\id PRO - Biblica® Open Kannada Contemporary Version \ide UTF-8 \h ಜ್ಞಾನೋಕ್ತಿಗಳು \toc1 ಜ್ಞಾನೋಕ್ತಿಗಳು \toc2 ಜ್ಞಾನೋಕ್ತಿಗಳು \toc3 ಜ್ಞಾನೋಕ್ತಿ \mt1 ಜ್ಞಾನೋಕ್ತಿಗಳು \c 1 \ms1 ಜ್ಞಾನೋಕ್ತಿಗಳು \p \v 1 ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು: \q1 \v 2 ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ; \q2 ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ; \q1 \v 3 ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು \q2 ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು; \q1 \v 4 ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ \q2 ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ. \q1 \v 5 ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; \q2 ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ. \q1 \v 6 ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು \q2 ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ. \b \q1 \v 7 ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. \q2 ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ. \ms1 ಮುನ್ನುಡಿ: ಬುದ್ಧಿವಂತಿಕೆಯನ್ನು ಅಳವಡಿಸಿಕೊಳ್ಳಲು ಉಪದೇಶಗಳು \s1 ಪಾಪ ಸಂಬಧಿತ ಎಚ್ಚರಿಕೆ \q1 \v 8 ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು, \q2 ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ. \q1 \v 9 ಅವು ನಿನ್ನ ತಲೆಗೆ ಸುಂದರ ಕಿರೀಟ \q2 ನಿನ್ನ ಕೊರಳನ್ನು ಅಲಂಕರಿಸುವ ಹಾರ. \b \q1 \v 10 ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ \q2 ನೀನು ಒಪ್ಪಬೇಡ. \q1 \v 11 ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, \q2 ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, \q2 ನಿರಪರಾಧಿಯ ರಕ್ತಕ್ಕಾಗಿ; \q1 \v 12 ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ \q2 ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ. \q1 \v 13 ಅಮೂಲ್ಯವಾದ ಸೊತ್ತನ್ನೆಲ್ಲಾ ನಾವು ಕಂಡುಹಿಡಿದು \q2 ಕೊಳ್ಳೆಹೊಡೆದು ನಮ್ಮ ಮನೆಗಳನ್ನು ತುಂಬಿಕೊಳ್ಳೋಣ; \q1 \v 14 ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, \q2 ನಾವೆಲ್ಲರೂ ಹಣಹಂಚಿಕೊಳ್ಳೋಣ,” ಎಂದು ಹೇಳುವುದಾದರೆ. \q1 \v 15 ಮಗನೇ, ಅವರೊಂದಿಗೆ ಸೇರಬೇಡ, \q2 ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ. \q1 \v 16 ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, \q2 ರಕ್ತಸುರಿಸುವುದಕ್ಕೆ ಆತುರಪಡುತ್ತವೆ. \q1 \v 17 ಪಕ್ಷಿಗಳ ಕಣ್ಣೆದುರಿಗೆ ಕಾಣುವಂತೆ \q2 ಬಲೆಯನ್ನು ಹರಡುವುದು ವ್ಯರ್ಥವಲ್ಲವೇ! \q1 \v 18 ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. \q2 ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು. \q1 \v 19 ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. \q2 ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು. \s1 ಜ್ಞಾನವನ್ನು ತಿರಸ್ಕರಿಸುವವರ ವಿರುದ್ಧ ಎಚ್ಚರಿಕೆ \q1 \v 20 ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ, \q2 ಬಹಿರಂಗ ಸ್ಥಳಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ. \q1 \v 21 ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ, \q2 ಪಟ್ಟಣದ ಹೆಬ್ಬಾಗಿಲುಗಳಲ್ಲಿ ಹೀಗೆಂದು ಭಾಷಣ ಮಾಡುತ್ತಾಳೆ: \b \q1 \v 22 “ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. \q2 ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? \q2 ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ? \q1 \v 23 ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! \q2 ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, \q2 ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು. \q1 \v 24 ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ \q2 ನಾನು ನನ್ನ ಕೈಚಾಚಿದಾಗ ಯಾರೂ ಮನುಷ್ಯನೂ ಗಮನಿಸಲಿಲ್ಲ. \q1 \v 25 ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; \q2 ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ \q1 \v 26 ಬಿರುಗಾಳಿಯಂತೆ ನಿಮಗೆ ವಿಪತ್ತು ಬಂದಾಗ ನಾನು ನಗುವೆನು. \q2 ಆಪತ್ತು ನಿಮ್ಮನ್ನು ಹಿಂದಿಕ್ಕಿದಾಗ, ನಾನು ಪರಿಹಾಸ್ಯ ಮಾಡುವೆನು. \q1 \v 27 ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ, \q2 ವಿಪತ್ತು ಸುಂಟರಗಾಳಿಯಂತೆ ನಿಮ್ಮ ಮೇಲೆ ಬೀಸಿದಾಗ, \q2 ಯಾತನೆ ಮತ್ತು ತೊಂದರೆ ನಿಮ್ಮನ್ನು ಆವರಿಸಿದಾಗಲೂ ಪರಿಹಾಸ್ಯಕ್ಕೆ ಒಳಗಾಗುವಿರಿ. \b \q1 \v 28 “ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. \q2 ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ. \q1 \v 29 ಏಕೆಂದರೆ ಅವರು ಅರಿವನ್ನು ಹಗೆಮಾಡಿ, \q2 ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು. \q1 \v 30 ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, \q2 ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು. \q1 \v 31 ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, \q2 ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು. \q1 \v 32 ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. \q2 ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು. \q1 \v 33 ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು, \q2 ಕೇಡಿನ ಭಯವಿಲ್ಲದೇ ನೆಮ್ಮದಿಯಿಂದ ಇರುವರು.” \c 2 \s1 ಜ್ಞಾನದಿಂದ ಆಗುವ ನೈತಿಕ ಲಾಭಗಳು \q1 \v 1 ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, \q2 ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು. \q1 \v 2 ನೀನು ಜ್ಞಾನಕ್ಕೆ ಕಿವಿಗೊಟ್ಟು, \q2 ತಿಳುವಳಿಕೆಗೆ ನಿನ್ನ ಹೃದಯವನ್ನು ತಿರುಗಿಸು, \q1 \v 3 ಹೌದು, ನೀನು ಒಳನೋಟಕ್ಕಾಗಿ ಮೊರೆಯಿಟ್ಟು, \q2 ತಿಳುವಳಿಕೆಗಾಗಿ ನಿನ್ನ ಸ್ವರವೆತ್ತಿ, \q1 \v 4 ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ, \q2 ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ, \q1 \v 5 ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ; \q2 ದೇವರ ಅರಿವನ್ನು ಕಂಡುಕೊಳ್ಳುವೆ. \q1 \v 6 ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; \q2 ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ. \q1 \v 7 ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು, \q2 ನಿರ್ದೋಷಿಯಾಗಿ ನಡೆದುಕೊಳ್ಳುವವರಿಗೆ ದೇವರು ಗುರಾಣಿಯಾಗಿದ್ದಾರೆ. \q1 \v 8 ನ್ಯಾಯವಂತರ ದಾರಿಗಳನ್ನು ದೇವರು ಕಾಯುತ್ತಾರೆ; \q2 ತಮ್ಮ ನಂಬಿಗಸ್ತರ ಮಾರ್ಗವನ್ನು ಭದ್ರಪಡಿಸುತ್ತಾರೆ. \b \q1 \v 9 ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ, \q2 ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದುಕೊಳ್ಳುವೆ. \q1 \v 10 ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ, \q2 ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಹಿತಕರವಾಗಿರುವುದು. \q1 \v 11 ನಿನ್ನ ವಿವೇಚನೆಯು ನಿನ್ನನ್ನು ಭದ್ರವಾಗಿ ಕಾಯುವುದು; \q2 ತಿಳುವಳಿಕೆಯು ನಿನ್ನನ್ನು ಕಾಪಾಡುವುದು. \b \q1 \v 12 ಜ್ಞಾನವು ದುಷ್ಟರ ಮಾರ್ಗಗಳಿಂದಲೂ, \q2 ವಕ್ರರ ಮಾತುಗಳಿಂದಲೂ ಕಾಪಾಡುವುದು. \q1 \v 13 ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ \q2 ನೇರವಾದ ದಾರಿಗಳನ್ನು ತೊರೆದುಬಿಡುತ್ತಾರೆ. \q1 \v 14 ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ. \q2 ಕೇಡಿನ ವಕ್ರತನದಲ್ಲಿ ಆನಂದಿಸುತ್ತಾರೆ. \q1 \v 15 ಅವರ ಮಾರ್ಗಗಳು ವಕ್ರವಾಗಿವೆ; \q2 ತಮ್ಮ ನಡತೆಗಳಲ್ಲಿ ಅವರು ತಪ್ಪಿಹೋಗಿದ್ದಾರೆ. \b \q1 \v 16 ಜಾರಿಣಿಯಿಂದಲೂ ದಾರಿತಪ್ಪಿದ \q2 ಪರಸ್ತ್ರೀಯ ವಶೀಕರಣದ ಮಾತುಗಳಿಂದಲೂ ಜ್ಞಾನವು ನಿನ್ನನ್ನು ರಕ್ಷಿಸುವುದು. \q1 \v 17 ಅವಳು ತನ್ನ ಯೌವನ ಕಾಲದ ಪತಿಯನ್ನು ತ್ಯಜಿಸಿದ್ದಾಳೆ, \q2 ದೇವರ ಸನ್ನಿಧಿಯಲ್ಲಿ ಮಾಡಿಕೊಂಡ ಒಡಂಬಡಿಕೆಯನ್ನೂ ಕಡೆಗಣಿಸಿದ್ದಾಳೆ. \q1 \v 18 ಏಕೆಂದರೆ ಅವಳ ಮನೆ ಮರಣ ಮಾರ್ಗ. \q2 ಅವಳ ದಾರಿ ಮೃತರ ಕಡೆಗೂ ನಡೆಸುತ್ತವೆ. \q1 \v 19 ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ; \q2 ಜೀವಮಾರ್ಗಗಳನ್ನು ಅಂಥವರು ಹಿಡಿಯುವುದೇ ಇಲ್ಲ. \b \q1 \v 20 ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ \q2 ನೀತಿವಂತರ ದಾರಿಯನ್ನು ನೀನು ಹಿಡಿಯುವೆ. \q1 \v 21 ಏಕೆಂದರೆ ಪ್ರಾಮಾಣಿಕರು ದೇಶದಲ್ಲಿ ವಾಸಿಸುವರು, \q2 ನಿರ್ದೋಷಿಗಳು ಅದರಲ್ಲಿ ನೆಲೆಯಾಗಿ ಇರುವರು. \q1 \v 22 ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; \q2 ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು. \c 3 \s1 ಜ್ಞಾನದಿಂದ ಇನ್ನಷ್ಟು ಲಾಭಗಳು \q1 \v 1 ಮಗನೇ, ನನ್ನ ಉಪದೇಶವನ್ನು ಮರೆಯಬೇಡ; \q2 ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ. \q1 \v 2 ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, \q2 ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು. \b \q1 \v 3 ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; \q2 ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, \q2 ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ. \q1 \v 4 ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, \q2 ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ. \b \q1 \v 5 ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು \q2 ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ. \q1 \v 6 ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. \q2 ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು. \b \q1 \v 7 ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; \q2 ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು. \q1 \v 8 ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು; \q2 ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು. \b \q1 \v 9 ನಿನ್ನ ಆಸ್ತಿಯಿಂದಲೂ \q2 ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು. \q1 \v 10 ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; \q2 ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು. \b \q1 \v 11 ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; \q2 ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. \q1 \v 12 ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ, \q2 ಯೆಹೋವ ದೇವರು ಯಾರನ್ನು ಪ್ರೀತಿಸುತ್ತಾರೋ, ಅವರನ್ನು ಶಿಸ್ತುಗೊಳಿಸುವರು. \b \q1 \v 13 ಜ್ಞಾನವನ್ನು ಕಂಡುಕೊಳ್ಳುವವನು ಧನ್ಯನು, \q2 ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು. \q1 \v 14 ಏಕೆಂದರೆ ಜ್ಞಾನವು ಬೆಳ್ಳಿಗಿಂತ ಹೆಚ್ಚು ಲಾಭವೂ; \q2 ಬಂಗಾರಕ್ಕಿಂತ ಹೆಚ್ಚು ಆದಾಯವನ್ನು ಕೊಡುವುದು. \q1 \v 15 ಜ್ಞಾನವು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯ; \q2 ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವುದಿಲ್ಲ. \q1 \v 16 ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; \q2 ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ. \q1 \v 17 ಜ್ಞಾನದ ಮಾರ್ಗಗಳು ಸಂತೋಷಕರ; \q2 ಅದರ ದಾರಿಗಳೆಲ್ಲಾ ಶಾಂತಿಯ ದಾರಿಗಳೇ. \q1 \v 18 ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; \q2 ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು. \b \q1 \v 19 ಯೆಹೋವ ದೇವರು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದರು, \q2 ತಮ್ಮ ತಿಳುವಳಿಕೆಯ ಮೂಲಕ ಅವರು ಆಕಾಶಗಳನ್ನು ಸ್ಥಿರಪಡಿಸಿದರು. \q1 \v 20 ದೇವರು ತಮ್ಮ ಅರಿವಿನಿಂದಲೇ ಸೆಲೆಗಳು ಒಡೆದು, \q2 ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ. \b \q1 \v 21 ಮಗನೇ, ಜ್ಞಾನವನ್ನೂ ತಿಳುವಳಿಕೆಯನ್ನೂ ಕಾಪಾಡಿಕೋ, \q2 ನಿನ್ನ ಕಣ್ಣುಗಳಿಂದ ಅವು ತಪ್ಪಿಹೋಗದೆ ಇರಲಿ. \q1 \v 22 ಅವು ನಿನಗೆ ಜೀವವಾಗಿರಲಿ. \q2 ನಿನ್ನ ಕೊರಳಿಗೆ ಆಭರಣವೂ ಆಗಿರುವುವು. \q1 \v 23 ಆಗ ನಿನ್ನ ಮಾರ್ಗದಲ್ಲಿ ಸುರಕ್ಷಿತವಾಗಿರುವೆ; \q2 ನೀನು ಎಡವದೆ ನಡೆಯುವೆ. \q1 \v 24 ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; \q2 ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು. \q1 \v 25 ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ; \q2 ದುಷ್ಟರ ಮೇಲೆ ಬರುವ ನಾಶನಕ್ಕೂ ನೀನು ಭಯಪಡದಿರುವೆ. \q1 \v 26 ಏಕೆಂದರೆ ಯೆಹೋವ ದೇವರೇ ನಿನಗೆ ಭರವಸೆ ಆಗಿದ್ದಾರೆ, \q2 ನಿನ್ನ ಪಾದವು ಉರುಲಿಗೆ ಸಿಕ್ಕದಂತೆ ಅವರು ಕಾಪಾಡುವರು. \b \q1 \v 27 ನಿನಗೆ ಶಕ್ತಿಯಿರುವಾಗಲೇ ಇತರರಿಗೆ ಉಪಕಾರಮಾಡು \q2 ಒಳಿತು ಮಾಡುವುದನ್ನು ನಿನ್ನಲ್ಲಿಯೇ ಇಟ್ಟುಕೊಳ್ಳಬೇಡ. \q1 \v 28 ಕೊಡತಕ್ಕದ್ದು ಈಗಾಗಲೇ ನಿನ್ನಲ್ಲಿರುವಾಗ, \q2 “ಹೋಗಿ ಬಾ, ನಾಳೆ ನಿನಗೆ ಕೊಡುತ್ತೇನೆ,” \q2 ಎಂದು ನಿನ್ನ ನೆರೆಯವನಿಗೆ ಹೇಳಬೇಡ. \q1 \v 29 ನಿನ್ನ ನೆರೆಯವನು ಭರವಸೆಯಿಂದ ನಿನ್ನ ಪಕ್ಕದಲ್ಲಿ ವಾಸಮಾಡುತ್ತಿರುವಾಗ, \q2 ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸಬೇಡ. \q1 \v 30 ಒಬ್ಬನು ನಿನಗೆ ಯಾವ ತೊಂದರೆ ಮಾಡದಿದ್ದರೆ, \q2 ಅವನೊಂದಿಗೆ ಕಾರಣವಿಲ್ಲದೆ ದೂರು ನುಡಿಯಬೇಡ. \b \q1 \v 31 ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ; \q2 ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ. \b \q1 \v 32 ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; \q2 ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ. \q1 \v 33 ದುಷ್ಟರ ಮನೆಯ ಮೇಲೆ ದೈವಶಾಪವಿದೆ. \q2 ಆದರೆ ನೀತಿವಂತರ ನಿವಾಸದ ಮೇಲೆ ದೈವಾಶೀರ್ವಾದವಿರುವುದು. \q1 \v 34 ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; \q2 ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ. \q1 \v 35 ಜ್ಞಾನಿಗಳು ಸನ್ಮಾನಕ್ಕೆ ಬಾಧ್ಯನಾಗುವರು; \q2 ಆದರೆ ಜ್ಞಾನಹೀನರ ಪ್ರತಿಫಲವು ಅವಮಾನವೆ. \c 4 \s1 ಹೇಗಾದರೂ ಜ್ಞಾನವನ್ನು ಪಡೆಯಿರಿ \q1 \v 1 ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; \q2 ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ. \q1 \v 2 ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು, \q2 ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ. \q1 \v 3 ನಾನೂ ಕೂಡ ನನ್ನ ತಂದೆಗೆ ನೆಚ್ಚಿನ ಮಗನೂ \q2 ನನ್ನ ತಾಯಿಗೆ ಮುದ್ದು ಮಗನೂ ಆಗಿದ್ದೆನು. \q1 \v 4 ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ, \q2 “ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು; \q2 ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ. \q1 \v 5 ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು; \q2 ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ. \q1 \v 6 ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ\f + \fr 4:6 \fr*\fq ಆಕೆ \fq*\ft ಅಂದರೆ \ft*\fqa ಜ್ಞಾನ\fqa*\f* ನಿನ್ನನ್ನು ಕಾಪಾಡುವಳು; \q2 ಆಕೆಯನ್ನು ಪ್ರೀತಿಸು, ಆಕೆ ನಿನ್ನನ್ನು ಕಾಯುವಳು. \q1 \v 7 ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; \q2 ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ. \q1 \v 8 ಜ್ಞಾನವನ್ನು ನೀನು ಅಮೂಲ್ಯವೆಂದು ಎಣಿಸು, ಆಕೆಯು ನಿನ್ನನ್ನು ಮೇಲೆತ್ತುವಳು; \q2 ಆಕೆಯನ್ನು ನೀನು ಅಪ್ಪಿಕೊ, ಆಕೆಯು ನಿನ್ನನ್ನು ಘನಪಡಿಸುವಳು. \q1 \v 9 ಆಕೆಯನ್ನು ನಿನ್ನ ತಲೆಗೆ ಮಹಿಮೆಯ ಕಿರೀಟವಾಗಿರುವಳು; \q2 ಆಕೆಯನ್ನು ನಿನಗೆ ಘನತೆಯ ಕಿರೀಟವನ್ನು ಸಮರ್ಪಿಸುವಳು.” \b \q1 \v 10 ಮಗನೇ, ಆಲಿಸಿ ನನ್ನ ಮಾತುಗಳನ್ನು ಸ್ವೀಕರಿಸು, \q2 ಆಗ ನಿನ್ನ ಜೀವನದ ವರ್ಷಗಳು ಹೆಚ್ಚುವವು. \q1 \v 11 ಜ್ಞಾನ ಮಾರ್ಗದಲ್ಲಿ ನಾನು ನಿನಗೆ ಶಿಕ್ಷಣಕೊಡುವೆನು, \q2 ನೇರ ಮಾರ್ಗಗಳಲ್ಲಿ ನಿನ್ನನ್ನು ಮುನ್ನಡಿಸುವೆನು. \q1 \v 12 ನೀನು ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು; \q2 ನೀನು ಓಡುವಾಗ ಮುಗ್ಗರಿಸಿ ಬೀಳುವುದಿಲ್ಲ. \q1 \v 13 ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; \q2 ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ. \q1 \v 14 ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು \q2 ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ. \q1 \v 15 ಆ ದಾರಿಯಿಂದ ತೊಲಗು, ಅದರ ಪಕ್ಕದಲ್ಲಿ ಹಾದು ಹೋಗಬೇಡ; \q2 ಅದರಿಂದ ತಪ್ಪಿಸಿಕೊಂಡು, ನಿನ್ನ ಮಾರ್ಗದಲ್ಲಿ ಮುಂದೆ ನಡೆ. \q1 \v 16 ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; \q2 ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ. \q1 \v 17 ಅವರಿಗೆ ದುಷ್ಟತನವೇ ಆಹಾರ, \q2 ಬಲಾತ್ಕಾರವೇ ಅವರಿಗೆ ದ್ರಾಕ್ಷಾರಸ. \b \q1 \v 18 ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, \q2 ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು. \q1 \v 19 ಆದರೆ, ದುಷ್ಟರ ಮಾರ್ಗವು ಕಗ್ಗತ್ತಲಿನಂತಿದೆ. \q2 ಅವರು ಯಾವುದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು. \b \q1 \v 20 ಮಗನೇ, ನನ್ನ ಮಾತುಗಳಿಗೆ ಗಮನಕೊಡು; \q2 ನನ್ನ ನುಡಿಗಳಿಗೆ ಕಿವಿಗೊಡು. \q1 \v 21 ಆ ನುಡಿಗಳು ನಿನ್ನ ಕಣ್ಣುಗಳಿಂದ ತಪ್ಪಿ ಹೋಗದಿರಲಿ; \q2 ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ. \q1 \v 22 ಏಕೆಂದರೆ ಆ ನುಡಿಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ, \q2 ದೇಹಕ್ಕೆಲ್ಲಾ ಆರೋಗ್ಯವೂ ಆಗಿವೆ. \q1 \v 23 ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; \q2 ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ. \q1 \v 24 ವಕ್ರಮಾತುಗಳನ್ನು ನಿನ್ನ ಬಾಯಿಂದ ತೊಲಗಿಸಿ; \q2 ಕೆಟ್ಟ ಮಾತುಗಳು ನಿನ್ನ ತುಟಿಗಳಿಂದ ದೂರವಿರಲಿ. \q1 \v 25 ನಿನ್ನ ದೃಷ್ಟಿ ನೇರವಾಗಿಯೇ ನೋಡಲಿ; \q2 ನಿನ್ನ ನೋಟವು ನೇರವಾಗಿ ನಿನ್ನ ಮುಂದೆಯೇ ನಾಟಿರಲಿ. \q1 \v 26 ನೀನು ನಡೆಯುವ ದಾರಿಯ ಬಗ್ಗೆ ಗಮನವಿರಲಿ; \q2 ನೀನು ಕೈಗೊಳ್ಳುವ ಹಾದಿ ಸ್ಥಿರವಾಗಿರಲಿ. \q1 \v 27 ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; \q2 ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ. \c 5 \s1 ವ್ಯಭಿಚಾರವನ್ನು ಕುರಿತು ಎಚ್ಚರಿಕೆ \q1 \v 1 ಮಗನೇ, ನನ್ನ ಜ್ಞಾನಕ್ಕೆ ಗಮನಕೊಡು; \q2 ನನ್ನ ಒಳನೋಟದ ಮಾತುಗಳಿಗೆ ಕಿವಿಗೊಡು. \q1 \v 2 ಆಗ ನಿನ್ನ ವಿವೇಚನೆಯನ್ನು ಉಳಿಸಿಕೊಳ್ಳುವೆ. \q2 ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು. \q1 \v 3 ಏಕೆಂದರೆ ಜಾರಿಣಿಯ ತುಟಿಗಳು ಜೇನುಗರೆಯುವುದು; \q2 ಅವಳ ಮಾತು ಎಣ್ಣೆಗಿಂತಲೂ ಮೃದು. \q1 \v 4 ಆದರೆ ಅಂತ್ಯದಲ್ಲಿ ಅವಳು ಮಾಚಿಪತ್ರೆಯಂತೆ ಕಹಿಯೂ, \q2 ಇಬ್ಬಾಯಿ ಖಡ್ಗದಂತೆ ಹರಿತವೂ ಆಗಿರುವಳು. \q1 \v 5 ಅವಳ ಪಾದಗಳು ಮರಣದ ಕಡೆಗೆ ಇಳಿದುಹೋಗುತ್ತವೆ; \q2 ಅವಳ ಹೆಜ್ಜೆಗಳು ನೇರವಾಗಿ ಪಾತಾಳಕ್ಕೆ ನಡೆಸುತ್ತವೆ. \q1 \v 6 ಜೀವಮಾರ್ಗದ ವಿಚಾರ ಅವಳಿಗಿಲ್ಲ; \q2 ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ. \b \q1 \v 7 ಮಕ್ಕಳಿರಾ, ನನ್ನ ಕಡೆಗೆ ಈಗ ಕಿವಿಗೊಡಿರಿ; \q2 ನನ್ನ ಬಾಯಿಯ ಮಾತುಗಳಿಂದ ದೂರವಾಗಬೇಡಿರಿ. \q1 \v 8 ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು; \q2 ಅವಳ ಮನೆಯ ಬಾಗಿಲ ಹತ್ತಿರಕ್ಕೆ ಹೋಗದೆ ಇರು. \q1 \v 9 ನೀನು ನಿನ್ನ ಗೌರವವನ್ನು ಬೇರೆಯವರಿಗೆ ಕಳೆಯಬೇಡ, \q2 ನಿನ್ನ ಘನತೆನ್ನು ಕ್ರೂರನಿಗೂ ಕೊಡಬೇಡ. \q1 \v 10 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆ ಎಚ್ಚರಿಕೆ, \q2 ನಿನ್ನ ಪ್ರಯಾಸದ ಫಲವು ಪರರ ಮನೆ ಸೇರದಂತೆ ನೋಡಿಕೋ. \q1 \v 11 ನಿನ್ನ ಜೀವನದ ಅಂತ್ಯದಲ್ಲಿ \q2 ನಿನ್ನ ದೇಹವೂ ಕ್ಷೀಣಿಸಿದಾಗ, ನೀನು ನರಳಬೇಕಾದೀತು. \q1 \v 12 ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; \q2 ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. \q1 \v 13 ನನ್ನ ಬೋಧಕರ ಸ್ವರಕ್ಕೆ ನಾನು ವಿಧೇಯನಾಗದೆ ಹೋದೆ. \q2 ನನ್ನ ಉಪದೇಶಕರಿಗೆ ನಾನು ಕಿವಿಗೊಡದೆ ಹೋದೆ. \q1 \v 14 ನಾನು ದೇವರ ಸಭೆಯಲ್ಲಿ \q2 ಗಂಭೀರ ಸಮಸ್ಯೆಗೆ ಒಳಗಾದೆ,” ಎಂದು ಹೇಳುವೆ. \b \q1 \v 15 ನಿನ್ನ ಸ್ವಂತ ಕೊಳದ ನೀರನ್ನು ಕುಡಿ, \q2 ನಿನ್ನ ಸ್ವಂತ ಬಾವಿಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. \q1 \v 16 ನಿನ್ನ ಬುಗ್ಗೆಗಳು ಬೀದಿಗಳಲ್ಲಿ ಹರಡುವುದು ಯುಕ್ತವೋ? \q2 ನೀರಿನ ಒರತೆಗಳು ಬೀದಿಚೌಕಗಳಲ್ಲಿ ಹರಿಯುವುದು ಸರಿಯೇ? \q1 \v 17 ಅವು ನಿನಗೆ ಸ್ವಂತವಾಗಿರಲಿ; \q2 ಪರರು ಭಾಗಿಗಳಾಗಿರಬಾರದು. \q1 \v 18 ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ; \q2 ನಿನ್ನ ಆನಂದವು ಯೌವನದ ಕಾಲದ ಹೆಂಡತಿಯೊಂದಿಗಿರಲಿ. \q1 \v 19 ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ; \q2 ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ; \q2 ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು. \q1 \v 20 ಮಗನೇ, ಬೇರೆಯವನ ಹೆಂಡತಿಗೆ ವಶವಾಗುವುದೇಕೆ? \q2 ಅನ್ಯಳ ಎದೆಯನ್ನೇಕೆ ಅಪ್ಪಿಕೊಳ್ಳುವೆ? \b \q1 \v 21 ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. \q2 ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ. \q1 \v 22 ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; \q2 ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ. \q1 \v 23 ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು; \q2 ತನ್ನ ಅತಿಮೂರ್ಖತನದಿಂದಲೇ ತಪ್ಪಿಹೋಗುವನು. \c 6 \s1 ಬುದ್ಧಿಹೀನತೆಯ ವಿರುದ್ಧ ಎಚ್ಚರಿಕೆಗಳು \q1 \v 1 ಮಗನೇ, ನಿನ್ನ ನೆರೆಯವನಿಗೆ ನೀನು ಹೊಣೆಯಾಗಿದ್ದರೆ, \q2 ಪರನಿಗಾಗಿ ನಿನ್ನ ಕೈಯನ್ನು ಒಡ್ಡಿದ್ದರೆ, \q1 \v 2 ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ. \q2 ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ. \q1 \v 3 ಮಗನೇ, ನೀನು ನಿನ್ನ ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ, \q2 ನಿನ್ನನ್ನು ನೀನು ತಪ್ಪಿಸಿಕೊಳ್ಳಲು ಇದನ್ನು ಮಾಡು: \q1 ಹೋಗಿ ನಿನ್ನನ್ನು ನೀನು ತಗ್ಗಿಸಿಕೋ, \q2 ನಿನ್ನ ನೆರೆಯವನಿಗೆ ವಿಶ್ರಾಂತಿಯನ್ನು ಕೊಡಬೇಡ. \q1 \v 4 ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ \q2 ನಿನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. \q1 \v 5 ಬೇಟೆಗಾರನ ಕೈಯಿಂದ ಜಿಂಕೆಯೂ, \q2 ಬಲೆ ಬೀಸುವವನ ಕೈಯಿಂದ ಪಕ್ಷಿಯೂ ತಪ್ಪಿಸಿಕೊಳ್ಳುವಂತೆ ನೀನು ತಪ್ಪಿಸಿಕೋ. \b \q1 \v 6 ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ, \q2 ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು. \q1 \v 7 ನಾಯಕನಾಗಲೀ, ಮೇಲ್ವಿಚಾರಕನಾಗಲೀ, \q2 ಅಧಿಕಾರಿಯಾಗಲೀ ಇರುವೆಗೆ ಇಲ್ಲದೆ ಹೋದರೂ, \q1 \v 8 ಬೇಸಿಗೆಯಲ್ಲಿ ಅದು ತನ್ನ ಆಹಾರವನ್ನು ಸಂಗ್ರಹಿಸುತ್ತದೆ. \q2 ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿಕೊಳ್ಳುತ್ತದೆ. \b \q1 \v 9 ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆ ಮಾಡುವುದು? \q2 ನಿನ್ನ ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ? \q1 \v 10 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, \q2 ಇನ್ನೂ ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ? \q1 \v 11 ಹೀಗೆ ನಿನಗೆ ಬಡತನವು ಕಳ್ಳನಂತೆಯೂ \q2 ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು. \b \q1 \v 12 ತೊಂದರೆಕೊಡುವವನೂ ಕೆಡುಕನೂ \q2 ಆಗಿರುವವನ ಬಾಯಿಂದ ಕುಟಿಲ ಮಾತೇ ಬರುವುದು. \q2 \v 13 ಅವನು ಕಣ್ಣು ಮಿಟುಕಿಸುತ್ತಾನೆ, \q2 ಕಾಲು ಕೆರೆಯುತ್ತಾನೆ, \q2 ಬೆರಳು ಸನ್ನೆಮಾಡುತ್ತಾನೆ, \q2 \v 14 ಅವನು ತನ್ನ ಹೃದಯದಲ್ಲಿ ಮೋಸಕರ ಯೋಜನೆಯನ್ನೇ ಮಾಡುತ್ತಾನೆ; \q2 ಯಾವಾಗಲೂ ಅವನು ಜಗಳವನ್ನು ಕಲ್ಪಿಸುತ್ತಾನೆ. \q1 \v 15 ಆದ್ದರಿಂದ ಅವನಿಗೆ ವಿಪತ್ತು ಬೇಗ ಬರುವುದು; \q2 ಯಾವ ಪರಿಹಾರವಿಲ್ಲದೆ ಅವನು ತಟ್ಟನೆ ನಾಶವಾಗುವನು. \b \li1 \v 16 ಈ ಆರು ವಿಷಯಗಳನ್ನು ಯೆಹೋವ ದೇವರು ಹಗೆ ಮಾಡುತ್ತಾರೆ; \li2 ಹೌದು, ಏಳು ದೇವರಿಗೆ ಅಸಹ್ಯವಾಗಿವೆ, ಅವು ಯಾವವೆಂದರೆ: \li3 \v 17 ಹೆಮ್ಮೆಯ ದೃಷ್ಟಿ, \li3 ಸುಳ್ಳಾಡುವ ನಾಲಿಗೆ, \li3 ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು, \li3 \v 18 ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, \li3 ಕೇಡಿಗೆ ನುಗ್ಗಲು ತ್ವರೆಪಡುವ ಕಾಲುಗಳು, \li3 \v 19 ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು \li3 ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ. \s1 ವ್ಯಭಿಚಾರಕ್ಕೆ ವಿರುದ್ಧವಾಗಿ ಎಚ್ಚರಿಕೆ \q1 \v 20 ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು, \q2 ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ. \q1 \v 21 ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ. \q2 ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ. \q1 \v 22 ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ. \q2 ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ. \q2 ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ. \q1 \v 23 ಆಜ್ಞೆಯೇ ದೀಪವಾಗಿದೆ, \q2 ಬೋಧನೆಯೇ ಬೆಳಕಾಗಿದೆ; \q1 ಶಿಕ್ಷಣದ ತಿದ್ದುವಿಕೆಗಳು \q2 ಜೀವ ಮಾರ್ಗವಾಗಿವೆ. \q1 \v 24 ಅವು ಕೆಟ್ಟ ಹೆಂಗಸಿನಿಂದಲೂ, \q2 ಪರಸ್ತ್ರೀಯ ವಂಚಕ ಮಾತಿನಿಂದಲೂ ನಿನ್ನನ್ನು ತಪ್ಪಿಸಿ ಕಾಪಾಡಬಲ್ಲವು. \b \q1 \v 25 ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. \q2 ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ. \b \q1 \v 26 ಏಕೆಂದರೆ ವೇಶ್ಯೆಯನ್ನು ಊಟದಿಂದ ಕೊಂಡುಕೊಳ್ಳಬಹುದು, \q2 ಆದರೆ ವ್ಯಭಿಚಾರಿಣಿ ಅಮೂಲ್ಯ ಜೀವವನ್ನೇ ಬೇಟೆಯಾಡುವಳು. \q1 \v 27 ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ, \q2 ಅವನ ವಸ್ತ್ರಗಳು ಸುಡುವುದಿಲ್ಲವೋ? \q1 \v 28 ಒಬ್ಬನು ಧಗಧಗಿಸುವ ಕೆಂಡದ ಮೇಲೆ ನಡೆದರೆ, \q2 ಅವನ ಪಾದಗಳು ಸುಡುವುದಿಲ್ಲವೋ? \q1 \v 29 ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. \q2 ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು. \b \q1 \v 30 ಹಸಿದಾಗ ಕಳ್ಳನು ತನ್ನ ಹಸಿವೆಯನ್ನು ತೃಪ್ತಿಪಡಿಸಲು ಕಳವು ಮಾಡಿದರೆ, \q2 ಜನರು ಅವನನ್ನು ಹೀಯಾಳಿಸುವುದಿಲ್ಲ. \q1 \v 31 ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡಬೇಕಾಗುವುದು. \q2 ತನ್ನ ಮನೆಯ ಆಸ್ತಿಯನ್ನೆಲ್ಲಾ ಸಹ ಅವನು ಕೊಡಬೇಕಾಗುವುದು. \q1 \v 32 ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. \q2 ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು. \q1 \v 33 ಅವನಿಗೆ ಗಾಯವೂ ಅವಮಾನವೂ ಆಗುತ್ತವೆ. \q2 ಅವನ ನಿಂದೆಯು ಎಂದಿಗೂ ಅಳಿಸಲಾಗದು. \b \q1 \v 34 ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. \q2 ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು. \q1 \v 35 ಅವನು ಯಾವ ಪರಿಹಾರವನ್ನು ಒಪ್ಪುವುದಿಲ್ಲ; \q2 ಎಷ್ಟು ದೊಡ್ಡ ಲಂಚ ಕೊಟ್ಟರೂ ಅವನು ಅದನ್ನು ತಿರಸ್ಕರಿಸುವನು. \c 7 \s1 ವ್ಯಭಿಚಾರಿಣಿಯ ವಿರುದ್ಧ ಎಚ್ಚರಿಕೆ \q1 \v 1 ಮಗನೇ, ನನ್ನ ಮಾತುಗಳನ್ನು ಅನುಸರಿಸಿ, \q2 ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ. \q1 \v 2 ನನ್ನ ಆಜ್ಞೆಗಳನ್ನು ಅನುಸರಿಸಿ ಬಾಳು; \q2 ನಿನ್ನ ಕಣ್ಣುಗುಡ್ಡೆಯಂತೆ ನನ್ನ ಕಟ್ಟಳೆಗಳನ್ನು ಕಾಪಾಡು. \q1 \v 3 ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿಟ್ಟುಕೋ; \q2 ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ. \q1 \v 4 ಜ್ಞಾನಕ್ಕೆ, “ನೀನು ನನ್ನ ಸಹೋದರಿ,” ಎಂದೂ, \q2 ಒಳನೋಟಕ್ಕೆ, “ನನ್ನ ಬಂಧು” ಎಂದೂ ಹೇಳು. \q1 \v 5 ಅವು ವ್ಯಭಿಚಾರಿಣಿಯಿಂದಲೂ \q2 ಸವಿಮಾತನಾಡುವ ದಾರಿತಪ್ಪಿದ ಸ್ತ್ರೀಯಿಂದಲೂ ನಿನ್ನನ್ನು ಕಾಪಾಡುತ್ತವೆ. \b \q1 \v 6 ನಾನು ನನ್ನ ಮನೆಯ ಕಿಟಿಕಿಯ \q2 ಜಾಲರಿಯಿಂದ ಇಣಕಿ ನೋಡಿದಾಗ, \q1 \v 7 ಮುಗ್ಧರ ನಡುವೆ, \q2 ಯುವಕರ ಮಧ್ಯದಲ್ಲಿ, \q2 ತಿಳುವಳಿಕೆಯಿಲ್ಲದ ಯೌವನಸ್ಥನನ್ನು ಕಂಡೆನು. \q1 \v 8 ಅವನು ಅವಳ ಮೂಲೆ ಮನೆಯ ದಿಕ್ಕಿನಲ್ಲಿ \q2 ಬೀದಿಯಿಂದ ಹಾದುಹೋಗುತ್ತಿದ್ದನು. \q1 \v 9 ಸಂಜೆಯ ಮಬ್ಬಿನಲ್ಲಿ \q2 ರಾತ್ರಿಯ ಕತ್ತಲೆಯು ಕವಿಯುತ್ತಿತ್ತು. \b \q1 \v 10 ಇಗೋ, ವೇಶ್ಯೆಯ ವಸ್ತ್ರವನ್ನು ಧರಿಸಿಕೊಂಡು \q2 ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು. \q1 \v 11 ಅವಳು ಕೂಗಾಟದವಳು, ಹಟಮಾರಿ; \q2 ಅವಳ ಪಾದಗಳು ಮನೆಯಲ್ಲಿ ನಿಲ್ಲುವುದೇ ಇಲ್ಲ. \q1 \v 12 ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ ಹೀಗೆ \q2 ಅವಳು ಮೂಲೆ ಮೂಲೆಗೂ ಹೊಂಚು ಹಾಕುತ್ತಾಳೆ. \q1 \v 13 ಅವಳು ಆ ಯುವಕನನ್ನು ಹಿಡಿದುಕೊಂಡು ಮುದ್ದಿಟ್ಟು, \q2 ನಾಚಿಕೆಯಿಲ್ಲದೆ ಅವಳು ಹೀಗೆನ್ನುತ್ತಾಳೆ: \b \q1 \v 14 “ಈ ದಿವಸ ನನ್ನ ಹರಕೆಗಳನ್ನು ನಾನು ಸಲ್ಲಿಸಿದ್ದೇನೆ. \q2 ನಾನು ನನ್ನ ಸಮಾಧಾನದ ಯಜ್ಞವನ್ನು ಅರ್ಪಿಸಿದ್ದೇನೆ. \q1 \v 15 ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬಂದೆನು; \q2 ಅತ್ಯಾಶೆಯಿಂದ ನಿನ್ನನ್ನು ಹುಡುಕಿ ಕಂಡುಕೊಂಡಿದ್ದೇನೆ. \q1 \v 16 ಈಜಿಪ್ಟಿನ ನಯವಾದ ನಾರು ಮಡಿಯಿಂದಲೂ \q2 ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ. \q1 \v 17 ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ \q2 ನನ್ನ ಹಾಸಿಗೆಯನ್ನು ಸುವಾಸನೆಗೊಳಿಸಿದ್ದೇನೆ. \q1 \v 18 ಬಾ, ಬೆಳಗಿನವರೆಗೂ ತೃಪ್ತಿಯಾಗುವ ತನಕ \q2 ಪ್ರೀತಿಯ ವಶದಲ್ಲಿ ತುಂಬಿಕೊಂಡು ಕಾಮ ವಿಲಾಸಗಳಿಂದ ನಾವು ಸಂತೋಷಿಸೋಣ. \q1 \v 19 ಏಕೆಂದರೆ ಯಜಮಾನನು ಮನೆಯಲ್ಲಿ ಇಲ್ಲ; \q2 ಅವನು ದೀರ್ಘ ಪ್ರಯಾಣದಲ್ಲಿದ್ದಾನೆ. \q1 \v 20 ಅವನು ತನ್ನೊಂದಿಗೆ ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; \q2 ಹುಣ್ಣಿಮೆಗೆ ಮುಂಚೆ ಅವನು ಮನೆಗೆ ಬರುವುದಿಲ್ಲ.” \b \q1 \v 21 ಮನವೊಲಿಸುವ ಮಾತುಗಳಿಂದ ಅವಳು ಅವನನ್ನು ದಾರಿ ತಪ್ಪಿಸಿ, \q2 ಅವಳು ತನ್ನ ಮೋಹಕ ಮಾತುಗಳಿಂದ ಅವನನ್ನು ಆಕರ್ಷಿಸುತ್ತಾಳೆ. \q1 \v 22 ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ, \q2 ಅಥವಾ ಜಿಂಕೆಯು\f + \fr 7:22 \fr*\fq ಜಿಂಕೆಯು \fq*\ft ಹಿಬ್ರೂವಿನಲ್ಲಿ ಮಾಡಿದ ಭಾಷಾಂತರ \ft*\fqa ಮೂರ್ಖನು\fqa*\f* ಬಲೆಗೆ ಸಿಕ್ಕಿಬೀಳುವಂತೆ, \q1 \v 23 ಅವನು ತನ್ನ ಪ್ರಾಣವು ಅಪಾಯದಲ್ಲಿರುವುದನ್ನು ತಿಳಿಯದೆ, \q1 ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವವರೆಗೆ, \q2 ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ. \b \q1 \v 24 ಆದ್ದರಿಂದ ನನ್ನ ಮಕ್ಕಳೇ, ನನಗೆ ಕಿವಿಗೊಡಿರಿ, \q2 ನನ್ನ ಮಾತುಗಳನ್ನು ಆಲಿಸಿರಿ. \q1 \v 25 ಅವಳ ಮಾರ್ಗಗಳಿಗೆ ನಿಮ್ಮ ಹೃದಯವು ತಿರುಗದೆ ಇರಲಿ; \q2 ತಪ್ಪಿಯೂ ಅವಳ ದಾರಿಯಲ್ಲಿ ಹೋಗಬೇಡಿರಿ. \q1 \v 26 ಏಕೆಂದರೆ ಅನೇಕರು ಅವಳಿಗೆ ಬಲಿಯಾಗಿ ಬಿದ್ದಿದ್ದಾರೆ. \q2 ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ. \q1 \v 27 ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ, \q2 ಅದು ಮೃತ್ಯುವಿನ ಕೊಠಡಿಗೆ ಇಳಿದು ಹೋಗುತ್ತದೆ. \c 8 \s1 ಜ್ಞಾನದ ಕರೆ \q1 \v 1 ಜ್ಞಾನವು ಕರೆಯುತ್ತದಲ್ಲವೋ? \q2 ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ? \q1 \v 2 ಉನ್ನತ ಸ್ಥಳಗಳ ತುದಿಯಲ್ಲಿಯೂ, \q2 ಹಾದಿಗಳ ಸಂಧಿಗಳಲ್ಲಿಯೂ ನಿಂತುಕೊಳ್ಳುತ್ತಾಳೆ. \q1 \v 3 ಪಟ್ಟಣದ ಪ್ರವೇಶ ದ್ವಾರಗಳಲ್ಲಿಯೂ \q2 ಒಳಗೆ ಬರುವಾಗ ಅವಳು ಸ್ವರವೆತ್ತಿ ಹೇಳುವುದೇನೆಂದರೆ, \q1 \v 4 “ಮನುಷ್ಯರೇ, ನಾನು ಕರೆಯುತ್ತಿರುವುದು ನಿಮ್ಮನ್ನೇ, \q2 ಮಾನವರಿಗಾಗಿಯೇ ನಾನು ಧ್ವನಿಗೈಯುತ್ತೇನೆ. \q1 \v 5 ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. \q2 ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ. \q1 \v 6 ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; \q2 ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು. \q1 \v 7 ನನ್ನ ಬಾಯಿಯು ಸತ್ಯವನ್ನು ಮಾತಾಡುವುದು; \q2 ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ. \q1 \v 8 ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯುಕ್ತವಾಗಿವೆ; \q2 ಮೂರ್ಖತನವಾಗಲಿ, ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ. \q1 \v 9 ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. \q2 ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು. \q1 \v 10 ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ \q2 ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ. \q1 \v 11 ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. \q2 ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು. \b \q1 \v 12 “ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. \q2 ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ. \q1 \v 13 ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; \q2 ಗರ್ವ, ಅಹಂಕಾರ, ಕೆಟ್ಟನಡವಳಿಕೆ, \q2 ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ. \q1 \v 14 ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. \q2 ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ. \q1 \v 15 ನನ್ನ ಮೂಲಕ ರಾಜರು ಆಳುವರು; \q2 ಪ್ರಧಾನರು ನ್ಯಾಯವಾದ ತೀರ್ಪು ಕೊಡುವರು. \q1 \v 16 ನನ್ನಿಂದ ಅಧಿಪತಿಗಳು ಆಳುತ್ತಾರೆ, \q2 ಕೀರ್ತಿವಂತರೆಲ್ಲರೂ ಭೂಮಿಯ ಮೇಲೆ ಆಳುವರು. \q1 \v 17 ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; \q2 ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು. \q1 \v 18 ಐಶ್ವರ್ಯವೂ ಘನತೆಯೂ, \q2 ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ. \q1 \v 19 ನನ್ನ ಫಲವು ಬಂಗಾರಕ್ಕಿಂತಲೂ, \q2 ನನ್ನ ಆದಾಯವು ಉತ್ತಮವಾದ ಬೆಳ್ಳಿಗಿಂತಲೂ ಶ್ರೇಷ್ಠವಾಗಿವೆ. \q1 \v 20 ನೀತಿಯ ಮಾರ್ಗದಲ್ಲಿಯೂ \q2 ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ. \q1 \v 21 ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದುವರು. \q2 ನಾನು ಅವರ ಬೊಕ್ಕಸಗಳನ್ನು ತುಂಬಿಸುವೆನು. \b \q1 \v 22 “ಯೆಹೋವ ದೇವರು ತಮ್ಮ ಸೃಷ್ಟಿಕ್ರಮದಲ್ಲಿ ನನ್ನನ್ನು ಮೊದಲು ನಿರ್ಮಿಸಿದರು, \q2 ದೇವರ ಪುರಾತನ ಕಾರ್ಯಗಳಲ್ಲಿ ನಾನೇ ಮೊದಲು; \q1 \v 23 ಪ್ರಾರಂಭದಲ್ಲಿ ಜಗದುತ್ಪತ್ತಿಗೆ ಮುಂಚೆಯೇ \q2 ಅನಾದಿಕಾಲದಲ್ಲಿ ದೇವರು ನನ್ನನ್ನು ಸೃಷ್ಟಿಸಿದರು. \q1 \v 24 ಆಗಾಧಗಳು ಇಲ್ಲದೆ ಇರುವಾಗ ನಾನು ಹುಟ್ಟಿ ಬಂದೆನು, \q2 ನೀರಿನ ಬುಗ್ಗೆಗಳು ಇಲ್ಲದೆ ಇರುವಾಗಲೇ ನಾನಿದ್ದೆನು. \q1 \v 25 ಪರ್ವತಗಳು ಸ್ಥಾಪಿತವಾಗುವುದಕ್ಕಿಂತ ಮುಂಚೆಯೂ \q2 ಬೆಟ್ಟಗುಡ್ಡಗಳಿಗಿಂತ ಮೊದಲು ನಾನು ಜನಿಸಿದೆನು. \q1 \v 26 ಭೂಮಿಯನ್ನೂ ಹೊಲಗಳನ್ನೂ ಲೋಕದ ಅಣುಗಳನ್ನೂ \q2 ಅವರು ನಿರ್ಮಿಸದೆ ಇರುವಾಗಲೇ ನಾನು ಜನಿಸಿದೆನು. \q1 \v 27 ಅವರು ಆಕಾಶಗಳನ್ನು ಸಿದ್ಧಪಡಿಸಿದಾಗ \q2 ಸಾಗರದ ಮೇಲೆ ಚಕ್ರವನ್ನು ಹಾಕಿದಾಗ, \q1 \v 28 ಮೇಲೆ ಮೇಘಗಳನ್ನು ಅವರು ಸ್ಥಾಪಿಸಿದಾಗ \q2 ಅಗಾಧದ ಬುಗ್ಗೆಗಳನ್ನು ಅವರು ಬಲಪಡಿಸಿದಾಗ, \q1 \v 29 ಪ್ರವಾಹಗಳು ತನ್ನ ಆಜ್ಞೆಯನ್ನು ಮೀರದಂತೆ ಸಮುದ್ರಕ್ಕೆ \q2 ಅವರು ಮೇರೆಯನ್ನು ಮಾಡಿ \q1 ಭೂಮಿಯ ಅಸ್ತಿವಾರಗಳನ್ನು ನೇಮಿಸಿದಾಗ, ನಾನು ಅಲ್ಲಿ ಇದ್ದೆನು. \q2 \v 30 ಆಗ ನಾನು ಅವರೊಂದಿಗೆ ಕುಶಲ ಶಿಲ್ಪಿಯಂತೆ \q1 ಅವರ ಹತ್ತಿರ ಇದ್ದೆನು. \q2 ಅವರ ಸನ್ನಿಧಿಯಲ್ಲಿ ಯಾವಾಗಲೂ ಆನಂದಿಸುತ್ತಾ ಅನುದಿನವೂ ಸಂತೋಷಿಸುತ್ತಿದ್ದೆನು. \q1 \v 31 ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; \q2 ಮಾನವರೊಂದಿಗೆ ಆನಂದಿಸುತ್ತಿದ್ದೆನು. \b \q1 \v 32 “ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; \q2 ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು. \q1 \v 33 ನನ್ನ ಬೋಧನೆಯನ್ನು ಕೇಳಿ ಬುದ್ಧಿವಂತರಾಗಿರಿ; \q2 ಅದನ್ನು ನೀವು ತಿರಸ್ಕರಿಸಬೇಡಿರಿ. \q1 \v 34 ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, \q2 ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, \q2 ನನ್ನ ಮಾತುಗಳನ್ನು ಕೇಳುವವರು ಧನ್ಯರು. \q1 \v 35 ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು \q2 ಯೆಹೋವ ದೇವರ ಕೃಪೆಯನ್ನು ಹೊಂದುವನು. \q1 \v 36 ಆದರೆ ನನ್ನನ್ನು ಬಿಟ್ಟು ದೂರಹೋಗುವವನು \q2 ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, \q2 ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.” \c 9 \s1 ಜ್ಞಾನದ ಹಾಗೂ ಮೂರ್ಖತನದ ಕರೆ \q1 \v 1 ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ; \q2 ಆಕೆಯು ತನ್ನ ಏಳು ಕಂಬಗಳನ್ನು ಕೆತ್ತಿಸಿದ್ದಾಳೆ. \q1 \v 2 ಆಕೆಯು ಮಾಂಸದ ಆಹಾರನ್ನು ತಯಾರಿಸಿ, ತನ್ನ ದ್ರಾಕ್ಷಾರಸವನ್ನು ಬೆರೆಸಿ, \q2 ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು. \q1 \v 3 ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; \q2 ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ, \q2 \v 4 “ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” \q1 ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ, \q2 \v 5 “ಬಾ, ನನ್ನ ಆಹಾರವನ್ನು ತಿಂದು, \q2 ನಾನು ಬೆರೆಸಿದ ದ್ರಾಕ್ಷಾರಸವನ್ನು ಕುಡಿ,” ಎಂದೂ \q1 \v 6 “ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ \q2 ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ. \b \q1 \v 7 ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; \q2 ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. \q1 \v 8 ಪರಿಹಾಸ್ಯ ಮಾಡುವವನನ್ನು ಗದರಿಸಬೇಡ ಅವನು ನಿನ್ನನ್ನು ಹಗೆ ಮಾಡುವನು; \q2 ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. \q1 \v 9 ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; \q2 ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು. \b \q1 \v 10 ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು. \q2 ಪರಿಶುದ್ಧರ ಪರಿಜ್ಞಾನವೇ ತಿಳುವಳಿಕೆಯಾಗಿದೆ. \q1 \v 11 ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು; \q2 ನಿನ್ನ ಜೀವನದ ವರ್ಷಗಳು ವೃದ್ಧಿಯಾಗುವುವು. \q1 \v 12 ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; \q2 ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ. \b \q1 \v 13 ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು; \q2 ಅವಳು ಅರಿವಿಲ್ಲದವಳು, ಏನೂ ತಿಳಿಯದವಳು. \q1 \v 14 ಅವಳು ತನ್ನ ಮನೆಯ ಬಾಗಿಲಿನಲ್ಲಿ ಕುಳಿತು, \q2 ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ನಿಂತು, \q1 \v 15 ತಮ್ಮ ಮಾರ್ಗವನ್ನು ಹಿಡಿದು ಹೋಗುವ \q2 ಪ್ರಯಾಣಿಕರನ್ನು ಕರೆಯುತ್ತಾಳೆ, \q2 \v 16 “ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” \q1 ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ, \q2 \v 17 “ಕದ್ದ ನೀರು ಸಿಹಿಯಾಗಿದೆ; \q2 ರಹಸ್ಯದಲ್ಲಿ ತಿನ್ನುವ ಆಹಾರವು ರುಚಿಯಾಗಿದೆ,” ಎಂದು ಹೇಳುತ್ತಾಳೆ. \q1 \v 18 ಆದರೆ ಆ ಮನೆ ಸತ್ತವರ ಸ್ಥಾನವಾಗಿದೆ. \q2 ಅವಳ ಅತಿಥಿಗಳು ಪಾತಾಳದ ಅಗಾಧದಲ್ಲಿ ಬಿದ್ದಿದ್ದಾರೆಂದು ಅವನಿಗೆ ತಿಳಿಯದು. \c 10 \ms1 ಸೊಲೊಮೋನನ ಜ್ಞಾನೋಕ್ತಿಗಳು \p \v 1 ಸೊಲೊಮೋನನ ಜ್ಞಾನೋಕ್ತಿಗಳು: \q1 ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. \q2 ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ. \b \q1 \v 2 ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, \q2 ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ. \b \q1 \v 3 ನೀತಿವಂತನನ್ನು ಹಸಿವೆಯಿಂದ ಬಳಲುವಂತೆ ಯೆಹೋವ ದೇವರು ಬಿಡುವುದಿಲ್ಲ; \q2 ಆದರೆ ದುಷ್ಟರ ಆಶೆಯನ್ನು ಅವರು ಭಂಗಪಡಿಸುತ್ತಾರೆ. \b \q1 \v 4 ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; \q2 ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ. \b \q1 \v 5 ಬೇಸಿಗೆಯಲ್ಲಿ ಫಸಲನ್ನು ಕೂಡಿಸುವವರು ಬುದ್ಧಿವಂತ ಮಕ್ಕಳು, \q2 ಸುಗ್ಗಿಯಲ್ಲಿ ನಿದ್ರೆ ಮಾಡುವವರು ನಾಚಿಕೆಗೆಟ್ಟ ಮಕ್ಕಳು. \b \q1 \v 6 ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; \q2 ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ. \b \q1 \v 7 ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; \q2 ಆದರೆ ದುಷ್ಟನ ಹೆಸರು ಕೊಳೆಯುವುದು.\f + \fr 10:7 \fr*\ft \+xt ಆದಿ 48:20\+xt*\ft*\f* \b \q1 \v 8 ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; \q2 ಆದರೆ ಹರಟೆಯ ಮೂರ್ಖನು ಬೀಳುವನು. \b \q1 \v 9 ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; \q2 ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು. \b \q1 \v 10 ದುರುದ್ದೇಶದಿಂದ ಕಣ್ಣು ಮಿಟಕಿಸುವವನು ದುಃಖವನ್ನು ಉಂಟುಮಾಡುತ್ತಾನೆ, \q2 ಆದರೆ ಹರಟೆಯ ಮೂರ್ಖನು ಬೀಳುವನು. \b \q1 \v 11 ನೀತಿವಂತನ ಬಾಯಿಯು ಜೀವದ ಬುಗ್ಗೆ; \q2 ಆದರೆ ದುಷ್ಟನ ಬಾಯಿ ಹಿಂಸೆಯನ್ನು ಮರೆಮಾಡುತ್ತದೆ. \b \q1 \v 12 ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; \q2 ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ. \b \q1 \v 13 ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; \q2 ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ. \b \q1 \v 14 ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; \q2 ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ. \b \q1 \v 15 ಐಶ್ವರ್ಯವಂತರಿಗೆ ಸಂಪತ್ತೇ ಅವರ ಬಲವಾದ ಕೋಟೆ; \q2 ಆದರೆ, ಬಡತನವೇ ಬಡವರ ನಾಶನಕ್ಕೆ ಕಾರಣ. \b \q1 \v 16 ನೀತಿವಂತರ ದುಡಿತವು ಜೀವವಾಗುವುದು; \q2 ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ. \b \q1 \v 17 ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; \q2 ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು. \b \q1 \v 18 ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ \q2 ಮತ್ತು ಚಾಡಿ ಹೇಳುವವನು ಮೂರ್ಖನು. \b \q1 \v 19 ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. \q2 ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು. \b \q1 \v 20 ನೀತಿವಂತರ ನಾಲಿಗೆಯು ಚೊಕ್ಕಬೆಳ್ಳಿಯಂತಿದೆ; \q2 ದುಷ್ಟರ ಹೃದಯವು ಬೆಲೆಯಿಲ್ಲದ್ದು. \b \q1 \v 21 ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, \q2 ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ. \b \q1 \v 22 ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; \q2 ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ. \b \q1 \v 23 ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; \q2 ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ. \b \q1 \v 24 ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; \q2 ಆದರೆ ನೀತಿವಂತರ ಇಷ್ಟವು ಸಫಲವಾಗುವುದು. \b \q1 \v 25 ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; \q2 ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು. \b \q1 \v 26 ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, \q2 ಯಜಮಾನನಿಗೆ ಸೋಮಾರಿಯು ಹಾಗೆಯೇ ಇರುವನು. \b \q1 \v 27 ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; \q2 ದುಷ್ಟರ ವರ್ಷಗಳು ಕಡಿಮೆ ಆಗುವವು. \b \q1 \v 28 ನೀತಿವಂತರ ನಿರೀಕ್ಷೆಯು ಆನಂದಕರವಾಗಿರುವುದು; \q2 ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವುದು. \b \q1 \v 29 ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; \q2 ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ. \b \q1 \v 30 ನೀತಿವಂತರು ಎಂದಿಗೂ ಕದಲುವುದೇ ಇಲ್ಲ; \q2 ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ. \b \q1 \v 31 ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; \q2 ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು. \b \q1 \v 32 ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, \q2 ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು. \b \c 11 \q1 \v 1 ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; \q2 ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ. \b \q1 \v 2 ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; \q2 ಆದರೆ ದೀನತೆಯೊಂದಿಗೆ ಜ್ಞಾನ ಬರುವುದು. \b \q1 \v 3 ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು; \q2 ಅಪನಂಬಿಗಸ್ತರ ಕಪಟತನವೇ ಅವರನ್ನು ನಾಶಪಡಿಸುವುದು. \b \q1 \v 4 ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; \q2 ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು. \b \q1 \v 5 ನಿಷ್ಕಳಂಕರ ನೀತಿಯು ಅವರ ಮಾರ್ಗವನ್ನು ಸರಾಗ ಮಾಡುವುದು; \q2 ಆದರೆ ದುಷ್ಟರು ತಮ್ಮ ದುಷ್ಟತ್ವದಿಂದಲೇ ಬೀಳುವರು. \b \q1 \v 6 ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವುದು; \q2 ಆದರೆ ಅಪನಂಬಿಗಸ್ತರು ದುಷ್ಟ ಆಸೆಗಳಿಂದ ಸಿಕ್ಕಿಹಾಕಿಕೊಳ್ಳುತ್ತಾರೆ. \b \q1 \v 7 ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವುವು; \q2 ತನ್ನ ಬಲದಿಂದ ನಿರೀಕ್ಷಿಸಿದ್ದೆಲ್ಲವೂ ಇಲ್ಲದಂತಾಗುವುದು. \b \q1 \v 8 ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ, \q2 ದುಷ್ಟನು ಅದರ ಸ್ಥಳದಲ್ಲಿ ಸಿಕ್ಕಿಬೀಳುವನು. \b \q1 \v 9 ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, \q2 ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು. \b \q1 \v 10 ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; \q2 ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ. \b \q1 \v 11 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಪ್ರಗತಿಯಾಗುತ್ತದೆ, \q2 ಆದರೆ ದುಷ್ಟರ ಬಾಯಿಂದ ಅದು ನಾಶವಾಗುತ್ತದೆ. \b \q1 \v 12 ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, \q2 ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ. \b \q1 \v 13 ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, \q2 ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ. \b \q1 \v 14 ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, \q2 ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ. \b \q1 \v 15 ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ, \q2 ಹೊಣೆಗಾರನಾಗಿರದವನು ಸುರಕ್ಷಿತವಾಗಿರುವನು. \b \q1 \v 16 ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, \q2 ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ. \b \q1 \v 17 ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, \q2 ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ. \b \q1 \v 18 ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, \q2 ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು. \b \q1 \v 19 ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, \q2 ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ. \b \q1 \v 20 ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು, \q2 ಆದರೆ, ಸನ್ಮಾರ್ಗದಲ್ಲಿ ಯಥಾರ್ಥವಾಗಿ ಇರುವವರಲ್ಲಿ ಅವರು ಆನಂದಿಸುತ್ತಾರೆ. \b \q1 \v 21 ದುಷ್ಟನಿಗೆ ಶಿಕ್ಷೆ ತಪ್ಪುವುದಿಲ್ಲ; \q2 ನೀತಿವಂತರ ವಂಶವು ಬಿಡುಗಡೆ ಹೊಂದುವುದು. \b \q1 \v 22 ಹಂದಿಯ ಮೂಗಿಗೆ ಬಂಗಾರದ ಮೂಗುತಿಯು ಹೇಗೋ, \q2 ಹಾಗೆಯೇ ವಿವೇಕವಿಲ್ಲದ ಸ್ತ್ರೀಗೆ ಸೌಂದರ್ಯವು. \b \q1 \v 23 ನೀತಿವಂತರ ಅಪೇಕ್ಷೆಯು ಶುಭಕ್ಕಾಸ್ಪದ, \q2 ದುಷ್ಟರ ಅಪೇಕ್ಷೆಯು ತೀರ್ಪಿಗೀಡು. \b \q1 \v 24 ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, \q2 ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ. \b \q1 \v 25 ಉದಾರಿಯು ಅಭಿವೃದ್ಧಿ ಹೊಂದುವನು; \q2 ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು. \b \q1 \v 26 ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; \q2 ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು. \b \q1 \v 27 ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; \q2 ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವುದು. \b \q1 \v 28 ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, \q2 ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು. \b \q1 \v 29 ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; \q2 ಮೂರ್ಖನು ಜ್ಞಾನನಿಗೆ ಸೇವಕನಾಗಿರುವನು. \b \q1 \v 30 ನೀತಿವಂತರ ಫಲವು ಜೀವವೃಕ್ಷ; \q2 ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ. \b \q1 \v 31 ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ, \q2 ದುಷ್ಟರು ಮತ್ತು ಪಾಪಿಗಳು ಎಷ್ಟೋ ಹೆಚ್ಚಾಗಿ ತಮ್ಮ ಫಲವನ್ನು ಹೊಂದುತ್ತಾರೆ. \b \c 12 \q1 \v 1 ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, \q2 ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು. \b \q1 \v 2 ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, \q2 ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ. \b \q1 \v 3 ಒಬ್ಬ ಮನುಷ್ಯನು ದುಷ್ಟತನದಿಂದ ಸ್ಥಿರವಾಗುವುದಿಲ್ಲ. \q2 ಆದರೆ ನೀತಿವಂತರನ್ನು ಕಿತ್ತುಹಾಕಲಾಗುವುದಿಲ್ಲ. \b \q1 \v 4 ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; \q2 ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು. \b \q1 \v 5 ನೀತಿವಂತರ ಯೋಜನೆಗಳು ನ್ಯಾಯವಾಗಿವೆ; \q2 ದುಷ್ಟರ ಸಲಹೆ ಮೋಸಭರಿತ. \b \q1 \v 6 ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು, \q2 ಯಥಾರ್ಥವಂತರ ನುಡಿ ಅವರನ್ನು ಬಿಡಿಸುವುದು. \b \q1 \v 7 ದುಷ್ಟರು ನೆಲಕ್ಕುರುಳಿ ನಿರ್ಮೂಲರಾಗುವರು, \q2 ಆದರೆ ನೀತಿವಂತರ ಮನೆಯು ಸ್ಥಿರವಾಗಿ ನಿಲ್ಲುವುದು. \b \q1 \v 8 ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; \q2 ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು. \b \q1 \v 9 ಹೊಟ್ಟೆಗೆ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ \q2 ಸಾಮಾನ್ಯ ಸೇವಕನೇ ಮೇಲು. \b \q1 \v 10 ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು; \q2 ಆದರೆ ದುಷ್ಟರ ಕರುಣೆಯ ಕಾರ್ಯಗಳು ಕ್ರೂರತನವೇ. \b \q1 \v 11 ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, \q2 ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು. \b \q1 \v 12 ದುಷ್ಟರು ಕೆಟ್ಟವರ ಭದ್ರಕೋಟೆಯನ್ನು ಅಪೇಕ್ಷಿಸುತ್ತಾರೆ; \q2 ಆದರೆ ನೀತಿವಂತರ ಬೇರು ಫಲವನ್ನು ಕೊಡುತ್ತದೆ. \b \q1 \v 13 ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, \q2 ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು. \b \q1 \v 14 ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದರಿಂದ ತೃಪ್ತನಾಗುವನು, \q2 ಮನುಷ್ಯನ ಕೈಕೆಲಸಗಳು ಅವನಿಗೆ ಪ್ರತಿಫಲವನ್ನು ಕೊಡುವುವು. \b \q1 \v 15 ಮೂರ್ಖನ ಮಾರ್ಗವು ತನ್ನ ಕಣ್ಣುಗಳಿಗೆ ಸರಿಯಾಗಿದೆ, \q2 ಆದರೆ ಜ್ಞಾನಿಯು ಸಲಹೆಗೆ ಕಿವಿಗೊಡುವನು. \b \q1 \v 16 ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, \q2 ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ. \b \q1 \v 17 ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ, \q2 ಆದರೆ ಸುಳ್ಳುಸಾಕ್ಷಿಯು ಸುಳ್ಳನ್ನು ಹೇಳುತ್ತಾನೆ. \b \q1 \v 18 ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, \q2 ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು. \b \q1 \v 19 ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, \q2 ಸುಳ್ಳಾಡುವ ನಾಲಿಗೆಯು ಕ್ಷಣಿಕ. \b \q1 \v 20 ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; \q2 ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ. \b \q1 \v 21 ನೀತಿವಂತನಿಗೆ ಯಾವ ಕೇಡೂ ಸಂಭವಿಸದು, \q2 ಆದರೆ ದುಷ್ಟರು ಕೇಡಿನಿಂದ ತುಂಬಿಕೊಳ್ಳುವರು. \b \q1 \v 22 ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; \q2 ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ. \b \q1 \v 23 ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; \q2 ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ. \b \q1 \v 24 ಚುರುಕು ಕೈಯುಳ್ಳವನು ಆಳುವನು; \q2 ಸೋಮಾರಿಗಳು ಗುಲಾಮರಾಗುವರು. \b \q1 \v 25 ಆತಂಕವು ಹೃದಯವನ್ನು ಕುಗ್ಗಿಸುವುದು, \q2 ಆದರೆ ಕನಿಕರದ ಮಾತು ಹುರಿದುಂಬಿಸುವುದು. \b \q1 \v 26 ನೀತಿವಂತರು ತಮ್ಮ ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸುತ್ತಾರೆ, \q2 ಆದರೆ ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆಯುತ್ತದೆ. \b \q1 \v 27 ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ, \q2 ಆದರೆ ಶ್ರಮಪಡುವವರು ಅದನ್ನು ತೃಪ್ತಿಯಿಂದ ತಿನ್ನುತ್ತಾರೆ. \b \q1 \v 28 ನೀತಿಯ ಮಾರ್ಗದಲ್ಲಿ ಜೀವವಿದೆ; \q2 ಅದರ ದಾರಿಯಲ್ಲಿ ಮರಣವೇ ಇಲ್ಲ. \b \c 13 \q1 \v 1 ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; \q2 ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ. \b \q1 \v 2 ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, \q2 ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ. \b \q1 \v 3 ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; \q2 ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು. \b \q1 \v 4 ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; \q2 ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು. \b \q1 \v 5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, \q2 ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ \q2 ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ. \b \q1 \v 6 ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; \q2 ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ. \b \q1 \v 7 ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; \q2 ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ. \b \q1 \v 8 ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; \q2 ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. \b \q1 \v 9 ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; \q2 ದುಷ್ಟರ ದೀಪವು ಆರಿಹೋಗುವುದು. \b \q1 \v 10 ಎಲ್ಲಿ ಗರ್ವವೋ ಅಲ್ಲಿ ಕಲಹ; \q2 ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ. \b \q1 \v 11 ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; \q2 ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು. \b \q1 \v 12 ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; \q2 ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು. \b \q1 \v 13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; \q2 ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು. \b \q1 \v 14 ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ \q2 ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ. \b \q1 \v 15 ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; \q2 ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ. \b \q1 \v 16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; \q2 ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ. \b \q1 \v 17 ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; \q2 ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು. \b \q1 \v 18 ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; \q2 ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು. \b \q1 \v 19 ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; \q2 ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ. \b \q1 \v 20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; \q2 ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು. \b \q1 \v 21 ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; \q2 ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು. \b \q1 \v 22 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; \q2 ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ. \b \q1 \v 23 ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; \q2 ಅನ್ಯಾಯವು ಅದನ್ನು ಹಾರಿಸಿಬಿಡುವುದು. \b \q1 \v 24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; \q2 ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ. \b \q1 \v 25 ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; \q2 ದುಷ್ಟರ ಹೊಟ್ಟೆಗೆ ಕೊರತೆಯಾಗುವುದು. \b \c 14 \q1 \v 1 ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; \q2 ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ. \b \q1 \v 2 ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ, \q2 ಆದರೆ ಅವರನ್ನು ತಿರಸ್ಕರಿಸುವವರು ತಮ್ಮ ಮಾರ್ಗಗಳಲ್ಲಿ ಮೋಸ ಹೋಗುತ್ತಾರೆ. \b \q1 \v 3 ಬುದ್ಧಿಹೀನನ ಬಾಯಿಯಲ್ಲಿ ಗರ್ವದ ಅಂಕುರವಿದೆ, \q2 ಆದರೆ ಜ್ಞಾನವಂತರ ತುಟಿಗಳು ಅವರನ್ನು ಕಾಪಾಡುವುವು. \b \q1 \v 4 ಎತ್ತುಗಳು ಇಲ್ಲದೆ ಇರುವಲ್ಲಿ ಗೋದಲಿಯು ಶುಚಿಯಾಗಿರುತ್ತದೆ, \q2 ಆದರೆ ಎತ್ತಿನ ಬಲದಿಂದಲೇ ಬೆಳೆಯು ಹೇರಳವಾಗಿ ವೃದ್ಧಿಯಾಗುತ್ತದೆ. \b \q1 \v 5 ಪ್ರಾಮಾಣಿಕ ಸಾಕ್ಷಿಯು ಸುಳ್ಳಾಡನು, \q2 ಆದರೆ ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು. \b \q1 \v 6 ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, \q2 ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ. \b \q1 \v 7 ನೀನು ಬುದ್ಧಿಹೀನನ ತುಟಿಗಳಲ್ಲಿ ಪರಿಜ್ಞಾನವನ್ನು ಕಾಣದೆ ಹೋದರೆ, \q2 ಅವನ ಬಳಿಯಿಂದ ಹೊರಟು ಹೋಗು. \b \q1 \v 8 ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. \q2 ಮೂಢರ ಬುದ್ಧಿಹೀನತೆಯು ಮೋಸಕರ. \b \q1 \v 9 ಬುದ್ಧಿಹೀನರು ಪಾಪಪರಿಹಾರವನ್ನು ಅಪಹಾಸ್ಯ ಮಾಡುವರು, \q2 ಆದರೆ ನೀತಿವಂತರಿಗೆ ದಯೆಯಿದೆ. \b \q1 \v 10 ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; \q2 ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ. \b \q1 \v 11 ದುಷ್ಟರ ಮನೆಯು ನಾಶವಾಗುವುದು, \q2 ಆದರೆ ಯಥಾರ್ಥವಂತರ ಗುಡಾರವು ಏಳಿಗೆಯಾಗುವುದು. \b \q1 \v 12 ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ, \q2 ಆದರೆ ಅದರ ಅಂತ್ಯವು ಮರಣದ ಮಾರ್ಗಗಳೇ. \b \q1 \v 13 ನಗೆಯಲ್ಲಿಯೂ ಹೃದಯವು ದುಃಖದಿಂದ ಇರುವುದು, \q2 ಅದರ ಉಲ್ಲಾಸದ ಅಂತ್ಯವು ಸಂತಾಪವೇ. \b \q1 \v 14 ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, \q2 ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು. \b \q1 \v 15 ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, \q2 ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು. \b \q1 \v 16 ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, \q2 ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು. \b \q1 \v 17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ, \q2 ಜನರು ಕುಯುಕ್ತಿಯುಳ್ಳವನನ್ನು ಹಗೆ ಮಾಡುತ್ತಾರೆ. \b \q1 \v 18 ಅರಿವಿಲ್ಲದವರು ಮೂರ್ಖತನಕ್ಕೆ ಬಾಧ್ಯರಾಗುತ್ತಾರೆ, \q2 ಆದರೆ ಜಾಣರು ಪರಿಜ್ಞಾನದಿಂದ ಆವರಿಸುತ್ತಾರೆ. \b \q1 \v 19 ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, \q2 ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ. \b \q1 \v 20 ಬಡವನು ಅವನ ನೆರೆಯವನಿಂದಲೇ ಕಡೆಗಣಿಸಲಾಗುವನು; \q2 ಆದರೆ ಐಶ್ವರ್ಯವಂತನಿಗೆ ಬಹುಜನ ಮಿತ್ರರು. \b \q1 \v 21 ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, \q2 ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು. \b \q1 \v 22 ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? \q2 ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು. \b \q1 \v 23 ಎಲ್ಲಾ ಪ್ರಯಾಸದಲ್ಲಿ ಲಾಭವಿದೆ, \q2 ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ. \b \q1 \v 24 ಜ್ಞಾನವಂತರ ಕಿರೀಟವೇ ಅವರ ಸಂಪತ್ತು, \q2 ಆದರೆ ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವನ್ನು ನೀಡುತ್ತದೆ. \b \q1 \v 25 ಸತ್ಯಸಾಕ್ಷಿಯು ಪ್ರಾಣಗಳನ್ನು ರಕ್ಷಿಸುತ್ತಾನೆ, \q2 ಸುಳ್ಳುಸಾಕ್ಷಿಯು ಮೋಸಗಾರನು. \b \q1 \v 26 ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. \q2 ಆತನ ಮಕ್ಕಳಿಗೆ ಆಶ್ರಯವು ಇರುವುದು. \b \q1 \v 27 ಯೆಹೋವ ದೇವರ ಭಯವು ಜೀವದ ಬುಗ್ಗೆಯಾಗಿದೆ. \q2 ಅದು ಮನುಷ್ಯನನ್ನು ಮರಣದ ಪಾಶಗಳಿಂದ ತಿರುಗಿಸುತ್ತದೆ. \b \q1 \v 28 ಜನಸಮೂಹದಲ್ಲಿ ಅರಸನ ಘನತೆ ಇದೆ. \q2 ಆದರೆ ಜನರ ಕೊರತೆಯಲ್ಲಿ ರಾಜಪುತ್ರನ ನಾಶ. \b \q1 \v 29 ತಾಳ್ಮೆಯುಳ್ಳವನು ಬಹು ವಿವೇಕಿ, \q2 ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು. \b \q1 \v 30 ಶಾಂತ ಹೃದಯವು ದೇಹಕ್ಕೆ ಜೀವ; \q2 ಆದರೆ ಮತ್ಸರವು ಎಲುಬುಗಳಿಗೆ ಕ್ಷಯ. \b \q1 \v 31 ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, \q2 ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು. \b \q1 \v 32 ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, \q2 ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ. \b \q1 \v 33 ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆಯಾಗಿದೆ, \q2 ಆದರೆ ಮೂರ್ಖರಲ್ಲಿ ಜ್ಞಾನವು ಕಂಡುಬರುವುದಿಲ್ಲ. \b \q1 \v 34 ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; \q2 ಆದರೆ ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ. \b \q1 \v 35 ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; \q2 ಆದರೆ ಮಾನಗೇಡಿ ಸೇವಕನ ಮೇಲೆ ಅರಸನ ಕೋಪ ಎರಗುತ್ತದೆ. \b \c 15 \q1 \v 1 ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. \q2 ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ. \b \q1 \v 2 ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. \q2 ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ. \b \q1 \v 3 ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ. \q2 ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಾ ಇರುವರು. \b \q1 \v 4 ಹಿತವಾದ ನಾಲಿಗೆಯು ಜೀವವೃಕ್ಷ. \q2 ಆದರೆ ವಕ್ರ ನಾಲಿಗೆಯು ಆತ್ಮಚೈತನ್ಯವನ್ನು ನಾಶಮಾಡುವುದು. \b \q1 \v 5 ಮೂರ್ಖನು ತನ್ನ ತಂದೆಯ ಶಿಸ್ತನ್ನು ತಿರಸ್ಕರಿಸುತ್ತಾನೆ. \q2 ಆದರೆ ಜಾಣನು ಗದರಿಕೆಯನ್ನು ಲಕ್ಷಿಸುವನು. \b \q1 \v 6 ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು. \q2 ಆದರೆ ದುಷ್ಟನ ಆದಾಯವು ವಿನಾಶ ತರುವುದು. \b \q1 \v 7 ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. \q2 ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ. \b \q1 \v 8 ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. \q2 ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ. \b \q1 \v 9 ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. \q2 ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ. \b \q1 \v 10 ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. \q2 ಗದರಿಕೆಯನ್ನು ಹಗೆಮಾಡುವವನು ಸಾಯುವನು. \b \q1 \v 11 ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, \q2 ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ? \b \q1 \v 12 ಕುಚೋದ್ಯಗಾರನು ಬುದ್ಧಿವಾದವನ್ನು ದ್ವೇಷಿಸುತ್ತಾನೆ. \q2 ಅವನು ಜ್ಞಾನಿಗಳಿಂದ ದೂರವಿರುತ್ತಾನೆ. \b \q1 \v 13 ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು. \q2 ಆದರೆ ನೊಂದ ಹೃದಯವು ಆತ್ಮಚೈತನ್ಯವನ್ನು ಕುಂದಿಸುತ್ತದೆ. \b \q1 \v 14 ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ. \q2 ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ. \b \q1 \v 15 ಬಾಧಿತರ ದಿನಗಳೆಲ್ಲವೂ ದುಃಖಭರಿತ. \q2 ಆದರೆ ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ. \b \q1 \v 16 ತೊಂದರೆಯಿಂದ ಕೂಡಿದ ದೊಡ್ಡ ಸಂಪತ್ತಿಗಿಂತ \q2 ಯೆಹೋವ ದೇವರ ಭಯದಿಂದ ಕೂಡಿದ ಅಲ್ಪವೇ ಮೇಲು. \b \q1 \v 17 ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸಕ್ಕಿಂತಲೂ, \q2 ಪ್ರೀತಿ ಇರುವಲ್ಲಿ ಸಸ್ಯಾಹಾರ ಊಟವೇ ಉತ್ತಮ. \b \q1 \v 18 ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. \q2 ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು. \b \q1 \v 19 ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ. \q2 ಆದರೆ ಯಥಾರ್ಥವಂತನ ಮಾರ್ಗವು ರಾಜಮಾರ್ಗ. \b \q1 \v 20 ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸಗೊಳಿಸುತ್ತಾನೆ. \q2 ಬುದ್ಧಿಹೀನನಾದರೋ ತನ್ನ ತಾಯಿಯನ್ನು ತಿರಸ್ಕರಿಸುತ್ತಾನೆ. \b \q1 \v 21 ಬುದ್ಧಿಹೀನನು ಮೂರ್ಖತನದಲ್ಲಿ ಉಲ್ಲಾಸಿಸುವನು. \q2 ತಿಳುವಳಿಕೆಯನ್ನು ಹೊಂದಿರುವವನು ನೇರ ಮಾರ್ಗದಲ್ಲಿ ನಡೆಯುತ್ತಾನೆ. \b \q1 \v 22 ಸಲಹೆಯ ಕೊರತೆಯಿಂದ ಯೋಜನೆಗಳು ವಿಫಲಗೊಳ್ಳುತ್ತವೆ. \q2 ಆದರೆ ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸಫಲಗೊಳ್ಳುವುವು. \b \q1 \v 23 ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. \q2 ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು. \b \q1 \v 24 ಜೀವದ ಮಾರ್ಗವು ಜಾಣನನ್ನು ಮೇಲಕ್ಕೆತ್ತುವುದು. \q2 ಅದು ಅವನನ್ನು ಪಾತಾಳಕ್ಕೆ ಇಳಿಯುವದರಿಂದ ತಪ್ಪಿಸುವುದು. \b \q1 \v 25 ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು, \q2 ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು. \b \q1 \v 26 ದುಷ್ಟರ ಆಲೋಚನೆಯು ಯೆಹೋವ ದೇವರಿಗೆ ಅಸಹ್ಯವಾಗಿದೆ, \q2 ಆದರೆ ಸೌಜನ್ಯಶೀಲ ಮಾತುಗಳು ಅವರ ದೃಷ್ಟಿಯಲ್ಲಿ ಶುದ್ಧವಾಗಿವೆ. \b \q1 \v 27 ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. \q2 ಲಂಚವನ್ನು ಹಗೆಮಾಡುವವನು ಬದುಕುವನು. \b \q1 \v 28 ನೀತಿವಂತರ ಹೃದಯವು ಹೇಗೆ ಉತ್ತರಿಸಬೇಕೆಂದು ಯೋಚಿಸುತ್ತದೆ. \q2 ಆದರೆ ದುಷ್ಟರ ಬಾಯಿಯು ಕೆಟ್ಟವುಗಳನ್ನು ಹೊರಗೆಡವುತ್ತದೆ. \b \q1 \v 29 ಯೆಹೋವ ದೇವರು ದುಷ್ಟರಿಗೆ ದೂರ; \q2 ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ. \b \q1 \v 30 ಹರ್ಷಚಿತ್ತದ ನೋಟವು ಹೃದಯಕ್ಕೆ ಸಂತೋಷವನ್ನು ತರುತ್ತದೆ. \q2 ಒಳ್ಳೆಯ ವಾರ್ತೆಯು ಎಲುಬುಗಳನ್ನು ಪುಷ್ಟಿಗೊಳಿಸುತ್ತದೆ. \b \q1 \v 31 ಜೀವದ ಗದರಿಕೆಗೆ ಕಿವಿಗೊಡುವವನು, \q2 ಜ್ಞಾನಿಗಳ ನಡುವೆ ವಾಸಿಸುವವನಾಗಿದ್ದಾನೆ. \b \q1 \v 32 ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, \q2 ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ. \b \q1 \v 33 ಯೆಹೋವ ದೇವರ ಭಯವೇ ಜ್ಞಾನವನ್ನು ಕಲಿಸುತ್ತದೆ. \q2 ನಮ್ರತೆ ಗೌರವಕ್ಕೆ ಮೊದಲು ಬರುತ್ತದೆ. \b \c 16 \q1 \v 1 ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, \q2 ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು. \b \q1 \v 2 ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, \q2 ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ. \b \q1 \v 3 ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು, \q2 ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು. \b \q1 \v 4 ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. \q2 ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ. \b \q1 \v 5 ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. \q2 ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ. \b \q1 \v 6 ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. \q2 ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ. \b \q1 \v 7 ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, \q2 ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ. \b \q1 \v 8 ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ \q2 ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ. \b \q1 \v 9 ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, \q2 ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ. \b \q1 \v 10 ಅರಸನ ತುಟಿಗಳಲ್ಲಿ ದೈವೋಕ್ತಿ. \q2 ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ. \b \q1 \v 11 ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. \q2 ಚೀಲದ ತೂಕಗಳು ಅವರ ಕೈಕೆಲಸವೇ. \b \q1 \v 12 ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು. \q2 ಏಕೆಂದರೆ ನೀತಿಯಿಂದ ಸಿಂಹಾಸನವು ಸ್ಥಾಪಿಸಲಾಗುತ್ತದೆ. \b \q1 \v 13 ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, \q2 ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ. \b \q1 \v 14 ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, \q2 ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು. \b \q1 \v 15 ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, \q2 ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ. \b \q1 \v 16 ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! \q2 ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ. \b \q1 \v 17 ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. \q2 ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ. \b \q1 \v 18 ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. \q2 ಬೀಳುವಿಕೆಯ ಮುಂಚೆ ಜಂಬದ ಆತ್ಮ. \b \q1 \v 19 ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ, \q2 ದೀನರೊಂದಿಗೆ ದೀನ ಆತ್ಮವುಳ್ಳವರಾಗಿ ಇರುವುದು ಉತ್ತಮ. \b \q1 \v 20 ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. \q2 ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು. \b \q1 \v 21 ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. \q2 ತುಟಿಗಳ ಮಾಧುರ್ಯ ಮನವೊಲಿಸುವವು. \b \q1 \v 22 ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, \q2 ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ. \b \q1 \v 23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, \q2 ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು. \b \q1 \v 24 ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ, \q2 ಎಲುಬುಗಳಿಗೆ ಕ್ಷೇಮವೂ ಆಗಿವೆ. \b \q1 \v 25 ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, \q2 ಆದರೆ ಅದರ ಅಂತ್ಯವು ಮರಣದ ಮಾರ್ಗವೇ. \b \q1 \v 26 ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು, \q2 ಅವನ ಹಸಿವು ಅವನನ್ನು ಒತ್ತಾಯ ಮಾಡುವುದು. \b \q1 \v 27 ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. \q2 ಅವನ ತುಟಿಗಳು ಉರಿಯುವ ಬೆಂಕಿಯಂತಿವೆ. \b \q1 \v 28 ಮೂರ್ಖನು ಜಗಳವನ್ನು ಬಿತ್ತುತ್ತಾನೆ. \q2 ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ. \b \q1 \v 29 ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, \q2 ದುರ್ಮಾರ್ಗಕ್ಕೆ ಎಳೆಯುತ್ತಾನೆ. \b \q1 \v 30 ವಕ್ರಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ. \q2 ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ. \b \q1 \v 31 ನರೆಗೂದಲು ಉಜ್ವಲ ಕಿರೀಟ, \q2 ಅದು ನೀತಿಯ ಜೀವಿತದಲ್ಲಿ ಒದಗುತ್ತದೆ. \b \q1 \v 32 ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, \q2 ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು. \b \q1 \v 33 ಉಡಿಯಲ್ಲಿ ಚೀಟು ಹಾಕಬಹುದು, \q2 ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ. \b \c 17 \q1 \v 1 ವಿವಾದದೊಂದಿಗೆ ತುಂಬಿದ ಔತಣದ ಮನೆಗಿಂತ, \q2 ಶಾಂತಿ ಸಮಾಧಾನದ ಒಣ ತುತ್ತು ಮೇಲು. \b \q1 \v 2 ನಾಚಿಕೆಪಡಿಸುವ ಮಗನ ಮೇಲೆ ಜಾಣನಾದ ಸೇವಕನು ಆಳುವವನಾಗಿ \q2 ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು. \b \q1 \v 3 ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; \q2 ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ. \b \q1 \v 4 ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; \q2 ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು. \b \q1 \v 5 ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; \q2 ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು. \b \q1 \v 6 ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; \q2 ಮಕ್ಕಳ ಭೂಷಣವು ಅವರ ತಂದೆತಾಯಿಗಳೇ. \b \q1 \v 7 ಉತ್ತಮವಾದ ಪದಗಳು ಮೂರ್ಖನಿಗೆ ಸೂಕ್ತವಲ್ಲ; \q2 ಆಳುವವನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಆಯುಕ್ತವಲ್ಲವೇ. \b \q1 \v 8 ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; \q2 ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ. \b \q1 \v 9 ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ; \q2 ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ. \b \q1 \v 10 ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ \q2 ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ. \b \q1 \v 11 ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; \q2 ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು. \b \q1 \v 12 ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ \q2 ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು. \b \q1 \v 13 ಉಪಕಾರಕ್ಕೆ ಅಪಕಾರವನ್ನು ಮಾಡುವವನ \q2 ಮನೆಯಿಂದ ಕೇಡು ತೊಲಗುವುದೇ ಇಲ್ಲ. \b \q1 \v 14 ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; \q2 ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು. \b \q1 \v 15 ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, \q2 ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ. \b \q1 \v 16 ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? \q2 ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ. \b \q1 \v 17 ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; \q2 ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ. \b \q1 \v 18 ಬುದ್ಧಿಹೀನನು ಕೈ ಕುಲುಕಿ \q2 ತನ್ನ ನೆರೆಯವನಿಗೆ ಜಾಮಿನನಾಗುತ್ತಾನೆ. \b \q1 \v 19 ಕಲಹವನ್ನು ಪ್ರೀತಿಮಾಡುವವನು ಪಾಪವನ್ನು ಪ್ರೀತಿಮಾಡುತ್ತಾನೆ; \q2 ತನ್ನ ಗೋಡೆಯನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಆಮಂತ್ರಿಸುತ್ತಾನೆ. \b \q1 \v 20 ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; \q2 ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು. \b \q1 \v 21 ಬುದ್ಧಿಹೀನ ಹೆತ್ತವನಿಗೆ ವ್ಯಥೆ; \q2 ಬುದ್ಧಿಹೀನನ ತಂದೆಗೆ ಸಂತೋಷವಿರುವುದಿಲ್ಲ. \b \q1 \v 22 ಹರ್ಷಹೃದಯವು ಒಳ್ಳೆಯ ಔಷಧ; \q2 ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ. \b \q1 \v 23 ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ \q2 ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ. \b \q1 \v 24 ವಿವೇಕಿಯು ಜ್ಞಾನವನ್ನು ತನ್ನ ಮುಂದೆ ಇಟ್ಟುಕೊಳ್ಳುತ್ತಾನೆ. \q2 ಆದರೆ ಬುದ್ಧಿಹೀನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಅಲೆಯುವವು. \b \q1 \v 25 ಬುದ್ಧಿಹೀನನಾದ ಮಗನು ತನ್ನ ತಂದೆಗೆ ದುಃಖವೂ, \q2 ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ. \b \q1 \v 26 ನೀತಿವಂತನಿಗೆ ದಂಡ ವಿಧಿಸುವುದು ಒಳ್ಳೆಯದಲ್ಲದಿದ್ದರೆ, \q2 ಖಂಡಿತವಾಗಿಯೂ ಪ್ರಾಮಾಣಿಕ ಅಧಿಕಾರಿಗಳನ್ನು ಹೊಡೆಯುವುದು ಸರಿಯಲ್ಲ. \b \q1 \v 27 ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ; \q2 ತಿಳುವಳಿಕೆಯನ್ನು ಹೊಂದಿರುವವನು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ. \b \q1 \v 28 ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು; \q2 ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು. \b \c 18 \q1 \v 1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ \q2 ಸಮಸ್ತ ಸುಜ್ಞಾನಕ್ಕೂ ರೇಗುವನು. \b \q1 \v 2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; \q2 ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ. \b \q1 \v 3 ದುಷ್ಟತ್ವವು ಬಂದಾಗ ತಾತ್ಸಾರವೂ, \q2 ಅವಮಾನದೊಂದಿಗೆ ನಿಂದೆಯೂ ಬರುತ್ತವೆ. \b \q1 \v 4 ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ, \q2 ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ. \b \q1 \v 5 ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, \q2 ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ. \b \q1 \v 6 ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ \q2 ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. \b \q1 \v 7 ಬುದ್ಧಿಹೀನನ ಬಾಯಿಯು ಅವನ ನಾಶನ; \q2 ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ. \b \q1 \v 8 ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; \q2 ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು. \b \q1 \v 9 ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, \q2 ಕೆಡುಕನಿಗೆ ಸಹೋದರನಾಗಿದ್ದಾನೆ. \b \q1 \v 10 ಯೆಹೋವ ದೇವರ ನಾಮವು ಬಲವಾದ ಬುರುಜು; \q2 ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ. \b \q1 \v 11 ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ \q2 ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ. \b \q1 \v 12 ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; \q2 ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ. \b \q1 \v 13 ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ \q2 ಅದು ಮೂರ್ಖತನವೂ, ಅವಮಾನವೂ ಆಗಿದೆ. \b \q1 \v 14 ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; \q2 ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು? \b \q1 \v 15 ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; \q2 ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ. \b \q1 \v 16 ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; \q2 ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ. \b \q1 \v 17 ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, \q2 ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ. \b \q1 \v 18 ಚೀಟು ಹಾಕುವುದರಿಂದ ವ್ಯಾಜ್ಯಶಮನ; \q2 ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ. \b \q1 \v 19 ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; \q2 ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ. \b \q1 \v 20 ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; \q2 ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು. \b \q1 \v 21 ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; \q2 ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು. \b \q1 \v 22 ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, \q2 ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ. \b \q1 \v 23 ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; \q2 ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ. \b \q1 \v 24 ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; \q2 ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ. \b \c 19 \q1 \v 1 ಬುದ್ಧಿಹೀನನ ವಕ್ರ ತುಟಿಗಳಿಗಿಂತ, \q2 ನಿರ್ದೋಷವಾಗಿ ನಡೆಯುವ ಬಡವನು ಉತ್ತಮ. \b \q1 \v 2 ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; \q2 ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು. \b \q1 \v 3 ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, \q2 ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ. \b \q1 \v 4 ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; \q2 ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ. \b \q1 \v 5 ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; \q2 ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು. \b \q1 \v 6 ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. \q2 ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ. \b \q1 \v 7 ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; \q2 ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? \q1 ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ \q2 ಅವನಿಗೆ ಏನೂ ದೊರಕದು. \b \q1 \v 8 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; \q2 ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ. \b \q1 \v 9 ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; \q2 ಸುಳ್ಳಾಡುವವನು ಹಾಳಾಗಿ ಹೋಗುವನು. \b \q1 \v 10 ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; \q2 ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ. \b \q1 \v 11 ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; \q2 ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ. \b \q1 \v 12 ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; \q2 ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ. \b \q1 \v 13 ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; \q2 ಜಗಳವಾಡುವ ಹೆಂಡತಿ \q2 ಯಾವಾಗಲೂ ತೊಟ್ಟಿಕ್ಕುವ ಹನಿ. \b \q1 \v 14 ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; \q2 ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ. \b \q1 \v 15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; \q2 ಸೋಮಾರಿಯು ಹಸಿವೆಗೊಳ್ಳುವನು. \b \q1 \v 16 ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, \q2 ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು. \b \q1 \v 17 ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; \q2 ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು. \b \q1 \v 18 ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; \q2 ಅವನ ಮರಣಕ್ಕೆ ನೀನು ಕಾರಣನಾಗಬೇಡ. \b \q1 \v 19 ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; \q2 ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು. \b \q1 \v 20 ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; \q2 ಕಡೆಯಲ್ಲಿ ನೀನು ಜ್ಞಾನಿಯಾಗುವೆ. \b \q1 \v 21 ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; \q2 ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು. \b \q1 \v 22 ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. \q2 ಬಡವನು ಸುಳ್ಳುಗಾರನಿಗಿಂತ ಲೇಸು. \b \q1 \v 23 ಯೆಹೋವ ದೇವರ ಭಯವು ಜೀವದಾಯಕವು; \q2 ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ. \b \q1 \v 24 ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, \q2 ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ! \b \q1 \v 25 ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; \q2 ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು. \b \q1 \v 26 ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ \q2 ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ. \b \q1 \v 27 ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, \q2 ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ. \b \q1 \v 28 ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; \q2 ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು. \b \q1 \v 29 ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, \q2 ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ. \b \c 20 \q1 \v 1 ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; \q2 ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ. \b \q1 \v 2 ಅರಸನ ಭಯವು ಸಿಂಹದ ಘರ್ಜನೆಯಂತಿದೆ; \q2 ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು. \b \q1 \v 3 ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; \q2 ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ. \b \q1 \v 4 ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; \q2 ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ. \b \q1 \v 5 ಮನುಷ್ಯನ ಹೃದಯದ ಆಲೋಚನೆಯು ಆಳವಾದ ಬಾವಿಯ ನೀರಿನಂತಿದೆ; \q2 ವಿವೇಕಿಯು ಅದನ್ನು ಸೇದುವನು. \b \q1 \v 6 ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; \q2 ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು? \b \q1 \v 7 ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; \q2 ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು. \b \q1 \v 8 ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, \q2 ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು. \b \q1 \v 9 “ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. \q2 ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು? \b \q1 \v 10 ಮೋಸದ ತೂಕಗಳೂ, ಮೋಸದ ಅಳತೆಗಳೂ \q2 ಇವೆರಡೂ ಯೆಹೋವ ದೇವರಿಗೆ ಅಸಹ್ಯ. \b \q1 \v 11 ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, \q2 ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ. \b \q1 \v 12 ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು \q2 ಯೆಹೋವ ದೇವರು ಉಂಟುಮಾಡಿದ್ದಾನೆ. \b \q1 \v 13 ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; \q2 ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ! \b \q1 \v 14 “ಇದು ಒಳ್ಳೆಯದಲ್ಲ ಇದು ಒಳ್ಳೆಯದಲ್ಲ!” ಎಂದು ಕೊಳ್ಳುವವನು ಹೇಳುತ್ತಾನೆ; \q2 ಆದರೆ ಅವನು ಕೊಂಡು ಹೋದ ಮೇಲೆ ಅದನ್ನೇ ಹೊಗಳುತ್ತಾನೆ. \b \q1 \v 15 ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; \q2 ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ. \b \q1 \v 16 ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; \q2 ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ. \b \q1 \v 17 ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; \q2 ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು. \b \q1 \v 18 ಸಲಹೆಯಿಂದ ಯೋಜನೆಗಳು ನೆರವೆರುವವು; \q2 ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ. \b \q1 \v 19 ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; \q2 ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ. \b \q1 \v 20 ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ \q2 ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು. \b \q1 \v 21 ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ \q2 ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ. \b \q1 \v 22 ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; \q2 ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು. \b \q1 \v 23 ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; \q2 ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ. \b \q1 \v 24 ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. \q2 ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು? \b \q1 \v 25 ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು \q2 ಆಮೇಲೆ ವಿಚಾರಿಸುವುದು ಉರುಲಾಗಿದೆ. \b \q1 \v 26 ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; \q2 ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು. \b \q1 \v 27 ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ. \q2 ಅದು ಅವನ ಅಂತರಂಗವನ್ನು ಶೋಧಿಸುತ್ತದೆ. \b \q1 \v 28 ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; \q2 ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ. \b \q1 \v 29 ಯೌವನಸ್ಥರ ಮಹಿಮೆ ಅವರ ಬಲವೇ; \q2 ಮುದುಕರ ವೈಭವ ನರೆತ ತಲೆಯೇ. \b \q1 \v 30 ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; \q2 ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ. \b \c 21 \q1 \v 1 ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; \q2 ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ. \b \q1 \v 2 ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; \q2 ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ. \b \q1 \v 3 ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು \q2 ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ. \b \q1 \v 4 ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, \q2 ದುಷ್ಟರ ಉಳುವಿಕೆ ಇವೆಲ್ಲಾ ಪಾಪವೇ. \b \q1 \v 5 ಶ್ರದ್ಧೆಯುಳ್ಳವನ ಯೋಜನೆಗಳಿಂದ ಸಮೃದ್ಧಿ; \q2 ಆತುರತೆಯು ಬಡತನಕ್ಕೆ ನಡೆಸುತ್ತದೆ. \b \q1 \v 6 ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು \q2 ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ. \b \q1 \v 7 ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು; \q2 ಏಕೆಂದರೆ ನ್ಯಾಯವಾದದ್ದನ್ನು ಮಾಡುವುದನ್ನು ಅವರು ನಿರಾಕರಿಸುತ್ತಾರೆ. \b \q1 \v 8 ದೋಷಿಯ ಮಾರ್ಗವು ಡೊಂಕು, \q2 ಮುಗ್ಧನ ನಡತೆ ಯಥಾರ್ಥ. \b \q1 \v 9 ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, \q2 ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು. \b \q1 \v 10 ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ; \q2 ಅವನು ತನ್ನ ನೆರೆಯವನಿಗೂ ಯಾವ ದಯೆಯನ್ನೂ ತೋರಿಸನು. \b \q1 \v 11 ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು; \q2 ಜ್ಞಾನಿಯು ಶಿಕ್ಷಣ ಹೊಂದಿದರೆ, ಅವನು ಪರಿಜ್ಞಾನವನ್ನು ಹೊಂದುತ್ತಾನೆ. \b \q1 \v 12 ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ; \q2 ದುಷ್ಟರನ್ನು ಕೇಡಿಗೆ ತಳ್ಳುವನು. \b \q1 \v 13 ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು \q2 ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ. \b \q1 \v 14 ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; \q2 ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು. \b \q1 \v 15 ನ್ಯಾಯತೀರಿಸುವುದು ನೀತಿವಂತರಿಗೆ ಸಂತೋಷ; \q2 ಆದರೆ ಕೆಟ್ಟದ್ದನ್ನು ಮಾಡುವವರಿಗೆ ಭೀತಿ. \b \q1 \v 16 ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು \q2 ಸತ್ತವರ ಸಹವಾಸದಲ್ಲಿ ವಿಶ್ರಾಂತಿ ಪಡೆಯುವನು. \b \q1 \v 17 ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ, \q2 ತೈಲವನ್ನೂ ಅಪೇಕ್ಷಿಸುವವನು ಎಂದಿಗೂ ಧನವಂತನಾಗನು. \b \q1 \v 18 ದುಷ್ಟರು ನೀತಿವಂತರಿಗೂ, \q2 ದ್ರೋಹಿಗಳು ಸನ್ಮಾರ್ಗಿಗಳಿಗೂ ಈಡಾಗಿದ್ದಾರೆ. \b \q1 \v 19 ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, \q2 ಮರಭೂಮಿಯಲ್ಲಿ ವಾಸಿಸುವುದು ಲೇಸು. \b \q1 \v 20 ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ; \q2 ಆದರೆ ಬುದ್ಧಿಹೀನನು ಇದ್ದದ್ದೆಲ್ಲವನ್ನು ನುಂಗಿಬಿಡುತ್ತಾನೆ. \b \q1 \v 21 ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು \q2 ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ. \b \q1 \v 22 ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ, \q2 ಅವರು ಭರವಸವಿಟ್ಟ ಬಲವಾದ ಕೋಟೆಯನ್ನು ಕೆಡವಿ ಹಾಕುತ್ತಾನೆ. \b \q1 \v 23 ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, \q2 ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ. \b \q1 \v 24 ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ \q2 ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ. \b \q1 \v 25 ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; \q2 ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ. \q1 \v 26 ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; \q2 ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ. \b \q1 \v 27 ದುಷ್ಟರ ಯಜ್ಞವು ಅಸಹ್ಯ; \q2 ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ. \b \q1 \v 28 ಸುಳ್ಳುಸಾಕ್ಷಿಯವನು ನಾಶವಾಗುವನು; \q2 ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು. \b \q1 \v 29 ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ; \q2 ಯಥಾರ್ಥವಂತನಾದರೋ ತನ್ನ ಮಾರ್ಗಗಳನ್ನು ಯೋಚಿಸುತ್ತಾರೆ. \b \q1 \v 30 ಯೆಹೋವ ದೇವರಿಗೆ ವಿರೋಧವಾಗಿ \q2 ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ. \b \q1 \v 31 ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; \q2 ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ. \b \c 22 \q1 \v 1 ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; \q2 ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ. \b \q1 \v 2 ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: \q2 ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ. \b \q1 \v 3 ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; \q2 ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ. \b \q1 \v 4 ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, \q2 ಐಶ್ವರ್ಯವೂ ಮಾನವೂ ಜೀವವೂ ಆಗಿದೆ. \b \q1 \v 5 ದುಷ್ಟರ ದಾರಿಯಲ್ಲಿ ಮುಳ್ಳುಗಳೂ, ಉರುಲುಗಳೂ ಇವೆ; \q2 ತನ್ನ ಜೀವವನ್ನು ಕಾಪಾಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು. \b \q1 \v 6 ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು; \q2 ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ. \b \q1 \v 7 ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; \q2 ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು. \b \q1 \v 8 ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; \q2 ಅವನ ಕೋಪದ ಬೆತ್ತವು ಮುರಿದು ಹೋಗುವುದು. \b \q1 \v 9 ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, \q2 ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ. \b \q1 \v 10 ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು; \q2 ವಿವಾದವೂ ನಿಂದೆಯೂ ನಿಂತುಹೋಗುವುವು. \b \q1 \v 11 ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ \q2 ಅರಸನು ಸ್ನೇಹಿತನಾಗಿರುವನು. \b \q1 \v 12 ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; \q2 ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ. \b \q1 \v 13 ಸೋಮಾರಿಯು, “ಹೊರಗೆ ಸಿಂಹವಿದೆ! \q2 ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ. \b \q1 \v 14 ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; \q2 ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು. \b \q1 \v 15 ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; \q2 ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು. \b \q1 \v 16 ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ \q2 ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು. \ms1 ಜ್ಞಾನಿಯ ಮೂವತ್ತು ಹೇಳಿಕೆಗಳು \s2 ಮೊದಲನೆಯ ಹೇಳಿಕೆ \q1 \v 17 ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; \q2 ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ. \q1 \v 18 ಏಕೆಂದರೆ ಅವುಗಳನ್ನು ನಿನ್ನ ಹೃದಯದಲ್ಲಿ ಇಟ್ಟು ಕಾಪಾಡು, \q2 ಅವು ನಿನ್ನ ತುಟಿಗಳ ಮೇಲೆ ಸಿದ್ಧವಿದ್ದರೆ ಮೆಚ್ಚುಗೆಯಾಗಿವೆ. \q1 \v 19 ನಿನ್ನ ಭರವಸೆಯು ಯೆಹೋವ ದೇವರಲ್ಲಿ ಇರುವಂತೆ \q2 ಈ ದಿವಸ ನಿನಗೇ ತಿಳಿಯಪಡಿಸಿದ್ದೇನೆ. \q1 \v 20 ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ? \q2 ಸಲಹೆ ಮತ್ತು ಪರಿಜ್ಞಾನದ ಹೇಳಿಕೆಗಳು, \q1 \v 21 ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, \q2 ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ \q2 ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ. \s2 ಎರಡನೆಯ ಹೇಳಿಕೆ \q1 \v 22 ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; \q2 ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ. \q1 \v 23 ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, \q2 ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು. \s2 ಮೂರನೆಯ ಹೇಳಿಕೆ \q1 \v 24 ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; \q2 ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ; \q1 \v 25 ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು, \q2 ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ. \s2 ನಾಲ್ಕನೆಯ ಹೇಳಿಕೆ \q1 \v 26 ಬೇರೆಯವರ ಸಾಲವನ್ನು ಖಾತರಿಪಡಿಸಲೂ \q2 ಬೇರೊಬ್ಬರಿಗೆ ಭದ್ರತೆಯನ್ನು ನೀಡಲು ಒಪ್ಪಬೇಡ. \q1 \v 27 ಸಾಲ ತೀರಿಸಲು ನಿನಗೆ ಏನೂ ಇಲ್ಲದೆ ಹೋದರೆ \q2 ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದುಕೊಂಡು ಹೋಗುವನಲ್ಲವೇ? \s2 ಐದನೆಯ ಹೇಳಿಕೆ \q1 \v 28 ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ \q2 ಮೇರೆಯನ್ನು ತೆಗೆಯಬೇಡ. \s2 ಆರನೆಯ ಹೇಳಿಕೆ \q1 \v 29 ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? \q2 ಅವನು ನೀಚರ ಮುಂದೆ ಅಲ್ಲ, \q2 ಅರಸರ ಮುಂದೆಯೇ ಸೇವೆ ಸಲ್ಲಿಸುವನು. \c 23 \s2 ಏಳನೆಯ ಹೇಳಿಕೆ \q1 \v 1 ಆಳುವವನ ಸಂಗಡ ನೀನು ಊಟಕ್ಕೆ ಕುಳಿತಿರುವಾಗ, \q2 ನಿನ್ನ ಎದುರಿನಲ್ಲಿ ಏನಿದೆ ಎಂದು ಶ್ರದ್ಧೆಯಿಂದ ಗಮನಿಸು. \q1 \v 2 ನೀನು ಹೊಟ್ಟೆಬಾಕನಾಗಿದ್ದರೆ, \q2 ನಿನ್ನ ಕುತ್ತಿಗೆಗೆ ಖಡ್ಗವನ್ನು ಇಟ್ಟುಕೋ. \q1 \v 3 ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿಸಬೇಡ; \q2 ಏಕೆಂದರೆ ಅದು ಮೋಸದ ಆಹಾರವು. \s2 ಎಂಟನೆಯ ಹೇಳಿಕೆ \q1 \v 4 ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ; \q2 ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ. \q1 \v 5 ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. \q2 ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು \q2 ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು. \s2 ಒಂಬತ್ತನೆಯ ಹೇಳಿಕೆ \q1 \v 6 ಜಿಪುಣನ ಆಹಾರವನ್ನು ತಿನ್ನಬೇಡ; \q2 ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ. \q1 \v 7 ಏಕೆಂದರೆ, ಅವನು ಎಲ್ಲದಕ್ಕೂ ಬೆಲೆ ಕಟ್ಟುವ \q2 ಯೋಚನೆಯುಳ್ಳವನಂತೆ ಇದ್ದಾನೆ; \q1 ಅವನು, “ತಿನ್ನು, ಕುಡಿ,” ಎಂದು ಹೇಳುತ್ತಾನೆ; \q2 ಆದರೆ ಅವನ ಹೃದಯವು ನಿನ್ನೊಂದಿಗಿಲ್ಲ. \q1 \v 8 ನೀನು ತಿಂದ ಸ್ವಲ್ಪ ತುತ್ತನ್ನು ಕಕ್ಕಿಬಿಡುವೆ; \q2 ನಿನ್ನ ಸವಿಮಾತುಗಳೆಲ್ಲಾ ವ್ಯರ್ಥವೇ. \s2 ಹತ್ತನೆಯ ಹೇಳಿಕೆ \q1 \v 9 ಬುದ್ಧಿಹೀನರ ಸಂಗಡ ಮಾತಾಡಬೇಡ; \q2 ಏಕೆಂದರೆ ನಿನ್ನ ಜ್ಞಾನದ ಮಾತುಗಳನ್ನು ಅವರು ತಿರಸ್ಕರಿಸುವನು. \s2 ಹನ್ನೊಂದನೆಯ ಹೇಳಿಕೆ \q1 \v 10 ಪೂರ್ವಕಾಲದ ಮೇರೆಯನ್ನು ತೆಗೆಯಬೇಡ; \q2 ಅನಾಥರ ಹೊಲಗಳನ್ನು ಅತಿಕ್ರಮಿಸಬೇಡ. \q1 \v 11 ಏಕೆಂದರೆ ಅವನ ವಿಮೋಚಕನು ಬಲಶಾಲಿಯಾಗಿದ್ದಾನೆ; \q2 ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು. \s2 ಹನ್ನೆರಡನೆಯ ಹೇಳಿಕೆ \q1 \v 12 ಶಿಸ್ತಿಗೆ ನಿನ್ನ ಹೃದಯವನ್ನೂ \q2 ತಿಳುವಳಿಕೆಯ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು. \s2 ಹದಿಮೂರನೆಯ ಹೇಳಿಕೆ \q1 \v 13 ಮಕ್ಕಳನ್ನು ಶಿಕ್ಷಿಸಲು ಹಿಂದೆಗೆಯಬೇಡ; \q2 ಬೆತ್ತದಿಂದ ಹೊಡೆದರೆ, ಅವರು ಸಾಯುವುದಿಲ್ಲ. \q1 \v 14 ಅವರನ್ನು ಬೆತ್ತದಿಂದ ಹೊಡೆದು, \q2 ಪಾತಾಳದಿಂದ ಅವರ ಮರಣವನ್ನು ತಪ್ಪಿಸುವೆ. \s2 ಹದಿನಾಲ್ಕನೆಯ ಹೇಳಿಕೆ \q1 \v 15 ಮಗನೇ, ನಿನ್ನ ಹೃದಯವು ಜ್ಞಾನವುಳ್ಳದ್ದಾಗಿದ್ದರೆ, \q2 ನನ್ನ ಹೃದಯವು ಹರ್ಷಿಸುವುದು. \q1 \v 16 ನಿನ್ನ ತುಟಿಗಳು ಯಥಾರ್ಥವಾದವುಗಳನ್ನು ಮಾತಾಡಿದರೆ, \q2 ನನ್ನ ಅಂತರಾತ್ಮವು ಸಂತೋಷಿಸುವುದು. \s2 ಹದಿನೈದನೆಯ ಹೇಳಿಕೆ \q1 \v 17 ಪಾಪಿಗಳನ್ನು ನೋಡಿ ನಿನ್ನ ಹೃದಯವು ಅಸೂಯೆಪಡದಿರಲಿ; \q2 ಆದರೆ ಯೆಹೋವ ದೇವರ ಭಯದಲ್ಲಿರಲು ಯಾವಾಗಲೂ ಆಸಕ್ತನಾಗಿರು. \q1 \v 18 ಖಂಡಿತವಾಗಿಯೂ ನಿನಗೆ ಮುಂದಿನ ನಿರೀಕ್ಷೆಯಿದೆ; \q2 ನಿನ್ನ ನಿರೀಕ್ಷೆಯು ನಿರರ್ಥಕವಾಗದು. \s2 ಹದಿನಾರನೆಯ ಹೇಳಿಕೆ \q1 \v 19 ಮಗನೇ, ಕೇಳಿ ಜ್ಞಾನವಂತನಾಗು; \q2 ನೀತಿ ಮಾರ್ಗದಲ್ಲಿ ನಿನ್ನ ಹೃದಯವನ್ನು ನಡೆಸು. \q1 \v 20 ಅತಿ ಮದ್ಯಪಾನ ಮಾಡುವವರಲ್ಲಿ \q2 ಅತಿ ಮಾಂಸಭಕ್ಷರಲ್ಲಿಯೂ ಸೇರಬೇಡ. \q1 \v 21 ಏಕೆಂದರೆ ಕುಡುಕರೂ ಹೊಟ್ಟೆಬಾಕರೂ ದುರ್ಗತಿಗೆ ಬರುವರು; \q2 ತೂಕಡಿಕೆಯು ಹರಕು ಬಟ್ಟೆಗಳನ್ನು ಹೊದಿಸುವದು. \s2 ಹದಿನೇಳನೆಯ ಹೇಳಿಕೆ \q1 \v 22 ನಿನ್ನನ್ನು ಹೆತ್ತ ತಂದೆಯ ಮಾತಿಗೆ ಕಿವಿಗೊಡು, \q2 ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆ ಮಾಡಬೇಡ. \q1 \v 23 ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; \q2 ಆದರೆ ಅವುಗಳನ್ನು ಮಾರಬೇಡ. \q1 \v 24 ನೀತಿವಂತನ ತಂದೆಯು ಬಹಳವಾಗಿ ಸಂತೋಷಪಡುವನು; \q2 ಜ್ಞಾನಿಯಾದ ಮಗುವನ್ನು ಪಡೆದವನಿಗೆ ಅವನಿಂದ ಆನಂದವಾಗುವುದು. \q1 \v 25 ನಿನ್ನ ತಂದೆತಾಯಿಗಳು ಸಂತೋಷಿಸುವರು; \q2 ನಿನ್ನ ಹೆತ್ತ ತಾಯಿ ಆನಂದಿಸುವಳು. \s2 ಹದಿನೆಂಟನೆಯ ಹೇಳಿಕೆ \q1 \v 26 ಮಗನೇ, ನಿನ್ನ ಮನಸ್ಸನ್ನು ನನಗೆ ಕೊಡು; \q2 ನನ್ನ ಮಾರ್ಗಗಳನ್ನು ಅನುಸರಿಸುವಲ್ಲಿ ನಿಮ್ಮ ಕಣ್ಣುಗಳು ಆನಂದಿಸಲಿ. \q1 \v 27 ವೇಶ್ಯೆಯು ಆಳವಾದ ಕುಣಿ; \q2 ವ್ಯಭಿಚಾರಿಣಿಯು ಇಕ್ಕಟ್ಟಾದ ಗುಂಡಿ. \q1 \v 28 ಕಳ್ಳನಂತೆ ಅವಳು ಹೊಂಚು ಹಾಕಿ \q2 ಮನುಷ್ಯರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ. \s2 ಹತ್ತೊಂಬತ್ತನೆಯ ಹೇಳಿಕೆ \q1 \v 29 ಯಾರಿಗೆ ಕಷ್ಟ? ಯಾರಿಗೆ ದುಃಖ? \q2 ಯಾರಿಗೆ ಕಲಹಗಳು? ಯಾರು ಗೊಣಗುಟ್ಟುತ್ತಾರೆ? \q2 ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಯಾರಿಗೆ ಕೆಂಪೇರಿದ ಕಣ್ಣುಗಳು? \q1 \v 30 ಮದ್ಯಪಾನದಲ್ಲಿ ಆಸಕ್ತರಾಗಿ, \q2 ಮಿಶ್ರ ಮದ್ಯಪಾನವನ್ನು ಕುಡಿಯ ಬಯಸುವವರೇ ಅಲ್ಲವೇ! \q1 \v 31 ದ್ರಾಕ್ಷಾರಸವು ಕೆಂಪಾಗಿದ್ದು, \q2 ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ, \q2 ಅದನ್ನು ನೋಡಬೇಡ. \q1 \v 32 ಕೊನೆಗೆ ಅದು ಹಾವಿನಂತೆ ಕಚ್ಚುವುದು \q2 ಮತ್ತು ಸರ್ಪದಂತೆ ವಿಷವುಕ್ಕಿಸುವುದು. \q1 \v 33 ನಿಮ್ಮ ಕಣ್ಣುಗಳು ವಿಚಿತ್ರ ದೃಶ್ಯಗಳನ್ನು ನೋಡುತ್ತವೆ. \q2 ನಿಮ್ಮ ಮನಸ್ಸು ಗೊಂದಲಮಯ ವಿಷಯಗಳನ್ನು ಕಲ್ಪಿಸುತ್ತದೆ. \q1 \v 34 ನೀನು ಸಮುದ್ರದ ಮಧ್ಯದಲ್ಲಿ ಮಲಗಿರುವವನಂತೆ \q2 ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇರುವಿ. \q1 \v 35 “ಜನರು ನನ್ನನ್ನು ಹೊಡೆದರೂ \q2 ನನಗೆ ನೋವಾಗಲಿಲ್ಲ; \q1 ನಾನು ಎಚ್ಚರವಾಗುವುದು ಯಾವಾಗ? \q2 ಪುನಃ ನಾನು ಅದನ್ನು ಕುಡಿದೇನು?” ಎಂದುಕೊಳ್ಳುವೆ. \c 24 \s2 ಇಪ್ಪತ್ತನೆಯ ಹೇಳಿಕೆ \q1 \v 1 ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆ ಪಡದಿರು; \q2 ಇಲ್ಲವೆ ಅವರ ಸಂಗಡ ಇರುವುದಕ್ಕೆ ಅಪೇಕ್ಷಿಸಬೇಡ. \q1 \v 2 ಏಕೆಂದರೆ ಅವರ ಹೃದಯವು ಹಿಂಸೆಯನ್ನು ಯೋಜಿಸುತ್ತದೆ; \q2 ಅವರ ತುಟಿಗಳು ಹಾನಿಯನ್ನು ಪ್ರಸ್ತಾಪಿಸುತ್ತವೆ. \s2 ಇಪ್ಪತ್ತೊಂದನೆಯ ಹೇಳಿಕೆ \q1 \v 3 ಜ್ಞಾನದಿಂದ ಮನೆಯು ಕಟ್ಟಲಾಗುತ್ತದೆ. \q2 ತಿಳುವಳಿಕೆಯಿಂದ ಅದು ಸ್ಥಿರಗೊಳ್ಳುತ್ತದೆ. \q1 \v 4 ತಿಳುವಳಿಕೆಯಿಂದ ಅದರ ಕೋಣೆಗಳು ಅಮೂಲ್ಯವಾದ \q2 ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬುವುದು. \s2 ಇಪ್ಪತ್ತೇರಡನೆಯ ಹೇಳಿಕೆ \q1 \v 5 ಬಲವುಳ್ಳವನಿಗಿಂತ ಜ್ಞಾನಿಯು ಶಕ್ತಿಶಾಲಿ; \q2 ತಿಳುವಳಿಕೆಯುಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ. \q1 \v 6 ಖಂಡಿತವಾಗಿಯೂ ನಿಮಗೆ ಯುದ್ಧಮಾಡಲು ಮಾರ್ಗದರ್ಶನ ಬೇಕು, \q2 ಬಹುಮಂದಿ ಸಲಹೆಗಾರರು ಇರುವಲ್ಲಿ ಜಯವಿರುವುದು. \s2 ಇಪ್ಪತ್ಮೂರನೆಯ ಹೇಳಿಕೆ \q1 \v 7 ಜ್ಞಾನವು ಬುದ್ಧಿಹೀನನಿಗೆ ನಿಲುಕದು; \q2 ಪುರದ್ವಾರದಲ್ಲಿ ಕೂಡಿಬಂದ ಸಭೆಯಲ್ಲಿ ಅವನು ತನ್ನ ಬಾಯಿಯನ್ನು ತೆರೆಯುವುದೇ ಇಲ್ಲ. \s2 ಇಪ್ಪತ್ತನಾಲ್ಕನೆಯ ಹೇಳಿಕೆ \q1 \v 8 ಕೇಡನ್ನು ಕಲ್ಪಿಸುವವನು \q2 ಕುಚೋದ್ಯಗಾರನೆಂದು ಕರೆಯಲ್ಪಡುವನು. \q1 \v 9 ಬುದ್ಧಿಹೀನನ ಆಲೋಚನೆಯು ಪಾಪಮಯ; \q2 ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ. \s2 ಇಪ್ಪತ್ತೈದನೆಯ ಹೇಳಿಕೆ \q1 \v 10 ಇಕ್ಕಟ್ಟಿನ ಸಮಯದಲ್ಲಿ ನೀನು ಬಳಲಿ ಹೋದರೆ, \q2 ನಿನ್ನ ಬಲವು ಕೊಂಚವಾಗಿದೆ. \q1 \v 11 ಅನ್ಯಾಯವಾಗಿ ಮರಣಕ್ಕೆ ಸಾಗಿಸುವನನ್ನು ಬಿಡಿಸುವುದಕ್ಕೆ ಯತ್ನಿಸು; \q2 ಕೊಲೆಗೆ ನೇಮಿತವಾದವರನ್ನು ನೀನು ರಕ್ಷಿಸು. \q1 \v 12 ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ, \q2 ಹೃದಯವನ್ನು ಪರಿಶೋಧಿಸುವ ದೇವರು ಅದನ್ನು ತಿಳಿಯುವದಿಲ್ಲವೋ? \q1 ನಿನ್ನ ಜೀವವನ್ನು ಕಾಯುವಾತನು ಅದನ್ನು ತಿಳಿಯುವುದಿಲ್ಲವೋ? \q2 ಪ್ರತಿಯೊಬ್ಬನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ? \s2 