\id MRK - Biblica® Open Kannada Contemporary Version \ide UTF-8 \h ಮಾರ್ಕ \toc1 ಮಾರ್ಕನು ಬರೆದ ಸುವಾರ್ತೆ \toc2 ಮಾರ್ಕ \toc3 ಮಾರ್ಕ \mt1 ಮಾರ್ಕನು \mt2 ಬರೆದ ಸುವಾರ್ತೆ \c 1 \s1 ಸ್ನಾನಿಕ ಯೋಹಾನನು ಮಾರ್ಗವನ್ನು ಸಿದ್ಧಪಡಿಸಿದ್ದು \p \v 1 ದೇವಪುತ್ರರಾದ\f + \fr 1:1 \fr*\ft ಕೆಲವು ಹಸ್ತಪ್ರತಿಗಳಲ್ಲಿ \ft*\fq ದೇವಪುತ್ರ \fq*\ft ಎಂಬ ಪದವಿಲ್ಲ.\ft*\f* ಯೇಸುಕ್ರಿಸ್ತರ\f + \fr 1:1 \fr*\fq ಕ್ರಿಸ್ತ \fq*\ft ಎಂಬ ಗ್ರೀಕ್ ಪದಕ್ಕೆ \ft*\fqa ಮೆಸ್ಸೀಯ \fqa*\ft ಎಂಬ ಹೀಬ್ರೂ ಪದಕ್ಕೆ \ft*\fqa ಅಭಿಷಿಕ್ತರು \fqa*\ft ಎಂದರ್ಥ\ft*\f* ಸುವಾರ್ತೆಯ ಆರಂಭ. \v 2 ಪ್ರವಾದಿ ಯೆಶಾಯನ ಗ್ರಂಥದಲ್ಲಿ: \q1 “ಇಗೋ, ನಿನ್ನ ಮುಂದೆ ನಾನು ನನ್ನ ದೂತನನ್ನು ಕಳುಹಿಸುತ್ತೇನೆ, \q2 ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”\f + \fr 1:2 \fr*\ft \+xt ಮಲಾಕಿ 3:1\+xt*\ft*\f* \q1 \v 3 “ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, \q1 ಅವರ ದಾರಿಗಳನ್ನು ಸರಾಗಮಾಡಿರಿ,’ \q2 ಎಂದು ಅರಣ್ಯದಲ್ಲಿ ಕೂಗುವವನ ಸ್ವರವದೆ.”\f + \fr 1:3 \fr*\ft \+xt ಯೆಶಾಯ 40:3\+xt*\ft*\f* \m \v 4 ಎಂದು ಬರೆದಿಟ್ಟ ಪ್ರಕಾರ, ಸ್ನಾನಿಕನಾದ ಯೋಹಾನನು ಅರಣ್ಯದಲ್ಲಿ ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು, ಸಾರುತ್ತಾ ಬಂದನು. \v 5 ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. \v 6 ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿ,\f + \fr 1:6 \fr*\ft \+xt 2 ಅರಸು 1:8\+xt*\ft*\f* ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು. \v 7 ಅವನು, “ನನಗಿಂತ ಶಕ್ತರೊಬ್ಬರು ನನ್ನ ನಂತರ ಬರುತ್ತಾರೆ, ಅವರ ಪಾದರಕ್ಷೆಗಳ ಪಟ್ಟಿಗಳನ್ನು ದಾಸನಂತೆ ಬಾಗಿ ಬಿಚ್ಚುವುದಕ್ಕೂ ನಾನು ಅರ್ಹನಲ್ಲ. \v 8 ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು. \s1 ಯೇಸುವಿನ ದೀಕ್ಷಾಸ್ನಾನ ಮತ್ತು ಅವರ ಶೋಧನೆ \p \v 9 ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು. \v 10 ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು. \v 11 ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು. \p \v 12 ಕೂಡಲೇ ಪವಿತ್ರಾತ್ಮ ದೇವರು ಯೇಸುವನ್ನು ಅರಣ್ಯಕ್ಕೆ ನಡೆಸಿದರು. \v 13 ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ\f + \fr 1:13 \fr*\ft ಗ್ರೀಕ್ ಭಾಷೆಯಲ್ಲಿ \ft*\fq ಶೋಧನೆಗೆ \fq*\fqa ಪರೀಕ್ಷೆ \fqa*\ft ಎಂದರ್ಥ\ft*\f* ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು. \s1 ಯೇಸು ಸುವಾರ್ತೆಯನ್ನು ಸಾರಿದ್ದು \p \v 14 ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು: \v 15 “ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು. \s1 ಯೇಸು ಪ್ರಥಮ ಶಿಷ್ಯರನ್ನು ಕರೆದದ್ದು \p \v 16 ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಸೀಮೋನನು ಮತ್ತು ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು. \v 17 ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,”\f + \fr 1:17 \fr*\ft ಅಂದರೆ \ft*\fqa ನಿಮ್ಮನ್ನು ಮನುಷ್ಯರನ್ನೇ ಹಿಡಿಯುವ ಬೆಸ್ತರನ್ನಾಗಿ ಮಾಡುವೆನು\fqa*\f* ಎಂದು ಹೇಳಿದರು. \v 18 ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. \p \v 19 ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಕಂಡರು. ಅವರು ತಮ್ಮ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. \v 20 ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು. \s1 ಯೇಸು ದುರಾತ್ಮವನ್ನು ಓಡಿಸಿದ್ದು \p \v 21 ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್\f + \fr 1:21 \fr*\fq ಸಬ್ಬತ್ \fq*\ft ಇದು ವಾರದ ಏಳನೆಯ ದಿನ, ಈ ದಿನವನ್ನು ಯೆಹೂದ್ಯರು ಪವಿತ್ರ ದಿನ ಎನ್ನುತ್ತಿದ್ದರು. ಈ ದಿನದಲ್ಲಿ ಅವರು ಆರಾಧನೆ ಮತ್ತು ವಿಶ್ರಾಂತಿ ಮಾಡುತ್ತಿದ್ದರು.\ft*\f* ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. \v 22 ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು. \v 23 ಆ ಸಮಯದಲ್ಲಿ ಸಭಾಮಂದಿರದೊಳಗೆ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು. \v 24 ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು. \p \v 25 ಆಗ ಯೇಸು, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದು ಗದರಿಸಿದರು. \v 26 ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು. \p \v 27 ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. \v 28 ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು. \s1 ಯೇಸು ಅನೇಕರನ್ನು ಗುಣಪಡಿಸಿದ್ದು \p \v 29 ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು. \v 30 ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು. \v 31 ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು. \p \v 32 ಆ ಸಂಜೆ ಸೂರ್ಯಾಸ್ತವಾದ ಮೇಲೆ ಜನರು ಅಸ್ವಸ್ಥರಾದವರನ್ನು ಮತ್ತು ದೆವ್ವಪೀಡಿತರನ್ನು ಯೇಸುವಿನ ಬಳಿಗೆ ಕರೆತಂದರು. \v 33 ಇಡೀ ಊರಿನವರು ಕೂಡಿ ಆ ಮನೆಯ ಬಾಗಿಲಿನ ಬಳಿ ಬಂದರು. \v 34 ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ. \s1 ಯೇಸು ಏಕಾಂತದಲ್ಲಿ ಪ್ರಾರ್ಥಿಸಿದ್ದು \p \v 35 ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. \v 36 ಆಗ ಸೀಮೋನನು ಮತ್ತು ಅವನ ಸಂಗಡಿಗರು ಯೇಸುವನ್ನು ಹುಡುಕಿಕೊಂಡು ಹೋದರು. \v 37 ಯೇಸುವನ್ನು ಕಂಡ ಮೇಲೆ, “ಎಲ್ಲರೂ ನಿಮ್ಮನ್ನು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದರು. \p \v 38 ಯೇಸು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ. ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು. ನಾನು ಬಂದಿರುವುದು ಇದಕ್ಕಾಗಿಯೇ,” ಎಂದು ಹೇಳಿದರು. \v 39 ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು. \s1 ಕುಷ್ಠರೋಗಿ ಗುಣಹೊಂದಿದ್ದು \p \v 40 ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು. \p \v 41 ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. \v 42 ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು. \p \v 43-44 ಯೇಸು ಅವನಿಗೆ, “ನೋಡು, ಇದನ್ನು ಯಾರಿಗೂ ಹೇಳಬೇಡ. ಆದರೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿ, ಮೋಶೆಯು ಆಜ್ಞಾಪಿಸಿದ್ದನ್ನು ಶುದ್ಧತ್ವಕ್ಕಾಗಿ ಸಮರ್ಪಿಸು ಇದು ಅವರಿಗೆ ಸಾಕ್ಷಿಯಾಗಿರಲಿ,” ಎಂದು ಅವನಿಗೆ ಕಟ್ಟುನಿಟ್ಟಾಗಿ ಎಚ್ಚರಿಸಿ, ಕೂಡಲೇ ಅವನನ್ನು ಕಳುಹಿಸಿಬಿಟ್ಟರು. \v 45 ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು. \c 2 \s1 ಯೇಸು ಪಾರ್ಶ್ವವಾಯು ರೋಗಿಯನ್ನು ಗುಣಪಡಿಸಿದ್ದು \p \v 1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು. \v 2 ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು. \v 3 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು. \v 4 ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. \v 5 ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು. \p \v 6 ಅಲ್ಲಿ ಕುಳಿತಿದ್ದ ಕೆಲವು ನಿಯಮ ಬೋಧಕರು, \v 7 “ಈತನು ಏಕೆ ಹೀಗೆ ಮಾತನಾಡುತ್ತಾನೆ? ಈತನು ದೇವದೂಷಣೆ ಮಾಡುತ್ತಿದ್ದಾನೆ! ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮೊಳಗೇ ಆಲೋಚಿಸಿಕೊಳ್ಳುತ್ತಿದ್ದರು. \p \v 8 ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ? \v 9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ? \v 10 ಆದರೆ ಮನುಷ್ಯಪುತ್ರನಾದ\f + \fr 2:10 \fr*\fq ಮನುಷ್ಯಪುತ್ರ \fq*\ft ಎಂಬುದು ಯೇಸುವನ್ನು ಸೂಚಿಸುತ್ತದೆ. ಯೇಸು ಈ ರೀತಿಯಾಗಿ ತಮ್ಮ ಬಗ್ಗೆ ಮಾತನಾಡುತ್ತಿದ್ದರು.\ft*\f* ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, \v 11 “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು. \v 12 ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು. \s1 ಲೇವಿಯನ್ನು ಕರೆದದ್ದು \p \v 13 ಯೇಸು ಪುನಃ ಸರೋವರದ ತೀರಕ್ಕೆ ಹೋದರು. ಜನರೆಲ್ಲರೂ ಯೇಸುವಿನ ಬಳಿಗೆ ಬಂದರು. ಯೇಸು ಅವರಿಗೆ ಉಪದೇಶಿಸಿದರು. \v 14 ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದ ಕಟ್ಟೆಯಲ್ಲಿ ಕುಳಿತಿದ್ದ ಅಲ್ಫಾಯನ ಮಗ ಲೇವಿಯನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. \p \v 15 ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ತಿರಸ್ಕಾರ ಹೊಂದಿದ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಬಹುಜನರು ಅವರನ್ನು ಹಿಂಬಾಲಿಸುತ್ತಿದ್ದರು. \v 16 ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು. \p \v 17 ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು. \s1 ಉಪವಾಸದ ವಿಷಯದಲ್ಲಿ ಪ್ರಶ್ನೆ \p \v 18 ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸಮಾಡುತ್ತಿದ್ದರು. ಆಗ ಕೆಲವರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸ ಮಾಡುತ್ತಾರೆ, ಆದರೆ ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು. \p \v 19 ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ಹೇಗೆ ಉಪವಾಸ ಮಾಡುವರು? ಮದುಮಗನು ಅವರ ಸಂಗಡ ಇರುವವರೆಗೆ ಅವರು ಉಪವಾಸ ಮಾಡಲಾಗದು. \v 20 ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು. \p \v 21 “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಹಚ್ಚಿದರೆ, ಆ ತೇಪೆಯು ಬಟ್ಟೆಯನ್ನು ಹಿಂಜಿ ಹರಕನ್ನು ಇನ್ನೂ ದೊಡ್ಡದು ಮಾಡುತ್ತದೆ. \v 22 ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ,” ಎಂದು ಹೇಳಿದರು. \s1 ಯೇಸು ಸಬ್ಬತ್ ದಿನಕ್ಕೂ ಒಡೆಯ \p \v 23 ಒಂದು ಸಬ್ಬತ್ ದಿನದಂದು ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಯೇಸುವಿನ ಶಿಷ್ಯರು ನಡೆಯುತ್ತಾ ಹೋಗುವಾಗ ತೆನೆಗಳನ್ನು ಮುರಿದುಕೊಂಡರು. \v 24 ಆಗ ಫರಿಸಾಯರು ಯೇಸುವಿಗೆ, “ಇಲ್ಲಿ ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಏಕೆ ಮಾಡುತ್ತಾರೆ?” ಎಂದು ಹೇಳಿದರು. \p \v 25 ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗಲೂ ಅವಶ್ಯಕತೆಯಲ್ಲಿದ್ದಾಗಲೂ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೋ? \v 26 ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು. \p \v 27 ಅನಂತರ ಯೇಸು ಅವರಿಗೆ, “ಮನುಷ್ಯನು ಸಬ್ಬತ್ ದಿನಕ್ಕಾಗಲಿ ಅಲ್ಲ, ಸಬ್ಬತ್ ದಿನವು ಮನುಷ್ಯನಿಗಾಗಿ ಮಾಡಲಾಯಿತು. \v 28 ಆದ್ದರಿಂದ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದೇನೆ,” ಎಂದು ಹೇಳಿದರು. \c 3 \s1 ಯೇಸು ಯೆಹೂದ್ಯರ ಸಬ್ಬತ್ ದಿನದಂದು ಸ್ವಸ್ಥಪಡಿಸಿದ್ದು \p \v 1 ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದರು. ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. \v 2 ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್\f + \fr 3:2 \fr*\fq ಸಬ್ಬತ್ \fq*\ft ಅಂದರೆ \ft*\fqa ವಿಶ್ರಾಂತಿ ದಿನ\fqa*\f* ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು. \v 3 ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು. \p \v 4 ಆಗ ಯೇಸು ಅವರನ್ನು, “ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ನಿಯಮಕ್ಕೆ ಸಮ್ಮತವೋ ಅಥವಾ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ತೆಗೆಯುವುದೋ?” ಎಂದು ಕೇಳಿದರು. ಅದಕ್ಕೆ ಅವರು ಸುಮ್ಮನಿದ್ದರು. \p \v 5 ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು. \v 6 ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು. \s1 ಜನರ ಗುಂಪುಗಳು ಯೇಸುವನ್ನು ಹಿಂಬಾಲಿಸಿದ್ದು \p \v 7 ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು. \v 8 ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು. \v 9 ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು. \v 10 ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ನುಗ್ಗುತ್ತಿದ್ದರು. \v 11 ದುರಾತ್ಮಗಳು ಯೇಸುವನ್ನು ಕಂಡಾಗಲೆಲ್ಲಾ ಅವರ ಮುಂದೆ ಬಿದ್ದು, “ನೀವು ದೇವರ ಪುತ್ರ,” ಎಂದು ಕಿರುಚಿದವು. \v 12 ಆದರೆ ಯೇಸು, ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡಿದರು. \s1 ಯೇಸು ಹನ್ನೆರಡು ಮಂದಿ ಶಿಷ್ಯರನ್ನು ನೇಮಿಸಿದ್ದು \p \v 13 ಯೇಸು ಬೆಟ್ಟವನ್ನೇರಿ ತಮಗೆ ಬೇಕಾದವರನ್ನು ಕರೆದರು. ಅವರು ಯೇಸುವಿನ ಬಳಿಗೆ ಬಂದರು. \v 14 ಯೇಸು ಹನ್ನೆರಡು ಮಂದಿಯನ್ನು ತಮ್ಮ ಸಂಗಡ ಇರಲು ಮತ್ತು ಅವರನ್ನು ಉಪದೇಶಮಾಡಲು ನೇಮಿಸಿ, ಅವರಿಗೆ “ಅಪೊಸ್ತಲರು” ಎಂದು ಕರೆದರು. \v 15 ಅವರಿಗೆ ದೆವ್ವಗಳನ್ನು ಓಡಿಸುವ ಅಧಿಕಾರ ಕೊಟ್ಟರು. \b \li4 \v 16 ಯೇಸು ನೇಮಿಸಿದ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಇಂತಿವೆ: \b \li1 ಸೀಮೋನನಿಗೆ ಯೇಸು “ಪೇತ್ರ” ಎಂಬ ಹೆಸರನ್ನು ಕೊಟ್ಟರು. \li1 \v 17 ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನ ಇವರಿಗೆ ಯೇಸು “ಬೊವನೆರ್ಗೆಸ್” ಎಂದರೆ ಗುಡುಗಿನ ಪುತ್ರರು ಎಂಬ ಹೆಸರಿಟ್ಟರು. \li1 \v 18 ಅಂದ್ರೆಯ, \li1 ಫಿಲಿಪ್ಪ, \li1 ಬಾರ್ತೊಲೊಮಾಯ, \li1 ಮತ್ತಾಯ, \li1 ತೋಮ, \li1 ಅಲ್ಫಾಯನ ಮಗ ಯಾಕೋಬ, \li1 ತದ್ದಾಯ, \li1 ಕಾನಾನ್ಯನಾದ ಸೀಮೋನನು. \li1 \v 19 ಯೇಸುವಿಗೆ ದ್ರೋಹಮಾಡಿದ ಇಸ್ಕರಿಯೋತ ಯೂದ. \s1 ಯೇಸು ಮತ್ತು ಬೆಲ್ಜೆಬೂಲನು \p \v 20 ಯೇಸು ಒಂದು ಮನೆಯೊಳಗೆ ಹೋದಾಗ, ಜನರು ತಿರುಗಿ ಗುಂಪಾಗಿ ನೆರೆದು ಬಂದದ್ದರಿಂದ ಯೇಸುವಿಗೂ ಅವರ ಶಿಷ್ಯರಿಗೂ ಊಟಮಾಡುವುದಕ್ಕೂ ಸಾಧ್ಯವಾಗಲಿಲ್ಲ. \v 21 ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು. \p \v 22 ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು. \p \v 23 ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ? \v 24 ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ. \v 25 ಒಂದು ಕುಟುಂಬ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ಕುಟುಂಬವು ನಿಲ್ಲುವುದಿಲ್ಲ. \v 26 ಸೈತಾನನು ತನಗೆ ವಿರೋಧವಾಗಿ ತಾನೇ ಎದ್ದು ವಿಭಾಗಿಸಿಕೊಂಡರೆ, ಅವನು ನಿಲ್ಲಲಾರದೆ ನಾಶವಾಗುವನು. \v 27 ಒಬ್ಬನು ಬಲಿಷ್ಠನ ಮನೆಗೆ ನುಗ್ಗಿ ಮೊದಲು ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆ ಮಾಡಲಾಗುವುದಿಲ್ಲ. ಮೊದಲು ಅವನನ್ನು ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು. \v 28 ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು. \v 29 ಆದರೆ ಪವಿತ್ರಾತ್ಮರನ್ನು ದೂಷಿಸುವವನಿಗೆ ಎಂದಿಗೂ ಕ್ಷಮಾಪಣೆ ದೊರೆಯುವುದಿಲ್ಲ. ಅವನು ನಿತ್ಯ ಪಾಪದ ಅಪರಾಧಿಯಾಗಿದ್ದಾನೆ,” ಎಂದರು. \p \v 30 “ಆತನಲ್ಲಿ ಅಶುದ್ಧಾತ್ಮವಿದೆ,” ಎಂದು ಅವರು ಹೇಳುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು. \p \v 31 ಆಗ ಯೇಸುವಿನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡು, ಯೇಸುವನ್ನು ಕರೆಯಲು ಹೇಳಿ ಕಳುಹಿಸಿದರು. \v 32 ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದ ಜನರು ಅವರಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮಗಾಗಿ ಹೊರಗೆ ಕಾದಿದ್ದಾರೆ,” ಎಂದು ಹೇಳಿದರು. \p \v 33 ಅದಕ್ಕೆ ಯೇಸು, “ನನ್ನ ತಾಯಿ ಮತ್ತು ಸಹೋದರರು ಯಾರು?” ಎಂದು ಕೇಳಿದರು. \p \v 34 ಅನಂತರ ತಮ್ಮ ಸುತ್ತಲೂ ಕುಳಿತ್ತಿದ್ದವರನ್ನು ನೋಡಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು! \v 35 ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ,” ಎಂದು ಹೇಳಿದರು. \c 4 \s1 ಬಿತ್ತುವವನ ಸಾಮ್ಯ \p \v 1 ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು. \v 2 ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ: \v 3 “ಕೇಳಿರಿ! ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು. \v 4 ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು. ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. \v 5 ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು. \v 6 ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು. \v 7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ. \v 8 ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.” \p \v 9 ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು. \p \v 10 ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು. \v 11 ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ. \v 12 ಈ ಕಾರಣದಿಂದ, \q1 “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. \q2 ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. \q1 ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’\f + \fr 4:12 \fr*\ft \+xt ಯೆಶಾಯ 6:9,10\+xt*\ft*\f*” \m ಎಂದರು. \p \v 13 ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ? \v 14 ರೈತನು ‘ವಾಕ್ಯ’ ಎಂಬ ಬೀಜ ಬಿತ್ತುತ್ತಾನೆ. \v 15 ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ. \v 16 ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ. \v 17 ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ. \v 18 ಮತ್ತೆ ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯವನ್ನು ಕೇಳುತ್ತಾರೆ. \v 19 ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. \v 20 ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು. \s1 ದೀಪಸ್ತಂಭದ ಮೇಲಿನ ದೀಪ \p \v 21 ಯೇಸು ಅವರಿಗೆ, “ಯಾರಾದರೂ ದೀಪವನ್ನು ತಂದು ಬೋಗುಣಿಯೊಳಗೆ ಅಥವಾ ಮಂಚದ ಕೆಳಗೆ ಇಡುತ್ತಾರೋ? ಅದರ ಬದಲು ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. \v 22 ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ. \v 23 ಕಿವಿಯುಳ್ಳವರು ಕೇಳಲಿ.” \p \v 24 ಮತ್ತು ಯೇಸು ಅವರಿಗೆ, “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು; ಇನ್ನೂ ಹೆಚ್ಚಾಗಿ ಸೇರಿಸಿಕೊಡಲಾಗುವುದು. \v 25 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು. \s1 ಬೆಳೆಯುವ ಬೀಜದ ಸಾಮ್ಯ \p \v 26 ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು. \v 27 ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ. \v 28 ಭೂಮಿಯು ಮೊದಲು ಸಸಿಯನ್ನು ಆಮೇಲೆ ಹೊಡೆಯನ್ನು ಅನಂತರ ತೆನೆಯ ತುಂಬಾ ಕಾಳನ್ನು ತನ್ನಷ್ಟಕ್ಕೆ ತಾನೇ ಬೆಳೆಸುತ್ತದೆ. \v 29 ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು. \s1 ಸಾಸಿವೆಕಾಳಿನ ಸಾಮ್ಯ \p \v 30 ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ? \v 31 ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ. \v 32 ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು. \p \v 33 ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು. \v 34 ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು. \s1 ಯೇಸು ಬಿರುಗಾಳಿಯನ್ನು ಶಾಂತಗೊಳಿಸಿದ್ದು \p \v 35 ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು. \v 36 ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು. \v 37 ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು. \v 38 ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು. \p \v 39 ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು. \p \v 40 ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು. \p \v 41 ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. \c 5 \s1 ದೆವ್ವ ಪೀಡಿತನನ್ನು ಗುಣಪಡಿಸಿದ್ದು \p \v 1 ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು. \v 2 ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು. \v 3 ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ. \v 4 ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ. \v 5 ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು. \p \v 6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ, \v 7 ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು. \v 8 ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು. \p \v 9 ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, \p “ನನ್ನ ಹೆಸರು ಸೇನೆ,\f + \fr 5:9 \fr*\fq ಸೇನೆ \fq*\ft ಗ್ರೀಕ್ ಭಾಷೆಯಲ್ಲಿ \ft*\fqa ಲೀಜನ್ \fqa*\ft ಅಂದರೆ ಸುಮಾರು 4000 ದಿಂದ 6000 ಸೈನ್ಯದ ಸಮೂಹ.\ft*\f* ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು. \v 10 ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು. \p \v 11 ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು. \v 12 “ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು. \v 13 ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು. \p \v 14 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು. \v 15 ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು. \v 16 ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು. \v 17 ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು. \p \v 18 ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು. \v 19 ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು. \v 20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ\f + \fr 5:20 \fr*\ft ಅಂದರೆ, ಹತ್ತು ಪಟ್ಟಣಗಳು\ft*\f* ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. \s1 ಯಾಯೀರನ ಸತ್ತ ಮಗಳು ಮತ್ತು ರಕ್ತಸ್ರಾವ ರೋಗಿಯಾದ ಸ್ತ್ರೀ \p \v 21 ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು. \v 22 ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು, \v 23 “ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು. \v 24 ಆಗ ಯೇಸು ಅವನೊಂದಿಗೆ ಹೋದರು. \p ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು. \v 25 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. \v 26 ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು. \v 27 ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. \v 28 ಏಕೆಂದರೆ, “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದುಕೊಂಡಿದ್ದಳು. \v 29 ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು. \p \v 30 ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು. \p \v 31 ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು. \p \v 32 ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು. \v 33 ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು. \v 34 ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು. \p \v 35 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು. \p \v 36 ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು. \p \v 37 ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ. \v 38 ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು. \v 39 ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು. \v 40 ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. \p ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು. \v 41 ಯೇಸು ಆಕೆಯ ಕೈಹಿಡಿದು, \tl “ತಲಿಥಾ ಕೂಮ್!”