಸ್ಕರ, ಮತ್ತೊಂದು ಚೀಟು ಬಲಿಪಶುವಿಗೋಸ್ಕರ. \v 9 ಆರೋನನು ಯೆಹೋವ ದೇವರ ಚೀಟು ಬಿದ್ದ ಹೋತವನ್ನು ತಂದು, ಅದನ್ನು ಪಾಪ ಪರಿಹಾರದ ಬಲಿಗಾಗಿ ಸಮರ್ಪಿಸಬೇಕು. \v 10 ಆದರೆ ಬಲಿಪಶುವಿಗಾಗಿ ಚೀಟು ಬಿದ್ದ ಆ ಹೋತವನ್ನು ತನ್ನೊಂದಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ, ಅದನ್ನು ಬಲಿಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು. \p \v 11 “ಇದಲ್ಲದೆ ಆರೋನನು ಪಾಪ ಪರಿಹಾರದ ಬಲಿಯಾಗಿರುವ ಹೋರಿಯನ್ನು ತಂದು, ತನಗೋಸ್ಕರ ಮತ್ತು ತನ್ನ ಮನೆತನದವರಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ತನಗೋಸ್ಕರ ದೋಷಪರಿಹಾರಕ ಬಲಿಯಾಗಿ ಆ ಹೋರಿಯನ್ನು ವಧಿಸಬೇಕು. \v 12 ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು. \v 13 ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು. \v 14 ಆ ಹೋರಿಯ ರಕ್ತದಿಂದ ಸ್ವಲ್ಪ ತೆಗೆದುಕೊಂಡು, ಕರುಣಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು, ಕರುಣಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೇಕು. \p \v 15 “ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು. \v 16 ಇಸ್ರಾಯೇಲರ ಅಶುದ್ಧತ್ವದ ನಿಮಿತ್ತವಾಗಿಯೂ, ಎಲ್ಲಾ ಅಪರಾಧಗಳಿಗಾಗಿಯೂ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಅವರು ಅಶುದ್ಧತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ದೇವದರ್ಶನದ ಗುಡಾರಕ್ಕೂ ಅದರಂತೆಯೇ ಮಾಡಬೇಕು. \v 17 ಅವನು ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಮಹಾಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ, ತನ್ನ ಮನೆಯವರಿಗೆಲ್ಲರಿಗೋಸ್ಕರವೂ, ಇಸ್ರಾಯೇಲರ ಸಭೆಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಿ ಹೊರಗೆ ಬರುವ ತನಕ ದೇವದರ್ಶನದ ಗುಡಾರದಲ್ಲಿ ಒಬ್ಬ ಮನುಷ್ಯನೂ ಇರಬಾರದು. \p \v 18 “ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು. \v 19 ಅವನು ಏಳು ಸಾರಿ ಅದರ ಮೇಲೆ ರಕ್ತವನ್ನು ಚಿಮುಕಿಸಿ, ಅದನ್ನು ಶುದ್ಧಮಾಡಬೇಕು ಮತ್ತು ಇಸ್ರಾಯೇಲರ ಅಶುದ್ಧತೆಯನ್ನು ಹೋಗಲಾಡಿಸಿ, ಅದನ್ನು ಪರಿಶುದ್ಧ ಮಾಡಬೇಕು. \p \v 20 “ಹೀಗೆ ಮಹಾಪರಿಶುದ್ಧ ಸ್ಥಳಕ್ಕೂ, ಸಭೆಯ ಗುಡಾರಕ್ಕೂ, ಬಲಿಪೀಠಕ್ಕೂ ಸಂಧಾನದ ಕೊನೆಯಲ್ಲಿ ಅವನು ಒಂದು ಜೀವವುಳ್ಳ ಹೋತವನ್ನು ತರಬೇಕು. \v 21 ಆರೋನನು ಆ ಜೀವವುಳ್ಳ ಹೋತದ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು, ಅದರ ಮೇಲೆ ಇಸ್ರಾಯೇಲರ ಎಲ್ಲಾ ಅಕ್ರಮಗಳನ್ನೂ, ಅವರ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆಮಾಡಿ ಅವುಗಳನ್ನು ಹೋತದ ತಲೆಯ ಮೇಲೆ ಇರಿಸಿ, ನೇಮಕವಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು. \v 22 ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಮನುಷ್ಯನು ಹೋತವನ್ನು ಅಡವಿಗೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು. \p \v 23 “ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟುಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗಳನ್ನು ಅಲ್ಲಿಯೇ ಬಿಡಬೇಕು. \v 24 ಅವನು ಪರಿಶುದ್ಧ ಸ್ಥಳದಲ್ಲಿ ನೀರಿನಲ್ಲಿ ಸ್ನಾನಮಾಡಿ, ತನ್ನ ಬಳಕೆಯ ಬಟ್ಟೆಗಳನ್ನು ಧರಿಸಿಕೊಂಡು, ಹೊರಗೆ ಬಂದು ತನ್ನ ದಹನಬಲಿಯನ್ನೂ, ಜನರ ದಹನಬಲಿಯನ್ನೂ ಸಮರ್ಪಿಸಿ ತನಗೋಸ್ಕರವೂ, ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು. \v 25 ಪಾಪ ಪರಿಹಾರದ ಬಲಿಯ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. \p \v 26 “ಬಲಿಪಶುವಿಗಾಗಿ ಹೋತವನ್ನು ಹೋಗಲು ಬಿಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು. \v 27 ಇದಲ್ಲದೆ ಮಹಾಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯಾವುದರ ರಕ್ತವು ತರಲಾಗಿತ್ತೋ, ಆ ಪಾಪ ಪರಿಹಾರದ ಬಲಿಯ ಹೋರಿಯನ್ನು ಮತ್ತು ದೋಷಪರಿಹಾರ ಬಲಿಯ ಹೋತವನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಅವುಗಳ ಚರ್ಮವನ್ನೂ, ಮಾಂಸವನ್ನೂ, ಸಗಣಿಯನ್ನೂ ಸುಡಬೇಕು. \v 28 ಅವುಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ನಂತರ ಪಾಳೆಯದೊಳಕ್ಕೆ ಬರಬೇಕು. \p \v 29 “ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. \v 30 ನೀವು ಯೆಹೋವ ದೇವರ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ, ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡುವನು. \v 31 ಇದೇ ನಿಮಗೆ ಸಬ್ಬತ್\f + \fr 16:31 \fr*\fq ಸಬ್ಬತ್ \fq*\ft ಅಂದರೆ \ft*\fqa ವಿಶ್ರಾಂತಿಯ ದಿನ\fqa*\f* ದಿನವಾಗಿರುವುದು. ನಿಮಗೆ ನಿತ್ಯವಾದ ನಿಯಮವಿರುವಂತೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. \v 32 ಯಾವನು ತನ್ನ ತಂದೆಯ ಬದಲಾಗಿ ಮಹಾಯಾಜಕ ಉದ್ಯೋಗಕ್ಕೋಸ್ಕರ ಅಭಿಷಿಕ್ತನಾಗಿ ಪ್ರತಿಷ್ಟಿಸಲಾಗಿದ್ದಾನೋ, ಆ ಮಹಾಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. \v 33 ಹೀಗೆ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಇದಲ್ಲದೆ ಸಭೆಯ ಗುಡಾರಕ್ಕಾಗಿಯೂ, ಬಲಿಪೀಠಕ್ಕಾಗಿಯೂ ಪ್ರಾಯಶ್ಚಿತ್ತ ಮಾಡಬೇಕು. ಯಾಜಕರಿಗಾಗಿಯೂ, ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು. \p \v 34 “ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. \p ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು. \c 17 \s1 ರಕ್ತ ಭುಜಿಸುವುದು ನಿಷೇಧ \p \v 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, \v 2 “ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರೆಲ್ಲರಿಗೂ ಮಾತನಾಡಿ ಅವರಿಗೆ ಹೀಗೆ ಹೇಳು: ‘ಯೆಹೋವ ದೇವರು ನಿಮಗೆ ಇಂತೆಂದು ಆಜ್ಞಾಪಿಸುತ್ತಾರೆ. \v 3 ಇಸ್ರಾಯೇಲಿನ ಮನೆತನದಲ್ಲಿ ಯಾವನು ಒಂದು ಎತ್ತನ್ನಾಗಲಿ ಇಲ್ಲವೆ ಒಂದು ಕುರಿಯನ್ನಾಗಲಿ ಇಲ್ಲವೆ ಒಂದು ಆಡನ್ನಾಗಲಿ ಪಾಳೆಯದೊಳಗೆ ಆಗಲಿ ಇಲ್ಲವೆ ಪಾಳೆಯದ ಹೊರಗೆ ಆಗಲಿ ವಧಿಸಿ, \v 4 ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು. \v 5 ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು. \v 6 ಯಾಜಕನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಬಲಿಪೀಠದ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಯೆಹೋವ ದೇವರಿಗೆ ಆಹ್ಲಾದಕರ ಸುಗಂಧ ವಾಸನೆಯಾಗಿ ಸುಡಬೇಕು. \v 7 ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ\f + \fr 17:7 \fr*\fq ಮೇಕೆ ದೇವತೆ \fq*\ft ಎಂದರೆ ಮೇಕೆ ರೂಪದಲ್ಲಿ \ft*\fqa ದೆವ್ವವನ್ನು \fqa*\ft ಆರಾಧಿಸಿದ ಕಾನಾನ್ಯರು\ft*\f* ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’ \p \v 8 “ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರು ಇಲ್ಲವೆ ನಿಮ್ಮೊಳಗೆ ಪ್ರವಾಸಿಗರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸಿದರೆ, \v 9 ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು. \p \v 10 “ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. \v 11 ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ. \v 12 ಆದಕಾರಣ ನಾನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಿದೆನು, “ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ತಂಗಿರುವ ಪರಕೀಯರಲ್ಲಿಯಾಗಲಿ ಯಾರೂ ರಕ್ತವನ್ನು ಭುಜಿಸಬಾರದು.” \p \v 13 “ ‘ಇದಲ್ಲದೆ ಇಸ್ರಾಯೇಲರು ಯಾವ ಮನುಷ್ಯನಾದರೂ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವುದಕ್ಕಾಗಿ ಬೇಟೆಯಾಡಿ, ಯಾವುದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ, ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿನಿಂದ ಮುಚ್ಚಬೇಕು. \v 14 ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು. \p \v 15 “ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು. \v 16 ಆದರೆ ಅವನು ಬಟ್ಟೆಗಳನ್ನು ಒಗೆದುಕೊಳ್ಳದೆ ಇದ್ದರೆ, ಇಲ್ಲವೆ ತಾನು ಸ್ನಾನ ಮಾಡದಿದ್ದರೆ, ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.’ ” \c 18 \s1 ಅಕ್ರಮ ಲೈಂಗಿಕ ಸಂಬಂಧಗಳು \p \v 1 ಯೆಹೋವ ದೇವರು ಮೋಶೆಗೆ, \v 2 “ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು, ‘ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \v 3 ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು. \v 4 ನೀವು ನನ್ನ ನಿರ್ಣಯಗಳನ್ನು ಕೈಗೊಂಡು ಕಟ್ಟಳೆಗಳ ಪ್ರಕಾರ ನಡೆಯಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \v 5 ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು. \p \v 6 “ ‘ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯೊಡನೆ ಲೈಂಗಿಕ ಸಂಬಂಧ ಬೆಳೆಸಬಾರದು, ನಾನೇ ಯೆಹೋವ ದೇವರು. \p \v 7 “ ‘ನಿನ್ನ ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ, ನಿನ್ನ ತಂದೆಯನ್ನು ಅಗೌರವಿಸಬೇಡ. ಆಕೆ ನಿನ್ನ ತಾಯಿ: ಆಕೆಯೊಂದಿಗೆ ಇಂಥ ಸಂಬಂಧ ಬೇಡ. \p \v 8 “ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು. \p \v 9 “ ‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. \p \v 10 “ ‘ನಿನ್ನ ಮಗನ ಮಗಳ ಕೂಡ, ಇಲ್ಲವೆ ಮಗಳ ಮಗಳ ಕೂಡ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನಗೆ ಅಗೌರವವಾಗಿದೆ. \p \v 11 “ ‘ನಿನ್ನ ತಂದೆಯಿಂದ ಜನಿಸಿದ ನಿನ್ನ ತಂದೆಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ಸಹೋದರಿ. \p \v 12 “ ‘ನಿನ್ನ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಸಮೀಪ ಬಂಧು. \p \v 13 “ ‘ನಿನ್ನ ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ. \p \v 14 “ ‘ನಿನ್ನ ತಂದೆಯ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಬೇಡ. ನಿನ್ನ ತಂದೆಯ ಸಹೋದರನನ್ನು ಅಗೌರವಿಸಬೇಡ. ಆಕೆ ನಿನ್ನ ದೊಡ್ಡಮ್ಮ. \p \v 15 “ ‘ನಿನ್ನ ಸೊಸೆಯೊಂದಿಗೆ ಲೈಂಗಿಕ ಸಂಪರ್ಕ ಬೇಡ. ಆಕೆ ನಿನ್ನ ಮಗನ ಹೆಂಡತಿ. ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. \p \v 16 “ ‘ನೀನು ನಿನ್ನ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ಸಹೋದರನನ್ನು ಅಗೌರವಿಸುವುದು. \p \v 17 “ ‘ಸ್ತ್ರೀಯೊಂದಿಗೂ, ಆಕೆಯ ಮಗಳೊಂದಿಗೂ ಒಟ್ಟಿಗೆ ಲೈಂಗಿಕ ಸಂಪರ್ಕ ಬೇಡ. ಆಕೆಯ ಮಗನ ಮಗಳೊಂದಿಗಾದರೂ, ಮಗಳ ಮಗಳೊಂದಿಗಾದರೂ ಲೈಂಗಿಕ ಸಂಪರ್ಕ ಬೇಡ. ಅವರು ಆಕೆಯ ಹತ್ತಿರ ಸಂಬಂಧಿಗಳು. ಅದು ದುಷ್ಟತನ. \p \v 18 “ ‘ನಿನ್ನ ಹೆಂಡತಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದುಕೊಳ್ಳಬೇಡ. ಒಬ್ಬಳು ಜೀವಂತವಾಗಿರುವಾಗ ಮತ್ತೊಬ್ಬಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. \p \v 19 “ ‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯ ಸಂಪರ್ಕ ಮಾಡಬೇಡ. \p \v 20 “ ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ. \p \v 21 “ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು. \p \v 22 “ ‘ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರುಷನೊಂದಿಗೆ ಮಲಗಬಾರದು. ಅದು ಅಸಹ್ಯವಾದದ್ದು. \p \v 23 “ ‘ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಅಶುದ್ಧಮಾಡಿಕೊಳ್ಳಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು. ಅದು ಸ್ವಭಾವಕ್ಕೆ ವ್ಯತಿರಿಕ್ತವಾದದ್ದು. \p \v 24 “ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ. \v 25 ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು. \v 26 ಆದ್ದರಿಂದ ನೀವು ನನ್ನ ನಿಯಮಗಳನ್ನು, ನನ್ನ ನಿರ್ಣಯಗಳನ್ನು ಕೈಗೊಳ್ಳಬೇಕು. ಸ್ವದೇಶದವರಲ್ಲಿ ಯಾವನಾಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನೂ ಮಾಡಬಾರದು. \v 27 ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲಾ ಅಸಹ್ಯವಾದವುಗಳನ್ನು ಮಾಡಿದ್ದರಿಂದ ದೇಶವೂ ಅಶುದ್ಧವಾಯಿತು. \v 28 ನೀವೂ ಅದನ್ನು ಅಶುದ್ಧಮಾಡಿದರೆ, ಅದು ನಿಮಗಿಂತ ಮೊದಲಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವುದು. \p \v 29 “ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. \v 30 ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” \c 19 \s1 ಇಸ್ರಾಯೇಲರು ಅನುಸರಿಸಬೇಕಾದ ನಿಯಮಗಳು \p \v 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, \v 2 “ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ. \p \v 3 “ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \p \v 4 “ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \p \v 5 “ ‘ನೀವು ನಿಮ್ಮ ಯೆಹೋವ ದೇವರಿಗೆ ಸಮಾಧಾನದ ಬಲಿಯನ್ನು ಸಮರ್ಪಿಸುವುದಾದರೆ, ನೀವು ಆತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿಯೇ ಅರ್ಪಿಸಬೇಕು. \v 6 ಅದನ್ನು ನೀವು ಸಮರ್ಪಿಸಿದ ದಿನದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು. ಆದರೆ ಅದು ಮೂರನೆಯ ದಿನದವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು. \v 7 ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ, ಅದು ಅಸಹ್ಯವಾದದ್ದು, ಅದು ಅಂಗೀಕೃತವಾಗುವುದಿಲ್ಲ. \v 8 ಆದ್ದರಿಂದ ಅದನ್ನು ತಿನ್ನುವ ಪ್ರತಿಯೊಬ್ಬರೂ ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಏಕೆಂದರೆ ಯೆಹೋವ ದೇವರಿಗೆ ಪವಿತ್ರವಾದದ್ದನ್ನು ಅವರು ಅಶುದ್ಧಮಾಡಿದ್ದಾನೆ. ಅಂಥವರನ್ನು ತಮ್ಮ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು. \p \v 9 “ ‘ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು. ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು. \v 10 ನಿಮ್ಮ ದ್ರಾಕ್ಷಿತೋಟದಲ್ಲಿ ಹಕ್ಕಲಾಯಬಾರದು. ಇಲ್ಲವೆ ಪ್ರತಿಯೊಂದು ದ್ರಾಕ್ಷಿಯನ್ನೂ ಕೂಡಿಸಬಾರದು. ನೀವು ಅವುಗಳನ್ನು ಬಡವರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \p \v 11 “ ‘ಕದಿಯಬಾರದು. \p “ ‘ಸುಳ್ಳಾಡಬಾರದು. \p “ ‘ಒಬ್ಬರಿಗೊಬ್ಬರು ಮೋಸಮಾಡಬಾರದು. \p \v 12 “ ‘ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣ ಮಾಡಬಾರದು. ನಿಮ್ಮ ದೇವರ ಹೆಸರನ್ನು ಅಗೌರವಿಸಬಾರದು. ನಾನೇ ಯೆಹೋವ ದೇವರು. \p \v 13 “ ‘ನಿಮ್ಮ ನೆರೆಯವನನ್ನು ವಂಚಿಸಬಾರದು. \p “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು. \p \v 14 “ ‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು. \p \v 15 “ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು. \p \v 16 “ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. \p “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು. \p \v 17 “ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು. \p \v 18 “ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು. \p \v 19 “ ‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. \p “ ‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. \p “ ‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. \p “ ‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು. \p \v 20 “ ‘ಒಬ್ಬ ಪುರುಷನಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸುವುದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ, ಇಲ್ಲವೆ ಅವಳಿಗೆ ಸ್ವಾತಂತ್ರ್ಯವನ್ನು ಕೊಡದಿರದಿದ್ದರೆ, ತಕ್ಕ ಶಿಕ್ಷೆಯಾಗಬೇಕು. ಅವಳು ಸ್ವತಂತ್ರಳಲ್ಲದ ಕಾರಣ ಅವಳಿಗೆ ಮರಣದಂಡನೆಯನ್ನು ವಿಧಿಸಬಾರದು. \v 21 ಅವನು ಪ್ರಾಯಶ್ಚಿತ್ತ ಬಲಿಯ ಟಗರಾದ ತನ್ನ ಪ್ರಾಯಶ್ಚಿತ್ತ ಬಲಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿನಲ್ಲಿ ತರಬೇಕು. \v 22 ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಬಲಿಯಾಗಿರುವ ಟಗರಿನಿಂದ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನು ಮಾಡಿದ ಪಾಪವನ್ನು ಅವನಿಗೆ ಕ್ಷಮಿಸಲಾಗುವುದು. \p \v 23 “ ‘ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ, ಅದರ ಫಲವನ್ನು ಮೂರು ವರುಷಗಳವರೆಗೆ ಅಶುದ್ಧವೆಂದೆಣಿಸಿ\f + \fr 19:23 \fr*\fq ಅಶುದ್ಧ \fq*\ft ಹೀಬ್ರೂ ಭಾಷೆಯಲ್ಲಿ \ft*\fqa ಸುನ್ನತಿಯಾಗದ\fqa*\f* ಅದನ್ನು ತಿನ್ನಬಾರದು. \v 24 ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಯೆಹೋವ ದೇವರ ಸ್ತೋತ್ರಕ್ಕಾಗಿ ಪರಿಶುದ್ಧವಾಗಿರುವುದು. \v 25 ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \p \v 26 “ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. \p “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು. \p \v 27 “ ‘ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು. ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ಕೆಡಿಸಬಾರದು. \p \v 28 “ ‘ಸತ್ತವರಿಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು. ನಿಮ್ಮ ಮೇಲೆ ಯಾವ ಹಚ್ಚೆಗಳನ್ನೂ ಹಚ್ಚಿಸಿಕೊಳ್ಳಬಾರದು. ನಾನೇ ಯೆಹೋವ ದೇವರು. \p \v 29 “ ‘ನಿನ್ನ ಮಗಳು ವೇಶ್ಯೆಯಾಗುವಂತೆ ವ್ಯಭಿಚಾರಕ್ಕೆ ಬಿಡಬಾರದು. ಹಾಗೆ ಮಾಡಿದರೆ, ದೇಶವು ವೇಶ್ಯೆತನಕ್ಕೆ ಒಳಪಡುವುದು ಮತ್ತು ಕೆಟ್ಟತನದಿಂದ ತುಂಬಿಹೋಗುವುದು. \p \v 30 “ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು. \p \v 31 “ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \p \v 32 “ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು. \p \v 33 “ ‘ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ, ಅವನನ್ನು ಉಪದ್ರವ ಪಡಿಸಬೇಡಿರಿ. \v 34 ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೇ ಸ್ವದೇಶದವನಂತಿರಲಿ. ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಏಕೆಂದರೆ ನೀವು ಸಹ ಈಜಿಪ್ಟ್ ದೇಶದಲ್ಲಿ ಪರಕೀಯರಾಗಿದ್ದಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \p \v 35 “ ‘ನಿಮ್ಮ ನಿರ್ಣಯದಲ್ಲಿಯೂ, ಅಳೆಯುವುದರಲ್ಲಿಯೂ, ತೂಕದಲ್ಲಿಯೂ, ಅಳತೆಯಲ್ಲಿಯೂ ನೀವು ಅನ್ಯಾಯ ಮಾಡಬೇಡಿರಿ. \v 36 ತಕ್ಕಡಿ, ತೂಕದ ಕಲ್ಲುಗಳು, ಕಿಲೋಗ್ರಾಂ ಮತ್ತು ಲೀಟರ್ ನ್ಯಾಯಯುತವಾಗಿರಲಿ. ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ. \p \v 37 “ ‘ಆದ್ದರಿಂದ ನನ್ನ ಎಲ್ಲಾ ಆಜ್ಞೆಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ನೀವು ಅನುಸರಿಸಿ ನಡೆಯಬೇಕು. ನಾನೇ ಯೆಹೋವ ದೇವರು,’ ” ಎಂದು ಹೇಳಿದರು. \c 20 \s1 ಪಾಪಗಳಿಗೆ ಶಿಕ್ಷೆಗಳು \p \v 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 2 “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು. \v 3 ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ. \v 4 ಆ ಮನುಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ, ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ, ಅವನನ್ನು ಕೊಲ್ಲದೆ ಹೋದರೆ, \v 5 ಆಗ ನಾನು ಆ ಮನುಷ್ಯನಿಗೂ, ಅವನ ಕುಟುಂಬಕ್ಕೂ ವಿರೋಧವಾಗಿಯೂ, ವಿಮುಖವಾಗಿಯೂ ಇರುವೆನು. ಮೋಲೆಕನನ್ನು ಪೂಜೆ ಮಾಡಿದ್ದಕ್ಕಾಗಿ ಅವನನ್ನೂ, ದೇವದ್ರೋಹಿಗಳಾಗಿ ಅವನನ್ನು ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. \p \v 6 “ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. \p \v 7 “ ‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \v 8 ಇದಲ್ಲದೆ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಪಾಲಿಸಬೇಕು. ನಿಮ್ಮನ್ನು ಶುದ್ಧಪಡಿಸುವ ಯೆಹೋವ ದೇವರು ನಾನೇ. \p \v 9 “ ‘ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವರಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಯಾರು ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವರೋ, ಅವರ ಪಾಪವು ಸ್ವಯಂಕೃತವಾದುದು. \p \v 10 “ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. \p \v 11 “ ‘ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಗೆ ಮಾನಭಂಗ ಮಾಡಿದಂತೆ. ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು. \p \v 12 “ ‘ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ, ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರು ವಿಕೃತವನ್ನು ಮಾಡಿದ್ದಾರೆ, ಅವರ ಪಾಪವು ಅವರ ಮೇಲೆ ಇರುವುದು. \p \v 13 “ ‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು. \p \v 14 “ ‘ಒಬ್ಬ ಮನುಷ್ಯನು ಒಬ್ಬ ಸ್ತ್ರೀಯನ್ನೂ, ಅವಳ ತಾಯಿಯನ್ನೂ ಮದುವೆ ಮಾಡಿಕೊಂಡರೆ ಅದು ದುಷ್ಟತನವಾಗಿದೆ. ಆದ್ದರಿಂದ ನಿಮ್ಮಲ್ಲಿ ದುಷ್ಟತನವು ಇರದಂತೆ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು. \p \v 15 “ ‘ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು ಮತ್ತು ನೀವು ಆ ಪಶುವನ್ನು ವಧಿಸಬೇಕು. \p \v 16 “ ‘ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವುದಕ್ಕಾಗಿ ಮಲಗಿಕೊಂಡರೆ, ನೀವು ಆ ಸ್ತ್ರೀಯನ್ನೂ, ಆ ಪಶುವನ್ನೂ ಕೊಲ್ಲಬೇಕು. ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು. ಅವರ ಪಾಪವು ಅವರ ಮೇಲೆ ಇರುವುದು. \p \v 17 “ ‘ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯ ಬೆತ್ತಲೆತನವನ್ನು ನೋಡಿದರೆ, ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ. ಅವರನ್ನು ತಮ್ಮ ಜನರ ಮಧ್ಯದಿಂದ ತೆಗೆದುಹಾಕಬೇಕು. ಅವರ ರಕ್ತವು ಅವರ ಮೇಲೆ ಇರುವುದು. ಅವನು ತನ್ನ ಸಹೋದರಿಯನ್ನು ಸಂಗಮಿಸಿದ್ದರಿಂದ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳುವನು. \p \v 18 “ ‘ಒಬ್ಬ ಮನುಷ್ಯನು ಮುಟ್ಟಾದ ಸ್ತ್ರೀಯೊಂದಿಗೆ ಮಲಗಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಮಾಡಿದರೆ, ಅವನು ಆಕೆಯ ಮುಟ್ಟಿನ ಮೂಲವನ್ನು ಬಹಿರಂಗಪಡಿಸಿದ್ದಾನೆ. ಆಕೆ ಅದನ್ನು ಬಹಿರಂಗಪಡಿಸಿದ್ದಾಳೆ. ಅವರಿಬ್ಬರನ್ನೂ ಸ್ವಜನರಿಂದ ಬಹಿಷ್ಕರಿಸಬೇಕು. \p \v 19 “ ‘ನೀನು ನಿನ್ನ ತಾಯಿಯ ಸಹೋದರಿ ಇಲ್ಲವೆ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡ. ಅದು ಸಮೀಪ ಬಂಧುವನ್ನು ಅಗೌರವಿಸಿದ ಹಾಗೆ ಅದಕ್ಕೆ ನೀವಿಬ್ಬರೂ ಜವಾಬ್ದಾರರು. \p \v 20 “ ‘ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ, ಅವನು ತನ್ನ ಚಿಕ್ಕಪ್ಪನನ್ನು ಅಗೌರವಿಸಿದಂತೆ. ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು. ಅವರು ಮಕ್ಕಳಿಲ್ಲದೆ ಸಾಯುವರು. \p \v 21 “ ‘ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ, ಅದು ಅಶುದ್ಧವಾದದ್ದು. ಏಕೆಂದರೆ ಅವನು ತನ್ನ ಸಹೋದರನನ್ನು ಅಗೌರವಿಸಿದ್ದಾನೆ. ಅವರು ಮಕ್ಕಳಿಲ್ಲದವರಾಗುವರು. \p \v 22 “ ‘ನೀವು ನನ್ನ ಎಲ್ಲಾ ನಿಯಮಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ಕೈಗೊಂಡು ಪಾಲಿಸಬೇಕು. ಹೀಗಿದ್ದರೆ ನೀವು ವಾಸಿಸುವುದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ. \v 23 ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ. \v 24 ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \p \v 25 “ ‘ಆದ್ದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ, ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಇಲ್ಲವೆ ಪಕ್ಷಿಗಳಿಂದಲೂ ಇಲ್ಲವೆ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮ ಪ್ರಾಣಗಳನ್ನು ಅಶುದ್ಧಮಾಡಿಕೊಳ್ಳಬಾರದು. \v 26 ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು. \p \v 27 “ ‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’ ” \c 21 \s1 ಯಾಜಕರಿಗಾಗಿ ಕಟ್ಟಳೆಗಳು \p \v 1 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ, ಅವರಿಗೆ ಹೀಗೆ ಹೇಳು: ಸತ್ತವರ ದೇಹವನ್ನು ಮುಟ್ಟುವುದರಿಂದ ಯಾವ ಯಾಜಕನೂ ಅಪವಿತ್ರನಾಗಬಾರದು. \v 2 ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿಯಾಗಿ, ತಂದೆಯಾಗಿ, ಅವನ ಮಗನಿಗಾಗಿ, ಅವನ ಮಗಳಿಗಾಗಿ, ಅವನ ಸಹೋದರನಿಗಾಗಿ, \v 3 ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಹೊರತು, \v 4 ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿರುವುದರಿಂದ ತನ್ನನ್ನು ತಾನು ಅಪವಿತ್ರವಾಗಬಾರದು. \p \v 5 “ ‘ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿಕೊಳ್ಳಬಾರದು. ದೇಹವನ್ನು ಗಾಯಮಾಡಿಕೊಳ್ಳಬಾರದು. \v 6 ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು. \p \v 7 “ ‘ಯಾಜಕರು ತಮ್ಮ ದೇವರಿಗೆ ಪರಿಶುದ್ಧರಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಠ ಸ್ತ್ರೀಯನ್ನಾಗಲಿ, ಗಂಡನಿಂದ ವಿಚ್ಛೇದನ ಪಡೆದವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು. \v 8 ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು. \p \v 9 “ ‘ಯಾವುದೇ ಯಾಜಕನ ಮಗಳು ವ್ಯಭಿಚಾರ ಕೃತ್ಯದಿಂದ ತನ್ನನ್ನು ಅಪವಿತ್ರ ಮಾಡಿಕೊಂಡರೆ, ಅವಳು ತನ್ನ ತಂದೆಯನ್ನು ಅಗೌರವಿಸಿದ್ದಾಳೆ. ಅವಳನ್ನು ಬೆಂಕಿಯಿಂದ ಸುಡಬೇಕು. \p \v 10 “ ‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು. \v 11 ಯಾವ ಮೃತ ಶರೀರದ ಬಳಿಗೂ ಹೋಗಬಾರದು, ಅವನು ತನ್ನ ತಂದೆತಾಯಿಗಳ ಮರಣದ ನಿಮಿತ್ತ, ತನ್ನನ್ನು ಅಶುದ್ಧಮಾಡಿಕೊಳ್ಳಬಾರದು. \v 12 ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ಮತ್ತು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನೇ ಯೆಹೋವ ದೇವರು. \p \v 13 “ ‘ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು \v 14 ವಿಧವೆಯನ್ನಾಗಲಿ, ಗಂಡ ಬಿಟ್ಟ ಸ್ತ್ರೀಯನ್ನಾಗಲಿ, ಇಲ್ಲವೆ ಅಪವಿತ್ರಳನ್ನಾಗಲಿ, ವೇಶ್ಯೆಯನ್ನಾಗಲಿ, ಇಂಥವರನ್ನು ಅವನು ಮದುವೆಯಾಗಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. \v 15 ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಏಕೆಂದರೆ ಯೆಹೋವ ದೇವರಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.’ ” \p \v 16 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 17 “ಆರೋನನೊಂದಿಗೆ ಮಾತನಾಡಿ ಹೀಗೆ ಹೇಳು: ‘ನಿನ್ನ ಸಂತತಿಯ ವಂಶಾವಳಿಗಳಲ್ಲಿ ಯಾವನಿಗೆ ನ್ಯೂನತೆವಿರುತ್ತದೋ, ಅವನು ದೇವರ ರೊಟ್ಟಿಯನ್ನು ಸಮರ್ಪಿಸುವುದಕ್ಕಾಗಿ ಬರಬಾರದು. \v 18 ಊನಗೊಂಡ ಮನುಷ್ಯನು ಸಮೀಪಕ್ಕೆ ಬರಬಾರದು. ಎಂದರೆ, ಕಣ್ಣಿಲ್ಲದವನು, ಕುಂಟನು, ಕುರೂಪವುಳ್ಳವನು, ಅಂಗವಿಕಲನು, \v 19 ಮುರಿದ ಪಾದವುಳ್ಳವನು, ಮುರಿದ ಕೈಯುಳ್ಳವನು, \v 20 ಗೂನು ಬೆನ್ನುಳ್ಳವನು, ಗಿಡ್ಡನು, ಕಣ್ಣುಗಳಲ್ಲಿ ನ್ಯೂನತೆವುಳ್ಳವನು, ಕಜ್ಜಿತುರಿಗಳುಳ್ಳವನು, ತನ್ನನ್ನು ನಪುಂಸಕನನ್ನಾಗಿ ಮಾಡಿಕೊಂಡವನು, \v 21 ಯಾಜಕನಾದ ಆರೋನನ ಸಂತತಿಯಲ್ಲಿ ನ್ಯೂನತೆವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಬರಬಾರದು. ನ್ಯೂನತೆವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವುದಕ್ಕಾಗಿ ಸಮೀಪ ಬರಬಾರದು. \v 22 ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು. \v 23 ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ” \p \v 24 ಮೋಶೆಯು ಅದನ್ನು ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರಿಗೂ ಹೇಳಿದನು. \c 22 \p \v 1 ತರುವಾಯ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 2 “ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡು, ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡದಂತೆ ಇಸ್ರಾಯೇಲರು ನನಗೆ ಸಲ್ಲಿಸುವ ಪರಿಶುದ್ಧವಾದವುಗಳನ್ನು ಗೌರವದಿಂದ ಅವರು ಪ್ರತ್ಯೇಕವಾಗಿರಿಸಬೇಕು. ನಾನೇ ಯೆಹೋವ ದೇವರು. \p \v 3 “ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು. \p \v 4 “ ‘ಆರೋನನ ಸಂತತಿಯವರಲ್ಲಿ ಯಾವನಾದರೂ ಚರ್ಮರೋಗ ಇಲ್ಲವೆ ಸ್ರಾವವುಳ್ಳವನಿದ್ದರೆ, ಅವನು ಶುದ್ಧನಾಗುವವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು \v 5 ಇಲ್ಲವೆ ತನ್ನನ್ನು ಅಶುದ್ಧನಾಗುವಂತೆ ಹರಿದಾಡುವ ಯಾವುದನ್ನಾಗಲಿ ಇಲ್ಲವೆ ಅಶುದ್ಧ ಮನುಷ್ಯನನ್ನಾಗಲಿ ಮುಟ್ಟಿದವನು, \v 6 ಸಂಜೆಯವರೆಗೆ ಅಶುದ್ಧನಾಗಿರಬೇಕು. ಅವನು ನೀರಿನಲ್ಲಿ ಸ್ನಾನಮಾಡಿದ ಮೇಲೆ ಪರಿಶುದ್ಧವಾದವುಗಳನ್ನು ತಿನ್ನಬಹುದು. \v 7 ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ. \v 8 ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು. \p \v 9 “ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ. \p \v 10 “ ‘ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಅತಿಥಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. \v 11 ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ, ಅವನು ಅದರಲ್ಲಿ ತಿನ್ನಬಹುದು. ಅವನ ಮನೆಯಲ್ಲಿ ಹುಟ್ಟಿದವನು ಅದನ್ನು ತಿನ್ನಬಹುದು. \v 12 ಯಾಜಕನ ಮಗಳು ಒಬ್ಬ ಯಾಜಕನಲ್ಲದವನನ್ನು ಮದುವೆಯಾದರೆ, ಅವಳು ಸಮರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. \v 13 ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು. \p \v 14 “ ‘ಇದಲ್ಲದೆ ಯಾವನಾದರೂ ತಿಳಿಯದೆ ಪರಿಶುದ್ಧವಾದದ್ದನ್ನು ತಿಂದರೆ, ಅವನು ಅದರ ಐದನೆಯ ಪಾಲನ್ನು ಕೂಡಿಸಿ, ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡಬೇಕು. \v 15 ಇಸ್ರಾಯೇಲರು ಯೆಹೋವ ದೇವರಿಗೆ ಅರ್ಪಿಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು. \v 16 ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ” \s1 ಅಂಗೀಕೃತವಾಗದ ಅರ್ಪಣೆಗಳು \p \v 17 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 18 “ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದದ್ದು ಇದೇ, ‘ಇಸ್ರಾಯೇಲ್ ಮನೆತನದವರಲ್ಲಿಯಾಗಲಿ, ಇಸ್ರಾಯೇಲರಾದ ಪರಕೀಯರಲ್ಲಿಯಾಗಲಿ ಯಾರಾದರೂ ತಮ್ಮ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಯೆಹೋವ ದೇವರಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ \v 19 ನೀವು ನಿಮ್ಮ ಸ್ವಯಿಚ್ಛೆಯಿಂದ ಕಳಂಕರಹಿತವಾದ ಗಂಡು ಪಶು, ಕುರಿ ಅಥವಾ ಮೇಕೆಯನ್ನೇ ಅರ್ಪಿಸಬೇಕು. \v 20 ಆದರೆ ದೋಷವಿರುವ ಯಾವುದನ್ನೂ ಸಮರ್ಪಿಸಬಾರದು. ಏಕೆಂದರೆ ಅದು ನಿಮಗೋಸ್ಕರ ಅಂಗೀಕಾರವಾಗುವುದಿಲ್ಲ. \v 21 ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು. \v 22 ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು. \v 23 ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ. \v 24 ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವುದನ್ನೂ ಯೆಹೋವ ದೇವರಿಗೆ ಸಮರ್ಪಿಸಬಾರದು. ನಿಮ್ಮ ದೇಶದೊಳಗಿರುವ ಅಂಥ ಯಾವ ಬಲಿಯನ್ನಾದರೂ ನೀವು ಸಮರ್ಪಿಸಬಾರದು. \v 25 ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ” \p \v 26 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 27 “ಹೋರಿಯನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ, ಏಳು ದಿವಸಗಳವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸಿದರೆ ಅಂಗೀಕಾರವಾಗುವುದು. \v 28 ಹಸುವನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು. \p \v 29 “ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು, ಯೆಹೋವ ದೇವರಿಗೆ ಮಾಡುವ ಬಲಿದಾನವನ್ನು