\id NUM - Biblica® Open Kannada Contemporary Version \ide UTF-8 \h ಅರಣ್ಯಕಾಂಡ \toc1 ಅರಣ್ಯಕಾಂಡ \toc2 ಅರಣ್ಯಕಾಂಡ \toc3 ಅರಣ್ಯ \mt1 ಅರಣ್ಯಕಾಂಡ \c 1 \s1 ಮೊದಲನೆ ಜನಗಣತಿ \p \v 1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು: \v 2 “ಇಸ್ರಾಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು. \v 3 ಇಸ್ರಾಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು ಅಂದರೆ, ಇಪ್ಪತ್ತು ವರ್ಷಕ್ಕಿಂತಲೂ ಹೆಚ್ಚಾದ ವಯಸ್ಸುಳ್ಳ ಎಲ್ಲರನ್ನು ಸೈನ್ಯಸೈನ್ಯವಾಗಿ ನೀನು ಮತ್ತು ಆರೋನನು ಪಟ್ಟಿಮಾಡಬೇಕು. \v 4 ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ. \b \li4 \v 5 “ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು: \b \li1 “ರೂಬೇನ್ ಗೋತ್ರದಿಂದ ಶೆದೇಯೂರನ ಮಗ ಎಲೀಚೂರ್, \li1 \v 6 ಸಿಮೆಯೋನ್ ಗೋತ್ರದಿಂದ ಚುರೀಷದ್ದೈಯನ ಮಗ ಶೆಲುಮೀಯೇಲ್, \li1 \v 7 ಯೆಹೂದ ಗೋತ್ರದಿಂದ ಅಮ್ಮೀನಾದಾಬನ ಮಗ ನಹಶೋನ್, \li1 \v 8 ಇಸ್ಸಾಕರ್ ಗೋತ್ರದಿಂದ ಚೂವಾರನ ಮಗ ನೆತನೆಯೇಲ್, \li1 \v 9 ಜೆಬುಲೂನ್ ಗೋತ್ರದಿಂದ ಹೇಲೋನನ ಮಗ ಎಲೀಯಾಬ್, \li1 \v 10 ಯೋಸೇಫನ ಗೋತ್ರದಲ್ಲಿ, \li2 ಎಫ್ರಾಯೀಮ್‌ನಿಂದ ಅಮ್ಮೀಹೂದನ ಮಗ ಎಲೀಷಾಮಾ, \li2 ಮನಸ್ಸೆ ಗೋತ್ರದಿಂದ ಪೆದಾಚೂರನ ಮಗನಾದ ಗಮಲಿಯೇಲ್, \li1 \v 11 ಬೆನ್ಯಾಮೀನ್ ಗೋತ್ರದಿಂದ ಗಿದ್ಯೋನಿನ ಮಗನಾದ ಅಬೀದಾನ, \li1 \v 12 ದಾನ್ ಗೋತ್ರದಿಂದ ಅಮ್ಮೀಷದ್ದೈಯನ ಮಗ ಅಹೀಗೆಜೆರ್, \li1 \v 13 ಆಶೇರ್ ಗೋತ್ರದಿಂದ ಒಕ್ರಾನನ ಮಗ ಪಗೀಯೇಲ್, \li1 \v 14 ಗಾದ್ ಗೋತ್ರದಿಂದ ದೆವುಯೇಲನ ಮಗ ಎಲ್ಯಾಸಾಫ್, \li1 \v 15 ನಫ್ತಾಲಿ ಗೋತ್ರದಿಂದ ಏನಾನನ ಮಗ ಅಹೀರನು.” \b \li4 \v 16 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು. \b \p \v 17 ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆ ಮತ್ತು ಆರೋನನು ತಮ್ಮ ಜೊತೆ ತೆಗೆದುಕೊಂಡರು. \v 18 ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು. \v 19 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು. \b \li1 \v 20 ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 21 ರೂಬೇನನ ಗೋತ್ರದಲ್ಲಿ ಎಣಿಕೆಯಾದವರು 46,500 ಜನರು. \b \li1 \v 22 ಸಿಮೆಯೋನನ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 23 ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದವರು 59,300 ಜನರು. \b \li1 \v 24 ಗಾದನ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 25 ಗಾದನ ಗೋತ್ರದಲ್ಲಿ ಎಣಿಕೆಯಾದವರು 45,650 ಜನರು. \b \li1 \v 26 ಯೆಹೂದ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 27 ಯೆಹೂದ ಗೋತ್ರದಲ್ಲಿ ಎಣಿಕೆಯಾದವರು 74,600 ಜನರು. \b \li1 \v 28 ಇಸ್ಸಾಕಾರನ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 29 ಇಸ್ಸಾಕಾರನ ಗೋತ್ರದಲ್ಲಿ ಎಣಿಕೆಯಾದವರು 54,400 ಜನರು. \b \li1 \v 30 ಜೆಬುಲೂನನ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 31 ಜೆಬುಲೂನ್ ಗೋತ್ರದಲ್ಲಿ ಎಣಿಕೆಯಾದವರು 57,400 ಜನರು. \b \li4 \v 32 ಯೋಸೇಫನ ಮಕ್ಕಳಾದ \li1 ಎಫ್ರಾಯೀಮನ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 33 ಎಫ್ರಾಯೀಮನ ಗೋತ್ರದಲ್ಲಿ ಎಣಿಕೆಯಾದವರು 40,500 ಜನರು. \li1 \v 34 ಮನಸ್ಸೆಯ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 35 ಮನಸ್ಸೆಯ ಗೋತ್ರದಲ್ಲಿ ಎಣಿಕೆಯಾದವರು 32,200 ಜನರು. \b \li1 \v 36 ಬೆನ್ಯಾಮೀನ್ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 37 ಬೆನ್ಯಾಮೀನನ ಗೋತ್ರದಲ್ಲಿ ಎಣಿಕೆಯಾದವರು 35,400 ಜನರು. \b \li1 \v 38 ದಾನನ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 39 ದಾನನ ಗೋತ್ರದಲ್ಲಿ ಎಣಿಕೆಯಾದವರು 62,700 ಜನರು. \b \li1 \v 40 ಆಶೇರನ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 41 ಆಶೇರನ ಗೋತ್ರದಲ್ಲಿ ಎಣಿಕೆಯಾದವರು 41,500 ಜನರು. \b \li1 \v 42 ನಫ್ತಾಲಿಯ ಸಂತತಿಯವರಲ್ಲಿ: \li2 ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು. \v 43 ನಫ್ತಾಲಿಯ ಗೋತ್ರದಲ್ಲಿ ಎಣಿಕೆಯಾದವರು 53,400 ಜನರು. \b \li4 \v 44 ಮೋಶೆ, ಆರೋನ್ ಮತ್ತು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. ಪ್ರತಿಯೊಬ್ಬರೂ ತಮ್ಮ ತಮ್ಮ ಕುಟುಂಬವನ್ನು ಪ್ರತಿನಿಧಿಸುತ್ತಿದ್ದರು. \v 45 ಹೀಗೆ ಇಸ್ರಾಯೇಲರಲ್ಲಿ ಎಣಿಕೆಯಾದವರೆಲ್ಲರೂ ಅವರ ಕುಟುಂಬಗಳ ಪ್ರಕಾರ ಇಪ್ಪತ್ತು ವರ್ಷದವರೂ, ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳವರೂ, ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಶಕ್ತರಾದವರೂ ಆಗಿದ್ದರು. \v 46 ಎಣಿಕೆಯಾದವರು ಒಟ್ಟು 6,03,550 ಮಂದಿಯಾಗಿದ್ದರು. \b \p \v 47 ಲೇವಿಯರ ತಂದೆಗಳ ಗೋತ್ರವನ್ನು ಇತರರೊಂದಿಗೆ ಎಣಿಸಲಿಲ್ಲ. \v 48 ಇದಲ್ಲದೆ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ: \v 49 “ನೀವು ಲೇವಿಯ ಕುಲವನ್ನು ಎಣಿಸಬಾರದು ಅಥವಾ ಇತರ ಇಸ್ರಾಯೇಲರ ಜನಗಣತಿಯಲ್ಲಿ ಅವರನ್ನು ಸೇರಿಸಬಾರದು. \v 50 ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು. \v 51 ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು. \v 52 ಇಸ್ರಾಯೇಲರು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಧ್ವಜದ ಬಳಿ ಇಳಿದುಕೊಳ್ಳಬೇಕು. \v 53 ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.” \p \v 54 ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು. \c 2 \s1 ಇಸ್ರಾಯೇಲರ ಗೋತ್ರಗಳು ಪಾಳೆಯದಲ್ಲಿ ಗುಡಾರಗಳನ್ನು ಹಾಕಿಕೊಳ್ಳುವ ಕ್ರಮ \p \v 1 ಯೆಹೋವ ದೇವರು ಮಾತನಾಡಿ ಮೋಶೆ ಮತ್ತು ಆರೋನನಿಗೆ ಹೇಳಿದ್ದೇನೆಂದರೆ: \v 2 “ಇಸ್ರಾಯೇಲರು ಒಬ್ಬೊಬ್ಬರಾಗಿ ಕುಟುಂಬಗಳ ಗುರುತುಗಳ ಪ್ರಕಾರ ತಮ್ಮ ತಮ್ಮ ದಂಡಿನ ಧ್ವಜಗಳ ಬಳಿಯಲ್ಲಿ ಇಳಿದುಕೊಳ್ಳಬೇಕು. ಅವರು ದೇವದರ್ಶನ ಗುಡಾರದ ಎದುರಿನಲ್ಲಿ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.” \b \li4 \v 3 ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, \li1 ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ. \v 4 ಅವನ ಸೈನಿಕರ ಸಂಖ್ಯೆ 74,600 ಮಂದಿ. \li1 \v 5 ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಗೋತ್ರದವರು. ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗ ನೆತನೆಯೇಲ್ ಎಂಬ ಸೈನ್ಯಾಧಿಪತಿ. \v 6 ಅವನ ಸೈನಿಕರ ಸಂಖ್ಯೆ 54,400 ಮಂದಿ. \li1 \v 7 ಅವನ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ಯನ ಗೋತ್ರದವರು. ಜೆಬುಲೂನ್ಯನ ಮಕ್ಕಳಿಗೆ ಹೇಲೋನನ ಮಗ ಎಲೀಯಾಬನು ಸೈನ್ಯಾಧಿಪತಿ. \v 8 ಅವನ ಸೈನಿಕರ ಸಂಖ್ಯೆ 57,400 ಮಂದಿ. \li4 \v 9 ಯೆಹೂದನ ಪಾಳೆಯದಲ್ಲಿ ಎಣಿಸಲಾದ ಅವರ ಸೈನಿಕರ ಸಂಖ್ಯೆ 1,86,400 ಮಂದಿ. ಅವರು ಮೊದಲು ಹೊರಡತಕ್ಕವರು. \b \li4 \v 10 ದಕ್ಷಿಣ ದಿಕ್ಕಿನಲ್ಲಿ: \li1 ರೂಬೇನ್ ಕುಲದ ದಂಡಿಗೆ ಸೇರಿದವರು ಅವರವರ ಸೈನ್ಯಗಳ ಪ್ರಕಾರ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ರೂಬೇನನ ಮಕ್ಕಳಿಗೆ ಶೆದೇಯೂರನ ಮಗ ಎಲೀಚೂರನು ಸೈನ್ಯಾಧಿಪತಿ. \v 11 ಅವನ ಸೈನಿಕರ ಸಂಖ್ಯೆ 46,500 ಮಂದಿ. \li1 \v 12 ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನನ ಗೋತ್ರದವರು. ಸಿಮೆಯೋನನ ಮಕ್ಕಳಿಗೆ ಚುರೀಷದ್ದೈಯನ ಮಗನಾದ ಶೆಲುಮೀಯೇಲನು ಸೈನ್ಯಾಧಿಪತಿ. \v 13 ಅವನ ಸೈನಿಕರ ಸಂಖ್ಯೆ 59,300 ಮಂದಿ. \li1 \v 14 ತರುವಾಯ ಗಾದ್ ಗೋತ್ರದವರು. ಗಾದನ ಮಕ್ಕಳಿಗೆ ದೆವುಯೇಲನ ಮಗ ಎಲ್ಯಾಸಾಫನು ಸೈನ್ಯಾಧಿಪತಿ. \v 15 ಅವನ ಸೈನಿಕರ ಸಂಖ್ಯೆ 45,650 ಮಂದಿ. \li4 \v 16 ರೂಬೇನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು. \b \li1 \v 17 ತರುವಾಯ ದೇವದರ್ಶನ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ, ತಮ್ಮ ತಮ್ಮ ಕಡೆಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು. \b \li4 \v 18 ಎಫ್ರಾಯೀಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವುದು: \li1 ಎಫ್ರಾಯೀಮನ ಮಕ್ಕಳಿಗೆ ಅಮ್ಮೀಹೂದನ ಮಗ ಎಲೀಷಾಮಾನು ಸೈನ್ಯಾಧಿಪತಿ. \v 19 ಅವನ ಸೈನಿಕರ ಸಂಖ್ಯೆ 40,500 ಮಂದಿ. \li1 \v 20 ಅವರ ಬಳಿಯಲ್ಲಿ ಮನಸ್ಸೆ ಗೋತ್ರದವರು. ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗ ಗಮಲಿಯೇಲನು ಸೈನ್ಯಾಧಿಪತಿ. \v 21 ಅವನ ಸೈನಿಕರ ಸಂಖ್ಯೆ 32,200 ಮಂದಿ. \li1 \v 22 ತರುವಾಯ ಬೆನ್ಯಾಮೀನ್ ಗೋತ್ರದವರು. ಬೆನ್ಯಾಮೀನನ ಮಕ್ಕಳಿಗೆ ಗಿದ್ಯೋನಿಯ ಮಗ ಅಬೀದಾನನು ಸೈನ್ಯಾಧಿಪತಿ. \v 23 ಅವನ ಸೈನಿಕರ ಸಂಖ್ಯೆ 35,400 ಮಂದಿ. \li4 \v 24 ಎಫ್ರಾಯೀಮನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,08,100 ಮಂದಿ. ಇವರು ಮೂರನೆಯವರಾಗಿ ಹೊರಡತಕ್ಕವರು. \b \li4 \v 25 ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವರು: \li1 ದಾನನ ಮಕ್ಕಳಿಗೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸೈನ್ಯಾಧಿಪತಿ. \v 26 ಅವನ ಸೈನಿಕರ ಸಂಖ್ಯೆ 62,700 ಮಂದಿ. \li1 \v 27 ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಆಶೇರ್ ಗೋತ್ರದವರು. ಆಶೇರನ ಮಕ್ಕಳಿಗೆ ಒಕ್ರಾನನ ಮಗ ಪಗೀಯೇಲನು ಸೈನ್ಯಾಧಿಪತಿ. \v 28 ಅವನ ಸೈನಿಕರ ಸಂಖ್ಯೆ 41,500 ಮಂದಿ. \li1 \v 29 ತರುವಾಯ ನಫ್ತಾಲಿ ಗೋತ್ರದವರು. ನಫ್ತಾಲಿ ಮಕ್ಕಳಿಗೆ ಏನಾನನ ಮಗ ಅಹೀರನು ಸೈನ್ಯಾಧಿಪತಿ. \v 30 ಅವನ ಸೈನಿಕರ ಸಂಖ್ಯೆ 53,400 ಮಂದಿ. \li4 \v 31 ದಾನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,57,600 ಮಂದಿ. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯ ದಂಡಾಗಿ ಹೊರಡತಕ್ಕದ್ದು. \b \li4 \v 32 ಇಸ್ರಾಯೇಲರಲ್ಲಿ ತಮ್ಮ ಕುಟುಂಬಗಳ ಪ್ರಕಾರವಾಗಿ ಎಣಿಕೆಯಾದವರು ಇವರೇ. ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ 6,03,550 ಮಂದಿ. \v 33 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲರೊಳಗೆ ಎಣಿಕೆಯಾಗಲಿಲ್ಲ. \b \p \v 34 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು. \c 3 \s1 ಲೇವಿಯರು \p \v 1 ಯೆಹೋವ ದೇವರು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿವಸದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ. \b \p \v 2 ಆರೋನನ ಮಕ್ಕಳುಗಳ ಹೆಸರುಗಳು: ಚೊಚ್ಚಲ ಮಗನು ನಾದಾಬ್, ತರುವಾಯ ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್. \v 3 ಯಾಜಕರಾಗಿ ಅಭಿಷೇಕ ಹೊಂದಿದ ಆರೋನನ ಮಕ್ಕಳುಗಳ ಹೆಸರುಗಳು ಇವೇ, ಇವರೇ ಯಾಜಕೋದ್ಯೋಗ ಮಾಡುವುದಕ್ಕೆ ಪ್ರತಿಷ್ಠಿತರಾದವರು. \v 4 ಆದರೆ ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಅರ್ಪಿಸಿದಾಗ, ಯೆಹೋವ ದೇವರ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ. ಹೀಗೆ ಎಲಿಯಾಜರನು, ಈತಾಮಾರನು ತಮ್ಮ ತಂದೆ ಆರೋನನ ಎದುರಿನಲ್ಲಿ ಯಾಜಕ ಉದ್ಯೋಗವನ್ನು ಮಾಡಿದರು. \p \v 5 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, \v 6 “ಲೇವಿಯ ಗೋತ್ರವನ್ನು ಹತ್ತಿರ ಕರೆದು, ಯಾಜಕನಾದ ಆರೋನನ ಮುಂದೆ ನಿಲ್ಲಿಸು. ಅವರು ಅವನಿಗೆ ಸಹಾಯ ಮಾಡಲಿ. \v 7 ಇದಲ್ಲದೆ ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ದೇವದರ್ಶನದ ಗುಡಾರದ ಸೇವೆಮಾಡುತ್ತಾ ಆರೋನನಿಗಾಗಿಯೂ ಸಮಸ್ತ ಸಮೂಹದವರಿಗಾಗಿಯೂ ಕರ್ತವ್ಯಗಳನ್ನು ನಿರ್ವಹಿಸಬೇಕು. \v 8 ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು. \v 9 ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸು. ಇಸ್ರಾಯೇಲರೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲಾದವರು ಇವರೇ. \v 10 ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.” \p \v 11 ಯೆಹೋವ ದೇವರು ಮೋಶೆಗೆ ಹೀಗೆಂದರು: \v 12 “ಪ್ರತಿಯೊಬ್ಬ ಇಸ್ರಾಯೇಲಿನ ಮಹಿಳೆಯ ಜೇಷ್ಠ ಮಗನಿಗೆ ಬದಲಾಗಿ ಇಸ್ರಾಯೇಲರೊಳಗಿಂದ ಲೇವಿಯರನ್ನು ತೆಗೆದುಕೊಂಡಿದ್ದೇನೆ. ಲೇವಿಯರು ನನಗೆ ಸೇರಿದವರು. \v 13 ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.” \p \v 14 ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಗೆ ಹೇಳಿದ್ದೇನೆಂದರೆ: \v 15 “ಲೇವಿಯರನ್ನು ಕುಟುಂಬಗಳಾಗಿಯೂ, ಗೋತ್ರಗಳಾಗಿಯೂ ಎಣಿಕೆ ಮಾಡು. ಒಂದು ತಿಂಗಳು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು,” ಎಂದರು. \v 16 ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು. \b \li1 \v 17 ಲೇವಿಯ ಪುತ್ರರ ಹೆಸರುಗಳು: \li2 ಗೇರ್ಷೋನ್, ಕೊಹಾತ್ ಮತ್ತು ಮೆರಾರೀ. \li1 \v 18 ಗೇರ್ಷೋನ್ ಗೋತ್ರದವರು: \li2 ಲಿಬ್ನೀ ಹಾಗೂ ಶಿಮ್ಮೀ. \li1 \v 19 ಕೊಹಾತನ ಗೋತ್ರದವರು: \li2 ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. \li1 \v 20 ಮೆರಾರೀಯ ಗೋತ್ರದವರು: \li2 ಮಹ್ಲೀ ಮತ್ತು ಮೂಷೀ ಎಂಬವರು. \b \li4 ಗೋತ್ರ ಕುಟುಂಬಗಳ ಪ್ರಕಾರವಾಗಿ ಇವರೇ ಲೇವಿ ವಂಶದವರು. \b \li4 \v 21 ಗೇರ್ಷೋನ್ ವಂಶಕ್ಕೆ ಸೇರಿದ ಲಿಬ್ನೀಯ ಕುಟುಂಬವೂ ಶಿಮ್ಮೀಯ ಕುಟುಂಬದವರೂ ಇದ್ದರು. \li1 \v 22 ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಕೆಯಾದವರು 7,500 ಮಂದಿ. \li1 \v 23 ಗೇರ್ಷೋನ್ಯರ ಕುಟುಂಬಗಳು ದೇವದರ್ಶನದ ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳಿದುಕೊಳ್ಳಬೇಕು. \li1 \v 24 ಗೇರ್ಷೋನ್ಯರ ಗೋತ್ರಗಳ ಮುಖ್ಯಸ್ಥನು ಲಾಯೇಲನ ಮಗ ಎಲ್ಯಾಸಾಫ್. \li1 \v 25 ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವವೆಂದರೆ: ಗುಡಾರ, ಅದರ ಮೇಲಿನ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ, \v 26 ಗುಡಾರದ ಮತ್ತು ಬಲಿಪೀಠದ ಸುತ್ತಲಿರುವ ಅಂಗಳದ ತೆರೆಗಳು, ಅಂಗಳದ ಬಾಗಿಲಿನ ಪರದೆ ಮತ್ತು ಅವುಗಳ ಹಗ್ಗಗಳು. ಇಂತಹ ಎಲ್ಲಾ ವಿಧವಾದ ಸೇವೆಯನ್ನು ಗೇರ್ಷೋನ್ಯರು ಮಾಡಬೇಕಾಗಿತ್ತು. \b \li4 \v 27 ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು. \li1 \v 28 ಕೊಹಾತ್ಯರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 8,600 ಮಂದಿ. \li1 ಇವರು ಪರಿಶುದ್ಧ ಸ್ಥಳವನ್ನು ನೋಡಿಕೊಳ್ಳುತ್ತಿದ್ದರು. \li1 \v 29 ಕೊಹಾತ್ಯರ ಗೋತ್ರಗಳವರು ಪರಿಶುದ್ಧ ಸ್ಥಳವನ್ನು ಕಾಯುವ ಜವಾಬ್ದಾರಿಕೆ ಹೊಂದಿದ್ದರು. ಅವರು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳಿದುಕೊಳ್ಳಬೇಕು. \li1 \v 30 ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು. \li1 \v 31 ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು. \li1 \v 32 ಇದಲ್ಲದೆ ಯಾಜಕನಾಗಿರುವ ಆರೋನನ ಮಗ ಎಲಿಯಾಜರನು ಲೇವಿಯರ ಮತ್ತೊಬ್ಬ ನಾಯಕನಾಗಿದ್ದನು. ಪರಿಶುದ್ಧಸ್ಥಳದ ಜವಾಬ್ದಾರಿಕೆಯುಳ್ಳವನ ಮೇಲೆ ವಿಚಾರಕನು ಅವನೇ. \b \li4 \v 33 ಮೆರಾರೀಯ ಮಹ್ಲೀಯರ ಹಾಗೂ ಮೂಷೀಯರ ಗೋತ್ರಗಳಿಗೆ ಸಂಬಂಧಪಟ್ಟವನು. ಇವು ಮೆರಾರೀ ಗೋತ್ರಗಳು. \li1 \v 34 ಅವರಲ್ಲಿ ಎಣಿಕೆಯಾದವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 6,200 ಮಂದಿ. \li1 \v 35 ಅಬೀಹೈಲನ ಮಗ ಜುರೀಯೇಲನು ಮೆರಾರೀ ಗೋತ್ರದ ಮುಖ್ಯಸ್ಥನು. \li1 ಅವರು ದೇವದರ್ಶನ ಗುಡಾರದ ಬಳಿಯಲ್ಲಿ ಉತ್ತರ ದಿಕ್ಕಿನ ಕಡೆಗೆ ಇಳಿದುಕೊಳ್ಳಬೇಕು. \li1 \v 36 ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ \v 37 ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಅವುಗಳ ಗೂಟಗಳೂ ಅವುಗಳ ಹಗ್ಗಗಳೂ ಇವೆಲ್ಲವುಗಳ ಮೇಲ್ವಿಚಾರಣೆ ಮಾಡಬೇಕು. \b \li1 \v 38 ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. \li1 ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. \li1 ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು. \b \li4 \v 39 ಮೋಶೆಯೂ ಆರೋನನೂ ಯೆಹೋವ ದೇವರ ಆಜ್ಞೆಯ ಪ್ರಕಾರ, ಕುಟುಂಬಗಳ ಪ್ರಕಾರ ಲೆಕ್ಕಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 22,000 ಮಂದಿ. \b \p \v 40 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಇಸ್ರಾಯೇಲರಲ್ಲಿರುವ ಜೇಷ್ಠಪುತ್ರರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ. \v 41 ಇಸ್ರಾಯೇಲರಲ್ಲಿರುವ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಪಶುಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ‘ನಾನೇ ಯೆಹೋವ ದೇವರು,’ ” ಎಂದರು. \p \v 42 ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಮೋಶೆ ಇಸ್ರಾಯೇಲರಲ್ಲಿ ಜೇಷ್ಠರಾಗಿರುವುದೆಲ್ಲವನ್ನು ಎಣಿಸಿದನು. \v 43 ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಜೇಷ್ಠರಾದವರೆಲ್ಲರ ಒಟ್ಟು ಸಂಖ್ಯೆ 22,273 ಮಂದಿ. \p \v 44 ಯೆಹೋವ ದೇವರು ಮೋಶೆಗೆ ಪುನಃ ಹೇಳಿದ್ದೇನೆಂದರೆ, \v 45 “ಇಸ್ರಾಯೇಲರಲ್ಲಿ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರು ನನ್ನವರಾಗಿರುವರು. ನಾನೇ ಯೆಹೋವ ದೇವರು. \v 46 ಇಸ್ರಾಯೇಲರ ಜೇಷ್ಠರಾದವರಲ್ಲಿ ಲೇವಿಯರಿಗಿಂತ ಹೆಚ್ಚಾಗಿರುವ 273 ಮಂದಿಯ ವಿಮೋಚನೆಯ ಕ್ರಯವಾಗಿ \v 47 ಒಬ್ಬೊಬ್ಬನಿಗೆ ಐದು ಶೆಕೆಲ್\f + \fr 3:47 \fr*\ft ಅಂದರೆ ಸುಮಾರು 58 ಗ್ರಾಂ ಬೆಳ್ಳಿ\ft*\f* ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು. \v 48 ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.” \p \v 49 ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸಲಾದವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು. \v 50 ಇಸ್ರಾಯೇಲರಲ್ಲಿ ಜೇಷ್ಠರಾದವರಿಂದ ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ ನಿಗದಿಯಾದ 1,365 ಶೆಕೆಲ್‌ಗಳನ್ನು ತೆಗೆದುಕೊಂಡನು. \v 51 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋಚನೆಯ ಹಣವನ್ನು ಆರೋನನಿಗೂ, ಅವನ ಪುತ್ರರಿಗೂ ಕೊಟ್ಟನು. \c 4 \s1 ಕೊಹಾತ್ಯರು \p \v 1 ಯೆಹೋವ ದೇವರು ಮೋಶೆಯ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, \v 2 “ಲೇವಿಯರೊಳಗೆ ಕೊಹಾತ್ಯರಲ್ಲಿಯ ಕುಟುಂಬಗಳನ್ನು ಗೋತ್ರಗಳನ್ನಾಗಿ ಲೆಕ್ಕಮಾಡು. \v 3 ಮೂವತ್ತು ವರ್ಷವಾದವರನ್ನೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷದವರವರೆಗೆ ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕೆ ಬರುವವರನ್ನು ಲೆಕ್ಕಮಾಡು. \p \v 4 “ದೇವದರ್ಶನದ ಗುಡಾರದಲ್ಲಿ ಕೊಹಾತ್ಯರು ಮಾಡುವ ಸೇವೆ ಯಾವುದೆಂದರೆ, ದೇವದರ್ಶನ ಗುಡಾರದ ಅತಿಪರಿಶುದ್ಧವಾದ ವಸ್ತುಗಳನ್ನು ಕಾಪಾಡುವುದು. \v 5 ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ, \v 6 ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು. \p \v 7 “ಸಮ್ಮುಖದ ರೊಟ್ಟಿಯ ಮೇಜಿನ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದರ ಮೇಲೆ ಪಾತ್ರೆಗಳನ್ನು, ಸೌಟುಗಳನ್ನು, ಬೋಗುಣಿಗಳನ್ನು ಮತ್ತು ಪಾನಾರ್ಪಣೆಯ ಹೂಜಿಗಳನ್ನು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಯನ್ನು ಅದರ ಮೇಲೆ ಇಡಬೇಕು. \v 8 ಅವೆಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು. \p \v 9 “ಇದಲ್ಲದೆ ಅವರು ನೀಲಿವಸ್ತ್ರವನ್ನು ತೆಗೆದುಕೊಂಡು, ಅದರಿಂದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ, ಅದರ ಬತ್ತಿ ಕತ್ತರಿಸುವ ಸಲಕರಣೆಗಳನ್ನೂ, ಅದರ ಬಟ್ಟಲುಗಳನ್ನೂ, ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. \v 10 ಅವರು ಅದನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಇಟ್ಟು, ಅಡ್ಡ ದಂಡಕ್ಕೆ ಕಟ್ಟಬೇಕು. \p \v 11 “ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಮುಚ್ಚಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು. \p \v 12 “ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವ ಸೇವೆಯ ಎಲ್ಲಾ ಸಲಕರಣೆಗಳನ್ನು ಅವರು ತೆಗೆದುಕೊಂಡು ನೀಲಿ ವಸ್ತ್ರದಿಂದ ಕಟ್ಟಿ, ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ, ಅಡ್ಡ ದಂಡಕ್ಕೆ ಕಟ್ಟಬೇಕು. \p \v 13 “ಬಲಿಪೀಠದ ಬೂದಿಯನ್ನು ತೆಗೆದು, ಅದರ ಮೇಲೆ ಧೂಮ್ರವರ್ಣದ ವಸ್ತ್ರವನ್ನು ಹಾಸಿ, \v 14 ಅದರ ಮೇಲೆ ಸೇವೆ ಮಾಡುವ ಎಲ್ಲಾ ಸಲಕರಣೆಗಳನ್ನು, ಅಗ್ನಿ ಪಾತ್ರೆಗಳನ್ನು, ಮುಳ್ಳುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಬಲಿಪೀಠದ ಎಲ್ಲಾ ಸಲಕರಣೆಗಳನ್ನು ಅದರ ಮೇಲಿಟ್ಟು, ಕಡಲುಹಂದಿಯ ಚರ್ಮಗಳ ಹೊದಿಕೆಯನ್ನು ಹಾಕಿ, ಹೊರುವ ಕೋಲುಗಳನ್ನು ಇಡಬೇಕು. \p \v 15 “ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ. \p \v 16 “ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.” \p \v 17 ಇದಲ್ಲದೆ ಯೆಹೋವ ದೇವರು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, \v 18 “ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ. \v 19 ಅವರು ಮಹಾಪರಿಶುದ್ಧ ವಸ್ತುಗಳ ಸಮೀಪಕ್ಕೆ ಬರುವಾಗ, ಅವರು ಸಾಯದೆ ಬದುಕುವ ಹಾಗೆ ಹೀಗೆ ಎಚ್ಚರಿಕೆ ವಹಿಸಬೇಕು: ಆರೋನನೂ ಅವನ ಪುತ್ರರೂ ಒಳಗೆ ಪ್ರವೇಶಿಸಿ, ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಯನ್ನೂ ನೇಮಿಸಬೇಕು. \v 20 ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.” \s1 ಗೇರ್ಷೋನ್ಯರು \p \v 21 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, \v 22 “ಗೇರ್ಷೋನನ ಪುತ್ರರ ಲೆಕ್ಕವನ್ನು ಸಹ ಅವರ ತಂದೆಗಳ ಮನೆಗಳ ಪ್ರಕಾರವಾಗಿಯೂ, ಅವರ ಕುಲಗಳ ಪ್ರಕಾರವಾಗಿಯೂ ತೆಗೆದುಕೊಳ್ಳಬೇಕು. \v 23 ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳ ಪುರುಷರನ್ನೂ ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವುದಕ್ಕೂ, ಅದನ್ನು ಪೂರೈಸುವುದಕ್ಕೂ ಸೇರುವವರೆಲ್ಲರನ್ನೂ ಎಣಿಸು. \p \v 24 “ಗೇರ್ಷೋನ್ಯರ ಕುಟುಂಬಗಳ ಸೇವೆಯೂ ಜವಾಬ್ದಾರಿಕೆ ಯಾವುದೆಂದರೆ, \v 25 ಅವರು ಗುಡಾರದ ಪರದೆಗಳನ್ನೂ ದೇವದರ್ಶನ ಗುಡಾರವನ್ನೂ ಅದರ ಹೊದಿಕೆಯನ್ನೂ ಅದರ ಮೇಲಿರುವ ಕಡಲುಹಂದಿಯ ಚರ್ಮಗಳ ಹೊದಿಕೆಯನ್ನೂ ದೇವದರ್ಶನ ಗುಡಾರದ ಬಾಗಿಲಿನ ಪರದೆಯನ್ನೂ \v 26 ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಿಲಿನ ಪರದೆಯನ್ನೂ ಅವುಗಳ ಹಗ್ಗಗಳನ್ನೂ, ಅವುಗಳ ಸೇವೆಯ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು. \v 27 ಗೇರ್ಷೋನ್ಯರು ಆರೋನ್, ಅವನ ಪುತ್ರರ ನಿರ್ದೇಶನದ ಮೇರೆಗೆ ಅವರ ಹೊರೆಹೊರುವದನ್ನು ಮತ್ತು ಇತರ ಕೆಲಸಗಳನ್ನು ಮಾಡಲಿ. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು. \v 28 ಗೇರ್ಷೋನ್ಯರ ಕುಟುಂಬದವರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯೂ ಇದೆ. ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವುದು ಅವರಿಗೆ ಅಪ್ಪಣೆಯಾಗಿದೆ. \s1 ಮೆರಾರೀಯರು \p \v 29 “ಮೆರಾರೀಯ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ಎಣಿಸಬೇಕು. \v 30 ಮೂವತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷಗಳವರೆಗೆ ದೇವದರ್ಶನದ ಗುಡಾರದ ಸೇವೆ ಮಾಡುವುದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು. \v 31 ದೇವದರ್ಶನದ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವುದಕ್ಕೆ ನೀಡಿದ ಅಪ್ಪಣೆಯು ಏನೆಂದರೆ: ಗುಡಾರದ ಹಲಿಗೆಗಳೂ ಅದರ ಅಡ್ಡ ದಂಡ ಅದರ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ \v 32 ಸುತ್ತಲಿರುವ ಅಂಗಳದ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ ಅದರ ಗೂಟಗಳೂ ಅವುಗಳ ಹಗ್ಗಗಳೂ ಅವುಗಳ ಎಲ್ಲಾ ಸಲಕರಣೆಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವುದಕ್ಕೆ ಕೊಟ್ಟ ಅಪ್ಪಣೆಯ ಸಲಕರಣೆಗಳನ್ನು ನೀವು ಹೆಸರೆಸರಾಗಿ ಎಣಿಸಬೇಕು. \v 33 ಮೆರಾರೀಯ ಪುತ್ರರ ಕುಟುಂಬಗಳ ಸೇವೆಯೂ, ದೇವದರ್ಶನದ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೆ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.” \s1 ಲೇವಿ ಕುಲದವರ ಗಣತಿ \li1 \v 34 ಮೋಶೆಯೂ, ಆರೋನನೂ, ಸಭೆಯ ಮುಖ್ಯಸ್ಥನೂ, ಕೊಹಾತ್ಯರ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ \li2 \v 35 ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರೂ ಎಂದರೆ ಐವತ್ತು ವರ್ಷಗಳವರೆಗೆ ದೇವದರ್ಶನದ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿದರು. \v 36 ಕುಲಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 2,750 ಮಂದಿಯಾಗಿದ್ದರು. \v 37 ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಕೊಹಾತ್ಯರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ. \b \li1 \v 38 ಗೇರ್ಷೋನನ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಕೆಯಾದರು. \li2 \v 39 ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ, ಎಂದರೆ ಐವತ್ತು ವರ್ಷಗಳವರೆಗೆ ದೇವದರ್ಶನ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ, \v 40 ಎಂದರೆ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ, ಅವರಲ್ಲಿ ಎಣಿಕೆಯಾದವರು 2,630 ಮಂದಿಯಾಗಿದ್ದರು. \v 41 ಯೆಹೋವ ದೇವರ ಅಪ್ಪಣೆಯ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಗೇರ್ಷೋನನ ಪುತ್ರರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನದ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ. \b \li1 \v 42 ಮೆರಾರೀಯ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಕೆಯಾದವರು. \li2 \v 43 ಮೂವತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷಗಳವರೆಗೆ ದೇವದರ್ಶನ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು \v 44 ಎಂದರೆ, ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 3,200 ಮಂದಿಯಾಗಿದ್ದರು. \v 45 ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಪುತ್ರರ ಕುಲಗಳಲ್ಲಿ ಎಣಿಕೆಯಾದವರು ಇವರೇ. \b \li4 \v 46 ಮೋಶೆಯೂ, ಆರೋನನೂ, ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಲಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸಿದರು. \v 47 ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕಾಗಿಯೂ, ಹೊರುವುದಕ್ಕಾಗಿಯೂ ಬರುವವರೆಲ್ಲರೂ ಎಂದರೆ, ಅವರಲ್ಲಿ ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಎಂದರೆ, ಐವತ್ತು ವರ್ಷಗಳವರೆಗೆ \v 48 ಎಣಿಕೆಯಾದವರು 8,580 ಮಂದಿ. \v 49 ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ, ಹೊರುವುದಕ್ಕಾಗಿಯೂ ಜವಾಬ್ದಾರಿಕೆ ಕೊಡಲಾಯಿತು. \b \p ಹೀಗೆ ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಎಣಿಸಲಾಯಿತು. \c 5 \s1 ಪಾಳೆಯದ ಶುದ್ಧೀಕರಣ \p \v 1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, \v 2 “ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು. \v 3 ಸ್ತ್ರೀ ಪುರುಷವೆಂಬ ವ್ಯತ್ಯಾಸವಿಲ್ಲದೆ ಎಲ್ಲರನ್ನು ಹೊರಹಾಕಬೇಕು. ನಾನು ಅವರ ಮಧ್ಯದಲ್ಲಿ ವಾಸಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಪಾಳೆಯದ ಹೊರಗೆ ಕಳುಹಿಸಬೇಕು,” ಎಂಬುದೆ. \v 4 ಆಗ ಇಸ್ರಾಯೇಲರು ಹಾಗೆ ಮಾಡಿ, ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರ ಇಸ್ರಾಯೇಲರು ಮಾಡಿದರು. \s1 ಮೋಸಮಾಡಿ ಪಡೆದದ್ದಕ್ಕೆ ಪ್ರಾಯಶ್ಚಿತ್ತ \p \v 5 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, \v 6 “ಇಸ್ರಾಯೇಲರಿಗೆ ಹೀಗೆ ಹೇಳು: ‘ಪುರುಷನಾದರೂ ಸ್ತ್ರೀಯಾದರೂ ಮತ್ತೊಬ್ಬರಿಗೆ ಮೋಸಮಾಡಿ ಯೆಹೋವ ದೇವರಿಗೆ ಅಪನಂಬಿಗಸ್ತರಾದರೆ, ಆ ವ್ಯಕ್ತಿ ಅಪರಾಧಿ. \v 7 ಅವನು ಮಾಡಿದ ಪಾಪವನ್ನು ಅರಿಕೆ ಮಾಡಬೇಕು. ಅವನ ಅಪರಾಧದ ಬದಲುಕೊಟ್ಟು, ಅದರ ಸಂಗಡ ಅದರ ಐದನೆಯ ಪಾಲನ್ನು ಕೂಡಿಸಿ, ಯಾರಿಗೆ ಅಪರಾಧ ಮಾಡಿದರೋ, ಅವರಿಗೆ ಕೊಡಬೇಕು. \v 8 ಆದರೆ ಅಪರಾಧಕ್ಕೆ ಬದಲು ಕೊಡುವುದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಅದು ಯೆಹೋವ ದೇವರಿಗೆ ಸೇರಬೇಕು. ಅದು ದೋಷಪರಿಹಾರಕ್ಕಾಗಿ ಅರ್ಪಿಸಲಾಗುವ ಪ್ರಾಯಶ್ಚಿತ್ತದ ಟಗರು, ಇವೆರಡೂ ಯಾಜಕನಿಗೆ ಸೇರಬೇಕು. \v 9 ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು. \v 10 ಪ್ರತಿ ಮನುಷ್ಯನ ಪರಿಶುದ್ಧವಾದ ಕಾಣಿಕೆಗಳು ಅವನದಾಗಿಯೇ ಆಗಿರುತ್ತವೆ. ಆದರೆ ಯಾಜಕನಿಗೆ ಕೊಟ್ಟದ್ದು ಯಾಜಕರದಾಗುತ್ತದೆ,’ ” ಎಂದು ಹೇಳಿದರು. \s1 ಅಪನಂಬಿಗಸ್ತ ಪತ್ನಿಯ ಪರಿಹಾರ \p \v 11 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, \v 12 “ಇಸ್ರಾಯೇಲರಿಗೆ ಹೀಗೆ ಹೇಳು, ‘ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ಅಪನಂಬಿಗಸ್ತಳಾಗಿದ್ದರೆ, \v 13 ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು, ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬುದು ಗುಪ್ತವಾಗಿದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ, ಅವಳನ್ನು ಹಿಡಿಯದೇ ಇದ್ದರೆ, \v 14 ಆಕೆ ಅಶುದ್ಧಳಾಗಿದ್ದಾಳೆಂದು ಆಕೆಯ ಮೇಲೆ ಅಸೂಯೆಗೊಂಡು ಸಂಶಯಪಟ್ಟರೆ, ಆಕೆ ಅಶುದ್ಧಳಾಗದಿದ್ದರೂ, ಆಕೆಯೊಡನೆ ಅಸೂಯೆ ಸಂಶಯ ಹೊಂದಿದರೆ, ಆಗ \v 15 ಆ ಮನುಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತರಬೇಕು. ಅವಳಿಗೋಸ್ಕರ ಕಾಣಿಕೆಯಾಗಿ ಒಂದು ಓಮರ್\f + \fr 5:15 \fr*\ft ಸುಮಾರು 1.6 ಕಿಲೋಗ್ರಾಂ\ft*\f* ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕಬಾರದು. ಏಕೆಂದರೆ ಅದು ಸಂಶಯವನ್ನು ಸೂಚಿಸುವುದಕ್ಕೂ ಅಪರಾಧವನ್ನು ಹೊರಪಡಿಸುವುದಕ್ಕೂ ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ. \p \v 16 “ ‘ಯಾಜಕನು ಅವಳನ್ನು ಸಮೀಪಕ್ಕೆ ಕರೆದು, ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಬೇಕು. \v 17 ಆಗ ಯಾಜಕನು ಪವಿತ್ರ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದುಕೊಳ್ಳಬೇಕು. ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತೆಗೆದುಕೊಂಡು, ಆ ನೀರಿನೊಳಗೆ ಹಾಕಬೇಕು. \v 18 ಯಾಜಕನು ಆ ಸ್ತ್ರೀಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಿ, ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು, ಅವಳ ಕೈಗಳಲ್ಲಿ ಸಂಶಯ ಸೂಚಿಸುವ ಕಾಣಿಕೆಯಾದ ನೈವೇದ್ಯದ ಹಿಟ್ಟನ್ನು ಇಡಬೇಕು. ಯಾಜಕನ ಕೈಯಲ್ಲಿ ಶಾಪತರುವ ಕಹಿಯಾದ ನೀರು ಇರಬೇಕು. \v 19 ಯಾಜಕನು ಅವಳನ್ನು ಪ್ರಮಾಣ ಮಾಡಿಸಿ, ಸ್ತ್ರೀಗೆ ಹೇಳಬೇಕಾದದ್ದು, “ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುವಾಗ, ಒಬ್ಬ ಪರಪುರುಷನು ನಿನ್ನ ಸಂಗಡ ಮಲಗಿರದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೆ ಇದ್ದರೆ, ಶಾಪವನ್ನು ಉಂಟುಮಾಡುವ ಈ ನೀರು ನಿನಗೆ ಯಾವ ಹಾನಿಮಾಡುವುದಿಲ್ಲ. \v 20 ಆದರೆ ನೀನು ನಿನ್ನ ಗಂಡನನ್ನು ಬಿಟ್ಟು, ಜಾರತ್ವ ಮಾಡಿ ಅಶುದ್ಧಳಾಗಿದ್ದರೆ, ನಿನ್ನ ಗಂಡನನ್ನು ಬಿಟ್ಟು, ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ, \v 21 ಯೆಹೋವ ದೇವರು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವನು. ನಿನ್ನ ಜನರು ನಿನ್ನನ್ನು ಶಪಿಸುವರು, ತಿರಸ್ಕರಿಸುವರು. \v 22 ಶಪಿಸುವಂಥ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ತೊಡೆಯನ್ನು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ ಎಂದು ಹೇಳಬೇಕು, ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣ ಮಾಡಿಸಬೇಕು.” \p “ ‘ಅದಕ್ಕೆ ಆ ಸ್ತ್ರೀಯು, “ಆಮೆನ್, ಆಮೆನ್\f + \fr 5:22 \fr*\ft ಹೀಬ್ರೂ ಭಾಷೆಯಲ್ಲಿ \ft*\fq ಆಮೆನ್ \fq*\ft ಎಂದರೆ \ft*\fqa ಹಾಗೆಯೇ ಆಗಲಿ\fqa*\f*,” ಎಂದು ಹೇಳಬೇಕು. \p \v 23 “ ‘ಇದಲ್ಲದೆ ಯಾಜಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ತೊಳೆದು, \v 24 ಆ ಸ್ತ್ರೀಗೆ ಶಪಿಸುವಂಥಹ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವುದು. \v 25 ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ಸಂಶಯ ಸೂಚಕ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನೈವೇದ್ಯ ಮಾಡಿ, ಬಲಿಪೀಠದ ಸಮೀಪಕ್ಕೆ ತರಬೇಕು. \v 26 ಆಗ ಯಾಜಕನು ಜ್ಞಾಪಕಾರ್ಥವಾಗಿ ಕಾಣಿಕೆಯಿಂದ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಸುಟ್ಟು, ಸ್ತ್ರೀಗೆ ಆ ನೀರನ್ನು ಕುಡಿಸಬೇಕು. \v 27 ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ, ಶಪಿಸುವ ನೀರು ಆಕೆಯೊಳಗೆ ಸೇರಿ ಕಹಿಯಾಗುವುದು. ಅವಳ ಹೊಟ್ಟೆ ಉಬ್ಬಿ, ಅವಳ ತೊಡೆ ಕ್ಷೀಣವಾಗುವುದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು. \v 28 ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ, ಅವಳು ನಿರಪರಾಧಿಯಾಗಿದ್ದು ಸಂತಾನವನ್ನು ಪಡೆಯುವಳು. \p \v 29 “ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ, \v 30 ಅಥವಾ ಪುರುಷನು ಸಂಶಯಗೊಂಡು ಅವನು ತನ್ನ ಹೆಂಡತಿ ಮೇಲೆ ರೋಷಗೊಂಡಿದ್ದರೆ, ಅವನು ತನ್ನ ಹೆಂಡತಿಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಲಿ. ಆಗ ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆಗಳ ಪ್ರಕಾರ ಮಾಡುವನು. \v 31 ಆಗ ಗಂಡನು ನಿರಪರಾಧಿಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ” \c 6 \s1 ನಾಜೀರ ವ್ರತ \p \v 1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, \v 2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ, \v 3 ದ್ರಾಕ್ಷಾರಸಕ್ಕೂ ಮದ್ಯಪಾನಕ್ಕೂ ದೂರವಾಗಿದ್ದು, ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ, ದ್ರಾಕ್ಷಿಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ ಹಸಿಯದಾಗಲಿ, ಒಣಗಿದ್ದಾಗಲಿ ದ್ರಾಕ್ಷಿಹಣ್ಣನ್ನು ತಿನ್ನದೆ ಇರಬೇಕು. \v 4 ತಮ್ಮ ನಾಜೀರತನದ ದಿವಸಗಳಲ್ಲೆಲ್ಲಾ ದ್ರಾಕ್ಷಿ ಬೀಜ ಮೊದಲುಗೊಂಡು ಸಿಪ್ಪೆಯವರೆಗೂ, ದ್ರಾಕ್ಷಿಬಳ್ಳಿಯಲ್ಲಿ ಬೆಳೆದದ್ದು ಯಾವುದನ್ನಾದರೂ ತಿನ್ನಬಾರದು. \p \v 5 “ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು. \p \v 6 “ ‘ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳಲ್ಲೆಲ್ಲಾ ಸತ್ತವರ ಬಳಿಗೆ ಬರಬಾರದು. \v 7 ಅವರು ತಂದೆತಾಯಿ, ಸಹೋದರ ಸಹೋದರಿ ಸತ್ತರೂ ಅವರು ಅವರಿಗೋಸ್ಕರ ಅಪವಿತ್ರರಾಗಬಾರದು. ಏಕೆಂದರೆ ದೇವರಿಗೆ ಅವರ ಸಮರ್ಪಣೆಯ ಸಂಕೇತವು ಅವರ ತಲೆಯ ಮೇಲೆ ಇದೆ. \v 8 ಅವರ ಸಮರ್ಪಣೆಯ ದಿವಸಗಳಲ್ಲೆಲ್ಲಾ ಅವರು ಯೆಹೋವ ದೇವರಿಗೆ ಮೀಸಲಾಗಿರಬೇಕು. \p \v 9 “ ‘ಅವರ ಬಳಿಯಲ್ಲಿ ಯಾರಾದರೂ ಆಕಸ್ಮಿಕವಾಗಿ ಸತ್ತದ್ದರಿಂದ ಅವರ ತಲೆಯ ಕೂದಲು ಅಶುದ್ಧವಾದರೆ, ಅವರು ಶುದ್ಧರಾಗುವ ದಿವಸದಲ್ಲಿ ಅಂದರೆ ಏಳನೆಯ ದಿವಸದಲ್ಲಿ ತಮ್ಮ ತಲೆಯನ್ನು ಬೋಳಿಸಬೇಕು. \v 10 ಎಂಟನೆಯ ದಿವಸದಲ್ಲಿ ಅವರು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಿಲಿಗೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು. \v 11 ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು. \v 12 ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು. \p \v 13 “ ‘ಇದು ನಾಜೀರ ವ್ರತವು. ಅವರ ಸಮರ್ಪಣೆಯ ದಿವಸಗಳು ಪೂರ್ಣವಾದ ಮೇಲೆ ಅವರನ್ನು ದೇವದರ್ಶನ ಗುಡಾರದ ಬಾಗಿಲಿನ ಬಳಿಗೆ ತರಬೇಕು. \v 14 ಅವರು ಯೆಹೋವ ದೇವರಿಗೆ ತಮ್ಮ ಅರ್ಪಣೆಗಳನ್ನು ಅರ್ಪಿಸಬೇಕು. ಅದೇನೆಂದರೆ, ದಹನಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಟಗರಿನ ಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಹೆಣ್ಣು ಕುರಿಮರಿಯನ್ನೂ, ಸಮಾಧಾನದ ಬಲಿಗಾಗಿ ಒಂದು ಕಳಂಕವಿಲ್ಲದ ಟಗರನ್ನೂ ತರಬೇಕು. \v 15 ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು. \p \v 16 “ ‘ಇವುಗಳನ್ನು ಯಾಜಕನು ಯೆಹೋವ ದೇವರ ಎದುರಿನಲ್ಲಿ ತಂದು, ಅವರ ದೋಷಪರಿಹಾರಕ ಬಲಿಯನ್ನೂ ಅವರ ದಹನಬಲಿಯನ್ನೂ ಅರ್ಪಿಸಬೇಕು. \v 17 ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯ ಸಂಗಡ ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಅರ್ಪಿಸಬೇಕು. ಇದಲ್ಲದೆ ಯಾಜಕನು ಅವರ ಧಾನ್ಯವನ್ನೂ, ಪಾನದ್ರವ್ಯವನ್ನೂ ಅರ್ಪಿಸಬೇಕು. \p \v 18 “ ‘ಇದಲ್ಲದೆ ನಾಜೀರರು ತಮ್ಮ ಸಮರ್ಪಣೆಯನ್ನು ಸಂಕೇತಿಸುವ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಪ್ರತ್ಯೇಕಿಸಿದ ತಮ್ಮ ತಲೆಗೂದಲನ್ನು ತೆಗೆದುಕೊಂಡು, ಸಮಾಧಾನದ ಬಲಿಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು. \p \v 19 “ ‘ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಆ ಪುಟ್ಟಿಯೊಳಗಿಂದ ಹುಳಿಯಿಲ್ಲದ ಒಂದು ರೊಟ್ಟಿಯನ್ನೂ, ಹುಳಿಯಿಲ್ಲದ ಒಂದು ದೋಸೆಯನ್ನೂ, ಆ ನಾಜೀರರ ಪ್ರತ್ಯೇಕಿಸಿದ ಕೂದಲನ್ನು ಕ್ಷೌರಮಾಡಿಸಿದ ತರುವಾಯ ಅವರ ಕೈಗಳಲ್ಲಿ ಕೊಡಬೇಕು. \v 20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು. \p \v 21 “ ‘ಪ್ರಮಾಣ ಮಾಡಿಕೊಂಡ ನಾಜೀರರ ನಿಯಮವು ಇದೇ. ಸಂಬಂಧಪಟ್ಟದ್ದರೊಂದಿಗೆ ತಮ್ಮ ಕೈಲಾದ ಮಟ್ಟಿಗೆ ಅವರು ತಮ್ಮ ಪ್ರತ್ಯೇಕಿಸುವಿಕೆಗಾಗಿ ಯೆಹೋವ ದೇವರಿಗೆ ಕಾಣಿಕೆ ಅರ್ಪಿಸತಕ್ಕದ್ದು. ನಾಜೀರ ವ್ರತದ ಕ್ರಮದ ಪ್ರಕಾರ, ನೀವು ಮಾಡಿದ ಪ್ರಮಾಣಕ್ಕನುಸಾರವಾಗಿ ತಮ್ಮ ವ್ರತದ ಕ್ರಮಗಳನ್ನು ನೆರವೇರಿಸಬೇಕು.’ ” \s1 ಯಾಜಕರ ಆಶೀರ್ವಚನ \p \v 22 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 23 “ನೀನು ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು: \q1 \v 24 “ ‘ “ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ, \q2 ನಿಮ್ಮನ್ನು ಕಾಪಾಡಲಿ. \q1 \v 25 ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ, \q2 ನಿಮಗೆ ಕೃಪೆ ತೋರಿಸಲಿ. \q1 \v 26 ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, \q2 ನಿಮಗೆ ಸಮಾಧಾನ ಅನುಗ್ರಹಿಸಲಿ.” ’ \p \v 27 “ಹೀಗೆ ಅವರು ನನ್ನ ಹೆಸರನ್ನು ಇಸ್ರಾಯೇಲರ ಮೇಲೆ ಉಚ್ಛರಿಸುವರು. ನಾನೇ ಅವರನ್ನು ಆಶೀರ್ವದಿಸುವೆನು.” \c 7 \s1 ಗೋತ್ರ ನಾಯಕರ ಕಾಣಿಕೆ \p \v 1 ಮೋಶೆಯು ದೇವದರ್ಶನ ಗುಡಾರವನ್ನು ನಿಲ್ಲಿಸಿ, ಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ಅದರ ಎಲ್ಲಾ ಸಲಕರಣೆಗಳನ್ನೂ, ಬಲಿಪೀಠವನ್ನೂ, ಅದರ ಎಲ್ಲಾ ಸಾಮಗ್ರಿಗಳನ್ನೂ ಅಭಿಷೇಕಿಸಿ ಪರಿಶುದ್ಧ ಮಾಡಿದನು. ಅನಂತರ, \v 2 ಇಸ್ರಾಯೇಲರ ಪ್ರಧಾನರು ಎಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು. \v 3 ಅವರು ಯೆಹೋವ ದೇವರ ಎದುರಿನಲ್ಲಿ ತಂದ ಅರ್ಪಣೆ ಏನೆಂದರೆ ಆರು ಕಮಾನುಬಂಡಿಗಳು, ಹನ್ನೆರಡು ಎತ್ತುಗಳು, ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯಂತೆ, ಒಬ್ಬೊಬ್ಬನಿಗೆ ಒಂದೊಂದು ಎತ್ತುಗಳನ್ನು ಅವರು ದೇವದರ್ಶನ ಗುಡಾರದ ಮುಂದೆ ತಂದರು. \p \v 4 ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ, \v 5 “ಅವುಗಳನ್ನು ಅವರಿಂದ ತೆಗೆದುಕೋ, ಅವು ದೇವದರ್ಶನ ಗುಡಾರದ ಸೇವೆಮಾಡುವುದಕ್ಕೋಸ್ಕರ ಇರಬೇಕು. ಅವುಗಳನ್ನು ಲೇವಿಯರಿಗೆ ಅವನವನ ಕೆಲಸಕ್ಕೆ ತಕ್ಕಂತೆ ಕೊಡಬೇಕು,” ಎಂದರು. \p \v 6 ಆಗ ಮೋಶೆಯು ಆ ಬಂಡಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅವುಗಳನ್ನು ಲೇವಿಯರಿಗೆ ಕೊಟ್ಟನು. \v 7 ಎರಡು ಬಂಡಿಗಳನ್ನೂ, ನಾಲ್ಕು ಎತ್ತುಗಳನ್ನೂ, ಗೇರ್ಷೋನನ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕ ಪ್ರಕಾರ ಕೊಟ್ಟನು. \v 8 ಯಾಜಕನಾದ ಆರೋನನ ಮಗ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ, ಎಂಟು ಎತ್ತುಗಳನ್ನೂ ಮೆರಾರೀಯ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕಂತೆ ಕೊಟ್ಟನು. \v 9 ಆದರೆ ಕೊಹಾತ್ಯರಿಗೆ ಯಾವುದನ್ನೂ ಕೊಡಲಿಲ್ಲ. ಏಕೆಂದರೆ ಅವರು ತಮ್ಮ ಹೆಗಲುಗಳ ಮೇಲೆ ಪರಿಶುದ್ಧಸ್ಥಳದ ವಸ್ತುಗಳನ್ನು ಹೊತ್ತುಕೊಂಡು ಹೋಗುವುದೇ ಅವರಿಗೆ ಸೇವೆಯಾಗಿತ್ತು. \p \v 10 ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಪ್ರತಿಷ್ಠೆಗಾಗಿ ಅದರ ಮುಂದೆ ಬಂದು, ಪ್ರಧಾನರು ತಮ್ಮ ಕಾಣಿಕೆಗಳನ್ನು ಅರ್ಪಿಸಿದರು. \v 11 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿಪೀಠದ ಪ್ರತಿಷ್ಠೆಗಾಗಿ ತಮ್ಮ ಕಾಣಿಕೆಯನ್ನು ಅರ್ಪಿಸಬೇಕು.” \b \li4 \v 12 ಮೊದಲನೆಯ ದಿವಸದಲ್ಲಿ ತನ್ನ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅಮ್ಮೀನಾದಾಬನ ಮಗ ನಹಶೋನನು. \li1 \v 13 ಅವನ ಅರ್ಪಣೆ ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್\f + \fr 7:13 \fr*\ft ಸುಮಾರು 1.5 ಕಿಲೋಗ್ರಾಂ; ಈ ಅಧ್ಯಾಯದಲ್ಲಿ ಬರುವ ಎಲ್ಲಾ ಕಡೆ\ft*\f* ತೂಕದ ಚೊಕ್ಕ ಬೆಳ್ಳಿಯ ಒಂದು ತಟ್ಟೆ ಮತ್ತು 70 ಶೆಕೆಲ್\f + \fr 7:13 \fr*\ft ಸುಮಾರು 800 ಗ್ರಾಂ; ಈ ಅಧ್ಯಾಯದಲ್ಲಿ ಬರುವ ಎಲ್ಲಾ ಕಡೆ\ft*\f* ತೂಕದ ಬೆಳ್ಳಿಯ ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಇವೆರಡು ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 14 ಧೂಪದಿಂದ ತುಂಬಿದ್ದ 10 ಶೆಕೆಲ್\f + \fr 7:14 \fr*\ft ಸುಮಾರು 115 ಗ್ರಾಂ\ft*\f* ತೂಕದ ಬಂಗಾರದ ಒಂದು ಚಮಚ, \li2 \v 15 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ, \li2 \v 16 ದೋಷಪರಿಹಾರಕ ಬಲಿಗಾಗಿ ಒಂದು ಹೋತ, \li2 \v 17 ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳೂ ಸಮಾಧಾನದ ಬಲಿಗಾಗಿ ಸಮರ್ಪಿಸಬೇಕು. \li4 ಇದು ಅಮ್ಮೀನಾದಾಬನ ಮಗ ನಹಶೋನನ ಅರ್ಪಣೆಯು. \b \li4 \v 18 ಎರಡನೆಯ ದಿವಸದಲ್ಲಿ ಇಸ್ಸಾಕಾರನ ಗೋತ್ರದ ಪ್ರಧಾನನಾಗಿರುವ ಚೂವಾರನ ಮಗ ನೆತನೆಯೇಲ್ ಅರ್ಪಿಸಿದನು. \li1 \v 19 ಅವನ ಅರ್ಪಣೆ ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳಿಯ್ಳ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 20 ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 21 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ, \li2 \v 22 ಪಾಪ ಪರಿಹಾರದ ಬಲಿಗಾಗಿ ಒಂದು ಹೋತ, \li2 \v 23 ಸಮಾಧಾನದ ಬಲಿಗಳ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. \li4 ಇದು ಚೂವಾರನ ಮಗ ನೆತನೆಯೇಲ್ ಇವನ ಅರ್ಪಣೆಯು. \b \li4 \v 24 ಮೂರನೆಯ ದಿವಸದಲ್ಲಿ ಜೆಬುಲೂನ್ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗ ಎಲೀಯಾಬನು ಅರ್ಪಿಸಿದ್ದು. \li1 \v 25 ಅವನ ಅರ್ಪಣೆ ಏನೆಂದರೆ: \li2 ದೇವರ ಸೇವೆಗೆ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 26 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 27 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ, \li2 \v 28 ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ, \li2 \v 29 ಮತ್ತು ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. \li4 ಇದು ಹೇಲೋನನ ಮಗ ಎಲೀಯಾಬನ ಸಮರ್ಪಣೆಯು. \b \li4 \v 30 ನಾಲ್ಕನೆಯ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾನನಾಗಿರುವ ಶೆದೇಯೂರನ ಮಗ ಎಲೀಚೂರನು ಅರ್ಪಿಸಿದನು. \li1 \v 31 ಅವನ ಅರ್ಪಣೆಯು ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 32 ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 33 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ, \li2 \v 34 ಪಾಪ ಪರಿಹಾರದ ಬಲಿಗಾಗಿ ಒಂದು ಹೋತವನ್ನೂ, \li2 \v 35 ಸಮಾಧಾನದ ಬಲಿಗಾಗಿ ಎರಡು ಹೋರಿಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. \li4 ಇದು ಶೆದೇಯೂರನ ಮಗ ಎಲೀಚೂರನ ಅರ್ಪಣೆಯು. \b \li4 \v 36 ಐದನೆಯ ದಿನದಲ್ಲಿ ಸಿಮೆಯೋನನ ಗೋತ್ರದ ಪ್ರಧಾನನಾಗಿರುವ ಚುರೀಷದ್ದೈಯನ ಮಗ ಶೆಲುಮೀಯೇಲನು ಅರ್ಪಿಸಿದನು. \li1 \v 37 ಅವನ ಅರ್ಪಣೆಯು ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳಿಯ್ಳ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 38 ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 39 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ, \li2 \v 40 ಪಾಪ ಪರಿಹಾರದ ಬಲಿಗಾಗಿ ಒಂದು ಹೋತವನ್ನೂ, \li2 \v 41 ಸಮಾಧಾನದ ಬಲಿಗಾಗಿ ಎರಡು ಹೋರಿಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. \li4 ಇದು ಚುರೀಷದ್ದೈಯನ ಮಗ ಶೆಲುಮೀಯೇಲನ ಅರ್ಪಣೆಯು. \b \li4 \v 42 ಆರನೆಯ ದಿನದಲ್ಲಿ ಗಾದನ ಗೋತ್ರದ ಪ್ರಧಾನನಾಗಿರುವ ದೆವುಯೇಲನ ಮಗ ಎಲ್ಯಾಸಾಫನು ಅರ್ಪಿಸಿದನು. \li1 \v 43 ಅವನ ಅರ್ಪಣೆಯು ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 44 ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 45 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ, \li2 \v 46 ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ, \li2 \v 47 ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. \li4 ಇದು ದೆವುಯೇಲನ ಮಗ ಎಲ್ಯಾಸಾಫನ ಅರ್ಪಣೆಯು. \b \li4 \v 48 ಏಳನೆಯ ದಿನದಲ್ಲಿ ಎಫ್ರಾಯೀಮ್ ಗೋತ್ರದ ಪ್ರಧಾನನಾದ ಅಮ್ಮೀಹೂದನ ಮಗ ಎಲೀಷಾಮನು ಅರ್ಪಿಸಿದನು. \li1 \v 49 ಅವನ ಅರ್ಪಣೆ ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧಸ್ಥಳದ ಪ್ರಕಾರ 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 50 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 51 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ, \li2 \v 52 ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ, \li2 \v 53 ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. \li4 ಇದು ಅಮ್ಮೀಹೂದನ ಮಗ ಎಲೀಷಾಮನ ಅರ್ಪಣೆಯು. \b \li4 \v 54 ಎಂಟನೆಯ ದಿನದಲ್ಲಿ ಮನಸ್ಸೆ ಗೋತ್ರದ ಪ್ರಧಾನನಾದ ಪೆದಾಚೂರನ ಮಗ ಗಮಲಿಯೇಲನು ಅರ್ಪಿಸಿದನು. \li1 \v 55 ಅವನ ಅರ್ಪಣೆಯು ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 56 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 57 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ, \li2 \v 58 ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ, \li2 \v 59 ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. \li4 ಇದು ಪೆದಾಚೂರನ ಮಗ ಗಮಲಿಯೇಲನ ಅರ್ಪಣೆಯು. \b \li4 \v 60 ಒಂಬತ್ತನೆಯ ದಿನದಲ್ಲಿ ಬೆನ್ಯಾಮೀನನ ಗೋತ್ರದ ಪ್ರಧಾನನಾದ ಗಿದ್ಯೋನಿಯ ಮಗ ಅಬೀದಾನನು ಅರ್ಪಿಸಿದನು. \li1 \v 61 ಅವನ ಅರ್ಪಣೆಯು ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 62 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 63 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ, \li2 \v 64 ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ, \li2 \v 65 ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. \li4 ಇದು ಗಿದ್ಯೋನಿಯ ಮಗ ಅಬೀದಾನನ ಅರ್ಪಣೆಯು. \b \li4 \v 66 ಹತ್ತನೆಯ ದಿನದಲ್ಲಿ ದಾನನ ಗೋತ್ರದ ಪ್ರಧಾನವಾದ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಅರ್ಪಿಸಿದನು. \li1 \v 67 ಅವನ ಅರ್ಪಣೆಯು ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 68 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 69 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ, \li2 \v 70 ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ, \li2 \v 71 ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. \li4 ಇದು ಅಮ್ಮೀಷದ್ದೈಯನ ಮಗ ಅಹೀಗೆಜೆರನ ಅರ್ಪಣೆಯು. \b \li4 \v 72 ಹನ್ನೊಂದನೆಯ ದಿನದಲ್ಲಿ ಆಶೇರನ ಗೋತ್ರದ ಪ್ರಧಾನನಾದ ಒಕ್ರಾನನ ಮಗ ಪಗೀಯೇಲನು ಅರ್ಪಿಸಿದನು. \li1 \v 73 ಅವನ ಅರ್ಪಣೆಯು ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧಸ್ಥಳದ ಪ್ರಕಾರ 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. \li2 \v 74 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 75 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ, \li2 \v 76 ದೋಷಪರಿಹಾರಕ ಬಲಿಗಾಗಿ ಒಂದು ಹೋತ, \li2 \v 77 ಸಮಾಧಾನದ ಬಲಿಗಾಗಿ ಒಂದು ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. \li4 ಇದು ಒಕ್ರಾನನ ಮಗ ಪಗೀಯೇಲನ ಅರ್ಪಣೆಯು. \b \li4 \v 78 ಹನ್ನೆರಡನೆಯ ದಿನದಲ್ಲಿ ನಫ್ತಾಲಿಯ ಗೋತ್ರದ ಪ್ರಧಾನನಾದ ಏನಾನನ ಮಗ ಅಹೀರನು ಅರ್ಪಿಸಿದನು. \li1 \v 79 ಅವನ ಅರ್ಪಣೆಯು ಏನೆಂದರೆ: \li2 ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು, \li2 \v 80 ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ, \li2 \v 81 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ, \li2 \v 82 ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ, \li2 \v 83 ಸಮಾಧಾನದ ಸಮರ್ಪಣೆಯ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. \li4 ಇದು ಏನಾನನ ಮಗ ಅಹೀರನ ಅರ್ಪಣೆಯು. \b \li1 \v 84 ಇದು ಬಲಿಪೀಠದ ಪ್ರತಿಷ್ಠೆಗಾಗಿ ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು: \li2 ಬೆಳ್ಳಿಯ 12 ತಟ್ಟೆಗಳೂ, ಬೆಳ್ಳಿಯ 12 ಬಟ್ಟಲುಗಳೂ, ಬಂಗಾರದ 12 ಚಮಚಗಳೂ, \v 85 ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು 130 ಶೆಕೆಲ್, ಒಂದೊಂದು ಬಟ್ಟಲಿನ ತೂಕವು 70 ಶೆಕೆಲ್. ಬೆಳ್ಳಿಯ ಎಲ್ಲಾ ಸಾಮಗ್ರಿಗಳ ತೂಕ ಪರಿಶುದ್ಧಸ್ಥಳದ ನೇಮದ ಪ್ರಕಾರ 2,400 ಶೆಕೆಲ್\f + \fr 7:85 \fr*\ft ಸುಮಾರು 28 ಕಿಲೋಗ್ರಾಂ\ft*\f*. \v 86 ಧೂಪ ತುಂಬಿದ್ದ 12 ಬಂಗಾರದ ಚಮಚಗಳು, ಪರಿಶುದ್ಧಸ್ಥಳದ ಪ್ರಕಾರ ಒಂದೊಂದಕ್ಕೆ 10 ಚಮಚಗಳ ಬಂಗಾರವೆಲ್ಲಾ 