\tl* ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು. \v 42 ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು. \v 43 ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು. \c 6 \s1 ಪ್ರವಾದಿಗೆ ಸ್ವಜನರಲ್ಲಿ ಗೌರವವಿಲ್ಲ \p \v 1 ಯೇಸು ಅಲ್ಲಿಂದ ಹೊರಟು ಶಿಷ್ಯರೊಡನೆ ತಮ್ಮ ಸ್ವಂತ ಊರಿಗೆ ಬಂದರು. \v 2 ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. \p ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು? \v 3 ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು. \p \v 4 ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ, ತನ್ನ ಸಂಬಂಧಿಕರ ನಡುವೆ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು. \v 5 ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ. \v 6 ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು. \s1 ಯೇಸು ತಮ್ಮ ಹನ್ನೆರಡು ಶಿಷ್ಯರನ್ನು ಕಳುಹಿಸಿದ್ದು \p ಆಮೇಲೆ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದರು. \v 7 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಕರೆದು, ಅವರಿಗೆ ಅಶುದ್ಧಾತ್ಮಗಳನ್ನು ಹೊರಗಟ್ಟುವ ಅಧಿಕಾರವನ್ನು ಕೊಟ್ಟು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು. \p \v 8 ಯೇಸು ಅವರಿಗೆ, “ಪ್ರಯಾಣಕ್ಕಾಗಿ ಕೇವಲ ಕೋಲು ಒಂದನ್ನು ಬಿಟ್ಟು, ರೊಟ್ಟಿ, ಚೀಲ ಅಥವಾ ಜೇಬಿನಲ್ಲಿ ಹಣವನ್ನು ತೆಗೆದುಕೊಳ್ಳಬೇಡಿರಿ. \v 9 ಪಾದರಕ್ಷೆಗಳನ್ನು ಮೆಟ್ಟಿಕೊಳ್ಳಿರಿ. ಆದರೆ ಹೆಚ್ಚು ಅಂಗಿಗಳನ್ನು ತೆಗೆದುಕೊಳ್ಳಬೇಡಿರಿ,” ಎಂದು ಆಜ್ಞಾಪಿಸಿದರು. \v 10 ಇದಲ್ಲದೆ ಯೇಸು ಅವರಿಗೆ, “ನೀವು ಯಾವುದಾದರೊಂದು ಮನೆಗೆ ಹೋದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ. \v 11 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಅಥವಾ ನಿಮ್ಮ ಮಾತುಗಳನ್ನು ಕೇಳದಿದ್ದರೆ, ನೀವು ಹೊರಡುತ್ತಿರುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು. \p \v 12 ಶಿಷ್ಯರು ಹೊರಟುಹೋಗಿ ಜನರಿಗೆ ದೇವರ ಕಡೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳಿದರು. \v 13 ಅವರು ಅನೇಕರಿಂದ ದೆವ್ವಗಳನ್ನೋಡಿಸಿ, ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಗುಣಪಡಿಸಿದರು. \s1 ಸ್ನಾನಿಕನಾದ ಯೋಹಾನನ ಶಿರಚ್ಛೇದನ \p \v 14 ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು. \p \v 15 ಇನ್ನು ಕೆಲವರು, “ಈತನು ಎಲೀಯನು,” ಎಂದರು. \p ಮತ್ತೆ ಕೆಲವರು, “ಈತನು ಹಿಂದಿನ ಕಾಲದ ಪ್ರವಾದಿಗಳಂತೆ ಒಬ್ಬ ಪ್ರವಾದಿಯಾಗಿರಬೇಕು,” ಎಂದರು. \p \v 16 ಆದರೆ ಹೆರೋದನು ಇದನ್ನು ಕೇಳಿ, “ನಾನು ಶಿರಚ್ಛೇದನ ಮಾಡಿದ ಯೋಹಾನನೇ, ತಿರುಗಿ ಜೀವಂತವಾಗಿ ಬಂದಿದ್ದಾನೆ,” ಎಂದು ಹೇಳಿದನು. \p \v 17 ಏಕೆಂದರೆ, ಯೋಹಾನನನ್ನು ಬಂಧಿಸಿ ಸೆರೆಮನೆಗೆ ಹಾಕಬೇಕೆಂದು ಹೆರೋದನು ತಾನೇ ಕಳುಹಿಸಿದ್ದನು. ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆ ಮಾಡಿಕೊಂಡದ್ದರಿಂದ ಅವನು ಹೀಗೆ ಮಾಡಿದ್ದನು. \v 18 ಏಕೆಂದರೆ ಯೋಹಾನನು ಹೆರೋದನಿಗೆ, “ನೀನು ನಿನ್ನ ಸಹೋದರನ ಹೆಂಡತಿಯನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಹೇಳುತ್ತಿದ್ದನು. \v 19 ಇದರಿಂದ ಹೆರೋದ್ಯಳು ಯೋಹಾನನ ಮೇಲೆ ಹಗೆಯಿಟ್ಟುಕೊಂಡು, ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ. \v 20 ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು. \p \v 21 ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು. \v 22 ಹೆರೋದ್ಯಳ ಮಗಳು ಒಳಗೆ ಬಂದು ನೃತ್ಯ ಮಾಡಿ, ಹೆರೋದನನ್ನೂ ಊಟಕ್ಕೆ ಬಂದ ಅವನ ಅತಿಥಿಗಳನ್ನೂ ಸಂತೋಷಪಡಿಸಿದಳು. \p ರಾಜನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳು, ನಾನು ಕೊಡುತ್ತೇನೆ,” ಎಂದು ಹೇಳಿ, \v 23 “ನೀನೇನು ಕೇಳಿದರೂ ಕೊಡುತ್ತೇನೆ, ನನ್ನ ರಾಜ್ಯದಲ್ಲಿ ಅರ್ಧದಷ್ಟು ಕೇಳಿಕೊಂಡರೂ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು. \p \v 24 ಆಕೆ ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನನ್ನು ಕೇಳಲಿ?” ಎಂದು ಕೇಳಲು, ಆಕೆಯು, \p “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳು,” ಎಂದು ಉತ್ತರಕೊಟ್ಟಳು. \p \v 25 ಕೂಡಲೇ ಆ ಹುಡುಗಿ ಅವಸರವಾಗಿ ರಾಜನ ಮುಂದೆ ಬಂದು, “ನನಗೆ ಈಗಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿ ಕೊಡಬೇಕು,” ಎಂದು ಕೇಳಿಕೊಂಡಳು. \p \v 26 ಇದರಿಂದ ಅರಸನಿಗೆ ಬಹಳ ದುಃಖವಾದರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಆಕೆಯ ಕೋರಿಕೆಯನ್ನು ನಿರಾಕರಿಸಲಿಲ್ಲ. \v 27 ಕೂಡಲೇ ಅರಸನು ಯೋಹಾನನ ತಲೆಯನ್ನು ತರಬೇಕೆಂದು ಒಬ್ಬ ಕಾವಲುಗಾರನಿಗೆ ಅಪ್ಪಣೆಕೊಟ್ಟು ಕಳುಹಿಸಿದನು. ಅವನು ಹೋಗಿ ಸೆರೆಮನೆಯಲ್ಲಿದ್ದ ಯೋಹಾನನ ಶಿರಚ್ಛೇದನ ಮಾಡಿದನು. \v 28 ಅವನ ತಲೆಯನ್ನು ತಟ್ಟೆಯಲ್ಲಿಟ್ಟುಕೊಂಡು ಬಂದು ಅದನ್ನು ಆ ಹುಡುಗಿಗೆ ಕೊಟ್ಟನು. ಆಕೆಯು ಅದನ್ನು ತನ್ನ ತಾಯಿಗೆ ಕೊಟ್ಟಳು. \v 29 ಇದನ್ನು ಕೇಳಿ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಯಲ್ಲಿ ಇಟ್ಟರು. \s1 ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು \p \v 30 ಅಪೊಸ್ತಲರು ಹಿಂದಿರುಗಿ ಯೇಸುವಿನ ಬಳಿಗೆ ಬಂದು ತಾವು ಮಾಡಿದ್ದನ್ನೂ ಬೋಧಿಸಿದ ಎಲ್ಲವನ್ನೂ ಕುರಿತು ಅವರಿಗೆ ವರದಿಮಾಡಿದರು. \v 31 ಬಹಳ ಜನರು ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. ಯೇಸು ಅವರಿಗೆ, “ನೀವು ಏಕಾಂತವಾದ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ,” ಎಂದು ಹೇಳಿದರು. \p \v 32 ಆಗ ಅವರು ದೋಣಿಯಲ್ಲಿ ಏಕಾಂತ ಸ್ಥಳಕ್ಕೆ ಹೋದರು. \v 33 ಆದರೆ ಅವರು ಹೋಗುವುದನ್ನು ಕಂಡ ಅನೇಕರು ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ಓಡಿ ಅವರಿಗಿಂತ ಮುಂಚೆ ಅಲ್ಲಿ ಸೇರಿದ್ದರು. \v 34 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು. \p \v 35 ಅಷ್ಟರೊಳಗೆ ಸಂಜೆಯಾಯಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಲೇ ಹೊತ್ತು ಮೀರಿದೆ, \v 36 ಈ ಜನರು ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ತಿನ್ನುವುದಕ್ಕಾಗಿ ಏನಾದರೂ ಕೊಂಡುಕೊಳ್ಳುವಂತೆ ಇವರನ್ನು ಕಳುಹಿಸಿಬಿಡು,” ಎಂದು ಹೇಳಿದರು. \p \v 37 ಆದರೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. \p ಶಿಷ್ಯರು, “ನಾವು ಹೋಗಿ ಅವರಿಗೆ ಊಟಕ್ಕಾಗಿ ಆರು ತಿಂಗಳ ಸಂಬಳದಷ್ಟು\f + \fr 6:37 \fr*\ft ಗ್ರೀಕ್ ಭಾಷೆಯಲ್ಲಿ ಇನ್ನೂರು ದಿನಾರ್. ಇದು ಒಬ್ಬ ಕೂಲಿಯವನ ಅರ್ಧವರ್ಷದ ಕೂಲಿಯಾಗಿತ್ತು.\ft*\f* ಖರ್ಚುಮಾಡಿ, ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದು ಕೇಳಿದರು. \p \v 38 ಯೇಸು ಅವರಿಗೆ, “ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ,” ಎಂದು ಕೇಳಿದರು. \p ಅವರು ವಿಚಾರಿಸಿ, “ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ಉತ್ತರಕೊಟ್ಟರು. \p \v 39 ಆಮೇಲೆ ಯೇಸು ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳುವಂತೆ ಜನರಿಗೆ ಆಜ್ಞಾಪಿಸಿದರು. \v 40 ಅವರು ನೂರರಂತೆ, ಐವತ್ತರಂತೆ ಸಾಲಾಗಿ ಕುಳಿತರು. \v 41 ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅದರಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚಿಸಿದರು. \v 42 ಅವರೆಲ್ಲರೂ ತಿಂದು ತೃಪ್ತರಾದರು. \v 43 ಶಿಷ್ಯರು ಉಳಿದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು. \v 44 ಊಟಮಾಡಿದವರಲ್ಲಿ ಐದು ಸಾವಿರ ಮಂದಿ ಗಂಡಸರಿದ್ದರು. \s1 ಯೇಸು ನೀರಿನ ಮೇಲೆ ನಡೆದದ್ದು \p \v 45 ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು. \v 46 ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು. \p \v 47 ಸಂಜೆಯಾದಾಗ, ದೋಣಿಯು ಸರೋವರದ ಮಧ್ಯದಲ್ಲಿತ್ತು. ಯೇಸು ದಡದಲ್ಲಿ ಒಬ್ಬರೇ ಇದ್ದರು. \v 48 ಎದುರುಗಾಳಿ ಬಲವಾಗಿ ಬೀಸುತ್ತಿದ್ದುದರಿಂದ ಶಿಷ್ಯರು ದೋಣಿಯನ್ನು ನಿಯಂತ್ರಿಸಲು ದಣಿದು ಹೋದದ್ದನ್ನು ಯೇಸು ಕಂಡು, ಮುಂಜಾನೆ ಸುಮಾರು ಮೂರು ಗಂಟೆಯಲ್ಲಿ ಅವರ ಬಳಿಗೆ ಸರೋವರದ ಮೇಲೆ ನಡೆಯುತ್ತಾ ಬಂದರು. ಯೇಸು ಅವರನ್ನು ದಾಟಿ ಹೋಗುವುದರಲ್ಲಿದ್ದರು. \v 49 ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು. \v 50 ಅವರೆಲ್ಲರೂ ಯೇಸುವನ್ನು ಕಂಡು ದಿಗಿಲುಗೊಂಡಿದ್ದರು. \p ಕೂಡಲೇ ಯೇಸು ಅವರಿಗೆ, “ಧೈರ್ಯವಾಗಿರಿ, ನಾನೇ! ಭಯಪಡಬೇಡಿರಿ,” ಎಂದರು. \v 51 ಆಮೇಲೆ ಯೇಸು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಗಾಳಿ ನಿಂತುಹೋಯಿತು. ಅವರು ಬಹು ಆಶ್ಚರ್ಯಗೊಂಡರು. \v 52 ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿಲ್ಲವಾದ್ದರಿಂದ ಆಶ್ಚರ್ಯಚಕಿತರಾದರು. ಏಕೆಂದರೆ ಅವರ ಹೃದಯ ಕಠಿಣವಾಗಿತ್ತು. \p \v 53 ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು. \v 54 ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದರು. \v 55 ಅವರು ಆ ಪ್ರದೇಶದಲ್ಲೆಲ್ಲಾ ಓಡಾಡಿ, ಕಾಯಿಲೆಯಾಗಿದ್ದವರನ್ನು ಚಾಪೆಗಳ ಮೇಲೆ ಹಾಕಿಕೊಂಡು ಯೇಸು ಎಲ್ಲಿದ್ದಾರೆಂದು ಕೇಳಿದರೋ ಅಲ್ಲಿಗೆ ಬರಲಾರಂಭಿಸಿದರು. \v 56 ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು. \c 7 \s1 ಶುದ್ಧವೂ ಅಶುದ್ಧವೂ \p \v 1 ಯೆರೂಸಲೇಮಿನಿಂದ ಫರಿಸಾಯರು ಮತ್ತು ಕೆಲವು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದರು. \v 2 ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಅಂದರೆ ಆಚಾರ ಪದ್ಧತಿಯಂತೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು. \v 3 ಫರಿಸಾಯರು ಮತ್ತು ಎಲ್ಲಾ ಯೆಹೂದ್ಯರು ಆಚಾರ ಪದ್ಧತಿಯಂತೆ ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆಯದೆ ಊಟಮಾಡುವುದಿಲ್ಲ. ಹೀಗೆ ಅವರ ಪೂರ್ವಿಕರಿಂದ ಬಂದ ಸಂಪ್ರದಾಯವನ್ನು ಪಾಲಿಸುತ್ತಿದ್ದರು. \v 4 ಪೇಟೆಗೆ ಹೋಗಿ ಬಂದರೆ ಅವರು ಸ್ನಾನ ಮಾಡದೆ ಊಟಮಾಡುತ್ತಿರಲಿಲ್ಲ. ಮಾತ್ರವಲ್ಲದೆ ಲೋಟ, ಚೆಂಬು ಮತ್ತು ತಪ್ಪಲೆಗಳನ್ನು ಬೆಳಗಿ ತೊಳೆಯುವುದು ಮುಂತಾದ ಅನೇಕ ಶುದ್ಧಾಚಾರಗಳನ್ನು ಅವರು ಪಾಲಿಸುತ್ತಿದ್ದರು. \p \v 5 ಆದ್ದರಿಂದ ಫರಿಸಾಯರು ಮತ್ತು ನಿಯಮ ಬೋಧಕರು, “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯದ ಪ್ರಕಾರ ಏಕೆ ನಡೆಯುವುದಿಲ್ಲ? ಅವರು ಮೈಲಿಗೆಯಾದ ಕೈಗಳಿಂದ ಊಟಮಾಡುತ್ತಾರಲ್ಲಾ?” ಎಂದು ಯೇಸುವನ್ನು ಕೇಳಿದರು. \p \v 6 ಅದಕ್ಕೆ ಯೇಸು, “ಕಪಟಿಗಳೇ, ಯೆಶಾಯನು ನಿಮ್ಮ ವಿಷಯವಾಗಿ ಸರಿಯಾಗಿ ಪ್ರವಾದಿಸಿದ್ದಾನೆ,” ಅವನು ಬರೆದಿರುವಂತೆ: \q1 “ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ. \q2 ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. \q1 \v 7 ಮನುಷ್ಯರ ಆಜ್ಞೆಗಳನ್ನೇ ಉಪದೇಶಗಳನ್ನಾಗಿ ಬೋಧಿಸುವುದರಿಂದ \q2 ನನ್ನನ್ನು ವ್ಯರ್ಥವಾಗಿ ಆರಾಧಿಸುತ್ತಾರೆ.’\f + \fr 7:7 \fr*\ft \+xt ಯೆಶಾಯ 29:13\+xt*\ft*\f* \m \v 8 ನೀವು ದೇವರ ಆಜ್ಞೆಯನ್ನು ತೊರೆದು, ಮನುಷ್ಯರ ಸಂಪ್ರದಾಯಗಳನ್ನು ಹಿಡಿದುಕೊಂಡಿದ್ದೀರಿ,” ಎಂದರು. \p \v 9 ಯೇಸು ಇನ್ನೂ ಅವರಿಗೆ, “ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ. \v 10 ‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’\f + \fr 7:10 \fr*\ft \+xt ವಿಮೋ 20:12; ಧರ್ಮೋ 5:16\+xt*\ft*\f* ಮತ್ತು ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’\f + \fr 7:10 \fr*\ft \+xt ವಿಮೋ 21:17; ಯಾಜಕ 20:9\+xt*\ft*\f* ಎಂದು ಮೋಶೆ ಹೇಳಿದ್ದಾನೆ. \v 11 ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕಾಣಿಕೆಯಾಗಿ\f + \fr 7:11 \fr*\ft ಗ್ರೀಕ್ ಭಾಷೆಯಲ್ಲಿ \ft*\fqa ಕೊರ್ಬಾನ್ \fqa*\ft ಎಂದಿದೆ.\ft*\f* ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ, \v 12 ನೀವು ಅವನನ್ನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನು ಮಾಡುವುದಕ್ಕೂ ಅನುಮತಿಸುವುದಿಲ್ಲ. \v 13 ಹೀಗೆ ನೀವು ಮಾಡುತ್ತಾ ಬಂದಿರುವ ಸಂಪ್ರದಾಯಗಳ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ,” ಎಂದು ಹೇಳಿದರು. \p \v 14 ಯೇಸು ಜನಸಮೂಹವನ್ನು ಪುನಃ ತಮ್ಮ ಬಳಿಗೆ ಕರೆದು, “ಎಲ್ಲರೂ ನನ್ನ ಮಾತುಗಳನ್ನು ಕೇಳಿರಿ, ಅರ್ಥಮಾಡಿಕೊಳ್ಳಿರಿ. \v 15 ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಅಶುದ್ಧ ಮಾಡುವುದಿಲ್ಲ. ಆದರೆ ಮನುಷ್ಯನೊಳಗಿಂದ ಹೊರಗೆ ಬರುವಂಥದ್ದು ಅವನನ್ನು ಅಶುದ್ಧ ಮಾಡುತ್ತದೆ. \v 16 \it ಯಾವನಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ,” ಎಂದು ಹೇಳಿದರು.