ಮೆಚ್ಚಿಗೆಯಾದ ರೀತಿಯಲ್ಲಿ ಸಮರ್ಪಿಸಬೇಕು. \v 30 ಅದೇ ದಿನದಲ್ಲಿ ಅದನ್ನು ತಿಂದುಬಿಡಬೇಕು. ಅದರಲ್ಲಿ ಯಾವುದನ್ನೂ ಮಾರನೆಯ ದಿನದವರೆಗೆ ಉಳಿಸಬಾರದು. ನಾನೇ ಯೆಹೋವ ದೇವರು. \p \v 31 “ಆದ್ದರಿಂದ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಮಾಡಬೇಕು. ನಾನೇ ಯೆಹೋವ ದೇವರು. \v 32 ನನ್ನ ಪರಿಶುದ್ಧವಾದ ಹೆಸರನ್ನು ಅಪರಿಶುದ್ಧಗೊಳಿಸಬಾರದು, ಏಕೆಂದರೆ ಇಸ್ರಾಯೇಲರ ಮಧ್ಯದಲ್ಲಿ ನಾನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವ ದೇವರು ನಾನೇ. \v 33 ನಿಮಗೆ ದೇವರಾಗಿರಲು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದೆನು. ನಾನೇ ಯೆಹೋವ ದೇವರು.” \c 23 \s1 ಆಚರಿಸಬೇಕಾದ ಹಬ್ಬಗಳು \p \v 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು. \s2 ಸಬ್ಬತ್ ದಿನ \p \v 3 “ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು. \s2 ಪಸ್ಕಹಬ್ಬ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ \p \v 4 “ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು. \v 5 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು. \v 6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. \v 7 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ. \v 8 ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ” \s2 ಸುಗ್ಗಿಯ ಪ್ರಥಮ ಫಲ \p \v 9 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 10 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. \v 11 ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಅರ್ಪಿಸಬೇಕು. ಸಬ್ಬತ್ ದಿನವಾದ ಮಾರನೆಯ ದಿನ ಯಾಜಕನು ಅದನ್ನು ಅರ್ಪಿಸಬೇಕು. \v 12 ನೀವು ಸಿವುಡನ್ನು ಅರ್ಪಿಸುವ ದಿನದಲ್ಲಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂತೆ ಒಂದು ವರ್ಷದ ಮತ್ತು ಕಳಂಕರಹಿತವಾದ ಕುರಿಮರಿಯನ್ನು ಅರ್ಪಿಸಬೇಕು. \v 13 ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ\f + \fr 23:13 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಎಫಾದ ಹತ್ತನೇ ಎರಡು ಭಾಗ, \fqa*\ft ಅಂದರೆ ಸುಮಾರು 3.2 ಕಿಲೋಗ್ರಾಂ\ft*\f* ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್\f + \fr 23:13 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಒಂದು ಹಿನ್ ನಾಲ್ಕನೆಯ ಒಂದು ಭಾಗ, \fqa*\ft ಅಂದರೆ ಸುಮಾರು 1 ಲೀಟರ್\ft*\f* ದ್ರಾಕ್ಷಾರಸ ಆಗಿರಬೇಕು. \v 14 ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು. \s2 ವಾರಗಳ ಹಬ್ಬ \p \v 15 “ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು. \v 16 ಏಳನೆಯ ಸಬ್ಬತ್ ದಿನದ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಯೆಹೋವ ದೇವರಿಗೆ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸಬೇಕು. \v 17 ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು. \v 18 ಇದಲ್ಲದೆ ನೀವು ರೊಟ್ಟಿಯೊಂದಿಗೆ ಕಳಂಕರಹಿತವಾದ ಒಂದು ವರ್ಷದ ಏಳು ಕುರಿಮರಿಗಳನ್ನೂ ಒಂದು ಎಳೆಯ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಅವು ಯೆಹೋವ ದೇವರಿಗೆ ದಹನಬಲಿಗಳಾಗುವುವು. ಅವುಗಳೊಂದಿಗೆ ಆಹಾರ ಬಲಿಯು ಮತ್ತು ಪಾನಾರ್ಪಣೆಗಳು, ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. \v 19 ತರುವಾಯ ಹೋತವನ್ನು ಪಾಪ ಪರಿಹಾರದ ಬಲಿಯಾಗಿಯೂ ಮತ್ತು ಸಮಾಧಾನ ಬಲಿಯಾಗಿ ಒಂದು ವರ್ಷದ ಎರಡು ಕುರಿಮರಿಗಳನ್ನು ಬಲಿಯಾಗಿ ಅರ್ಪಿಸಬೇಕು. \v 20 ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು. \v 21 ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ. \p \v 22 “ ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” \s2 ತುತೂರಿಗಳ ಹಬ್ಬ \p \v 23 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 24 “ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು. \v 25 ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ದಹನಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು,’ ” ಎಂದು ಹೇಳಿದರು. \s2 ಪ್ರಾಯಶ್ಚಿತ್ತದ ದಿನ \p \v 26 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 27 “ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. \v 28 ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು. \v 29 ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು. \v 30 ಅದೇ ದಿವಸದಲ್ಲಿ ಯಾರಾದರೂ ಕೆಲಸವನ್ನು ಮಾಡಿದರೆ, ಅವರನ್ನು ನಾನು ಅವರ ಜನರ ಮಧ್ಯದಿಂದ ನಾಶಮಾಡುವೆನು. \v 31 ನೀವು ಯಾವ ತರಹದ ಕೆಲಸವನ್ನೂ ಮಾಡಬಾರದು. ಇದು ನಿಮ್ಮ ಸಂತತಿಗೆ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. \v 32 ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ. \s2 ಗುಡಾರಗಳ ಹಬ್ಬ \p \v 33 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 34 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು. \v 35 ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವುದು. ನೀವು ಅದರಲ್ಲಿ ಕಷ್ಟಕರವಾದ ಕೆಲಸಗಳನ್ನು ಮಾಡಬಾರದು. \v 36 ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು. \p \v 37 “ ‘ನೀವು ಪರಿಶುದ್ಧ ಸಭೆಯಾಗಿ ಯೆಹೋವ ದೇವರ ನೇಮಕವಾದ ಹಬ್ಬಗಳು ಇವೇ. ಇವುಗಳ ಒಂದೊಂದು ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ, ಯಜ್ಞವನ್ನೂ, ಪಾನದ್ರವ್ಯ ಬಲಿಗಳನ್ನೂ ಅರ್ಪಿಸಬೇಕು. \v 38 ಯೆಹೋವ ದೇವರ ವಿಶ್ರಾಂತಿಯ ದಿನಗಳ ಹೊರತಾಗಿಯೂ, ನೀವು ಯೆಹೋವ ದೇವರಿಗೆ ಸಮರ್ಪಿಸುವ ನಿಮ್ಮ ದಾನಗಳ ಹೊರತಾಗಿಯೂ, ನಿಮ್ಮ ಎಲ್ಲಾ ಹರಕೆಗಳ ಹೊರತಾಗಿಯೂ, ನಿಮ್ಮ ಎಲ್ಲಾ ಸ್ವಯಿಚ್ಛೆಯ ಕಾಣಿಕೆಗಳ ಹೊರತಾಗಿಯೂ ಸಲ್ಲಿಸಬೇಕಾದ ಅರ್ಪಣೆಗಳಿರುತ್ತವೆ. \p \v 39 “ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು. \v 40 ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು. \v 41 ವರ್ಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಯೆಹೋವ ದೇವರಿಗಾಗಿ ಕೈಗೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. \v 42 ಏಳು ದಿವಸಗಳವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು. ಸ್ವದೇಶೀಯರಾದ ಇಸ್ರಾಯೇಲರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸಬೇಕು. \v 43 ಏಕೆಂದರೆ ನಾನು ಇಸ್ರಾಯೇಲರನ್ನು ಈಜಿಪ್ಟ್ ದೇಶದೊಳಗಿನಿಂದ ಹೊರಗೆ ಬರಮಾಡಿದಾಗ, ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” \p \v 44 ಹೀಗೆ ಮೋಶೆಯು ಇಸ್ರಾಯೇಲರಿಗೆ ಯೆಹೋವ ದೇವರ ಹಬ್ಬಗಳನ್ನು ನೇಮಕಮಾಡಿದನು. \c 24 \s1 ಯೆಹೋವ ದೇವರ ಸನ್ನಿಧಿಯಲ್ಲಿ ದೀಪಸ್ತಂಭಗಳು ಮತ್ತು ರೊಟ್ಟಿಗಳು \p \v 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 2 “ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು. \v 3 ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು. \v 4 ದೀಪಗಳು ಚೊಕ್ಕ ಬಂಗಾರದ ದೀಪಸ್ತಂಭದ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು. \p \v 5 “ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು\f + \fr 24:5 \fr*\ft ಎಫಾದ ಹತ್ತರಲ್ಲಿ ಎರಡನೆಯ ಭಾಗ, ಅಂದರೆ 3.2 ಕಿಲೋಗ್ರಾಂ\ft*\f* ಇರಬೇಕು. \v 6 ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು. \v 7 ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. \v 8 ಪ್ರತಿಯೊಂದು ಸಬ್ಬತ್ ದಿನದಲ್ಲಿಯೂ ಯೆಹೋವ ದೇವರ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮಪಡಿಸಬೇಕು. ಇದು ಇಸ್ರಾಯೇಲರ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. \v 9 ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.” \s1 ದೇವದೂಷಕನಿಗೆ ಮರಣಶಿಕ್ಷೆ \p \v 10 ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ, ಈಜಿಪ್ಟಿನವನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲರ ಪಾಳ್ಯಕ್ಕೆ ಬಂದನು. ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಜಗಳವಾಡಿದರು. \v 11 ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು. \v 12 ಯೆಹೋವ ದೇವರ ಮನಸ್ಸನ್ನು ತಿಳಿಯುವಂತೆ ಅವನನ್ನು ಕಾವಲಲ್ಲಿ ಬಿಟ್ಟರು. \p \v 13 ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 14 “ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ. \v 15 ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ಶಪಿಸುವವನು, ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. \v 16 ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು. \p \v 17 “ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು. \v 18 ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು. \v 19 ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು. \v 20 ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವರು ಒಬ್ಬರಿಗೆ ಊನ ಮಾಡಿದ ಹಾಗೆಯೇ ಅವರಿಗೂ ಮಾಡಬೇಕು. \v 21 ಪಶುವನ್ನು ಕೊಲ್ಲುವವರು ಅದಕ್ಕೆ ಬದಲುಕೊಡಬೇಕು. ಮನುಷ್ಯರನ್ನು ಕೊಲ್ಲುವವರನ್ನು ಮರಣಕ್ಕೆ ಒಳಪಡಿಸಬೇಕು. \v 22 ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” \p \v 23 ಶಪಿಸಿದವನನ್ನು ಪಾಳೆಯದ ಹೊರಗೆ ತಂದು, ಅವನನ್ನು ಕಲ್ಲುಗಳಿಂದ ಹೊಡೆಯುವಂತೆ ಮೋಶೆಯು ಇಸ್ರಾಯೇಲರೊಂದಿಗೆ ಮಾತನಾಡಿದನು. ಆಗ ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು. \c 25 \s1 ಸಬ್ಬತ್ ವರ್ಷ \p \v 1 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ, ದೇಶವು ಯೆಹೋವ ದೇವರಿಗಾಗಿ ಸಬ್ಬತ್ ದಿನವನ್ನು ಕೈಗೊಳ್ಳಬೇಕು. \v 3 ಆರು ವರ್ಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು. ಆರು ವರ್ಷ ನೀವು ನಿಮ್ಮ ದ್ರಾಕ್ಷಿತೋಟವನ್ನು ಕತ್ತರಿಸಬೇಕು, ಅವುಗಳಿಂದ ಫಲವನ್ನು ಕೂಡಿಸಬೇಕು. \v 4 ಆದರೆ ಏಳನೆಯ ವರ್ಷವು ನೆಲಕ್ಕೆ ವಿಶ್ರಾಂತಿಕಾಲವಾಗಿರುವುದು. ಅದು ಯೆಹೋವ ದೇವರಿಗೆ ಸಬ್ಬತ್ ಕಾಲವಾಗಿರುವುದು. ನೀವು ಆ ವರ್ಷದಲ್ಲಿ ನಿಮ್ಮ ಹೊಲವನ್ನು ಬಿತ್ತಬಾರದು. ಇಲ್ಲವೆ ದ್ರಾಕ್ಷಿತೋಟವನ್ನು ಕತ್ತರಿಸಬಾರದು. \v 5 ತನ್ನಷ್ಟಕ್ಕೆ ತಾನೇ ಬೆಳೆದಿರುವ ಪೈರನ್ನು ನೀವು ಕೊಯ್ಯಬಾರದು. ಇಲ್ಲವೆ ಕತ್ತರಿಸದಿರುವ ದ್ರಾಕ್ಷಿಯ ಬಳ್ಳಿಯ ದ್ರಾಕ್ಷಿಹಣ್ಣುಗಳನ್ನು ಕೂಡಿಸಬಾರದು. ಏಕೆಂದರೆ ಅದು ದೇಶಕ್ಕೆ ವಿಶ್ರಾಂತಿಯ ವರ್ಷವಾಗಿರುವುದು. \v 6 ದೇಶದ ಆ ಸಬ್ಬತ್ ವರ್ಷದಲ್ಲಿ ತಾನಾಗಿಯೇ ಬೆಳೆದದ್ದು ನಿಮ್ಮ ಆಹಾರಕ್ಕಾಗಿ ಇರುವುದು. ಅದು ನಿಮಗೂ, ನಿಮ್ಮ ದಾಸದಾಸಿಯರಿಗೂ, ನಿಮ್ಮ ಕೂಲಿಯವರಿಗೂ, ನಿಮ್ಮೊಂದಿಗೆ ಪ್ರವಾಸಿಯಾಗಿರುವ ಪರಕೀಯರಿಗೂ, \v 7 ನಿಮ್ಮ ದೇಶದಲ್ಲಿರುವ ಹುಟ್ಟುವಳಿಯೆಲ್ಲಾ ನಿಮ್ಮ ಪಶು ಮತ್ತು ಕಾಡುಮೃಗಗಳಿಗೆ ಆಹಾರವಾಗಬಹುದು. \s1 ಜೂಬಿಲಿ ವರ್ಷ \p \v 8 “ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು. \v 9 ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು. \v 10 ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು. \v 11 ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು. \v 12 ಏಕೆಂದರೆ ಅದು ಜೂಬಿಲಿ. ಅದು ನಿಮಗೆ ಪರಿಶುದ್ಧವಾಗಿರುವುದು. ಹೊಲದೊಳಗಿಂದ ಬೆಳೆದ ಹುಟ್ಟುವಳಿಯನ್ನು ನೀವು ತಿನ್ನಬೇಕು. \p \v 13 “ ‘ಜೂಬಿಲಿಯ ಈ ವರ್ಷದಲ್ಲಿ ಪ್ರತಿಯೊಬ್ಬನು ತನ್ನ ಆಸ್ತಿಗೆ ಹಿಂದಿರುಗಬೇಕು. \p \v 14 “ ‘ನೆರೆಯವನಿಗೆ ಏನಾದರೂ ಮಾರಾಟ ಮಾಡಿದ್ದರೆ, ಇಲ್ಲವೆ ನೆರೆಯವನಿಂದ ಕೊಂಡುಕೊಂಡಿದ್ದರೆ, ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. \v 15 ಜೂಬಿಲಿಯ ತರುವಾಯ ವರ್ಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರ್ಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು. \v 16 ವರ್ಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನೂ ಹೆಚ್ಚಿಸಬೇಕು. ವರ್ಷಗಳು ಕಡಿಮೆಯಿರುವಂತೆಯೇ ಫಲದ ಬೆಲೆಯನ್ನು ಕಡಿಮೆ ಮಾಡಬೇಕು. ಫಲದ ವರ್ಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟಮಾಡಬೇಕು. \v 17 ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \p \v 18 “ ‘ಹೀಗೆ ನೀವು ನನ್ನ ನಿಯಮಗಳನ್ನು ಪಾಲಿಸಬೇಕು, ನನ್ನ ನಿರ್ಣಯಗಳನ್ನು ಕೈಗೊಂಡು ನಡೆಯಬೇಕು. ಆಗ ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ. \v 19 ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ. \v 20 ನೀವು, “ನಾವು ಬಿತ್ತುವುದಿಲ್ಲ, ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವುದಿಲ್ಲ. ಏಳನೆಯ ವರ್ಷದಲ್ಲಿ ನಾವು ಏನು ತಿನ್ನೋಣ,” ಎನ್ನುವಿರಿ. \v 21 ಆಗ ನಾನು, “ಆರನೆಯ ವರ್ಷದಲ್ಲಿ ಮೂರು ವರ್ಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಕೊಡುವೆನು. \v 22 ನೀವು ಎಂಟನೆಯ ವರ್ಷದಲ್ಲಿ ಬಿತ್ತಿ, ಅದರ ಫಲವನ್ನು ಒಂಬತ್ತನೆಯ ವರ್ಷದವರೆಗೆ ತಿನ್ನುವಿರಿ. ಅದರ ಫಲ ಬರುವವರೆಗೆ ತಿನ್ನುವಿರಿ, ಅದರ ಫಲ ಬರುವವರೆಗೆ ನೀವು ಸಂಗ್ರಹಿಸಿದ ಹಳೆಯದನ್ನೇ ತಿನ್ನುವಿರಿ,” ಎಂದು ಹೇಳುತ್ತೇನೆ. \p \v 23 “ ‘ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು. ಏಕೆಂದರೆ ಭೂಮಿಯು ನನ್ನದು. ನನ್ನೊಂದಿಗೆ ನೀವು ಪರಕೀಯರೂ, ಪ್ರವಾಸಿಗಳೂ ಆಗಿದ್ದೀರಿ. \v 24 ನಿಮ್ಮ ಸ್ವಾಧೀನದಲ್ಲಿರುವ ನಿಮ್ಮ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು. \p \v 25 “ ‘ನಿಮ್ಮ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸೊತ್ತಿನಲ್ಲಿ ಸ್ವಲ್ಪವನ್ನು ಮಾರಿದರೆ, ಅವನ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು. \v 26 ಬಿಡಿಸುವ ಬಂಧುವು ಇಲ್ಲದೆ ಹೋದರೆ, ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಂತಾದರೆ, \v 27 ಅವನು ಅದನ್ನು ಮಾರಿದ ವರ್ಷಗಳನ್ನು ಲೆಕ್ಕಿಸಿ, ಅದನ್ನು ಮಾರಿದವನಿಗೆ ಮಿಕ್ಕ ಕ್ರಯವನ್ನು ಪೂರ್ತಿಮಾಡಿ, ತನ್ನ ಸ್ವಂತ ಹೊಲವನ್ನು ಸ್ವಾಧೀನಪಡಿಸಿಕೊಳ್ಳಬಹುದು. \v 28 ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು. \p \v 29 “ ‘ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದಲ್ಲಿರುವ ನಿವಾಸದ ಮನೆಯನ್ನು ಮಾರಿದರೆ, ಅದನ್ನು ಮಾರಿದ ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು. ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡಿಸಬಹುದು. \v 30 ಆದರೆ ವರ್ಷವು ಪೂರ್ಣವಾಗುವುದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ, ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. ಜೂಬಿಲಿಯ ವರ್ಷದಲ್ಲಿ ಅದು ಬಿಡುಗಡೆಯಾಗಬಾರದು. \v 31 ಆದರೆ ಸುತ್ತಲೂ ಗೋಡೆಗಳಿಲ್ಲದೆ ಹಳ್ಳಿಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದು. ಜೂಬಿಲಿಯ ವರ್ಷದಲ್ಲಿ ಅವು ಬಿಡುಗಡೆ ಆಗಬೇಕು. \p \v 32 “ ‘ಲೇವಿಯರ ಪಟ್ಟಣಗಳ ವಿಷಯವಾಗಿಯೂ, ಅವರ ಸ್ವಾಧೀನವಾಗಿರುವ ಪಟ್ಟಣಗಳ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು. \v 33 ಲೇವಿಯರಿಂದ ಏನಾದರೂ ಕೊಂಡುಕೊಂಡರೆ, ಕೊಂಡುಕೊಂಡ ಮನೆಯೂ, ಅವನ ಸ್ವಾಸ್ತ್ಯದ ಪಟ್ಟಣವೂ ಜೂಬಿಲಿಯ ವರ್ಷದಲ್ಲಿ ಬಿಡುಗಡೆಯಾಗಬೇಕು. ಏಕೆಂದರೆ ಲೇವಿಯರ ಪಟ್ಟಣಗಳ ಮನೆಗಳು ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸ್ವಾಧೀನವಾಗಿವೆ. \v 34 ಆದರೆ ಅವರ ಪಟ್ಟಣಗಳ ಉಪನಗರಗಳ ಹೊಲವನ್ನು ಮಾರಬಾರದು. ಏಕೆಂದರೆ ಅದು ಅವರಿಗೆ ಶಾಶ್ವತವಾದ ಸೊತ್ತು. \p \v 35 “ ‘ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣವಾಗಿ ಬಿದ್ದುಕೊಂಡರೆ, ಅವನು ಪರಕೀಯನಾಗಿದ್ದರೂ, ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡಬೇಕು. \v 36 ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವರಿಗೆ ಭಯಪಡು. \v 37 ನೀನು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ನಿನ್ನ ಆಹಾರವನ್ನು ಲಾಭಕ್ಕಾಗಿ ಸಾಲವಾಗಿ ಕೊಡಬೇಡ. \v 38 ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ, ನಿನಗೆ ದೇವರಾಗಿರುವಂತೆಯೂ ನಿನ್ನನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಯೆಹೋವ ದೇವರು ನಾನೇ. \p \v 39 “ ‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು. \v 40 ಆದರೆ ಕೂಲಿಯಾಳಂತೆಯೂ, ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದವರೆಗೆ ನಿನಗೆ ಸೇವೆಮಾಡಲಿ. \v 41 ತರುವಾಯ ಅವನು ನಿನ್ನ ಬಳಿಯಿಂದ ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೆ ಹಿಂದಿರುಗಬೇಕು. ತನ್ನ ಪಿತೃಗಳ ಸೊತ್ತಿಗೂ ಅವನು ಹಿಂದಿರುಗಬೇಕು. \v 42 ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಕರತಂದ ಇಸ್ರಾಯೇಲರು ನನ್ನ ಸೇವಕರಾಗಿದ್ದಾರೆ, ದಾಸರನ್ನು ಮಾರುವಂತೆ ಅವರನ್ನು ಮಾರಬಾರದು. \v 43 ನೀನು ಕಠಿಣವಾಗಿ ಅವನ ಮೇಲೆ ಅಧಿಕಾರ ಚಲಾಯಿಸಬಾರದು. ನಿನ್ನ ದೇವರಿಗೆ ಭಯಪಡಬೇಕು. \p \v 44 “ ‘ನಿನ್ನ ಸುತ್ತಲೂ ಇರುವ ಇತರ ಜನರು ನಿನಗೆ ದಾಸ ದಾಸಿಯರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು. \v 45 ಇದಲ್ಲದೆ ನಿನ್ನ ಮಧ್ಯದೊಳಗಿರುವ ಪರಕೀಯ ಪ್ರವಾಸಿಗಳ ಮಕ್ಕಳಿಂದ ಮತ್ತು ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ದೇಶದೊಳಗೆ ಅವರು ಪಡೆದವರಿಂದ ನೀನು ಕೊಂಡುಕೊಳ್ಳಬಹುದು ಮತ್ತು ಅವರು ನಿನ್ನ ಸ್ವತ್ತಾಗಿರುವರು. \v 46 ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವತ್ತಾಗುವ ಬಾಧ್ಯತೆಯಾಗಿ ತೆಗೆದುಕೊಳ್ಳಬೇಕು. ಅವರು ಶಾಶ್ವತವಾಗಿ ನಿಮ್ಮ ದಾಸರಾಗಿರುವರು. ಆದರೆ ಇಸ್ರಾಯೇಲರಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದಬ್ಬಾಳಿಕೆಯನ್ನು ನಡೆಸಬೇಡಿರಿ. \p \v 47 “ ‘ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿ ಇಲ್ಲವೆ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು. \v 48 ಅವನ ಸಹೋದರರಲ್ಲಿ ಒಬ್ಬನು ಈಡುಕೊಟ್ಟು ಅವನನ್ನು ವಿಮೋಚಿಸಬಹುದು. \v 49 ಅವನ ಚಿಕ್ಕಪ್ಪನಾಗಲಿ ಇಲ್ಲವೆ ಅವನ ಚಿಕ್ಕಪ್ಪನ ಮಗನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸಮೀಪವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು. \v 50 ಅವನು ತನ್ನನ್ನು ಮಾರಿಕೊಂಡ ವರುಷ ಮೊದಲುಗೊಂಡು ಮುಂದಿನ ಜೂಬಿಲಿ ಸಂವತ್ಸರದವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವುದು. \v 51 ಜೂಬಿಲಿ ಸಂವತ್ಸರದವರೆಗೆ ಇನ್ನು ಬಹಳ ವರುಷಗಳಿದ್ದರೆ ಅವುಗಳ ಪ್ರಕಾರ ತನ್ನ ವಿಮೋಚನೆಯ ಕ್ರಯವನ್ನು ಕೊಡಬೇಕು. \v 52 ಜೂಬಿಲಿ ಸಂವತ್ಸರದವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರ್ಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನಿಗೆ ಸಲ್ಲಿಸಬೇಕು. \v 53 ವರ್ಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಯಜಮಾನನು ಅವನನ್ನು ಕಠಿಣವಾಗಿ ನಡೆಸಿಕೊಳ್ಳುತ್ತಿರುವುದನ್ನು ನೀವು ನೋಡುತ್ತಾ ಸುಮ್ಮನಿರಬಾರದು. \p \v 54 “ ‘ಈ ವರುಷಗಳಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ, ಜೂಬಿಲಿ ಸಂವತ್ಸರದಲ್ಲಿ ಅವನು ಮಕ್ಕಳೊಂದಿಗೆ ಬಿಡುಗಡೆಯಾಗಬೇಕು. \v 55 ಏಕೆಂದರೆ ಇಸ್ರಾಯೇಲರು ನನ್ನ ದಾಸರು ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿನ್ನ ದೇವರಾದ ಯೆಹೋವ ದೇವರು ನಾನೇ. \c 26 \s1 ವಿಧೇಯತೆಗೆ ಬಹುಮಾನ \p \v 1 “ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. \p \v 2 “ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು. \p \v 3 “ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ, \v 4 ನಿಮಗೆ ಮಳೆಯನ್ನು ತಕ್ಕ ಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವುದು. ಭೂಮಿಯ ಮರಗಳು ಅವುಗಳ ಫಲವನ್ನು ಕೊಡುವವು. \v 5 ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ. \p \v 6 “ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ. \v 7 ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ, ಅವರು ಖಡ್ಗದಿಂದ ನಿಮ್ಮ ಮುಂದೆ ಬೀಳುವರು. \v 8 ನಿಮ್ಮಲ್ಲಿಯ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿಯ ನೂರು ಮಂದಿ, ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ಖಡ್ಗದಿಂದ ನಿಮ್ಮ ಮುಂದೆ ಬೀಳುವರು. \p \v 9 “ ‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. \v 10 ನೀವು ಹಳೆಯ ಧಾನ್ಯವನ್ನು ತಿಂದು, ಹೊಸದು ಬಂದಾಗ ಹಳೆಯದನ್ನು ಹೊರಗೆ ತರುವಿರಿ. \v 11 ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳುವೆನು. ನನ್ನ ಪ್ರಾಣವು ನಿಮ್ಮನ್ನು ತಿರಸ್ಕರಿಸುವುದಿಲ್ಲ. \v 12 ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವರಾಗಿರುವೆನು. ನೀವು ನನ್ನ ಜನರಾಗಿರುವಿರಿ. \v 13 ಈಜಿಪ್ಟ್ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ನಿಮ್ಮ ನೊಗದ ಕಟ್ಟುಗಳನ್ನು ಮುರಿದು, ನಿಮ್ಮನ್ನು ತಲೆಯೆತ್ತಿ ನಡೆಯುವಂತೆ ಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಾನೇ. \s1 ಅವಿಧೇಯತೆಗೆ ಶಿಕ್ಷೆ \p \v 14 “ ‘ನೀವು ನನ್ನ ಮಾತನ್ನು ಕೇಳದೆ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ, \v 15 ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ, \v 16 ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. \v 17 ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ. \p \v 18 “ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು. \v 19 ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು. \v 20 ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ. \p \v 21 “ ‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು. \v 22 ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು. \p \v 23 “ ‘ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ, \v 24 ನಾನು ಸಹ ನಿಮಗೆ ವಿರೋಧವಾಗಿ ನಡೆದು, ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ, ಏಳರಷ್ಟು ಶಿಕ್ಷಿಸುವೆನು. \v 25 ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು. \v 26 ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ. \p \v 27 “ ‘ಇದೆಲ್ಲಾ ಆದರೂ, ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ, \v 28 ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. \v 29 ನೀವು ನಿಮ್ಮ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ. \v 30 ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು. \v 31 ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು. \v 32 ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು. \v 33 ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು. \v 34 ಆಗ ನಾಡು ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವವರೆಗೂ, ನಾಡು ತನ್ನ ಸಬ್ಬತ್ ಕಾಲವನ್ನು ಅನುಭವಿಸುವುದು. ಆಗ ನೆಲವು ವಿಶ್ರಮಿಸಿಕೊಂಡು ತನ್ನ ವಿಶ್ರಾಂತಿಯ ಕಾಲವನ್ನು ಅನುಭವಿಸುವುದು. \v 35 ನೀವು ನಿಮ್ಮ ಶತ್ರುಗಳ ದೇಶದಲ್ಲಿ ವಾಸವಾಗಿದ್ದಾಗ, ಹಾಳುಬಿದ್ದ ನಿಮ್ಮ ನಾಡು ತಾನು ಹೊಂದದ ವಿಶ್ರಾಂತಿಯನ್ನು ಈಗ ಸುದೀರ್ಘವಾಗಿ ಹೊಂದಿಕೊಳ್ಳುವುದು. \p \v 36 “ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು. \v 37 ಓಡಿಸುವವನಿಲ್ಲದೆ ಒಬ್ಬರ ಮೇಲೊಬ್ಬರು ಖಡ್ಗದ ಭಯದಿಂದಾದ ಹಾಗೆ ಬೀಳುವರು. ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವುದು ನಿಮ್ಮಿಂದಾಗದು. \v 38 ಜನಾಂಗಗಳೊಳಗೆ ನಾಶವಾಗುವಿರಿ. ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವುದು. \v 39 ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. \p \v 40 “ ‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ, \v 41 ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ, \v 42 ನಾನು ಯಾಕೋಬನಿಗೆ, ಇಸಾಕನಿಗೆ ಮತ್ತು ಅಬ್ರಹಾಮನಿಗೆ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ದೇಶವನ್ನು ದಯೆಯಿಂದ ನೆನಪಿಸಿಕೊಳ್ಳುವೆನು. \v 43 ಅವರು ಬಿಟ್ಟುಹೋದ ಸ್ವದೇಶವು ಯಾರೂ ಇಲ್ಲದೆ ಹಾಳಾದ ವೇಳೆಯಲ್ಲಿ ತನ್ನ ವಿಶ್ರಾಂತಿಯನ್ನು ಅನುಭವಿಸುವುದು. ಆದರೆ ಅವರು ತಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ಅನುಭವಿಸುವರು. ಅದು ಏಕೆಂದರೆ, ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ತಾತ್ಸಾರ ಮಾಡಿದ್ದರಿಂದಲೇ. \v 44 ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ. \v 45 ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು, ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ, ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಮುಂದೆ ಈಜಿಪ್ಟಿನಿಂದ ಬರಮಾಡಿದೆನು. ನಾನೇ ಯೆಹೋವ ದೇವರು.’ ” \p \v 46 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ, ಇಸ್ರಾಯೇಲರಿಗೂ ಮಧ್ಯದಲ್ಲಿ ಇಟ್ಟ ನಿಯಮಗಳೂ, ನ್ಯಾಯಗಳೂ, ಆಜ್ಞಾವಿಧಿಗಳೂ ಇವೇ. \c 27 \s1 ಯೆಹೋವ ದೇವರಿಗೆ ಸಲ್ಲತಕ್ಕದ್ದು \p \v 1 ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ, \v 2 “ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು. \v 3 ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್\f + \fr 27:3 \fr*\ft ಸುಮಾರು 575 ಗ್ರಾಂನಷ್ಟು ಬೆಳ್ಳಿ\ft*\f* ಆಗಿರಬೇಕು. \v 4 ಹೆಣ್ಣಾಗಿದ್ದರೆ, ನೀನು ನೇಮಿಸುವ ಕ್ರಯವು ಮೂವತ್ತು ಶೆಕೆಲ್\f + \fr 27:4 \fr*\ft ಸುಮಾರು 345 ಗ್ರಾಂನಷ್ಟು ಬೆಳ್ಳಿ\ft*\f* ಆಗಿರಬೇಕು. \v 5 ಐದರಿಂದ ಇಪ್ಪತ್ತು ವಯಸ್ಸುಳ್ಳ ಪುರುಷನ ಕ್ರಯವು ಇಪ್ಪತ್ತು ಶೆಕೆಲ್,\f + \fr 27:5 \fr*\ft ಸುಮಾರು 230 ಗ್ರಾಂನಷ್ಟು ಬೆಳ್ಳಿ\ft*\f* ಸ್ತ್ರೀ ಕ್ರಯವು ಹತ್ತು ಶೆಕೆಲ್\f + \fr 27:5 \fr*\ft ಸುಮಾರು 115 ಗ್ರಾಂನಷ್ಟು ಬೆಳ್ಳಿ\ft*\f* ಆಗಿರಬೇಕು. \v 6 ಒಂದು ತಿಂಗಳಿಂದ ಐದು ವಯಸ್ಸುಳ್ಳ ಹುಡುಗನ ಕ್ರಯವು ಐದು ಶೆಕೆಲ್,\f + \fr 27:6 \fr*\ft ಸುಮಾರು 58 ಗ್ರಾಂನಷ್ಟು ಬೆಳ್ಳಿ\ft*\f* ಹುಡುಗಿಯ ಕ್ರಯವು ಮೂರು ಶೆಕೆಲ್\f + \fr 27:6 \fr*\ft ಸುಮಾರು 35 ಗ್ರಾಂನಷ್ಟು ಬೆಳ್ಳಿ\ft*\f* ಆಗಿರಬೇಕು. \v 7 ಅರವತ್ತು ವರುಷವೂ, ಅದಕ್ಕೂ ಹೆಚ್ಚಾದ ಪ್ರಾಯವುಳ್ಳ ಪುರುಷನಾಗಿದ್ದರೆ, ನೀನು ನೇಮಿಸುವ ಕ್ರಯವು ಹದಿನೈದು ಶೆಕೆಲ್,\f + \fr 27:7 \fr*\ft ಸುಮಾರು 175 ಗ್ರಾಂನಷ್ಟು ಬೆಳ್ಳಿ\ft*\f* ಸ್ತ್ರೀಗೆ ಹತ್ತು ಶೆಕೆಲ್ ಆಗಿರಬೇಕು. \v 8 ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು. \p \v 9 “ ‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು. \v 10 ಅದನ್ನು ಒಳ್ಳೆಯದಕ್ಕೆ ಕೆಟ್ಟದ್ದನ್ನಾಗಲಿ, ಕೆಟ್ಟದ್ದಕ್ಕೆ ಒಳ್ಳೆಯದನ್ನಾಗಲಿ ಬದಲು ಮಾಡಬಾರದು, ಮಾರ್ಪಡಿಸಲೂಬಾರದು. ಅವನು ಗೊತ್ತುಮಾಡಿದ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ, ಅದು ಮತ್ತು ಅದರ ಬದಲಾಗಿಟ್ಟ ಪಶು ಇವೆರಡೂ ಯೆಹೋವ ದೇವರಿಗೆ ಪರಿಶುದ್ಧವಾಗಿರಬೇಕು. \v 11 ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು. \v 12 ಆಗ ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಅದಕ್ಕೆ ಕ್ರಯ ಕಟ್ಟಬೇಕು. ಯಾಜಕನು ನಿರ್ಧರಿಸಿದ ಕ್ರಯವೇ ಅಂತಿಮ ಕ್ರಯವಾಗಿರಬೇಕು. \v 13 ಹರಕೆ ಮಾಡುವವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿದ್ದರೆ, ನೀನು ನಿರ್ಧರಿಸಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು. \p \v 14 “ ‘ಒಬ್ಬನು ತನ್ನ ಮನೆಯನ್ನು ಯೆಹೋವ ದೇವರಿಗೆ ಪರಿಶುದ್ಧವಾಗಿರಲೆಂದು ಪ್ರತಿಷ್ಠೆಪಡಿಸಿದರೆ, ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಪರೀಕ್ಷಿಸಿ ಕ್ರಯವನ್ನು ಕಟ್ಟಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಸ್ಥಿರವಾಗಿರಬೇಕು. \v 15 ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು. \p \v 16 “ ‘ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಯೆಹೋವ ದೇವರಿಗೆ ಪ್ರತಿಷ್ಠಿಸಿದರೆ, ಅದರ ಬೀಜದ ಪ್ರಕಾರ ಕ್ರಯ ಕಟ್ಟಬೇಕು. ಒಂದು ಓಮೆರ್\f + \fr 27:16 \fr*\ft ಸುಮಾರು 135 ಕಿಲೋಗ್ರಾಂ\ft*\f* ಜವೆಗೋಧಿಯನ್ನು, ಬೀಜಕ್ಕೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಡಬೇಕಾಗುವುದು. \v 17 ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು. \v 18 ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪ್ರತಿಷ್ಠೆ ಮಾಡಿದರೆ, ಜೂಬಿಲಿ ಸಂವತ್ಸರದವರೆಗೆ ಮಿಕ್ಕ ವರ್ಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ನಿರ್ಧರಿಸಿ, ಕಟ್ಟಿದ ಕ್ರಯದಿಂದ ಕಳೆಯಬೇಕು. \v 19 ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿದವನು ಅದನ್ನು ಅವನು ವಿಮೋಚಿಸಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಒಂದು ಪಾಲನ್ನು ಕೊಡಬೇಕು. ಆಗ ಅದು ಸ್ಥಿರವಾಗಿರುವುದು. \v 20 ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ, ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ, ಅದನ್ನು ಅನಂತರ ವಿಮೋಚಿಸಕೂಡದು. \v 21 ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು. \p \v 22 “ ‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, \v 23 ಯಾಜಕನು ಅವನಿಗೆ ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದವರೆಗೂ ಎಣಿಸಬೇಕು. ಅವನು ಆ ದಿವಸದಲ್ಲಿ ಕಟ್ಟಿದ ಕ್ರಯವನ್ನು ಯೆಹೋವ ದೇವರಿಗೆ ಮೀಸಲಾದದ್ದು ಎಂದು ಭಾವಿಸಿ ಕೊಡಬೇಕು. \v 24 ಆ ಹೊಲವು ಯಾರಿಗೆ ಸ್ವಂತವಾಗಿದ್ದು, ಯಾರಿಂದ ಕೊಂಡುಕೊಳ್ಳಲಾಗಿದೆಯೋ ಅದು ಜೂಬಿಲಿ ವರ್ಷದಲ್ಲಿ ಅವರಿಗೇ ಹಿಂದಕ್ಕೆ ಕೊಡಬೇಕು. \v 25 ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಇಪ್ಪತ್ತು ಗೇರಾ ತೂಕದ ಶೆಕೆಲ್ ಮೇರೆಗೆ ನೀವು ಕ್ರಯವನ್ನು ನಿಗದಿಮಾಡಬೇಕು. \p \v 26 “ ‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ. \v 27 ಆದರೆ ಅದು ಅಶುದ್ಧ ಪಶುಗಳಲ್ಲಿ ಹುಟ್ಟಿದ್ದಾಗಿದ್ದರೆ, ಹರಕೆ ಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ಕಟ್ಟಿದ ಕ್ರಯದ ಪ್ರಕಾರ ಮಾರಬೇಕು. \p \v 28 “ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು. \p \v 29 “ ‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು. \p \v 30 “ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು. \v 31 ಯಾವನಾದರೂ ತನ್ನ ಹತ್ತನೆಯ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ, ಅದಕ್ಕಿಂತ ಹೆಚ್ಚಾಗಿ ಅದರ ಐದನೆಯ ಒಂದು ಪಾಲನ್ನು ಕೊಡಬೇಕು. \v 32 ಇದಲ್ಲದೆ ದನಕುರಿಗಳಲ್ಲಿಯೂ, ಕುರುಬನು ಎಣಿಸುವ ಪಶುಗಳಲ್ಲಿಯೂ ಹತ್ತನೆಯ ಪಾಲು, ಹತ್ತರಲ್ಲಿ ಒಂದು ಯೆಹೋವ ದೇವರಿಗೆ ಪರಿಶುದ್ಧವಾಗಿರುವುದು. \v 33 ಆ ಪಶು ಒಳ್ಳೆಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸಬಾರದು. ಅವನು ಅದನ್ನು ಬದಲಾಯಿಸಬಾರದು. ಯಾರಾದರೂ ಅದನ್ನು ಬದಲಾಯಿಸಿದ್ದಾದರೆ, ಆಗ ಎರಡೂ ಪಶುಗಳು ಯೆಹೋವ ದೇವರಿಗೆ ಸೇರುತ್ತದೆ, ಅದು ಪರಿಶುದ್ಧವಾಗಿರುತ್ತದೆ ಅದನ್ನು ವಿಮೋಚಿಸಬಾರದು.’ ” \p \v 34 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.