ಇಪ್ಪತ್ತಾರನೆಯ ಹೇಳಿಕೆ \q1 \v 13 ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ; \q2 ಜೇನು ಗೂಡಿನ ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಾಗಿದೆ. \q1 \v 14 ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ. \q2 ಅದು ಸಿಕ್ಕಿದಾಗ ನಿನಗೆ ಉಜ್ವಲ ಭವಿಷ್ಯವಿದೆ. \q2 ನಿನ್ನ ನಿರೀಕ್ಷೆಯು ನಿರರ್ಥಕವಾಗುವುದಿಲ್ಲ. \s2 ಇಪ್ಪತ್ತೇಳನೆಯ ಹೇಳಿಕೆ \q1 \v 15 ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ; \q2 ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ. \q1 \v 16 ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; \q2 ಆದರೆ ದುಷ್ಟನು ಕೇಡು ಬಂದಾಗ ಬೀಳುವನು. \s2 ಇಪ್ಪತ್ತೆಂಟನೆಯ ಹೇಳಿಕೆ \q1 \v 17 ನಿನ್ನ ಶತ್ರು ಬಿದ್ದರೆ ಆನಂದಿಸಬೇಡ; \q2 ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ. \q1 \v 18 ಯೆಹೋವ ದೇವರು ಅದನ್ನು ಕಂಡು, ಅದು ಅವರಿಗೆ ಇಷ್ಟವಿಲ್ಲದ್ದರಿಂದ, \q2 ಅವರು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಿಬಿಟ್ಟಾರು. \s2 ಇಪ್ಪತ್ತೊಂಬತ್ತನೆಯ ಹೇಳಿಕೆ \q1 \v 19 ಕೆಟ್ಟವರನ್ನು ಕಂಡು ಉರಿಗೊಳ್ಳಬೇಡ; \q2 ಇಲ್ಲವೆ ದುಷ್ಟರನ್ನು ಕಂಡು ಅಸೂಯೆಪಡಬೇಡ. \q1 \v 20 ಏಕೆಂದರೆ ಕೆಡುಕನಿಗೆ ಭವಿಷ್ಯದ ನಿರೀಕ್ಷೆ ಇರುವುದಿಲ್ಲ; \q2 ದುಷ್ಟರ ದೀಪವು ಆರಿಹೋಗುವುದು. \s2 ಮೂವತ್ತನೆಯ ಹೇಳಿಕೆ \q1 \v 21 ಮಗನೇ, ಯೆಹೋವ ದೇವರಿಗೂ, ಅರಸನಿಗೂ ಭಯಪಡು; \q2 ತಿರುಗಿಬೀಳುವವರ ಸಹವಾಸ ಮಾಡಬೇಡ, \q1 \v 22 ಏಕೆಂದರೆ ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವದು; \q2 ಅವರು ಯಾವ ವಿಪತ್ತುಗಳನ್ನು ತರಬಹುದು ಎಂದು ಯಾರಿಗೆ ತಿಳಿದಿದೆ? \ms1 ಜ್ಞಾನಿಯ ಮತ್ತಷ್ಟು ಹೇಳಿಕೆಗಳು \p \v 23 ಇವು ಜ್ಞಾನಿಗಳ ಹೇಳಿಕೆಗಳಾಗಿವೆ: \q1 ನ್ಯಾಯ ವಿಚಾರಣೆಯಲ್ಲಿ ಪಕ್ಷಪಾತವು ಸರಿಯಲ್ಲ. \q1 \v 24 ಯಾವನು ದುಷ್ಟನಿಗೆ, “ನೀನು ನೀತಿವಂತನು” ಎಂದು ಹೇಳುತ್ತಾನೋ \q2 ಅವನನ್ನು ಜನರು ಶಪಿಸುವರು; ಜನಾಂಗಗಳು ಅವನನ್ನು ದೂಷಿಸುವರು. \q1 \v 25 ಆದರೆ ತಪ್ಪುಮಾಡಿದವರನ್ನು ತಿದ್ದುವವರಿಗೆ ಶುಭವಾಗುವುದು; \q2 ಅವರ ಮೇಲೆ ಒಳ್ಳೆಯ ಆಶೀರ್ವಾದವು ಬರುವುದು. \b \q1 \v 26 ಪ್ರಾಮಾಣಿಕವಾದ ಉತ್ತರವು \q2 ತುಟಿಗೆ ಮುದ್ದಿಟ್ಟಂತೆ. \b \q1 \v 27 ನಿನ್ನ ಹೊರಗಿನ ಕೆಲಸವನ್ನು ಕ್ರಮವಾಗಿ ಇರಿಸು. \q2 ನಿನ್ನ ಹೊಲಗಳನ್ನು ಸಿದ್ಧಪಡಿಸು; \q2 ತರುವಾಯ ನಿನ್ನ ಮನೆಯನ್ನು ಕಟ್ಟಿಕೋ. \b \q1 \v 28 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; \q2 ನಿನ್ನ ಮಾತುಗಳಿಂದ ಅವನಿಗೆ ಮೋಸ ಮಾಡಬೇಡ. \q1 \v 29 ನನಗೆ, “ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; \q2 ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು,” ಎಂದು ಹೇಳಬೇಡ. \b \q1 \v 30 ನಾನು ಸೋಮಾರಿಯ ಹೊಲದ ಪಕ್ಕದಲ್ಲಿ \q2 ಬುದ್ಧಿಹೀನನ ದ್ರಾಕ್ಷಿತೋಟದ ಕಡೆಯಲ್ಲಿ ಹಾದು ಹೋದೆನು. \q1 \v 31 ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು \q2 ಕಳೆಗಳು ಅವುಗಳನ್ನು ಮುಚ್ಚಿ \q2 ಅದರ ಕಲ್ಲಿನ ಗೋಡೆಯು ಬಿದ್ದುಹೋಗಿತ್ತು. \q1 \v 32 ಆಗ ನಾನು ಅದನ್ನು ನೋಡಿ ಚಿಂತಿಸತೊಡಗಿದೆ; \q2 ನಾನು ಕಂಡದ್ದರಿಂದ ಪಾಠ ಕಲಿತೆನು. \q1 \v 33 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, \q2 ಇನ್ನು ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ? \q1 \v 34 ಹೀಗೆ ನಿನಗೆ ಬಡತನವು ಕಳ್ಳನಂತೆಯೂ \q2 ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು. \c 25 \ms1 ಮತ್ತಷ್ಟು ಸೊಲೊಮೋನನ ಜ್ಞಾನೋಕ್ತಿಗಳು \p \v 1 ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳೇ. \q1 \v 2 ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. \q2 ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ. \q1 \v 3 ಆಕಾಶದ ಎತ್ತರವನ್ನು, ಭೂಮಿಯ ಆಳವನ್ನು ಯಾರೂ ಗ್ರಹಿಸಲು ಸಾಧ್ಯವಿಲ್ಲ. \q2 ಹಾಗೆಯೇ ಅರಸರ ಹೃದಯವು ಅಗೋಚರ. \b \q1 \v 4 ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, \q2 ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ರೂಪಗೊಳ್ಳುವುದು. \q1 \v 5 ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, \q2 ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು. \b \q1 \v 6 ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; \q2 ದೊಡ್ಡವರಿಗೆ ಏರ್ಪಡಿಸಿದ ಸ್ಥಾನವನ್ನು ಕೇಳಬೇಡ. \q1 \v 7 ಘನವಂತರ ಸನ್ನಿಧಿಯಲ್ಲಿ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ, \q2 “ಮೇಲಕ್ಕೆ ಬಾ,” ಎಂದು ಅರಸನು ನಿನಗೆ ಹೇಳುವುದು ಲೇಸು. \b \q1 ನೀವು ಏನನ್ನೋ ಕಂಡಿದ್ದರಿಂದ, \q2 \v 8 ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. \q1 ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, \q2 ನೀನು ಕಡೆಯಲ್ಲಿ ಏನು ಮಾಡುವೆ? \b \q1 \v 9 ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; \q2 ಇನ್ನೊಬ್ಬರ ಗುಟ್ಟನ್ನು ಬಹಿರಂಗಪಡಿಸಬೇಡ, \q1 \v 10 ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; \q2 ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು. \b \q1 \v 11 ಸಮಯೋಚಿತವಾದ ಮಾತು \q2 ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. \q1 \v 12 ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; \q2 ಚೊಕ್ಕ ಬಂಗಾರದ ಆಭರಣ. \b \q1 \v 13 ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ \q2 ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; \q2 ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ. \q1 \v 14 ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, \q2 ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ. \b \q1 \v 15 ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; \q2 ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ. \b \q1 \v 16 ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟೇ ತಿನ್ನು; \q2 ಹೊಟ್ಟೆ ತುಂಬಾ ತಿಂದರೆ ಕಾರಬೇಕಾದೀತು. \q1 \v 17 ನಿನ್ನ ನೆರೆಯವನ ಮನೆಗೆ ಅಪರೂಪಕ್ಕೆ ಹೆಜ್ಜೆ ಇಡು; \q2 ಇಲ್ಲವಾದರೆ ನಿನ್ನ ವಿಷಯವಾಗಿ ಅವನು ಬೇಸರಗೊಂಡು ನಿನ್ನನ್ನು ಹಗೆಮಾಡಾನು. \b \q1 \v 18 ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು \q2 ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ. \q1 \v 19 ಕಷ್ಟಕಾಲದಲ್ಲಿ ಅಪನಂಬಿಗಸ್ತನಾದ ಮನುಷ್ಯನಲ್ಲಿಯ \q2 ಭರವಸೆಯು ಮುರಿದ ಹಲ್ಲು, ಕೀಲು ತಪ್ಪಿದ ಪಾದವು. \q1 \v 20 ಮನಗುಂದಿದವನಿಗೆ ಸಂಗೀತ ಹಾಡುವುದು \q2 ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆಯೂ \q2 ಹುಳಿ ಉಪ್ಪನ್ನು ಗಾಯಕ್ಕೆ ಹಚ್ಚಿದಂತೆಯೂ. \b \q1 \v 21 ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; \q2 ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು. \q1 \v 22 ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; \q2 ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು. \b \q1 \v 23 ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ \q2 ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ. \b \q1 \v 24 ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, \q2 ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು. \b \q1 \v 25 ಬಾಯಾರಿದವನಿಗೆ ತಣ್ಣೀರು ಹೇಗೋ \q2 ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ. \q1 \v 26 ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ \q2 ಕೊಳಕು ಒರತೆಗೂ ಸಮಾನ. \b \q1 \v 27 ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; \q2 ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ. \b \q1 \v 28 ತನ್ನ ಸ್ವಂತ ಆತ್ಮವನ್ನು ಆಳದಿರುವವನು, \q2 ಗೋಡೆ ಬಿದ್ದ ಹಾಳೂರಿಗೆ ಸಮಾನ. \c 26 \q1 \v 1 ಬೇಸಿಗೆಯಲ್ಲಿ ಹಿಮದಂತೆಯೂ, \q2 ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನವು ಸರಿಯಲ್ಲ. \q1 \v 2 ಅಲೆದಾಡುವ ಪಕ್ಷಿಯಂತೆಯೂ, \q2 ಹಾರಾಡುವ ಬಾನಕ್ಕಿಯಂತೆಯೂ ಕಾರಣವಿಲ್ಲದೆ ಕೊಡುವ ಶಾಪವು ತಗಲದು. \q1 \v 3 ಕುದುರೆಗೆ ಬಾರುಗೋಲು, ಕತ್ತೆಗೆ ಕಡಿವಾಣವು, \q2 ಮೂಢನ ಬೆನ್ನಿಗೆ ಬೆತ್ತ. \q1 \v 4 ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಿಸಬೇಡ; \q2 ಇಲ್ಲವಾದರೆ ನೀನೂ ಅವನಿಗೆ ಸಮಾನನಾದೀಯೆ. \q1 \v 5 ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಕೊಡು; \q2 ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು. \q1 \v 6 ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು \q2 ತನ್ನ ಪಾದಗಳನ್ನು ತಾನೇ ಕಡಿದುಕೊಂಡು ಇಲ್ಲವೆ ಕೇಡನ್ನು ಕುಡಿಯುತ್ತಾನೆ. \q1 \v 7 ಕುಂಟನ ಕಾಲುಗಳು ಜೋಲಾಡುವ ಹಾಗೆಯೇ, \q2 ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುತ್ತದೆ. \q1 \v 8 ಮೂಢನಿಗೆ ಕೊಡುವ ಮಾನವು \q2 ಕವಣಿಯಲ್ಲಿಟ್ಟ ಕಲ್ಲಿನ ಹಾಗೆ. \q1 \v 9 ಕುಡುಕನ ಕೈಯಲ್ಲಿ ಮುಳ್ಳು ಕೋಲಿನಂತೆ \q2 ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುವುದು. \q1 \v 10 ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು \q2 ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವ ಬಿಲ್ಲುಗಾರನಂತೆ. \q1 \v 11 ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು \q2 ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ. \q1 \v 12 ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? \q2 ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ. \b \q1 \v 13 ಸೋಮಾರಿಯು, “ದಾರಿಯಲ್ಲಿ ಸಿಂಹವಿದೆ, \q2 ಬೀದಿಗಳಲ್ಲಿ ಭೀಕರ ಸಿಂಹ ಇದೆ,” ಎಂದು ಹೇಳುತ್ತಾನೆ. \q1 \v 14 ಬಾಗಿಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ, \q2 ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುತ್ತಾನೆ. \q1 \v 15 ಸೋಮಾರಿಯು ತಟ್ಟೆಯಲ್ಲಿ ತನ್ನ ಕೈಯನ್ನು ಹಾಕಿ, \q2 ತಿರುಗಿ ಅದನ್ನು ತನ್ನ ಬಾಯಿಗೆ ತರಲಾರದಷ್ಟು ಆಯಾಸಪಡುತ್ತಾನೆ. \q1 \v 16 ಜ್ಞಾನದಿಂದ ಉತ್ತರಿಸಬಲ್ಲ ಏಳು ಜನರಿಗಿಂತ, \q2 ತಾನೇ ಜ್ಞಾನಿ ಎಂದು ಸೋಮಾರಿಯು ಭಾವಿಸುತ್ತಾನೆ. \b \q1 \v 17 ಒಬ್ಬನು ಹಾದುಹೋಗುತ್ತಾ ತನಗೆ ಸಂಬಂಧಿಸದೇ ಇರುವ ವ್ಯಾಜ್ಯದಲ್ಲಿ \q2 ತಲೆಹಾಕುವವನು ನಾಯಿಯ ಕಿವಿ ಹಿಡಿದವನಂತೆ ಇದ್ದಾನೆ. \b \q1 \v 18-19 ತನ್ನ ನೆರೆಯವನನ್ನು ಮೋಸಗೊಳಿಸಿ, \q2 “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, \q1 ಕೊಳ್ಳಿಗಳನ್ನೂ, ಬಾಣಗಳನ್ನೂ, \q2 ಸಾವನ್ನೂ ಬೀರುವ ಹುಚ್ಚನಂತೆಯೇ. \b \q1 \v 20 ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ; \q2 ಹಾಗೆಯೇ ಚಾಡಿಕೋರನು ಇಲ್ಲದಿರುವಲ್ಲಿ ಜಗಳ ಶಮನವಾಗುವುದು. \q1 \v 21 ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; \q2 ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹ ಮಾಡುವವನು ಇರುವನು. \q1 \v 22 ಚಾಡಿಕೋರನ ಮಾತುಗಳು ರುಚಿಕರ ಭಕ್ಷ್ಯದ \q2 ಹಾಗೆ ಹೊಟ್ಟೆಯ ಅಂತರ್ಭಾಗಗಳಿಗೆ ಇಳಿಯುತ್ತವೆ. \b \q1 \v 23 ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, \q2 ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ. \q1 \v 24 ಶತ್ರುಗಳು ತಮ್ಮ ತುಟಿಗಳಿಂದ ವೇಷ ಧರಿಸುತ್ತಾರೆ, \q2 ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾರೆ. \q1 \v 25 ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; \q2 ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ. \q1 \v 26 ಅವನ ಹಗೆತನವು ಮೋಸದಿಂದ ಮುಚ್ಚಲ್ಪಟ್ಟಿದ್ದರೂ, \q2 ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವುದು. \q1 \v 27 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; \q2 ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರುಗಿ ಹೊರಳುವುದು. \q1 \v 28 ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ಹಗೆ ಮಾಡುವನು; \q2 ಮುಖಸ್ತುತಿ ಮಾಡುವ ಬಾಯಿಯು ನಾಶವನ್ನುಂಟುಮಾಡುತ್ತದೆ. \b \c 27 \q1 \v 1 ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; \q2 ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು. \b \q1 \v 2 ನಿನ್ನ ಬಾಯಿ ಅಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; \q2 ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ. \b \q1 \v 3 ಕಲ್ಲು ಭಾರ, ಮರಳು ಭಾರ; \q2 ಆದರೆ ಇವೆರಡಕ್ಕಿಂತ ಮೂಢನ ಕೋಪವು ಬಹು ಭಾರ. \b \q1 \v 4 ಕ್ರೋಧವು ಕ್ರೂರ, ಕೋಪವು ಪ್ರವಾಹ; \q2 ಆದರೆ ಅಸೂಯೆದ ಮುಂದೆ ಯಾವನು ನಿಂತಾನು? \b \q1 \v 5 ರಹಸ್ಯವಾದ ಪ್ರೀತಿಗಿಂತಲೂ \q2 ಬಹಿರಂಗವಾದ ಗದರಿಕೆಯೇ ಲೇಸು. \b \q1 \v 6 ಸ್ನೇಹಿತನು ಮಾಡುವ ಗಾಯಗಳು ಭರವಸೆಗೆ ಯೋಗ್ಯವಾದದ್ದು; \q2 ಆದರೆ ಶತ್ರುವಿನ ಮುದ್ದುಗಳು ಹೇರಳವಾಗಿವೆ. \b \q1 \v 7 ತೃಪ್ತಿ ಹೊಂದಿದವನು ಜೇನುತುಪ್ಪವನ್ನೂ ಅಸಹ್ಯಿಸಿಕೊಳ್ಳುತ್ತಾನೆ; \q2 ಆದರೆ ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ. \b \q1 \v 8 ತನ್ನ ಮನೆಯನ್ನು ಬಿಟ್ಟು ಅಲೆಯುವ ಮನುಷ್ಯನು \q2 ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿಯಂತೆ ಇದ್ದಾನೆ. \b \q1 \v 9 ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, \q2 ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ. \b \q1 \v 10 ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; \q2 ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; \q2 ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು. \b \q1 \v 11 ನನ್ನನ್ನು ನಿಂದಿಸುವವರಿಗೆ ನಾನು ಉತ್ತರಿಸುವಂತೆಯೂ, \q2 ನನ್ನ ಹೃದಯವನ್ನು ಸಂತೋಷಪಡಿಸುವಂತೆಯೂ, ನನ್ನ ಮಗುವೇ, ಜ್ಞಾನಿಯಾಗಿರು. \b \q1 \v 12 ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; \q2 ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ. \b \q1 \v 13 ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; \q2 ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ. \b \q1 \v 14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ, \q2 ಅದು ಶಾಪವೆಂದು ಪರಿಗಣಿಸಲಾಗುವುದು. \b \q1 \v 15 ಜಗಳ ಮಾಡುವ ಹೆಂಡತಿಯು \q2 ಮಳೆಗಾಲದಲ್ಲಿ ಸೋರುವ ಛಾವಣಿಯಂತಿದೆ. \q1 \v 16 ಅವಳನ್ನು ಅಡಗಿಸುವುದು, ಗಾಳಿಯನ್ನು ಅಡಗಿಸಿದಂತೆ; \q2 ಕೈಯಿಂದ ಎಣ್ಣೆಯನ್ನು ಹಿಡಿದಂತೆ. \b \q1 \v 17 ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ \q2 ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು. \b \q1 \v 18 ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; \q2 ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು. \b \q1 \v 19 ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು \q2 ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.\f + \fr 27:19 \fr*\ft ಆದ್ದರಿಂದ ಇತರರು ನಿಮ್ಮ ಹೃದಯವನ್ನು ನಿಮಗೆ ಹಿಂದಿರುಗಿಸುತ್ತಾರೆ\ft*\f* \b \q1 \v 20 ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; \q2 ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ. \b \q1 \v 21 ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, \q2 ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ. \b \q1 \v 22 ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, \q2 ಒಣಕೆಯಿಂದ ಕುಟ್ಟಿದರೂ, \q2 ಅವನಿಂದ ಮೂರ್ಖನತವು ತೊಲಗುವುದಿಲ್ಲ. \b \q1 \v 23 ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; \q2 ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ. \q1 \v 24 ಐಶ್ವರ್ಯವು ಶಾಶ್ವತವಲ್ಲ; \q2 ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ. \q1 \v 25 ಒಣಹುಲ್ಲನ್ನು ಕೊಯ್ದು ನಂತರ ಹೊಸ ಬೆಳೆ ಕಾಣಿಸಿಕೊಂಡಾಗ \q2 ಮತ್ತು ಬೆಟ್ಟಗಳಿಂದ ಹುಲ್ಲು ಸಂಗ್ರಹಿಸಿದಾಗ, \q1 \v 26 ಆಗ ಕುರಿಮರಿಗಳು ನಿಮಗೆ ಬಟ್ಟೆಗಳನ್ನು ಒದಗಿಸುತ್ತವೆ, \q2 ಆಡುಗಳ ಬೆಲೆಗೆ ನೀವು ಹೊಲವನ್ನು ಖರೀದಿಸಬಹುದು, \q1 \v 27 ನಿನ್ನ ಊಟಕ್ಕಾಗಿಯೂ, ನಿನ್ನ ಮನೆಯವರ ಆಹಾರಕ್ಕಾಗಿಯೂ \q2 ನಿನ್ನ ದಾಸಿಯರ ಜೀವನಕ್ಕಾಗಿಯೂ ಬೇಕಾದಷ್ಟು ಆಡುಗಳ ಹಾಲು ಸಾಕಾಗುತ್ತದೆ. \b \c 28 \q1 \v 1 ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. \q2 ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ. \b \q1 \v 2 ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. \q2 ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು. \b \q1 \v 3 ಬಡವರನ್ನು ಹಿಂಸಿಸುವ ಅಧಿಕಾರಿಯು \q2 ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ. \b \q1 \v 4 ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; \q2 ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ. \b \q1 \v 5 ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; \q2 ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ. \b \q1 \v 6 ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ \q2 ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು. \b \q1 \v 7 ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. \q2 ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ. \b \q1 \v 8 ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, \q2 ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು. \b \q1 \v 9 ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ \q2 ಪ್ರಾರ್ಥನೆಯು ದೇವರಿಗೆ ಅಸಹ್ಯ. \b \q1 \v 10 ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು, \q2 ತಾನೇ ತೋಡಿದ ಗುಂಡಿಯಲ್ಲಿ ಬೀಳುವನು. \q2 ನಿರ್ದೋಷಿಗಳಾದರೋ ಒಳ್ಳೆಯ ಸೊತ್ತನ್ನು ಪಡೆಯುವರು. \b \q1 \v 11 ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. \q2 ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು. \b \q1 \v 12 ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. \q2 ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ. \b \q1 \v 13 ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. \q2 ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು. \b \q1 \v 14 ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. \q2 ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು. \b \q1 \v 15 ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, \q2 ಬಡವರನ್ನು ದುಷ್ಟನು ಆಳುವನು. \b \q1 \v 16 ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. \q2 ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು. \b \q1 \v 17 ನರಹತ್ಯದ ಅಪರಾಧ ಭಾವನೆಯಿಂದ ಇರುವವನು, \q2 ಮರಣದೆಡೆಗೆ ಓಡುತ್ತಿರುವನು, \q2 ಅವನನ್ನು ಯಾರೂ ತಡೆಯದಿರಲಿ. \b \q1 \v 18 ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. \q2 ವಕ್ರಮಾರ್ಗಿಯು ತಟ್ಟನೆ ಬೀಳುವನು. \b \q1 \v 19 ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು. \q2 ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವುದು. \b \q1 \v 20 ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; \q2 ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ. \b \q1 \v 21 ಪಕ್ಷಪಾತವು ಸರಿಯಲ್ಲ; \q2 ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು. \b \q1 \v 22 ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; \q2 ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ. \b \q1 \v 23 ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, \q2 ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು. \b \q1 \v 24 ತನ್ನ ತಂದೆಯಾನ್ನಾಗಲಿ, \q2 ತಾಯಿಯನ್ನಾಗಲಿ ದೋಚಿಕೊಂಡು, \q2 “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು. \b \q1 \v 25 ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು; \q2 ಯೆಹೋವ ದೇವರಲ್ಲಿ ಭರವಸವಿಡುವವನು ಪುಷ್ಟನಾಗುವನು. \b \q1 \v 26 ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; \q2 ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು. \b \q1 \v 27 ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; \q2 ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು. \b \q1 \v 28 ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, \q2 ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ. \b \c 29 \q1 \v 1 ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ \q2 ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು. \b \q1 \v 2 ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. \q2 ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ. \b \q1 \v 3 ಜ್ಞಾನಪ್ರಿಯನು ತಂದೆಗೆ ಆನಂದ \q2 ಆದರೆ ವೇಶ್ಯೆಯರ ಸಹವಾಸದಿಂದ ಆಸ್ತಿಯ ವಿನಾಶ. \b \q1 \v 4 ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, \q2 ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ. \b \q1 \v 5 ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, \q2 ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ. \b \q1 \v 6 ಕೆಟ್ಟವನು ತನ್ನ ಪಾಪದಿಂದಲೇ ಸಿಕ್ಕಿಹಾಕಿಕೊಳ್ಳುತ್ತಾನೆ, \q2 ಆದರೆ ನೀತಿವಂತನು ಸಂತೋಷದಿಂದ ಹಾಡಿ ಹರ್ಷಿಸುತ್ತಾನೆ. \b \q1 \v 7 ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. \q2 ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ. \b \q1 \v 8 ಪರಿಹಾಸ್ಯಗಾರರು ಪಟ್ಟಣದಲ್ಲಿ ಗಲಾಟೆ ಎಬ್ಬಿಸುತ್ತಾರೆ. \q2 ಆದರೆ ಜ್ಞಾನಿಗಳು ಕೋಪವನ್ನು ಆರಿಸುವರು. \b \q1 \v 9 ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ, \q2 ಮೂರ್ಖನು ರೇಗಿದರೂ ಅಪಹಾಸ್ಯಮಾಡಿದರೂ ಸಮಾಧಾನವೇ ಇರುವುದಿಲ್ಲ. \b \q1 \v 10 ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. \q2 ಆದರೆ ಯಥಾರ್ಥವಂತರನ್ನು ನಾಶಮಾಡಲು ಯತ್ನಿಸುತ್ತಾರೆ. \b \q1 \v 11 ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು. \q2 ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ. \b \q1 \v 12 ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, \q2 ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ. \b \q1 \v 13 ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: \q2 ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ. \b \q1 \v 14 ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, \q2 ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು. \b \q1 \v 15 ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; \q2 ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ. \b \q1 \v 16 ದುಷ್ಟರು ವೃದ್ಧಿಯಾದಾಗ, ಪಾಪವು ವೃದ್ಧಿಯಾಗುತ್ತದೆ. \q2 ಆದರೆ ನೀತಿವಂತರು ದುಷ್ಟರ ಬೀಳುವಿಕೆಯನ್ನು ಕಣ್ಣಾರೆ ನೋಡುವರು. \b \q1 \v 17 ನಿನ್ನ ಮಕ್ಕಳನ್ನು ಶಿಕ್ಷಿಸಿದರೆ, ಅವರು ನಿನಗೆ ಮನಶಾಂತಿಯನ್ನು ಕೊಡುವರು; \q2 ಹೌದು, ಅವರು ನೀನು ಬಯಸುವ ಹರ್ಷವನ್ನು ನಿನಗೆ ತರುವರು. \b \q1 \v 18 ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; \q2 ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು. \b \q1 \v 19 ಮಾತಿನಿಂದ ಮಾತ್ರ ಕೆಲಸಗಾರರನ್ನು ತಿದ್ದಲು ಸಾಧ್ಯವಿಲ್ಲ; \q2 ಏಕೆಂದರೆ ಅವರು ಅರ್ಥಮಾಡಿಕೊಂಡರೂ, ಅದರಂತೆ ನಡೆಯುವುದಿಲ್ಲ. \b \q1 \v 20 ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ? \q2 ಅಂಥವನಿಗಿಂತಲೂ ಬುದ್ಧಿಹೀನನ ವಿಷಯದಲ್ಲಿ ಹೆಚ್ಚು ನಿರೀಕ್ಷೆ ಇದೆ. \b \q1 \v 21 ಬಾಲ್ಯದಿಂದ ಕೆಲಸಗಾರನನ್ನು ಅನುಕೂಲವಾಗಿ ಸಾಕಿ ಬಿಟ್ಟರೆ, \q2 ತರುವಾಯ ಅವನು ಎದುರು ಬೀಳಲು ಸಾಧ್ಯ. \b \q1 \v 22 ಕೋಪಿಷ್ಟನು ಜಗಳವನ್ನೆಬ್ಬಿಸುವನು, \q2 ಮುಂಗೋಪಿಯು ಅನೇಕ ಪಾಪಗಳನ್ನು ಮಾಡುತ್ತಾನೆ. \b \q1 \v 23 ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; \q2 ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು. \b \q1 \v 24 ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. \q2 ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ. \b \q1 \v 25 ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; \q2 ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು. \b \q1 \v 26 ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. \q2 ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ. \b \q1 \v 27 ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. \q2 ದುಷ್ಟರು ಪ್ರಾಮಾಣಿಕರನ್ನು ತಿರಸ್ಕರಿಸುತ್ತಾರೆ. \c 30 \ms1 ಆಗೂರನ ಹೇಳಿಕೆಗಳು \p \v 1 ಜಾಕೆ ಎಂಬುವನ ಮಗನಾದ ಆಗೂರನ ದೈವಿಕ ಬುದ್ಧಿಮಾತುಗಳು. \q1 ಇವನು ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು:\f + \fr 30:1 \fr*\ft ದೈವ ಪ್ರೇರಿತ ಪ್ರಕಟನೆಗಳು \ft*\fqa ಇಥಿಯೇಲನಿಗೆ ಆಗೂರನ ಬುದ್ಧಿಮಾತುಗಳು\fqa*\f* \b \q1 “ದೇವರೇ, ನಾನು ದಣಿದಿದ್ದೇನೆ, \q2 ಆದರೆ ನಾನು ಜಯಶಾಲಿಯಾಗುವೆನು. \q1 \v 2 ಖಂಡಿತವಾಗಿಯೂ ನಾನು ಮನುಷ್ಯನಲ್ಲ, ಮೃಗ. \q2 ನನಗೆ ಮನುಷ್ಯನ ಗ್ರಹಿಕೆ ಇಲ್ಲ. \q1 \v 3 ನಾನು ಜ್ಞಾನವನ್ನು ಕಲಿತುಕೊಂಡಿಲ್ಲ; \q2 ಅಲ್ಲದೆ ಪರಿಶುದ್ಧ ದೇವರ ಅರಿವು ನನಗಿಲ್ಲ. \q1 \v 4 ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? \q2 ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? \q1 ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? \q2 ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? \q1 ಅವರ ಹೆಸರೇನು? ಅವರ ಮಗನ ಹೆಸರೇನು? \q2 ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು! \b \b \q1 \v 5 “ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; \q2 ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ. \q1 \v 6 ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ. \q2 ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು. \b \q1 \v 7 “ಯೆಹೋವ ದೇವರೇ, ನಾನು ನಿಮ್ಮನ್ನು ಎರಡು ವಿಷಯಗಳನ್ನು ಕೇಳುತ್ತೇನೆ. \q2 ನಿರಾಕರಿಸಬೇಡಿ ನಾನು ಸಾಯುವ ಮೊದಲು ಅವೆರಡನ್ನು ಅನುಗ್ರಹಿಸಿರಿ. \q1 \v 8 ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ. \q2 ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ. \q2 ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ. \q1 \v 9 ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, \q2 ‘ಯೆಹೋವ ದೇವರು ಯಾರು?’ ಎಂದು ಹೇಳೇನು. \q1 ನಾನು ಬಡವನಾದರೆ ಕಳ್ಳತನಮಾಡಿ \q2 ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು. \b \q1 \v 10 “ಕೆಲಸಗಾರರ ವಿಷಯವಾಗಿ ಅವನ ಯಜಮಾನನಿಗೆ ದೂರು ಹೇಳಬೇಡ; \q2 ಇದರಿಂದ ಆ ಕೆಲಸಗಾರ ನಿನ್ನನ್ನು ಶಪಿಸಾನು, ಆಗ ನೀನು ದೋಷಿಯಾಗುವೆ. \b \q1 \v 11 “ತಮ್ಮ ತಂದೆಯನ್ನು ಶಪಿಸಿ, \q2 ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವವರು ಇದ್ದಾರೆ. \q1 \v 12 ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ; \q2 ಆದರೆ ಅವರು ತಮ್ಮ ಕೊಳೆಯನ್ನು ತೊಳೆದುಕೊಂಡಿರುವುದಿಲ್ಲ. \q1 \v 13 ಅವರ ಕಣ್ಣುಗಳು ಯಾವಾಗಲೂ ಅಹಂಕಾರದಿಂದ ಕೂಡಿರುತ್ತವೆ. \q2 ಅವರ ದೃಷ್ಟಿ ಅಸಹ್ಯವಾಗಿದೆ. \q1 \v 14 ಖಡ್ಗಗಳಂತೆ ಹಲ್ಲುಗಳುಳ್ಳವರೂ \q2 ಚೂರಿಗಳಂತೆ ದವಡೆಗಳುಳ್ಳವರೂ \q1 ಬಡವರನ್ನು ಭೂಮಿಯಿಂದಲೂ \q2 ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ. \b \q1 \v 15 “ಜಿಗಣೆಗೆ, ‘ಕೊಡು! ಕೊಡು!’ ಎಂದು ಕೂಗುವ \q2 ಇಬ್ಬರು ಹೆಣ್ಣುಮಕ್ಕಳುಂಟು. \b \li1 “ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ, \li2 ಹೌದು, ‘ಸಾಕು!’ ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ: \li3 \v 16 ಸಮಾಧಿ, \li3 ಬಂಜೆಯಾದ ಗರ್ಭ, \li3 ನೀರಿನಿಂದ ಎಂದೂ ತೃಪ್ತಿ ಹೊಂದದ ಭೂಮಿ, \li3 ‘ಸಾಕು!’ ಎಂದು ಹೇಳದಿರುವ ಬೆಂಕಿ. \b \q1 \v 17 “ತನ್ನ ತಂದೆಯನ್ನು ಹಾಸ್ಯಮಾಡಿ, \q2 ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, \q1 ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. \q2 ರಣಹದ್ದುಗಳು ಅದನ್ನು ತಿಂದುಬಿಡುವವು. \b \li1 \v 18 “ನನಗೆ ಆಶ್ಚರ್ಯವಾದ ಮೂರು ಸಂಗತಿಗಳಿವೆ, \li2 ಹೌದು, ನನಗೆ ಅರ್ಥವಾಗದಿರುವ ನಾಲ್ಕು ಸಂಗತಿಗಳಿವೆ: \li3 \v 19 ಆಕಾಶದಲ್ಲಿ ಹದ್ದಿನ ಮಾರ್ಗ, \li3 ಬಂಡೆಯ ಮೇಲೆ ಸರ್ಪದ ಮಾರ್ಗ, \li3 ಸಮುದ್ರ ನಡುವೆ ಹಡಗಿನ ಮಾರ್ಗ, \li3 ಯುವಕ ಯುವತಿಯರ ಪ್ರೀತಿ ಮಾರ್ಗ. \b \q1 \v 20 “ಜಾರಸ್ತ್ರೀಯ ನಡತೆಯು ಹೀಗಿದೆ: \q2 ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು \q2 ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ. \b \li1 \v 21 “ಭೂಮಿಯು ಮೂರು ವಿಷಯಗಳಿಂದ ಕಳವಳಗೊಳ್ಳುತ್ತದೆ, \li2 ನಾಲ್ವರನ್ನು ಅದು ತಾಳಲಾರದು: \li3 \v 22 ಅರಸನಾಗುವ ದಾಸನು, \li3 ತಿನ್ನಲು ಸಾಕಷ್ಟು ಪಡೆಯುವ ಮೂರ್ಖನು, \li3 \v 23 ತಿರಸ್ಕಾರಕ್ಕೆ ಅರ್ಹಳಾದ ಮಹಿಳೆ, ಮದುವೆಯಾಗುವುದು. \li3 ಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ. \b \li1 \v 24 “ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳವುಗಳಾದ \li2 ನಾಲ್ಕು ಸಣ್ಣ ಪ್ರಾಣಿಗಳು ಇವೆ: \li2 \v 25 ಇರುವೆಗಳು ಬಲಹೀನ ಜೀವಿಗಳು, \li3 ಆದರೂ ಅವು ಬೇಸಿಗೆಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ. \li2 \v 26 ಬೆಟ್ಟದ ಮೊಲಗಳು ಬಲಹೀನ ಪ್ರಾಣಿಗಳಾಗಿದ್ದರೂ \li3 ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುತ್ತವೆ. \li2 \v 27 ಮಿಡತೆಗಳಿಗೆ ಅರಸನಿಲ್ಲ; \li3 ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ. \li2 \v 28 ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ \li3 ಅರಸನ ಅರಮನೆಗಳಲ್ಲಿ ಕಂಡುಬರುತ್ತವೆ. \b \li1 \v 29 “ಗಂಭೀರ ಗಮನದ ಮೂರು ಪ್ರಾಣಿಗಳಿವೆ, \li2 ಹೌದು, ಗಂಭೀರ ಗತಿಯ ನಾಲ್ಕಿವೆ: \li3 \v 30 ಮೃಗಗಳಲ್ಲಿ ಬಲಿಷ್ಠವಾಗಿರುವ ಸಿಂಹವು, ಯಾವುದಕ್ಕೂ ಹಿಮ್ಮೆಟ್ಟದು. \li3 \v 31 ಕತ್ತೆತ್ತಿ ನಡೆಯುವ ಹುಂಜ, \li3 ಹೋತವು, \li3 ತನ್ನ ಸುತ್ತಲೂ ಸೈನಿಕರಿರುವ ಅರಸನು. \b \q1 \v 32 “ನೀನು ಹೆಮ್ಮೆಪಟ್ಟು ಮೂರ್ಖನಾಗಿ ನಡೆದಿದ್ದರೆ, \q2 ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ, \q2 ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೊ. \q1 \v 33 ಹಾಲನ್ನು ಕಡೆಯುವುದರಿಂದ ಬೆಣ್ಣೆ, \q2 ಮೂಗನ್ನು ಹಿಂಡುವುದರಿಂದ ರಕ್ತ, \q2 ಹಾಗೆಯೇ ಕೋಪವನ್ನೆಬ್ಬಿಸುವುದರಿಂದ ಜಗಳ.” \c 31 \ms1 ಅರಸ ಲೆಮೂವೇಲನ ಹೇಳಿಕೆಗಳು \p \v 1 ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವಿಕ ಬುದ್ಧಿಮಾತುಗಳು: \q1 \v 2 ನನ್ನ ಮಗನೇ ಕೇಳು, ನನ್ನ ಗರ್ಭಪುತ್ರನೇ ಕೇಳು! \q2 ನನ್ನ ಪ್ರಾರ್ಥನೆಗೆ ಉತ್ತರವಾದ ನನ್ನ ಮಗನೇ ಕೇಳು! \q1 \v 3 ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸದಿರು. \q2 ರಾಜರನ್ನೇ ಹಾಳುಮಾಡಬಲ್ಲ ಸ್ತ್ರೀಯರಿಗೆ ನಿನ್ನ ಹಣ ಸಮಯವನ್ನು ವ್ಯಯಮಾಡದಿರು. \b \q1 \v 4 ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, \q2 ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. \q2 ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ; \q1 \v 5 ಕುಡಿದರೆ ಅವರು ನಿಯಮವನ್ನು ಮರೆತು, \q2 ಬಾಧಿತರಿಗೆ ನ್ಯಾಯವನ್ನು ನೀಡುವುದಿಲ್ಲ. \q1 \v 6 ನಾಶವಾಗುವವರಿಗೆ ಮದ್ಯಪಾನವಿರಲಿ. \q2 ಮನೋವ್ಯಥೆಪಡುವವರಿಗೆ ಮದ್ಯವಿರಲಿ. \q1 \v 7 ಅವರು ಕುಡಿದು ಬಡತನವನ್ನು ಮರೆಯಲಿ. \q2 ತಮ್ಮ ಯಾತನೆಯನ್ನು ಜ್ಞಾಪಕಕ್ಕೆ ತಾರದಿರಲಿ. \b \q1 \v 8 ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು, \q2 ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು. \q1 \v 9 ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. \q2 ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು. \ms1 ಉಪಸಂಹಾರ: ಗುಣವತಿಯಾದ ಹೆಂಡತಿ \q1 \v 10 ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? \q2 ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು. \q1 \v 11 ಅವಳ ಪತಿಯ ಹೃದಯವು ಅವಳಲ್ಲಿ ಭರವಸೆ ಇಡುತ್ತದೆ, \q2 ಅವನಿಗೆ ಯಾವ ಆದಾಯದ ಕೊರತೆಯೂ ಇರುವುದಿಲ್ಲ. \q1 \v 12 ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, \q2 ಒಳ್ಳೆಯದನ್ನೇ ಮಾಡುವಳು. \q1 \v 13 ಆಕೆಯು ಉಣ್ಣೆಯನ್ನೂ ಸೆಣಬನ್ನೂ ತಂದು, \q2 ತನ್ನ ಚಟುವಟಿಕೆಯ ಕೈಗಳಿಂದ ಕೆಲಸ ಮಾಡುವಳು. \q1 \v 14 ಆಕೆಯು ವರ್ತಕರ ಹಡಗುಗಳಂತೆ ಇರುವಳು; \q2 ದೂರದಿಂದ ಆಹಾರವನ್ನು ಆಕೆಯು ತರುವಳು. \q1 \v 15 ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು; \q2 ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು, \q2 ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು. \q1 \v 16 ಆಕೆಯು ಹೊಲವನ್ನು ನೋಡಿ, ಅದನ್ನು ಕೊಂಡುಕೊಳ್ಳುತ್ತಾಳೆ. \q2 ತನ್ನ ಕೈಕೆಲಸದ ಆದಾಯದಿಂದ ದ್ರಾಕ್ಷಾಲತೆಗಳನ್ನು ನೆಡುತ್ತಾಳೆ. \q1 \v 17 ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ. \q2 ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ. \q1 \v 18 ತನ್ನ ವ್ಯಾಪಾರವು ಲಾಭದಾಯಕವೆಂದು ಅವಳು ನೋಡುತ್ತಾಳೆ. \q2 ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು. \q1 \v 19 ಅವಳು ರಾಟೆಯ ಮೇಲೆ ಕೈಹಾಕಿ, \q2 ಕದಿರನ್ನು ಹಿಡಿಯುತ್ತಾಳೆ. \q1 \v 20 ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ. \q2 ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ. \q1 \v 21 ಚಳಿಗಾಲದಲ್ಲಿ ತನ್ನ ಮನೆಯವರ ಬಗ್ಗೆ ಆಕೆಯು ಚಿಂತಿಸಬೇಕಾಗಿಲ್ಲ. \q2 ಏಕೆಂದರೆ ಆಕೆಯ ಮನೆಯವರೆಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ. \q1 \v 22 ಆಕೆಯು ತಾನೇ ಕಂಬಳಿಗಳನ್ನು ನೇಯುತ್ತಾಳೆ. \q2 ಆಕೆಯ ಉಡುಪೋ ನಾರುಮಡಿ, ರಕ್ತಾಂಬರ. \q1 \v 23 ಆಕೆಯ ಪತಿಯು ಪಟ್ಟಣದಲ್ಲಿ ಸನ್ಮಾನಿತ. \q2 ದೇಶದ ಹಿರಿಯರ ಮಧ್ಯದಲ್ಲಿ ಪ್ರಸಿದ್ಧನಾಗಿ ಕುಳಿತಿರುವನು. \q1 \v 24 ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ. \q2 ಆಕೆಯು ನಡುಕಟ್ಟುಗಳನ್ನು ತಯಾರಿಸಿ ವರ್ತಕರಿಗೆ ಒದಗಿಸುತ್ತಾಳೆ. \q1 \v 25 ಆಕೆಯ ಉಡುಪು ಬಲವೂ ಘನತೆಯೂ ಆಗಿವೆ. \q2 ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು. \q1 \v 26 ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ. \q2 ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ. \q1 \v 27 ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ. \q2 ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ. \q1 \v 28 ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು. \q2 ಆಕೆಯ ಪತಿಯು ಸಹ ಆಕೆಯನ್ನು, \q1 \v 29 “ಬಹುಮಂದಿ ಸ್ತ್ರೀಯರು ಗುಣವತಿಯರಾಗಿದ್ದಾರೆ. \q2 ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು,” ಎಂದು ಹೊಗಳುವನು. \q1 \v 30 ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. \q2 ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು. \q1 \v 31 ಆಕೆಯ ಕೈಕೆಲಸಕ್ಕೆ ತಕ್ಕ ಪ್ರತಿಫಲವನ್ನು ಸಲ್ಲಿಸಿ ಗೌರವಿಸಿರಿ. \q2 ಪಟ್ಟಣದ ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.