\it*\f + \fr 7:16 \fr*\ft ಕೆಲವು ಮೂಲ ಹಸ್ತಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \p \v 17 ಆಮೇಲೆ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಪ್ರವೇಶಿಸಿದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, ಆ ಸಾಮ್ಯದ ವಿಷಯವಾಗಿ ಪ್ರಶ್ನಿಸಿದರು. \v 18 ಯೇಸು ಅವರಿಗೆ, “ನೀವೂ ಇಷ್ಟು ಬುದ್ಧಿಹೀನರೋ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದ್ದು ಅವನನ್ನು ಅಶುದ್ಧ ಮಾಡುವುದಿಲ್ಲವೆಂಬುದು ನಿಮಗೆ ತಿಳಿಯದೋ? \v 19 ಏಕೆಂದರೆ ಅದು ಅವನ ಹೃದಯದೊಳಗೆ ಹೋಗದೆ ಹೊಟ್ಟೆಯನ್ನು ಸೇರಿ ಬಳಿಕ ವಿಸರ್ಜಿತವಾಗುತ್ತದೆ. ಹೀಗೆ ಹೇಳುವುದರ ಮೂಲಕ ಎಲ್ಲಾ ಆಹಾರ ಪದಾರ್ಥಗಳು ಶುದ್ಧವಾಗಿವೆ,” ಎಂದು ಯೇಸು ಸೂಚಿಸಿದರು. \p \v 20 ಯೇಸು ಮುಂದುವರಿದು, “ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ. \v 21 ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ, \v 22 ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ. \v 23 ಈ ಎಲ್ಲಾ ಕೇಡುಗಳು ಮನುಷ್ಯನ ಒಳಗಿಂದ ಹೊರಟು ಅವನನ್ನು ಅಶುದ್ಧ ಮಾಡುತ್ತವೆ,” ಎಂದರು. \s1 ಸಿರಿಯದ ಫೊಯಿನಿಕೆ ಸ್ತ್ರೀಯ ನಂಬಿಕೆ \p \v 24 ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶಕ್ಕೆ ಹೋದರು. ಯೇಸು ಒಂದು ಮನೆಯೊಳಗೆ ಹೋದಾಗ, ಅದು ಯಾರಿಗೂ ತಿಳಿಯಬಾರದೆಂದು ಬಯಸಿದರು. ಆದರೂ ಅವರು ಗುಟ್ಟಾಗಿರಲು ಸಾಧ್ಯವಾಗಲಿಲ್ಲ. \v 25 ಹೀಗೆ ಯೇಸುವಿನ ವಿಷಯ ತಿಳಿದ ಕೂಡಲೇ, ಅಶುದ್ಧಾತ್ಮಪೀಡಿತಳಾಗಿದ್ದ ಒಬ್ಬ ಚಿಕ್ಕ ಹುಡುಗಿಯ ತಾಯಿ ಬಂದು ಅವರ ಪಾದಕ್ಕೆ ಬಿದ್ದಳು. \v 26 ಆಕೆ, ಸಿರಿಯದ ಫೊಯಿನಿಕೆಯಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಓಡಿಸಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು. \p \v 27 ಯೇಸು ಆಕೆಗೆ, “ಮೊದಲು ಮಕ್ಕಳು ತಮಗೆ ಬೇಕಾದದ್ದನ್ನು ತಿಂದು ತೃಪ್ತಿಗೊಳ್ಳಲಿ, ಏಕೆಂದರೆ ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದರು. \p \v 28 ಅದಕ್ಕೆ ಆಕೆಯು ಯೇಸುವಿಗೆ, “ಹೌದು ಸ್ವಾಮೀ, ಆದರೆ ಮೇಜಿನ ಕೆಳಗಿರುವ ನಾಯಿಮರಿಗಳು ಮಕ್ಕಳ ಕೈಯಿಂದ ಕೆಳಗೆ ಬೀಳುವ ರೊಟ್ಟಿತುಂಡುಗಳನ್ನು ತಿನ್ನುತ್ತವಲ್ಲಾ?” ಎಂದು ಉತ್ತರಕೊಟ್ಟಳು. \p \v 29 ಆಗ ಯೇಸು ಆಕೆಗೆ, “ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ಮನೆಗೆ ಹಿಂದಿರುಗು, ದೆವ್ವವು ನಿನ್ನ ಮಗಳನ್ನು ಬಿಟ್ಟುಹೋಗಿದೆ,” ಎಂದರು. \p \v 30 ಆಕೆ ಮನೆಗೆ ಹೋದಾಗ, ದೆವ್ವ ಅವಳ ಮಗಳನ್ನು ಬಿಟ್ಟುಹೋಗಿತ್ತು ಮತ್ತು ಮಗಳು ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡಳು. \s1 ಕಿವುಡ ಮತ್ತು ಮೂಕನನ್ನು ಗುಣಪಡಿಸಿದ್ದು \p \v 31 ಆಮೇಲೆ ಯೇಸು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶದಿಂದ ಹೊರಟು ಸೀದೋನಿನ ಮಾರ್ಗವಾಗಿ ಗಲಿಲಾಯ ಸರೋವರ ತೀರವನ್ನು ಹಾದು ದೆಕಪೊಲಿ\f + \fr 7:31 \fr*\ft ಅಂದರೆ, ಹತ್ತು ಪಟ್ಟಣಗಳು\ft*\f* ಪ್ರದೇಶಕ್ಕೆ ಬಂದರು. \v 32 ಅಲ್ಲಿ ಕೆಲವರು ಮಾತನಾಡಲಾಗದ ಒಬ್ಬ ಕಿವುಡನನ್ನು ಕರೆದುಕೊಂಡು ಬಂದು ಅವನ ಮೇಲೆ ಕೈಯಿಡಬೇಕೆಂದು ಯೇಸುವನ್ನು ಬೇಡಿಕೊಂಡರು. \p \v 33 ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ತಮ್ಮ ಬೆರಳುಗಳನ್ನು ಅವನ ಕಿವಿಯೊಳಗಿಟ್ಟು ಅನಂತರ ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದರು. \v 34 ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ \tl “ಎಪ್ಫಥಾ!”\tl* ಎಂದರು. “ತೆರೆಯಲಿ!” ಎಂಬುದು ಅದರ ಅರಮೀಯ ಅರ್ಥ. \v 35 ಕೂಡಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು. ಅವನು ಸ್ಪಷ್ಟವಾಗಿ ಮಾತನಾಡಲಾರಂಭಿಸಿದನು. \p \v 36 ಯಾವ ಮನುಷ್ಯನಿಗೂ ಇದನ್ನು ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟೂ ಹೆಚ್ಚಾಗಿ ಪ್ರಚಾರಮಾಡಿದರು. \v 37 ಜನರು ಅತ್ಯಂತ ಆಶ್ಚರ್ಯಪಟ್ಟು, “ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ,” ಎಂದುಕೊಳ್ಳುತ್ತಿದ್ದರು. \c 8 \s1 ಯೇಸು ನಾಲ್ಕು ಸಾವಿರ ಜನರಿಗೆ ಊಟಮಾಡಿಸಿದ್ದು \p \v 1 ಆ ದಿವಸಗಳಲ್ಲಿ ದೊಡ್ಡ ಜನಸಮೂಹ ಕೂಡಿಬಂದಿತು. ಅವರಿಗೆ ಊಟಕ್ಕೆ ಏನೂ ಇಲ್ಲದ್ದರಿಂದ ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, \v 2 “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ. \v 3 ನಾನು ಇವರನ್ನು ಹಸಿವೆಯಿಂದ ತಮ್ಮ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರೆ,” ಎಂದರು. \p \v 4 ಅದಕ್ಕೆ ಶಿಷ್ಯರು ಯೇಸುವಿಗೆ, “ಈ ನಿರ್ಜನ ಪ್ರದೇಶದಲ್ಲಿ ಈ ಜನರನ್ನು ತೃಪ್ತಿಪಡಿಸಲು ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತರುವುದು?” ಎಂದರು. \p \v 5 ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಶಿಷ್ಯರು, \p “ಏಳು ರೊಟ್ಟಿಗಳಿವೆ,” ಎಂದರು. \p \v 6 ಆಗ ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ಮುರಿದು ಜನಸಮೂಹಕ್ಕೆ ಹಂಚಲು ತಮ್ಮ ಶಿಷ್ಯರಿಗೆ ಕೊಟ್ಟರು. ಅವರು ಜನಸಮೂಹಕ್ಕೆ ಹಂಚಿದರು. \v 7 ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚುವಂತೆ ಆಜ್ಞಾಪಿಸಿದರು. \v 8 ಜನರು ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಿದಾಗ ಏಳು ಬುಟ್ಟಿಗಳು ತುಂಬಿದವು. \v 9 ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ. ಯೇಸು ಅವರನ್ನು ಕಳುಹಿಸಿದ ನಂತರ, \v 10 ತಮ್ಮ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು. \p \v 11 ಫರಿಸಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ಮಾಡಬೇಕೆಂದು ಕೇಳಿ, ಅವರೊಂದಿಗೆ ತರ್ಕಿಸುವುದಕ್ಕೆ ಆರಂಭಿಸಿದರು. \v 12 ಯೇಸು ತಮ್ಮ ಆತ್ಮದಲ್ಲಿ ನೊಂದುಕೊಂಡು, “ಈ ಸಂತತಿಯು ಸೂಚಕಕಾರ್ಯವನ್ನು ಹುಡುಕುವುದು ಏಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲಾಗುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು. \v 13 ಯೇಸು ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೆದಡಕ್ಕೆ ಹೊರಟು ಹೋದರು. \s1 ಹುಳಿಯ ಬಗ್ಗೆ ಎಚ್ಚರಿಕೆ \p \v 14 ಶಿಷ್ಯರು ರೊಟ್ಟಿಬುತ್ತಿಯನ್ನು ತೆಗೆದುಕೊಳ್ಳುವುದಕ್ಕೆ ಮರೆತಿದ್ದರು. ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದೇ ಒಂದು ರೊಟ್ಟಿ ಇತ್ತು. \v 15 ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು. \p \v 16 ಅವರು ತಮ್ಮೊಳಗೆ, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು,” ಎಂದು ಚರ್ಚಿಸಿಕೊಂಡರು. \p \v 17 ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಏಕೆ ಚರ್ಚಿಸಿಕೊಳ್ಳುತ್ತೀರಿ? ನೀವು ಇನ್ನೂ ಕಾಣದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣ ಮಾಡಿಕೊಂಡಿದ್ದೀರೋ? \v 18 ಕಣ್ಣುಗಳಿದ್ದೂ ನೀವು ಕಾಣುವುದಿಲ್ಲವೋ? ಕಿವಿಗಳಿದ್ದೂ ನೀವು ಕೇಳುವುದಿಲ್ಲವೋ? \v 19 ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಕೂಡಿಸಿದಿರಿ ಎಂದು ನಿಮಗೆ ನೆನಪಿಲ್ಲವೇ?” ಎಂದು ಕೇಳಲು ಅವರು ಯೇಸುವಿಗೆ, \p “ಹನ್ನೆರಡು ಬುಟ್ಟಿಗಳು,” ಎಂದರು. \p \v 20 “ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ತುಂಡುಗಳನ್ನು ಕೂಡಿಸಿದಿರಿ?” ಎಂದು ಕೇಳಲು ಅವರು, \p “ಏಳು ಬುಟ್ಟಿಗಳು,” ಎಂದರು. \p \v 21 ಯೇಸು ಅವರಿಗೆ, “ಹಾಗಾದರೆ ನೀವು ಇನ್ನೂ ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು. \s1 ಯೇಸು ಕುರುಡರಿಗೆ ಕಣ್ಣು ಕೊಟ್ಟದ್ದು \p \v 22 ಯೇಸು ಬೇತ್ಸಾಯಿದಕ್ಕೆ ಬಂದಾಗ, ಕೆಲವರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು. \v 23 ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತದೋ?” ಎಂದು ಅವನನ್ನು ಕೇಳಿದರು. \p \v 24 ಅವನು ಮೇಲಕ್ಕೆ ನೋಡಿ, “ಮನುಷ್ಯರು ಮರಗಳ ಹಾಗೆ ಕಾಣುತ್ತಿದ್ದಾರೆ. ಆದರೂ ಅವರು ನಡೆದಾಡುವುದನ್ನು ನೋಡುತ್ತಿದ್ದೇನೆ,” ಎಂದನು. \p \v 25 ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು. \v 26 ಯೇಸು ಅವನಿಗೆ, “ನೀನು ಊರೊಳಕ್ಕೆ ಹೋಗಬೇಡ,” ಎಂದು ಹೇಳಿ ಅವನನ್ನು ಮನೆಗೆ ಕಳುಹಿಸಿಬಿಟ್ಟರು. \s1 ಪೇತ್ರನ ಅರಿಕೆ \p \v 27 ಯೇಸುವೂ ಅವರ ಶಿಷ್ಯರೂ ಕೈಸರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಯೇಸು ದಾರಿಯಲ್ಲಿ ತಮ್ಮ ಶಿಷ್ಯರಿಗೆ, “ನಾನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು. \p \v 28 ಅವರು, “ಕೆಲವರು ಸ್ನಾನಿಕನಾದ ಯೋಹಾನನು, ಮತ್ತೆ ಕೆಲವರು ಎಲೀಯನು, ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಎನ್ನುತ್ತಾರೆ,” ಎಂದು ಹೇಳಿದರು. \p \v 29 ಅದಕ್ಕೆ ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಲು, \p ಪೇತ್ರನು ಯೇಸುವಿಗೆ, “ನೀನು ಕ್ರಿಸ್ತನೇ,” ಎಂದನು. \p \v 30 ತಮ್ಮ ವಿಷಯವಾಗಿ ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. \s1 ಯೇಸು ತಮ್ಮ ಮರಣವನ್ನು ಮುಂತಿಳಿಸಿದ್ದು \p \v 31 ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು. \v 32 ಯೇಸು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು ಯೇಸುವನ್ನು ಗದರಿಸಲಾರಂಭಿಸಿದನು. \p \v 33 ಆದರೆ ಯೇಸು ತಿರುಗಿ ತಮ್ಮ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದು ಹೇಳಿದರು. \s1 ಶಿಲುಬೆಯ ಮಾರ್ಗ \p \v 34 ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. \v 35 ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವರು ಅದನ್ನು ಕಳೆದುಕೊಳ್ಳುವರು. ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಉಳಿಸಿಕೊಳ್ಳುವರು. \v 36 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? \v 37 ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು? \v 38 ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು. \c 9 \p \v 1 ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು. \s1 ಯೇಸುವಿನ ರೂಪಾಂತರ \p \v 2 ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು. \v 3 ಯೇಸುವಿನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷ್ಟು ಉಜ್ವಲವಾಗಿ ಹೊಳೆಯುತ್ತಿತ್ತು. \v 4 ಆಗ ಅಲ್ಲಿ ಎಲೀಯನು ಮತ್ತು ಮೋಶೆಯು ಯೇಸುವಿನೊಂದಿಗೆ ಮಾತನಾಡುತ್ತಿರುವುದನ್ನು ಅವರು ಕಂಡರು. \p \v 5 ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ನಾವು ಕಟ್ಟುವೆವು,” ಎಂದು ಹೇಳಿದನು. \v 6 ತಾನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ. ಏಕೆಂದರೆ ಅವರು ಬಹಳವಾಗಿ ಹೆದರಿದ್ದರು. \p \v 7 ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು. \p \v 8 ಕೂಡಲೇ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನೇ ಹೊರತು ಇನ್ನಾರನ್ನೂ ಕಾಣಲಿಲ್ಲ. \p \v 9 ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು. \v 10 “ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು. \p \v 11 ಇದಲ್ಲದೆ ಅವರು ಯೇಸುವಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು. \p \v 12 ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ? \v 13 ಆದರೆ, ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಜನರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು. \s1 ಮೂಕದೆವ್ವ ಹಿಡಿದವನನ್ನು ಗುಣಪಡಿಸಿದ್ದು \p \v 14 ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು. \v 15 ಜನರೆಲ್ಲರೂ ಯೇಸುವನ್ನು ಕಂಡಕೂಡಲೇ, ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಯೇಸುವನ್ನು ವಂದಿಸಿದರು. \p \v 16 ಆಗ ಯೇಸು ಅವರಿಗೆ, “ಅವರೊಂದಿಗೆ ನೀವು ಏನು ತರ್ಕಮಾಡುತ್ತಿದ್ದಿರಿ?” ಎಂದು ಕೇಳಿದರು. \p \v 17 ಸಮೂಹದಲ್ಲಿದ್ದ ಒಬ್ಬನು, “ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು. \v 18 ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು. \p \v 19 ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು. \p \v 20 ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು. \p \v 21 ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, \p “ಬಾಲ್ಯದಿಂದಲೇ ಹೀಗಿದೆ. \v 22 ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು. \p \v 23 ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು. \p \v 24 ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು. \p \v 25 ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು. \p \v 26 ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು. \v 27 ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು. \p \v 28 ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು. \p \v 29 ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,”\f + \fr 9:29 \fr*\ft ಕೆಲವು ಹಸ್ತಪ್ರತಿಗಳಲ್ಲಿ \ft*\fqa ಪ್ರಾರ್ಥನೆ \fqa*\ft ಮಾತ್ರ ಇದೆ\ft*\f* ಎಂದರು. \s1 ಯೇಸು ತಮ್ಮ ಮರಣವನ್ನು ಎರಡನೆಯ ಬಾರಿ ಮುಂತಿಳಿಸಿದ್ದು \p \v 30 ಅವರು ಅಲ್ಲಿಂದ ಹೊರಟು ಗಲಿಲಾಯದ ಮಾರ್ಗವಾಗಿ ಹಾದುಹೋದರು. ತಾವು ಎಲ್ಲಿದ್ದೇವೆ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ಯೇಸು ಅಪೇಕ್ಷಿಸಿದರು. \v 31 ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು. \v 32 ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು. \p \v 33 ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು. \v 34 ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು. \p \v 35 ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು. \p \v 36 ಯೇಸು ಒಂದು ಮಗುವನ್ನು ತೆಗೆದುಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, ತಮ್ಮ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ, \v 37 “ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು. \s1 ಯಾರು ನಮಗೆ ವಿರೋಧವಾಗಿಲ್ಲವೋ ಅವರು ನಮ್ಮವರು \p \v 38 ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು. \p \v 39 ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು. \v 40 ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವನಾಗಿದ್ದಾನೆ. \v 41 ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು. \s1 ಪಾಪಕ್ಕೆ ಕಾರಣವಾಗಿರುವುದು \p \v 42 “ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು. \v 43 ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. \v 44 ನರಕದಲ್ಲಿ, \q1 \it “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ\it* \q2 \it ಮತ್ತು ಬೆಂಕಿಯು ಆರುವುದಿಲ್ಲ.’