120 ಶೆಕೆಲ್\f + \fr 7:86 \fr*\ft ಸುಮಾರು 1.4 ಕಿಲೋಗ್ರಾಂ\ft*\f*, \li2 \v 87 ದಹನಬಲಿಗಾಗಿ ಇರುವ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ ಕುರಿಮರಿಗಳು 12, ಅವುಗಳೊಂದಿಗೆ ಧಾನ್ಯ ಸಮರ್ಪಣೆ. ದೋಷಪರಿಹಾರಕ ಬಲಿಗಾಗಿ 12 ಹೋತಗಳು, \li2 \v 88 ಸಮಾಧಾನದ ಬಲಿಗಾಗಿರುವ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ ಗಂಡು ಕುರಿಮರಿಗಳು 60. \b \li4 ಅದನ್ನು ಅಭಿಷೇಕಿಸಿದ ತರುವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆ ಇದಾಗಿತ್ತು. \b \p \v 89 ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು. \c 8 \s1 ದೇವಾಲಯದ ದೀಪಗಳು \p \v 1 ಯೆಹೋವ ದೇವರು ಮೋಶೆಗೆ: \v 2 “ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.” \p \v 3 ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು. \v 4 ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು. \s1 ಲೇವಿಯರ ಶುದ್ಧೀಕರಣ \p \v 5 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, \v 6 “ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡು ಅವರನ್ನು ಪ್ರತ್ಯೇಕಿಸಿ ಶುದ್ಧಮಾಡು. \v 7 ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು. \v 8 ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ. \v 9 ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು. \v 10 ನೀನು ಲೇವಿಯರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕರೆತಂದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು. \v 11 ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು. \p \v 12 “ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು. \v 13 ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು. \v 14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು. \p \v 15 “ಅದರ ತರುವಾಯ ಲೇವಿಯರು ಸೇವೆ ಮಾಡವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸುವರು. ಆಗ ನೀನು ಅವರನ್ನು ಶುದ್ಧೀಮಾಡಿ, ನೈವೇದ್ಯದಂತೆ ಸಮರ್ಪಿಸಬೇಕು. \v 16 ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ. \v 17 ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು. \v 18 ಇಸ್ರಾಯೇಲರಲ್ಲಿರುವ ಎಲ್ಲಾ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನು ನಾನು ತೆಗೆದುಕೊಂಡೆನು. \v 19 ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.” \p \v 20 ಆಗ ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆಯೂ ಆರೋನನೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು. \v 21 ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು. \v 22 ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು. \p \v 23 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, \v 24 “ಲೇವಿಯರಿಗೆ ಸಂಬಂಧಪಟ್ಟದ್ದು ಇದಾಗಿದೆ: ಇಪ್ಪತ್ತೈದು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ದೇವದರ್ಶನದ ಗುಡಾರದ ಸೇವೆಗಾಗಿ ಒಳಗೆ ಸೇರಬೇಕು. \v 25 ಆದರೆ ಐವತ್ತು ವರ್ಷದವರಾದ ನಂತರ ಸೇವೆಯನ್ನು ಬಿಟ್ಟು ನಿವೃತ್ತರಾಗಬೇಕು ಮತ್ತು ತದನಂತರ ಕೆಲಸಮಾಡಬಾರದು. \v 26 ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು. \c 9 \s1 ಪಸ್ಕಹಬ್ಬ \p \v 1 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೀಗೆ ಹೇಳಿದರು: \v 2 “ಇಸ್ರಾಯೇಲರು ಪಸ್ಕವನ್ನು ನೇಮಿಸಿದ ಸಮಯದಲ್ಲಿ ಆಚರಿಸಬೇಕು. \v 3 ಈ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಅದನ್ನು ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರವಾಗಿಯೂ, ಅದರ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಿರಿ.” \p \v 4 ಆಗ ಮೋಶೆಯು ಪಸ್ಕವನ್ನು ಆಚರಿಸುವುದಕ್ಕೆ ಇಸ್ರಾಯೇಲರ ಸಂಗಡ ಮಾತನಾಡಿದನು. \v 5 ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಸ್ಕವನ್ನು ಆಚರಿಸಿದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ, ಇಸ್ರಾಯೇಲರು ಮಾಡಿದರು. \p \v 6 ಆದರೆ ಕೆಲವು ಜನರು ಮನುಷ್ಯನ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿವಸದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ ಅದಕ್ಕೆ ಅದೇ ದಿನ ಅವರು ಮೋಶೆ ಮತ್ತು ಆರೋನರ ಬಳಿಗೆ ಬಂದು \v 7 ಮೋಶೆಯ ಸಂಗಡ ಮಾತನಾಡಿ, “ನಾವು ಮನುಷ್ಯನ ಶವದ ಸೋಂಕಿನಿಂದ ಅಶುದ್ಧರಾಗಿದ್ದೇವೆ. ಆದ್ದರಿಂದ ನಾವು ಇಸ್ರಾಯೇಲರೊಡನೆ ನೇಮಕವಾದ ಸಮಯದಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಲು ನಮಗೆ ಏಕೆ ಅಡ್ಡಿಯಾಗಬೇಕು,” ಎಂದರು. \p \v 8 ಮೋಶೆ ಅವರಿಗೆ, “ಸ್ವಲ್ಪ ಕಾಯಿರಿ, ಯೆಹೋವ ದೇವರು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ನಾನು ಕೇಳುತ್ತೇನೆ,” ಎಂದನು. \p \v 9 ಯೆಹೋವ ದೇವರು ಮೋಶೆ ಸಂಗಡ ಮಾತನಾಡಿ ಅವನಿಗೆ, \v 10 ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು. \v 11 ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು. \v 12 ಅವರು ಅದರಿಂದ ಮರುದಿವಸಕ್ಕೆ ಏನನ್ನೂ ಉಳಿಸಬಾರದು. ಅದರಲ್ಲಿ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು, ಪಸ್ಕದ ಸಮಸ್ತ ಕಟ್ಟಳೆಗಳ ಪ್ರಕಾರವಾಗಿ ಅದನ್ನು ಆಚರಿಸಬೇಕು. \v 13 ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. \p \v 14 “ಪರದೇಶಿಯಾದವನು ನಿಮ್ಮ ಸಂಗಡ ಇದ್ದು, ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ, ಅದರ ಆಜ್ಞಾವಿಧಿಗಳ ಪ್ರಕಾರವೇ ಆಚರಿಸಲಿ. ಸ್ಥಳೀಯ ಮೂಲದ ಇಸ್ರಾಯೇಲರಿಗೂ ಮತ್ತು ನಿಮ್ಮ ನಡುವೆ ವಾಸಿಸುವ ಪರದೇಶಸ್ತನಿಗೂ ಒಂದೇ ನಿಯಮ ಇರಬೇಕು,” ಎಂದು ಹೇಳಿದರು. \s1 ಗುಡಾರದ ಮೇಲೆ ಅಗ್ನಿಮೇಘ \p \v 15 ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರವನ್ನು ಮುಚ್ಚಿತು. ಸಂಜೆಯಿಂದ ಮುಂಜಾನೆಯವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು. \v 16 ಈ ಪ್ರಕಾರ ಯಾವಾಗಲೂ, ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು. \v 17 ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು. \v 18 ಯೆಹೋವ ದೇವರ ಆಜ್ಞೆಯ ಪ್ರಕಾರ ಇಸ್ರಾಯೇಲರು ಪ್ರಯಾಣಮಾಡಿದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು. \v 19 ಮೇಘವು ದೇವದರ್ಶನದ ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ, ಇಸ್ರಾಯೇಲರು ಯೆಹೋವ ದೇವರ ಅಪ್ಪಣೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು. \v 20 ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ, ಅವರು ಯೆಹೋವ ದೇವರ ಆಜ್ಞೆಯ ಪ್ರಕಾರ ಇಳಿದುಕೊಳ್ಳುತ್ತಿದ್ದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು. \v 21 ಮೇಘವು ಸಂಜೆಯಿಂದ ಮುಂಜಾನೆಯವರೆಗೆ ಇದ್ದು, ಬೆಳಿಗ್ಗೆ ಮೇಲಕ್ಕೆ ಎದ್ದಾಗ, ಅವರು ಪ್ರಯಾಣ ಮಾಡುತ್ತಿದ್ದರು, ಹಗಲುರಾತ್ರಿ ಇದ್ದು ಮೇಘವು ಮೇಲಕ್ಕೇರಿದಾಗ ಅವರು ಪ್ರಯಾಣ ಮಾಡುತ್ತಿದ್ದರು. \v 22 ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು. \v 23 ಯೆಹೋವ ದೇವರ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಾ, ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಯೆಹೋವ ದೇವರ ಅಪ್ಪಣೆಯನ್ನು ಕೈಗೊಳ್ಳುತ್ತಿದ್ದರು. \c 10 \s1 ಬೆಳ್ಳಿಯ ತುತೂರಿಗಳು \p \v 1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದು: \v 2 “ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. \v 3 ಅವುಗಳನ್ನು ಊದುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು. \v 4 ಒಂದನ್ನು ಮಾತ್ರ ಊದುವಾಗ, ಇಸ್ರಾಯೇಲರಲ್ಲಿ ಮುಖ್ಯಸ್ಥರಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು. \v 5 ನೀವು ಜಯಧ್ವನಿಯಂತೆ ಊದುವಾಗ ಪೂರ್ವದಲ್ಲಿ ಇಳಿದುಕೊಳ್ಳುವ ಪಾಳೆಯಗಳು ಮುಂದೆ ಹೊರಡಬೇಕು. \v 6 ನೀವು ಎರಡನೆಯ ಸಾರಿ ಆರ್ಭಟವಾಗಿ ಊದುವಾಗ, ದಕ್ಷಿಣದಲ್ಲಿ ಇಳಿದುಕೊಳ್ಳುವ ಪಾಳೆಯಗಳು ಪ್ರಯಾಣ ಮಾಡಬೇಕು. ಅವರ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿ ಊದಬೇಕು. \v 7 ಆದರೆ ಸಭೆಯನ್ನು ಕೂಡಿಸುವಾಗ ನೀವು ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬೇಡಿರಿ. \p \v 8 “ಯಾಜಕರಾಗಿರುವ ಆರೋನನ ಪುತ್ರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. \v 9 ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರವಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ಜನರನ್ನು ಎಚ್ಚರಿಸುವಂತೆ ತುತೂರಿಗಳನ್ನು ಆರ್ಭಟವಾಗಿ ಊದಬೇಕು. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನೆನಪು ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ಬಿಡಿಸುವನು. \v 10 ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.” \s1 ಇಸ್ರಾಯೇಲರು ಸೀನಾಯಿಯಿಂದ ಮುಂದೆ ಹೋದದ್ದು \p \v 11 ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎದ್ದಿತು. \v 12 ಆಗ ಇಸ್ರಾಯೇಲರು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಮರುಭೂಮಿಯಿಂದ ಪ್ರಯಾಣಮಾಡಿದರು. ಮೇಘವು ಪಾರಾನ್ ಎಂಬ ಮರುಭೂಮಿಯಲ್ಲಿ ಇಳಿಯಿತು. \v 13 ಆಗ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಪ್ರಯಾಣಮಾಡಿದ್ದು ಇದು ಮೊದಲನೇ ಸಾರಿ. \p \v 14 ಯೆಹೂದನ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀನಾದಾಬನ ಮಗ ನಹಶೋನನು ಇದ್ದನು. \v 15 ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗ ನೆತನೆಯೇಲ್ ಇದ್ದನು. \v 16 ಜೆಬುಲೂನನ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗ ಎಲೀಯಾಬನು ಇದ್ದನು. \v 17 ಆಗ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ, ಮೆರಾರೀಯರೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು. \p \v 18 ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಶೆದೇಯೂರನ ಮಗ ಎಲೀಚೂರನು ಇದ್ದನು. \v 19 ಸಿಮೆಯೋನನ ಗೋತ್ರದ ಸೈನ್ಯದ ಮೇಲೆ ಚುರೀಷದ್ದೈಯನ ಮಗ ಶೆಲುಮೀಯೇಲನು ಇದ್ದನು. \v 20 ಗಾದನ ಗೋತ್ರದ ಸೈನ್ಯದ ಮೇಲೆ ದೆವುಯೇಲನ ಮಗ ಎಲ್ಯಾಸಾಫನು ಇದ್ದನು. \v 21 ಅವರ ಹಿಂದೆ ಪರಿಶುದ್ಧ ವಸ್ತುಗಳನ್ನು ಹೊರುವ ಕೊಹಾತ್ಯರು ಹೊರಟರು. ಇವರು ಬರುವಷ್ಟರೊಳಗೆ ಉಳಿದ ಲೇವಿಯರು ಗುಡಾರವನ್ನು ನಿಲ್ಲಿಸಿದರು. \p \v 22 ಎಫ್ರಾಯೀಮನ ಪಾಳೆಯದ ಧ್ವಜವು ಅವನ ಸೈನ್ಯಗಳ ಪ್ರಕಾರ ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀಹೂದನ ಮಗ ಎಲೀಷಾಮನು ಇದ್ದನು. \v 23 ಮನಸ್ಸೆಯ ಗೋತ್ರದ ಮೇಲೆ ಪೆದಾಚೂರನ ಮಗ ಗಮಲಿಯೇಲನು ಇದ್ದನು. \v 24 ಬೆನ್ಯಾಮೀನನ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗ ಅಬೀದಾನನು ಇದ್ದನು. \p \v 25 ದಾನನ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಇದ್ದನು. \v 26 ಆಶೇರನ ಗೋತ್ರದ ಸೈನ್ಯಗಳ ಮೇಲೆ ಒಕ್ರಾನನ ಮಗ ಪಗೀಯೇಲನು ಇದ್ದನು. \v 27 ನಫ್ತಾಲಿಯ ಗೋತ್ರದ ಸೈನ್ಯದ ಮೇಲೆ ಏನಾನ ಮಗ ಅಹೀರನು ಇದ್ದನು. \v 28 ಈ ಪ್ರಕಾರ ಇಸ್ರಾಯೇಲರು ತಮ್ಮ ಗೋತ್ರಗಳ ಪ್ರಕಾರ ಪ್ರಯಾಣವಾಗಿ ಹೊರಟರು. \p \v 29 ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು. \p \v 30 ಆಗ ಅವನು ಅವನಿಗೆ, “ನಾನು ಬರುವುದಿಲ್ಲ. ನನ್ನ ದೇಶಕ್ಕೂ ನನ್ನ ಬಂಧುಗಳ ಬಳಿಗೂ ನಾನು ಹೋಗುತ್ತೇನೆ,” ಎಂದನು. \p \v 31 ಅದಕ್ಕೆ ಮೋಶೆ, “ನಮ್ಮನ್ನು ಬಿಡಬೇಡ. ಏಕೆಂದರೆ ನಾವು ಎಲ್ಲಿ ಇಳಿದುಕೊಳ್ಳಬೇಕೆಂಬುದು ನಿನಗೆ ಮಾತ್ರ ತಿಳಿದಿದೆ. ನೀನು ನಮಗೆ ಕಣ್ಣುಗಳಾಗಿರುವೆ. \v 32 ನೀನು ನಮ್ಮ ಸಂಗಡ ಬಂದರೆ ಯೆಹೋವ ದೇವರು ನಮಗೆ ಕೊಡುವುದಕ್ಕಿರುವ ಒಳ್ಳೆಯದನ್ನು ನಾವು ನಿನ್ನೊಂದಿಗೆ ಹಂಚಿಕೊಳ್ಳುವೆವು,” ಎಂದನು. \p \v 33 ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು. \v 34 ಅವರು ಪಾಳೆಯದಿಂದ ಹೊರಟಾಗ, ಯೆಹೋವ ದೇವರ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು. \p \v 35 ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, \q1 “ಯೆಹೋವ ದೇವರೇ, ಎದ್ದೇಳಿರಿ, \q2 ನಿಮ್ಮ ಶತ್ರುಗಳು ಚದರಿಹೋಗಲಿ. \q2 ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.” \p \v 36 ಮಂಜೂಷವು ನಿಂತಾಗ ಅವನು ಹೀಗೆ ಹೇಳುತ್ತಿದ್ದನು, \q1 “ಯೆಹೋವ ದೇವರೇ, \q2 ಸಾವಿರಾರು ಇಸ್ರಾಯೇಲರ ಕುಟುಂಬಗಳ ಬಳಿಗೆ ಹಿಂದಿರುಗು.” \c 11 \s1 ಯೆಹೋವ ದೇವರಿಂದ ಬೆಂಕಿ \p \v 1 ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು. \v 2 ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ, ಮೋಶೆಯು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು ಆಗ ಬೆಂಕಿಯು ಆರಿಹೋಯಿತು. \v 3 ಯೆಹೋವ ದೇವರು ಹತ್ತಿಸಿದ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ\f + \fr 11:3 \fr*\fq ತಬೇರ \fq*\ft ಅರ್ಥ \ft*\fqa ಬೆಂಕಿಯಿಂದ ಉರಿಯುವ\fqa*\f* ಎಂದು ಹೆಸರಿಟ್ಟರು. \s1 ಯೆಹೋವ ದೇವರಿಂದ ಲಾವಕ್ಕಿಗಳು \p \v 4 ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು? \v 5 ನಾವು ಈಜಿಪ್ಟ್ ದೇಶದಲ್ಲಿ ಉಚಿತವಾಗಿ ತಿಂದ ಮೀನನ್ನೂ ಸವತೆ ಕಾಯಿಯನ್ನೂ ಕರ್ಬೂಜಗಳನ್ನೂ ನೀರುಳ್ಳಿ ಈರುಳ್ಳಿ ಬೆಳ್ಳುಳ್ಳಿಗಳನ್ನೂ ಜ್ಞಾಪಿಸಿಕೊಳ್ಳುತ್ತೇವೆ. \v 6 ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು, ಈ ಮನ್ನವಲ್ಲದೆ ಬೇರೆ ಯಾವುದೂ ನಮ್ಮ ಕಣ್ಣುಗಳ ಮುಂದೆ ಇರುವುದಿಲ್ಲ,” ಎಂದರು. \p \v 7 ಆ ಮನ್ನವು ಕೊತ್ತಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸಿತು. \v 8 ಜನರು ಹೊರಗೆ ಹೋಗಿ ಅದನ್ನು ಕೂಡಿಸಿ, ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ, ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡುತ್ತಿದ್ದರು. ಅದರ ರುಚಿಯು ಓಲಿವ್ ಎಣ್ಣೆಯಿಂದ ಮಾಡಿದ ರೊಟ್ಟಿಯಹಾಗೆ ಇತ್ತು. \v 9 ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುವಾಗ ಅದರೊಂದಿಗೆ ಮನ್ನವು ಬೀಳುತ್ತಿತ್ತು. \p \v 10 ಆಗ ಪ್ರತಿಯೊಂದು ಕುಟುಂಬದ ಜನರು ತಮ್ಮ ಗುಡಾರದ ಬಾಗಿಲಿನಲ್ಲಿ ನಿಂತು ಅಳುವುದನ್ನು ಮೋಶೆ ಕೇಳಿದನು. ಯೆಹೋವ ದೇವರು ಬಹಳ ಕೋಪಗೊಂಡರು. ಮೋಶೆ ಗಲಿಬಿಲಿಗೊಂಡನು. \v 11 ಮೋಶೆಯು ಯೆಹೋವ ದೇವರಿಗೆ, “ಈ ಎಲ್ಲಾ ಜನರ ಭಾರವನ್ನು ನನ್ನ ಮೇಲೆ ಹೊರಿಸಿ ನೀವು ಏಕೆ ತೊಂದರೆಯನ್ನು ನಿಮ್ಮ ಸೇವಕನ ಮೇಲೆ ತಂದಿದ್ದೀರಿ? ನಿಮ್ಮನ್ನು ಅತೃಪ್ತಿಗೊಳಿಸಲು ನಾನೇನು ಮಾಡಿದ್ದೇನೆ? \v 12 ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ? \v 13 ಈ ಸಮಸ್ತ ಜನರಿಗೆ ಕೊಡುವುದಕ್ಕೆ ಮಾಂಸವು ನನಗೆ ಎಲ್ಲಿಂದ ದೊರಕುವುದು? ‘ನಮಗೆ ತಿನ್ನಲು ಮಾಂಸವನ್ನು ಕೊಡು,’ ಎಂದು ನನ್ನ ಬಳಿಗೆ ಬಂದು ಅಳುತ್ತಿದ್ದಾರೆ. \v 14 ನಾನು ಒಬ್ಬೊಂಟಿಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವುದಕ್ಕೆ ಶಕ್ತನಲ್ಲ. ಅದು ನನಗೆ ಅತಿದೊಡ್ಡ ಭಾರವಾಗಿದೆ. \v 15 ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು. \p \v 16 ಯೆಹೋವ ದೇವರು ಮೋಶೆಗೆ, “ಜನರ ನಾಯಕರೆಂದೂ, ಹಿರಿಯರೆಂದೂ, ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂತಹ ಇಸ್ರಾಯೇಲರ ಹಿರಿಯರೊಳಗಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ, ಅವರನ್ನು ದೇವದರ್ಶನದ ಗುಡಾರದ ಕಡೆಗೆ ಕರೆದುಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ. \v 17 ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು. \p \v 18 ಜನರಿಗೆ ನೀನು, “ ‘ನಾಳೆಗಾಗಿ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ. ನಮಗೆ ಯಾವನು ಮಾಂಸವನ್ನು ತಿನ್ನುವುದಕ್ಕೆ ಕೊಡುವನು? ಈಜಿಪ್ಟ್ ದೇಶದಲ್ಲಿ ನಮಗೆ ಒಳ್ಳೆಯದು ಇತ್ತು,’ ಎಂದು ಹೇಳಿ, ಯೆಹೋವ ದೇವರು ಕೇಳುವಂತೆ ಅತ್ತಿರಿ. ಆದಕಾರಣ ಯೆಹೋವ ದೇವರು ನಿಮಗೆ ತಿನ್ನುವುದಕ್ಕೆ ಮಾಂಸವನ್ನು ಕೊಡುವನು ಮತ್ತು ನೀವು ಅದನ್ನು ತಿನ್ನುವಿರಿ. \v 19 ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ. \v 20 ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು. \p \v 21 ಆದರೆ ಮೋಶೆಯು, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಅವರು ಒಂದು ತಿಂಗಳು ಪೂರ್ತಿ ತಿನ್ನುವ ಹಾಗೆ, ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀವು ಹೇಳಿದ್ದೀರಿ. \v 22 ಅವರಿಗೆ ಸಾಕಾಗುವ ಹಾಗೆ ಕುರಿದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ಮೀನುಗಳನ್ನೆಲ್ಲಾ ಕೂಡಿಸಿ ತರಬೇಕೋ?” ಎಂದು ಕೇಳಿದನು. \p \v 23 ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಎಂದು ನೀನು ನೋಡುವೆ,” ಎಂದರು. \p \v 24 ಆಗ ಮೋಶೆ ಹೋಗಿ ಯೆಹೋವ ದೇವರ ಮಾತುಗಳನ್ನು ಜನರಿಗೆ ಹೇಳಿ, ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ, ಗುಡಾರದ ಸುತ್ತಲೂ ನಿಲ್ಲಿಸಿದನು. \v 25 ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ. \p \v 26 ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್. ಮತ್ತೊಬ್ಬನ ಹೆಸರು ಮೇದಾದ್. ಇವರು ನಾಯಕರ ಪಟ್ಟಿಯಲ್ಲಿದ್ದವರಾಗಿದ್ದರು. ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಗುಡಾರಕ್ಕೆ ಹೊರಟು ಹೋಗದೆ, ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು. \v 27 ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ, “ಎಲ್ದಾದನೂ, ಮೇದಾದನೂ ಪಾಳೆಯದಲ್ಲಿ ಪ್ರವಾದಿಸುತ್ತಾರೆ,” ಎಂದನು. \p \v 28 ಅದಕ್ಕೆ ಯೌವನಸ್ಥರಲ್ಲಿ ಒಬ್ಬನೂ, ಮೋಶೆಯ ಸೇವಕನೂ ಆಗಿದ್ದ ನೂನನ ಮಗ ಯೆಹೋಶುವನು, “ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ,” ಎಂದನು. \p \v 29 ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು. \v 30 ಆಗ ಮೋಶೆಯೂ, ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು. \p \v 31 ಯೆಹೋವ ದೇವರ ಕಡೆಯಿಂದ ಒಂದು ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು, ಪಾಳೆಯದ ಸುತ್ತಲೂ ಈ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು, ಆ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು. \v 32 ಜನರು ಆ ದಿನವೆಲ್ಲಾ, ಆ ರಾತ್ರಿಯೆಲ್ಲಾ, ಮರು ದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಸಾವಿರ ಕಿಲೋಗ್ರಾಮಿನಷ್ಟು ಕೂಡಿಸಿದನು. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು. \v 33 ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ, ಅದನ್ನು ಅಗಿಯುವುದಕ್ಕಿಂತ ಮುಂಚೆ ಯೆಹೋವ ದೇವರು ಜನರನ್ನು ಘೋರ ವ್ಯಾಧಿಯಿಂದ ಸಾಯಿಸಿದನು. \v 34 ಆಶೆ ಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವ\f + \fr 11:34 \fr*\fq ಕಿಬ್ರೋತ್ ಹತಾವ \fq*\ft ಅರ್ಥ \ft*\fqa ಕಡುಬಯಕೆಯ ಸಮಾಧಿಗಳು\fqa*\f* ಎಂದು ಹೆಸರಾಯಿತು. \p \v 35 ತರುವಾಯ ಜನರು ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿಗೆ ಪ್ರಯಾಣಮಾಡಿ ಬಂದು, ಅಲ್ಲಿ ಇಳಿದುಕೊಂಡರು. \c 12 \s1 ಮಿರ್ಯಾಮಳು ಮತ್ತು ಆರೋನ್ ಮೋಶೆಯನ್ನು ವಿರೋಧಿಸಿದ್ದು \p \v 1 ಮೋಶೆಯು ಕೂಷ್ ದೇಶದ ಸ್ತ್ರೀಯನ್ನು ವಿವಾಹವಾಗಿದ್ದನು. ಆಕೆಯ ನಿಮಿತ್ತವಾಗಿ ಮಿರ್ಯಾಮಳೂ ಆರೋನನೂ ಮೋಶೆಗೆ ವಿರುದ್ಧವಾಗಿ ಮಾತನಾಡಲಿಕ್ಕೆ ಪ್ರಾರಂಭಿಸಿದರು. \v 2 ಅವರು, “ಯೆಹೋವ ದೇವರು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?” ಎಂದರು. ಅವರು ಆಡಿದ ಮಾತು ಯೆಹೋವ ದೇವರಿಗೆ ಕೇಳಿಸಿತು. \p \v 3 ಆದರೆ ಮೋಶೆ ಎಂಬವನು ಭೂಲೋಕದಲ್ಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ದೀನನಾಗಿದ್ದನು. \p \v 4 ಯೆಹೋವ ದೇವರು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ, “ನೀವು ಮೂವರು ಹೊರಗೆ ದೇವದರ್ಶನ ಗುಡಾರದ ಸಮೀಪಕ್ಕೆ ಬನ್ನಿರಿ,” ಎಂದರು. ಆಗ ಆ ಮೂವರೂ ಹೊರಗೆ ಬಂದರು. \v 5 ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು. \v 6 ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: \q1 “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ \q2 ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, \q2 ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು. \q1 \v 7 ಆದರೆ ನನ್ನ ಸೇವಕನಾದ ಮೋಶೆಯು ಹಾಗಲ್ಲ. \q2 ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ. \q1 \v 8 ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ \q2 ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. \q2 ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. \q1 ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ \q2 ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” \p \v 9 ಆಗ ಯೆಹೋವ ದೇವರು ಅವರ ಮೇಲೆ ಕೋಪಗೊಂಡು ಹೊರಟು ಹೋದರು. \p \v 10 ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು. ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ, ಇಗೋ, ಅವಳು ಕುಷ್ಠರೋಗಿಯಾಗಿದ್ದಳು. \v 11 ಆರೋನನು ಮೋಶೆಗೆ, “ಅಯ್ಯೋ ನನ್ನ ಒಡೆಯನೇ, ನಾವು ಪಾಪಮಾಡಿದೆವು. ಬುದ್ಧಿ ಇಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ. \v 12 ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತು ಹೋದ ಶಿಶುವಿನ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು. \p \v 13 ಮೋಶೆಯು ಯೆಹೋವ ದೇವರಿಗೆ, “ದೇವರೇ, ಅವಳನ್ನು ಈಗ ಗುಣಪಡಿಸು, ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು. \p \v 14 ಆಗ ಯೆಹೋವ ದೇವರು ಮೋಶೆಗೆ, “ಆಕೆಯ ತಂದೆ ಅವಳ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗಿರುವುದಿಲ್ಲವೇ? ಹಾಗಾದರೆ ಆಕೆಯು ಏಳು ದಿವಸ ಪಾಳೆಯದ ಹೊರಗೆ ಇರಲಿ, ತರುವಾಯ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದರು. \v 15 ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿ ಇಟ್ಟರು. ಮಿರ್ಯಾಮಳು ತಿರುಗಿ ಒಳಗೆ ಬರುವವರೆಗೆ ಜನರು ಪ್ರಯಾಣ ಮಾಡಲಿಲ್ಲ. \p \v 16 ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು. \c 13 \s1 ಕಾನಾನಿಗೆ ಗೂಢಚಾರರು \p \v 1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 2 “ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಜನರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು,” ಎಂದರು. \p \v 3 ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಪಾರಾನ್ ಮರುಭೂಮಿಯಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾಯೇಲರ ಮುಖ್ಯಸ್ಥರಾಗಿದ್ದರು. \b \li4 \v 4 ಅವರ ಹೆಸರುಗಳು ಯಾವುವೆಂದರೆ: \b \li1 ರೂಬೇನನ ಗೋತ್ರದ ಜಕ್ಕೂರನ ಮಗ ಶಮ್ಮೂವ, \li1 \v 5 ಸಿಮೆಯೋನ್ ಗೋತ್ರದ ಹೋರಿಯನ ಮಗ ಶಾಫಾಟನು, \li1 \v 6 ಯೆಹೂದ ಗೋತ್ರದ ಯೆಫುನ್ನೆಯ ಮಗ ಕಾಲೇಬನು, \li1 \v 7 ಇಸ್ಸಾಕಾರ್ ಗೋತ್ರದ ಯೋಸೇಫನ ಮಗ ಇಗಾಲ್, \li1 \v 8 ಎಫ್ರಾಯೀಮ್ ಗೋತ್ರದ ನೂನನ ಮಗ ಹೋಶೇಯ, \li1 \v 9 ಬೆನ್ಯಾಮೀನ್ ಗೋತ್ರದ ರಾಫೂವನ ಮಗ ಪಲ್ಟೀ, \li1 \v 10 ಜೆಬುಲೂನ್ ಗೋತ್ರದ ಸೋದೀಯ ಮಗ ಗದ್ದೀಯೇಲ್, \li1 \v 11 ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗ ಗದ್ದೀ, \li1 \v 12 ದಾನನ ಗೋತ್ರದ ಗೆಮಲ್ಲೀಯನ ಮಗ ಅಮ್ಮಿಯೇಲ್, \li1 \v 13 ಆಶೇರ್ ಗೋತ್ರದ ಮೀಕಾಯೇಲನ ಮಗ ಸೆತೂರ್, \li1 \v 14 ನಫ್ತಾಲಿ ಗೋತ್ರದ ವಾಪೆಸೀಯನ ಮಗ ನಹಬೀ. \li1 \v 15 ಗಾದನ ಗೋತ್ರದ ಮಾಕೀಯನ ಮಗ ಗೆಯೂಯೇಲ್. \b \li4 \v 16 ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು. \b \p \v 17 ಮೋಶೆ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ನೆಗೆವ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ, \v 18 ಆ ದೇಶವು ಎಂಥಾದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳವರೋ, ಬಲಹೀನರೋ? ಸ್ವಲ್ಪ ಜನರೋ, ಬಹಳ ಜನರೋ? ಎಂದೂ, \v 19 ಅವರು ವಾಸಿಸುವ ದೇಶವು ಎಂಥಾದ್ದೋ? ಅದು ಒಳ್ಳೆಯದಾಗಿದೆಯೋ, ಕೆಟ್ಟದ್ದಾಗಿದೆಯೋ? ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ? ಅವರು ವಾಸಿಸುವುದು ಡೇರೆಗಳಲ್ಲಿಯೋ, ಬಲವಾದ ಕೋಟೆಗಳಲ್ಲಿಯೋ? ಎಂದೂ, \v 20 ಆ ಭೂಮಿಯು ಎಂಥಾದ್ದೋ? ಸಾರವಾದದ್ದೋ? ನಿಸ್ಸಾರವಾದದ್ದೋ? ಮರಗಳುಳ್ಳದ್ದೋ? ಇಲ್ಲದಿರುವುದೋ? ಎಂದು ನೋಡಿರಿ. ನೀವು ಧೈರ್ಯವುಳ್ಳವರಾಗಿದ್ದು, ಆ ಭೂಮಿಯ ಫಲವನ್ನು ತರಬೇಕು,” ಎಂದನು. ಆ ಕಾಲವು ಪ್ರಥಮ ದ್ರಾಕ್ಷಿ ಹಣ್ಣುಗಳ ಕಾಲವಾಗಿತ್ತು. \p \v 21 ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು. \v 22 ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು. \v 23 ಅವರು ಎಷ್ಕೋಲ್ ಹಳ್ಳದವರೆಗೂ ಬಂದು, ಅಲ್ಲಿ ದ್ರಾಕ್ಷಿ ಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು, ಅದನ್ನು ಅಡ್ಡ ಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು. ಇದಲ್ಲದೆ ದಾಳಿಂಬೆ, ಅಂಜೂರ ಹಣ್ಣುಗಳನ್ನು ತೆಗೆದುಕೊಂಡು ಹೋದರು. \v 24 ಇಸ್ರಾಯೇಲರು ಅಲ್ಲಿ ದ್ರಾಕ್ಷಿ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು. \v 25 ಅವರು ದೇಶವನ್ನು ಸಂಚರಿಸಿ ನೋಡಿ, ನಲವತ್ತು ದಿವಸಗಳಾದ ಮೇಲೆ ತಿರುಗಿ ಬಂದರು. \s1 ಕಾನಾನ್ ದೇಶದ ಕುರಿತು ವರದಿ \p \v 26 ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು. \v 27 ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ. ಅದರ ಫಲವು ಇವೇ. \v 28 ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು. ಪಟ್ಟಣಗಳು ಭದ್ರವಾಗಿಯೂ, ಬಹಳ ದೊಡ್ಡದಾಗಿಯೂ ಇವೆ. ಅನಾಕನ ಮಕ್ಕಳನ್ನು ನಾವು ಅಲ್ಲಿ ಕಂಡೆವು. \v 29 ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು. \p \v 30 ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು. \p \v 31 ಆದರೆ ಅವನ ಸಂಗಡ ಹೋದ ಜನರು, “ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ,” ಎಂದರು. \v 32 ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು. \v 33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ\f + \fr 13:33 \fr*\fq ನೆಫೀಲಿಯ \fq*\ft ಎಂದರೆ \ft*\fqa ಅನಾಕ್ ವಂಶ\fqa*\f* ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು. \c 14 \s1 ಜನರ ದಂಗೆ \p \v 1 ಆಗ ಜನರೆಲ್ಲರೂ ತಮ್ಮ ಸ್ವರವೆತ್ತಿ ಆ ರಾತ್ರಿಯೆಲ್ಲಾ ಅತ್ತರು. \v 2 ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು. \v 3 ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ? \v 4 ನಾವು ನಾಯಕನನ್ನು ನೇಮಿಸಿಕೊಂಡು ಈಜಿಪ್ಟ್ ದೇಶಕ್ಕೆ ಹಿಂದಿರುಗೋಣ ಬನ್ನಿರಿ,” ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು. \p \v 5 ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು. \v 6 ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು, \v 7 ಇಸ್ರಾಯೇಲರ ಸಮಸ್ತ ಜನಸಮೂಹಕ್ಕೆ, “ಸಂಚರಿಸಿ ನೋಡುವುದಕ್ಕೆ ನಾವು ದಾಟಿಹೋದ ದೇಶವು ಅತ್ಯುತ್ತಮವಾದ ದೇಶವೇ. \v 8 ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು. \v 9 ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು. \p \v 10 ಆಗ ಸಭೆಯವರೆಲ್ಲರೂ ಅವರಿಗೆ ಕಲ್ಲೆಸೆಯಬೇಕೆಂದಿದ್ದರು. ಯೆಹೋವ ದೇವರ ಮಹಿಮೆಯು ದೇವದರ್ಶನ ಗುಡಾರದಲ್ಲಿ ಇಸ್ರಾಯೇಲರಿಗೆಲ್ಲಾ ಪ್ರತ್ಯಕ್ಷವಾಯಿತು. \v 11 ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು? \v 12 ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು. \p \v 13 ಆಗ ಮೋಶೆ ಯೆಹೋವ ದೇವರಿಗೆ, “ಹಾಗಾದರೆ ಈ ಸುದ್ದಿಯನ್ನು ಈಜಿಪ್ಟಿನವರು ಕೇಳುವರು. ನೀವು ಅವರಿಂದ ಈ ಜನರನ್ನು ನಿಮ್ಮ ಶಕ್ತಿಯಿಂದ ಬರಮಾಡಿದೆಯಲ್ಲಾ! \v 14 ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ. \v 15 ಈಗ ನೀವು ಈ ಜನರನ್ನೆಲ್ಲಾ ಕೊಂದುಹಾಕಿದರೆ, ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳು ನಿಮ್ಮ ವಿಷಯದಲ್ಲಿ, \v 16 ಯೆಹೋವ ದೇವರು ಈ ಜನರನ್ನು ಅವರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶಕ್ಕೆ ತರಲಾರದ ಕಾರಣ ಅವರನ್ನು ಮರುಭೂಮಿಯಲ್ಲಿ ಕೊಂದುಹಾಕಿದರು,” ಎಂದು ಹೇಳುವರು. \p \v 17 “ಈಗ ನೀವು ಹೇಳಿದ ಪ್ರಕಾರ ಯೆಹೋವ ದೇವರ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ. \v 18 ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ? \v 19 ನಿಮ್ಮ ಪ್ರೀತಿಯು ದೊಡ್ಡದಾಗಿರುವ ಪ್ರಕಾರವೂ ನೀವು ಈಜಿಪ್ಟಿನಿಂದ ಇಲ್ಲಿಯವರೆಗೆ ಈ ಜನರ ಪಾಪಗಳನ್ನು ಮನ್ನಿಸಿದ ಪ್ರಕಾರ ಈಗಲೂ ಈ ಜನರ ಪಾಪವನ್ನು ಮನ್ನಿಸಿರಿ,” ಎಂದು ಬೇಡಿಕೊಂಡನು. \p \v 20 ಆಗ ಯೆಹೋವ ದೇವರು, “ನಿನ್ನ ಮಾತಿನ ಪ್ರಕಾರ ಮನ್ನಿಸಿದ್ದೇನೆ. \v 21 ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು. \v 22 ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ, \v 23 ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವುದಿಲ್ಲ, ನನ್ನನ್ನು ಅಲಕ್ಷ್ಯ ಮಾಡಿದವರೆಲ್ಲರೂ ಅದನ್ನು ನೋಡುವುದಿಲ್ಲ. \v 24 ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು. \v 25 ಅಮಾಲೇಕ್ಯರೂ, ಕಾನಾನ್ಯರೂ ತಗ್ಗಿನಲ್ಲಿ ವಾಸ ಮಾಡುತ್ತಿರುವುದರಿಂದ ನಾಳೆ ನೀವು ತಿರುಗಿಕೊಂಡು, ಕೆಂಪುಸಮುದ್ರದ ಮಾರ್ಗವಾಗಿ ಮರುಭೂಮಿಗೆ ಹೊರಡಿರಿ,” ಎಂದರು. \p \v 26 ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ, \v 27 “ಈ ದುಷ್ಟಜನರು ನನಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ಎಷ್ಟು ಕಾಲ ಸಹಿಸಲಿ? ಇಸ್ರಾಯೇಲರು ನನಗೆ ವಿರೋಧವಾಗಿ ಗೊಣಗುಟ್ಟಿದ್ದನ್ನು ನಾನು ಕೇಳಿದ್ದೇನೆ. \v 28 ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. \v 29 ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ. \v 30 ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ. \v 31 ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು. \v 32 ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಮರುಭೂಮಿಯಲ್ಲಿ ಬೀಳುವುವು. \v 33 ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ. \v 34 ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ. \v 35 ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು. \p \v 36 ದೇಶವನ್ನು ಪರೀಕ್ಷಿಸುವುದಕ್ಕೆ ಮೋಶೆಯ ಅಪ್ಪಣೆಯ ಮೇರೆಗೆ ಹಿಂದಿರುಗಿ, ಆ ದೇಶದ ವಿಷಯವಾಗಿ ಕೆಟ್ಟ ಸುದ್ದಿಯನ್ನು ಎಬ್ಬಿಸಿ, ಸಮಸ್ತ ಸಭೆಯನ್ನು ಮೋಶೆಗೆ ವಿರೋಧವಾಗಿ ಗೊಣಗುಟ್ಟುವಂತೆ ಮಾಡಿದರು. \v 37 ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವ ದೇವರ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು. \v 38 ಆದರೆ ದೇಶವನ್ನು ಪರೀಕ್ಷಿಸುವುದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ಉಳಿದರು. \p \v 39 ಮೋಶೆಯು ಇಸ್ರಾಯೇಲರಿಗೆ ಈ ಮಾತುಗಳನ್ನು ಹೇಳಿದಾಗ, ಜನರು ಬಹಳವಾಗಿ ದುಃಖಪಟ್ಟರು. \v 40 ಮರುದಿವಸ ಬೆಳಿಗ್ಗೆ ಅವರು ಎದ್ದು, ಬೆಟ್ಟದ ತುದಿಯ ಮೇಲಕ್ಕೆ ಏರಿ, “ಇಗೋ, ಯೆಹೋವ ದೇವರು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವುದಕ್ಕೆ ಇದ್ದೇವೆ. ನಾವು ಪಾಪಮಾಡಿದ್ದೇವೆ,” ಎಂದರು. \p \v 41 ಆಗ ಮೋಶೆಯು, “ನೀವು ಏಕೆ ಹೀಗೆ ಯೆಹೋವ ದೇವರ ಆಜ್ಞೆಯನ್ನು ಮೀರುತ್ತೀರಿ? ಅದು ಸಫಲವಾಗುವುದಿಲ್ಲ. \v 42 ಯೆಹೋವ ದೇವರು ನಿಮ್ಮ ಸಂಗಡ ಇಲ್ಲ ಅದಕ್ಕಾಗಿ ನಿಮ್ಮ ಶತ್ರುಗಳು ನಿಮ್ಮನ್ನು ಪರಾಜಯಗೊಳಿಸದಂತೆ ಏರಿ ಹೋಗಬೇಡಿರಿ. \v 43 ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು. \p \v 44 ಆದರೆ ಅವರು ಹಟಮಾಡಿ, ಬೆಟ್ಟದ ತುದಿಯ ಮೇಲೆ ಏರಿಹೋದರು. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ. \v 45 ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ\f + \fr 14:45 \fr*\fq ಹೊರ್ಮಾ \fq*\ft ಎಂದರೆ \ft*\fqa ವಿನಾಶ\fqa*\f* ಅಟ್ಟಿಬಿಟ್ಟರು. \c 15 \s1 ವಿವಿಧ ಸಮರ್ಪಣೆಗಳು \p \v 1 ಯೆಹೋವ ದೇವರು ಮೋಶೆಗೆ, \v 2 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ, \v 3 ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ. \v 4 ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ\f + \fr 15:4 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಎಫಾದ ಹತ್ತನೇ ಒಂದು ಭಾಗ, \fqa*\ft ಅಂದರೆ ಸುಮಾರು 1.6 ಕಿಲೋಗ್ರಾಂ\ft*\f* ಗೋಧಿ ಹಿಟ್ಟನ್ನು ಒಂದು ಲೀಟರ್\f + \fr 15:4 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಹಿನ್‌ನ ಕಾಲುಭಾಗ, \fqa*\ft ಅಂದರೆ ಸುಮಾರು 1 ಲೀಟರ್\ft*\f* ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ. \v 5 ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡ ಒಂದು ಕುರಿಗೋಸ್ಕರ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು. \p \v 6 “ ‘ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯ ಅರ್ಪಣೆಗಾಗಿ ಸುಮಾರು ಒಂದೂವರೆ ಲೀಟರ್\f + \fr 15:6 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಹಿನ್‌ನ ಮೂರನೇ ಒಂದು ಭಾಗ, \fqa*\ft ಅಂದರೆ ಸುಮಾರು 1.3 ಲೀಟರ್\ft*\f* ಓಲಿವ್ ಎಣ್ಣೆ ಬೆರೆಸಿದ ಮೂರು ಕಿಲೋಗ್ರಾಂ\f + \fr 15:6 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಎಫಾದ ಹತ್ತನೇ ಎರಡು ಭಾಗ, \fqa*\ft ಅಂದರೆ ಸುಮಾರು 3 ಕಿಲೋಗ್ರಾಂ\ft*\f* ನಯವಾದ ಹಿಟ್ಟನ್ನು ನೀನು ಸಿದ್ಧಮಾಡಬೇಕು. \v 7 ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು. \p \v 8 “ ‘ನೀನು ಯೆಹೋವ ದೇವರಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾಧಾನದ ಬಲಿಗಳಿಗಾಗಿ ಹೋರಿಯನ್ನು ನೀನು ಸಿದ್ಧಮಾಡುವಾಗ, \v 9 ನೀವು ಆ ಹೋರಿಯೊಂದಿಗೆ ಧಾನ್ಯ ಸಮರ್ಪಣೆಯಾಗಿ ಸುಮಾರು ಎರಡು ಲೀಟರ್\f + \fr 15:9 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಅರ್ಧ ಹಿನ್, \fqa*\ft ಅಂದರೆ ಸುಮಾರು 1.9 ಲೀಟರ್\ft*\f* ಓಲಿವ್ ಎಣ್ಣೆ ಬೆರೆಸಿದ ಐದು ಕಿಲೋಗ್ರಾಂ\f + \fr 15:9 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಎಫಾದ ಹತ್ತನೇ ಮೂರು ಭಾಗ, \fqa*\ft ಅಂದರೆ ಸುಮಾರು 5 ಕಿಲೋಗ್ರಾಂ\ft*\f* ಗೋಧಿ ಹಿಟ್ಟನ್ನು ಅರ್ಪಿಸಬೇಕು. \v 10 ಇದಲ್ಲದೆ, ಪಾನದ್ರವ್ಯಕ್ಕಾಗಿ ಒಂದುವರೆ ಲೀಟರ್ ದ್ರಾಕ್ಷಾರಸವನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಯಾಗುವುದು. \v 11 ಹೀಗೆ ಒಂದು ಹೋರಿ, ಟಗರು, ಕುರಿಮರಿ, ಮೇಕೆ, ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ಈ ಪ್ರಕಾರ ಮಾಡತಕ್ಕದ್ದು. \v 12 ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡತಕ್ಕದ್ದು. \p \v 13 “ ‘ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಅರ್ಪಿಸುವಾಗ ಸ್ಥಳೀಯ ಮೂಲದ ಇಸ್ರಾಯೇಲರೆಲ್ಲರೂ ಇವುಗಳನ್ನು ಈ ರೀತಿಯಾಗಿಯೇ ಮಾಡಬೇಕು. \v 14 ನಿಮ್ಮ ಸಂಗಡ ಪ್ರಯಾಣ ಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ, ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಸಮರ್ಪಿಸಿದಾಗ, ನೀವು ಹೇಗೆ ಮಾಡುತ್ತೀರೋ ಹಾಗೆಯೇ ಅವನು ಮಾಡಲಿ. \v 15 ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು. \v 16 ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’ ” ಎಂದರು. \p \v 17 ಯೆಹೋವ ದೇವರು ಮೋಶೆಗೆ, \v 18 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ: ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದನಂತರ, \v 19 ಆ ದೇಶದ ಆಹಾರವನ್ನು ತಿನ್ನುವಾಗ, ನೀವು ಅದರಲ್ಲಿ ಸ್ವಲ್ಪವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು. \v 20 ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮ ಫಲವನ್ನು ಕಾಣಿಕೆಯಾಗಿ ಅರ್ಪಿಸುವಂತೆ ಕಣಕದಿಂದ ಮಾಡುವ ನಿಮ್ಮ ಪ್ರಥಮ ಬೀಸಿದ ಹಿಟ್ಟಿನ ರೊಟ್ಟಿಯನ್ನು ಸಮರ್ಪಿಸಬೇಕು. \v 21 ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. \s1 ತಿಳಿಯದೆ ಮಾಡಿದ ಪಾಪಕ್ಕಾಗಿ ಸಮರ್ಪಣೆಗಳು \p \v 22 “ ‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ, \v 23 ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು, ನಿಮ್ಮ ಸಂತತಿಗಳವರೆಗೂ ಯೆಹೋವ ದೇವರು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ, \v 24 ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು. \v 25 ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು. \v 26 ಆಗ ಇಸ್ರಾಯೇಲರ ಸಮಸ್ತ ಸಮೂಹದವರಿಗೂ, ಅವರೊಳಗೆ ಪರಕೀಯನಾಗಿ ಪ್ರವಾಸಿಯಾಗಿರುವವನಿಗೂ ಅದು ಕ್ಷಮಾಪಣೆಯಾಗುವುದು. ಏಕೆಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು. \p \v 27 “ ‘ಯಾವನಾದರೂ ಒಬ್ಬನು ತಿಳಿಯದೆ ಪಾಪ ಮಾಡುವುದಾದರೆ, ಪಾಪ ಪರಿಹಾರಕ ಬಲಿಗಾಗಿ ಒಂದು ವರ್ಷದ ಮೇಕೆಯನ್ನು ತರಬೇಕು. \v 28 ತಿಳಿಯದೆ ಪಾಪ ಮಾಡಿದವನಿಗೋಸ್ಕರ ಯಾಜಕನು ಯೆಹೋವ ದೇವರ ಮುಂದೆ ಪ್ರಾಯಶ್ಚಿತ್ತ ಮಾಡಬೇಕು. ಅದು ಪಾಪಕ್ಷಮಾಪಣೆಯಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. \v 29 ಸ್ಥಳೀಯ ಮೂಲದ ಇಸ್ರಾಯೇಲರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ನಿಯಮ ಇರಬೇಕು. \p \v 30 “ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು. \v 31 ಅವನು ಯೆಹೋವ ದೇವರ ವಾಕ್ಯವನ್ನು ಅವಮಾನ ಮಾಡಿ, ಅವರ ಆಜ್ಞೆಗಳನ್ನು ಮೀರಿದ್ದರಿಂದ, ಆ ಮನುಷ್ಯನನ್ನು ನಿಶ್ಚಯವಾಗಿ ತೆಗೆದುಹಾಕಬೇಕು. ಅವನ ಅಕ್ರಮವು ಅವನ ಮೇಲೆ ಇರುವುದು,’ ” ಎಂದರು. \s1 ವಿಶ್ರಾಂತಿಯ ದಿನವನ್ನು ಮುರಿದವನಿಗೆ ಮರಣಶಿಕ್ಷೆ \p \v 32 ಇಸ್ರಾಯೇಲರು ಮರುಭೂಮಿಯಲ್ಲಿದ್ದಾಗ, ಅವರು ಸಬ್ಬತ್\f + \fr 15:32 \fr*\fq ಸಬ್ಬತ್ \fq*\ft ಅಂದರೆ \ft*\fqa ವಿಶ್ರಾಂತಿ ದಿನ\fqa*\f* ದಿನದಲ್ಲಿ ಸೌದೆಯನ್ನು ಕೂಡಿಸುವ ಒಬ್ಬನನ್ನು ಕಂಡರು. \v 33 ಆಗ ಸೌದೆ ಕೂಡಿಸುವುದನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೆ ಮತ್ತು ಸಮಸ್ತ ಸಮುದಾಯದ ಬಳಿಗೆ ತಂದು, \v 34 ಅವನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ, ಅವನನ್ನು ಕಾವಲಲ್ಲಿ ಇಟ್ಟರು. \v 35 ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು. \v 36 ಆಗ ಸಮೂಹದವರೆಲ್ಲಾ ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವನನ್ನು ಕಲ್ಲೆಸೆದು ಕೊಂದರು. \s1 ಬಟ್ಟೆಗಳ ಗೊಂಡೆಗಳು \p \v 37 ಯೆಹೋವ ದೇವರು ಮೋಶೆಗೆ, \v 38 “ನೀನು ಇಸ್ರಾಯೇಲರಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಅವರು ತಮ್ಮ ತಲತಲಾಂತರಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಅಂಚಿನಲ್ಲಿ ಗೊಂಡೆಗಳನ್ನು ಮಾಡಿಕೊಳ್ಳಬೇಕು. ಸೆರಗಿನ ಗೊಂಡೆಗಳ ಮೇಲೆ ನೀಲಿ ದಾರವನ್ನು ಹಾಕಬೇಕು. \v 39 ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ. \v 40 ನೀವು ನನ್ನ ಆಜ್ಞೆಗಳನ್ನೆಲ್ಲಾ ನೆನಸಿ, ಅವುಗಳ ಪ್ರಕಾರಮಾಡಿ, ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. \v 41 ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” \c 16 \s1 ಕೋರಹ, ದಾತಾನ್ ಮತ್ತು ಅಬಾರೀಮ್ \p \v 1 ಆಗ ಲೇವಿಯ ಮಗನಾದ ಕೊಹಾತನ ಮೊಮ್ಮಗ ಇಚ್ಹಾರನ ಮಗ ಕೋರಹನೂ ರೂಬೇನ್ ಗೋತ್ರದವರಾದ ಎಲೀಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಜನರನ್ನು ತೆಗೆದುಕೊಂಡು \v 2 ಇಸ್ರಾಯೇಲರೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯ ಪ್ರಸಿದ್ಧರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಗೆ ಎದುರಾಗಿ ತಿರುಗಿಬಿದ್ದರು. \v 3 ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು. \p \v 4 ಮೋಶೆಯು ಇದನ್ನು ಕೇಳಿದಾಗ, ಬೋರಲು ಬಿದ್ದು, \v 5 ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ: \v 6 ಕೋರಹನೂ, ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು, \v 7 ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ, ಅವುಗಳ ಮೇಲೆ ಧೂಪವನ್ನು ಯೆಹೋವ ದೇವರ ಮುಂದೆ ಹಾಕಿರಿ. ಆಗ ಯೆಹೋವ ದೇವರು ಯಾವನನ್ನು ಆಯ್ದುಕೊಳ್ಳುವರೋ ಅವನೇ ಪರಿಶುದ್ಧನಾಗಿರುವನು. ಲೇವಿಯರೇ, ನೀವು ಬಹಳ ಮಿತಿಮೀರಿ ಹೋಗುತ್ತಿರುವಿರಿ,” ಎಂದನು. \p \v 8 ಮೋಶೆಯು ಕೋರಹನಿಗೆ, “ಲೇವಿಯ ಪುತ್ರರೇ, ಈಗ ಕೇಳಿರಿ. \v 9 ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ? \v 10 ದೇವರು ನಿನ್ನನ್ನೂ, ನಿನ್ನ ಸಂಗಡ ಲೇವಿಯ ಪುತ್ರರಾದ ನಿನ್ನ ಸಹೋದರರೆಲ್ಲರನ್ನೂ ತಮ್ಮ ಹತ್ತಿರ ಬರಮಾಡಿಕೊಂಡಿದ್ದಾರೆ. ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ? \v 11 ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು. \p \v 12 ಆಗ ಮೋಶೆ ಎಲೀಯಾಬನ ಪುತ್ರರಾದ ದಾತಾನನನ್ನೂ, ಅಬೀರಾಮನನ್ನೂ ಕರೆಯಕಳುಹಿಸಿದನು. ಆದರೆ ಅವರು, “ನಾವು ಬರುವುದಿಲ್ಲ. \v 13 ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ? \v 14 ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು. \p \v 15 ಆಗ ಮೋಶೆಯು ಬಹಳವಾಗಿ ಕೋಪಿಸಿಕೊಂಡು ಯೆಹೋವ ದೇವರಿಗೆ, “ಅವರ ಬಲಿಯನ್ನು ನೀವು ಗೌರವಿಸಬೇಡಿ, ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ. ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ,” ಎಂದು ಹೇಳಿದನು. \p \v 16 ಮೋಶೆಯು ಕೋರಹನಿಗೆ, “ನೀನೂ, ನಿನ್ನ ಸಮೂಹವೆಲ್ಲವೂ ಯೆಹೋವ ದೇವರ ಎದುರಿನಲ್ಲಿ ಇರಬೇಕು. ನೀನೂ, ಅವರೂ, ಆರೋನನೂ ನಾಳೆ ಬಂದು, \v 17 ಒಬ್ಬೊಬ್ಬನು ತನ್ನ ತನ್ನ ಧೂಪ ಪಾತ್ರೆಯನ್ನು ತೆಗೆದುಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ, ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ಧೂಪ ಪಾತ್ರೆಗಳಾದ ನಿಮ್ಮ ಧೂಪ ಪಾತ್ರೆಗಳನ್ನು ಯೆಹೋವ ದೇವರ ಎದುರಿಗೆ ತನ್ನಿರಿ. ನೀನೂ, ಆರೋನನೂ, ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತೆಗೆದುಕೊಂಡು ಬನ್ನಿರಿ,” ಎಂದನು. \v 18 ಆಗ ಅವರು ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ, ಧೂಪವನ್ನು ಅದರ ಮೇಲೆ ಹಾಕಿ, ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು. \v 19 ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು. \v 20 ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ, \v 21 “ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. \p \v 22 ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು. \p \v 23 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 24 “ನೀನು ಜನರ ಸಮೂಹಕ್ಕೆ, ‘ಕೋರಹ, ದಾತಾನ್, ಅಬೀರಾಮರ ನಿವಾಸದ ಸುತ್ತಲಿಂದ ದೂರವಿರಬೇಕು,’ ಎಂದು ಅವರಿಗೆ ಆಜ್ಞಾಪಿಸು,” ಎಂದರು. \p \v 25 ಮೋಶೆಯು ಎದ್ದು ದಾತಾನ್, ಅಬೀರಾಮರ ಬಳಿಗೆ ಹೋದನು. ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು. \v 26 ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು. \v 27 ಆಗ ಅವರು ಕೋರಹನ ದಾತಾನ್, ಅಬೀರಾಮರ ಡೇರೆಗಳ ಸುತ್ತಲಿಂದ ದೂರ ಹೋದರು. ದಾತಾನನೂ, ಅಬೀರಾಮನೂ ತಮ್ಮ ಹೆಂಡತಿಯರೂ, ಪುತ್ರರೂ, ಚಿಕ್ಕ ಮಕ್ಕಳೂ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡರು. \p \v 28 ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ. \v 29 ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ, ಇಲ್ಲವೆ ಎಲ್ಲಾ ಮನುಷ್ಯರ ಶಿಕ್ಷೆ ಇವರಿಗೂ ಪ್ರಾಪ್ತವಾದರೆ ಯೆಹೋವ ದೇವರು ನನ್ನನ್ನು ಕಳುಹಿಸಲಿಲ್ಲ. \v 30 ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು. \p \v 31 ಅವನು ಹೇಳ ಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ, ಅವರ ಕೆಳಗಿರುವ ನೆಲವು ಸೀಳಿ \v 32 ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು. \v 33 ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. \v 34 ಆಗ ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಓಡಿಹೋದರು, ಏಕೆಂದರೆ ಅವರು, “ಭೂಮಿಯು ನಮ್ಮನ್ನು ಸಹ ನುಂಗಿಬಿಟ್ಟೀತು,” ಎಂದು ಹೆದರಿದರು. \p \v 35 ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. \p \v 36 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 37 “ಯಾಜಕನಾದ ಆರೋನನ ಮಗ ಎಲಿಯಾಜರನಿಗೆ, ಧೂಪದ ಪಾತ್ರೆಗಳು ಪರಿಶುದ್ಧವಾಗಿರುವುದರಿಂದ ಸುಟ್ಟುಹೋದವರ ಮಧ್ಯದಿಂದ ಅವನು ಅವುಗಳನ್ನು ಎತ್ತಬೇಕು. ಆ ಬೆಂಕಿಯನ್ನು ದೂರ ಚೆಲ್ಲು. \v 38 ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿಪೀಠವನ್ನು ಮುಚ್ಚತಕ್ಕ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಏಕೆಂದರೆ ಅವುಗಳನ್ನು ಯೆಹೋವ ದೇವರ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು,” ಎಂದರು. \p \v 39 ಆಗ ಯಾಜಕನಾದ ಎಲಿಯಾಜರನು ಯೆಹೋವ ದೇವರು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ಸುಟ್ಟು ಹೋದವರು ಅರ್ಪಿಸಿದ ಕಂಚಿನ ಧೂಪದ ಪಾತ್ರೆಗಳನ್ನು ತೆಗೆದುಕೊಂಡು, ಬಲಿಪೀಠವನ್ನು ಮುಚ್ಚುವುದಕ್ಕಾಗಿ ಅವುಗಳನ್ನು ಅಗಲವಾದ ತಗಡುಗಳನ್ನಾಗಿ ಮಾಡಿದನು. \v 40 ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು. \p \v 41 ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು. \p \v 42 ಜನರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ, ಅವರು ದೇವದರ್ಶನ ಗುಡಾರದ ಕಡೆಗೆ ನೋಡಲಾಗಿ, ಮೇಘವು ಅದನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ಕಾಣಬಂತು. \v 43 ಮೋಶೆಯೂ ಆರೋನನೂ ದೇವದರ್ಶನ ಗುಡಾರದ ಮುಂದೆ ಬಂದರು. \v 44 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 45 “ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು. \p \v 46 ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು. \v 47 ಆರೋನನು, ಮೋಶೆಯು ಹೇಳಿದ ಹಾಗೆ ಅದನ್ನು ತೆಗೆದುಕೊಂಡು, ಜನಸಮೂಹದ ಮಧ್ಯಕ್ಕೆ ಓಡಿಬಂದನು. ಆಗ ವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಅವನು ಧೂಪವನ್ನು ಇಟ್ಟು, ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು. \v 48 ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡದ್ದರಿಂದ ವ್ಯಾಧಿಯು ಶಮನವಾಯಿತು. \v 49 ಕೋರಹನ ನಿಮಿತ್ತ ಸತ್ತು ಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕು ಸಾವಿರ ಏಳು ನೂರು ಮಂದಿಯಾಗಿದ್ದರು. \v 50 ಆ ವ್ಯಾಧಿಯು ನಿಂತು ಹೋದಾಗ ಆರೋನನು ದೇವದರ್ಶನ ಗುಡಾರದ ಬಾಗಿಲಿನ ಬಳಿಯಲ್ಲಿದ್ದ ಮೋಶೆಯ ಬಳಿಗೆ ಹಿಂದಿರುಗಿ ಬಂದನು. \c 17 \s1 ಆರೋನನ ಕೋಲನ್ನು ಚಿಗುರಿಸಿದ್ದು \p \v 1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 2 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಗೋತ್ರಗಳ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ ಕೋಲುಗಳನ್ನು ತೆಗೆದುಕೊಂಡು, ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ನೀನು ಬರೆ. \v 3 ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಏಕೆಂದರೆ ಅವರ ಪಿತೃಗಳ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು. \v 4 ಅವುಗಳನ್ನು ದೇವದರ್ಶನ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಒಡಂಬಡಿಕೆಯ ಮಂಜೂಷದ ಮುಂದೆ ಇಡಬೇಕು. \v 5 ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು,” ಎಂದರು. \p \v 6 ಹಾಗೆಯೇ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಗೋತ್ರಗಳ ಪ್ರಕಾರ ಒಬ್ಬೊಬ್ಬ ಪ್ರಧಾನನಿಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು. \v 7 ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರದ ಒಳಗೆ ಯೆಹೋವ ದೇವರ ಸಮ್ಮುಖದಲ್ಲಿ ಇಟ್ಟನು. \p \v 8 ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. \v 9 ಆಗ ಮೋಶೆಯು ಕೋಲುಗಳನ್ನು ಯೆಹೋವ ದೇವರ ಸನ್ನಿಧಿಯಿಂದ ಎಲ್ಲಾ ಇಸ್ರಾಯೇಲರಿಗೆ ತೋರಿಸುವುದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು. \p \v 10 ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು. \v 11 ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಮೋಶೆ ಮಾಡಿದನು. \p \v 12 ಆಗ ಇಸ್ರಾಯೇಲರು ಮೋಶೆಯ ಸಂಗಡ ಮಾತನಾಡಿ, “ನಾವೆಲ್ಲರೂ ಸಾಯುತ್ತೇವೆ, ನಾಶವಾಗುತ್ತೇವೆ. ನಾವೆಲ್ಲರೂ ನಾಶವಾಗುತ್ತೇವೆ. \v 13 ಯೆಹೋವ ದೇವರ ಗುಡಾರದ ಸಮೀಪಕ್ಕೆ ಬರುವವರೆಲ್ಲರೂ ಸಾಯುವರು. ಹಾಗೆಯೇ ನಾವೆಲ್ಲರೂ ಸಾಯಬೇಕೋ?” ಎಂದರು. \c 18 \s1 ಯಾಜಕರ ಮತ್ತು ಲೇವಿಯರ ಕರ್ತವ್ಯ \p \v 1 ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ. \v 2 ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು. \v 3 ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ. \v 4 ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು. \p \v 5 “ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. \v 6 ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ. \v 7 ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು. \s1 ಯಾಜಕರ ಮತ್ತು ಲೇವಿಯರ ಕಾಣಿಕೆಗಳು \p \v 8 ಯೆಹೋವ ದೇವರು ಮಾತನಾಡಿ ಆರೋನನಿಗೆ, “ನನಗೆ ಕೊಡುವ ಎಲ್ಲಾ ಕಾಣಿಕೆಗಳ ಮೇಲೆ ನಿನ್ನನ್ನು ನೇಮಿಸಿದ್ದೇನೆ. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಪರಿಶುದ್ಧವಾದ ಕಾಣಿಕೆಗಳನ್ನೆಲ್ಲಾ ನಿನಗೂ ನಿನ್ನ ಮಕ್ಕಳಿಗೂ ಶಾಶ್ವತ ಪಾಲನ್ನು ನೀಡುತ್ತೇನೆ,” ಎಂದರು. \v 9 ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು. \v 10 ಮಹಾಪರಿಶುದ್ಧ ಸ್ಥಳದಲ್ಲಿ ನೀನು ಅದನ್ನು ತಿನ್ನಬೇಕು. ಪುರುಷರು ಅದನ್ನು ತಿನ್ನಬಹುದು. ಅದು ನಿನಗೆ ಪರಿಶುದ್ಧವಾಗಿರುವುದೆಂದು ಪರಿಗಣಿಸಬೇಕು. \p \v 11 “ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು. \p \v 12 “ಜನರು ಯೆಹೋವ ದೇವರಿಗೆ ಸಮರ್ಪಿಸುವ ಪ್ರಥಮ ಫಲಗಳನ್ನು ಅಂದರೆ ಎಲ್ಲಾ ಉತ್ತಮವಾದ ಎಣ್ಣೆಯೂ ಉತ್ತಮವಾದ ಹೊಸ ದ್ರಾಕ್ಷಾರಸ, ಧಾನ್ಯವೂ ನಿನಗೆ ಕೊಟ್ಟಿದ್ದೇನೆ. \v 13 ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು. \p \v 14 “ಇಸ್ರಾಯೇಲರು ಯೆಹೋವ ದೇವರಿಗೆ ಹರಕೆಮಾಡಿ ಸಮರ್ಪಿಸಿದ ಪ್ರತಿಯೊಂದೂ ನಿನ್ನದಾಗಿದೆ. \v 15 ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು. \v 16 ಅವು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ಗೇರಾ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್\f + \fr 18:16 \fr*\ft ಸುಮಾರು 58 ಗ್ರಾಂ\ft*\f* ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ವಿಮೋಚಿಸಿಕೊಳ್ಳಬೇಕು. \p \v 17 “ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು. \v 18 ನೈವೇದ್ಯವಾಗಿ ನಿವಾಳಿಸುವ ಎದೆಯೂ ಬಲಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನದಾಗಿರಬೇಕು. \v 19 ಇಸ್ರಾಯೇಲರು ಯೆಹೋವ ದೇವರಿಗೆ ನೈವೇದ್ಯ ಮಾಡುವ ಪರಿಶುದ್ಧವಾದ ಬಲಿಗಳನ್ನೆಲ್ಲಾ ನಿನಗೂ ನಿನ್ನ ಪುತ್ರಪುತ್ರಿಯರಿಗೂ ಕ್ರಮ ಪ್ರಕಾರವಾದ ಭಾಗವಾಗಿ ಕೊಟ್ಟಿದ್ದೇನೆ. ಇದು ಯೆಹೋವ ದೇವರ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು\f + \fr 18:19 \fr*\ft ಎಂದರೆ \ft*\fqa ಬದಲಾಯಿಸಲಾಗದ ಅಥವಾ ಮುರಿಯಲಾಗದ ಒಡಂಬಡಿಕೆ\fqa*\f*,” ಎಂದರು. \p \v 20 ಯೆಹೋವ ದೇವರು ಆರೋನನಿಗೆ, “ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು, ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು. ನಾನೇ ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಪಾಲೂ ನಿನ್ನ ಸ್ವಾಸ್ತ್ಯವೂ ಆಗಿದ್ದೇನೆ. \p \v 21 “ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ. \v 22 ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು. \v 23 ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು. \v 24 ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು. \p \v 25 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 26 “ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ಇಸ್ರಾಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯದರಿಂದ ಒಂದು ಪಾಲನ್ನು ಪ್ರತ್ಯೇಕಿಸಿ ಯೆಹೋವ ದೇವರಿಗೆ ಸಮರ್ಪಿಸಬೇಕು. \v 27 ಈ ನಿಮ್ಮ ಸಮರ್ಪಣೆಯನ್ನು ಕಣದ ಧಾನ್ಯದ ಹಾಗೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುವುದು. \v 28 ಈ ಪ್ರಕಾರ ನೀವು ಸಹ ಇಸ್ರಾಯೇಲರ ಕಡೆಯಿಂದ ತೆಗೆದುಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯ ಒಂದು ಭಾಗವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು, ನೀವು ಅದರಿಂದ ಯೆಹೋವ ದೇವರ ಯಾಜಕನಾದ ಆರೋನನಿಗೆ ಕೊಡಬೇಕು. \v 29 ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಅದರ ಒಂದೊಂದರ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಯೆಹೋವ ದೇವರಿಗೆ ಸಮರ್ಪಣೆಯಾಗಿ ಅರ್ಪಿಸಬೇಕು.’ \p \v 30 “ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಅದರಲ್ಲಿ ಉತ್ತಮವಾದದ್ದನ್ನು ಸಮರ್ಪಿಸಿದ ನಂತರ ಉಳಿದವುಗಳನ್ನು ಕಣದಲ್ಲಿನ ದವಸದಂತೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುತ್ತದೆ. \v 31 ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಏಕೆಂದರೆ ದೇವದರ್ಶನದ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ಅದು ನಿಮಗೆ ಪ್ರತಿಫಲವಾಗಿದೆ. \v 32 ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು. \c 19 \s1 ಶುದ್ಧೀಕರಣದ ನೀರು \p \v 1 ಯೆಹೋವ ದೇವರು ಮೋಶೆ ಹಾಗೂ ಆರೋನನ ಸಂಗಡ ಮಾತನಾಡಿ, \v 2 “ಯೆಹೋವ ದೇವರಾದ ನಾನು ಆಜ್ಞಾಪಿಸಿದ ನಿಯಮದ ಕಟ್ಟಳೆ ಏನೆಂದರೆ, ಎಂದೂ ನೊಗವನ್ನು ಹೊರದಂಥ, ಮಚ್ಚೆ ಇಲ್ಲದಂಥ ಮತ್ತು ಕಳಂಕವಿಲ್ಲದ ಕೆಂದಾಕಳನ್ನು ನಿಮಗೆ ತಂದು ಕೊಡುವಂತೆ ಇಸ್ರಾಯೇಲರಿಗೆ ಹೇಳು. \v 3 ನೀವು ಅದನ್ನು ಯಾಜಕನಾದ ಎಲಿಯಾಜರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ತನ್ನ ಮುಂದೆ ವಧೆಮಾಡಿಸಬೇಕು. \v 4 ಯಾಜಕನಾದ ಎಲಿಯಾಜರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ಅದನ್ನು ಏಳು ಸಾರಿ ದೇವದರ್ಶನ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು. \v 5 ಹಸುವನ್ನು ಅವನ ಎದುರಿನಲ್ಲಿಯೇ ಸುಡಿಸಬೇಕು. ಅದರ ತೊಗಲನ್ನೂ ಮಾಂಸವನ್ನೂ ರಕ್ತವನ್ನೂ ಮತ್ತು ಅದರ ಸಗಣಿಯ ಕೂಡ ಸುಡಬೇಕು. \v 6 ಯಾಜಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಹಸುವಿನ ದಹನದಲ್ಲಿ ಹಾಕಬೇಕು. \v 7 ಆಗ ಯಾಜಕನು ತನ್ನ ವಸ್ತ್ರಗಳನ್ನು ತೊಳೆದುಕೊಂಡು, ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಗೆ ಬರಬಹುದು. ಆದರೂ ಯಾಜಕನು ಸಂಜೆಯವರೆಗೂ ಅಶುದ್ಧನಾಗಿರುವನು. \v 8 ಅದನ್ನು ಸುಡುವವನು ತನ್ನ ವಸ್ತ್ರಗಳನ್ನು ನೀರಿನಲ್ಲಿ ತೊಳೆದುಕೊಂಡು, ಸ್ನಾನಮಾಡಬೇಕು. ಅವನೂ ಸಹ ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು. \p \v 9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು. \v 10 ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು, ಸಂಜೆಯವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಶಾಶ್ವತ ಕಟ್ಟಳೆಯಾಗಿದೆ. \p \v 11 “ಮನುಷ್ಯನ ಶವವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರುವನು. \v 12 ಅವನು ಇದರಿಂದ ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿಕೊಂಡು ಏಳನೆಯ ದಿವಸದಲ್ಲಿ ಶುದ್ಧನಾಗಬೇಕು. ಆದರೆ ಅವನು ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧಮಾಡಿಕೊಳ್ಳದಿದ್ದರೆ, ಏಳನೆಯ ದಿವಸದಲ್ಲಿ ಶುದ್ಧನಾಗಲಾರನು. \v 13 ಸತ್ತ ಮನುಷ್ಯನ ಶವವನ್ನು ಮುಟ್ಟಿ, ಶುದ್ಧಮಾಡಿಕೊಳ್ಳದವನು ಯೆಹೋವ ದೇವರ ಗುಡಾರವನ್ನು ಅಪವಿತ್ರಪಡಿಸುತ್ತಾನೆ, ಅಂಥವನನ್ನು ಇಸ್ರಾಯೇಲಿನವರೊಳಗಿಂದ ತೆಗೆದುಹಾಕಬೇಕು, ಶುದ್ಧೀಕರಣದ ನೀರು ಅವನ ಮೇಲೆ ಚಿಮುಕಿಸದ ಕಾರಣ ಅವನು ಅಶುದ್ಧನಾಗಿದ್ದಾನೆ. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು. \p \v 14 “ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತರೆ, ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ, ಡೇರೆಯಲ್ಲಿರುವವರೆಲ್ಲರೂ ಏಳು ದಿವಸಗಳವರೆಗೆ ಅಶುದ್ಧರಾಗಿರುವರು. \v 15 ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರುವುವು. \p \v 16 “ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು. \p \v 17 “ಅಪವಿತ್ರನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯನ್ನು ತೆಗೆದುಕೊಂಡು, ಒಂದು ಪಾತ್ರೆಯೊಳಗಿಟ್ಟು, ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು. \v 18 ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು. \v 19 ಪವಿತ್ರನಾದವನು ಅಪವಿತ್ರನಾದವನ ಮೇಲೆ ಮೂರನೆಯ ದಿವಸದಲ್ಲಿಯೂ, ಏಳನೆಯ ದಿವಸದಲ್ಲಿಯೂ ಅದನ್ನು ಚಿಮುಕಿಸಲಿ. ಏಳನೆಯ ದಿವಸದಲ್ಲಿ ಅವನು ತನ್ನನ್ನು ಪವಿತ್ರ ಮಾಡಿಕೊಂಡು, ತನ್ನ ವಸ್ತ್ರಗಳನ್ನು ತೊಳೆದುಕೊಂಡು, ನೀರಿನಲ್ಲಿ ಸ್ನಾನ ಮಾಡಲಿ. ಹೀಗೆ ಸಂಜೆಯಲ್ಲಿ ಪವಿತ್ರನಾಗುವನು. \v 20 ಆದರೆ ಅಪವಿತ್ರನಾಗಿದ್ದು, ತನ್ನನ್ನು ಶುದ್ಧಪಡಿಸಿಕೊಳ್ಳದವನು ಸಭೆಯ ಮಧ್ಯದಿಂದ ತೆಗೆದುಹಾಕಬೇಕು ಏಕೆಂದರೆ ಅವನು ಯೆಹೋವ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ. ನೀರು ಅವನ ಮೇಲೆ ಚಿಮಿಕಿಸಿಕೊಳ್ಳದ ಕಾರಣ ಅವನು ಅಪವಿತ್ರನೇ. \v 21 ಇದು ಅವರಿಗೆ ಶಾಶ್ವತ ಕಟ್ಟಳೆಯಾಗಿರಬೇಕು. \p “ಶುದ್ಧೀಕರಣದ ನೀರನ್ನು ಚಿಮುಕಿಸುವವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಂಜೆಯವರೆಗೆ ಅಪವಿತ್ರನಾಗಿರುವನು. \v 22 ಇದಲ್ಲದೆ ಅಪವಿತ್ರನಾದವನು ಮುಟ್ಟುವಂಥಾದ್ದೆಲ್ಲ ಅಪವಿತ್ರವಾಗುವುದು, ಅವನನ್ನು ಮುಟ್ಟಿದವನು ಸಂಜೆಯವರೆಗೆ ಅಪವಿತ್ರನಾಗಿರುವನು,” ಎಂದು ಹೇಳಿದರು. \c 20 \s1 ಬಂಡೆಯೊಳಗಿಂದ ನೀರು \p \v 1 ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು. \p \v 2 ಆಗ ಜನರಿಗೆ ನೀರು ಇಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡರು. \v 3 ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಸಹೋದರರು ಯೆಹೋವ ದೇವರ ಮುಂದೆ ಸತ್ತು ಹೋದಾಗಲೇ, ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು. \v 4 ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಏಕೆ ಯೆಹೋವ ದೇವರ ಸಭೆಯವರಾದ ನಮ್ಮನ್ನೂ ಈ ಮರುಭೂಮಿಗೆ ತಂದಿರಿ. \v 5 ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವುದಕ್ಕೆ ಏಕೆ ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಕರಕೊಂಡು ಬಂದಿರಿ. ಈ ಸ್ಥಳದಲ್ಲಿ ಧಾನ್ಯವಾದರೂ ಅಂಜೂರವಾದರೂ ದ್ರಾಕ್ಷಿ ತೋಟವಾದರೂ ದಾಳಿಂಬೆ ಹಣ್ಣಾದರೂ ಇಲ್ಲ. ಕುಡಿಯುವುದಕ್ಕೆ ನೀರು ಸಹ ಇಲ್ಲ,” ಎಂದರು. \p \v 6 ಆಗ ಮೋಶೆ, ಆರೋನನೂ ಜನಸಮೂಹದ ಎದುರಿನಿಂದ ದೇವದರ್ಶನ ಗುಡಾರದ ಬಾಗಿಲಿನೊಳಗೆ ಹೋಗಿ, ಸಾಷ್ಟಾಂಗವೆರಗಿದರು. ಯೆಹೋವ ದೇವರ ಮಹಿಮೆಯು ಅವರಿಗೆ ಕಾಣಬಂತು. \v 7 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 8 “ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು. \p \v 9 ಆಗ ಮೋಶೆಯು ಯೆಹೋವ ದೇವರ ಸನ್ನಿಧಿಯಿಂದ ಹೊರಟು, ತನಗೆ ಆಜ್ಞಾಪಿಸಿದ ಹಾಗೆ ಕೋಲನ್ನು ತೆಗೆದುಕೊಂಡನು. \v 10 ಮೋಶೆಯೂ, ಆರೋನನೂ ಜನರನ್ನು ಬಂಡೆಯ ಮುಂದೆ ಕೂಡಿಸಿ, ಅವರಿಗೆ, “ತಿರುಗಿ ಬಿದ್ದವರೇ ಕೇಳಿರಿ, ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ?” ಎಂದರು. \v 11 ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು. \p \v 12 ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು. \p \v 13 ಇಸ್ರಾಯೇಲರು ಯೆಹೋವ ದೇವರ ಸಂಗಡ ವ್ಯಾಜ್ಯವಾಡಿದ್ದಕ್ಕಾಗಿ ದೇವರು ಅವರಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾ ಸ್ಥಳದ ನೀರು ಇದೇ. \s1 ಎದೋಮ್ಯರು ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ಇಸ್ರಾಯೇಲರಿಗೆ ಅಪ್ಪಣೆ ಕೊಡದೆ ಹೋದದ್ದು \p \v 14 ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, \pm “ನಿಮ್ಮ ಸಹೋದರರಾದ ಇಸ್ರಾಯೇಲರು ಹೇಳುವುದೇನೆಂದರೆ, ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ. \v 15 ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು. \v 16 ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. \pm “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ. \v 17 ನಮ್ಮನ್ನು ನಿನ್ನ ದೇಶದೊಳಗಿಂದ ದಾಟಿ ಹೋಗಗೊಡಿಸು; ನಾವು ಹೊಲವನ್ನಾದರೂ, ದ್ರಾಕ್ಷಿ ತೋಟವನ್ನಾದರೂ ದಾಟಿ ಹೋಗುವುದಿಲ್ಲ; ರಾಜಮಾರ್ಗದಲ್ಲಿ ಮಾತ್ರ ಹೋಗುತ್ತೇವೆ; ನಿನ್ನ ಮೇರೆಯನ್ನು ನಾವು ದಾಟುವವರೆಗೆ ಬಲಗಡೆಗಾದರೂ, ಎಡಗಡೆಗಾದರೂ ನಾವು ತಿರುಗುವುದಿಲ್ಲ,” ಎಂದು ವಿನಂತಿಸಿದನು. \p \v 18 ಎದೋಮ್ಯರು ದೂತರಿಗೆ, \pm “ನೀನು ಈ ಕಡೆಯಲ್ಲಿ ದಾಟಿ ಹೋಗಬೇಡ. ಹೋದರೆ ನಾನು ಖಡ್ಗದಿಂದ ನಿನ್ನ ಮೇಲೆ ದಾಳಿಗೆ ಬರುವೆನು,” ಎಂದನು. \p \v 19 ಅದಕ್ಕೆ ಇಸ್ರಾಯೇಲರು ಅವನಿಗೆ, \pm “ನಾವು ರಾಜಮಾರ್ಗದಲ್ಲಿ ಹೋಗುತ್ತೇವೆ. ನಮ್ಮ ಪಶುಗಳು ನಿನ್ನ ನೀರು ಕುಡಿದರೆ, ಅದರ ಕ್ರಯವನ್ನು ಕೊಡುತ್ತೇವೆ. ನಮ್ಮ ಕಾಲುಗಳಿಂದ ದಾಟಿ ಹೋಗುವುದೇ ಹೊರತು ಮತ್ತೇನೂ ಮಾಡುವುದಿಲ್ಲ,” ಎಂದು ಹೇಳಿ ಕಳುಹಿಸಿದನು. \p \v 20 ಆದರೆ ಅವನು, \pm “ನೀವು ದಾಟಬಾರದು,” ಎಂದನು. \p ಎದೋಮ್ಯರು ಬಹುಜನರಿಂದಲೂ, ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಯುದ್ಧಕ್ಕೆ ಬಂದರು. \v 21 ಈ ಪ್ರಕಾರ ಎದೋಮ್ಯನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ. ಆದಕಾರಣ ಇಸ್ರಾಯೇಲರು ಅವನ ಕಡೆಯಿಂದ ತಿರುಗಿಕೊಂಡು ಹೊರಟು ಹೋದರು. \s1 ಆರೋನನ ಮರಣ \p \v 22 ಇಸ್ರಾಯೇಲರ ಸಮಸ್ತ ಸಮೂಹದವರು ಕಾದೇಶಿನಿಂದ ಪ್ರಯಾಣಮಾಡಿ, ಹೋರ್ ಎಂಬ ಬೆಟ್ಟದ ಬಳಿಗೆ ಬಂದರು. \v 23 ಆಗ ಯೆಹೋವ ದೇವರು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, \v 24 “ಆರೋನನು ತನ್ನ ಪಿತೃಗಳ ಸಂಗಡ ಸೇರುವನು, ಏಕೆಂದರೆ ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿಬಿದ್ದದರಿಂದ, ನಾನು ಇಸ್ರಾಯೇಲರಿಗೆ ಕೊಡುವ ದೇಶಕ್ಕೆ ಅವನು ಪ್ರವೇಶಿಸುವುದಿಲ್ಲ. \v 25 ಆರೋನನನ್ನೂ, ಅವನ ಮಗ ಎಲಿಯಾಜರನನ್ನೂ ತೆಗೆದುಕೊಂಡು, ಅವರನ್ನು ಹೋರ್ ಬೆಟ್ಟಕ್ಕೆ ಕರೆದುಕೊಂಡು ಬಾ. \v 26 ಆರೋನನ ವಸ್ತ್ರಗಳನ್ನು ತೆಗೆದು, ಅವುಗಳನ್ನು ಅವನ ಮಗ ಎಲಿಯಾಜರನಿಗೆ ತೊಡಿಸು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು,” ಎಂದರು. \p \v 27 ಮೋಶೆಯು ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಮಾಡಿದನು. ಅವರು ಸಮಸ್ತ ಸಭೆಯವರು ನೋಡುತ್ತಿರುವಾಗ ಹೋರ್ ಬೆಟ್ಟವನ್ನೇರಿದರು. \v 28 ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು, ಅವನ ಮಗ ಎಲಿಯಾಜರನಿಗೆ ತೊಡಿಸಿದನು. ಆಗ ಆರೋನನು ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ, ಎಲಿಯಾಜರನೂ ಬೆಟ್ಟದಿಂದ ಇಳಿದರು. \v 29 ಆರೋನನು ತೀರಿಹೋದನೆಂದು ಸಭೆಯೆಲ್ಲಾ ನೋಡಿದಾಗ, ಇಸ್ರಾಯೇಲರೆಲ್ಲರೂ ಆರೋನನಿಗೋಸ್ಕರ ಮೂವತ್ತು ದಿವಸಗಳವರೆಗೂ ದುಃಖಿಸಿದರು. \c 21 \s1 ಅರಾದ್ ಪಟ್ಟಣದ ಅರಸನನ್ನು ಜಯಿಸಿದ್ದು \p \v 1 ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು. \v 2 ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು. \v 3 ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು. \s1 ಕಂಚಿನ ಸರ್ಪ \p \v 4 ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು. \v 5 ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು. \p \v 6 ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು. \v 7 ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು. \p \v 8 ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು. \v 9 ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು. \s1 ಮೋವಾಬಿಗೆ ಪ್ರಯಾಣ \p \v 10 ಇಸ್ರಾಯೇಲರು ಹೊರಟು ಓಬೋತಿನಲ್ಲಿ ಇಳಿದುಕೊಂಡರು. \v 11 ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಮರುಭೂಮಿಯಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು. \v 12 ಅಲ್ಲಿಂದ ಅವರು ಹೊರಟು ಜೆರೆದ್ ಎಂಬ ಹಳ್ಳದ ಬಳಿಯಲ್ಲಿ ಇಳಿದುಕೊಂಡರು. \v 13 ಅಲ್ಲಿಂದ ಹೊರಟು ಅಮೋರಿಯರ ಪ್ರದೇಶದಿಂದ ಹೊರಗೆ ಬರುವ ಮರುಭೂಮಿಯಲ್ಲಿರುವ ಅರ್ನೋನ್ ಹೊಳೆಯ ಈಚೆಯಲ್ಲಿ ಇಳಿದುಕೊಂಡರು. ಏಕೆಂದರೆ ಅರ್ನೋನ್ ಮೋವಾಬರಿಗೂ ಅಮೋರಿಯರಿಗೂ ಮಧ್ಯದ ಮೋವಾಬಿನ ಗಡಿಯಾಗಿದೆ. \v 14 ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: \q1 “ಸೂಫಕ್ಕೆ ಸೇರಿದ ವಾಹೇಬನ್ನು, \q2 ಅರ್ನೋನ್ \v 15 ಹೊಳೆಗೆ ಸೇರುವ ಹಳ್ಳಗಳನ್ನು, \q1 ಆರ್ ಪಟ್ಟಣದ ತನಕ \q2 ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.” \m \v 16 ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ. \p \v 17 ಆಗ ಇಸ್ರಾಯೇಲರು ಈ ಹಾಡನ್ನು ಹಾಡಿದರು: \q1 “ಬಾವಿಯೇ, ಉಕ್ಕು, \q2 ಜನರೇ, ಅದರ ಬಗ್ಗೆ ನೀವು ಹಾಡಿರಿ. \q1 \v 18 ಪ್ರಭುಗಳು ಈ ಬಾವಿಯನ್ನು ಅಗೆದರು. \q2 ಜನರ ಅಧಿಪತಿಗಳು ನ್ಯಾಯಾಧಿಪತಿಯ \q2 ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” \m ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು. \v 19 ಇದಲ್ಲದೆ ಅವರು ಮತ್ತಾನದಿಂದ ನಹಲಿಯೇಲಕ್ಕೆ ಬಂದರು. ನಹಲಿಯೇಲದಿಂದ ಬಾಮೋತಿಗೆ ಬಂದರು. \v 20 ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ. \s1 ಸೀಹೋನ್ ಮತ್ತು ಓಗನ ಸೋಲು \p \v 21 ಆಗ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, \pm \v 22 “ನಾವು ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಯಾವುದೇ ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ, ಬಾವಿಯ ನೀರನ್ನು ಕುಡಿಯದೆ, ನಿನ್ನ ದೇಶವನ್ನು ದಾಟುವವರೆಗೆ ರಾಜಮಾರ್ಗದಲ್ಲಿಯೇ ಹೋಗುತ್ತೇವೆ,” ಎಂದು ಬೇಡಿಕೊಂಡರು. \p \v 23 ಆದರೆ ಸೀಹೋನನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ, ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು, ಇಸ್ರಾಯೇಲರನ್ನು ಎದುರಿಸಲು ಮರುಭೂಮಿಗೆ ಹೊರಟನು. ಅವನು ಯಹಚಕ್ಕೆ ಬಂದು ಇಸ್ರಾಯೇಲರ ಸಂಗಡ ಯುದ್ಧಮಾಡಿದನು. \v 24 ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು. \v 25 ಇಸ್ರಾಯೇಲರು ಆ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಇಸ್ರಾಯೇಲರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು. \v 26 ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು. \p \v 27 ಇದರ ಬಗ್ಗೆ ಕವಿಗಳು ಹೀಗೆಂದು ಹಾಡಿದ್ದಾರೆ: \q1 “ಹೆಷ್ಬೋನಿಗೆ ಬನ್ನಿರಿ ಅದನ್ನು ತಿರುಗಿ ಕಟ್ಟಬೇಕು. \q2 ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು. \b \q1 \v 28 “ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, \q2 ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, \q1 ಮೋವಾಬಿನ ಆರ್ ಎಂಬ ಪಟ್ಟಣವನ್ನೂ, \q2 ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. \q1 \v 29 ಮೋವಾಬೇ, ನಿನಗೆ ದಿಕ್ಕಾರ! \q2 ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! \q1 ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ \q2 ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ \q2 ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು. \b \q1 \v 30 “ನಾವು ಅವರನ್ನು ಪದಚ್ಚುತಿಗೊಳಿಸಿದೆವು. \q2 ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. \q1 ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ \q2 ನೋಫಹದ ತನಕ ಹಾಳುಮಾಡಿದೆವು.” \p \v 31 ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು. \p \v 32 ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು. \v 33 ಅವರು ತಿರುಗಿ ಬಾಷಾನಿನ ಹಾದಿ ಏರಿದರು. ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವುದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು. \p \v 34 ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು. \p \v 35 ಈ ಪ್ರಕಾರ ಅವರು ಅವನನ್ನೂ ಅವನ ಮಕ್ಕಳನ್ನೂ ಅವನ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು, ಅವನ ದೇಶವನ್ನು ವಶಮಾಡಿಕೊಂಡರು. \c 22 \s1 ಬಾಲಾಕನು ಬಿಳಾಮನನ್ನು ಕರೆದದ್ದು \p \v 1 ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು. \p \v 2 ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು. \v 3 ಇದಲ್ಲದೆ ಮೋವಾಬಿನವರು, ಇಸ್ರಾಯೇಲರು ಬಹಳ ಜನರಾಗಿರುವುದರಿಂದ ಅವರಿಗೆ ಬಹಳವಾಗಿ ಅಂಜಿದರು. ಮೋವಾಬಿನವರು ಇಸ್ರಾಯೇಲರಿಗೆ ದಿಗಿಲುಪಟ್ಟರು. \p \v 4 ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. \p ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು. \v 5 ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, \pm “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ. \v 6 ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು. \p \v 7 ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು. \p \v 8 ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು. \p \v 9 ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು?” ಎಂದರು. \p \v 10 ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ: \v 11 ‘ಇಗೋ, ಈಜಿಪ್ಟ್ ದೇಶದಿಂದ ಹೊರಟಿರುವ ಒಂದು ಜನಾಂಗವು ದೇಶವನ್ನೆಲ್ಲಾ ಆವರಿಸಿಕೊಂಡಿದೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ಒಂದು ವೇಳೆ ಅವರ ಸಂಗಡ ಯುದ್ಧಮಾಡಿ ಹೊರಗೆ ಹಾಕುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,’ ಎಂದು ಹೇಳಿ ಕಳುಹಿಸಿದ್ದಾನೆ,” ಎಂದನು. \p \v 12 ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು. \p \v 13 ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ, “ನಿಮ್ಮ ದೇಶಕ್ಕೆ ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಲಿಲ್ಲ,” ಎಂದನು. \p \v 14 ಆದಕಾರಣ ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಸಂಗಡ ಬರಲಿಲ್ಲ,” ಎಂದರು. \p \v 15 ಆದರೆ ಬಾಲಾಕನು ತಿರುಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಧಾನರನ್ನು ಕಳುಹಿಸಿದನು. \v 16 ಅವರು ಬಿಳಾಮನ ಬಳಿಗೆ ಬಂದು ಅವನಿಗೆ, \pm “ಚಿಪ್ಪೋರನ ಮಗ ಬಾಲಾಕನು ಹೀಗೆ ಹೇಳುತ್ತಾನೆ: ನೀನು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬಾರದು. \v 17 ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು. \p \v 18 ಬಿಳಾಮನು ಪ್ರತ್ಯುತ್ತರವಾಗಿ ಬಾಲಾಕನ ಸೇವಕರಿಗೆ, “ಬಾಲಾಕನು ನನಗೆ ತನ್ನ ಮನೆ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾಗಿರುವ ಯೆಹೋವ ದೇವರ ಮಾತನ್ನು ಮೀರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು. \v 19 ಆದರೆ ಈಗ ಯೆಹೋವ ದೇವರು ನನಗೆ ಮತ್ತೇನು ಹೇಳುವರೆಂದು ನಾನು ತಿಳಿದುಕೊಳ್ಳುವ ಹಾಗೆ, ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ,” ಎಂದನು. \p \v 20 ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು. \s1 ಬಿಳಾಮನ ಕತ್ತೆ \p \v 21 ಬಿಳಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಯನ್ನು ಹತ್ತಿ, ಮೋವಾಬಿನ ಪ್ರಧಾನರ ಸಂಗಡ ಹೋದನು. \v 22 ಆದರೆ ಅವನು ಹೋದದ್ದರಿಂದ ದೇವರಿಗೆ ಕೋಪ ಬಂದಿತು. ಯೆಹೋವ ದೇವರ ದೂತನು ಅವನಿಗೆ ಎದುರಾಳಿಯಾಗಿ ಮಾರ್ಗದಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು. \v 23 ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು. \p \v 24 ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು. \v 25 ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು, ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು. ಅವನು ಅದನ್ನು ಮತ್ತೆ ಹೆಚ್ಚಾಗಿ ಹೊಡೆದನು. \p \v 26 ಆಗ ಯೆಹೋವ ದೇವರ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವುದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು. \v 27 ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು. \v 28 ಆಗ ಯೆಹೋವ ದೇವರು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ಈಗ ನನ್ನನ್ನು ಮೂರು ಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು?” ಎಂದು ಕೇಳಿತು. \p \v 29 ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು. \p \v 30 ಕತ್ತೆಯು ಬಿಳಾಮನಿಗೆ, “ಈ ದಿವಸದವರೆಗೂ ನೀನು ಯಾವಾಗಲೂ ಸವಾರಿಮಾಡುತ್ತಿದ್ದ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ರೀತಿ ಮಾಡಿದೆನೋ?” ಎಂದು ಪ್ರಶ್ನಿಸಿತು. \p ಅದಕ್ಕವನು, “ಇಲ್ಲ,” ಎಂದನು. \p \v 31 ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು. \p \v 32 ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ. \v 33 ಆ ಕತ್ತೆ ನನ್ನನ್ನು ನೋಡಿ, ನನ್ನ ಮುಂದೆ ಈಗ ಮೂರು ಸಾರಿ ಓರೆಯಾಗಿ ಹೋಯಿತು. ಅದು ನನ್ನ ಮುಂದೆ ಓರೆಯಾಗಿ ಹೋಗದಿದ್ದರೆ, ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದುಹಾಕಿ ಕತ್ತೆಯನ್ನು ಉಳಿಸುತ್ತಿದ್ದೆನು,” ಎಂದನು. \p \v 34 ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು. \p \v 35 ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು. \p \v 36 ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು. \v 37 ಬಾಲಾಕನು ಬಿಳಾಮನಿಗೆ, “ನಾನು ನಿನಗೆ ತುರ್ತಾಗಿ ಬರುವಂತೆ ಹೇಳಿ ಕಳುಹಿಸಲಿಲ್ಲವೋ? ನೀನು ನನ್ನ ಬಳಿಗೆ ಏಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯವುಳ್ಳವನಲ್ಲವೋ?” ಎಂದನು. \p \v 38 ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು. \p \v 39 ಆಗ ಬಿಳಾಮನು ಬಾಲಾಕನ ಸಂಗಡ ಹೋದನು. ಇಬ್ಬರು ಕಿರ್ಯತ್ ಹುಚೋತಿಗೆ ಬಂದರು. \v 40 ಬಾಲಾಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಅದರಲ್ಲಿ ಸ್ವಲ್ಪವನ್ನು ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಭುಗಳಿಗೂ ಕಳುಹಿಸಿದನು. \v 41 ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು. \c 23 \s1 ಬಿಳಾಮನ ಮೊದಲನೆಯ ದರ್ಶನ \p \v 1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು. \v 2 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು. ಬಾಲಾಕನು ಮತ್ತು ಬಿಳಾಮನು ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಬಲಿಪೀಠದ ಮೇಲೆ ಅರ್ಪಿಸಿದರು. \p \v 3 ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು. \p \v 4 ಆಗ ದೇವರು ಬಿಳಾಮನನ್ನು ಸಂಧಿಸಿದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ,” ಎಂದನು. \p \v 5 ಯೆಹೋವ ದೇವರು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ, ನಾನು ಹೇಳಿದ್ದನ್ನು ತಿಳಿಸು,” ಎಂದರು. \p \v 6 ಆಗ ಅವನು ಬಾಲಾಕನ ಬಳಿಗೆ ತಿರುಗಿಬಂದನು. ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು. \v 7 ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: \q1 “ಬಾಲಾಕನು ನನ್ನನ್ನು ಅರಾಮಿನಿಂದಲೂ, \q2 ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, \q1 ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, \q2 ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ. \q1 \v 8 ದೇವರು ಶಪಿಸದವನನ್ನು \q2 ನಾನು ಹೇಗೆ ಶಪಿಸಲಿ? \q1 ಯೆಹೋವ ದೇವರು ಎದುರಿಸದವನನ್ನು \q2 ನಾನು ಹೇಗೆ ಎದುರಿಸಲಿ? \q1 \v 9 ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. \q2 ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. \q1 ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. \q2 ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ. \q1 \v 10 ಧೂಳಿನಷ್ಟು ಅಸಂಖ್ಯವಾದ ಯಾಕೋಬರನ್ನು ಎಣಿಸುವುದಕ್ಕೂ, \q2 ಇಸ್ರಾಯೇಲಿನ ನಾಲ್ಕನೆಯ ಒಂದು ಪಾಲನ್ನು ಲೆಕ್ಕ ಮಾಡುವುದಕ್ಕೂ ಯಾರಿಂದಾದೀತು? \q1 ನೀತಿವಂತನು ಸಾಯುವಂತೆ ನಾನೂ ಸಾಯಬೇಕು. \q2 ನನ್ನ ಅಂತ್ಯವು ಅವರಂತೆಯೇ ಆಗಲಿ.” \p \v 11 ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು. \p \v 12 ಅದಕ್ಕೆ ಅವನು ಉತ್ತರವಾಗಿ, “ಯೆಹೋವ ದೇವರು ನನ್ನ ಬಾಯಿಯೊಳಗೆ ಇಡುವ ಮಾತನ್ನೇ ನಾನು ನುಡಿಯಬೇಕಲ್ಲವೇ?” ಎಂದನು. \s1 ಬಿಳಾಮನ ಎರಡನೆಯ ದರ್ಶನ \p \v 13 ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು. \v 14 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು. \p \v 15 ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು. \p \v 16 ಆಗ ಯೆಹೋವ ದೇವರು ಬಿಳಾಮನ ಎದುರಿಗೆ ಬಂದು ಅವನ ಬಾಯಿಯೊಳಗೆ ವಾಕ್ಯವನ್ನಿಟ್ಟು, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು. \p \v 17 ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು. ಬಾಲಾಕನು ಅವನಿಗೆ, “ಯೆಹೋವ ದೇವರು ಏನು ಹೇಳಿದ್ದಾರೆ,” ಎಂದನು. \p \v 18 ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: \q1 “ಬಾಲಾಕನೇ, ಎದ್ದು ಕೇಳು; \q2 ಚಿಪ್ಪೋರನ ಮಗನೇ, ನನಗೆ ಕಿವಿಗೊಡು. \q1 \v 19 ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. \q2 ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. \q1 ಅವರು ನುಡಿದದ್ದನ್ನು ಮಾಡದಿರುವರೇ? \q2 ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ? \q1 \v 20 ಆಶೀರ್ವದಿಸುವುದಕ್ಕೆ ನಾನು ಅಪ್ಪಣೆ ಹೊಂದಿದ್ದೇನೆ. \q2 ಅವರು ಆಶೀರ್ವದಿಸಿದ ನಂತರ ನಾನು ಅದನ್ನು ಬದಲಾಯಿಸಲಾರೆನು. \b \q1 \v 21 “ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. \q2 ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. \q1 ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. \q2 ಅರಸನ ಜಯಧ್ವನಿಯು ಅವರಲ್ಲಿ ಉಂಟು. \q1 \v 22 ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. \q2 ಅವರಿಗೆ ಕಾಡುಕೋಣದಂಥ ಬಲವುಂಟು. \q1 \v 23 ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. \q2 ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. \q1 ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ \q2 ಎಂದು ಯಾಕೋಬನ ವಿಷಯವಾಗಿಯೂ, \q2 ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು. \q1 \v 24 ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. \q2 ಸಿಂಹದ ಮರಿಯ ಹಾಗೆ ಎದ್ದೇಳುವುದು. \q1 ಅದು ಬೇಟೆಯನ್ನು ತಿಂದು, \q2 ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.” \p \v 25 ಆಗ ಬಾಲಾಕನು ಬಿಳಾಮನಿಗೆ, “ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ,” ಎಂದನು. \p \v 26 ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು. \s1 ಬಿಳಾಮನ ಮೂರನೆಯ ದರ್ಶನ \p \v 27 ಆಗ ಬಾಲಾಕನು ಬಿಳಾಮನಿಗೆ, “ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸುವುದು ಒಂದು ವೇಳೆ ದೇವರಿಗೆ ಯುಕ್ತವಾಗಿದ್ದೀತು,” ಎಂದನು. \v 28 ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿಯ ತುದಿಗೆ ಕರೆದುಕೊಂಡು ಹೋದನು. \p \v 29 ಬಿಳಾಮನು ಬಾಲಾಕನಿಗೆ, “ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಇಲ್ಲಿ ನನಗೆ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು. \v 30 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ, ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು. \c 24 \p \v 1 ಆದರೆ ಇಸ್ರಾಯೇಲನ್ನು ಆಶೀರ್ವದಿಸುವುದಕ್ಕೆ ಯೆಹೋವ ದೇವರ ದೃಷ್ಟಿಗೆ ಒಳ್ಳೆಯದೆಂದು ಬಿಳಾಮನು ನೋಡಿದಾಗ, ಅವನು ಮುಂಚಿನ ಹಾಗೆ ಶಕುನವನ್ನು ಕಂಡುಕೊಳ್ಳುವುದಕ್ಕೆ ಹೋಗದೆ, ತನ್ನ ಮುಖವನ್ನು ಮರುಭೂಮಿಯ ಕಡೆಗೆ ತಿರುಗಿಸಿಕೊಂಡನು. \v 2 ಬಿಳಾಮನು ತನ್ನ ಕಣ್ಣೆತ್ತಿ ಇಸ್ರಾಯೇಲರು ಅವರವರ ಗೋತ್ರಗಳ ಪ್ರಕಾರ ತಮ್ಮ ಡೇರೆಗಳಲ್ಲಿ ವಾಸವಾಗಿರುವುದನ್ನು ನೋಡಿದಾಗ, ದೇವರಾತ್ಮ ಪ್ರೇರಿತನಾಗಿ \v 3 ಹೀಗೆ ಪ್ರವಾದಿಸಿದನು: \q1 “ಇದು ಬೆಯೋರನ ಮಗ ಬಿಳಾಮನ ಪ್ರವಾದನೆ: \q2 ಸ್ಪಷ್ಟ ಕಣ್ಣುಳ್ಳವನು ನುಡಿದದ್ದು. \q1 \v 4 ದೇವರ ಮಾತುಗಳನ್ನು ಕೇಳಿದವನೂ, \q2 ಸರ್ವಶಕ್ತರ ದರ್ಶನವನ್ನು ನೋಡಿದವನೂ, \q2 ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು: \b \q1 \v 5 “ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, \q2 ನಿಮ್ಮ ಗುಡಾರಗಳೂ ಉತ್ತಮವಾಗಿವೆ! \b \q1 \v 6 “ಅವು ಕಣಿವೆಗಳ ಹಾಗೆ ವಿಸ್ತರಿಸಿವೆ. \q2 ನದಿತೀರದಲ್ಲಿರುವ ತೋಟಗಳ ಹಾಗೆಯೂ, \q1 ಯೆಹೋವ ದೇವರು ನೆಟ್ಟ ಅಗರು ಮರಗಳ ಹಾಗೆಯೂ \q2 ನೀರಿನ ಬಳಿಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ. \q1 \v 7 ಅವರ ತೊಟ್ಟಿಗಳಿಂದ ನೀರು ಹರಿಯುವಂತೆ ಮಾಡುವರು. \q2 ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. \b \q1 “ಅವರ ಅರಸನು ಅಗಾಗ್ ರಾಜನಿಗಿಂತಲೂ ಉನ್ನತವಾಗಿರುವನು. \q2 ಅವರ ರಾಜ್ಯವು ಅಭಿವೃದ್ಧಿ ಹೊಂದುವುದು. \b \q1 \v 8 “ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. \q2 ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. \q1 ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, \q2 ಅವರ ಎಲುಬುಗಳನ್ನು ಚೂರುಮಾಡಿ, \q2 ತಮ್ಮ ಬಾಣಗಳಿಂದ ಗಾಯಮಾಡುವನು. \q1 \v 9 ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. \q2 ಅವನನ್ನು ಎಬ್ಬಿಸುವವನು ಯಾರು? \b \q1 “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. \q2 ಶಪಿಸುವವನಿಗೆ ಶಾಪ ಉಂಟಾಗಲಿ.” \p \v 10 ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಬಿಳಾಮನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಈ ಮೂರು ಸಾರಿಯೂ ಆಶೀರ್ವದಿಸಿದೆ. \v 11 ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು. \p \v 12 ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ, \v 13 ‘ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಬಂಗಾರಗಳನ್ನು ಕೊಟ್ಟರೂ, ನನ್ನ ಹೃದಯದಿಂದ ಒಳ್ಳೆಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡುವುದಕ್ಕೆ ಯೆಹೋವ ದೇವರ ಆಜ್ಞೆಯನ್ನು ಮೀರಲಾರೆನು. ಯೆಹೋವ ದೇವರು ಏನು ಹೇಳುತ್ತಾರೋ, ಅದನ್ನೇ ಹೇಳುವೆನೆಂದು ನಾನು ಹೇಳಲಿಲ್ಲವೋ’? ಈಗ, ನನ್ನ ಜನರ ಬಳಿಗೆ ಹೋಗುತ್ತೇನೆ. \v 14 ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ, ಅದನ್ನು ನಿನಗೆ ತಿಳಿಸುವೆನು,” ಎಂದನು. \s1 ಬಿಳಾಮನ ನಾಲ್ಕನೆಯ ದರ್ಶನ \p \v 15 ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: \q1 “ಬೆಯೋರನ ಮಗ ಬಿಳಾಮನು ಹೇಳಿದ್ದು: \q2 ಸ್ಪಷ್ಟ ಕಣ್ಣುಳ್ಳ ಮನುಷ್ಯನು ನುಡಿದದ್ದು. \q1 \v 16 ದೇವರ ಮಾತುಗಳನ್ನು ಕೇಳಿದವನೂ, \q2 ಮಹೋನ್ನತನ ಜ್ಞಾನವನ್ನು ತಿಳಿದವನೂ, \q1 ಸರ್ವಶಕ್ತರ ದರ್ಶನವನ್ನು ನೋಡಿದವನೂ, \q2 ಪರವಶನಾಗಿದ್ದು ತೆರೆದ ಕಣ್ಣುಳ್ಳವನೂ ಹೇಳಿದ್ದು: \b \q1 \v 17 “ನಾನು ಅವನನ್ನು ನೋಡುವೆನು, ಈಗಲ್ಲ. \q2 ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. \q1 ಯಾಕೋಬನಿಂದ ನಕ್ಷತ್ರ ಉದಯಿಸುವುದು. \q2 ಇಸ್ರಾಯೇಲನಿಂದ ರಾಜದಂಡ ಏಳುವುದು. \q1 ಅದು ಮೋವಾಬಿನ ಮೂಲೆಗಳನ್ನು ಹೊಡೆದು, \q2 ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು. \q1 \v 18 ಎದೋಮು ಸ್ವಾಧೀನವಾಗುವುದು; \q2 ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; \q2 ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು, \q1 \v 19 ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು, \q2 ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು.” \s1 ಬಿಳಾಮನ ಐದನೆಯ ದರ್ಶನ \p \v 20 ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: \q1 “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, \q2 ಆದರೆ ಅವನು ಕೊನೆಗೆ ನಾಶವಾಗುವನು.” \s1 ಬಿಳಾಮನ ಆರನೆಯ ದರ್ಶನ \p \v 21 ಬಳಿಕ ಕೇನ್ಯರನ್ನು ಅವನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: \q1 “ನಿನ್ನ ನಿವಾಸವು ಬಲವಾಗಿದೆ. \q2 ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ. \q1 \v 22 ಆದರೂ ಅಸ್ಸೀರಿಯರು ನಿನ್ನನ್ನು ಸೆರೆಹಿಡಿಯುವಷ್ಟರಲ್ಲೇ \q2 ನೀವು ಕೇನ್ಯರೂ ಹಾಳಾಗುವರು.” \s1 ಬಿಳಾಮನ ಏಳನೆಯ ದರ್ಶನ \p \v 23 ಇದಲ್ಲದೆ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: \q1 “ಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು? \q2 \v 24 ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, \q1 ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. \q2 ಅವನು ಸಹ ಸದಾಕಾಲಕ್ಕೂ ನಾಶವಾಗುವನು.” \p \v 25 ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರುಗಿಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು. \c 25 \s1 ಮೋವಾಬ್ ಮಹಿಳೆಯರು ಇಸ್ರಾಯೇಲರನ್ನು ಪ್ರಚೋದಿಸಿದ್ದು \p \v 1 ಆಗ ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ, ಅವರು ಮೋವಾಬಿನ ಪುತ್ರಿಯರ ಸಂಗಡ ಜಾರತ್ವ ಮಾಡಲಾರಂಭಿಸಿದರು. \v 2 ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು. \v 3 ಹೀಗೆ ಇಸ್ರಾಯೇಲರು ಬಾಳ್ ಪೆಯೋರಿನೊಂದಿಗೆ ತಾವೇ ಕೂಡಿ ಪೂಜಿಸಿದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡರು. \p \v 4 ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.” \p \v 5 ಆದ್ದರಿಂದ ಮೋಶೆ ಇಸ್ರಾಯೇಲಿನ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ಬಾಳ್ ಪೆಯೋರಿನೊಂದಿಗೆ ಕೂಡಿ ಪೂಜಿಸಿರುವ ನಿನ್ನ ಜನರನ್ನು ಕೊಲ್ಲಬೇಕು,” ಎಂದನು. \p \v 6 ಆಗ ಇಸ್ರಾಯೇಲರಲ್ಲಿ ಒಬ್ಬನು ಮೋಶೆಗೆ ಹಾಗೂ ದೇವದರ್ಶನ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲರ ಸಮಸ್ತ ಸಮೂಹಕ್ಕೂ ಕಾಣುವ ಹಾಗೆ ಒಬ್ಬ ಮಿದ್ಯಾನ್ ಮಹಿಳೆಯನ್ನು ಕರೆತಂದನು. \v 7 ಕೂಡಲೆ ಮಾಹಾಯಾಜಕ ಆರೋನನ ಮಗನಾಗಿದ್ದ ಎಲಿಯಾಜರನ ಮಗ ಫೀನೆಹಾಸನು ಅದನ್ನು ನೋಡಿ, ಜನರ ಮಧ್ಯದಿಂದ ಎದ್ದು, ತನ್ನ ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು, \v 8 ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. \v 9 ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು. \p \v 10 ಯೆಹೋವ ದೇವರು ಮೋಶೆಗೆ, \v 11 “ಯಾಜಕನಾದ ಆರೋನನ ಮೊಮ್ಮಗನೂ, ಎಲಿಯಾಜರನ ಮಗ ಫೀನೆಹಾಸನು ಇಸ್ರಾಯೇಲರಲ್ಲಿ ನನಗೋಸ್ಕರ ಆಸಕ್ತನಾಗಿದ್ದು, ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ, ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿಬಿಟ್ಟಿದ್ದಾನೆ. \v 12 ಆದಕಾರಣ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. \v 13 ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು. \p \v 14 ಮಿದ್ಯಾನ್ ಸ್ತ್ರೀಯ ಸಂಗಡ ಹತನಾದ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರದ ಮುಖ್ಯಸ್ಥನಾಗಿದ್ದ ಸಾಲೂ ಎಂಬುವನ ಮಗನು. \v 15 ಹತಳಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಗೆ ಯಜಮಾನನೂ ಆಗಿರುವ ಚೂರ್ ಎಂಬವನ ಮಗಳಾಗಿದ್ದಳು. \p \v 16 ಯೆಹೋವ ದೇವರು ಮೋಶೆಗೆ, \v 17 “ಮಿದ್ಯಾನ್ಯರನ್ನು ವೈರಿ ಎಂದು ತಿಳಿದು ಹೊಡೆಯಬೇಕು. \v 18 ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು. \c 26 \s1 ಎರಡನೆಯ ಜನಗಣತಿ \p \v 1 ವ್ಯಾಧಿಯ ತರುವಾಯ ಯೆಹೋವ ದೇವರು ಮೋಶೆಗೂ, ಆರೋನನ ಮಗನೂ, ಯಾಜಕನೂ ಆಗಿರುವ ಎಲಿಯಾಜರನ ಸಂಗಡ ಮಾತನಾಡಿ, \v 2 “ಇಸ್ರಾಯೇಲರ ಸಮಸ್ತ ಸಮೂಹದವರಲ್ಲಿ ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಯುದ್ಧಕ್ಕೆ ಹೋಗುವುದಕ್ಕೆ ಶಕ್ತರಾದವರೆಲ್ಲರನ್ನು ಜನಗಣತಿ ಮಾಡಿ ಅವರ ಗೋತ್ರಗಳ ಪ್ರಕಾರ ತೆಗೆದುಕೊಳ್ಳಿರಿ,” ಎಂದರು. \v 3 ಆಗ ಮೋಶೆಯೂ ಯಾಜಕನಾದ ಎಲಿಯಾಜರನೂ ಮೋವಾಬಿನ ಬಯಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ, \v 4 “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇಪ್ಪತ್ತು ವರ್ಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.” \b \li4 ಈಜಿಪ್ಟ್ ದೇಶದಿಂದ ಹೊರಟು ಬಂದಿದ್ದ ಇಸ್ರಾಯೇಲರು ಇವರು: \b \li1 \v 5 ಇಸ್ರಾಯೇಲನ ಚೊಚ್ಚಲ ಮಗ ರೂಬೇನನೂ, ರೂಬೇನನ ಮಕ್ಕಳೂ; \li2 ಹನೋಕನೂ, ಇವನಿಂದ ಹನೋಕ್ಯರ ಕುಟುಂಬ; \li2 ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ; \li2 \v 6 ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; \li2 ಕರ್ಮೀಯಿಂದ ಕರ್ಮೀಯರ ಕುಟುಂಬ. \li4 \v 7 ಇವೇ ರೂಬೇನ್ಯರ ಕುಟುಂಬಗಳು. ಇವರಲ್ಲಿ ಎಣಿಕೆಯಾದವರ ಸಂಖ್ಯೆ 43,730 ಪುರುಷರು. \li2 \v 8 ಪಲ್ಲೂವಿನ ಪುತ್ರ ಎಲೀಯಾಬನು. \v 9 ಎಲೀಯಾಬನ ಪುತ್ರರು ನೆಮೂಯೇಲ್, ದಾತಾನ್, ಅಬೀರಾಮ್. ಈ ದಾತಾನನೂ, ಅಬೀರಾಮನೂ ಜನರಲ್ಲಿ ಪ್ರಸಿದ್ಧರಾಗಿದ್ದು; ಕೋರಹನ ಗುಂಪಿನಲ್ಲಿದ್ದು; ಯೆಹೋವ ದೇವರಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು. \v 10 ಭೂಮಿಯು ತನ್ನ ಬಾಯಿಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು. ಹಾಗೆಯೇ ಆ ಗುಂಪಿನವರಲ್ಲಿ ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಹೀಗೆ ಇಸ್ರಾಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು. ಅವರು ದೃಷ್ಟಾಂತವಾದರು. \v 11 ಆದರೂ ಕೋರಹನ ಮಕ್ಕಳು ಸಾಯಲಿಲ್ಲ. \b \li1 \v 12 ಕುಟುಂಬಗಳ ಪ್ರಕಾರ ಸಿಮೆಯೋನನ ಪುತ್ರರು. \li2 ನೆಮೂಯೇಲನಿಂದ ನೆಮೂಯೇಲ್ಯರ ಕುಟುಂಬ; \li2 ಯಾಮೀನನಿಂದ ಯಾಮೀನ್ಯರ ಕುಟುಂಬ; \li2 ಯಾಕೀನನಿಂದ ಯಾಕೀನ್ಯರ ಕುಟುಂಬ; \li2 \v 13 ಜೆರಹನ ವಂಶಸ್ಥರಾದ ಜೆರಹಿಯರು, \li2 ಸೌಲನಿಂದ ಸೌಲ್ಯರ ಕುಟುಂಬ; \li4 \v 14 ಸಿಮೆಯೋನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 22,200 ಪುರುಷರು. \b \li1 \v 15 ಕುಟುಂಬಗಳ ಪ್ರಕಾರ ಗಾದನ ಮಕ್ಕಳು: \li2 ಚೆಫೋನನ ವಂಶಸ್ಥರಾದ ಚೆಫೋನ್ಯರು, \li2 ಹಗ್ಗೀಯಿಂದ ಹಗ್ಗೀಯರ ಕುಟುಂಬ \li2 ಶೂನೀಯಿಂದ ಶೂನೀಯರ ಕುಟುಂಬ; \li2 \v 16 ಒಜ್ನೀಯ ವಂಶಸ್ಥರಾದ ಒಜ್ನೀಯರು, \li2 ಏರೀಯ ವಂಶಸ್ಥರಾದ ಏರೀಯರು, \li2 \v 17 ಅರೋದನಿಂದ ಅರೋದ್ಯರ ಕುಟುಂಬ; \li2 ಅರೇಲೀಯಿಂದ ಅರೇಲೀಯರ ಕುಟುಂಬ. \li4 \v 18 ಗಾದನ ಮಕ್ಕಳ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 40,500 ಪುರುಷರು. \b \li4 \v 19 ಯೆಹೂದನ ಪುತ್ರರು: ಏರ್, ಓನಾನನೂ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. \li1 \v 20 ಕುಟುಂಬಗಳ ಪ್ರಕಾರ ಯೆಹೂದನ ಪುತ್ರರು. \li2 ಶೇಲಹನಿಂದ ಶೇಲಾನ್ಯರ ಕುಟುಂಬ; \li2 ಪೆರೆಚನಿಂದ ಪೆರೆಚ್ಯರ ಕುಟುಂಬ; \li2 ಜೆರಹನಿಂದ ಜೆರಹಿಯರ ಕುಟುಂಬ; \li2 \v 21 ಪೆರೆಚನ ಪುತ್ರರು, \li3 ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ. \li3 ಹಾಮೂಲನಿಂದ ಹಾಮೂಲ್ಯರು ಕುಟುಂಬ \li4 \v 22 ಯೆಹೂದನ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 76,500 ಪುರುಷರು. \b \li1 \v 23 ಕುಟುಂಬಗಳ ಪ್ರಕಾರ ಇಸ್ಸಾಕಾರನ ಪುತ್ರರು. \li2 ತೋಲನ ವಂಶಸ್ಥರಾದ ತೋಲಾಯರು, \li2 ಪುವ್ವನಿಂದ ಪೂನ್ಯರ ಕುಟುಂಬ; \li2 \v 24 ಯಾಶೂಬನಿಂದ ಯಾಶೂಬ್ಯರ ಕುಟುಂಬ; \li2 ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ. \li4 \v 25 ಇಸ್ಸಾಕಾರನ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 64,300 ಪುರುಷರು. \b \li1 \v 26 ಜೆಬುಲೂನನ ಪುತ್ರರು: ಕುಟುಂಬಗಳ ಪ್ರಕಾರ \li2 ಸೆರೆದನಿಂದ ಸೆರೆದ್ಯರ ಕುಟುಂಬ; \li2 ಏಲೋನನ ವಂಶಸ್ಥರಾದ ಏಲೋನ್ಯರು, \li2 ಯಹಲೇಲನಿಂದ ಯಹಲೇಲ್ಯರ ಕುಟುಂಬ. \li4 \v 27 ಜೆಬುಲೂನ್ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 60,500 ಪುರುಷರು. \b \li4 \v 28 ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್. \li4 \v 29 ಮನಸ್ಸೆಯ ಪುತ್ರರು: \li2 ಮಾಕೀರನಿಂದ ಮಾಕೀರ್ಯರ ಕುಟುಂಬ; ಮಾಕೀರನು ಗಿಲ್ಯಾದನನ್ನು ಪಡೆದನು. \li2 ಗಿಲ್ಯಾದನಿಂದ ಗಿಲ್ಯಾದ್ಯರ ಕುಟುಂಬ. \li2 \v 30 ಗಿಲ್ಯಾದನ ಪುತ್ರರು ಇವರೇ. \li3 ಈಯೆಜೆರನಿಂದ ಈಯೆಜೆರ್ಯರ ಕುಟುಂಬ; \li3 ಹೇಲೆಕನಿಂದ ಹೇಲೆಕ್ಯರ ಕುಟುಂಬ; \li3 \v 31 ಅಸ್ರೀಯೇಲನಿಂದ ಅಸ್ರೀಯೇಲ್ಯರ ಕುಟುಂಬ, \li3 ಶೆಕೆಮನಿಂದ ಶೆಕೆಮ್ಯರ ಕುಟುಂಬ; \li3 \v 32 ಶೆಮೀದಾಯನಿಂದ ಶೆಮೀದಾಯರ ಕುಟುಂಬ; \li3 ಹೇಫೆರನಿಂದ ಹೇಫೆರ್ಯರ ಕುಟುಂಬ. \li3 \v 33 ಹೇಫೆರನ ಮಗ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಪುತ್ರಿಯರು ಇದ್ದರು. ಚಲ್ಪಹಾದನ ಪುತ್ರಿಯರ ಹೆಸರುಗಳು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ. \li4 \v 34 ಮನಸ್ಸೆಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 52,700 ಪುರುಷರು. \li1 \v 35 ಕುಟುಂಬಗಳ ಪ್ರಕಾರ ಎಫ್ರಾಯೀಮನ ಪುತ್ರರು: \li2 ಶೂತೆಲಹನಿಂದ ಶೂತೆಲಹ್ಯರ ಕುಟುಂಬ; \li2 ಬೆಕೆರನಿಂದ ಬೆಕೆರ್ಯರ ಕುಟುಂಬ; \li2 ತಹನನಿಂದ ತಹನಿಯರ ಕುಟುಂಬ. \li2 \v 36 ಶೂತೆಲಹನ ಪುತ್ರರು: \li3 ಏರಾನನಿಂದ ಏರಾನ್ಯರ ಕುಟುಂಬ. \li4 \v 37 ಎಫ್ರಾಯೀಮನ ಪುತ್ರರ ಎಫ್ರಾಯೀಮನ ಪುತ್ರರುಗಳು ಇವೇ. ಅವರಲ್ಲಿ ಲೆಕ್ಕಿತರಾದವರ ಸಂಖ್ಯೆ 32,500. \li4 ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ. \b \li1 \v 38 ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು: \li2 ಬೆಳಗನಿಂದ ಬೆಲಗ್ಯರ ಕುಟುಂಬ; \li2 ಅಷ್ಬೇಲನಿಂದ ಅಷ್ಬೇಲ್ಯರ ಕುಟುಂಬ; \li2 ಅಹೀರಾಮನಿಂದ ಅಹೀರಾಮ್ಯರ ಕುಟುಂಬ; \li2 \v 39 ಶೂಫಾಮನಿಂದ ಶೂಫಾಮ್ಯರ ಕುಟುಂಬ; \li2 ಹೂಫಾಮನಿಂದ ಹೂಫಾಮ್ಯರ ಕುಟುಂಬ. \li2 \v 40 ಬೆಳಗನ ಪುತ್ರರು ಆರ್ದನೂ ನಾಮಾನನೂ. \li3 ಅರ್ದನಿಂದ ಅರ್ದ್ಯರ ಕುಟುಂಬ; \li3 ನಾಮಾನನಿಂದ ನಾಮಾನ್ಯರ ಕುಟುಂಬ. \li4 \v 41 ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು ಇವರೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 45,600. \b \li1 \v 42 ಕುಟುಂಬಗಳ ಪ್ರಕಾರ ದಾನನ ಪುತ್ರರು: \li2 ಶೂಹಾಮನಿಂದ ಶೂಹಾಮ್ಯರ ಕುಟುಂಬ; \li4 ಕುಟುಂಬಗಳ ಪ್ರಕಾರ ದಾನನ ಕುಟುಂಬಗಳು ಇವೇ. \v 43 ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 64,400. \b \li1 \v 44 ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: \li2 ಇಮ್ನಾಹನನಿಂದ ಇಮ್ನಾಹರ ಕುಟುಂಬ; \li2 ಇಷ್ವೀಯಿಂದ ಇಷ್ವೀಯರ ಕುಟುಂಬ; \li2 ಬೆರೀಯನಿಂದ ಬೆರೀಯರ ಕುಟುಂಬ. \li2 \v 45 ಬೆರೀಯನ ಕುಮಾರರು: \li3 ಹೆಬೆರನಿಂದ ಹೆಬೆರ್ಯರ ಕುಟುಂಬ; \li3 ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ. \li4 \v 46 ಆಶೇರನ ಮಗಳ ಹೆಸರು ಸೆರಹ. \li4 \v 47 ಲೆಕ್ಕಾನುಸಾರವಾದ ಆಶೇರನ ಪುತ್ರರ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 53,400. \b \li1 \v 48 ಕುಟುಂಬಗಳ ಪ್ರಕಾರ ನಫ್ತಾಲಿಯ ಪುತ್ರರು: \li2 ಯಹಚೇಲನಿಂದ ಯಹಚೇಲ್ಯರ ಕುಟುಂಬ; \li2 ಗೂನೀಯ ವಂಶಸ್ಥರಾದ ಗೂನೀಯರು, \li2 \v 49 ಯೇಚೆರನಿಂದ ಯೇಚೆರ್ಯರ ಕುಟುಂಬ; \li2 ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ. \li4 \v 50 ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರು 45,400. \b \li4 \v 51 ಇಸ್ರಾಯೇಲರಲ್ಲಿ ಲೆಕ್ಕಿತರಾದವರ ಸಂಖ್ಯೆ 6,01,730. \b \p \v 52 ಯೆಹೋವ ದೇವರು ಮೋಶೆಗೆ, \v 53 “ಇವರಿಗೆ ನಾಡನ್ನು ಹೆಸರುಗಳ ಲೆಕ್ಕದ ಪ್ರಕಾರ ಸೊತ್ತಾಗಿ ಹಂಚಿಕೊಡು. \v 54 ಹೆಚ್ಚು ಮಂದಿಯುಳ್ಳ ಗೋತ್ರಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಗೋತ್ರಕ್ಕೆ ಕಡಿಮೆಯಾಗಿಯೂ ಕೊಡು. ಹೀಗೆ ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸೊತ್ತನ್ನು ಹಂಚಿಕೊಡು. \v 55 ಇದಲ್ಲದೆ ಚೀಟು ಹಾಕುವುದರಿಂದ ದೇಶವನ್ನು ಪಾಲುಮಾಡಬೇಕು. ತಮ್ಮ ಗೋತ್ರಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ತಮ್ಮ ಪಾಲನ್ನು ಪಡೆಯಬೇಕು. \v 56 ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿಯ ಪ್ರಕಾರ ಪಾಲಾಗಬೇಕು.” \b \li1 \v 57 ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಕೆಯಾದವರು ಇವರೇ. \li2 ಗೇರ್ಷೋನನ ವಂಶದವರಾದ ಗೇರ್ಷೋನ್ಯರು, \li2 ಕೊಹಾತನಿಂದ ಕೊಹಾತ್ಯರ ಕುಟುಂಬ; \li2 ಮೆರಾರೀಯಿಂದ ಮೆರಾರೀಯರ ಕುಟುಂಬ. \li1 \v 58 ಲೇವಿಯರ ಕುಟುಂಬಗಳು ಇವೇ. \li2 ಲಿಬ್ನೀಯರ ಕುಟುಂಬ; \li2 ಹೆಬ್ರೋನಿಯರ ಕುಟುಂಬ; \li2 ಮಹ್ಲೀಯರ ಕುಟುಂಬ; \li2 ಮೂಷೀಯರ ಕುಟುಂಬ; \li2 ಕೋರಹೀಯರ ಕುಟುಂಬ. \li2 ಕೊಹಾತನು ಅಮ್ರಾಮನನ್ನು ಪಡೆದನು. \v 59 ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಈಜಿಪ್ಟಿನಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು. \v 60 ಆರೋನನಿಗೆ ನಾದಾಬನೂ ಅಬೀಹೂ ಎಲಿಯಾಜರನೂ ಈತಾಮಾರನೂ ಹುಟ್ಟಿದರು. \v 61 ಆದರೆ ನಾದಾಬನೂ ಅಬೀಹೂ ಯೆಹೋವ ದೇವರ ಮುಂದೆ ಆಜ್ಞಾಪಿಸದೇ ಇದ್ದ ಬೇರೆ ಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು. \b \li4 \v 62 ಇವರಲ್ಲಿ ಲೆಕ್ಕಿತರಾದವರು ಒಂದು ತಿಂಗಳೂ ಹಾಗೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 23,000 ಆಗಿತ್ತು. ಇವರಿಗೆ ಇಸ್ರಾಯೇಲರಲ್ಲಿ ಸೊತ್ತು ದೊರೆಯದ ಕಾರಣ ಅವರು ಇಸ್ರಾಯೇಲರೊಳಗೆ ಲೆಕ್ಕಿತರಾಗಲಿಲ್ಲ. \b \p \v 63 ಇವರನ್ನು ಮೋಶೆಯೂ ಯಾಜಕನಾದ ಎಲಿಯಾಜರನೂ ಇಸ್ರಾಯೇಲರಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು. \v 64 ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಎಣಿಸಿದಾಗ, ಎಣಿಕೆಯಾದವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ. \v 65 ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ. \c 27 \s1 ಚಲ್ಪಹಾದನ ಪುತ್ರಿಯರು \p \v 1 ಯೋಸೇಫನ ಮಗನಾದ ಮನಸ್ಸೆಯ ಕುಟುಂಬಗಳಿಗೆ ಸೇರಿದ ಚಲ್ಪಹಾದ ಎಂಬುವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫೆರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಪುತ್ರಿಯರಿದ್ದರು. \v 2 ಇವರು ಸಭೆಯ ಗುಡಾರದ ಬಾಗಿಲಿನ ಹತ್ತಿರದಲ್ಲಿದ್ದ ಮೋಶೆ, ಯಾಜಕನಾದ ಎಲಿಯಾಜರ್, ಪ್ರಧಾನರು ಮತ್ತು ಸಮಸ್ತ ಸಭೆಯವರ ಮುಂದೆ ಬಂದು ನಿಂತು ಅವರಿಗೆ, \v 3 “ನಮ್ಮ ತಂದೆಯು ಮರುಭೂಮಿಯಲ್ಲಿ ಸತ್ತನು. ಅವನು ಕೋರಹನ ಗುಂಪಿನಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ, ತನ್ನ ಪಾಪದಲ್ಲಿಯೇ ಸತ್ತನು. ಅವನಿಗೆ ಪುತ್ರರು ಇರಲಿಲ್ಲ. \v 4 ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು. \p \v 5 ಮೋಶೆಯು ಅವರ ವ್ಯಾಜ್ಯವನ್ನು ಯೆಹೋವ ದೇವರ ಮುಂದೆ ತಂದನು. \v 6 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 7 ಚಲ್ಪಹಾದನ ಪುತ್ರಿಯರು ಹೇಳಿದ್ದು ಸರಿ, ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಿಶ್ಚಯವಾಗಿ ಕೊಡಬೇಕು, ಅವರ ತಂದೆಯ ಸೊತ್ತನ್ನು ಅವರಿಗೆ ಸೇರಿಸಬೇಕು. \p \v 8 “ಇಸ್ರಾಯೇಲರ ಸಂಗಡ ಮಾಡನಾಡಿ ನೀನು ಹೇಳಬೇಕಾದದ್ದೇನೆಂದರೆ: ‘ಒಬ್ಬನು ಮಗನಿಲ್ಲದೆ ಸತ್ತರೆ, ನೀವು ಅವನ ಸೊತ್ತನ್ನು ಅವನ ಮಗಳಿಗೆ ಸೇರಿಸಬೇಕು. \v 9 ಅವನಿಗೆ ಸಹೋದರರು ಇಲ್ಲದಿದ್ದರೆ, ನೀವು ಅವನ ಸೊತ್ತನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು. \v 10 ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ, \v 11 ಅವನ ಕುಟುಂಬದೊಳಗೆ ಅವನಿಗೆ ಹೆಚ್ಚಾಗಿ ಸಮೀಪವಾದ ಬಂಧುವಿಗೆ ಅವನ ಸೊತ್ತನ್ನು ಕೊಡಬೇಕು. ಅವನೇ ಅದನ್ನು ಪಡೆದುಕೊಳ್ಳಲಿ. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇದು ಇಸ್ರಾಯೇಲರಿಗೆ ನ್ಯಾಯದ ಕಟ್ಟಳೆಯಾಗಿರಬೇಕು,’ ” ಎಂದು ಹೇಳಿದರು. \s1 ಮೋಶೆ ಯೆಹೋಶುವನನ್ನು ನೇಮಿಸಿದ್ದು \p \v 12 ಆಗ ಯೆಹೋವ ದೇವರು ಮೋಶೆಗೆ, “ನೀನು ಈ ಅಬಾರೀಮ್ ಪರ್ವತದ ಮೇಲೆ ಏರಿ, ನಾನು ಇಸ್ರಾಯೇಲರಿಗೆ ಕೊಟ್ಟ ದೇಶವನ್ನು ನೋಡು. \v 13 ಅದನ್ನು ನೋಡಿದ ಮೇಲೆ, ನಿನ್ನ ಸಹೋದರನಾದ ಆರೋನನ ಪ್ರಕಾರ ನೀನೂ ಸಹ ನಿನ್ನ ಜನರ ಬಳಿಗೆ ಸೇರುತ್ತೀ. \v 14 ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು. \p \v 15 ಮೋಶೆಯು ಯೆಹೋವ ದೇವರ ಸಂಗಡ ಮಾತನಾಡಿ, \v 16 “ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ. \v 17 ಅವನು ಅವರ ಮುಂದಾಗಿ ಹೋಗಲಿ, ಅವರ ಮುಂದಾಗಿ ಬರಲಿ. ಅವರನ್ನು ಕರೆದುಕೊಂಡು ಹೋಗಲಿ, ಕರೆದುಕೊಂಡು ಬರಲಿ. ಯೆಹೋವ ದೇವರ ಈ ಜನಸಮೂಹವು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು,” ಎಂದನು. \p \v 18 ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು, \v 19 ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, ಅವರಿಗೆದುರಾಗಿ ಅವನನ್ನು ನೇಮಿಸು. \v 20 ಇಸ್ರಾಯೇಲರ ಸಮಸ್ತ ಸಭೆಯು ಅವನಿಗೆ ವಿಧೇಯರಾಗುವಂತೆ, ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು. \v 21 ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು. \p \v 22 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತೆಗೆದುಕೊಂಡು, ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ, ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, \v 23 ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು. \c 28 \s1 ನಿತ್ಯ ಬಲಿಗಳು \p \v 1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’ \v 3 ನೀನು ಅವರಿಗೆ ಹೇಳಬೇಕಾದದ್ದು: ‘ನೀವು ಯೆಹೋವ ದೇವರಿಗೆ ಅರ್ಪಿಸಬೇಕಾದ ಅರ್ಪಣೆ ಏನೆಂದರೆ, ನಿಯಮಿತವಾಗಿ ಪ್ರತಿದಿನ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನು ದಹನಬಲಿಯಾಗಿ ಅರ್ಪಿಸಬೇಕು. \v 4 ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು. \v 5 ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್\f + \fr 28:5 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಹಿನ್‌ನ ಕಾಲುಭಾಗ, \fqa*\ft ಅಂದರೆ ಸುಮಾರು 1 ಲೀಟರ್\ft*\f* ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ\f + \fr 28:5 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಎಫಾದ ಹತ್ತನೇ ಒಂದು ಭಾಗ, \fqa*\ft ಅಂದರೆ ಸುಮಾರು 1.5 ಕಿಲೋಗ್ರಾಂ\ft*\f* ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು. \v 6 ಇದು ಸೀನಾಯಿ ಪರ್ವತದಲ್ಲಿ ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. \v 7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು. \v 8 ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. \s1 ಸಬ್ಬತ್ ದಿನದ ಸಮರ್ಪಣೆಗಳು \p \v 9 “ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ\f + \fr 28:9 \fr*\ft ಸುಮಾರು 3.2 ಕಿಲೋಗ್ರಾಂ\ft*\f* ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು. \v 10 ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ. \s1 ತಿಂಗಳಿನ ಸಮರ್ಪಣೆಗಳು \p \v 11 “ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ, \v 12 ಒಂದೊಂದು ಹೋರಿಗೆ ಧಾನ್ಯ ಅರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಮೂರು ಭಾಗ\f + \fr 28:12 \fr*\ft ಸುಮಾರು ಐದು ಕಿಲೋಗ್ರಾಂ\ft*\f* ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ\f + \fr 28:12 \fr*\ft ಸುಮಾರು 1.3 ಲೀಟರ್\ft*\f* ಹಿಟ್ಟನ್ನೂ, \v 13 ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಒಂದು ಭಾಗ ಹಿಟ್ಟನ್ನೂ, ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ. \v 14 ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್\f + \fr 28:14 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಅರ್ಧ ಹಿನ್, \fqa*\ft ಅಂದರೆ ಸುಮಾರು 2 ಲೀಟರ್\ft*\f* ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್\f + \fr 28:14 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಹಿನ್‌ನ ಮೂರನೇ ಒಂದು ಭಾಗ, \fqa*\ft ಅಂದರೆ ಸುಮಾರು 1.3 ಲೀಟರ್\ft*\f* ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್\f + \fr 28:14 \fr*\ft ಹೀಬ್ರೂ ಭಾಷೆಯಲ್ಲಿ \ft*\fqa ಹಿನ್‌ನ ಕಾಲುಭಾಗ, \fqa*\ft ಅಂದರೆ ಸುಮಾರು ಒಂದು ಲೀಟರ್\ft*\f* ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ\f + \fr 28:14 \fr*\fq ತಿಂಗಳಿನ ಆರಂಭ \fq*\ft ಎಂದರೆ \ft*\fqa ಅಮಾವಾಸ್ಯೆಯಲ್ಲಿ\fqa*\f* ಹೀಗೆ ದಹನಬಲಿಯನ್ನು ಅರ್ಪಿಸಬೇಕು. \v 15 ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು. \s1 ಪಸ್ಕಹಬ್ಬವು \p \v 16 “ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು. \v 17 ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. \v 18 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ. \v 19 ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು. \v 20 ಅವುಗಳ ಧಾನ್ಯ ಸಮರ್ಪಣೆಯನ್ನೂ, ಎಣ್ಣೆ ಕಲಸಿದ ಐದು ಕಿಲೋಗ್ರಾಂ\f + \fr 28:20 \fr*\ft ಸುಮಾರು ಎಫಾದ ಹತ್ತನೇ ಮೂರು ಭಾಗ\ft*\f* ಹಿಟ್ಟನ್ನು ಒಂದೊಂದು ಹೋರಿಗೆ, ಹತ್ತನೇ ಎರಡು ಭಾಗ ಟಗರಿಗೂ ಅರ್ಪಿಸಬೇಕು. \v 21 ಮತ್ತು ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಸುಮಾರು ಒಂದುವರೆ ಕಿಲೋಗ್ರಾಂ\f + \fr 28:21 \fr*\ft ಸುಮಾರು ಹತ್ತನೇ ಒಂದು ಭಾಗ\ft*\f* ಅರ್ಪಿಸಬೇಕು. \v 22 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. \v 23 ನಿತ್ಯ ದಹನಬಲಿಯಾಗಿರುವ ಮುಂಜಾನೆಯ ದಹನಬಲಿಯ ಹೊರತಾಗಿ ಇವುಗಳನ್ನು ನೀವು ಅರ್ಪಿಸಬೇಕು. \v 24 ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೆ ಪ್ರತಿದಿನವೂ ಯೆಹೋವ ದೇವರಿಗೆ ಸುವಾಸನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು. ಅದನ್ನೂ ಅದಕ್ಕೆ ತಕ್ಕ ಪಾನಾರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. \v 25 ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ. \s1 ವಾರಗಳ ಹಬ್ಬ \p \v 26 “ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು. \v 27 ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ, \v 28 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಸುಮಾರು ಐದು ಕಿಲೋಗ್ರಾಂ\f + \fr 28:28 \fr*\ft ಸುಮಾರು ಎಫಾದ ಹತ್ತನೇ ಮೂರು ಭಾಗ\ft*\f* ಹಿಟ್ಟನ್ನು ಪ್ರತಿಯೊಂದು ಹೋರಿಗೆ, ಸುಮಾರು ಮೂರುವರೆ ಕಿಲೋಗ್ರಾಂ\f + \fr 28:28 \fr*\ft ಸುಮಾರು ಹತ್ತನೇ ಎರಡು ಭಾಗ\ft*\f* ಟಗರಿಗೂ \v 29 ಏಳು ಕುರಿಮರಿಗಳಲ್ಲಿ ಸುಮಾರು ಒಂದುವರೆ ಕಿಲೋಗ್ರಾಂ\f + \fr 28:29 \fr*\ft ಸುಮಾರು ಹತ್ತನೇ ಒಂದು ಭಾಗ\ft*\f*, \v 30 ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಒಂದು ಹೋತವನ್ನು ಸಮರ್ಪಿಸಬೇಕು. \v 31 ನಿತ್ಯವಾದ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಹೊರತಾಗಿ ಇವುಗಳ ಜೊತೆಗೆ ನೀವು ದೋಷವಿಲ್ಲದ ಪ್ರಾಣಿಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು. \c 29 \s1 ತುತೂರಿಗಳ ಹಬ್ಬ \p \v 1 “ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು. \v 2 ನೀವು ಯೆಹೋವ ದೇವರಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ದಹನಬಲಿಯಾಗಿ ಅರ್ಪಿಸಬೇಕು. \v 3 ಅವುಗಳಿಗೆ ಧಾನ್ಯ ಸಮರ್ಪಣೆಯಾಗಿ ಎಣ್ಣೆಯಿಂದ ಕಲಸಿದ ಹಿಟ್ಟನ್ನು ಹೋರಿಗೆ ಎಫಾದ ಹತ್ತನೇ ಮೂರು ಭಾಗ\f + \fr 29:3 \fr*\ft ಸುಮಾರು ಐದು ಕಿಲೋಗ್ರಾಂ\ft*\f*, ಟಗರಿಗೆ ಹತ್ತನೇ ಎರಡು ಭಾಗ\f + \fr 29:3 \fr*\ft ಸುಮಾರು 3.2 ಕಿಲೋಗ್ರಾಂ\ft*\f*, \v 4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ\f + \fr 29:4 \fr*\ft ಸುಮಾರು 1.6 ಕಿಲೋಗ್ರಾಂ\ft*\f*, \v 5 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು. \v 6 ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು. \s1 ಪ್ರಾಯಶ್ಚಿತ್ತದ ದಿನ \p \v 7 “ ‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು. \v 8 ಆದರೆ ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ, \v 9 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು, ಹೋರಿಗೆ ಎಫಾದ ಹತ್ತನೇ ಮೂರು ಭಾಗ\f + \fr 29:9 \fr*\ft ಸುಮಾರು ಐದು ಕಿಲೋಗ್ರಾಂ\ft*\f*, ಟಗರಿಗೆ ಎಫಾದ ಹತ್ತನೇ ಎರಡು ಭಾಗ\f + \fr 29:9 \fr*\ft ಸುಮಾರು 3.2 ಕಿಲೋಗ್ರಾಂ\ft*\f*, \v 10 ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ\f + \fr 29:10 \fr*\ft ಸುಮಾರು 1.6 ಕಿಲೋಗ್ರಾಂ\ft*\f*, \v 11 ಪಾಪ ಪರಿಹಾರಕ ಬಲಿಗಾಗಿ ಒಂದು ಹೋತನ್ನು ಅರ್ಪಿಸುವದರ ಜೊತೆಗೆ ಪ್ರಾಯಶ್ಚಿತ್ತದ ಪಾಪ ಪರಿಹಾರಕ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು. \s1 ಗುಡಾರಗಳ ಹಬ್ಬ \p \v 12 “ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. \v 13 ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಯಾಗಿ ಬಲಿಯನ್ನು ಅರ್ಪಿಸಬೇಕು. ಏನೆಂದರೆ, ದೋಷವಿಲ್ಲದ ಹದಿಮೂರು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, \v 14 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಮೂರು ಭಾಗ\f + \fr 29:14 \fr*\ft ಸುಮಾರು ಐದು ಕಿಲೋಗ್ರಾಂ\ft*\f*, ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಎರಡು ಭಾಗ\f + \fr 29:14 \fr*\ft ಸುಮಾರು 3.2 ಕಿಲೋಗ್ರಾಂ\ft*\f*, \v 15 ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಒಂದು ಭಾಗ\f + \fr 29:15 \fr*\ft ಸುಮಾರು 1.6 ಕಿಲೋಗ್ರಾಂ\ft*\f*, \v 16 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆ ಮತ್ತು ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು. \p \v 17 “ ‘ಎರಡನೆಯ ದಿವಸದಲ್ಲಿ ಕಳಂಕವಿಲ್ಲದ ಹನ್ನೆರಡು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, \v 18 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ, \v 19 ದೋಷಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. \p \v 20 “ ‘ಮೂರನೆಯ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, \v 21 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ, \v 22 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. \p \v 23 “ ‘ನಾಲ್ಕನೆಯ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, \v 24 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ \v 25 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. \p \v 26 “ ‘ಐದನೆಯ ದಿವಸದಲ್ಲಿ ದೋಷವಿಲ್ಲದ ಒಂಬತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, \v 27 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯಪಾನ ಬಲಿಗಳನ್ನೂ, \v 28 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. \p \v 29 “ ‘ಆರನೆಯ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, \v 30 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ, \v 31 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. \p \v 32 “ ‘ಏಳನೆಯ ದಿವಸದಲ್ಲಿ ದೋಷವಿಲ್ಲದ ಏಳು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ \v 33 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ, \v 34 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. \p \v 35 “ ‘ಎಂಟನೆಯ ದಿನದಲ್ಲಿ ನೀವು ಹಬ್ಬದ ಸಭೆಯಾಗಿ ಕೂಡಿಬರಬೇಕು. ದೈನಂದಿನ ಕೆಲಸವನ್ನು ನೀವು ಮಾಡಬಾರದು. \v 36 ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ \v 37 ಹೋರಿಗೆ, ಟಗರಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ, \v 38 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. \p \v 39 “ ‘ಇದಲ್ಲದೆ ನಿಮ್ಮ ಹರಕೆಯನ್ನೂ ನಿಮ್ಮ ಉಚಿತವಾದ ಬಲಿಗಳನ್ನೂ ನಿಮ್ಮ ದಹನಬಲಿಗಳನ್ನೂ ನಿಮ್ಮ ಧಾನ್ಯಪಾನ ಅರ್ಪಣೆಗಳನ್ನೂ ನಿಮ್ಮ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಯೆಹೋವ ದೇವರಿಗೆ ಮಾಡತಕ್ಕೆ ಸಮರ್ಪಣೆಗಳು ಇವೇ.’ ” \p \v 40 ಯೆಹೋವ ದೇವರು ತನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮೋಶೆಯು ಇಸ್ರಾಯೇಲರಿಗೆ ಹೇಳಿದನು. \c 30 \s1 ಹರಕೆ ತೀರಿಸುವುದು \p \v 1 ಮೋಶೆಯು ಇಸ್ರಾಯೇಲರ ಗೋತ್ರಗಳ ನಾಯಕರ ಸಂಗಡ ಮಾತನಾಡಿ, “ಯೆಹೋವ ದೇವರು ಆಜ್ಞಾಪಿಸಿದ್ದೇನೆಂದರೆ: \v 2 ಯಾವನಾದರೂ ಯೆಹೋವ ದೇವರಿಗೆ ಹರಕೆಯನ್ನು ಮಾಡಿದರೆ, ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ, ಅವನು ತನ್ನ ಮಾತನ್ನು ತಪ್ಪಿಸಬಾರದು. ಬಾಯಿಂದ ಹೊರಟ ಮಾತುಗಳ ಪ್ರಕಾರ ಎಲ್ಲವನ್ನೂ ಮಾಡಬೇಕು. \p \v 3 “ಸ್ತ್ರೀಯು ಯೆಹೋವ ದೇವರಿಗೆ ಹರಕೆಮಾಡಿ, ತನ್ನ ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿ ದೇವರಿಗೆ ಹರಕೆಯನ್ನು ಮಾಡಿದಾಗ, ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆ ಮಾಡಿದಾಗ, \v 4 ಅವಳ ತಂದೆಯು ಆ ವಿಷಯವನ್ನು ತಿಳಿದು ಮೌನವಾಗಿದ್ದರೆ, ಅವಳು ಆ ಹರಕೆ ಮತ್ತು ಪ್ರಮಾಣಗಳನ್ನು ನೆರವೇರಿಸಲೇಬೇಕು. \v 5 ಆದರೆ ಅವಳ ತಂದೆ ಅದನ್ನು ಕೇಳಿ ಅವಳನ್ನು ತಡೆದರೆ, ಅವಳ ಎಲ್ಲಾ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುತ್ತವೆ. ಅವಳ ತಂದೆ ಅವಳನ್ನು ತಡೆದ ಕಾರಣ ಯೆಹೋವ ದೇವರು ಅವಳನ್ನು ಕ್ಷಮಿಸುವರು. \p \v 6 “ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಹರಕೆಗಳು ಇಲ್ಲವೆ ಪ್ರಾಣವನ್ನು ಬಂಧಿಸುವ ಬಾಯಿಂದ ಬಂದ ಮಾತು ಇದ್ದರೆ, \v 7 ಅವಳ ಗಂಡನು ಆ ವಿಷಯವನ್ನು ತಿಳಿದು ಸುಮ್ಮನಿದ್ದ ಪಕ್ಷದಲ್ಲಿ ಅವಳ ಹರಕೆಗಳೂ ಪ್ರತಿಜ್ಞೆಗಳೂ ನೆರವೇರಬೇಕು. \v 8 ಆದರೆ ಅವಳ ಗಂಡನು ಅದನ್ನು ಕೇಳಿದಾಗ ಬೇಡವೆಂದು ತಡೆದು, ಅವಳ ಮೇಲೆ ಇರುವ ಅವಳ ಹರಕೆಯನ್ನೂ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆಯನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಯೆಹೋವ ದೇವರು ಅವಳಿಗೆ ಕ್ಷಮಿಸುವರು. \p \v 9 “ಇದಲ್ಲದೆ ವಿಧವೆಯಾದರೂ ವಿವಾಹ ವಿಚ್ಛೇದಿತ ಮಹಿಳೆಯಾದರೂ ಇಂತಹ ಹರಕೆ ಇಲ್ಲವೆ ಪ್ರಮಾಣ ಮಾಡಿಕೊಂಡರೆ ಅವಳು ಅದನ್ನು ನೆರವೇರಿಸಬೇಕು. \p \v 10 “ಅವಳು ತನ್ನ ಗಂಡನ ಮನೆಯಲ್ಲಿ ಅಂತಹ ಹರಕೆ ಇಲ್ಲವೆ ಪ್ರತಿಜ್ಞೆಯನ್ನು ಮಾಡಿದಾಗ, \v 11 ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು, ಅವಳನ್ನು ತಡೆಯದ ಪಕ್ಷದಲ್ಲಿ, ಅವಳ ಸಮಸ್ತ ಹರಕೆಗಳೂ ಪ್ರತಿಜ್ಞೆಗಳೂ ನಿಲ್ಲುವುವು. \v 12 ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕ ಮಾಡಿದ ಪಕ್ಷದಲ್ಲಿ ಅವಳ ಹರಕೆಗಳಿಗೋಸ್ಕರವೂ ಅವಳು ಕೈಗೊಂಡ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವುದಾಗಲಿ ನಿಲ್ಲದು. ಅವಳ ಗಂಡನು ಅವುಗಳನ್ನು ನಿರರ್ಥಕ ಮಾಡಿದ್ದಾನೆ. ಯೆಹೋವ ದೇವರು ಅವಳಿಗೆ ಕ್ಷಮಿಸುವರು. \v 13 ಸಮಸ್ತ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಸಮಸ್ತ ಹರಕೆಗಳನ್ನೂ, ಅವಳ ಗಂಡನು ಅದನ್ನು ಸ್ಥಾಪಿಸಬಹುದು ಅಥವಾ ಅದನ್ನು ರದ್ದುಗೊಳಿಸಬಹುದು. \v 14 ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ, ಅವನು ಅವಳ ಸಮಸ್ತ ಹರಕೆಗಳನ್ನೂ ಅವಳ ಮೇಲಿರುವ ಸಮಸ್ತ ಪ್ರತಿಜ್ಞೆಗಳನ್ನೂ ಅನುಮೋದಿಸಿದಂತಾಗುವುದು. ಅವನು ಕೇಳಿದ ದಿನದಲ್ಲಿ ಅದಕ್ಕೆ ಸುಮ್ಮನಿರುವುದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ. \v 15 ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ, ಅವನೇ ಅವಳ ಅಕ್ರಮವನ್ನು ಹೊರಬೇಕು.” \p \v 16 ಗಂಡ ಹೆಂಡತಿಯರ ವಿಷಯದಲ್ಲಿಯೂ ತಂದೆಯ ಮನೆಯಲ್ಲಿ ಕನ್ಯಾವಸ್ಥೆಯಲ್ಲಿರುವ ಮಗಳ ವಿಷಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ. \c 31 \s1 ಇಸ್ರಾಯೇಲರು ಮಿದ್ಯಾನ್ಯರನ್ನು ಸಂಹರಿಸಿದ್ದು \p \v 1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 2 “ನೀನು ಇಸ್ರಾಯೇಲರಿಂದ ಮಿದ್ಯಾನ್ಯರಿಗೆ ಮುಯ್ಯನ್ನು ತೀರಿಸಬೇಕು. ತರುವಾಯ ನೀನು ನಿನ್ನ ಪೂರ್ವಜರ ಬಳಿಗೆ ಸೇರಬೇಕು,” ಎಂದರು. \p \v 3 ಆಗ ಮೋಶೆಯು ಜನರ ಸಂಗಡ ಮಾತನಾಡಿ, “ನಿಮ್ಮೊಳಗಿಂದ ಜನರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಲಿ. ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ, ಯೆಹೋವ ದೇವರ ಪ್ರತೀಕಾರವನ್ನು ಅವರಿಗೆ ತೀರಿಸಬೇಕು. \v 4 ಇಸ್ರಾಯೇಲರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಯುದ್ಧಕ್ಕೆ ಕಳುಹಿಸಬೇಕು,” ಎಂದನು. \v 5 ಆಗ ಇಸ್ರಾಯೇಲರ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು. \v 6 ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು. \p \v 7 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ, \v 8 ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು. \v 9 ಇಸ್ರಾಯೇಲರು ಮಿದ್ಯಾನ್ಯರ ಸ್ತ್ರೀಯರನ್ನೂ, ಅವರ ಮಕ್ಕಳನ್ನೂ ಸೆರೆಹಿಡಿದು, ಅವರ ಸಮಸ್ತ ಪಶುಗಳನ್ನೂ, ಅವರ ಸಮಸ್ತ ಹಿಂಡುಗಳನ್ನೂ, ಅವರ ಸಮಸ್ತ ಸಲಕರಣೆಗಳನ್ನೂ ಸುಲಿಗೆ ಮಾಡಿದರು. \v 10 ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ, ಅವರ ಸಮಸ್ತ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು. \v 11 ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು. \v 12 ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು. \p \v 13 ಮೋಶೆಯೂ, ಯಾಜಕನಾದ ಎಲಿಯಾಜರನೂ, ಸಮೂಹದ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು. \v 14 ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವ ಪಾಳೆಯದ ಮೇಲೆ ಕೋಪಮಾಡಿಕೊಂಡರು. \p \v 15 ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ? \v 16 ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು. \v 17 ಆದಕಾರಣ ಈಗ ಬಾಲಕರನ್ನೂ, ಎಲ್ಲಾ ಪುರುಷನನ್ನು ಅರಿತಿರುವ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ. \v 18 ಆದರೆ ಪುರುಷನನ್ನು ಅರಿಯದ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗಾಗಿ ಉಳಿಸಿಕೊಳ್ಳಿರಿ. \p \v 19 “ಇದಲ್ಲದೆ ನಿಮ್ಮಲ್ಲಿ ಪ್ರಾಣ ತೆಗೆದವರು ಮತ್ತು ಶವವನ್ನು ಮುಟ್ಟಿದವರು ಏಳು ದಿವಸ ಪಾಳೆಯದ ಹೊರಗೆ ಇರಬೇಕು. ನೀವೂ, ನಿಮ್ಮ ಸೆರೆಯವರೂ ಮೂರನೆಯ ಹಾಗೂ ಏಳನೆಯ ದಿವಸಗಳಲ್ಲಿ ನಿಮ್ಮನ್ನು ಶುದ್ಧ ಮಾಡಿಕೊಳ್ಳಬೇಕು. \v 20 ಎಲ್ಲಾ ಬಟ್ಟೆಗಳನ್ನೂ, ಎಲ್ಲಾ ಚರ್ಮದ ಸಲಕರಣೆಗಳನ್ನೂ, ಮೇಕೆ ಕೂದಲಿಂದ ಮಾಡಿದ್ದೆಲ್ಲವನ್ನೂ, ಕಟ್ಟಿಗೆ ಸಲಕರಣೆಗಳೆಲ್ಲವನ್ನೂ ಶುದ್ಧಮಾಡಬೇಕು,” ಎಂದು ಹೇಳಿದನು. \p \v 21 ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ: \v 22 ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು \v 23 ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು. \v 24 ಏಳನೆಯ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗಬೇಕು. ತರುವಾಯ ಪಾಳೆಯದೊಳಗೆ ಬರಬೇಕು,” ಎಂದು ಹೇಳಿದನು. \s1 ಸುಲಿಗೆಯನ್ನು ಪಾಲು ಮಾಡಿಕೊಂಡದ್ದು \p \v 25 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 26 “ನೀನೂ, ಯಾಜಕನಾದ ಎಲಿಯಾಜರನೂ, ಕುಲಾಧಿಪತಿಗಳೂ ಸೈನಿಕರ ಕೈಗೆ ಸಿಕ್ಕಿರುವ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿರಿ. \v 27 ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಭಟರಿಗೂ, ಸಮಸ್ತ ಸಭೆಗೂ ಎರಡು ಪಾಲನ್ನು ಮಾಡಬೇಕು. \v 28 ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು. \v 29 ಅವರ ಅರ್ಧ ಪಾಲಿನಿಂದ ಅದನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಅರ್ಪಣೆಯಾಗಿ, ಯಾಜಕನಾದ ಎಲಿಯಾಜರನಿಗೆ ಕೊಡಬೇಕು. \v 30 ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು. \v 31 ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿದರು. \p \v 32 ಯುದ್ಧಭಟರು ತೆಗೆದುಕೊಂಡು ಬಂದ ಲೂಟಿಯಲ್ಲಿ ಉಳಿದ ಸುಲಿಗೆ ಎಷ್ಟೆಂದರೆ 6,75,000 ಕುರಿಗಳು. \v 33 72,000 ಪಶುಗಳು; \v 34 ಕತ್ತೆಗಳು 61,000; \v 35 ಪುರುಷರನ್ನು ಅರಿಯದ ಸ್ತ್ರೀಯರು 32,000 ಮಂದಿ. \b \li4 \v 36 ಯುದ್ಧಕ್ಕೆ ಹೊರಟವರ ಅರ್ಧ ಭಾಗದ ಲೆಕ್ಕವಿದು: \b \li1 3,37,500 ಕುರಿಗಳಿಂದ \v 37 ಯೆಹೋವ ದೇವರಿಗೆ ಕೊಡಲಾದ ಕಪ್ಪವು 675; \li1 \v 38 ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ ಯೆಹೋವ ದೇವರಿಗೆ ಉಂಟಾದ ಕಪ್ಪವು 72 ದನಕರುಗಳು; \li1 \v 39 30,500 ಕತ್ತೆಗಳು; ಅವುಗಳಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 61; \li1 \v 40 16,000 ಜನರು, ಅವರಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 32 ಜನ. \b \p \v 41 ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು. \p \v 42 ಮೋಶೆಯು ಯುದ್ಧಕ್ಕೆ ಹೋದ ಜನರಿಂದ ತೆಗೆದುಕೊಂಡು ಇಸ್ರಾಯೇಲರಿಗೆ ಹಂಚಿದ ಅರ್ಧ ಭಾಗದ ವಿವರ: \v 43 ಕುರಿಗಳಿಂದ ಸಭೆಯ ಅರ್ಧ 3, 37,500 ಕುರಿಗಳು; \v 44 36,000 ಪಶುಗಳು; \v 45 30,500 ಕತ್ತೆಗಳು; \v 46 16,000 ಜನರು; \v 47 ಮೋಶೆಯು ಇಸ್ರಾಯೇಲರ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋವ ದೇವರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು. \p \v 48 ಆಗ ಸೈನ್ಯದ ಅಧಿಕಾರಿಗಳಾದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು, \v 49 ಮೋಶೆಗೆ ಅವರು, “ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಭಟರ ಲೆಕ್ಕವನ್ನು ತೆಗೆದುಕೊಂಡೆವು. ಅವರೊಳಗೆ ಒಬ್ಬನಾದರೂ ಕಡಿಮೆಯಾಗಲಿಲ್ಲ. \v 50 ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು. \p \v 51 ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು. \v 52 ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವ ದೇವರಿಗೆ ಅರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್‌ಗಳು\f + \fr 31:52 \fr*\ft ಸುಮಾರು 190 ಕಿಲೋಗ್ರಾಂ\ft*\f*. \v 53 ಯುದ್ಧದ ಜನರು ಒಬ್ಬೊಬ್ಬನು ಸ್ವಂತವಾಗಿ ಸುಲಿದುಕೊಂಡಿದ್ದನು. \v 54 ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು. \c 32 \s1 ಪೂರ್ವದಿಕ್ಕಿನಲ್ಲಿ ಸ್ವಾಧೀನ \p \v 1 ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು. \v 2 ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ: \v 3 “ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು, \v 4 ಯೆಹೋವ ದೇವರು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪ್ರದೇಶವು ಪಶುಗಳ ಮೇವಿಗೆ ಸೂಕ್ತವಾಗಿದೆ. ನಿಮ್ಮ ಸೇವಕರಿಗೂ ಪಶುಗಳು ಉಂಟು. \v 5 ಆದ್ದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯೆಯು ಸಿಕ್ಕಿದ್ದಾದರೆ, ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು. ನಮ್ಮನ್ನು ಯೊರ್ದನ್ ನದಿಯ ಆಚೆಗೆ ತೆಗೆದುಕೊಂಡು ಹೋಗಬೇಡಿರಿ,” ಎಂದರು. \p \v 6 ಆಗ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲಿ ಕುಳಿತಿರಬೇಕೋ? \v 7 ಯೆಹೋವ ದೇವರು ಅವರಿಗೆ ಕೊಟ್ಟ ದೇಶಕ್ಕೆ ಹೋಗುವುದಕ್ಕೆ ನೀವು ಇಸ್ರಾಯೇಲರ ಹೃದಯಗಳನ್ನು ಅಧೈರ್ಯಪಡಿಸುವುದು ಏಕೆ? \v 8 ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು. \v 9 ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು. \v 10 ಯೆಹೋವ ದೇವರು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವರಾಗಿ ಪ್ರಮಾಣಮಾಡಿ, \v 11 ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ \v 12 ಯೆಹೋವ ದೇವರನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಬೇರಾರೂ ನೋಡುವುದಿಲ್ಲ. \v 13 ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು. \p \v 14 “ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ. \v 15 ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು. \p \v 16 ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ, ನಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು. \v 17 ಆದರೆ ನಾವು ಇಸ್ರಾಯೇಲರ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವವರೆಗೆ ಯುದ್ಧಕ್ಕೆ ಸಿದ್ಧರಾಗಿ ಓಡುವೆವು. ನಮ್ಮ ಸ್ತ್ರೀಯರು ಮತ್ತು ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು. \v 18 ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಸೊತ್ತನ್ನು ಹೊಂದಿಕೊಳ್ಳುವವರೆಗೆ, ನಾವು ನಮ್ಮ ಮನೆಗಳಿಗೆ ತಿರುಗುವುದಿಲ್ಲ. \v 19 ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸೊತ್ತನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸೊತ್ತು ನಮಗೆ ಯೊರ್ದನ್ ನದಿಯ ಈಚೆ ಪೂರ್ವದಿಕ್ಕಿನಲ್ಲಿ ಬಂತು,” ಎಂದನು. \p \v 20 ಮೋಶೆಯು ಅವರಿಗೆ, “ನೀವು ಈ ಕಾರ್ಯವನ್ನು ಮಾಡಿದರೆ, ನೀವು ಯೆಹೋವ ದೇವರ ಮುಂದೆ ಯುದ್ಧಕ್ಕೆ ಸಿದ್ಧವಾಗಿದ್ದರೆ, \v 21 ನಿಮ್ಮಲ್ಲಿ ಸಿದ್ಧವಾದವರೆಲ್ಲರೂ ಯೆಹೋವ ದೇವರು ತಮ್ಮ ಶತ್ರುಗಳನ್ನು ತಮ್ಮ ಸನ್ನಿಧಿಯಿಂದ ಹೊರಡಿಸುವವರೆಗೆ, ಯೆಹೋವ ದೇವರ ಮುಂದೆ ಯೊರ್ದನ್ ನದಿಯನ್ನು ದಾಟಿದರೆ, \v 22 ದೇಶವು ಯೆಹೋವ ದೇವರ ಮುಂದೆ ವಶವಾದ ತರುವಾಯ, ನೀವು ಯೆಹೋವ ದೇವರ ಮತ್ತು ಇಸ್ರಾಯೇಲರ ದೃಷಿಯಲ್ಲಿ ನಿರಪರಾಧಿಗಳಾಗಿದ್ದು, ಈ ದೇಶವು ಯೆಹೋವ ದೇವರ ಮುಂದೆ ನಿಮ್ಮ ಸೊತ್ತಾಗುವುದು. \p \v 23 “ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ. \v 24 ನಿಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿ, ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ,” ಎಂದು ಹೇಳಿದನು. \p \v 25 ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ, “ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು. \v 26 ನಮ್ಮ ಮಕ್ಕಳೂ, ನಮ್ಮ ಹೆಂಡತಿಯರೂ, ನಮ್ಮ ಸಂಪತ್ತೂ ನಮ್ಮ ಪಶುಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. \v 27 ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರೂ ನಮ್ಮ ಒಡೆಯನು ಹೇಳಿದ ಪ್ರಕಾರ ಯೆಹೋವ ದೇವರ ಮುಂದೆ ಯುದ್ಧಕ್ಕೆ ದಾಟಿಹೋಗುವರು,” ಎಂದರು. \p \v 28 ಆಗ ಮೋಶೆಯು ಅವರ ವಿಷಯವಾಗಿ ಯಾಜಕನಾದ ಎಲಿಯಾಜರನಿಗೂ, ನೂನನ ಮಗ ಯೆಹೋಶುವನಿಗೂ, ಇಸ್ರಾಯೇಲರ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದರು. \v 29 ಮೋಶೆಯು ಅವರಿಗೆ, “ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಎಲ್ಲರೂ ಯುದ್ಧಕ್ಕೆ ಸಿದ್ಧವಾಗಿದ್ದು, ನಿಮ್ಮ ಸಂಗಡ ಯೊರ್ದನ್ ನದಿಯನ್ನು ಯೆಹೋವ ದೇವರ ಮುಂದೆ ದಾಟಿದರೆ, ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸೊತ್ತಾಗಿ ಕೊಡಬೇಕು. \v 30 ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟಿ ಬಾರದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿಯೇ ಸೊತ್ತನ್ನು ಹೊಂದಿಕೊಳ್ಳಬೇಕು,” ಎಂದನು. \p \v 31 ಆಗ ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಉತ್ತರವಾಗಿ, “ಯೆಹೋವ ದೇವರು ನಿನ್ನ ಸೇವಕರಿಗೆ ಹೇಳಿದ್ದಂತೆಯೇ ನಾವು ಮಾಡುವೆವು. \v 32 ನಾವು ಯುದ್ಧಕ್ಕೆ ಸಿದ್ಧವಾಗಿ ಯೆಹೋವ ದೇವರ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು. ಆದರೆ ಯೊರ್ದನ್ ನದಿಯ ಈಚೆಯಲ್ಲಿರುವ ನಮ್ಮ ಸೊತ್ತಿನ ಭಾಗವೇ ನಮಗಿರಲಿ,” ಎಂದು ಹೇಳಿದರು. \p \v 33 ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಅರಸನಾದ ಓಗನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅದರ ಭೂಮಿಯನ್ನೂ, ಅದರ ಮೇರೆಗಳಲ್ಲಿ ಸುತ್ತಮುತ್ತಲ ಪಟ್ಟಣಗಳನ್ನೂ ಕೊಟ್ಟನು. \p \v 34 ಗಾದನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್, \v 35 ಅಟ್ರೋತ್ಷೋಫಾನ್, ಯಜ್ಜೇರ್, ಯೊಗ್ಬೆಹಾ, \v 36 ಬೇತ್ ನಿಮ್ರಾ ಮತ್ತು ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ, ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದರು. \v 37 ರೂಬೇನನ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್, \v 38 ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು. \p \v 39 ಮನಸ್ಸೆಯ ಮಗ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ, ಅದನ್ನು ತೆಗೆದುಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. \v 40 ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗ ಮಾಕೀರನಿಗೆ ಕೊಟ್ಟಿದ್ದರಿಂದ, ಅವನು ಅದರಲ್ಲಿ ವಾಸಿಸಿದನು. \v 41 ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು. \v 42 ನೋಬಹನು ಹೋಗಿ ಕೆನಾತ್ ಎಂಬ ಪಟ್ಟಣವನ್ನೂ, ಅದರ ಗ್ರಾಮಗಳನ್ನೂ ತೆಗೆದುಕೊಂಡು, ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂಬ ಹೆಸರಿಟ್ಟನು. \c 33 \s1 ಈಜಿಪ್ಟ್ ದೇಶದಿಂದ ಇಸ್ರಾಯೇಲರ ಪ್ರಯಾಣದ ಹಂತಗಳು \p \v 1 ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ. \v 2 ಮೋಶೆಯು ಯೆಹೋವ ದೇವರ ಆಜ್ಞೆಯ ಪ್ರಕಾರ ಅವರ ಪ್ರಯಾಣದಲ್ಲಿ ತಂಗಿದ್ದ ಸ್ಥಳಗಳ ವಿವರಗಳನ್ನು ಬರೆದನು. \b \pi1 \v 3 ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು. \v 4 ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು. \pi1 \v 5 ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು. \pi1 \v 6 ಸುಕ್ಕೋತಿನಿಂದ ಹೊರಟು ಮರುಭೂಮಿಯ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು. \pi1 \v 7 ಏತಾಮಿನಿಂದ ಹೊರಟು ಬಾಲ್ಜೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು, ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು. \pi1 \v 8 ಪೀಹಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಮರುಭೂಮಿಗೆ ದಾಟಿದರು. ಆಗ ಅವರು ಮೂರು ದಿವಸದ ಪ್ರಯಾಣಮಾಡಿ ಏತಾಮೆಂಬ ಮರುಭೂಮಿಯಲ್ಲಿ ನಡೆದು ಮಾರಾದಲ್ಲಿ ಇಳಿದರು. \pi1 \v 9 ಮಾರಾದಿಂದ ಹೊರಟು ಏಲೀಮಿಗೆ ಬಂದರು. ಎಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು. \pi1 \v 10 ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದುಕೊಂಡರು. \pi1 \v 11 ಕೆಂಪು ಸಮುದ್ರದಿಂದ ಹೊರಟು ಸೀನೆಂಬ ಮರುಭೂಮಿಯಲ್ಲಿ ಇಳಿದುಕೊಂಡು, \pi1 \v 12 ಸೀನೆಂಬ ಮರುಭೂಮಿಯಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು. \pi1 \v 13 ದೊಫ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು. \pi1 \v 14 ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ. \pi1 \v 15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು. \pi1 \v 16 ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು. \pi1 \v 17 ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು. \pi1 \v 18 ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು. \pi1 \v 19 ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು. \pi1 \v 20 ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು. \pi1 \v 21 ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು. \pi1 \v 22 ರಿಸ್ಸದಿಂದ ಹೊರಟು ಕೆಹೇಲಾತಾನಲ್ಲಿ ಇಳಿದುಕೊಂಡರು. \pi1 \v 23 ಕೆಹೇಲಾತಾನಿಂದ ಹೊರಟು ಶೆಫೆರ್ ಪರ್ವತದಲ್ಲಿ ಇಳಿದುಕೊಂಡರು. \pi1 \v 24 ಶೆಫೆರ್ ಪರ್ವತದಿಂದ ಹೊರಟು ಹರಾದಾದಲ್ಲಿ ಇಳಿದುಕೊಂಡರು. \pi1 \v 25 ಹರಾದಾದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು. \pi1 \v 26 ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು. \pi1 \v 27 ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು. \pi1 \v 28 ತೆರಹದಿಂದ ಹೊರಟು ಮಿತ್ಕಾದಲ್ಲಿ ಇಳಿದುಕೊಂಡರು. \pi1 \v 29 ಮಿತ್ಕಾದಿಂದ ಹೊರಟು ಹಷ್ಮೋನಾದಲ್ಲಿ ಇಳಿದುಕೊಂಡರು. \pi1 \v 30 ಹಷ್ಮೋನಾದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು. \pi1 \v 31 ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು. \pi1 \v 32 ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು. \pi1 \v 33 ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು. \pi1 \v 34 ಯೊಟ್ಬಾತದಿಂದ ಹೊರಟು ಅಬ್ರೋನಾದಲ್ಲಿ ಇಳಿದುಕೊಂಡರು. \pi1 \v 35 ಅಬ್ರೋನಾದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು. \pi1 \v 36 ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. \pi1 \v 37 ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂತ್ಯದಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು. \v 38 ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು. \v 39 ಆರೋನನು ಹೋರ್ ಗುಡ್ಡದಲ್ಲಿ ಮರಣಹೊಂದಿದಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು. \pi1 \v 40 ಆಗ ಕಾನಾನ್ ದೇಶದ ನೆಗೆವನಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಇಸ್ರಾಯೇಲರು ಬರುವುದನ್ನು ಕೇಳಿದನು. \pi1 \v 41 ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು. \pi1 \v 42 ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು. \pi1 \v 43 ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು. \pi1 \v 44 ಓಬೋತಿನಿಂದ ಹೊರಟು ಮೋವಾಬಿನ ಮೇರೆಯಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು. \pi1 \v 45 ಇಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು. \pi1 \v 46 ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು. \pi1 \v 47 ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೆಬೋವಿನ ಪೂರ್ವದಲ್ಲಿರುವ ಅಬಾರೀಮ್ ಬೆಟ್ಟಗಳಲ್ಲಿ ಇಳಿದುಕೊಂಡರು. \pi1 \v 48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು. \v 49 ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು. \b \p \v 50 ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ, \v 51 “ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ, \v 52 ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು. \v 53 ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. \v 54 ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು. \p \v 55 “ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು. \v 56 ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.’ ” \c 34 \s1 ಕಾನಾನ್ ದೇಶದ ಮೇರೆಗಳು \li4 \v 1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ, ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಕಾನಾನ್ ದೇಶದೊಳಗೆ ಬರುವಾಗ, ನಿಮಗೆ ಸೊತ್ತಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು. \b \li1 \v 3 “ ‘ನಿಮ್ಮ ದಕ್ಷಿಣ ಕಡೆಯು ಚಿನ್ ಮರುಭೂಮಿಯಿಂದ ಎದೋಮಿಗೆ ಅನುಸಾರವಾಗಿರಬೇಕು. ನಿಮ್ಮ ದಕ್ಷಿಣ ಮೇರೆಯು, ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. \v 4 ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ, ಚಿನ್‌ಗೆ ಹಾದು, ಕಾದೇಶ್ ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು, ಅಲ್ಲಿಂದ ಹಚರದ್ದಾರಿಗೆ ಹೊರಟು, ಅಚ್ಮೋನಿಗೆ ಹಾದು ಹೋಗಬೇಕು. \v 5 ಅಚ್ಮೋನಿನಿಂದ ಈಜಿಪ್ಟಿನ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. \li1 \v 6 ಪಶ್ಚಿಮದಲ್ಲಿ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು. ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವುದು. \li1 \v 7 ನಿಮ್ಮ ಉತ್ತರ ಮೇರೆ ಯಾವುದೆಂದರೆ ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದವರೆಗೂ, \v 8 ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು \v 9 ಜಿಫ್ರೋನಿಗೆ ಹೋಗಿ, ಹಚರ್ ಏನಾನಿನಲ್ಲಿ ಮುಗಿಯಲಿ. ಇದು ನಿಮ್ಮ ಉತ್ತರ ಮೇರೆ. \li1 \v 10 ಪೂರ್ವದ ಮೇರೆಗೋಸ್ಕರ ಹಚರ್ ಏನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ. \v 11 ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಾಕ್ಕೆ ಇಳಿದು, ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. \v 12 ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರವಾಗಿ ಇಳಿದು, ಉಪ್ಪಿನ ಸಮುದ್ರದಲ್ಲಿ ಮುಗಿಯುವುದು. \b \li4 “ ‘ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.’ ” \b \p \v 13 ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ. \v 14 ಏಕೆಂದರೆ ರೂಬೇನ್ಯರ ಮಕ್ಕಳ ಗೋತ್ರವೂ, ಗಾದನ ಮಕ್ಕಳ ಗೋತ್ರವೂ, ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸೊತ್ತನ್ನು ಪಡೆದುಕೊಂಡಿದ್ದಾರೆ. \v 15 ಎರಡೂವರೆ ಗೋತ್ರಗಳು ತಮ್ಮ ಸೊತ್ತನ್ನು ಯೊರ್ದನಿನ ಈಚೆಯಲ್ಲಿ ಯೆರಿಕೋವಿಗೆ ಸೂರ್ಯನು ಉದಯಿಸುವ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ,” ಎಂದನು. \p \v 16 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 17 “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ \v 18 ದೇಶದ ಸೊತ್ತನ್ನು ಹಂಚುವುದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತೆಗೆದುಕೊಳ್ಳಿರಿ. \b \li4 \v 19 “ಈ ಜನರ ಹೆಸರುಗಳು ಇವೇ. \b \li1 “ಯೆಹೂದನ ಕುಟುಂಬದಿಂದ ಯೆಫುನ್ನೆಯ ಮಗ ಕಾಲೇಬನೂ, \li1 \v 20 ಸಿಮೆಯೋನನ ಮಕ್ಕಳ ಗೋತ್ರದಿಂದ ಅಮ್ಮೀಹೂದನ ಮಗ ಶಮುವೇಲನೂ, \li1 \v 21 ಬೆನ್ಯಾಮೀನನ ಗೋತ್ರದಿಂದ ಕಿಸ್ಲೋನನ ಮಗ ಎಲೀದಾದ್, \li1 \v 22 ದಾನನ ಮಕ್ಕಳ ಗೋತ್ರದ ಪ್ರಧಾನನು, ಯೊಗ್ಲೀಯ ಮಗ ಬುಕ್ಕೀ, \li1 \v 23 ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಏಫೋದನ ಮಗ ಹನ್ನೀಯೇಲನೂ, \li1 \v 24 ಎಫ್ರಾಯೀಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗ ಕೆಮೂಯೇಲನೂ, \li1 \v 25 ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗ ಎಲೀಚಾಫಾನ್, \li1 \v 26 ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗ ಪಲ್ಟೀಯೇಲನೂ, \li1 \v 27 ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗ ಅಹೀಹೂದನೂ, \li1 \v 28 ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅಮ್ಮೀಹೂದನ ಮಗ ಪೆದಹೇಲನೂ.” \b \li4 \v 29 ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಸೊತ್ತನ್ನು ಹಂಚುವುದಕ್ಕೆ ಯೆಹೋವ ದೇವರು ನೇಮಿಸಿದ ಮನುಷ್ಯರು ಇವರೇ. \c 35 \s1 ಲೇವಿಯರಿಗೆ ಕೊಡಬೇಕಾದ ಊರುಗಳನ್ನು ಕುರಿತದ್ದು \p \v 1 ಯೆಹೋವ ದೇವರು ಯೆರಿಕೋವಿಗೆ ಎದುರಾಗಿ ಯೊರ್ದನಿನ ಬಳಿಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ, \v 2 “ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು. \v 3 ನಂತರ ಅವರು ವಾಸಮಾಡುವದಕ್ಕೆ ಪಟ್ಟಣಗಳು, ಅವರು ಹೊಂದಿರುವ ಪಶುಗಳಿಗೋಸ್ಕರವೂ ಮತ್ತು ಅವರ ಎಲ್ಲಾ ಇತರ ಪ್ರಾಣಿಗಳಿಗೂ ಹುಲ್ಲುಗಾವಲು ಪ್ರದೇಶಗಳನ್ನು ಹೊಂದಿರುತ್ತಾರೆ. \p \v 4 “ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣಗಳ ಉಪನಗರಗಳು, ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ\f + \fr 35:4 \fr*\ft ಸುಮಾರು 1,500 ಅಡಿ\ft*\f* ಅಗಲವಾಗಿರಬೇಕು. \v 5 ನೀವು ಪಟ್ಟಣದ ಹೊರಗೆ ಪೂರ್ವದಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ\f + \fr 35:5 \fr*\ft ಸುಮಾರು 3,000 ಅಡಿ\ft*\f*, ಉತ್ತರದಲ್ಲಿ ಎರಡು ಸಾವಿರ ಮೊಳ ಅಳೆಯಬೇಕು. ಮಧ್ಯದಲ್ಲಿ ಪಟ್ಟಣವಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು. \s1 ಆಶ್ರಯದ ಪಟ್ಟಣಗಳು \p \v 6 “ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು. \v 7 ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು, ಅವುಗಳ ಉಪನಗರಗಳ ಸಂಗಡ ನಲವತ್ತೆಂಟು ಪಟ್ಟಣಗಳಾಗಿರಬೇಕು. \v 8 ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು. \p \v 9 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, \v 10 “ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ, \v 11 ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು. \v 12 ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು. \v 13 ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು. \v 14 ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ಕೊಡಬೇಕು. \v 15 ಕೈತಪ್ಪಿ ಪ್ರಾಣಹತ್ಯೆ ಮಾಡುವವರೆಲ್ಲರೂ, ಅಲ್ಲಿಗೆ ಓಡಿಹೋಗುವುದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲರಿಗೂ, ಪರಕೀಯರಿಗಾಗಿ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು. \p \v 16 “ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. \v 17 ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. \v 18 ಇಲ್ಲವೆ ಯಾರಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ, ಆ ವ್ಯಕ್ತಿಯು ಕೊಲೆಗಾರ; ಆ ಕೊಲೆಪಾತಕನಿಗೆ ನಿಜವಾಗಿಯೂ ಮರಣಶಿಕ್ಷೆಯಾಗಬೇಕು. \v 19 ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು. \v 20 ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ, ಇಲ್ಲವೆ ನೂಕುವುದರಿಂದಲಾದರೂ, ಸಮಯ ನೋಡಿಕೊಂಡು ಅವನ ಮೇಲೆ ಯಾವುದನ್ನಾದರೂ ಬಲವಾಗಿ ಎಸೆದರೆ, \v 21 ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು. \p \v 22 “ ‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ, \v 23 ಇಲ್ಲವೆ ಶತ್ರುತ್ವವಿಲ್ಲದೆ ಅವನ ಕೇಡನ್ನು ಹುಡುಕದೆ ಅವನನ್ನು ನೋಡದೆ ಮರಣವಾಗುವಂತೆ ಯಾವುದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳ ಮಾಡಿದರೆ, \v 24 ಆಗ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ, ರಕ್ತಪಾತಕ್ಕೆ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು. \v 25 ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸುವವನ ಕೈಯಿಂದ ತಪ್ಪಿಸಿ, ಅವನು ಓಡಿ ಹೋದ ಆಶ್ರಯದ ಪಟ್ಟಣಕ್ಕೆ ತಿರುಗಿ ಸೇರಿಸಬೇಕು. ಅಲ್ಲೇ ಅವನು ಪರಿಶುದ್ಧ ಎಣ್ಣೆಯಿಂದ ಅಭಿಷೇಕ ಹೊಂದಿದ ಮಹಾಯಾಜಕನು ಸಾಯುವವರೆಗೂ ವಾಸಮಾಡಲಿ. \p \v 26 “ ‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ, \v 27 ರಕ್ತಕ್ಕೆ ಸೇಡು ತೀರಿಸುವವನು ಅವನನ್ನು ತನ್ನ ಆಶ್ರಯದ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಲೆಪಾತಕನನ್ನು ಕೊಂದರೆ, ಅವನಿಗೆ ರಕ್ತಾಪರಾಧವಿಲ್ಲ. \v 28 ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು. \p \v 29 “ ‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು. \p \v 30 “ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು. \p \v 31 “ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು. \p \v 32 “ ‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ. \p \v 33 “ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ. \v 34 ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು. \c 36 \s1 ಚಲ್ಪಹಾದನ ಪುತ್ರಿಯರ ಸೊತ್ತಿನ ಹಕ್ಕು \p \v 1 ಆಗ ಯೋಸೇಫನ ಪುತ್ರರ ಕುಟುಂಬದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬಗಳ ಮುಖ್ಯಸ್ಥರು ಮೋಶೆ ಹಾಗೂ ಇಸ್ರಾಯೇಲರ ಕುಲನಾಯಕರ ಸಮೀಪಕ್ಕೆ ಬಂದು ಮಾತನಾಡಿ, \v 2 “ಚೀಟುಹಾಕಿ ನಾಡನ್ನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವುದಕ್ಕೆ ಯೆಹೋವ ದೇವರು ನಮ್ಮ ಒಡೆಯನಾದ ನಿನಗೆ ಆಜ್ಞಾಪಿಸಿದರು. ನಮ್ಮ ಸಹೋದರನಾದ ಚಲ್ಪಹಾದನ ಸೊತ್ತನ್ನು ಅವನ ಪುತ್ರಿಯರಿಗೆ ಕೊಡಬೇಕೆಂದು ದೇವರಿಂದ ಅಪ್ಪಣೆಯಾಗಿತ್ತು. \v 3 ಆದರೆ ಅವರು ಇಸ್ರಾಯೇಲರ ಬೇರೆ ಗೋತ್ರದವರಿಗೆ ಮದುವೆಯಾದರೆ, ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಸೊತ್ತಿನಿಂದ ಅವರನ್ನು ಮದುವೆಮಾಡಿಕೊಂಡ ಗೋತ್ರದವರಿಗೆ ಸೊತ್ತು ಹೋಗುತ್ತದೆ. ಇದರಿಂದ ನಮ್ಮ ಸೊತ್ತಿನ ಭಾಗ ಕಡಿಮೆಯಾಗಿ ಹೋಗುವುದು. \v 4 ಇಸ್ರಾಯೇಲರಿಗೆ ಜೂಬಿಲಿ\f + \fr 36:4 \fr*\fq ಜೂಬಿಲಿ \fq*\ft ಎಂದರೆ \ft*\fqa ಐವತ್ತನೇ ವರ್ಷ\fqa*\f* ವರ್ಷ ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಗೋತ್ರಕ್ಕೆ ಸೇರಿಕೊಳ್ಳುತ್ತದೆ. ಹೀಗೆ ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಗೋತ್ರದ ಸೊತ್ತಿನಿಂದ ತೆಗೆಯಲಾಗುವುದು.” \p \v 5 ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಇಸ್ರಾಯೇಲರಿಗೆ ಆಜ್ಞಾಪಿಸಿ, “ಯೋಸೇಫನ ಪುತ್ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ. \v 6 ಯೆಹೋವ ದೇವರು ಚಲ್ಪಹಾದನ ಪುತ್ರಿಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನೆಂದರೆ: ಅವರು ತಮ್ಮ ಮನಸ್ಸು ಬಂದವರೊಂದಿಗೆ ಮದುವೆಮಾಡಿಕೊಳ್ಳಲಿ, ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದವರಿಗೆ ಮಾತ್ರ ಮದುವೆ ಮಾಡಿಕೊಳ್ಳಬಹುದು. \v 7 ಇಸ್ರಾಯೇಲರ ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರದ ಕೈಗೆ ಹೋಗಬಾರದು. ಏಕೆಂದರೆ ಇಸ್ರಾಯೇಲರು, ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸೊತ್ತನ್ನು ತಾನೇ ಹೊಂದಿರಬೇಕು. \v 8 ಇದಕ್ಕಾಗಿ ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸೊತ್ತನ್ನು ಸ್ವಾಧೀನ ಮಾಡಿಕೊಳ್ಳುವಂತೆ ಇಸ್ರಾಯೇಲರ ಗೋತ್ರಗಳೊಳಗೆ ಸೊತ್ತನ್ನು ಹೊಂದಿರುವ ಒಬ್ಬೊಬ್ಬ ಪುತ್ರಿಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿರುವವನೊಂದಿಗೇ ಮದುವೆ ಮಾಡಿಕೊಳ್ಳಬೇಕು. \v 9 ಒಂದು ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಹಸ್ತಾಂತರಗೊಳ್ಳಬಾರದು ಆದರೆ ಇಸ್ರಾಯೇಲರ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸೊತ್ತಿಗೆ ತಾನೇ ಹೊಂದಿಕೊಳ್ಳಬೇಕು,” ಎಂದನು. \p \v 10 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾದನ ಪುತ್ರಿಯರು ಮಾಡಿದರು. \v 11 ಚಲ್ಪಹಾದನ ಪುತ್ರಿಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ, ತಮ್ಮ ಚಿಕ್ಕಪ್ಪಂದಿರ ಪುತ್ರರನ್ನು ಮದುವೆಯಾದರು. \v 12 ಯೋಸೇಫನ ಮಗನಾದ ಮನಸ್ಸೆಯ ಪುತ್ರರ ಕುಟುಂಬದವರೊಡನೆ ಮದುವೆಯಾದರು. ಈ ಪ್ರಕಾರ ಅವರ ಸೊತ್ತು ತಮ್ಮ ಪಿತೃವಿನ ಗೋತ್ರದಲ್ಲಿಯೇ ಉಳಿಯಿತು. \b \p \v 13 ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರಿಗೆ ಆಜ್ಞಾಪಿಸಿದ ಆಜ್ಞೆಗಳೂ, ನ್ಯಾಯಗಳೂ ಇವೇ.