\it*\f + \fr 9:44 \fr*\ft ಕೆಲವು ಮೂಲ ಹಸ್ತಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \m \v 45 ನಿಮ್ಮ ಕಾಲು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ನೀವು ಎರಡು ಕಾಲುಳ್ಳವರಾಗಿ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು. \v 46 ನರಕದಲ್ಲಿ, \q1 \it “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ\it* \q2 \it ಮತ್ತು ಬೆಂಕಿಯು ಆರುವುದಿಲ್ಲ.’\it*\f + \fr 9:46 \fr*\ft ಕೆಲವು ಮೂಲ ಹಸ್ತಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \m \v 47 ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು. \v 48 ನರಕದಲ್ಲಿ, \q1 “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ, \q2 ಮತ್ತು ಬೆಂಕಿಯು ಆರುವುದಿಲ್ಲ.’\f + \fr 9:48 \fr*\ft \+xt ಯೆಶಾಯ 66:24\+xt*\ft*\f* \m \v 49 ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ. \p \v 50 “ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು. \c 10 \s1 ವಿವಾಹ ವಿಚ್ಛೇದನೆಯ ಕುರಿತು \p \v 1 ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು. \p \v 2 ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಪರೀಕ್ಷಿಸುವುದಕ್ಕಾಗಿ ಯೇಸುವಿಗೆ, “ಒಬ್ಬ ಪುರುಷನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು. \p \v 3 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮಗೆ ಏನು ಅಪ್ಪಣೆಕೊಟ್ಟನು?” ಎಂದು ಕೇಳಿದರು. \p \v 4 ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು. \p \v 5 ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು. \v 6 ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.’\f + \fr 10:6 \fr*\ft \+xt ಆದಿ 1:27\+xt*\ft*\f* \v 7 ‘ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. \v 8 ಅವರಿಬ್ಬರೂ ಒಂದೇ ಶರೀರವಾಗಿರುವರು.’\f + \fr 10:8 \fr*\ft \+xt ಆದಿ 2:24\+xt*\ft*\f* ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. \v 9 ಆದಕಾರಣ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು,” ಎಂದರು. \p \v 10 ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಯೇಸುವಿಗೆ ತಿರುಗಿ ಕೇಳಿದರು. \v 11 ಅದಕ್ಕೆ ಯೇಸು ಅವರಿಗೆ, “ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಯಾದರೆ, ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿದ್ದಾನೆ. \v 12 ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ, ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ,” ಎಂದರು. \s1 ಯೇಸು ಚಿಕ್ಕಮಕ್ಕಳನ್ನು ಆಶೀರ್ವದಿಸಿದ್ದು \p \v 13 ಕೆಲವರು ತಮ್ಮ ಚಿಕ್ಕಮಕ್ಕಳನ್ನು ಯೇಸು ಮುಟ್ಟಬೇಕೆಂದು ಅವರ ಬಳಿಗೆ ತಂದರು. ಆದರೆ ಶಿಷ್ಯರು ಜನರನ್ನು ಗದರಿಸಿದರು. \v 14 ಯೇಸು ಅದನ್ನು ಕಂಡಾಗ ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ. \v 15 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು. \v 16 ಇದಲ್ಲದೆ ಯೇಸು ಆ ಮಕ್ಕಳನ್ನು ಎತ್ತಿಕೊಂಡು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದರು. \s1 ಐಶ್ವರ್ಯವಂತನೂ ದೇವರಾಜ್ಯವೂ \p \v 17 ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು. \p \v 18 ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬನೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ. \v 19 ‘ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’\f + \fr 10:19 \fr*\ft \+xt ವಿಮೋ 20:12-16; ಧರ್ಮೋ 5:16-20\+xt*\ft*\f* ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು. \p \v 20 ಅವನು, “ಬೋಧಕರೇ, ನಾನು ಇವೆಲ್ಲವನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ,” ಎಂದು ಹೇಳಿದನು. \p \v 21 ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು. \p \v 22 ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು. \p \v 23 ಯೇಸು ಸುತ್ತಲೂ ನೋಡಿ ತಮ್ಮ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!” ಎಂದರು. \p \v 24 ಶಿಷ್ಯರು ಯೇಸುವಿನ ಮಾತುಗಳಿಗೆ ಬೆರಗಾದರು. ಆದರೆ ಯೇಸು ತಿರುಗಿ ಅವರಿಗೆ, “ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ. \v 25 ಒಬ್ಬ ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು. \p \v 26 ಅದಕ್ಕೆ ಶಿಷ್ಯರು ಅತ್ಯಂತ ಆಶ್ಚರ್ಯಪಟ್ಟು ತಮ್ಮೊಳಗೆ, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದುಕೊಂಡರು. \p \v 27 ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ,” ಎಂದರು. \p \v 28 ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ,” ಎಂದು ಹೇಳಲಾರಂಭಿಸಿದನು. \p \v 29 ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ, \v 30 ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು. \v 31 ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲಿನವರಾಗುವರು,” ಎಂದರು. \s1 ಯೇಸು ಪುನಃ ಮರಣ ಪುನರುತ್ಥಾನಗಳ ಬಗ್ಗೆ ಪ್ರಕಟಿಸಿದ್ದು \p \v 32 ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು. ಯೇಸು ಅವರ ಮುಂದಾಗಿ ಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಯೇಸುವಿನ ಹಿಂದೆ ಬರುತ್ತಿದ್ದವರು ಭಯಪಟ್ಟರು. ಯೇಸು ತಮ್ಮ ಹನ್ನೆರಡು ಮಂದಿಯನ್ನು ತಿರುಗಿ ಕರೆದು ತನಗೆ ಸಂಭವಿಸುವ ಸಂಗತಿಗಳನ್ನು ಅವರಿಗೆ ಹೇಳಲಾರಂಭಿಸಿದರು: \v 33 “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸಿ ನನ್ನನ್ನು ಯೆಹೂದ್ಯರಲ್ಲದವರಿಗೆ ಒಪ್ಪಿಸುವರು. \v 34 ಇವರು ನನ್ನನ್ನು ಹಾಸ್ಯಮಾಡಿ, ನನ್ನ ಮೇಲೆ ಉಗುಳಿ, ಕೊರಡೆಯಿಂದ ಹೊಡೆದು ನನ್ನನ್ನು ಕೊಂದುಹಾಕುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದರು. \s1 ಯಾಕೋಬ, ಯೋಹಾನರ ಬೇಡಿಕೆ \p \v 35 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಬೋಧಕರೇ, ನಾವು ಕೇಳುವುದನ್ನು ನೀವು ನಮಗೋಸ್ಕರ ಮಾಡಬೇಕು,” ಎಂದರು. \p \v 36 ಅದಕ್ಕೆ ಯೇಸು ಅವರಿಗೆ, “ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಿದರು. \p \v 37 ಅವರು ಯೇಸುವಿಗೆ, “ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು,” ಎಂದರು. \p \v 38 ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ನೀವೂ ಕುಡಿಯುವಿರೋ? ನಾನು ಪಡೆಯಲಿರುವ ದೀಕ್ಷಾಸ್ನಾನವನ್ನು ನೀವೂ ಪಡೆಯುವಿರೋ?” ಎಂದರು. \p \v 39 ಅದಕ್ಕೆ ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು. \p ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಿಂದ ನೀವು ಕುಡಿಯುವಿರಿ. ನಾನು ಹೊಂದುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ. \v 40 ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದರು. \p \v 41 ಆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು. \v 42 ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು ಅವರಿಗೆ, “ಆಳುವವರು ಎಂದೆನಿಸಿಕೊಂಡವರು ಯೆಹೂದ್ಯರಲ್ಲದವರ ಮೇಲೆ ದೊರೆತನ ಮಾಡುತ್ತಾರೆ. ಅವರಲ್ಲಿ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ. \v 43 ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ. \v 44 ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ ಎಲ್ಲರಿಗೂ ದಾಸನಾಗಿರಲಿ. \v 45 ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು. \s1 ಕುರುಡ ಬಾರ್ತಿಮಾಯನಿಗೆ ದೃಷ್ಟಿ ಬಂದದ್ದು \p \v 46 ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸು ತಮ್ಮ ಶಿಷ್ಯರೊಡನೆಯೂ ಅಸಂಖ್ಯಾತ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗ ಕುರುಡ ಬಾರ್ತಿಮಾಯನು ದಾರಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು. \v 47 ನಜರೇತಿನ ಯೇಸು ಬರುತ್ತಿದ್ದಾರೆ ಎಂದು ಅವನು ಕೇಳಿದಾಗ, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಕೂಗಿಕೊಳ್ಳಲಾರಂಭಿಸಿದನು. \p \v 48 ಸುಮ್ಮನಿರುವಂತೆ ಅನೇಕರು ಅವನಿಗೆ ಒತ್ತಾಯಪಡಿಸಿ ಹೇಳಿದರು. ಆದರೆ ಅವನು ಇನ್ನೂ ಗಟ್ಟಿಯಾಗಿ, “ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಇನ್ನಷ್ಟು ಕೂಗಿದನು. \p \v 49 ಯೇಸು ನಿಂತು, ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು, \p ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಅವನಿಗೆ ಹೇಳಿದರು. \v 50 ಅವನು ತನ್ನ ಮೇಲಂಗಿಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು. \p \v 51 ಯೇಸು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ?” ಎಂದು ಕೇಳಲು, \p ಆ ಕುರುಡನು ಯೇಸುವಿಗೆ, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡಬೇಕು,” ಎಂದನು. \p \v 52 ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು. \c 11 \s1 ವಿಜಯದ ಪ್ರವೇಶ \p \v 1 ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆ ಮತ್ತು ಬೇಥಾನ್ಯಕ್ಕೂ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, \v 2 “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ನೀವು ಅದರೊಳಗೆ ಪ್ರವೇಶಿಸಿದ ಕೂಡಲೇ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ. \v 3 ಯಾವನಾದರೂ ನಿಮಗೆ, ‘ಏಕೆ ಹೀಗೆ ಮಾಡುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತದೇವರಿಗೆ ಅವಶ್ಯವಾಗಿದೆ, ಆತನು ಕೂಡಲೇ ಇದನ್ನು ಹಿಂದಕ್ಕೆ ಕಳುಹಿಸುವನು,’ ” ಎಂದು ಹೇಳಿರಿ ಎಂದರು. \p \v 4 ಆಗ ಅವರು ಹೊರಟುಹೋಗಿ ಬೀದಿಯಲ್ಲಿದ್ದ ಒಂದು ಮನೆಯ ಬಾಗಿಲಿನ ಹತ್ತಿರ ಕಟ್ಟಿದ್ದ ಕತ್ತೆಮರಿಯನ್ನು ಕಂಡರು. ಅವರು ಅದನ್ನು ಬಿಚ್ಚುತ್ತಿರುವಾಗ, \v 5 ಅಲ್ಲಿ ನಿಂತಿದ್ದ ಕೆಲವರು ಅವರಿಗೆ, “ಆ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಕೇಳಿದರು. \v 6 ಅದಕ್ಕೆ ಅವರು ಯೇಸು ತಮಗೆ ಹೇಳಿದ ಪ್ರಕಾರ ಉತ್ತರ ಕೊಡಲು, ಅವರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟರು. \v 7 ಶಿಷ್ಯರು ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದಾಗ ಯೇಸು ಅದರ ಮೇಲೆ ಕುಳಿತುಕೊಂಡರು. \v 8 ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ತೋಟಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು. \v 9 ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗುತ್ತಾ, \q1 “ಹೊಸನ್ನ!”\f + \fr 11:9 \fr*\ft \+xt ಕೀರ್ತನೆ 118:25,26\+xt*\ft*\f* \b \q1 “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” \b \q1 \v 10 “ಬರಲಿರುವ ನಮ್ಮ ತಂದೆಯಾದ ದಾವೀದನ ರಾಜ್ಯವು ಆಶೀರ್ವಾದ ಹೊಂದಲಿ!” \b \q1 “ಉನ್ನತದಲ್ಲಿ ಹೊಸನ್ನ!” \m ಎಂದು ಹೇಳಿದರು. \p \v 11 ಯೇಸು ಯೆರೂಸಲೇಮಿಗೆ ಹೋಗಿ ದೇವಾಲಯವನ್ನು ಪ್ರವೇಶಿಸಿದಾಗ ಸುತ್ತಲಿದ್ದ ಎಲ್ಲವುಗಳನ್ನು ನೋಡಿದರು. ಆಗ ಸಂಜೆಯಾಗಿದ್ದುದರಿಂದ ಯೇಸು ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದರು. \s1 ದೇವಾಲಯವನ್ನು ಶುದ್ಧೀಕರಿಸಿದ್ದು \p \v 12 ಮರುದಿನ ಅವರು ಬೇಥಾನ್ಯದಿಂದ ಬರುತ್ತಿರುವಾಗ ಯೇಸುವಿಗೆ ಹಸಿವಾಯಿತು. \v 13 ಯೇಸು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ಕಂಡು ಒಂದು ವೇಳೆ ಅದರಲ್ಲಿ ಹಣ್ಣು ಏನಾದರೂ ಸಿಕ್ಕೀತೆಂದುಕೊಂಡರು. ಆದರೆ ಯೇಸು ಅದರ ಹತ್ತಿರ ಬಂದಾಗ ಎಲೆಗಳನ್ನು ಹೊರತು ಮತ್ತೇನೂ ಕಾಣಲಿಲ್ಲ. ಅದು ಅಂಜೂರ ಫಲದ ಕಾಲವಾಗಿರಲಿಲ್ಲ. \v 14 ಯೇಸು ಅದಕ್ಕೆ, “ಇನ್ನೆಂದಿಗೂ ಯಾರೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ,” ಎಂದರು. ಅದನ್ನು ಅವರ ಶಿಷ್ಯರು ಕೇಳಿಸಿಕೊಂಡರು. \p \v 15 ತರುವಾಯ ಅವರು ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ, ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು. \v 16 ಯಾರೂ ದೇವಾಲಯದ ಮಾರ್ಗವಾಗಿ ಯಾವುದನ್ನೂ ತೆಗೆದುಕೊಂಡು ಹೋಗದಂತೆ ತಡೆದರು. \v 17 ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’\f + \fr 11:17 \fr*\ft \+xt ಯೆಶಾಯ 56:7\+xt*\ft*\f* ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,”\f + \fr 11:17 \fr*\ft \+xt ಯೆರೆ 7:11\+xt*\ft*\f* ಎಂದು ಹೇಳಿದರು. \p \v 18 ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು. \p \v 19 ಸಂಜೆಯಾದಾಗ ಯೇಸು ಮತ್ತು ಅವರ ಶಿಷ್ಯರು ಪಟ್ಟಣದ ಹೊರಗೆ ಹೋದರು. \p \v 20 ಬೆಳಿಗ್ಗೆ ಅವರು ಅದೇ ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರ ಮರವು ಬೇರುಸಹಿತವಾಗಿ ಒಣಗಿರುವುದನ್ನು ಕಂಡರು. \v 21 ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, “ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!” ಎಂದು ಹೇಳಿದನು. \p \v 22 ಯೇಸು ಉತ್ತರವಾಗಿ ಅವರಿಗೆ ಹೇಳಿದ್ದೇನೆಂದರೆ, “ದೇವರ ನಂಬಿಕೆ ನಿಮಗಿರಲಿ.\f + \fr 11:22 \fr*\ft ಅಥವಾ \ft*\fqa ದೇವರಲ್ಲಿ ನಂಬಿಕೆ ನಿಮಗಿರಲಿ.\fqa*\f* \v 23 ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು. \v 24 ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು. \v 25 ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು. \v 26 \it ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.\it*\f + \fr 11:26 \fr*\ft ಕೆಲವು ಹಸ್ತಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \s1 ಯೇಸುವಿನ ಅಧಿಕಾರವನ್ನು ಪ್ರಶ್ನಿಸಿದ್ದು \p \v 27 ಯೇಸು ಮತ್ತು ಶಿಷ್ಯರು ಪುನಃ ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿರುವಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವಿನ ಬಳಿಗೆ ಬಂದು \v 28 ಯೇಸುವಿಗೆ, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಇವುಗಳನ್ನು ಮಾಡುವುದಕ್ಕೆ ನಿನಗೆ ಅಧಿಕಾರ ಕೊಟ್ಟವರು ಯಾರು?” ಎಂದು ಕೇಳಿದರು. \p \v 29 ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. \v 30 ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ? ನನಗೆ ಉತ್ತರಕೊಡಿರಿ,” ಎಂದರು. \p \v 31 ಆಗ ಅವರು, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು. \v 32 ಆದರೆ ನಾವು, ‘ಮನುಷ್ಯರಿಂದ ಬಂತು’ ಎಂದು ಹೇಳುವುದಾದರೆ, ನಮಗೆ ಜನರ ಭಯವಿದೆ. ಏಕೆಂದರೆ ಯೋಹಾನನು ನಿಜವಾಗಿಯೂ ಪ್ರವಾದಿ ಎಂದು ಎಲ್ಲರೂ ಎಣಿಸಿಕೊಂಡಿರುವರು,” ಎಂದು ತಮ್ಮಲ್ಲಿ ಚರ್ಚಿಸಿಕೊಂಡರು. \p \v 33 ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು. \p ಅದಕ್ಕೆ ಯೇಸು, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದು ಅವರಿಗೆ ಉತ್ತರಕೊಟ್ಟರು. \c 12 \s1 ದುಷ್ಟ ರೈತರ ಸಾಮ್ಯ \p \v 1 ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು. \v 2 ಫಲದ ಕಾಲ ಬಂದಾಗ ಅವನು ದ್ರಾಕ್ಷಿತೋಟದ ಫಲವನ್ನು ರೈತರಿಂದ ಪಡೆಯುವುದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕನನ್ನು ಕಳುಹಿಸಿದನು. \v 3 ಆದರೆ ಅವರು ಅವನನ್ನು ಹಿಡಿದು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು. \v 4 ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ತಲೆಯನ್ನು ಗಾಯಗೊಳಿಸಿ ಅವಮಾನ ಮಾಡಿ ಕಳುಹಿಸಿಬಿಟ್ಟರು. \v 5 ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದಾಗ ಅವರು ಅವನನ್ನು ಕೊಂದುಹಾಕಿದರು. ಯಜಮಾನನು ಬೇರೆ ಕೆಲವರನ್ನು ಕಳುಹಿಸಿದಾಗ ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು. \p \v 6 “ಕಡೆಯದಾಗಿ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನಿದ್ದನು. ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು,’ ಎಂದು ಭಾವಿಸಿ, ಅವನನ್ನು ಅವರ ಬಳಿಗೆ ಕಳುಹಿಸಿದನು. \p \v 7 “ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು. \v 8 ಅವರು ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷಿತೋಟದ ಹೊರಗೆ ಬಿಸಾಡಿದರು. \p \v 9 “ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು. \v 10 ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: \q1 “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ \q2 ಮುಖ್ಯವಾದ ಮೂಲೆಗಲ್ಲಾಯಿತು. \q1 \v 11 ಇದು ಕರ್ತನಿಂದಲೇ ಆಯಿತು. \q2 ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ,’\f + \fr 12:11 \fr*\ft \+xt ಕೀರ್ತನೆ 118:22,23\+xt*\ft*\f*” \m ಎಂದು ಹೇಳಿದರು. \p \v 12 ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು. \s1 ಚಕ್ರವರ್ತಿಗೆ ತೆರಿಗೆ ಕಟ್ಟುವುದು \p \v 13 ಆಮೇಲೆ ಅವರು ಯೇಸುವನ್ನು ಅವರ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಅವರ ಬಳಿಗೆ ಕಳುಹಿಸಿದರು. \v 14 ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ? \v 15 ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. \p ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು. \v 16 ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, \p “ಕೈಸರನದು,” ಎಂದು ಉತ್ತರಕೊಟ್ಟರು. \p \v 17 ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. \p ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು. \s1 ಪುನರುತ್ಥಾನದಲ್ಲಿ ಮದುವೆ ಇಲ್ಲ \p \v 18 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಯೇಸುವಿನ ಬಳಿಗೆ ಬಂದು, \v 19 “ಬೋಧಕರೇ, ‘ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ವಿಧವೆಯನ್ನು ಬಿಟ್ಟು ಸತ್ತರೆ, ಅವನ ಸಹೋದರನು ಅವನ ಹೆಂಡತಿಯನ್ನು ತೆಗೆದುಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು’ ಎಂದು ಮೋಶೆಯು ನಮಗೆ ಬರೆದಿರುತ್ತಾನಷ್ಟೆ. \v 20 ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು. \v 21 ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು. ಅದರಂತೆಯೇ ಮೂರನೆಯವನೂ ಆದನು. \v 22 ಹೀಗೆ ಏಳುಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವರಾಗಿ ಮೃತರಾದರು. ಕೊನೆಯಲ್ಲಿ ಆ ಸ್ತ್ರೀಯೂ ಸಹ ಮರಣಹೊಂದಿದಳು. \v 23 ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ,” ಎಂದು ಪ್ರಶ್ನಿಸಿದರು. \p \v 24 ಅದಕ್ಕೆ ಯೇಸು, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದಿರಲ್ಲವೇ? \v 25 ಅವರು ಸತ್ತವರೊಳಗಿಂದ ಜೀವಂತವಾಗಿ ಎದ್ದ ಮೇಲೆ, ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. \v 26 ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’\f + \fr 12:26 \fr*\ft \+xt ವಿಮೋ 3:6\+xt*\ft*\f* ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ? \v 27 ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ, ಆದ್ದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪುಮಾಡುತ್ತೀರಿ,” ಎಂದು ಹೇಳಿದರು. \s1 ಅತ್ಯಂತ ಪ್ರಮುಖ ಆಜ್ಞೆ \p \v 28 ನಿಯಮ ಬೋಧಕರಲ್ಲಿ ಒಬ್ಬನು ಬಂದು ಅವರು ಕೂಡಿಕೊಂಡು ತರ್ಕಿಸುತ್ತಿರುವುದನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಅವರಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವುದು?” ಎಂದು ಕೇಳಿದನು. \p \v 29 ಯೇಸು ಉತ್ತರವಾಗಿ ಅವನಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು, ‘ಇಸ್ರಾಯೇಲೇ, ಕೇಳು: ನಮ್ಮ ದೇವರಾದ ಕರ್ತ ಒಬ್ಬರೇ ಕರ್ತನಾಗಿದ್ದಾರೆ. \v 30 ನೀನು ನಿನ್ನ ದೇವರನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು?’\f + \fr 12:30 \fr*\ft \+xt ಧರ್ಮೋ 6:4,5\+xt*\ft*\f* \v 31 ‘ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,’\f + \fr 12:31 \fr*\ft \+xt ಯಾಜಕ 19:18\+xt*\ft*\f* ಎಂಬುದು ಅದರಂತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿಗಿಂತ ಹೆಚ್ಚಿನ ಆಜ್ಞೆಯು ಮತ್ತೊಂದಿಲ್ಲ,” ಎಂದು ಹೇಳಿದರು. \p \v 32 ಅದಕ್ಕೆ ಆ ನಿಯಮ ಬೋಧಕನು ಯೇಸುವಿಗೆ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ನೀವು ಹೇಳಿದ್ದು ಸತ್ಯವೇ; ಏಕೆಂದರೆ ದೇವರು ಒಬ್ಬರೇ, ಅವರ ಹೊರತು ಬೇರೊಬ್ಬರು ಇಲ್ಲ. \v 33 ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು. \p \v 34 ಅವನು ವಿವೇಕದಿಂದ ಉತ್ತರ ಕೊಟ್ಟದ್ದನ್ನು ಯೇಸು ಕಂಡು ಅವನಿಗೆ, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ,” ಎಂದರು. ಅಂದಿನಿಂದ ಯೇಸುವನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. \s1 ಕ್ರಿಸ್ತನು ಯಾರ ಪುತ್ರನು? \p \v 35 ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ, “ಕ್ರಿಸ್ತನು ದಾವೀದನ ಪುತ್ರನು ಎಂದು ನಿಯಮ ಬೋಧಕರು ಹೇಳುತ್ತಿರುವುದು ಹೇಗೆ? \v 36 ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: \q1 “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: \q2 “ನಾನು ನಿನ್ನ ವಿರೋಧಿಗಳನ್ನು \q1 ನಿನ್ನ ಪಾದದಡಿಯಲ್ಲಿ ಹಾಕುವವರೆಗೆ \q2 ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’\f + \fr 12:36 \fr*\ft \+xt ಕೀರ್ತನೆ 110:1\+xt*\ft*\f* \m \v 37 ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. \p ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು. \s1 ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆ \p \v 38 ಯೇಸು ಬೋಧನೆಮಾಡುತ್ತಾ, “ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ \v 39 ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಇಷ್ಟಪಡುತ್ತಾರೆ. \v 40 ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು. \s1 ಬಡ ವಿಧವೆಯ ಕಾಣಿಕೆ \p \v 41 ಯೇಸು ಕಾಣಿಕೆ ಪೆಟ್ಟಿಗೆಯ ಎದುರಾಗಿ ಕುಳಿತುಕೊಂಡು ಜನರು ಹೇಗೆ ಅದರಲ್ಲಿ ಹಣ ಹಾಕುತ್ತಿದ್ದಾರೆಂಬುದನ್ನು ಗಮನಿಸುತ್ತಿದ್ದರು. ಅನೇಕ ಐಶ್ವರ್ಯವಂತರು ಹೆಚ್ಚು ಹಣ ಹಾಕಿದರು. \v 42 ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು. \p \v 43 ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. \v 44 ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದುದನ್ನು ಹಾಕಿದ್ದಾಳೆ,” ಎಂದರು. \c 13 \s1 ಯುಗದ ಸಮಾಪ್ತಿಯ ಸೂಚನೆಗಳು \p \v 1 ಯೇಸು ದೇವಾಲಯದೊಳಗಿಂದ ಹೊರಗೆ ಹೋಗುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ಬೋಧಕರೇ, ಇಲ್ಲಿ ಎಂಥಾ ಭಾರಿ ಕಲ್ಲುಗಳು ಮತ್ತು ಎಂಥಾ ಮಹಾ ಕಟ್ಟಡಗಳು ಇವೆ ನೋಡಿರಿ!” ಎಂದನು. \p \v 2 ಯೇಸು ಅವನಿಗೆ ಉತ್ತರವಾಗಿ, “ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು,” ಎಂದರು. \p \v 3 ಯೇಸು ಓಲಿವ್ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ ಇವರು ಪ್ರತ್ಯೇಕವಾಗಿ ಯೇಸುವಿಗೆ, \v 4 “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವೂ ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು,” ಎಂದು ಕೇಳಿದರು. \p \v 5 ಯೇಸು ಅವರಿಗೆ ಹೀಗೆಂದನು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ. \v 6 ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. \v 7 ಇದಲ್ಲದೆ ಯುದ್ಧಗಳನ್ನೂ, ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ. \v 8 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ. \p \v 9 “ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು. \v 10 ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರುವುದು ಅಗತ್ಯವಾಗಿದೆ. \v 11 ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ. \p \v 12 “ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು. \v 13 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು. \p \v 14 “ಆದರೆ ‘ಅಸಹ್ಯ ವಸ್ತು’\f + \fr 13:14 \fr*\ft \+xt ದಾನಿ 9:27; 11:31; 12:11\+xt*\ft*\f* ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. \v 15 ಮಾಳಿಗೆಯ ಮೇಲಿದ್ದವರು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ತಮ್ಮ ಮನೆಯೊಳಗೆ ಪ್ರವೇಶಿಸಿ ಅದರೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ. \v 16 ಹೊಲದಲ್ಲಿರುವವರು ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ. \v 17 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! \v 18 ಈ ಸಂಕಟ ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ. \v 19 ಆ ದಿವಸಗಳಲ್ಲಿ ಮಹಾ ಸಂಕಟವಿರುವುದು, ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ಸಮಯದವರೆಗೂ ಅಂಥ ಸಂಕಟವು ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ. \p \v 20 “ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ. \v 21 ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತನು ಇಲ್ಲಿದ್ದಾನೆ, ಅಗೋ, ಆತನು ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿರಿ. \v 22 ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. \v 23 ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ. \p \v 24 “ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, \q1 “ ‘ಸೂರ್ಯನಿಗೆ ಕತ್ತಲು ಮುಸುಕುವುದು; \q2 ಚಂದ್ರನು ಕಾಂತಿಹೀನನಾಗುವನು. \q1 \v 25 ಆಕಾಶದಿಂದ ನಕ್ಷತ್ರಗಳು ಬೀಳುವವು \q2 ಮತ್ತು ಆಕಾಶದ ಶಕ್ತಿಗಳು ಕದಲುವವು.’\f + \fr 13:25 \fr*\ft \+xt ಯೆಶಾಯ 13:10; 34:4\+xt*\ft*\f* \p \v 26 “ಆಗ ಮನುಷ್ಯಪುತ್ರನಾದ ನಾನು ಬಹು ಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ಕಾಣುವರು. \v 27 ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು. \p \v 28 “ಅಂಜೂರದ ಮರದ ಸಾಮ್ಯದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ. \v 29 ಅದೇ ಪ್ರಕಾರ ಇವೆಲ್ಲವೂ ಸಂಭವಿಸುವುದನ್ನು ನೀವು ಕಾಣುವಾಗ, ಮನುಷ್ಯಪುತ್ರನಾದ ನಾನು ಬಾಗಿಲ ಹತ್ತಿರದಲ್ಲಿಯೇ ಇದ್ದೇನೆ ಎಂದು ತಿಳಿದುಕೊಳ್ಳಿರಿ. \v 30 ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. \v 31 ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ. \s1 ಆ ದಿನವು ಮತ್ತು ಆ ಗಳಿಗೆಯು ಯಾರಿಗೂ ತಿಳಿಯದು \p \v 32 “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು. \v 33 ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. ಏಕೆಂದರೆ ಆ ಕಾಲವು ಬರುವುದು ಯಾವಾಗ ಎಂದು ನಿಮಗೆ ತಿಳಿಯದು. \v 34 ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ. \p \v 35 “ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. \v 36 ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವುದನ್ನು ಕಂಡಾನು. \v 37 ನಿಮಗೆ ಹೇಳುವುದನ್ನು ನಾನು ಎಲ್ಲರಿಗೂ ಹೇಳುತ್ತೇನೆ: ‘ಎಚ್ಚರವಾಗಿರಿ,’ ” ಎಂದರು. \c 14 \s1 ಬೇಥಾನ್ಯದಲ್ಲಿ ಯೇಸುವಿನ ಅಭಿಷೇಕ \p \v 1 ಪಸ್ಕದ\f + \fr 14:1 \fr*\ft ಅಥವಾ \ft*\fqa ವಿಮೋಚನೆಯ ಹಬ್ಬ. \fqa*\ft ದೇವರು ಇಸ್ರಾಯೇಲರನ್ನು ಈಜಿಪ್ಟಿನಿಂದ ಹೇಗೆ ವಿಮೋಚಿಸಿದರು ಎನ್ನುವುದರ ನೆನಪಿಗಾಗಿ ಆಚರಿಸುವ ಹಬ್ಬ\ft*\f* ಮತ್ತು ಹುಳಿಯಿಲ್ಲದ ರೊಟ್ಟಿಯ\f + \fr 14:1 \fr*\ft ಏಳು ದಿನವು ಅವರು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಆಜ್ಞೆ ಇದೆ. \+xt ವಿಮೋ 12:17-18\+xt*\ft*\f* ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು. \v 2 ಆದರೆ ಅವರು, “ಜನರು ದಂಗೆ ಎದ್ದಾರು, ಹಬ್ಬದಲ್ಲಿ ಬೇಡ,” ಎಂದು ಮಾತನಾಡಿಕೊಂಡರು. \p \v 3 ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅದನ್ನು ಒಡೆದು, ಯೇಸುವಿನ ತಲೆಯ ಮೇಲೆ ಸುರಿಸಿದಳು. \p \v 4 ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥ ಮಾಡಿದ್ದೇಕೆ? \v 5 ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಿಂತ\f + \fr 14:5 \fr*\ft ಗ್ರೀಕ್ ಭಾಷೆಯಲ್ಲಿ \ft*\fqa ಮುನ್ನೂರು ದಿನಾರಿ. \fqa*\ft ಇದು ಒಂದು ವರ್ಷದ ವೇತನಗಿಂತ ಹೆಚ್ಚು\ft*\f* ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಆಕೆಯನ್ನು ನಿಂದಿಸಿದರು. \p \v 6 ಆದರೆ ಯೇಸು, “ಈಕೆಯನ್ನು ಬಿಟ್ಟುಬಿಡಿರಿ, ಈಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ. \v 7 ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ.\f + \fr 14:7 \fr*\ft \+xt ಧರ್ಮೋ 15:11\+xt*\ft*\f* ನಿಮಗೆ ಮನಸ್ಸಿದ್ದರೆ, ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ. \v 8 ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ. \v 9 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು. \p \v 10 ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು. \v 11 ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು. \s1 ಕರ್ತನ ಭೋಜನ \p \v 12 ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು. \p \v 13 ಆಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, “ನೀವು ಪಟ್ಟಣದೊಳಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ. \v 14 ಅವನು ಯಾವ ಮನೆಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, ‘ನಾನು ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ,’ ಎಂದು ಹೇಳಿರಿ. \v 15 ಅವನು ಸಜ್ಜುಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಸಿದ್ಧಮಾಡಿರಿ,” ಎಂದರು. \p \v 16 ಅವರ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಯೇಸು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ಧಮಾಡಿದರು. \p \v 17 ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದರು. \v 18 ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು. \p \v 19 ಆಗ ಅವರು ದುಃಖಿಸಲಾರಂಭಿಸಿ ಒಬ್ಬೊಬ್ಬರಾಗಿ ಯೇಸುವಿಗೆ, “ಅವನು ನಾನಲ್ಲವಲ್ಲಾ?” ಎಂದು ಕೇಳಿದರು. \p \v 20 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ಎಂದರೆ, ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದುವವನೇ. \v 21 ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು. \p \v 22 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ಇದು ನನ್ನ ದೇಹ,” ಎಂದರು. \p \v 23 ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು. \p \v 24 ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ. \v 25 ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು. \p \v 26 ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು. \s1 ಯೇಸು ಪೇತ್ರನ ನಿರಾಕರಿಸುವಿಕೆಯನ್ನು ಮುಂತಿಳಿಸಿದ್ದು \p \v 27 ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: \q1 “ ‘ನಾನು ಕುರುಬನನ್ನು ಹೊಡೆಯುವೆನು, \q2 ಕುರಿಗಳು ಚದರಿಹೋಗುವುವು.’\f + \fr 14:27 \fr*\ft \+xt ಜೆಕರ್ಯ 13:7\+xt*\ft*\f* \m \v 28 ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು. \p \v 29 ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದು ಹೇಳಿದನು. \p \v 30 ಆದರೆ ಯೇಸು ಅವನಿಗೆ, “ಈ ದಿವಸ, ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ,” ಎಂದರು. \p \v 31 ಅದಕ್ಕೆ ಪೇತ್ರನು, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು. \s1 ಗೆತ್ಸೇಮನೆ \p \v 32 ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಅಲ್ಲಿ ಯೇಸು ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೆ ನೀವು ಇಲ್ಲಿ ಕುಳಿತುಕೊಂಡಿರಿ,” ಎಂದರು. \v 33 ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ, \v 34 “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರಿ,” ಎಂದರು. \p \v 35 ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ, \v 36 “ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು. \p \v 37 ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ? \v 38 ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು. \p \v 39 ಯೇಸು ತಿರುಗಿ ಹೊರಟುಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು. \v 40 ಯೇಸು ಹಿಂತಿರುಗಿದಾಗ, ಅವರು ತಿರುಗಿ ನಿದ್ರೆ ಮಾಡುವುದನ್ನು ಕಂಡರು. ಅವರ ಕಣ್ಣುಗಳು ಭಾರವಾಗಿದ್ದವು. ಯೇಸುವಿಗೆ ಏನು ಉತ್ತರಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ. \p \v 41 ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ. \v 42 ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು. \s1 ಯೇಸುವನ್ನು ಬಂಧಿಸಿದ್ದು \p \v 43 ಯೇಸು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ, ನಿಯಮ ಬೋಧಕರ ಮತ್ತು ಹಿರಿಯರ ಕಡೆಯಿಂದ ಬಂದಿದ್ದ ಜನರ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು. \p \v 44 ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು, ಆತನನ್ನು ಹಿಡಿದು, ಭದ್ರವಾಗಿ ತೆಗೆದುಕೊಂಡು ಹೋಗಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು. \v 45 ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ,”\f + \fr 14:45 \fr*\ft ಗ್ರೀಕ್ ಭಾಷೆಯಲ್ಲಿ \ft*\fqa ರಬ್ಬೀ\fqa*\f* ಎಂದು ಹೇಳಿ ಅವರಿಗೆ ಮುದ್ದಿಟ್ಟನು. \v 46 ಅವರು ಯೇಸುವಿನ ಮೇಲೆ ಕೈಹಾಕಿ ಅವರನ್ನು ಬಂಧಿಸಿದರು. \v 47 ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. \p \v 48 ಯೇಸು ಅವರಿಗೆ, “ಖಡ್ಗಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬರುವಂತೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? \v 49 ನಾನು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಾ ನಿಮ್ಮ ಸಂಗಡ ಇದ್ದೆನು. ಆಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಪವಿತ್ರ ವೇದಗಳಲ್ಲಿ ಬರೆದಿದ್ದು ನೆರವೇರಲೇಬೇಕು,” ಎಂದರು. \v 50 ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು. \p \v 51 ಅಲ್ಲಿ ಮೈಮೇಲೆ ದುಪ್ಪಟಿಯನ್ನು ಸುತ್ತಿಕೊಂಡ ಯುವಕನೊಬ್ಬನು ಯೇಸುವನ್ನು ಹಿಂಬಾಲಿಸುತ್ತಿದ್ದನು. ಜನರ ಗುಂಪು ಅವನನ್ನು ಹಿಡಿಯಲು, \v 52 ಅವನು ಆ ದುಪ್ಪಟಿಯನ್ನು ಬಿಟ್ಟು, ಬರೀ ಮೈಯಲ್ಲಿ ಓಡಿಹೋದನು. \s1 ಆಲೋಚನಾ ಸಭೆಯವರು \p \v 53 ಅವರು ಯೇಸುವನ್ನು ಮಹಾಯಾಜಕನ ಬಳಿಗೆ ತೆಗೆದುಕೊಂಡು ಹೋದರು. ಯೇಸುವಿನ ಸಂಗಡ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರೂ ಅವನ ಬಳಿಗೆ ಸಭೆ ಕೂಡಿಬಂದರು. \v 54 ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು. \p \v 55 ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಅವರ ವಿರೋಧವಾಗಿ ಸಾಕ್ಷಿಯನ್ನು ಹುಡುಕಿದರು. ಆದರೆ ಒಂದು ಸಾಕ್ಷಿಯೂ ಸಿಗಲಿಲ್ಲ. \v 56 ಅನೇಕರು ಯೇಸುವಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದಕ್ಕೊಂದು ಒಪ್ಪಲಿಲ್ಲ. \p \v 57 ತರುವಾಯ ಕೆಲವರು ಎದ್ದು ಯೇಸುವಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ, \v 58 “ ‘ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು,’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ,” ಎಂದರು. \v 59 ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ. \p \v 60 ಆಗ ಮಹಾಯಾಜಕನು ಎದ್ದು ಮುಂದೆ ನಿಂತು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು?” ಎಂದು ಕೇಳಿದನು. \v 61 ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದರು. \p ತಿರುಗಿ ಮಹಾಯಾಜಕನು, “ನೀನು ಭಾಗ್ಯವಂತನ ದೇವರ ಪುತ್ರನಾಗಿರುವ ಕ್ರಿಸ್ತನೋ?” ಎಂದು ಯೇಸುವನ್ನು ಕೇಳಿದನು. \p \v 62 ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು. \p \v 63 ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನು ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ? \v 64 ನೀವು ದೇವದೂಷಣೆಯನ್ನು ಕೇಳಿದ್ದೀರಲ್ಲಾ ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, \p “ಈತನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಪುಕೊಟ್ಟರು. \v 65 ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು. \s1 ಪೇತ್ರನು ಯೇಸುವನ್ನು ಅಲ್ಲಗಳೆದದ್ದು \p \v 66 ಪೇತ್ರನು ಅಂಗಳದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು. \v 67 ಪೇತ್ರನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ, \p “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು. \p \v 68 ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ ಅರ್ಥವಾಗುತ್ತಲೂ ಇಲ್ಲ,” ಎಂದು ಹೇಳಿ ಹೊರಗೆ ಮುಖ್ಯ ದ್ವಾರದೊಳಗೆ ಹೋದನು. ಆಗ ಹುಂಜವು ಕೂಗಿತು. \p \v 69 ಆ ದಾಸಿಯು ಅವನನ್ನು ತಿರುಗಿ ಕಂಡು ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು,” ಎಂದು ಹೇಳಲಾರಂಭಿಸಿದಳು. \v 70 ಆಗ ಪೇತ್ರನು ಅದನ್ನು ಮತ್ತೆ ನಿರಾಕರಿಸಿದನು. \p ಸ್ವಲ್ಪ ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರುಗಿ ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು, ನೀನು ಗಲಿಲಾಯದವನೇ,” ಎಂದರು. \p \v 71 ಅವನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿ, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ,” ಎಂದನು. \p \v 72 ಕೂಡಲೇ ಎರಡನೆಯ ಸಾರಿ ಹುಂಜ ಕೂಗಿತು. ಹೀಗೆ, “ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ವ್ಯಥೆಪಟ್ಟು ಅತ್ತನು. \c 15 \s1 ಪಿಲಾತನ ಮುಂದೆ ಯೇಸು \p \v 1 ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು. \p \v 2 ಆಗ ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಲು, \p “ನೀನೇ ಅದನ್ನು ಹೇಳಿದ್ದೀ” ಎಂದು ಯೇಸು ಉತ್ತರಿಸಿದರು. \p \v 3 ಇದಲ್ಲದೆ ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ದೂರುಗಳನ್ನು ಹೇಳಿದರು. \v 4 ಆದರೆ ಪಿಲಾತನು ತಿರುಗಿ ಯೇಸುವಿಗೆ, “ನೀನು ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು,” ಎಂದು ಕೇಳಿದನು. \p \v 5 ಆದರೂ ಯೇಸು ಉತ್ತರ ಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು. \p \v 6 ಹಬ್ಬದಲ್ಲಿ ಜನರು ಕೋರಿದ ಒಬ್ಬ ಸೆರೆಯಾಳನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು. \v 7 ದಂಗೆ ಮಾಡಿದವರೊಂದಿಗೆ ಬಂಧಿಸಲಾದ ಆ ದಂಗೆಯಲ್ಲಿ ಕೊಲೆಮಾಡಿದ ಬರಬ್ಬನೆಂಬ ಹೆಸರುಳ್ಳವನೊಬ್ಬನು ಸೆರೆಯಲ್ಲಿ ಇದ್ದನು. \v 8 ಜನಸಮೂಹವು ಪಿಲಾತನು ತಮಗೆ ಯಾವಾಗಲೂ ಮಾಡುತ್ತಿದ್ದ ಪ್ರಕಾರ ಮಾಡಬೇಕೆಂದು ಅವನನ್ನು ಬೇಡಿಕೊಳ್ಳಲಾರಂಭಿಸಿದರು. \p \v 9 ಪಿಲಾತನು ಅವರಿಗೆ, “ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ?” ಎಂದು ಕೇಳಿದನು. \v 10 ಮುಖ್ಯಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು. \v 11 ಆದರೆ ಮುಖ್ಯಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಜನರನ್ನು ಪ್ರೇರೇಪಿಸಿದರು. \p \v 12 ಪಿಲಾತನು ಅವರಿಗೆ, “ಹಾಗಾದರೆ ನೀವು ಯೆಹೂದ್ಯರ ಅರಸನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕೆನ್ನುತ್ತೀರಿ?” ಎಂದು ಕೇಳಿದನು. \p \v 13 ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತೆ ಕೂಗಿಕೊಂಡರು. \p \v 14 ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, \p “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. \p \v 15 ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. \s1 ಸೈನಿಕರು ಯೇಸುವನ್ನು ಪರಿಹಾಸ್ಯ ಮಾಡಿದ್ದು \p \v 16 ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ತೆಗೆದುಕೊಂಡು ಬಂದು ತಮ್ಮ ದಳದವರನ್ನೆಲ್ಲಾ ಒಟ್ಟಾಗಿ ಕರೆದರು. \v 17 ಅವರು ಯೇಸುವಿಗೆ ಕಡುಗೆಂಪು ಬಣ್ಣದ ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲೆ ಇಟ್ಟರು. \v 18 ತರುವಾಯ ಅವರು, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ,” ಎಂದರು. \v 19 ಅವರು ಬೆತ್ತದಿಂದ ಯೇಸುವಿನ ತಲೆಯ ಮೇಲೆ ಹೊಡೆದು, ಅವರ ಮೇಲೆ ಉಗುಳಿ ಮೊಣಕಾಲೂರಿ ಅವರಿಗೆ ನಮಸ್ಕರಿಸಿದರು. \v 20 ಹೀಗೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದ ಮೇಲೆ ಕಡುಗೆಂಪು ಬಣ್ಣದ ಬಟ್ಟೆಯನ್ನು ಅವರಿಂದ ತೆಗೆದುಹಾಕಿ ಅವರ ಸ್ವಂತ ಬಟ್ಟೆಗಳನ್ನು ಅವರಿಗೆ ಉಡಿಸಿ ಶಿಲುಬೆಗೆ ಹಾಕುವುದಕ್ಕಾಗಿ ತೆಗೆದುಕೊಂಡು ಹೋದರು. \s1 ಶಿಲುಬೆಗೇರಿಸಿದ್ದು \p \v 21 ಅಲೆಕ್ಸಾಂದ್ರ ಮತ್ತು ರೂಫ ಎಂಬುವರ ತಂದೆಯಾದ ಕುರೇನೆದ ಸೀಮೋನನು ಗ್ರಾಮದಿಂದ ಹಾದು ಹೋಗುತ್ತಿರುವಾಗ, ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು. \v 22 ತರುವಾಯ “ತಲೆಬುರುಡೆಯ ಸ್ಥಳ” ಎಂದು ಅರ್ಥವಿದ್ದ “ಗೊಲ್ಗೊಥಾ” ಎಂಬ ಸ್ಥಳಕ್ಕೆ ಅವರು ಯೇಸುವನ್ನು ತೆಗೆದುಕೊಂಡು ಬಂದರು. \v 23 ಆಗ ಅವರು ಯೇಸುವಿಗೆ ರಕ್ತಬೋಳ\f + \fr 15:23 \fr*\fq ರಕ್ತಬೋಳ \fq*\ft ಒಂದು ವಿಧವಾದ ಅರಬ್ ದೇಶದ \ft*\fqa ಮರದ ರಸಗಂಧ\fqa*\f* ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ತೆಗೆದುಕೊಳ್ಳಲಿಲ್ಲ. \v 24 ಅವರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ಬಟ್ಟೆಗಳನ್ನು ಪಾಲುಮಾಡಿಕೊಂಡರು. ಯಾರಿಗೆ ಯಾವುದು ಬರುವುದೋ ಎಂದು ಚೀಟುಹಾಕಿದರು. \p \v 25 ಯೇಸುವನ್ನು ಶಿಲುಬೆಗೆ ಹಾಕಿದಾಗ ಮುಂಜಾನೆ ಒಂಬತ್ತು ಗಂಟೆಯಾಗಿತ್ತು. \v 26 ಯೇಸುವಿನ ಮೇಲೆ ಹೊರಿಸಿದ ದೋಷಾರೋಪಣೆ ಹೀಗೆ ಬರೆದಿತ್ತು: \pc \sc ಈತನು ಯೆಹೂದ್ಯರ ಅರಸನು.\sc* \p \v 27 ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು. \v 28 \it ಹೀಗೆ, “ಆತನನ್ನು ಅಪರಾಧಿಗಳೊಂದಿಗೆ ಸೇರಿಸಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು.\it*\f + \fr 15:28 \fr*\ft ಕೆಲವು ಮೂಲ ಹಸ್ತಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f* \v 29 ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ, “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, \v 30 ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದು ಬಾ,” ಎಂದು ಯೇಸುವನ್ನು ಅಪಹಾಸ್ಯ ಮಾಡಿದರು. \v 31 ಅದೇ ಪ್ರಕಾರ ಮುಖ್ಯಯಾಜಕರು ನಿಯಮ ಬೋಧಕರೂ ಯೇಸುವನ್ನು ಅಪಹಾಸ್ಯಮಾಡಿ, “ಈತನು ಇತರರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! \v 32 ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು. \s1 ಯೇಸುವಿನ ಮರಣ \p \v 33 ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. \v 34 ಮೂರು ಗಂಟೆಯ ಸಮಯದಲ್ಲಿ ಯೇಸು, \tl “ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?”\tl* ಎಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?”\f + \fr 15:34 \fr*\ft \+xt ಕೀರ್ತನೆ 22:1\+xt*\ft*\f* ಎಂದು ಮಹಾಧ್ವನಿಯಿಂದ ಕೂಗಿದರು. \p \v 35 ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇಗೋ, ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು. \p \v 36 ಆಗ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯಲು ಕೊಟ್ಟು, “ಬಿಡಿರಿ, ಈತನನ್ನು ಕೆಳಗೆ ಇಳಿಸುವುದಕ್ಕೆ ಎಲೀಯನು ಬರುವನೋ ನೋಡೋಣ,” ಎಂದನು. \p \v 37 ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟರು. \p \v 38 ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. \v 39 ಯೇಸು ಹೀಗೆ ಕೂಗಿ ಪ್ರಾಣಬಿಟ್ಟಿದ್ದನ್ನು ಅವರ ಎದುರಿಗೆ ನಿಂತಿದ್ದ ಶತಾಧಿಪತಿಯು ಕಂಡು, “ನಿಜವಾಗಿಯೂ ಈ ಮನುಷ್ಯನು ದೇವಪುತ್ರ,” ಎಂದನು. \p \v 40 ಅಲ್ಲಿ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿ ಮರಿಯಳು, ಸಲೋಮೆಯು ಇದ್ದರು. \v 41 ಯೇಸು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಅವರನ್ನು ಹಿಂಬಾಲಿಸಿ, ಉಪಚರಿಸಿದರು. ಯೇಸುವಿನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರೂ ಅಲ್ಲಿದ್ದರು. \s1 ಯೇಸುವಿನ ದೇಹವನ್ನು ಸಮಾಧಿಯಲ್ಲಿಟ್ಟದ್ದು \p \v 42 ಸಂಜೆ ಸಮೀಪಿಸುತ್ತಿದ್ದಾಗ, ಅದು ಸಬ್ಬತ್ ದಿನದ ಸಿದ್ಧತೆಯ ಹಿಂದಿನ ದಿವಸವಾಗಿತ್ತು. \v 43 ಗೌರವವುಳ್ಳವನೂ ಆಲೋಚನಾಸಭೆಯ ಸದಸ್ಯನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. \v 44 ಯೇಸು ಅಷ್ಟು ಬೇಗ ಮರಣಹೊಂದಿದ್ದಾರೆಂದು ತಿಳಿದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು, “ಯೇಸು ಆಗಲೇ ಮೃತನಾದನೋ?” ಎಂದು ವಿಚಾರಿಸಿ \v 45 ತಿಳಿದುಕೊಂಡ ಮೇಲೆ ಪಾರ್ಥಿವ ಶರೀರವನ್ನು ಯೋಸೇಫನಿಗೆ ಒಪ್ಪಿಸಿದನು. \v 46 ಅವನು ಶುಭ್ರವಾದ ನಾರುಬಟ್ಟೆಯನ್ನು ಕೊಂಡುಕೊಂಡು ಬಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ಆ ನಾರುಬಟ್ಟೆಯಲ್ಲಿ ಅದನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಯೇಸುವಿನ ಸಮಾಧಿಯ ದ್ವಾರಕ್ಕೆ ಒಂದು ಬಂಡೆಯನ್ನು ಉರುಳಿಸಿದನು. \v 47 ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿಯಾದ ಮರಿಯಳು ಯೇಸುವನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು. \c 16 \s1 ಪುನರುತ್ಥಾನ \p \v 1 ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು. \v 2 ವಾರದ ಮೊದಲನೆಯ ದಿನ ಮುಂಜಾನೆ ಸೂರ್ಯೋದಯವಾಗಲು ಅವರು ಸಮಾಧಿಯ ಬಳಿಗೆ ಬರುವಾಗ, \v 3 “ಸಮಾಧಿಯ ದ್ವಾರದಿಂದ ಆ ಬಂಡೆಯನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. \p \v 4 ಏಕೆಂದರೆ ಆ ಬಂಡೆ ಬಹಳ ದೊಡ್ಡದಾಗಿತ್ತು. ಆದರೆ ಅವರು ಮತ್ತೆ ಕಂಡಾಗ ಆ ಬಂಡೆ ಉರುಳಿಸಲಾಗಿತ್ತು. \v 5 ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು. \p \v 6 ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ. \v 7 ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು. \p \v 8 ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ ಸಮಾಧಿಯ ಬಳಿಯಿಂದ ಓಡಿಹೋದರು. ಅವರು ಹೆದರಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ. \p \v 9 \it ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.\it* \v 10 \it ಯೇಸುವಿನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಯೇಸುವಿನ ಬಗ್ಗೆ ಹೇಳಿದಳು.\it* \v 11 \it ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ, ಶಿಷ್ಯರು ನಂಬಲಿಲ್ಲ.\it* \p \v 12 \it ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಯೇಸು ಅವರಿಗೆ ಬೇರೊಂದು ರೀತಿಯಲ್ಲಿ ಕಾಣಿಸಿಕೊಂಡರು.\it* \v 13 \it ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಇವರನ್ನೂ ಅವರು ನಂಬಲಿಲ್ಲ.\it* \p \v 14 \it ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.\it* \p \v 15 \it ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.\it* \v 16 \it ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.\it* \v 17 \it ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.\it* \v 18 \it ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.\it* \p \v 19 \it ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.\it* \v 20 \it ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.\it*\f + \fr 16:20 \fr*\ft ಕೆಲವು ಮೂಲ ಪ್ರತಿಗಳಲ್ಲಿ \+xt ಮಾರ್ಕ 16:9-20\+xt* ವಾಕ್ಯ ಸೇರ್ಪಡೆಯಾಗಿರುವುದಿಲ್ಲ.\ft*\f*